Sunday, 8th September 2024

ನಿಮ್ಮದೇ ಪಕ್ಷ ಆಡಳಿತದಲ್ಲಿರುವ ರಾಜ್ಯಗಳ ವಿಚಾರದಲ್ಲಿ ಏಕೆ ಸುಮ್ಮನಿರುತ್ತೀರಿ: ಸುಪ್ರೀಂ ಚಾಟಿ

ವದೆಹಲಿ: ಬಿಜೆಪಿಯೇತರ ರಾಜ್ಯ ಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

ನಾಗಾಲ್ಯಾಂಡ್‌ನ‌ಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾ ಲ್ಯಾಂಡ್‌ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ, ನ್ಯಾಯಾಲಯದ ಆದೇಶ ಪಾಲನೆಯಾಗ ದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯೊಂದನ್ನು ಸಲ್ಲಿಸ ಲಾಗಿತ್ತು.

ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರ ನ್ಯಾಯಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ವೇಳೆ ಆದೇಶ ಪಾಲನೆಯಾಗದ್ದನ್ನು ಗಮನಿಸಿ, ಬಿಜೆಪಿಯೇತರ ರಾಜ್ಯಗಳ ಎಡವಟ್ಟಿಗೆ ತೀಕ್ಷ್ಣ ಕ್ರಮ ಕೈಗೊಳ್ಳುವ ನೀವು, ನಿಮ್ಮದೇ ಪಕ್ಷ ಆಡಳಿತದಲ್ಲಿರುವ ರಾಜ್ಯ ಗಳ ವಿಚಾರದಲ್ಲಿ ಏಕೆ ಸುಮ್ಮನಿರುತ್ತೀರಿ ಎಂದು ಕೇಂದ್ರವನ್ನು ಪ್ರಶ್ನಿಸಿದ್ದಾರೆ.

ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರಿಂದ ಬಿಜೆಪಿಯಿಂದ ಹೊರಬಂದೆ: ಜಗದೀಶ್ ಶೆಟ್ಟರ್..ಇದನ್ನು ಓದಿ..

http://vishwavani.news/districts/bengaluru-urban/jagadeeshshetter/

ಇದೇ ವೇಳೆ, ಸಾಂವಿಧಾನಿಕ ನಿಬಂಧನೆಯ ಉಲ್ಲಂಘನೆ ಸಲ್ಲದು ಎಂದು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!