ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

Uttara Kannada News: ಕುಮಟಾದಲ್ಲಿ  ಹಿಂದೂ ಮನೆಗೆ ಮುಸ್ಲಿಂ ವ್ಯಕ್ತಿಯಿಂದ ಬೆಂಕಿ, ಪ್ರದೇಶ ಉದ್ವಿಗ್ನ

ಕುಮಟಾದಲ್ಲಿ ಹಿಂದೂ ಮನೆಗೆ ಮುಸ್ಲಿಂ ವ್ಯಕ್ತಿಯಿಂದ ಬೆಂಕಿ, ಪ್ರದೇಶ ಉದ್ವಿಗ್ನ

ಸಾರ್ವಜನಿಕರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಘಟನೆಯಿಂದಾಗಿ ದೇವರ ಹಕ್ಕಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜೆನ್ ಝೀ ಪ್ರತಿಭಟನೆ ವೇಳೆ ನೇಪಾಳ ಜೈಲಿನಿಂದ ಪರಾರಿಯಾಗಿದ್ದ ಕ್ರಿಮಿನಲ್‌ ಗುಜರಾತ್‌ನಲ್ಲಿ ಅರೆಸ್ಟ್‌

ಜೈಲಿನಿಂದ ತಪ್ಪಿಸಿಕೊಂಡ ಡ್ರಗ್ ಸಾಗಣೆದಾರನ ಬಂಧನ

ನೇಪಾಳದಲ್ಲಿ ನಡೆದ ಜೆನ್ ಝೀ ಪ್ರತಿಭಟನೆಗಳ ಗೊಂದಲದ ಮಧ್ಯೆ ಜೈಲಿನಿಂದ ಪರಾರಿಯಾಗಿದ್ದ ಡ್ರಗ್ಸ್ ಸಾಗಣೆದಾರನನ್ನು ಭಾರತೀಯ ಭದ್ರತಾ ಸಂಸ್ಥೆಗಳು ಗುಜರಾತ್‌ನಲ್ಲಿ ಬಂಧಿಸಿವೆ. ಆರೋಪಿಯ ವಿರುದ್ಧ ಮಾದಕ ದ್ರವ್ಯ ಸಾಗಣೆ ಪ್ರಕರಣಗಳು ಇದ್ದು, ತನಿಖೆ ಮುಂದುವರಿದಿದೆ.

ಬೆಂಗಳೂರಿನ ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

ಬೆಂಗಳೂರಿನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

Jewellery shop robbery in Bengaluru: ಬೆಂಗಳೂರಿನ ದಾಸನಪುರದ ರಾಮ್ ದೇವ್ ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ನಡೆದಿದೆ. ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿ, ಕೇಸ್‌ ದಾಖಲಿಸಿಕೊಂಡಿದ್ದಾರೆ.

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಮಂದಿಗೆ ಗಾಯ

ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಅಪಘಾತ ನಡೆದಿದೆ. ಹಾವನೂರು ಜಾತ್ರೆಗೆಂದು ಹಳೇರಿತ್ತಿಯಿಂದ ಜನರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್, ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡಗೆ 14 ದಿನ ನ್ಯಾಯಾಂಗ ಬಂಧನ; ಆಶ್ರಯ ಕೊಟ್ಟ ಉದ್ಯಮಿಗೆ ರಿಲೀಫ್‌

ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡಗೆ 14 ದಿನ ನ್ಯಾಯಾಂಗ ಬಂಧನ

ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಜೀವ್‌ ಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಕೇಸ್‌ ದಾಖಲಾದ ಹಿನ್ನೆಲೆಯಲ್ಲಿ ಕೈ ಮುಖಂಡ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ಮೂರು ತಂಡ ರಚಿಸಲಾಗಿತ್ತು. ಜಿಪಿಎಸ್, ಫಾಸ್ಟ್ ಟ್ಯಾಗ್ ಆಧರಿಸಿ ಆರೋಪಿಗಳನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು.

ಬಿಹಾರದಲ್ಲಿ ಗಣರಾಜ್ಯೋತ್ಸವದಂದೇ ಪಾಕಿಸ್ತಾನ ಪರ ಘೋಷಣೆ ಕೂಗಿದ ಶಿಕ್ಷಕ

ಗಣರಾಜ್ಯೋತ್ಸವ ಗಣರಾಜ್ಯೋತ್ಸವದಂದೇ ಪಾಕ್ ಪರ ಘೋಷಣೆ

ಬಿಹಾರದ ಸುಪೌಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆಯ ವೇಳೆ ಶಿಕ್ಷಕನೊಬ್ಬ ಪಾಕಿಸ್ತಾನ ಹಾಗೂ ಅದರ ಸಂಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಅವರನ್ನು ಬೆಂಬಲಿಸಿ ಘೋಷಣೆ ಕೂಗಿದ್ದಾನೆ. ಈ ಘಟನೆ ಕಿಶನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತನಿಖೆ ಆರಂಭಿಸಲಾಗಿದೆ.

