Sunday, 8th September 2024

ಸರ್ಕಾರಿ ಸಾರಿಗೆ ಪಲ್ಟಿ: 15 ಪ್ರಯಾಣಿಕರಿಗೆ ಗಂಭೀರ ಗಾಯ

ವನಪರ್ತಿ: ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದವರಿಗೆ ಅಪಘಾತ ಸಂಭವಿಸಿ, ಸರ್ಕಾರಿ ಸಾರಿಗೆ ಪಲ್ಟಿಯಾಗಿದ್ದು, 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ತಿರುಪತಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಯಾದಗಿರಿಗುಟ್ಟ ಡಿಪೋಗೆ ಸೇರಿದ ಆರ್‌ಟಿಸಿ ಬಸ್ ವನಪರ್ತಿ ಜಿಲ್ಲೆಯ ಕೊಟ್ಟಕೋಟ ಬಳಿ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಪಲ್ಟಿ ಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವನಪರ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನರಸಿಂಹ್ಮ, ಶಕೀಲಾ ಮತ್ತು ಶಬ್ಬೀರ್ ಅಹಮದ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 37 ಮಂದಿ ಪ್ರಯಾಣಿಕರಿದ್ದರು. ಮಾಹಿತಿ ಪಡೆದು ಕೊತ್ತಕೋಟ ಎಸ್‌ಐ ನಾಗಶೇಖರ್ ರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು 108 ವಾಹನದಲ್ಲಿ ವನಪರ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ಪ್ರಯಾಣಿಕರನ್ನು ಬೇರೆ ಬಸ್‌ಗಳಲ್ಲಿ ಕಳುಹಿಸಲಾಯಿತು. ಚಾಲಕನ ಅತಿವೇಗ ಹಾಗೂ ನಿದ್ದೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

error: Content is protected !!