ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಮೋಟಾರು ಪಂಪ್ ಕದ್ದರೆಂದು ಯುವಕರಿಬ್ಬರನ್ನು ಕಂಬಕ್ಕೆ ಕಟ್ಟಿ ವಿದ್ಯುತ್ ಶಾಕ್ ನೀಡಿದ ಗ್ರಾಮಸ್ಥರು

ಯುವಕರನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿದ ಗ್ರಾಮಸ್ಥರು

ಮೋಟಾರು ಪಂಪ್ ಕದ್ದರೆಂದು ಯುವಕರಿಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ಮಧ್ಯಪ್ರದೇಶದ ರೈಸೆನ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜುಲೈ 4ರಂದು ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪೊಲೀಸರಿಗೆ ವರದಿ ಮಾಡಿದ್ದು ಪ್ರಕರಣ ದಾಖಲಿಸಲಾಗಿದೆ.

ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ನಟಿ, ಮಾಡೆಲ್ ತ್ವಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ನಿರ್ಣಾಯಕ ತಿರುವು; ಸಿಬಿಐ ಸಲ್ಲಿಸಿದ ವರದಿಯಲ್ಲಿ ಬಯಲಾಗುತ್ತಾ ಹತ್ಯೆ ರಹಸ್ಯ?

ತ್ವಿಷಾಶರ್ಮಾ ಸಾವು ಪ್ರಕರಣಕ್ಕೆ ಟ್ವಿಸ್ಟ್

Actress-Model Twisha Sharma Death Case: ನಟಿ, ಮಾಡೆಲ್ ತ್ವಿಶಾ ಶರ್ಮಾ ಅವರ ಮೊದಲ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಸಿಗಲಿಲ್ಲ ಎನ್ನಲಾದ ಜಿಮ್ನಾಸ್ಟಿಕ್ಸ್ ಬೆಲ್ಟ್ ಈಗ ಅವರ ಸಾವಿನ ತನಿಖೆಯಲ್ಲಿ ಅತ್ಯಂತ ನಿರ್ಣಾಯಕ ಸಾಕ್ಷ್ಯಗಳಲ್ಲಿ ಒಂದು ಎನಿಸಿಕೊಂಡಿದೆ. ಜಿಮ್ನಾಸ್ಟಿಕ್ಸ್ ಬೆಲ್ಟ್‌ ಮೇಲೆ ಚರ್ಮದ ಅಂಗಾಂಶ ಪತ್ತೆಯಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; 4 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು. ಕೃತ್ಯ ಎಸಗಿದ್ದ ಮುಖ್ಯ ಶೂಟರ್‌ಗಳು ಹಾಗೂ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಮಹಿಳೆಗೆ ಕಿರುಕುಳ ಕೇಸ್‌; ಫ್ಲಿಪ್‌ಕಾರ್ಟ್ ಡೆಲಿವರಿ ಏಜೆಂಟ್‌ ಬಂಧನ

ಬೆಂಗಳೂರಿನಲ್ಲಿ ಮಹಿಳೆಗೆ ಕಿರುಕುಳ; ಫ್ಲಿಪ್‌ಕಾರ್ಟ್ ಏಜೆಂಟ್‌ ಬಂಧನ

ಪಾರ್ಸೆಲ್ ನೀಡಲು ಬಂದ ಡೆಲಿವರಿ ಏಜೆಂಟ್ ಓರ್ವ ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ.

ಅಮೆರಿಕದಲ್ಲಿ ಭಾರತೀಯ ಮೂಲದ ಗೂಗಲ್ ತಂತ್ರಜ್ಞಾನ ನಾಯಕಿ ಶೀತಲ್ ವೃಜಿಸಿಯನ್ ಗುಂಡಿಕ್ಕಿ ಕೊಲೆ: ಪತಿ ಬಂಧನ

ಭಾರತೀಯ ಮೂಲದ ಗೂಗಲ್ ಟೆಕ್ ಲೀಡರ್ ಪತಿಯಿಂದಲೇ ಸಾವು

ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಕೌಟುಂಬಿಕ ಕಲಹದ ವೇಳೆ ಭಾರತೀಯ ಮೂಲದ ಗೂಗಲ್ ಸೀನಿಯರ್ ಎಂಜಿನಿಯರಿಂಗ್ ಮ್ಯಾನೇಜರ್ ಶೀತಲ್ ವೃಜಿಸಿಯನ್ ಅವರನ್ನು ಅವರ ಪತಿಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕುಖ್ಯಾತ ಡಾನ್ ಬಾಬಾ ಫರ್ಜಾನ್ ನಿವಾಸದ ಮೇಲೆ ದಾಳಿ; ನಗದು, ಆಯುಧಗಳ ರಾಶಿ ಕಂಡು ಅಧಿಕಾರಿಗಳು ಸುಸ್ತು