30 ರೂ. ಟೀ ಕುಡಿಯಲು ಹೋಗಿ 30 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ ದಂಪತಿ!

30 ರೂ. ಟೀ ಕುಡಿಯಲು ಹೋಗಿ 30 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ ದಂಪತಿ!

Bengaluru Theft Case: ಬೆಂಗಳೂರು ನಗರದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ದಂಪತಿ ಸಂಜೆ ಟೀ ಕುಡಿಯಲು ಕೆಫೆಗೆ ಹೋಗಿದ್ದನ್ನು ಗಮನಿಸಿದ್ದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾತ್ರೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

Two tribal girls physical assaulted: ಇಬ್ಬರು ಅಪ್ರಾಪ್ತ ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಜಾರ್ಖಂಡ್‌ನ ಗಿರಿಧಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರು ತಮ್ಮ ಗ್ರಾಮದ ಕೆಲವು ಪರಿಚಯಸ್ಥರೊಂದಿಗೆ ಜಾತ್ರೆಗೆ ಹೋಗಿದ್ದರು. ತಡರಾತ್ರಿ ಗುಂಪಿನಿಂದ ಬೇರ್ಪಟ್ಟಿದ್ದ ವೇಳೆ ಅತ್ಯಾಚಾರ ಎಸಗಲಾಗಿದೆ.

ಗಣರಾಜ್ಯೋತ್ಸವ ದಿನವೇ ಘೋರ ದುರಂತ; ಧ್ವಜ ಇಳಿಸುವಾಗ ವಿದ್ಯುತ್ ಸ್ಪರ್ಶಿಸಿ 10ನೇ ತರಗತಿ ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶಿಸಿ 10ನೇ ತರಗತಿ ವಿದ್ಯಾರ್ಥಿ ಸಾವು

ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಧ್ವಜವನ್ನು ಇಳಿಸುವಾಗ ವಿದ್ಯುತ್ ಸ್ಪರ್ಶಿಸಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಓಂ ಪ್ರಕಾಶ್ ದ್ವಿವೇದಿ ಎಂದು ಗುರುತಿಸಲಾಗಿದೆ.

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪ;   ವ್ಯಕ್ತಿ ಬಂಧನ

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತನ ಬಂಧನ

Rajasthan man arrested: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯೊಬ್ಬನನ್ನು ಭದ್ರತಾ ಸಂಸ್ಥೆಗಳು ಬಂಧಿಸಿವೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಶತ್ರು ರಾಷ್ಟ್ರಕ್ಕೆ ನೀಡಿದ್ದಾನೆ ಎಂಬ ಶಂಕೆಯ ಮೇಲೆ ಆತನನ್ನು ಬಂಧಿಸಲು, ತನಿಖೆ ಮುಂದುವರಿದಿದೆ.

ಅಯ್ಯೋ  ಇದೆಂಥಾ ದುರ್ವಿಧಿ: ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ

girl died tragically: ತೆಲಂಗಾಣದಲ್ಲಿ ಗಾಳಿಪಟ ಹಾರಾಟದ ವೇಳೆ ಬಳಸುವ ದಾರ (ಚೈನೀಸ್ ಮಾಂಜಾ) ಕುತ್ತಿಗೆಗೆ ಸಿಲುಕಿ ಐದು ವರ್ಷದ ಬಾಲಕಿ ದುರ್ಮರಣಕ್ಕೀಡಾದ ದುರ್ಘಟನೆ ನಡೆದಿದೆ. ಮಗು ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಕುಕತ್ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Self Harming: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ; ಪತಿ, ಮದುವೆ ಮಾಡಿಸಿದವನೂ ಆತ್ಮಹತ್ಯೆ

ಬೇರೊಬ್ಬನೊಂದಿಗೆ ನವವಿವಾಹಿತೆ ಪರಾರಿ; ಪತಿ, ಮದುವೆ ಮಾಡಿಸಿದವನೂ ಆತ್ಮಹತ್ಯೆ

ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಡೆತ್‌ನೋಟ್‌ ಬರೆದಿಟ್ಟು ಪತಿ ಹರೀಶ್‌ ಆರೋಪಿಸಿದ್ದಾರೆ. ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಯುವತಿಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.‌

