ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಪ್ರಧಾನಿಯನ್ನು ನಿಂದಿಸಿದ ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸು ಇಲ್ಲ: ದೆಹಲಿ ಪೊಲೀಸ್

ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿ ಬಳಿಕ ವಿಡಿಯೊ ಮೂಲಕ ಕ್ಷಮೆಯಾಚಿಸಿದ ಬಾಲಕಿ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂಬುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿಯವರನ್ನು ನಿಂದಿಸಿದ ಬಾಲಕಿ ವಿರುದ್ಧ ನೋಯ್ಡಾ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದರು. ಇದರ ಬಳಿಕ ಆಕೆ ಕ್ಷಮೆ ಕೇಳಿದ್ದು, ಆಕೆಯ ತಾಯಿಯು ಕೂಡ ಕ್ಷಮೆಯಾಚಿಸಿದ್ದರು.

ಸಿಎಂ ಸುವೇಂದು ಅಧಿಕಾರಿ ಮೇಲೆ ನಿಗಾ, ಸಿಜೆಪಿ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಪ್ರಯತ್ನ; ತನಿಖೆಯಲ್ಲಿ ಬಹಿರಂಗವಾಯಿತು ಪಾಕಿಸ್ತಾನದ ಭಯೋತ್ಪಾದಕರ ತಂತ್ರ

ಸಿಜೆಪಿ ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದರೆ ಭಯೋತ್ಪಾದಕರು ?

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಪಾಕಿಸ್ತಾನದ ಭಯೋತ್ಪಾದಕರು ಸಂಚು ರೂಪಿಸಿದ್ದರು. ಇದರೊಂದಿಗೆ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮೇಲೆ ದಾಳಿಗೆ ನಿರಂತರ ನಿಗಾ ಇರಿಸಿದ್ದರು ಎಂದು ಗುಪ್ತಚರ ಇಲಾಖೆ ಮಾಹಿತಿ ತಿಳಿಸಿದೆ.

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಮೂವರು ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಪ್ರವಾಸಿಗರಿದ್ದ ವಿಮಾನ ಅಪಘಾತ: ಪೆರುವಿನಲ್ಲಿ 13 ಮಂದಿ ಸಾವು

ಪೆರುವಿನಲ್ಲಿ ವಿಮಾನ ಅಪಘಾತ: 13 ಮಂದಿ ಸಾವು

ಪೆರುವಿನಲ್ಲಿ ಸಣ್ಣ ಪ್ರವಾಸಿ ವಿಮಾನವೊಂದು ಅಪಘಾತಕ್ಕೀಡಾಗಿ 13 ಮಂದಿ ಸಾವನ್ನಪ್ಪಿದ್ದಾರೆ. ಏರೋಡಯಾನ ನಿರ್ವಹಿಸುತ್ತಿದ್ದ ವಿಮಾನವು ಪ್ರವಾಸಿಗರಿಗೆ 30 ನಿಮಿಷಗಳಿಂದ ಒಂದು ಗಂಟೆಯವರೆಗೆ ದೃಶ್ಯವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಶನಿವಾರ ಅಪಘಾತಕ್ಕೀಡಾದ ವಿಮಾನದಲ್ಲಿ 11 ವಿದೇಶಿ ಪ್ರವಾಸಿಗರು ಮತ್ತು ಇಬ್ಬರು ಸಿಬ್ಬಂದಿ ಇದ್ದರು ಎಂದು ಪೆರುವಿನ ವ್ಯಾಪಾರ ಮತ್ತು ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಹೈಬ್ರಿಡ್‌ ಉಗ್ರರು ಸಕ್ರಿಯ; ದಾಳಿಯ ನಂತರ ಸಾಮಾನ್ಯ ಜನರ ನಡುವೆ ಬೆರೆತು ತಪ್ಪಿಸಿಕೊಳ್ಳುವ ತಂತ್ರ

ಇಬ್ಬರು ವಲಸೆ ಕಾರ್ಮಿಕರ ಹತ್ಯೆ, ಲತೀಫ್ ಭಟ್ ಮೇಲೆ ಶಂಕೆ

Latif Bhat: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ದಾಳಿಯ ಹಿಂದೆ ಲಷ್ಕರ್-ಎ-ತೊಯ್ಬಾ ಕಮಾಂಡರ್ ಲತೀಫ್ ಭಟ್ ಹಾಗೂ ಆತನ ಸಹಚರರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರಿಸಿವೆ.

Exam scam: ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ ಜೈಲು ಶಿಕ್ಷೆ, ಭಾರಿ ದಂಡ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ ಕಠಿಣ ಕ್ರಮ: ಪ್ರಿಯಾಂಕ್‌ ಖರ್ಗೆ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವುದು ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ಹೇಳಿದ್ದಾರೆ.

ಮಗು ತನ್ನದಲ್ಲ ಎಂಬ ಅನುಮಾನದಿಂದ ಜೋಡಿ ಕೊಲೆ; ಪತ್ನಿ, 7 ತಿಂಗಳ ಹಸುಳೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ: ಬಳ್ಳಾರಿಯಲ್ಲಿ ಅಮಾನುಷ ಕೃತ್ಯ

ಪತಿಯ ಅನುಮಾನಕ್ಕೆ ಪತ್ನಿ, 7 ತಿಂಗಳ ಪುಟ್ಟ ಕಂದಮ್ಮ ಬಲಿ

Crime News: ಮಗು ತನ್ನದಲ್ಲ ಎಂಬ ಅನುಮಾನದ ಮೇಲೆ ಪದೇ ಪದೆ ವ್ಯಕ್ತಿಯೊಬ್ಬ ಪತ್ನಿ ಜತೆ ಜಗಳವಾಡುತ್ತಿದ್ದ. ಆದರೆ ನಂತರ ನಡೆದದ್ದು ಭೀಕರ ಕೃತ್ಯ. ಪತ್ನಿ ಮತ್ತು ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಕೊಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು 28 ವರ್ಷದ ಹೊನ್ನೂರಪ್ಪ ಎಂದು ಗುರುತಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮರ್ತೋರ್ವ ಗಾಯ!

ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮತ್ತೋರ್ವ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತೋರ್ವ ಗಾಯಗೊಂಡಿದ್ದಾರೆ. ಶುಕ್ರವಾರ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕೆಲ್ಲಂ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್!

ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್

Tumkur News: ಪೊಲೀಸ್ ಸಿಬ್ಬಂದಿಯ ಪುತ್ರ ಗ್ಯಾಂಗ್ ಕಟ್ಟಿಕೊಂಡು ದುಬಾರಿ 'ಹೈಡ್ರೋ ಗಾಂಜಾ' ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ನೂತನ 'ಕ್ಯೂಆರ್ ಕೋಡ್' ತಂತ್ರಜ್ಞಾನದ ರಹಸ್ಯ ಕಾರ್ಯಾಚರಣೆಯಿಂದ ಈ ಕರಾಳ ದಂಧೆ ಬಯಲಾಗಿದೆ.

Kundapur Murder: ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ ಜಿಲ್ಲೆಯ ಕುಂದಾಪುರ ನಗರದ ಹೋಲಿ ರೋಸರಿ ಚರ್ಚ್‌ ಎದುರು ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರದ ವಿಚಾರದಲ್ಲಿದ್ದ ಮನಸ್ತಾಪ ಕಾರಣವೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಅವರು ಎಂದಿಗೂ ಬದಲಾಗಲ್ಲ"; ಪತಿ, ಅತ್ತೆ-ಮಾವನ ಕಿರುಕುಳಕ್ಕೆ ನೊಂದು ವಿಡಿಯೊ ಮಾಡಿ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

ಪತಿ, ಅತ್ತೆ-ಮಾವನ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ

Crime News: ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಮದುವೆಯಾದ ಎಂಟು ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ. ಹಲವು ತಿಂಗಳುಗಳಿಂದ ತನ್ನ ಪತಿ, ನಾದಿನಿ, ಅತ್ತೆ-ಮಾವ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ; ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಶಂಕೆ

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ

Chikkaballapur News: ಚಿಕ್ಕಬಳ್ಳಾಪುರ ನಗರದ ರೈಲು ನಿಲ್ದಾಣದ ಸಮೀಪ ಯುವಕನೊಬ್ಬನ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

"ನನ್ನ ತಂದೆಯನ್ನು ಎಳೆದು ಹೊಡೆದರು"; ಜಂತರ್ ಮಂತರ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕುಟುಂಬ ಹೇಳಿದ್ದೇನು?

ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ; ಕುಟುಂಬಗಳ ಆಕ್ರೋಶ

Jantar Mantar Protest: ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆ ಬಳಿಕ ಅವರ ಕುಟುಂಬದ ಸದಸ್ಯರು ತಮ್ಮ ನೋವು ಹಂಚಿಕೊಂಡಿದ್ದು, ಪೊಲೀಸರ ಮೇಲಿನ ಹಲ್ಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟೀಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಲೂಚಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ: 32 ಮಂದಿ ಸಾವು

ಬಲೂಚಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ

ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದ ಹೊರವಲಯದಲ್ಲಿ ಗುರುವಾರ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಇದರಿಂದ ಸುಮಾರು 32 ಮಂದಿ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಭೂಗತದಲ್ಲಿ ಸಿಲುಕಿಕೊಂಡಿದ್ದಾರೆ. ಮೀಥೇನ್ ಅನಿಲದ ಶೇಖರಣೆಯಿಂದ ಸ್ಫೋಟ ಉಂಟಾಗಿದೆ ಎಂದು ಸರ್ಕಾರಿ ಗಣಿ ನಿರೀಕ್ಷಕ ಘನಿ ಬಲೋಚ್ ತಿಳಿಸಿದ್ದಾರೆ.

ಹಾಸನದಲ್ಲಿ ಘೋರ ಘಟನೆ; ಬಟ್ಟೆ ನೆನೆಸಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನದಲ್ಲಿ ಘೋರ ಘಟನೆ; ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ಘಟನೆ ನಡೆದಿದೆ. ತಾಯಿ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಹೋದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಊಟ ಬಡಿಸುವುದು ವಿಳಂಬವಾಯಿತು ಎಂದು ಅತ್ತಿಗೆಯ ತಲೆಯನ್ನೇ ಕಡಿದ ಮೈದುನ!

ಬಿಹಾರದಲ್ಲಿ ಕ್ಲುಲಕ ಕಾರಣಕ್ಕೆ ಅತ್ತಿಗೆಯ ತಲೆಯನ್ನೇ ಕಡಿದ ಮೈದುನ!

ಮಹಿಳೆಯೊಬ್ಬರನ್ನು ಆಕೆಯ ಮೈದುನನೇ ಅತ್ಯಂತ ಕ್ರೂರವಾಗಿ ಕೊಚ್ಚಿ ಕೊಂದ ಘಟನೆಯೊಂದು ನಡೆದಿದೆ. ಪಾರ್ಸಾ ಬಿಘಾ ಪೊಲೀಸ್ ಠಾಣಾ ವ್ಯಾಪ್ತಿಯ ಇಮಾದ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕೇವಲ ಊಟ ಬಡಿಸುವುದು ತಡವಾಯಿತು ಎನ್ನುವ ಕಾರಣಕ್ಕೆ 25 ವರ್ಷದ ಮಹಿಳೆಯನ್ನು ಆಕೆಯ ಮೈದುನ ಕೊಡಲಿಯಿಂದಲೇ ತಲೆ ಕಡಿದಿದ್ದಾನೆ..

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ; ಐದು ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದೇಗೆ?

ಬೆಂಗಳೂರಿನಲ್ಲಿ ಪತ್ನಿ ಹತ್ಯೆ: ಬಿಹಾರಕ್ಕೆ ಪರಾರಿಯಾದ ಪತಿ

ಬೆಂಗಳೂರಿನ ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಹಾರ ಮೂಲದ ಮಹಿಳೆ ರೀಮಾ ಕುಮಾರಿಯನ್ನು ಪತಿ ಧೀರಜ್ ಕುಮಾರ್ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಆರೋಪಿಯು ಪರಾರಿಯಾಗಿದ್ದಾನೆ. ಸುಮಾರು ಐದು ದಿನಗಳ ಬಳಿಕ ಮನೆಯಿಂದ ಬರುತ್ತಿದ್ದ ತೀವ್ರ ದುರ್ವಾಸನೆ ಗಮನಿಸಿದ ಸಹೋದ್ಯೋಗಿ ಮತ್ತು ನೆರೆಹೊರೆಯವರು ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆಯುತ್ತಿದ್ದಂತೆ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ.

