ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಪತ್ನಿಯನ್ನು ಕೊಂದು ಶವ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದ ಪತಿ; 4 ವರ್ಷದ ಮಗನಿಂದ ಬಯಲಾಯ್ತು ಭಯಾನಕ ಸತ್ಯ

ಪತ್ನಿಯನ್ನು ಕೊಂದು ಶವ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದ ಪತಿ

Crime News: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಬಗ್ಗೆ ಇದ್ದ ಅನುಮಾನದಿಂದ ಜಗಳವಾಡಿದ ನಂತರ ಆಕೆಯನ್ನು ಕೊಂದು, ನಂತರ ಆಕೆಯ ಶವವನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿರುವ ಘಟನೆ ಒಡಿಶಾದ ನಬರಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಪತಿಯನ್ನು ಸುಬಾಸ್ ಗೊಂಡ್ ಎಂದು ಗುರುತಿಸಲಾಗಿದ್ದು, ಮನೈ ಗೊಂಡ್‌ ಮೃತ ದುರ್ದೈವಿ.

ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್‌ಗೆ ಡಿಕ್ಕಿ ಹೊಡೆದ ವ್ಯಾನ್; 11 ಮಂದಿ ದುರ್ಮರಣ

ಸಿಮೆಂಟ್ ಮಿಕ್ಸರ್‌ಗೆ ವ್ಯಾನ್ ಡಿಕ್ಕಿ; 11 ಮಂದಿ ದುರ್ಮರಣ

accident: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 11 ಜನರು ದುರ್ಮರಣಕ್ಕೀಡಾಗಿ, ಹಲವಾರು ಮಂದಿ ಗಾಯಗೊಂಡಿದ್ದಾರೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್‌ಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಅಪಘಾತದಿಂದ ಸ್ಥಳೀಯರು ಭಯಭೀತರಾಗಿ ಗಾಯಾಳುಗಳನ್ನು ರಕ್ಷಿಸಲು ಸ್ಥಳಕ್ಕೆ ಧಾವಿಸಿದರು.

ಟಿಸಿಎಸ್ ಕಂಪನಿಯಲ್ಲಿ ಬೆಳಕಿಗೆ ಬಂತು ಮತಾಂತರ ದಂಧೆ! ಟೀಂ ಲೀಡ್‌ ಸೇರಿ 6 ಜನರ ಬಂಧನ

ಟಿಸಿಎಸ್ ಕಂಪನಿಯಲ್ಲಿ ಬೆಳಕಿಗೆ ಬಂತು ಮತಾಂತರ ದಂಧೆ!

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ಹಲವಾರು ಮಹಿಳಾ ಉದ್ಯೋಗಿಗಳು ತಮ್ಮ ತಂಡದ ನಾಯಕರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ ನಂತರ ಭಾರಿ ವಿವಾದ ಭುಗಿಲೆದ್ದಿದೆ.

ಮಗಳ ಮೃತದೇಹದೊಂದಿಗೆ ದಿನ ಕಳೆದ ತಂದೆ; ವಾಸನೆ ಹೊರಬರದಿರಲು ಪರ್‌ಫ್ಯೂಮ್‌ ಸ್ಪ್ರೇ: ಕೊನೆಗೆ ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಮಗಳ ಸಾವನ್ನು ಮರೆ ಮಾಡಿದ ತಂದೆ

Crime News: ಪ್ರಿಯಾಂಕಾ ಎಂಬ ಮಹಿಳೆಯು ತನ್ನ ತಂದೆ ಉದಯ್ ಭಾನ್ ಬಿಸ್ವಾಸ್ ಜತೆ ವಾಸಿಸುತ್ತಿದ್ದರು. ಆದರೆ ಅವರು ವಾಸವಿದ್ದ ಮನೆಗೆ ಸುಮಾರು ನಾಲ್ಕು ತಿಂಗಳಿನಿಂದ ಬೀಗ ಹಾಕಲಾಗಿತ್ತು. ಆ ಅವಧಿಯಲ್ಲಿ ತಂದೆ ಮತ್ತು ಮಗಳು ಇಬ್ಬರೂ ನಾಪತ್ತೆಯಾಗಿದ್ದರು. ಇದೀಗ ಮನೆಯಲ್ಲಿ ಮಹಿಳೆಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ.

