ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Self harming case: ಅಮೆರಿಕ ವೀಸಾ ರಿಜೆಕ್ಟ್‌- ಮನನೊಂದ ವೈದ್ಯೆಯಿಂದ ಆತುರದ ನಿರ್ಧಾರ

ವೀಸಾ ಸಿಗದ ಕಾರಣ ವೈದ್ಯೆ ಆತ್ಮಹತ್ಯೆ!

ಉದ್ಯೋಗಕ್ಕಾಗಿ ಅಮೆರಿಕ ಹೊರಟಿದ್ದ ವೈದ್ಯರೊಬ್ಬರು ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ವೀಸಾಗಾಗಿ ಮನವಿ ಸಲ್ಲಿಸಿದ್ದರು. ಆದರೆ ಆಕೆಯ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Bengaluru Murder Case: ಯುವತಿಯನ್ನು ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಭೀಕರವಾಗಿ ಕೊಲೆಗೈದ ಯುವಕ

ಬೆಂಗಳೂರಿನಲ್ಲಿ ಯುವತಿಯನ್ನು ಭೀಕರವಾಗಿ ಕೊಲೆಗೈದ ಯುವಕ

Bengaluru News: ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ ನಡೆದಿದೆ. ಆಂಧ್ರ ಮೂಲದ ಯುವತಿಯ ಕೊಲೆ ನಡೆದಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮಾಜಿ ಕೈದಿಗಳ ಜೊತೆಗೂಡಿ ವೈದ್ಯನ ಖೋಟಾ ನೋಟ್‌ ದಂಧೆ- ಬೃಹತ್‌ ರಾಕೆಟ್‌ ಬಯಲಿಗೆ!

ಅತಿದೊಡ್ಡ ನಕಲಿ ಕರೆನ್ಸಿ ರಾಕೆಟ್ ಬಯಲಿಗೆ!

Fake Currency Racket: ಮಧ್ಯಪ್ರದೇಶ ಪೊಲೀಸರು ಭಾರಿ ನಕಲಿ ಕರೆನ್ಸಿ ರಾಕೆಟ್‌ ಭೇದಿಸಿ, ಮಾಜಿ ಜೈಲು ಕೈದಿಗಳ ಸಹಕಾರದಿಂದ ವೈದ್ಯನೊಬ್ಬ ನಡೆಸುತ್ತಿದ್ದ ಸಂಚನ್ನು ಬಯಲಿಗೆಳೆದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಈ ಗ್ಯಾಂಗ್ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದಾಗ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Bengaluru Robbery Case: ಬೆಂಗಳೂರು ದರೋಡೆ ಆರೋಪಿ ಕಾನ್ಸ್‌ಟೇಬಲ್ ವಜಾ, ಖಾಕಿ ಮೇಲೂ ಹದ್ದಿನ ಕಣ್ಣು

ಬೆಂಗಳೂರು ದರೋಡೆ ಆರೋಪಿ ಕಾನ್ಸ್‌ಟೇಬಲ್ ವಜಾ, ಖಾಕಿ ಮೇಲೂ ಹದ್ದಿನ ಕಣ್ಣು

ರಾಬರಿ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ನೇ ಶಾಮೀಲು ಆಗಿರುವುದರಿಂದ ಪೊಲೀಸ್ ಇಲಾಖೆ (police department) ಅಲರ್ಟ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ (Bengaluru Police Commissioner) ಸೀಮಂತ್ ಕುಮಾರ್ ಸಿಂಗ್, ಬೆಂಗಳೂರಿನ ಎಲ್ಲಾ ಠಾಣೆಯ ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್‌ಗಳ ಮಾನಿಟರಿಂಗ್‌ಗೆ ಸೂಚನೆ ನೀಡಿದ್ದಾರೆ.

Kalaburagi News: ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Farmer consumes poison: ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ರೈತ ಬೆಳೆದಿದ್ದ ಎಲ್ಲಾ ತೊಗರಿ ಬೆಳೆಯು ಸಂಪೂರ್ಣ ನಾಶವಾಗಿತ್ತು. ಬೆಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದಿಕ್ಕೆಟ್ಟ ರೈತ, ಅಲ್ಪಸ್ವಲ್ಪ ಉಳಿದ ಬೆಳೆಗೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Self Harming: ಮಗನ ಚಿಕಿತ್ಸೆಗೆ ಹಣವಿಲ್ಲದೆ ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ವ್ಯಕ್ತಿ

ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ವ್ಯಕ್ತಿ

Jharkhand News: ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆ ವ್ಯಕ್ತಿ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್;  26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್

ದೆಹಲಿ ಸ್ಪೋಟಕ್ಕೆ ಹಣ ನೀಡಿದ್ದು ವೈದ್ಯರು !

ದೆಹಲಿಯ ಕೆಂಪು ಕೋಟೆಯ ಬಳಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಹಣ ಸಂಗ್ರಹದ ಕುರಿತು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ. ದೆಹಲಿಯ ಸ್ಪೋಟಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳ ಖರಿದಿಗೆ ಐವರು ವೈದ್ಯರು ಹಣ ನೀಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.