Tumkur News: ಜ್ಯುವೆಲರಿ ಶಾಪ್‌ನಲ್ಲಿ 10 ಲಕ್ಷ ಮೌಲ್ಯದ ವಜ್ರ, ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ, ಇಲಿಯೇ ಕಳ್ಳ!

ಜ್ಯುವೆಲರಿ ಶಾಪ್‌ನಲ್ಲಿ ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ!

ತುಮಕೂರು ನಗರದ ಕಾಲ್‌ಟೆಕ್ಸ್ ವೃತ್ತದ ಬಳಿ ಇರುವ ‘ವಿಶ್ವಾಸ್‌ ಜ್ಯುವೆಲರಿ ಶಾಪ್‌ʼ ನಲ್ಲಿ ಈ ವಿಚಿತ್ರ ಘಟನೆ ಜರುಗಿದೆ. ಅಂಗಡಿಯಲ್ಲಿದ್ದ 50 ಗ್ರಾಂ ಗೂ ಅಧಿಕ ತೂಕದ, ಅಂದರೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ವಜ್ರ ಖಚಿತ ಸರಗಳು ಹಾಗೂ ಉಂಗುರಗಳು ನಾಪತ್ತೆಯಾಗಿದ್ದವು. ಆದರೆ ಇದರ ಹಿಂದೆ ಯಾವುದೇ ಮಾನವ ಕಳ್ಳನ ಕೈವಾಡವಿಲ್ಲ, ಬದಲಿಗೆ ಕಳ್ಳತನ ಮಾಡಿದ್ದು ಪುಟ್ಟ ಇಲಿ ಎಂಬುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗಗೊಂಡಿದೆ.

ಶಾಲೆಯಲ್ಲಿಯೇ  ಸಹಪಾಠಿಯ ಕುತ್ತಿಗೆ ಹಿಸುಕಿದ ವಿದ್ಯಾರ್ಥಿ; ಚಿಕಿತ್ಸೆ ಫಲಿಸದೆ 10 ವರ್ಷದ ಬಾಲಕ ದುರ್ಮರಣ

ಶಾಲೆಯಲ್ಲಿ ಸಹಪಾಠಿಯ ಕುತ್ತಿಗೆ ಹಿಸುಕಿದ ವಿದ್ಯಾರ್ಥಿ: ಬಾಲಕ ಸಾವು

boy dies: ಜುಲೈ 23 ರಂದು ಚಾರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಪಹದ್‌ಪುರ ಸುಧ್ವರ್ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಊಟದ ವಿರಾಮದ ಸಮಯದಲ್ಲಿ ಸಹಪಾಠಿಯೊಬ್ಬ 10 ವರ್ಷದ ವಿದ್ಯಾರ್ಥಿಯ ಕತ್ತು ಹಿಸುಕಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಟಿಎಂಸಿ ಮಾಜಿ ನಾಯಕನ ಸಹಚರ ಬಸ್ ಚಾಲಕನ ಮನೆ ಮೇಲೆ ದಾಳಿ: 5.5 ಕೋಟಿ ರೂ. ನಗದು, 15 ಕೆಜಿ ಚಿನ್ನ ವಶ

ಬಸ್ ಚಾಲಕನ ಮನೆ ಮೇಲೆ ದಾಳಿ: ಅಪಾರ ನಗದು, ಚಿನ್ನ ವಶ

ಪಶ್ಚಿಮ ಬಂಗಾಳದ ಬಸ್ ಚಾಲಕ, ಟಿಎಂಸಿ ಮಾಜಿ ನಾಯಕನ ಸಹಚರ ಮನೆ ಮೇಲೆ ಪೊಲೀಸರು ದಾಳಿ ದಾಳಿ ನಡೆಸಿದ್ದು, ಕೋಟ್ಯಾಂತರ ರೂಪಾಯಿ ನಗದು ಸೇರಿದಂತೆ ಅಪಾರ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದಿದ್ದರೆ. ತೃಣಮೂಲ ಕಾಂಗ್ರೆಸ್ ನ ಮಾಜಿ ನಾಯಕ, ಕಲ್ಲು ವ್ಯಾಪಾರಿ ಅನುಬ್ರತಾ ಮೊಂಡಲ್ ಅವರ ಆಪ್ತ ಸಹಚರ ಮಿನಾರ್ ಮಂಡಲ್ ಎಂಬಾತನ ಮನೆ ಮೇಲೆ ಮಂಗಳವಾರ ತಡರಾತ್ರಿ ದಾಳಿ ನಡೆಸಲಾಗಿದೆ.