Koppala News: ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಶವ ಪತ್ತೆ, ಕೊಲೆ ಶಂಕೆ

ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕರಿಬ್ಬರ ಶವ ಪತ್ತೆ, ಕೊಲೆ ಶಂಕೆ

ರುದ್ರೇಶ್ ಗಂಗಾವತಿ (23) ಹಾಗೂ ರವಿರಾಮಣ್ಣ ತಟ್ಟಿ (22) ಮೃತ ದುರ್ದೈವಿಗಳು. ಇಬ್ಬರು ಯುವಕರನ್ನು ಬೇರೆಡೆ ಕೊಂದು ಕಾಲುವೆಗೆ ತಂದು ಸುಟ್ಟು ಹಾಕಲಾಗಿದೆ ಎಂದು ಶಂಕಿಸಲಾಗಿದೆ. ಇಬ್ಬರ ವೈಯಕ್ತಿಕ ದ್ವೇಷ ಹೊಂದಿದ್ದವರು, ಇವರು ಕೊನೆಯ ಬಾರಿಗೆ ಕಾಣಿಸಿಕೊಂಡ ಸ್ಥಳಗಳ ಸಿಸಿಟಿವಿ ಕ್ಯಾಮೆರಾ ಇತ್ಯಾದಿ ಪರಿಶೀಲಿಸಲಾಗುತ್ತಿದೆ.

Kidnap case: ಯುವಕನನ್ನು ಅಪಹರಿಸಿ ಯುವತಿ ವೇಷ ಹಾಕಿಸಿ ಲೈಂಗಿಕ ಸೇವೆಗೆ ಬಳಕೆ, ಲಿಂಗ ಬದಲಾವಣೆಗೆ ಒತ್ತಡ

ಯುವಕನ ಅಪಹರಿಸಿ ಯುವತಿ ವೇಷ ಹಾಕಿಸಿ ಲೈಂಗಿಕ ಸೇವೆಗೆ ಬಳಕೆ, ಬ್ಲ್ಯಾಕ್‌ಮೇಲ್

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ.

Love Jihad: ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಮೊಬೈಲ್‌ನಲ್ಲಿ ಯುವತಿಯರ 7000ಕ್ಕೂ ಹೆಚ್ಚು ಫೋಟೋ! ಅಂತಾರಾಷ್ಟ್ರೀಯ ಮಟ್ಕಾ ಬುಕ್ಕಿಗಳ ಲಿಂಕ್!

ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಅಂತಾರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್!

ಹಿಂದೂ ಸಂಘಟನೆಗಳ ಕಾರ್ಯಕರ್ತರು ಯುವಕನ ಬಳಿಯಿದ್ದ ಮೊಬೈಲ್‌ ಕಸಿದುಕೊಂಡು ಪರಿಶೀಲಿಸಿದಾಗ ಫೋನ್‌ನಲ್ಲಿ ಮೂರು ಸಾವಿರ ಫೋಟೊಗಳು, ಆರು ಸಾವಿರ ವಿಡಿಯೊಗಳು, ಮತ್ತೊಂದು ಫೋನ್‌ನಲ್ಲಿ ನಾಲ್ಕು ಸಾವಿರ ಯುವತಿಯರ ಫೋಟೊಗಳು ಹಾಗೂ 3,700 ವಿಡಿಯೊಗಳು ಇರುವುದು ಗೊತ್ತಾಗಿದೆ.

Blackmail: 42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಗಾಳ, ಬ್ಲಾಕ್‌ಮೇಲ್‌, ಯುವಕ ಆತ್ಮಹತ್ಯೆ

42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಬ್ಲಾ‌‌ಕ್‌ಮೇಲ್‌, ಯುವಕ ಆತ್ಮಹತ್ಯೆ

ವಿವಾಹಿತ ಮಹಿಳೆಯ ಜೊತೆ ಸಂಬಂಧ ಹಾಗೂ ಆಕೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಮಹಿಳೆಗೆ ದಿಲೀಪ್ ಕರೆ ಮಾಡಿದ್ದಾನೆ. ಮಹಿಳೆಗೆ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.

Dharwad Murder Case: ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡದ ಹಾಸ್ಮಿ ನಗರದ ನಿವಾಸದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಫೈರೋಜ್ ಮೇಲೆ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ.