Kavya Gowda: ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇ*ಪ್‌ ಬೆದರಿಕೆ, ಪತಿಯ ಮೇಲೂ ಹಲ್ಲೆ

ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇ*ಪ್‌ ಬೆದರಿಕೆ, ಪತಿಯ ಮೇಲೂ ಹಲ್ಲೆ

Radha Ramana: ‘ರಾಧಾ ರಮಣ’ , ‘ಗಾಂಧಾರಿ’ ಮುಂತಾದ ಧಾರಾವಾಹಿಗಳಲ್ಲಿ ಮಿಂಚಿದ ಚೆಲುವೆ ಕಾವ್ಯ ಗೌಡ, ಕಾವ್ಯಾ ಗೌಡ ಮತ್ತು ಅವರ ಪತಿ ಸೋಮಶೇಖರ್‌ ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಸಂಬಂಧಿ ರವಿಕುಮಾರ್ ಸೋಮಶೇಖರ್ ಮೇಲೆ ಹಲ್ಲೆ ನಡೆಸಿ, ಕಾವ್ಯಾ ಅವರಿಗೆ ಬೆದರಿಕೆ ಹಾಕಿದ್ದಾರೆ. ಕಾವ್ಯಾ ಗೌಡ ಅವರು ಬಣ್ಣದ ಲೋಕದಿಂದ ದೂರ ಉಳಿದು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಇದೀಗ ದಂಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ, 1.37 ಕೋಟಿ ರೂ. ಲೂಟಿ

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ, 1.37 ಕೋಟಿ ರೂ. ಲೂಟಿ

ಬೆಂಗಳೂರಿನಲ್ಲಿ ಎಸ್‌ಬಿಐ, ಎಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬುವ ಕಂಪನಿ ಹಿಟಾಚಿ ಸಿಬ್ಬಂದಿಯಿಂದ ಎಟಿಎಂ ವಾಹನ ದರೋಡೆ ಮಾಡಲಾಗಿದೆ. ಎರಡು ತಂಡಗಳು ಸೇರಿ 1.37 ಕೋಟಿ ರೂ. ಹಣ ಲೂಟಿ ಮಾಡಿವೆ. ಒಂದು ತಂಡ 57 ಲಕ್ಷ ರೂ. ದೋಚಿದರೆ, ಮತ್ತೊಂದು ತಂಡ 80 ಲಕ್ಷ ರೂ. ದರೋಡೆ ಮಾಡಿದೆ. ಜನವರಿ 19 ರಂದು ಎಟಿಎಂ ವಾಹನ ದರೋಡೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Murder Case: ಮದ್ಯದ ನಶೆಯಲ್ಲಿ ಜಗಳ, ಮರಕ್ಕೆ ಕಾರು ಗುದ್ದಿಸಿ ಸ್ನೇಹಿತನನ್ನು ಕೊಂದ ಟೆಕ್ಕಿ

ಮದ್ಯದ ನಶೆಯಲ್ಲಿ ಜಗಳ, ಮರಕ್ಕೆ ಕಾರು ಗುದ್ದಿಸಿ ಸ್ನೇಹಿತನನ್ನು ಕೊಂದ ಟೆಕ್ಕಿ

ವಿಚಿತ್ರ ರೀತಿಯಲ್ಲಿ ಸ್ನೇಹಿತನ ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ ಬೆಂಗಳೂರಿನ ಒಬ್ಬಸಾಫ್ಟ್‌ವೇರ್‌ ಇಂಜಿನಿಯರ್.‌ ಮದ್ಯದ ನಶೆಯಲ್ಲಿ ಹೊಡೆದಾಟ ಆರಂಭವಾಗಿ ಅದು ಕೊಲೆಯಲ್ಲಿ ಮುಕ್ತಾಯವಾಗಿದೆ. ತನ್ನ ಕಾರಿಗೆ ನೇತು ಬಿದ್ದು ಕೊಲೆ ಬೆದರಿಕೆ ಹಾಕುತ್ತಿದ್ದ ಸ್ನೇಹಿತನನ್ನು ಹಾಗೇ ಮರಕ್ಕೆ ಗುದ್ದಿಸಿ ಕೊಲೆ ಮಾಡಿದ್ದಾನೆ. ಈ ವೇಳೆ ಟೆಕ್ಕಿಗೂ ಗಾಯವಾಗಿದೆ.

