Thursday, 19th September 2024

ಕೌಶಾಂಬಿ ಜಿಲ್ಲೆಯಲ್ಲಿ ಭೀಕರ ಅಪಘಾತ: ಎಂಟು ಮಂದಿ ಸಾವು

ಲಖನೌ: ಉತ್ತರ ಪ್ರದೇಶದಲ್ಲಿ ಬೆಳಗ್ಗೆ ಭೀಕರ ಅಪಘಾತವಾಗಿದ್ದು, ಮರಳು ತುಂಬಿದ ಲಾರಿ ಕಾರಿನ ಮೇಲೆ ಮುಗುಚಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ನಡೆದಿದೆ.

10 ಜನರು ಸ್ಕಾರ್ಪಿಯೋ ವಾಹನದಲ್ಲಿ ಮದುವೆ ಮುಗಿಸುಕೊಂಡು ವಾಪಸ್ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸ ಲಾಗಿತ್ತು. ವೇಳೆ ಮರಳು ತುಂಬಿದ್ದ ಲಾರಿ ಕಾರಿನ ಮೇಲೆ ಮುಗುಚಿ ಬಿದ್ದ ಪರಿಣಾಮ ಘಟನೆಯಲ್ಲಿ ಸ್ಥಳದಲ್ಲೇ 7 ಮಂದಿ ಸಾವ ನ್ನಪ್ಪಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *