ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರಿಕೆಟ್‌
Women's Cricket: ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ!

ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ!

ಭಾರತ ಮಹಿಳಾ ಕ್ರಿಕೆಟ್‌ ತಂಡದ ವೇದಾ ಕೃಷ್ಣಮೂರ್ತಿ ತಮ್ಮ ಕ್ರಿಕೆಟ್‌ ವೃತ್ತಿ ಬದುಕಿಗೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ಶುಕ್ರವಾರ (ಜುಲೈ 25ರಂದು) ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. 32ರ ವಯಸ್ಸಿನ ವೇದಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದು, ತಮ್ಮ ವೃತ್ತಿ ಜೀವನದಲ್ಲಿ ಬೆಂಬಲ ನೀಡಿದ ಆಟಗಾರರು, ಕೋಚ್‌ಗಳು, ಕುಟುಂಬ ಹಾಗೂ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಪಾಕಿಸ್ತಾನ ಟಿ20ಐ ತಂಡ ಪ್ರಕಟ, ಶಾಹೀನ್‌ ಅಫ್ರಿದಿ ಕಮ್‌ಬ್ಯಾಕ್‌!

ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಪಾಕಿಸ್ತಾನ ಟಿ20ಐ ತಂಡ ಪ್ರಕಟ!

Pakistan T20I Squad Announced: ವೆಸ್ಟ್‌ ಇಂಡೀಸ್‌ ಪ್ರವಾಸದ ಟಿ20ಐ ಸರಣಿಗೆ ಪಾಕಿಸ್ತಾನ ತಂಡವನ್ನು ಜುಲೈ 25 ರಂದು ಪ್ರಕಟಿಸಲಾಗಿದೆ. ವೇಗದ ಬೌಲರ್‌ ಶಾಹೀನ್‌ ಶಾ ಅಫ್ರಿದಿ ಅವರು ಚುಟುಕು ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿದ್ದ ಶಾಹೀನ್‌ ಅಪ್ರಿದಿ ಇದೀಗ ಟಿ20ಐ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ.

IND vs ENG: ಅರ್ಧಶತಕ ಬಾರಿಸಿ ರಾಹುಲ್‌ ದ್ರಾವಿಡ್‌ರ ದಾಖಲೆ ಮುರಿದ ಜೋ ರೂಟ್‌!

ಟೆಸ್ಟ್‌ ಕ್ರಿಕೆಟ್‌ನಲ್ಲಿ ರಾಹುಲ್‌ ದ್ರಾವಿಡ್‌ ದಾಖಲೆ ಮುರಿದ ಜೋ ರೂಟ್‌!

Joe Root Breaks Rahul Dravid's Record: ಭಾರತ ವಿರುದ್ದ ನಾಲ್ಕನೇ ಟೆಸ್ಟ್‌ ಪಂದ್ಯದ ನಾಲ್ಕನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಭಾರತೀಯ ದಿಗ್ಗಜ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿದ್ದಾರೆ.

IND vs ENG: ʻನಡೆಯಲು ಕೂಡ ಸಾಧ್ಯವಾಗುತ್ತಿರಲಿಲ್ಲʼ-ರಿಷಭ್‌ ಪಂತ್‌ಗೆ ಆಕಾಶ್‌ ಚೋಪ್ರಾ ಮೆಚ್ಚುಗೆ!

ರಿಷಭ್‌ ಪಂತ್‌ ಕಠಿಣ ಹೋರಾಟಕ್ಕೆ ಆಕಾಶ್‌ ಚೋಪ್ರಾ ಮೆಚ್ಚುಗೆ!

ಇಂಗ್ಲೆಂಡ್‌ ವಿರುದ್ದ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಗಾಯದ ಹೊರತಾಗಿಯೂ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಬ್ಯಾಟಿಂಗ್‌ಗೆ ಇಳಿದಿದ್ದರು ಹಾಗೂ ಅರ್ಧಶತಕವನ್ನು ಪೂರ್ಣಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ರಿಷಭ್‌ ಪಂತ್‌ ಅವರ ಹೋರಾಟದ ಮನೋಭಾವವನ್ನು ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಶ್ಲಾಘಿಸಿದ್ದಾರೆ.

IND vs ENG: ಎರಡನೇ ದಿನ ಶುಭಮನ್‌ ಗಿಲ್‌ ಎಸಗಿದ ತಪ್ಪನ್ನು ಬಹಿರಂಗಪಡಿಸಿದ ರಿಕಿ ಪಾಂಟಿಂಗ್!

‌ಶುಭಮನ್‌ ಗಿಲ್‌ ಎಸಗಿದ ತಪ್ಪನ್ನು ರಿವೀಲ್‌ ಮಾಡಿದ ರಿಕಿ ಪಾಂಟಿಂಗ್‌!

ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತ ತಂಡದ ನಾಯಕ ಶುಭಮನ್‌ ಗಿಲ್‌ ಅವರು ವೇಗದ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಅವರನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡನೇ ದಿನವಾದ ಗುರುವಾರ ಇಂಗ್ಲೆಂಡ್‌ ತಂಡದ ಎರಡಯ ವಿಕೆಟ್‌ ನಷ್ಟಕ್ಕೆ 225 ರನ್‌ಗಳನ್ನು ಕಲೆ ಹಾಕಿದೆ.

Tilak Varma: ಕೌಂಟಿ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ ತಿಲಕ್ ವರ್ಮಾ

ಕೌಂಟಿ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ ತಿಲಕ್ ವರ್ಮಾ

ತಿಲಕ್‌ ವರ್ಮಾ ಭಾರತ ಪರ 25 ಟಿ20, 4 ಏಕದಿನ ಸೇರಿ ಒಟು 29 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಎರಡು ಶತಕ ಕೂಡ ಬಾರಿಸಿದ್ದಾರೆ. ಒಟ್ಟಾರೆ 749 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತಿಲಕ್‌ ವರ್ಮ 18 ಪಂದ್ಯಗಳಿಂದ 1204 ರನ್‌ ಗಳಿಸಿದ್ದಾರೆ. ಇದೇ ವೇಳೆ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ 36 ಪಂದ್ಯವಾಡಿ 1494 ರನ್‌ ಗಳಿಸಿದ್ದಾರೆ.

AB de Villiers: 41 ಎಸೆತಗಳಿಂದ ಸ್ಫೋಟಕ ಶತಕ ಸಿಡಿಸಿದ ಎಬಿ ಡಿವಿಲಿಯರ್ಸ್‌

41 ಎಸೆತಗಳಿಂದ ಸ್ಫೋಟಕ ಶತಕ ಸಿಡಿಸಿದ ಎಬಿ ಡಿವಿಲಿಯರ್ಸ್‌

ಜುಲೈ 24, ಗುರುವಾರ ರಾತ್ರಿ ಲೀಸೆಸ್ಟರ್‌ನ ಗ್ರೇಸ್ ರೋಡ್‌ನಲ್ಲಿ ನಡೆದ ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರ ಬ್ಯಾಟಿಂಗ್‌ ಪ್ರದರ್ಶನ ತೋರಿದ ಎಬಿಡಿ 41 ಎಸೆತಗಳಲ್ಲಿ ಶತಕ ಸಿಡಿಸಿ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ತಂಡಕ್ಕೆ ಹತ್ತು ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟರು.

Yash Dayal: ಆರ್‌ಸಿಬಿ ವೇಗಿ ಯಶ್ ದಯಾಳ್ ಮೇಲೆ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ಯಶ್ ದಯಾಳ್ ಮೇಲೆ ಮತ್ತೊಂದು ಅತ್ಯಾಚಾರ ಆರೋಪದ ಕೇಸ್‌

ಅಪ್ರಾಪ್ತ ವಯಸ್ಕಳಾಗಿದ್ದಾಗಿನಿಂದ ಈ ರೀತಿಯ ದೌರ್ಜನ್ಯಗಳು ಎರಡು ವರ್ಷಗಳ ಕಾಲ ಮುಂದುವರಿದಿದ್ದು, ಇದರಿಂದಾಗಿ ಪೊಲೀಸರು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಲೈಂಗಿಕ ಅಪರಾಧಗಳ ವಿರುದ್ಧ ಕಠಿಣ ಕಾನೂನು ಆಗಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.

ಭಾರತ ‘ಎ’ ತಂಡದಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕ

ಭಾರತ ‘ಎ’ ತಂಡದಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕ

India A tour of Australia: ಯಸ್ತಿಕಾ ಭಾಟಿಯಾ ಅವರನ್ನು ಏಕದಿನ ತಂಡಕ್ಕೆ ಮಾತ್ರ ಸೇರಿಸಿಕೊಳ್ಳಲಾಗಿದ್ದು, ಗಾಯಗೊಂಡ ಸ್ಪಿನ್ನರ್‌ಗಳ ಬದಲಿಗೆ ಧರಾ ಗುಜ್ಜರ್ ಮತ್ತು ಪ್ರೇಮಾ ರಾವತ್ ಅವರನ್ನು ಕ್ರಮವಾಗಿ ಎಲ್ಲಾ ಸ್ವರೂಪಗಳಲ್ಲಿ ಸೇರಿಸಿಕೊಳ್ಳಲಾಗುತ್ತಿದೆ. ಗುಜ್ಜರ್ ಮತ್ತು ರಾವತ್ ಇಬ್ಬರೂ ಈ ಹಿಂದೆ ಆಯ್ದ ತಂಡಗಳಲ್ಲಿ ಸ್ಥಾನ ಪಡೆದಿದ್ದರು.

IND vs ENG: ಭಾರತ 358 ರನ್‌ಗಳಿಗೆ ಆಲ್‌ಔಟ್‌, ಎರಡನೇ ದಿನ ಇಂಗ್ಲೆಂಡ್‌ ಮೇಲುಗೈ!

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್‌ ಎರಡನೇ ದಿನ ಆಂಗ್ಲರು ಮೇಲುಗೈ!

ಬೆನ್‌ ಸ್ಟೋಕ್ಸ್‌ ಮಾರಕ ಬೌಲಿಂಗ್‌ ಹಾಗೂ ಝ್ಯಾಕ್‌ ಕ್ರಾವ್ಲಿ ಮತ್ತು ಬೆನ್‌ ಡಕೆಟ್‌ ಅವರ ಬ್ಯಾಟಿಂಗ್‌ ಬಲದಿಂದ ಇಂಗ್ಲೆಂಡ್‌ ತಂಡ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಮೇಲುಗೈ ಸಾಧಿಸಿದೆ. ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲ್‌ಔಟ್‌ ಆದ ಬಳಿಕ ಇಂಗ್ಲೆಂಡ್‌ ಬ್ಯಾಟಿಂಗ್‌ ಆರಂಭಿಸಿ ಎರಡನೇ ದಿನದಾಟದ ಅಂತ್ಯಕ್ಕೆ ಪ್ರಥಮ ಇನಿಂಗ್ಸ್‌ನಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 225 ರನ್‌ ಗಳಿಸಿದೆ.

ಗಾಯದ  ಹೊರತಾಗಿಯೂ ಅರ್ಧಶತಕ ಬಾರಿಸಿದ ರಿಷಭ್‌ ಪಂತ್‌ಗೆ ಕ್ರಿಕೆಟ್‌ ದೇವರಿಂದ ಮೆಚ್ಚುಗೆ!

ಕೆಚ್ಚೆದೆಯ ಅರ್ಧಶತಕ ಬಾರಿಸಿದ ರಿಷಭ್‌ ಪಂತ್‌ಗೆ ಸಚಿನ್‌ ಮೆಚ್ಚುಗೆ!

ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ಔಟಾದ ನಂತರ ರಿಷಭ್ ಪಂತ್ ಗಾಯದ ಹೊರತಾಗಿಯೂ ಪುನಃ ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿದರು. ಪಂತ್ ತನ್ನ ಕಾಲಿನ ನೋವನ್ನು ಲೆಕ್ಕಿಸದೇ ಮೈದಾನಕ್ಕೆ ಬಂದು ತಂಡಕ್ಕೆ ಅರ್ಧಶತಕದ ಕೊಡುಗೆ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಇದರ ನಡುವೆ ಭಾರತೀಯ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ ರಿಷಭ್‌ ಪಂತ್‌ ಅವರನ್ನು ಹಾಡಿ ಹೊಗಳಿದ್ದಾರೆ.

IND vs ENG: ಐದನೇ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್‌ ಸ್ಥಾನಕ್ಕೆ ಯಾರು ವಿಕೆಟ್‌ ಕೀಪರ್‌?

5ನೇ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್‌ ಸ್ಥಾನಕ್ಕೆ ಯಾರು ವಿಕೆಟ್‌ ಕೀಪರ್‌?

ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗಾಯಕ್ಕೆ ತುತ್ತಾಗಿದ್ದಾರೆ. ಮ್ಯಾಂಚೆಸ್ಟರ್‌ ಟೆಸ್ಟ್‌ ಮೊದಲನೇ ದಿನ 68ನೇ ಓವರ್‌ನಲ್ಲಿ ಕ್ರಿಸ್‌ ವೋಕ್ಸ್‌ ಎಸೆತದಲ್ಲಿ ಸ್ವೀಪ್‌ ಶಾಟ್‌ ಹೊಡೆಯಲು ಯತ್ನಿಸಿದ ಪಂತ್‌, ನಿಧಾನಗತಿಯಲ್ಲಿದ್ದ ಚೆಂಡನ್ನು ಅರಿಯುವಲ್ಲಿ ವಿಫಲರಾದರು. ಇದರ ಪರಿಣಾಮ ಪಂತ್‌ ಅವರ ಪಾದಕ್ಕೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಐದನೇ ಟೆಸ್ಟ್‌ನಲ್ಲಿ ಪಂತ್‌ ಬದಲು ಯಾರು ಆಡಲಿದ್ದಾರೆಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

IND vs ENG: ಭಾರತ ಟೆಸ್ಟ್‌ ತಂಡದಲ್ಲಿ ರಿಷಭ್‌ ಪಂತ್‌ ಸ್ಥಾನಕ್ಕೆ ಸೇರ್ಪಡೆಯಾದ ಎನ್‌ ಜಗದೀಶನ್‌!

IND vs ENG: ಭಾರತ ಟೆಸ್ಟ್‌ ತಂಡಕ್ಕೆ ಸೇರ್ಪಡೆಯಾದ ಎನ್‌ ಜಗದೀಶನ್!‌

ಭಾರತ ಟೆಸ್ಟ್‌ ತಂಡದಲ್ಲಿ ಗಾಯಕ್ಕೆ ತುತ್ತಾಗಿರುವ ರಿಷಭ್‌ ಪಂತ್‌ ಅವರ ಸ್ಥಾನಕ್ಕೆ ತಮಿಳುನಾಡು ತಂಡದ ಎನ್‌ ಜಗದೀಶನ್‌ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ ಮ್ಯಾಂಚೆಸ್ಟರ್‌ ಟೆಸ್ಟ್‌ ಮೊದಲನೇ ದಿನ ರಿಷಭ್‌ ಪಂತ್‌ ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಇದೀಗ ಅವರು ಐದನೇ ಟೆಸ್ಟ್‌ನಿಂದ ಹೊರ ನಡೆದಿದ್ದಾರೆ.

IND vs ENG: ಅರ್ಧಶತಕ ಬಾರಿಸಿ ಎಂಎಸ್‌ ಧೋನಿ ದಾಖಲೆ ಮುರಿದ ರಿಷಭ್‌ ಪಂತ್!

ಅರ್ಧಶತಕ ಬಾರಿಸಿ ಎಂಎಸ್‌ ಧೋನಿ ದಾಖಲೆ ಮುರಿದ ರಿಷಭ್‌ ಪಂತ್!

ಗಾಯದ ಹೊರತಾಗಿಯೂ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರು ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ದಾಖಲೆಯನ್ನು ರಿಷಭ್‌ ಪಂತ್‌ ಮುರಿದಿದ್ದಾರೆ.

IND vs ENG 4th Test: ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲ್‌ಔಟ್‌!

ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲ್‌ಔಟ್‌!

IND vs ENG 4th Test: ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತ ತಂಡ 358 ರನ್‌ಗಳಿಗೆ ಆಲ್‌ಔಟ್‌ ಆಗಿದೆ. ಮೊದಲನೇ ದಿನ 264 ರನ್‌ಗಳನ್ನು ಕಲೆ ಹಾಕಿದ್ದ ಪ್ರವಾಸಿಗರು, ಎರಡನೇ ದಿನ 100 ರನ್‌ಗಳನ್ನು ಕೂಡ ಸೇರಿಸಲು ಸಾಧ್ಯವಾಗಲಿಲ್ಲ. ಭಾರತದ ಪರ ಪ್ರಥಮ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್‌, ಸಾಯಿ ಸುದರ್ಶನ್‌ ಹಾಗೂ ರಿಷಭ್‌ ಪಂತ್‌ ಅರ್ಧಶತಕಗಳನ್ನು ಬಾರಿಸಿದರು.

IND vs ENG: ನಾಲ್ಕನೇ ಟೆಸ್ಟ್‌ಗೆ ರಿಷಭ್‌ ಪಂತ್‌ ಲಭ್ಯತೆ ಬಗ್ಗೆ ಬಿಸಿಸಿಐ ಅಧಿಕೃತ ಮಾಹಿತಿ!

ನಾಲ್ಕನೇ ಟೆಸ್ಟ್‌ಗೆ ರಿಷಭ್‌ ಪಂತ್‌ ಲಭ್ಯತೆ ಬಗ್ಗೆ ಬಿಸಿಸಿಐ ಮಾಹಿತಿ!

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವೆ ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ನಲ್ಲಿ ನಾಲ್ಕನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಪಂದ್ಯದ ಮೊದಲನೇ ದಿನ ಭಾರತದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಪಾದದ ಗಾಯಕ್ಕೆ ತುತ್ತಾಗಿದ್ದರು. ಇದೀಗ ಅವರು ಎರಡನೇ ದಿನ ಬ್ಯಾಟಿಂಗ್‌ಗೆ ಇಳಿದಿದ್ದಾರೆ. ಈ ಬಗ್ಗೆ ಬಿಸಿಸಿಐ ಮಹತ್ವದ ಮಾಹಿತಿ ಹಂಚಿಕೊಂಡಿದೆ.

Asia Cup 2025: ತಟಸ್ಥ ಸ್ಥಳದಲ್ಲಿ ಏಷ್ಯಾ ಕಪ್‌ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಒಪ್ಪಿಗೆ! ವರದಿ

ತಟಸ್ಥ ಸ್ಥಳದಲ್ಲಿ ಏಷ್ಯಾ ಕಪ್‌ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಒಪ್ಪಿಗೆ!

ಮುಂಬರುವ 2025ರ ಏಷ್ಯಾ ಕಪ್‌ ಟೂರ್ನಿಯು ಭಾರತದ ಆತಿಥ್ಯದಲ್ಲಿ ನಡೆಯಲಿದೆ. ಪಾಕಿಸ್ತಾನದ ಜೊತೆ ರಾಜಕೀಯ ಸಮಸ್ಯೆಗಳ ಕಾರಣ ಭಾರತ ತಂಡ, ಏಷ್ಯಾ ಕಪ್‌ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಈ ಬಾರಿ ಟೂರ್ನಿಯನ್ನು ಟಿ20 ಸ್ವರೂಪದಲ್ಲಿ ಆಯೋಜಿಸಲಾಗುತ್ತದೆ.

IND vs ENG: ವಾಷಿಂಗ್ಟನ್‌ ಸುಂದರ್‌ಗೂ ಮುನ್ನ ಶಾರ್ದುಲ್‌ ಠಾಕೂರ್‌ ಆಡಿದ್ದಕ್ಕೆ ದಿನೇಶ್‌ ಕಾರ್ತಿಕ್‌ ಆಕ್ರೋಶ!

