ಯಾರ್ಕ್ಷೈರ್ ಕೌಂಟಿ ತಂಡ ಸೇರಿದ ಭಾರತದ ಋತುರಾಜ್ ಗಾಯಕ್ವಾಡ್
ಋತುರಾಜ್ ಇದುವರೆಗೆ ಭಾರತ ಪರ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ 29 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿದ್ದ ಗಾಯಕ್ವಾಡ್ 18ನೇ ಆವೃತ್ತಿಯಲ್ಲಿ ಗಾಯಗೊಂಡು ಅರ್ಧದಲ್ಲೇ ಟೂರ್ನಿಯಿಂದ ಹೊರಬಿದ್ದಿದ್ದರು. ಹೀಗಾಗಿ ಧೋನಿ ಅವರು ಉಳಿದ ಪಂದ್ಯಗಳಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಿದ್ದರು.