Vijayapura Robbery Case: ರಾಜ್ಯದಲ್ಲಿ ಮತ್ತೊಂದು ದರೋಡೆ, ಕಂಟ್ರಿ ಪಿಸ್ತೂಲ್‌ ತೋರಿಸಿ 205 ಗ್ರಾಂ ಚಿನ್ನಾಭರಣ ಕಳವು

ಮತ್ತೊಂದು ದರೋಡೆ, ಕಂಟ್ರಿ ಪಿಸ್ತೂಲ್‌ ತೋರಿಸಿ 205 ಗ್ರಾಂ ಚಿನ್ನಾಭರಣ ಕಳವು

ದರೋಡೆಕೋರರು ಚಿನ್ನ ದೋಚಿ ಮಹಾರಾಷ್ಟ್ರದ ಕಡೆಗೆ ಪರಾರಿಯಾಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಹಲಸಂಗಿ ಗಡಿ ಗ್ರಾಮವಾಗಿದ್ದು ನೆರೆಯ ಮಹಾರಾಷ್ಟ್ರದಿಂದ ಬಂದ ದರೋಡೆಕೋರರೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಸಿಕ್ಕಿರೋ ದೃಶ್ಯಗಳನ್ನ ಆಧಾರವಾಗಿಟ್ಟುಕೊಂಡು ಪೊಲೀಸರು ದರೋಡೆಕೋರರ ಬೆನ್ನಟ್ಟಿದ್ದಾರೆ.

400 crore robbery case: ಚೋರ್ಲಾ ಘಾಟ್‌ ದರೋಡೆಗೆ ಟ್ವಿಸ್ಟ್‌, ಗುಜರಾತ್‌ ರಾಜಕಾರಣಿ ಕೈವಾಡ?

ಚೋರ್ಲಾ ಘಾಟ್‌ ದರೋಡೆಗೆ ಟ್ವಿಸ್ಟ್‌, ಗುಜರಾತ್‌ ರಾಜಕಾರಣಿ ಕೈವಾಡ?

ದರೋಡೆಯಾಗಿತ್ತು ಎನ್ನಲಾದ 400 ಕೋಟಿ ರೂ. ಹಣಕ್ಕೆ ಸಂಬಂಧಿಸಿದಂತೆ ಜಯೇಶ್ ಎಂಬಾತನ ಜೊತೆ ಮಹಾರಾಷ್ಟ್ರದ ಉದ್ಯಮಿ ಕಿಶೋರ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋವೊಂದು ಸೋಮವಾರ ಬಹಿರಂಗವಾಗಿದೆ. ಅದರಲ್ಲಿ ಗುಜರಾತ್‌ನ ರಾಜಕಾರಣಿಯೊಬ್ಬರ ಹೆಸರು ಪ್ರಸ್ತಾಪವಾಗಿದೆ. ಮೂರೂ ರಾಜ್ಯಗಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್‌ ಜಾಲ ಬಯಲು

ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್‌ ಜಾಲ ಬಯಲು

Honey Trap Case: ತೆಲಂಗಾಣ ಪೊಲೀಸರು ಹನಿ ಟ್ರ್ಯಾಪ್‌ ಜಾಲವನ್ನು ಬಯಲಿಗೆಳೆದಿದ್ದಾರೆ. ಕರೀಂನಗರದಲ್ಲಿ ಕಾರ್ಯಾಚರಿಸುತ್ತಿದ್ದ ಈ ಜಾಲವನ್ನು ಗಂಡ-ಹೆಂಡತಿಯೇ ನಿರ್ವಹಿಸುತ್ತಿದ್ದರು. ಇವರು ಅಮಾಯಕರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರುಪಾಯಿ ವಸೂಲಿ ಮಾಡಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಪತಿಯೇ ತನ್ನ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಅವರ ಏಕಾಂತ ಕ್ಷಣವನ್ನು ಚಿತ್ರೀಕರಿಸುತ್ತಿದ್ದ ಎನ್ನುವುದು ತನಿಖೆ ವೇಳೆ ಗೊತ್ತಾಗಿದೆ.

ಧಮ್ಕಿ ರಾಜೀವ್‌ ಗೌಡಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟವರು ಯಾರು?; ಸಿಕ್ಕಿಬಿದ್ದಿದ್ದು ಹೇಗೆ?