ಭಾರತ ತಂಡದ ವಿರುದ್ಧ ದಿನೇಶ್‌ ಕಾರ್ತಿಕ್‌ ಅಸಮಾಧಾನ!

ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ಮೊದಲನೇ ದಿನ ವಾಷಿಂಗ್ಟನ್‌ ಸುಂದರ್‌ಗೂ ಮುನ್ನ ಶಾರ್ದುಲ್‌ ಠಾಕೂರ್‌ಗೆ ಬ್ಯಾಟಿಂಗ್‌ ನೀಡಿದ್ದರ ಭಾರತ ತಂಡದ ನಿರ್ಧಾರದ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮೆಂಟರ್‌ ದಿನೇಶ್‌ ಕಾರ್ತಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2026ರಲ್ಲಿ ಭಾರತ ಮತ್ತೆ ಇಂಗ್ಲೆಂಡ್ ಪ್ರವಾಸ; ವೈಟ್-ಬಾಲ್ ಸರಣಿಯ ವೇಳಾಪಟ್ಟಿ ಪ್ರಕಟ

2026ರಲ್ಲಿ ವೈಟ್-ಬಾಲ್ ಸರಣಿಗಾಗಿ ಭಾರತ ಮತ್ತೆ ಇಂಗ್ಲೆಂಡ್ ಪ್ರವಾಸ

India to tour England 2026: ಮುಂದಿನ ವರ್ಷ ಜುಲೈ 1, 2026 ರಂದು ಡರ್ಹ್ಯಾಮ್‌ನ ರಿವರ್‌ಸೈಡ್ ಮೈದಾನದಲ್ಲಿ ಟಿ20ಐ ಆಡುವ ಮೂಲಕ ತಮ್ಮ ವೈಟ್-ಬಾಲ್ ಪ್ರವಾಸವನ್ನು ಪ್ರಾರಂಭಿಸಲಿದೆ. ಐದು ಪಂದ್ಯಗಳ ಟಿ20ಐ ಸರಣಿಯು ಮ್ಯಾಂಚೆಸ್ಟರ್, ನಾಟಿಂಗ್‌ಹ್ಯಾಮ್, ಬ್ರಿಸ್ಟಲ್ ಮತ್ತು ಸೌತಾಂಪ್ಟನ್‌ನಲ್ಲಿ ಮುಂದುವರಿಯಲಿದೆ.

ರಿಷಭ್ ಪಂತ್ ಕಾಲಿನ ಬೆರಳು ಮುರಿತ; 2 ತಿಂಗಳ ವಿಶ್ರಾಂತಿ ಸಾಧ್ಯತೆ

ರಿಷಭ್ ಪಂತ್ ಕಾಲಿನ ಬೆರಳು ಮುರಿತ; 2 ತಿಂಗಳ ವಿಶ್ರಾಂತಿ ಸಾಧ್ಯತೆ

ಮೂಳೆ ಮುರಿತಗೊಂಡ ಪಂತ್‌ ಎರಡು ತಿಂಗಳ ವಿಶ್ರಾಂತಿ ಪಡೆದರೆ ಅವರು ಭಾರತದ ವೈಟ್‌ ಬಾಲ್‌ ಸರಣಿ ಮತ್ತು ಏಷ್ಯಾ ಕಪ್ (ನಡೆದರೆ) ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಅವರು ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತವರು ಟೆಸ್ಟ್ ಸರಣಿ ವೇಳೆಗೆ ಭಾರತ ತಂಡ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಸಾತ್ವಿಕ್‌-ಚಿರಾಗ್‌ ಜೋಡಿ; ಸೋತು ಹೊರಬಿದ್ದ ಪ್ರಣಯ್‌

China Open: ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಸಾತ್ವಿಕ್‌-ಚಿರಾಗ್‌ ಜೋಡಿ

ದಿನದ ಮಹಿಳಾ ಸಿಂಗಲ್ಸ್‌ ವಿಭಾಗದ ಫ್ರೀ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ದೇಶವಾಸಿಗಳಾದ ಪಿ.ವಿ. ಸಿಂಧು ಮತ್ತು ಉನ್ನತಿ ಹೂಡಾ ಮುಖಾಮುಖಿಯಾಗಲಿದಾರೆ. ಬುಧವಾರ ನಡೆದಿದ್ದ ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಧು ಟೊಮೋಕಾ ಮಿಯಝಾಕಿ ಅವರನ್ನು 21-15, 8-21, 21-17ರಿಂದ ಪರಾಭವಗೊಳಿಸಿದ್ದರು.