ಡಾನ್ ಬಾಬಾ ಫರ್ಜಾನ್ ಬಂಗಲೆಯಲ್ಲಿ 5.26 ಕೋಟಿ ರುಪಾಯಿ ನಗದು ಪತ್ತೆ

Don Baba Farzan: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಕುಖ್ಯಾತ ಡಾನ್ ಬಾಬಾ ಫರ್ಜಾನ್ ನಿವಾಸದ ಮೇಲೆ ಕ್ರೈಂ ಬ್ರಾಂಚ್ ಪೊಲೀಸರು ದಾಳಿ ನಡೆಸಿದ್ದು, 5.26 ಕೋಟಿ ರುಪಾಯಿ ನಗದು, ಭಾರಿ ಪ್ರಮಾಣದ ಆಯುಧಗಳು, ಚಿನ್ನಾಭರಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಣರಂಗವಾದ ಮದುವೆ ಮನೆ; ಮಟನ್ ಬದಲು ಚಿಕನ್‌ ನೀಡಿದ್ದಕ್ಕೆ ಗಲಾಟೆ: 12 ಮಂದಿಗೆ ಗಾಯ-ವಿಡಿಯೊ ಇಲ್ಲಿದೆ

ಮದುವೆ ಮನೆಯಲ್ಲಿ ಮಟನ್ ಬದಲು ಚಿಕನ್‌ ನೀಡಿದ್ದಕ್ಕೆ ಗಲಾಟೆ

Wedding Feast Turns Violent: ಮಧ್ಯಾಹ್ನದ ಮದುವೆ ಮನೆ ಊಟಕ್ಕೆ ಮಟನ್‌ ಖಾದ್ಯ ಮಾಡುವುದಾಗಿ ವಧುವಿನ ಕಡೆಯವರು ಮಾತು ಕೊಟ್ಟಿದ್ದರು. ಆದರೆ ಮಟನ್ ಬದಲಿಗೆ ಚಿಕನ್‌ ಖಾದ್ಯ ಬಡಿಸಲಾಯಿತು. ಇದರಿಂದ ಕೋಪಗೊಂಡ ವರನ ಕಡೆಯವರು ಗಲಾಟೆ ನಡೆಸಿದರು. ಕ್ಷಣಾರ್ಧದಲ್ಲೇ ಮದುವೆ ಮನೆ ರಣರಂಗದಂತಾಯ್ತು.

Mangaluru News: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಮಂಗಳೂರಿನಲ್ಲಿ ಕಂಡಕ್ಟರ್‌ ಇರ್ಫಾನ್‌ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಕಂಡಕ್ಟರ್‌ ಅರೆಸ್ಟ್‌

ಬಸ್‌ನಲ್ಲಿ ವಿದ್ಯಾರ್ಥಿನಿಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಶಿಕ್ಷಕಿಯರು ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿಯ ಮಧುಶ್ರೀ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿಗೆ ಶಾಲೆಯಲ್ಲಿ ಶಿಕ್ಷಕಿಯರು ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕೇಸ್‌ ದಾಖಲಾಗಿದೆ.

ಉಜ್ಬೇಕಿಸ್ತಾನದಲ್ಲಿ ಕೇರಳಂ ಮೂಲದ ವಿದ್ಯಾರ್ಥಿನಿಯ ಮತಾಂತರ ಯತ್ನ, ಕಿರುಕುಳ; ನರಳಿ ನರಳಿ ಪ್ರಾಣಬಿಟ್ಟ ಸಂತ್ರಸ್ತೆ

