ಶ್ರಮಕ್ಕೆ ತಕ್ಕ ಫಲ ಸಿಗಲಿ: ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ಸಚಿನ್
Sachin Tendulkar: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಆಡಿರುವ ಮಾತು ಗಮನ ಸೆಳೆದಿದೆ. ಶ್ರಮಕ್ಕೆ ತಕ್ಕ ನ್ಯಾಯ ಸಿಗುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಅವರು ಹೇಳಿದ್ದಾರೆ. ಪ್ರಾಮಾಣಿಕತೆ ಮತ್ತು ಪ್ರತಿಭೆಗೆ ಆದ್ಯತೆ ನೀಡಬೇಕು, ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಕ್ರಮಗಳು ಶೀಘ್ರದಲ್ಲೇ ಜಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.