Thursday, 19th September 2024

ಉಡಾನ್ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ದ್ವಿಗುಣ

ವದೆಹಲಿ: ಸರ್ಕಾರವು ನಡೆಸುತ್ತಿರುವ ಉಡಾನ್ ಯೋಜನೆಯಿಂದಾಗಿ ಕಳೆದ ಆರು ವರ್ಷಗಳಲ್ಲಿ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ. ಇದರೊಂದಿಗೆ ಹೆಚ್ಚಿನ ಸಂಖ್ಯೆಯ ಸಣ್ಣ ವಿಮಾನ ನಿಲ್ದಾಣಗಳನ್ನು ಸಹ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಉಡಾನ್ ಯೋಜನೆ ಕುರಿತು ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಕಾರವು ಯೋಜನೆ ಪ್ರಾರಂಭಿಸಿದ ನಂತರ ಕಳೆದ ಆರು ವರ್ಷಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ. ಉಡಾನ್ ಯೋಜನೆಯಡಿ 100 ವಿಮಾನ ನಿಲ್ದಾಣಗಳನ್ನ ಆರಂಭಿ ಸುವ ಗುರಿ ಹೊಂದಲಾಗಿದ್ದು, ಈ ಪೈಕಿ 74 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, 26 ವಿಮಾನ ನಿಲ್ದಾಣಗಳ ಕಾಮಗಾರಿ ಬಾಕಿ ಇದೆ.

ಕೊನೆಯ ಮೈಲಿ ಸಂಪರ್ಕಕ್ಕಾಗಿ ನಾವು ಉಡಾನ್ ಯೋಜನೆಯನ್ನು ಮಾಡಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದರು.

ಉಡಾನ್ ಯೋಜನೆ (UDAN ಯೋಜನೆ) ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದರ ಪೂರ್ಣ ಹೆಸರು ಉದೇ ದೇಶ್‌ನ ಸಾಮಾನ್ಯ ನಾಗರಿಕ. ಇದನ್ನ 2016ರಲ್ಲಿ ಪ್ರಾರಂಭಿಸಲಾಯಿತು.