ಉಜ್ಬೇಕಿಸ್ತಾನದಲ್ಲಿ ಕೇರಳಂ ವಿದ್ಯಾರ್ಥಿನಿ ಸಾವು

ಉಜ್ಬೇಕಿಸ್ತಾನದಲ್ಲಿ ಮೃತಪಟ್ಟ ಕೇರಳಂನ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ವಿದ್ಯಾರ್ಥಿನಿಯನ್ನು ಕ್ರೂರವಾಗಿ ಹಿಂಸಿಸಿ ಕೊಲೆ ಮಾಡಲಾಗಿದೆ ಹಾಗೂ ಧರ್ಮಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು ಎಂದು ಕುಟುಂಬ ಆರೋಪಿಸಿದೆ. ಈ ಸಂಬಂಧ ಕೇರಳಂ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮರು ಮರಣೋತ್ತರ ಪರೀಕ್ಷೆಯನ್ನೂ ನಡೆಸಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಕ ಉಜ್ಬೇಕಿಸ್ತಾನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ತನಿಖೆ ಮುಂದುವರಿಸಲಾಗಿದೆ.

ಕಾರಿಗೆ ಎಟಿಎಂ ಮೆಷಿನ್ ಕಟ್ಟಿ ಕದ್ದೊಯ್ದ ಕಳ್ಳರು; ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಹಣಕ್ಕಾಗಿ ಎಟಿಎಂ ಮೆಷಿನ್ ಅನ್ನೇ ಕದ್ದರು

ಎಟಿಎಂ ಮೆಷಿನ್ ಅನ್ನು ಕಾರಿಗೆ ಕಟ್ಟಿಕೊಂಡು ಕಳ್ಳರು ಕದ್ದೊಯ್ದ ಘಟನೆ ಒಡಿಶಾದಲ್ಲಿ ನಡೆದಿದೆ. ಇದರ ದೃಶ್ಯವಾಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಸೋರ್ ಜಿಲ್ಲೆಯ ತುಡಿಗಾಡಿಯಾ ಬಜಾರ್ ಪ್ರದೇಶದಲ್ಲಿಈ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮೆಷಿನ್ ಒಡೆದು ಅದನ್ನು ಅಲ್ಲೇ ಬಿಟ್ಟು ಹಣದೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ.

Telangana Horror: ಜಾಮೀನು ಪಡೆದು ಜೈಲಿನಿಂದ ಹೊರಬಂದು ಪತ್ನಿ-ಮಕ್ಕಳು ಸೇರಿ 6 ಜನರನ್ನು ಹತ್ಯೆಗೈದ ಪೋಕ್ಸೊ ಅಪರಾಧಿ; ಸೇಡಿನ ಕಿಚ್ಚಿಗೆ ಬಲಿಯಾಯ್ತು 2 ಕುಟುಂಬ

ಜೈಲಿನಿಂದ ಹೊರಬಂದು ಪತ್ನಿ-ಮಕ್ಕಳು ಸೇರಿ ಆರು ಮಂದಿಯ ಹತೈಗೈದ ಪಾಪಿ

POCSO Accused Murdered Six People: ಕುಟುಂಬ ಸದಸ್ಯರು ಮತ್ತು ದೂರುದಾರರು ಸೇರಿ ಆರು ಮಂದಿಯನ್ನು ಪೋಕ್ಸೊ ಅಪರಾಧಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಪಿ. ರಾಜ್‌ಕುಮಾರ್ ಆರಂಭದಲ್ಲಿ ಶಾಬಾದ್ ಪಟ್ಟಣದ ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಿ, ಅಲ್ಲಿ ಮಲಗಿದ್ದ ಆಕೆಯ ತಾಯಿ ಮತ್ತು ಅಜ್ಜಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಮನೆಯವರನ್ನು ಹತ್ಯೆಗೈದಿದ್ದಾನೆ.

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಬೆಳಗಾವಿಯಲ್ಲಿ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಬೇಕಾಗುತ್ತದೆ. ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

Vijayapura Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ಅಪಘಾತ ನಡೆದಿದೆ. ದುರ್ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಕಿರುಕುಳ, ಸಹಾಯಕ್ಕಾಗಿ ಮೊರೆ: ಜೈಪುರ ಶಾಲಾ ಬಾಲಕಿಯ ಸಾವಿಗೂ ಮುಂಚಿನ ಸಿಸಿಟಿವಿ ದೃಶ್ಯಾವಳಿ ವೈರಲ್

ಕಿರುಕುಳಕ್ಕೆ ಬಲಿಯಾದ 9 ವರ್ಷದ ಬಾಲಕಿ..!