Rishabh Pant: ಪಂತ್‌ ಗಾಯದ ಬಗ್ಗೆ ಹೊರಬಿತ್ತು ಅಪ್ಡೇಟ್

ಪಂತ್‌ ಗಾಯದ ಬಗ್ಗೆ ಹೊರಬಿತ್ತು ಅಪ್ಡೇಟ್

ಪಂತ್‌ ಗಾಯದ ಬಗ್ಗೆ ಮಾಹಿತಿ ನೀಡಿರುವ ಸಾಯಿ ಸುದರ್ಶನ್‌ ಮತ್ತು ನಾಯಕ ಗಿಲ್‌, ಪಂತ್‌ ಅವರನ್ನು ನೋಡುವಾಗ ಅವರು ಆಡುವುದು ಅನುಮಾನ. ಹೀಗಾಗಿ ನಾವು ಕೀಪಿಂಗ್‌ಗೆ ಜುರೇಲ್‌ ಅವರನ್ನು ಆಯ್ಕೆ ಮಾಡಬೇಕಿದೆ ಎಂದರು. ಮಾಜಿ ಕೋಚ್‌ ರವಿಶಾಸ್ತ್ರಿ ಕೂಡ ಪಂತ್‌ ಆಡುವುದು ಕಷ್ಟ ಸಾಧ್ಯ ಎಂದಿದ್ದಾರೆ.

Ayush Mhatre: ಅತಿ ವೇಗದ ಶತಕ ಬಾರಿಸಿ ದಾಖಲೆ ಬರೆದ ಆಯುಷ್‌ ಮ್ಹಾತ್ರೆ

ಅತಿ ವೇಗದ ಶತಕ ಬಾರಿಸಿ ದಾಖಲೆ ಬರೆದ ಆಯುಷ್‌ ಮ್ಹಾತ್ರೆ

2024-25ರ ಸಾಲಿನಲ್ಲಿ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆಯುಷ್‌ ಮ್ಹಾತ್ರೆ, ಮುಂಬೈ ಪರ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 504 ರನ್‌ಗಳನ್ನು ದಾಖಲಿಸಿದ್ದಾರೆ. ಇನ್ನು 7 ಲಿಸ್ಟ್‌ ಎ ಪಂದ್ಯಗಳಿಂದ 4458 ರನ್‌ಗಳನ್ನು ಗಳಿಸಿದ್ದಾರೆ.

Asia Cup 2025: ಯೂಟರ್ನ್ ಹೊಡೆದ ಬಿಸಿಸಿಐ; ಏಷ್ಯಾಕಪ್‌ ಸಭೆಗೆ ಹಾಜರ್‌!

ಯೂಟರ್ನ್ ಹೊಡೆದ ಬಿಸಿಸಿಐ; ಏಷ್ಯಾಕಪ್‌ ಸಭೆಗೆ ಹಾಜರ್‌!

ವರದಿಯೊಂದರ ಪ್ರಕಾರ, ಸೆಪ್ಟೆಂಬರ್‌ 5ರಿಂದ ಏಷ್ಯಾಕಪ್‌ ಟಿ20 ಪಂದ್ಯಾವಳಿ ಆರಂಭವಾಗಲಿದ್ದು, ಬುದ್ಧ ಎದುರಾಳಿ ಭಾರತ-ಪಾಕಿಸ್ತಾನ ತಂಡಗಳು ಸೆ. 17ರಂದು ಮುಖಾಮುಖೀ ಆಗಲಿವೆ. ಸೆ. 21ರಂದು ಫೈನಲ್‌ ನಡೆಯಲಿದೆ. ಟೂರ್ನಿ ಯುಎಇಯಲ್ಲಿ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

Loading...