ಲಷ್ಕರ್-ಎ-ತೈಬಾ  ಜೊತೆ ನಂಟು: ಹರಿಯಾಣ, ರಾಜಸ್ಥಾನದ ಹಲವರ ಬಂಧನ

ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಹಲವರ ಬಂಧನ

ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಹರಿಯಾಣ ಮತ್ತು ರಾಜಸ್ಥಾನದ ಹಲವಾರು ಮಂದಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಗುಂಪು ನಕಲಿ ಆಧಾರ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್‌ಗಳನ್ನು ಮಾಡಿ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿತ್ತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ; ಉಪನ್ಯಾಕರಿಂದ ಕಿರುಕುಳ ಆರೋಪ

ವಿದ್ಯಾರ್ಥಿ ಆತ್ಮಹತ್ಯೆ; ಉಪನ್ಯಾಕರಿಂದ ಕಿರುಕುಳ ಆರೋಪ

Kerala student self-harming: ಕೇರಳದ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರು ಕಟ್ಟಡದಿಂದ ಬಿದ್ದು ಮೃತಪಟ್ಟ (ಆತ್ಮಹತ್ಯೆ ಮಾಡಿದ) ನಂತರ ಪೊಲೀಸರು ಅಧ್ಯಾಪಕರ ವಿರುದ್ಧ ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಯನ್ನು ತಿರುವನಂತಪುರಂನ ಪುದುಕುಲಂಗರದ ಉಳಮಲಕ್ಕಲ್ ಮೂಲದ ನಿತಿನ್ ರಾಜ್ ಆರ್‌ಎಲ್ (22) ಎಂದು ಗುರುತಿಸಲಾಗಿದೆ.

Actor Harish Death: ಕೊಡಗಿನಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಚಿತ್ರನಟ ಹರೀಶ್‌ ಸಾವು

ಕೊಡಗಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಚಿತ್ರನಟ ಹರೀಶ್‌ ಸಾವು

Sandalwood News: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದ ಅಪಘಾತದಲ್ಲಿ ಚಲನಚಿತ್ರ ನಟ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Harassment: ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬಂದು ದೈಹಿಕ ಸಂಬಂಧದ ಆಸೆಗೆ ಬಿದ್ದು ಮಹಿಳೆಗೆ ಮೊಬೈಲ್‌ ಸಂದೇಶದ ಮೂಲಕ ಕಿರುಕುಳ ನೀಡಿದ ಈ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಲು ತೆರಳುತ್ತಿದ್ದಂತೆ ಯುವಕ ಮರ್ಮಾಂಗ ಕತ್ತರಿಸಿಕೊಳ್ಳಲು ಯತ್ನಿಸಿದ್ದ.

ಸಾಮಾಜಿಕ ಮಾಧ್ಯಮಗಳ ಮೂಲಕ ಭಾರತದಲ್ಲಿ ಭಯೋತ್ಪಾದನಾ ಜಾಲ ವಿಸ್ತರಣೆ; ಬಯಲಾಯಿತು ಪಾಕಿಸ್ತಾನದ ಉಗ್ರರ ಸಂಚು

ಉತ್ತರಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

ಸಾಮಾಜಿಕ ಮಾಧ್ಯಮ ಬಳಕೆಯು ಈಗ ಅಪಾಯಕಾರಿಯಾಗಿ ಪರಿಣಮಿಸಿದೆ. ಇದನ್ನು ಬಳಸಿಕೊಂಡು ಪಾಕಿಸ್ತಾನದ ಭಯೋತ್ಪಾದಕರು ಭಯೋತ್ಪಾದನೆಯ ಜಾಲವನ್ನು ವಿಸ್ತರಿಸುತ್ತಿರುವುದು ಈಗ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಈ ಮೂಲಕ ಹಲವು ರಹಸ್ಯವಾಗಿದ್ದ ಮಾಹಿತಿಗಳು ಬೆಳಕಿಗೆ ಬಂದಿದೆ.

ಐಎಎಸ್ ಅಧಿಕಾರಿಯಿಂದ ವ್ಯಕ್ತಿಗೆ 95 ಲಕ್ಷ ರೂಪಾಯಿ ವಂಚನೆ ಆರೋಪ; ತನಿಖೆಗೆ ಆದೇಶ

ಐಎಎಸ್ ಅಧಿಕಾರಿಯಿಂದ ವ್ಯಕ್ತಿಗೆ 95 ಲಕ್ಷ ರೂಪಾಯಿ ವಂಚನೆ ಆರೋಪ

ಒಡಿಶಾ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಭೂಮಿ ನೀಡುವ ನಕಲಿ ಭರವಸೆ ನೀಡಿ ವ್ಯಕ್ತಿಯೊಬ್ಬರು 95 ಲಕ್ಷ ರೂ.ಗಳನ್ನು ವಂಚಿಸಿ, ನಂತರ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Koppal Love Jihad case: ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಫೋಟೊ, ವಿಡಿಯೊಗಳು!

ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ವಶಕ್ಕೆ

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಕಳೆದ ಮೂರು ದಿನಗಳ ಹಿಂದೆ ಹಿಂದೂ ಯುವತಿ ಜತೆ ಓಡಾಡುತ್ತಿದ್ದಾ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Belagavi Digital arrest: ಬೆಳಗಾವಿ ಉದ್ಯಮಿಯ ಡಿಜಿಟಲ್ ಅರೆಸ್ಟ್ ಪ್ರಕರಣ; 15.45 ಕೋಟಿ ವಂಚಿಸಿದ್ದ ಇಬ್ಬರು ಖದೀಮರು ಅರೆಸ್ಟ್

ಉದ್ಯಮಿಯ ಡಿಜಿಟಲ್ ಅರೆಸ್ಟ್; 15.45 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್

ಉದ್ಯಮಿ ಬಳಿ ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹಾಡಹಗಲೇ ವಕೀಲನನ್ನು ಗುಂಡಿಕ್ಕಿ ಕೊಂದ ಹಂತಕರು; ನೋಡ ನೋಡುತ್ತಲೇ ಬೈಕ್‌ನಲ್ಲಿ ಪರಾರಿ

ವಕೀಲರ ಗುಂಡಿಕ್ಕಿ ಹತ್ಯೆ: ಹಂತಕರು ಬೈಕ್‌ನಲ್ಲಿ ಪರಾರಿ

Crime News: ಹಾಡಹಗಲೇ ವಕೀಲರೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಹಿರಿಯ ವಕೀಲ ರಾಜೀವ್ ಸಿಂಗ್ ಮೃತ ದುರ್ದೈವಿ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ;  ಗಂಟಲು ಸೀಳಿ ಕೊಂದ ಶಾಲಾ ಹಾಸ್ಟೆಲ್ ಸೆಕ್ಯುರಿಟಿ!

5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!

ಬಿಹಾರದ ಜಹಾನಾಬಾದ್ ಜಿಲ್ಲೆಯಲ್ಲಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ 5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕ್ಯಾಂಟೀನ್ ಕಾವಲುಗಾರನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯು ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ, ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Kalaburagi News: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ

IPL Betting: ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ ವ್ಯಕ್ತಿ ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಾರೆ. ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಲಗಾರರ ಒತ್ತಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯಾಗಲು ತಿರಸ್ಕರಿಸಿದಕ್ಕೆ ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಪಾಪಿ; ಮನನೊಂದ ಯುವತಿ ಆತ್ಮಹತ್ಯೆ

ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಆರೋಪಿ

Crime News: ಮದುವೆಯಾಗಲು ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಗೆ ಎಚ್‌ಐವಿ ಪಾಸಿಟಿವ್ ರಕ್ತವನ್ನು ಚುಚ್ಚಿದ್ದ ಘಟನೆ ಹೈದರಾಬಾದ್‍ನಲ್ಲಿ ನಡೆದಿತ್ತು. ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ, ಏ.10 ರಂದು ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರೋಪಿ ಮನೋಹರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್ ಥೈಲ್ಯಾಂಡ್‌ನಿಂದ ಭಾರತಕ್ಕೆ ಗಡೀಪಾರು

ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಥೈಲ್ಯಾಂಡ್‌ನಿಂದ ಗಡೀಪಾರು

gangster Sahil Chauhan: ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಸಂಘಟಿತ ಅಪರಾಧಗಳಲ್ಲಿ ಕುಖ್ಯಾತ ವ್ಯಕ್ತಿಯಾಗಿರುವ ಚೌಹಾಣ್, ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೂ ಬೇಕಾಗಿದ್ದಾನೆ.

Lamborghini case: ಲ್ಯಾಂಬೊರ್ಗಿನಿ ಕಾರಿನಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ ಬನ್ನಿ: ಆರೋಪಿಗೆ ಹೈಕೋರ್ಟ್‌ ಸೂಚನೆ

ಲ್ಯಾಂಬೊರ್ಗಿನಿ ಕಾರಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ: ಆರೋಪಿಗೆ ಹೈಕೋರ್ಟ್‌

ಮನುಷ್ಯನ ಪ್ರಾಣಕ್ಕೆ ಹಾನಿಯಾಗುವಂಥ ಸೈಲೆನ್ಸರ್‌ ಅಳವಡಿಸಿಕೊಂಡಿರುವ ಲ್ಯಾಂಬೊರ್ಗಿನಿ ಕಾರನ್ನು ಮೈಸೂರು ರಸ್ತೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಕುರಿತು ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಚಿರಂತನ್‌ ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Loading...