ಜೈಪುರದ ನೀರ್ಜಾ ಮೋದಿ ಶಾಲೆಯ 9 ವರ್ಷದ ವಿದ್ಯಾರ್ಥಿನಿ ಅಮೇರಾ ಸಾವಿಗೂ ಮುನ್ನದ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ತರಗತಿಯಲ್ಲಿ ಆತಂಕದಲ್ಲಿದ್ದ ಬಾಲಕಿ ಹಲವು ಬಾರಿ ಶಿಕ್ಷಕಿಯ ಬಳಿ ಸಹಾಯ ಕೇಳಲು ಪ್ರಯತ್ನಿಸಿದ್ದರೂ ನಿರ್ಲಕ್ಷ್ಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಆಕೆ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ. ಪ್ರಕರಣದಲ್ಲಿ ಶಾಲೆಯ ವಿರುದ್ಧ ಕುಟುಂಬ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಸಿಬಿಎಸ್‌ಇ ಕೂಡ ಸುರಕ್ಷತಾ ವೈಫಲ್ಯದ ಬಗ್ಗೆ ಶೋಕಾಸ್ ನೋಟಿಸ್ ನೀಡಿದೆ.

Chinthamani News: ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ: ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು

ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ

ಸಂಜೆಯಾದರೂ ಮನೆಗೆ ಬಾರದೇ ಇರುವ ಕಾರಣಕ್ಕೆ ಅವರ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಸುಳಿವು ಸಿಗದೇ ಇರುವ ಕಾರಣಕ್ಕೆ ಇಂದು ಅವರ ಅಣ್ಣ ಹಿದಾಯತ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

ಸಿಗರೇಟ್ ಖರೀದಿಸಲು 500 ರೂ. ಖೋಟಾ ನೋಟು ಕೊಟ್ಟು ಸಿಕ್ಕಿಬಿದ್ದ MBA ಪದವೀಧರ; ರಾಜ್ಯದಲ್ಲಿ ಬೃಹತ್ ಖೋಟಾ ನೋಟು ದಂಧೆ ಬೆಳಕಿಗೆ!

ರಾಜ್ಯದಲ್ಲಿ ಖೋಟಾ ನೋಟು ದಂಧೆ ಬೆಳಕಿಗೆ; 6 ಮಂದಿ ಅರೆಸ್ಟ್‌

Fake currency racket: ಅಂಗಡಿಯೊಂದರಲ್ಲಿ ಚಲಾವಣೆಯಾದ ಕೇವಲ ಒಂದು ನಕಲಿ ನೋಟಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರು, ಸದ್ಯ ಪ್ರಕರಣಕ್ಕೆ ಸಂಬಂಧಿಸಿ ದಂಧೆಯ ಕಿಂಗ್‌ಪಿನ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 500 ರೂ. ಮುಖಬೆಲೆಯ 60ಕ್ಕೂ ಹೆಚ್ಚು ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

Udupi News: ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿ ಶ್ರೀ ಬಾಲಾಜಿ ದೇವಾಲಯದಲ್ಲಿ ಕೊಳ್ಳೆ ಹೊಡೆದ ಕಳ್ಳರು

ಗುವಾಹಟಿ ದೇವಾಲಯ ದೋಚಿದ ಕಳ್ಳರು

ಗುವಾಹಟಿಯ ತಿರುಪತಿ ಶ್ರೀ ಬಾಲಾಜಿ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗುರುವಾರ ಬೆಳಕಿಗೆ ಬಂದಿದೆ. ದೇವಾಲಯದ ಹಲವಾರು ಕಾಣಿಕೆ ಪೆಟ್ಟಿಗೆಗಳನ್ನು ಬಲವಂತವಾಗಿ ತೆರೆದು ಅದರಿಂದ ಹಣವನ್ನು ಕದ್ದೊಯ್ಯಲಾಗಿದೆ. ದೇವಾಲಯದಲ್ಲಿದ್ದ ಸಿಸಿಟಿವಿ ಕೆಮರಾಗಳನ್ನು ಒಡೆದು ಹಾಕಿದ ಬಳಿಕ ಈ ಕೃತ್ಯ ನಡೆಸಲಾಗಿದೆ ಎಂದು ದೇವಾಲಯ ನಿರ್ವಹಣಾ ಸಮಿತಿ ಸದಸ್ಯರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಗುಂಡಿನ ಚಕಮಕಿ: ನಾಲ್ವರು ದರೋಡೆಕೋರರ ಎನ್‌ಕೌಂಟರ್

