Wednesday, 23rd October 2024

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಶುಕ್ರವಾರ ಪ್ರಧಾನಿ ಮೋದಿ ಅವರು, ಭುವನೇಶ್ವರಕ್ಕೆ ತೆರಳಿ ಮುಖ್ಯಮಂತ್ರಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸ ಲಿದ್ದಾರೆ. ಬಳಿಕ ಬಾಲಸೋರ್, ಭದ್ರಕ್ ಮತ್ತು ಪೂರ್ವ ಮೇದಿನಿಪುರದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಕೋಲ್ಕತಾಕ್ಕೆ ತೆರಳಿ ಅಲ್ಲಿ ಚಂಡಮಾರುತದ ಕುರಿತು ಸಭೆ ನಡೆಸಲಿದ್ದಾರೆ.

ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ ಸುಮಾರು 10 ಲಕ್ಷ ಜನ ತೊಂದರೆಗೆ ಸಿಲುಕಿಕೊಂಡಿದ್ದಾರೆ. ಸುಮಾರು ಮೂರು ಲಕ್ಷ ಮನೆಗಳು ಹಾನಿಗೊಳಗಾಗಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ.

ಗಂಟೆಗೆ 145 ರಿಂದ 155 ಕಿಮೀ ವೇಗದಲ್ಲಿ ಯಾಸ್ ಚಂಡಮಾರುತದ ಗಾಳಿ ಬೀಸುತ್ತಿದ್ದು, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಸಾಕಷ್ಟು ಹಾನಿಯುಂಟಾಗಿದೆ.