ಧಮ್ಕಿ ರಾಜೀವ್‌ ಗೌಡಗೆ ಆಶ್ರಯ ಕೊಟ್ಟವರು ಯಾರು?; ಸಿಕ್ಕಿಬಿದ್ದಿದ್ದು ಹೇಗೆ?

ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 13 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸಲಾಗಿದೆ.

ಅಯ್ಯೋ ದುರ್ವಿಧಿಯೇ: ಪ್ರಾಂಶುಪಾಲರ ಮನೆಗೆ ಕುರ್ಚಿ ಸಾಗಿಸುತ್ತಿದ್ದ ವೇಳೆ ಆಟೋದಿಂದ ಬಿದ್ದು 8ನೇ ತರಗತಿ ಬಾಲಕಿ ದಾರುಣ ಸಾವು

ಆಟೋದಿಂದ ಬಿದ್ದು 8ನೇ ತರಗತಿ ಬಾಲಕಿ ದಾರುಣ ಸಾವು

girl death: ಗಣರಾಜ್ಯೋತ್ಸವಕ್ಕೆ ಕುರ್ಚಿಗಳನ್ನು ಸಾಗಿಸುತ್ತಿದ್ದ ವೇಳೆ ಆಟೋರಿಕ್ಷಾದಿಂದ ಜಾರಿ ಬಿದ್ದ 8ನೇ ತರಗತಿ ಬಾಲಕಿ ಮೃತಪಟ್ಟಿರುವ ದುರ್ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಶಾಲಾ ಆಡಳಿತ ಮತ್ತು ವಾಹನ ಚಾಲಕನ ನಿರ್ಲಕ್ಷ್ಯದ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಮದುವೆ ಭರವಸೆ ನೀಡಿ ಬಾಲಕಿಯ ಹತ್ಯೆ; ಇನ್‌ಸ್ಟಾಗ್ರಾಮ್ ಸ್ನೇಹಿತನಿಂದಲೇ ಕೊಲೆ

ಮದುವೆ ಭರವಸೆ ನೀಡಿ ಬಾಲಕಿಯ ಹತ್ಯೆ

Crime News: ಮದುವೆ ಭರವಸೆ ನೀಡಿ ಆಮಿಷವೊಡ್ಡಿ ಬಾಲಕಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿರುವುದು ಭಾರಿ ಆಘಾತ ಮೂಡಿಸಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ; ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

ಪೌರಾಯುಕ್ತೆಗೆ ಧಮ್ಕಿ; ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

Congress leader Rajeev Gowda: ಬ್ಯಾನರ್ ತೆರವು ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದ. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ರಾಜೀವ್ ಗೌಡ ತಲೆಮರೆಸಿಕೊಂಡಿದ್ದ.

ಮನೆ ಕೆಲಸದವಳಿಗೆ ಲೈಂಗಿಕ ಕಿರುಕುಳ: 'ಧುರಂಧರ್' ನಟ ನದೀಮ್ ಖಾನ್ ಬಂಧನ

ಮನೆ ಕೆಲಸದವಳಿಗೆ ಲೈಂಗಿಕ ಕಿರಕುಳ: 'ಧುರಂಧರ್' ನಟ ಆರೆಸ್ಟ್!

Nadeem Khan: ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಹೇಳಿ‌ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಮನೆಯ ಕೆಲಸದ ಮಹಿಳೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಪೂರ್ವ ಕಾಂಗೋದಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ದಾಳಿಗೆ 25 ಜನ ಬಲಿ

ಉಗ್ರಗಾಮಿ ಗುಂಪಿನ ದಾಳಿ; 25 ಜನರು ಸಾವು

ಇಸ್ಲಾಮಿಕ್ ಸ್ಟೇಟ್ ಬೆಂಬಲಿತ ಉಗ್ರಗಾಮಿ ಗುಂಪೊಂದು ನಡೆಸಿರುವ ದಾಳಿಯಿಂದ 25 ಮಂದಿ ಸಾವನ್ನಪ್ಪಿರುವ ಘಟನೆ ಪೂರ್ವ ಕಾಂಗೋದಲ್ಲಿ ನಡೆದಿದೆ. ಐಎಸ್ಐಎಲ್ (ಐಎಸ್ಐಎಸ್) ಜೊತೆ ಸಂಪರ್ಕ ಹೊಂದಿರುವ ಎಡಿಎಫ್ ಬಂಡಾಯ ಗುಂಪು ಉಗಾಂಡಾ ಮತ್ತು ಡಿಆರ್ ಕಾಂಗೊ ನಡುವಿನ ಗಡಿ ಪ್ರದೇಶದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಿದೆ.

Loading...