ಗುರುಗ್ರಾಮ: ನಾಲ್ವರು ದರೋಡೆಕೋರ ಎನ್‌ಕೌಂಟರ್

ಗುರುಗ್ರಾಮದಲ್ಲಿ ಪೊಲೀಸರು ಮತ್ತು ದರೋಡೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ದರೋಡೆಕೋರರು ಸಾವನ್ನಪ್ಪಿದ್ದಾರೆ. ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಓರ್ವ ಗಾಯಾಳು ದರೋಡೆಕೋರನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುಗ್ರಾಮದ ಸುಶಾಂತ್ ಲೋಕ್ ಫೇಸ್- 2 ಪ್ರದೇಶದಲ್ಲಿ ಗುರುವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಹಿಂದೂ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ನವಾಜ್‌

Love Jihad: ಬೆಂಗಳೂರಿನಲ್ಲಿ ಲವ್‌ ಜಿಹಾದ್‌ ಹೋಲುವ ಪ್ರಕರಣವೊಂದು ನಡೆದಿದೆ. ಬೆಂಗಳೂರಿನ ವರ್ತೂರು ಮುಖ್ಯ ರಸ್ತೆ ಬಳಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕಾಡುಗೋಡಿ ವೆನ್ನೆಲ್ಲಾ ಹತ್ಯೆ; ಕರುಳ ಕುಡಿಯನ್ನೇ ಕೊಂದ ಪ್ರಿಯಕರನಿಗೆ ನೆರವಾದ ಪಾಪಿ ತಾಯಿ ಪ್ರಿಯಾಂಕಾಗೆ ಜಾಮೀನು

ವೆನ್ನೆಲ್ಲಾ ಕೊಲೆ ಆರೋಪಿ ತಾಯಿ ಪ್ರಿಯಾಂಕಾಗೆ ಜಾಮೀನು

Vennella Case: ಬೆಂಗಳೂರು ಕಾಡುಗೋಡಿಯ 5 ವರ್ಷದ ಬಾಲಕಿ ವೆನ್ನೆಲ್ಲಾ ಕೊಲೆ ಪ್ರಕರಣದ ಆರೋಪಿ, ತಾಯಿ ಪ್ರಿಯಾಂಕಾಗೆ ಜಾಮೀನು ಸಿಕ್ಕಿದೆ. ಪ್ರಿಯಾಂಕಾ ಪರ ವಕೀಲ ಪ್ರಸನ್ನ ವಾದ ಮಂಡಿಸಿ ಕೊಲೆಯಲ್ಲಿ ಪ್ರಿಯಾಂಕಾ ನೇರವಾಗಿ ಭಾಗಿಯಾಗಿಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಆಧಾರ್ ದುರ್ಬಳಕೆ ಮಾಡಿ ನಕಲಿ ಸಿಮ್‌ಗಳ ಜಾಲ: KBC ಲಾಟರಿ ವಂಚನೆ, ಸೆಕ್ಸ್‌ಟಾರ್ಷನ್ ಪ್ರಕರಣದಲ್ಲಿ ಇಬ್ಬರ ಬಂಧನ

ಆಧಾರ್ ದುರ್ಬಳಕೆ ಮಾಡಿ ನಕಲಿ ಸಿಮ್ ಜಾಲ; ಇಬ್ಬರ ಬಂಧನ

ಛತ್ತೀಸ್ಗಢದಲ್ಲಿ ಗ್ರಾಹಕರ ಆಧಾರ್ ಹಾಗೂ ಬಯೋಮೆಟ್ರಿಕ್ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡು ಅನಧಿಕೃತ ಸಿಮ್‌ಗಳನ್ನು ಸಕ್ರಿಯಗೊಳಿಸಿ ಸೈಬರ್ ಅಪರಾಧಿಗಳಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ಅಧಿಕೃತ ಸಿಮ್ ಮಾರಾಟಗಾರರನ್ನು ಬಂಧಿಸಲಾಗಿದ್ದು, KBC ಲಾಟರಿ ವಂಚನೆ, ಸೆಕ್ಸ್‌ಟಾರ್ಷನ್ ಸೇರಿದಂತೆ ಹಲವು ಸೈಬರ್ ಅಪರಾಧಗಳಲ್ಲಿ ಈ ಸಿಮ್‌ಗಳನ್ನು ಬಳಸಲಾಗುತ್ತಿತ್ತು.

Loading...