ವರ್ತೂರು ಕ್ರಿಕೆಟ್ ಗ್ರೌಂಡ್‌ನಲ್ಲಿ ರುಂಡ ಪತ್ತೆ ಕೇಸ್‌ಗೆ ಟ್ವಿಸ್ಟ್;‌ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು!

ವರ್ತೂರು ಕ್ರಿಕೆಟ್ ಗ್ರೌಂಡ್‌ನಲ್ಲಿ ಸಿಕ್ಕ ರುಂಡ ಯಾರದ್ದು?

Human head found: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಗ್ರೌಂಡ್‌ನಲ್ಲಿ ವ್ಯಕ್ತಿಯೊಬ್ಬರ ತಲೆ ಬುರುಡೆ ಪತ್ತೆ ಆಗಿತ್ತು. ವ್ಯಕ್ತಿಯ ತಲೆಯನ್ನು ದುಷ್ಕರ್ಮಿಗಳು ಕತ್ತರಿಸಿ ಕ್ರಿಕೆಟ್ ಗ್ರೌಂಡ್‌ನಲ್ಲಿಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಇದೀಗ ಘಟನೆಯ ಅಸಲಿ ಸತ್ಯ ಪೊಲೀಸ್‌ ತನಿಖೆಯಲ್ಲಿ ರಿವೀಲ್‌ ಆಗಿದೆ.

ವಿದ್ಯುತ್ ಅಪಘಾತ: ಪಂಜಾಬ್ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಸಾವು

ವಿದ್ಯುತ್ ಅಪಘಾತದಿಂದ ವಿದ್ಯಾರ್ಥಿನಿ ಸಾವು

ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬಳು ವಿದ್ಯುತ್ ಅಪಘಾತದಿಂದ ಸಾವನ್ನಪ್ಪಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದ ಹರಿಯಾಣ ಮೂಲದ ಜ್ಯೋತಿ ಅವರು ಹಾಸ್ಟೆಲ್‌ನಿಂದ ವಿವಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದಕ್ಕೆ ಕಾರಣವಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಕ್ಲೀನ್ ಚಿಟ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಕ್ಲೀನ್ ಚಿಟ್

ಕಲ್ಲಿದ್ದಲು ನಿಕ್ಷೇಪ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಅವರ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಆದೇಶವನ್ನು ರದ್ದುಗೊಳಿಸಿದೆ. 2024ರಲ್ಲಿ ನಿಧನರಾಗಿರುವ ಮನಮೋಹನ್ ಸಿಂಗ್ ಅವರ ವಿರುದ್ಧ ತನಿಖೆ ನಡೆಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿದೆ.

ಅಯೋಧ್ಯೆ ಬಳಿಕ ಈಗ ಮಧುರೈ: ಮೀನಾಕ್ಷಿ ದೇವಸ್ಥಾನ ಭೂಮಿ ಅಕ್ರಮ ಮಾರಾಟ; 60 ಕೋಟಿ ರುಪಾಯಿ ವಂಚನೆ, 19 ಮಂದಿ ವಿರುದ್ಧ ಎಫ್‌ಐಆರ್

ಅಯೋಧ್ಯೆ ಬಳಿಕ ಮಧುರೈ ದೇವಾಲಯದಲ್ಲಿ ವಂಚನೆ ಪ್ರಕರಣ ಬೆಳಕಿಗೆ

ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದ ಬಳಿಕ ಇದೀಗ ಮಧುರೈ ಮೀನಾಕ್ಷಿ ದೇವಸ್ಥಾನದಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ದೇವಾಲಯಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಇದರಿಂದ ಕೋಟ್ಯಾಂತರ ರೂಪಾಯಿ ವಂಚಿಸಲಾಗಿದೆ. ಈ ಕುರಿತು 19 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Loading...