Bengaluru Kidnap Case: ಕೋರಮಂಗಲ ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಕೇಸ್‌; ಪೊಲೀಸ್‌ ಪೇದೆ ಸೇರಿ 8 ಮಂದಿ ಅರೆಸ್ಟ್‌

ಕಾಲ್‌ ಸೆಂಟರ್‌ ಉದ್ಯೋಗಿಗಳ ಕಿಡ್ನ್ಯಾಪ್‌ ಪ್ರಕರಣ; 8 ಮಂದಿ ಅರೆಸ್ಟ್‌

ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿ, ಅಪಹರಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಬಂಧಿಸಲಾಗಿದೆ.

Bengaluru Robbery Case: 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ; ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಖದೀಮರು!

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ದರೋಡೆಗೆ ಅಸಲಿ ಕಾರಣ ಬಹಿರಂಗ!

Bengaluru News: ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆದಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಕೇವಲ 60 ಗಂಟೆಗಳಲ್ಲೇ ಭೇದಿಸಿ, ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಹೈದರಾಬಾದ್‌ನ ಲಾಡ್ಜ್‌ನಲ್ಲಿ ಮತ್ತೆ ಮೂವರನ್ನು ಶನಿವಾರ ಅರೆಸ್ಟ್‌ ಮಾಡಲಾಗಿತ್ತು.

Robbery Case: ನಡು ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಕೆಜಿಗಟ್ಟಲೇ ಚಿನ್ನ ದರೋಡೆ; ಗ್ಯಾಂಗ್‌ ಹಿಂದೆಯಾ ಪರಿಚತರ ಕೈವಾಡ?

ನಡು ರಸ್ತೆಯಲ್ಲಿ ಅಡ್ಡ ಹಾಕಿ ಕೆಜಿಗಟ್ಟಲೇ ಚಿನ್ನ ದರೋಡೆ

Chamarajangar News: ಆಭರಣ ತಯಾರಕರೊಬ್ಬರ ಕಾರನ್ನು ಅಡ್ಡಗಟ್ಟಿ ಕೆಜಿಗಟ್ಟಲೆ ಚಿನ್ನ ದೋಚಿದ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ನಡೆದಿದೆ. ನವೆಂಬರ್ 20ರ ರಾತ್ರಿ ಆಭರಣ ತಯಾರಕ ಕೇರಳ ರಾಜ್ಯದ ಕ್ಯಾಲಿಕೇಟ್ ನಿವಾಸಿ ವಿನು ಪೊಲೀಸರಿಗೆ ದೂರು ನೀಡಿದ್ದರು.

Road Accident: ಬೈಕ್‌ಗಳ ನಡುವೆ ಭೀಕರ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಬೈಕ್‌ ಅಪಘಾತ; ಇಬ್ಬರು ಸಾವು

ಬೀದರ್‌ ತಾಲೂಕಿನ ಬೆನಕನಹಳ್ಳಿಯಲ್ಲಿ ಶನಿವಾರ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, (Rd Accident) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇವಳೆಂಥಾ ತಾಯಿ? 7 ದಿನಗಳ ಮಗುವನ್ನು 6 ಲಕ್ಷ ರೂ.ಗೆ ಸೇಲ್‌ ಮಾಡಿದ ಮಹಿಳೆ

7 ದಿನಗಳ ಮಗುವನ್ನು 6 ಲಕ್ಷ ರೂ.ಗೆ ಸೇಲ್‌ ಮಾಡಿದ ಮಹಿಳೆ

ಮಕ್ಕಳ ಮಾರಾಟ ಜಾಲ ತೆಲಂಗಾಣದ ಕರಿಂನಗರದಲ್ಲಿ ಸಕ್ರಿಯವಾಗಿದೆ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ಈ ಮಹಿಳೆ ಮಧ್ಯವರ್ತಿಯ ಸಹಾಯದಿಂದ ತನ್ನ ಮಗುವನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕರಿಂನಗರ ಟೌನ್‌ 2 ಪೊಲೀಸರು ಮಾಹಿತಿ ನೀಡಿದ್ದಾರೆ.

Kalaburagi News: ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ; 9 ವರ್ಷದ ಬಳಿಕ ವಿಡಿಯೋದಿಂದ ಬಯಲಾಯ್ತು ಹತ್ಯೆ ರಹಸ್ಯ!

ಅನೈತಿಕ ಸಂಬಂಧಕ್ಕೆ ಅಡ್ಡಿ; ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ ಪತ್ನಿ!

Kalaburagi Murder Case: ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಬೀರಪ್ಪಾ ಪೂಜಾರಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನು ಪತ್ನಿಯೇ ಸುಪಾರಿ ಕೊಟ್ಟು ಮುಗಿಸಿದ್ದಾಳೆ.

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕರಿಂದ ಅವಮಾನ ಸಿಸಿಟಿವಿಯಲ್ಲಿ ದಾಖಲು

ವಿದ್ಯಾರ್ಥಿ ಆತ್ಮಹತ್ಯೆಗೆ ಶಿಕ್ಷಕರಿಂದ ಪ್ರಚೋದನೆ

ಕೇಂದ್ರ ದೆಹಲಿಯ ಸೇಂಟ್ ಕೊಲಂಬಾ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿರುವ ಪೊಲೀಸರು ವಿದ್ಯಾರ್ಥಿಗೆ ಶಿಕ್ಷಕರು ಅವಮಾನ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಶೀಘ್ರದಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಕ್ಷಕರಿಂದ ಮಾನಸಿಕ ಕಿರುಕುಳ ಆರೋಪ; ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Mumbai News: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ಹಣ ವಶ

ಬೆಂಗಳೂರು ದರೋಡೆ ಎಸಗಿದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ವಶ

Bengaluru Robbery Case: ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

Self Harming: ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Dharawada news: ಸಾಲದ ಬಾಧೆಯಿಂದ ನೊಂದಿದ್ದ ನಾರಾಯಣ ಶಿಂಧೆ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಕೆಲಸಕ್ಕೆ ತೆರಳಿದ ತಾಯಿ ಬದುಕಿಕೊಂಡಿದ್ದಾಳೆ. ಶಾಲೆಗೆ ಹೊರಟು ಸಮವಸ್ತ್ರದಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆಯೇ ಮೊದಲು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಹಾರಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Davanagere Crime News: ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಬಂಧನ

ಕೊಲೆ ಯತ್ನ ಆರೋಪಿಯ ಅಡಗಿಸಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಸೆರೆ

Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ‌ ಖಾಲೀದ್ ಫೈಲ್ವಾನ್‌ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.

Bengaluru Crime News: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ‌ ಯುವಕರ ಗಲಾಟೆ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.

Viral Video: ಹಾಡ ಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ; ಆರೋಪಿ ಸೆರೆ

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ: ಆರೋಪಿಯ ಬಂಧನ

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಾಡು ಹಗಲೇ ಗುಂಡಿನ ದಾಳಿ ನಡೆದ ಘಟನೆ ಮಹಾರಾಷ್ಟ್ರದ ಕಂಡಿವಲಿಯ ಚಾರ್ಕೋಪ್‌ನಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ಫುಟೇಜ್ ವೈರಲ್ ಆಗಿದೆ. ಬೈಕ್‌ನಲ್ಲಿ ಬಂದ ಮೂವರು ಶೂಟರ್‌ಗಳ ಬಗ್ಗೆ ತನಿಖೆ ನಡೆಸಲಾಗಿದ್ದು ದಾಳಿಯ ಮಾಸ್ಟರ್ ಮೈಂಡ್ ಮುನ್ನಾ ಮಯುದ್ದೀನ್ ಶೇಖ್‌ನನ್ನು ಚಾರ್ಕೋಪ್ ಪೊಲೀಸರು ಬಂಧಿಸಿದ್ದಾರೆ.

ಕೈ ಹಿಡಿದವಳು ಜೊತೆಗಿದ್ದರೂ ಮತ್ತೊಬ್ಬಳ ಜೊತೆ ಲವ್ವಿ-ಡವ್ವಿ... ಪತ್ನಿ- ಮಕ್ಕಳನ್ನೇ ಕೊಂದ ಅರಣ್ಯಾಧಿಕಾರಿ

ಲವ್ವರ್‌ಗಾಗಿ ಪತ್ನಿ- ಮಕ್ಕಳನ್ನೇ ಕೊಂದ ಅರಣ್ಯಾಧಿಕಾರಿ

ಗುಜರಾತ್‌ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೈಲೇಶ್ ಕಂಬಾಲಾ ಎನ್ನುವವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತನ್ನ ಮನೆಯ ಬಳಿಯೇ ಹೂತಿಟ್ಟ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೊಲೆ ಕಾರಣವನ್ನು ಪತ್ತೆ ಹಚ್ಚಿದ್ದ ಪೊಲೀಸರಿಗೆ ದೊಡ್ಡ ಶಾಖ್ ಎದುರಾಗಿದೆ. ಅಧಿ ಕಾರಿಯು ಅರಣ್ಯ ಇಲಾಖೆಯಲ್ಲಿರುವ ಮಹಿಳಾ ಸಿಬ್ಬಂದಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಆ ಮಹಿಳೆಗೋಸ್ಕರವೇ ಕೊಲೆ ಮಾಡಿದ್ದು ತನಿಖೆ ವೇಳೆ ತಿಳಿದುಬಂದಿದೆ.

Manikanta Rathod: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್‌ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.

Udupi news: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ

ಪಾಕಿಸ್ತಾನಕ್ಕೆ ಭಾರತ ನೌಕಾಪಡೆ ರಹಸ್ಯ ಗೂಢಚರ್ಯೆ, ಉಡುಪಿಯಲ್ಲಿ ಇಬ್ಬರ ಸೆರೆ

Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.

Bengaluru Robbery Case: ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Loading...