ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಗುರುಗ್ರಾಮ್ ಹಿಟ್‌ ಆ್ಯಂಡ್‌ ರನ್‌ ಪ್ರಕರಣ: ಬೈಕ್‌ಗೆ ಡಿಕ್ಕಿ ಹೊಡೆದ ಕಲ್ಯಾಣ್ ಬೈನ್ಸ್ಲಾ ಫಸ್ಟ್‌ ರಿಯಾಕ್ಷನ್‌ ಇದು

ಗುರುಗ್ರಾಮ್ ಹಿಟ್‌ ಆ್ಯಂಡ್‌ ರನ್‌ ಪ್ರಕರಣ: ಆರೋಪಿ ಕಲ್ಯಾಣ್ ಸ್ಪಷ್ಟನೆ

Kalyan Bainsla: ಹರಿಯಾಣದ ಗುರುಗ್ರಾಮ್‌ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕರ್‌ಗೆ ಕಾರಿನಿಂದ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಆರೋಪಿ ಕಲ್ಯಾಣ್ ಬೈನ್ಸ್ಲಾ ತಾನು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದು ಹೇಳಿದ್ದಾರೆ. ಬೈಕ್‌ನಲ್ಲಿ ಮಹಿಳೆ ಇದ್ದಾಳೆ ಎಂಬುದೂ ತನಗೆ ತಿಳಿದಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

3 ತಿಂಗಳ ಗರ್ಭಿಣಿ ಅಪ್ರಾಪ್ತೆಯನ್ನು ಕೊಂದು ತಲೆಯನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಎಸೆದ ಪತಿ; ತನಿಖೆ ವೇಳೆ ಬಯಲಾಯ್ತು ಬೆಚ್ಚಿ ಬೀಳಿಸುವ ಅಂಶ

3 ತಿಂಗಳ ಗರ್ಭಿಣಿ ಅಪ್ರಾಪ್ತೆಯನ್ನು ಕೊಂದ ಪತಿ, ಮಾವ

Jharkhand Horror: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್‌ ಕವರ್‌ನಲ್ಲಿ ಬಾಲಕಿಯ ತಲೆ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. 3 ತಿಂಗಳ ಗರ್ಭಿಣಿಯಾಗಿದ್ದ ಈಕೆಯನ್ನು ಪತಿ ಮತ್ತು ಆಕೆಯ ಮಾವನೇ ಕೊಲೆ ಮಾಡೊದ್ದು ಗೊತ್ತಾಗಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹೊಸಪೇಟೆಯಲ್ಲಿ ಗಣೇಶ ಮೂರ್ತಿ ಸಾಗಿಸುವ ವೇಳೆ ಅವಘಡ; ವಿದ್ಯುತ್​ ಸ್ಪರ್ಶಿಸಿ ಇಬ್ಬರಿಗೆ ಗಂಭೀರ ಗಾಯ!

ಗಣೇಶ ಮೂರ್ತಿ ಸಾಗಿಸುವ ವೇಳೆ ವಿದ್ಯುತ್​ ಸ್ಪರ್ಶಿಸಿ ಇಬ್ಬರಿಗೆ ಗಾಯ!

Ganesh Chaturthi 2026: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಅನಂತಶಯನಗುಡಿಯ ಹೊರವಲಯದಲ್ಲಿ ಘಟನೆ ನಡೆದಿದೆ. ಗಣಪತಿ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ ಸಿಬಿಐ: ಆದಿತ್ಯ ಠಾಕ್ರೆ, ಡಿನೋ ಮೋರಿಯಾ ವಿರುದ್ಧ ಕೇಸ್

ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ ಸಿಬಿಐ

Disha Salian Death Case: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್‌ರ ಅವರ ಮ್ಯಾನೇಜರ್‌ ಆಗಿದ್ದ ದಿಶಾ ಸಾಲಿಯನ್ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಗ ಆದಿತ್ಯ ಠಾಕ್ರೆ ಮತ್ತು ಇತರರು ಈ ಅಪರಾಧದ ಸಂಚು ರೂಪಿಸುವಲ್ಲಿ ಹಾಗೂ ಅದನ್ನು ಮುಚ್ಚಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದಿಶಾ ಅವರ ತಂದೆ, ದೂರುದಾರ ಸತೀಶ್ ಸಾಲಿಯನ್ ಆರೋಪಿಸಿದ್ದಾರೆ.

ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಹಿಟ್-ಆ್ಯಂಡ್‌-ರನ್ ಆರೋಪಿ ಕಲ್ಯಾಣ್ ಬೈನ್ಸ್ಲಾ ಯಾರು? ಏನಿವನ ಹಿನ್ನೆಲೆ?

ಹಿಟ್-ಆ್ಯಂಡ್‌-ರನ್ ಆರೋಪಿ ಕಲ್ಯಾಣ್ ಬೈನ್ಸ್ಲಾ ಯಾರು?

Kalyan Bainsla: ಭಾನುವಾರ ರಾತ್ರಿ ಕಾರಿನಲ್ಲಿದ್ದವರು ತನಗೆ ಕಿರುಕುಳ ನೀಡುತ್ತಿರುವ ವಿಡಿಯೊವನ್ನು ಮಹಿಳಾ ಬೈಕರ್ ಸಿಯಾ ಹಂಚಿಕೊಂಡಿದ್ದಾರೆ. ತನ್ನ ಪಾಡಿಗೆ ತಾನು ಹೋಗುತ್ತಿದ್ದರೆ, ಇದ್ದಕ್ಕಿದ್ದಂತೆ ಕಾರು ಬಲಕ್ಕೆ ತಿರುಗಿ, ಆಕೆಗೆ ಡಿಕ್ಕಿ ಹೊಡೆದು, ವೇಗವಾಗಿ ಹೊರಟು ಹೋಗಿದೆ. ಡಿಕ್ಕಿಯ ರಭಸಕ್ಕೆ ಸಿಯಾ ರಸ್ತೆಗೆ ಬಿದ್ದಿದ್ದಾರೆ. ಈ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಕಾರ್‌ಗೆ ಯಾರಿಗೆ ಸೇರಿದ್ದು ಎನ್ನುವ ವಿವರ ಹೊರ ಬಿದ್ದಿದೆ.

ಮಾಡೆಲ್‌ ಮೇಲೆ ಅತ್ಯಾಚಾರ, ದಲಿತ ಯುವಕರ ಮೇಲೆ ಹಲ್ಲೆ; ಟಿ.ನರಸೀಪುರ ಇನ್ಸ್‌ಪೆಕ್ಟರ್ ಹಳೇ ಪ್ರಕರಣಗಳು ಬೆಳಕಿಗೆ!

ಟಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ಹಳೇ ಪ್ರಕರಣಗಳು ಬೆಳಕಿಗೆ!

T Narasipura Inspector Dhananjay: ಗಣೇಶೋತ್ಸವ ಸಮಿತಿಯ ಯುವಕರಿಗೆ ಧಮ್ಕಿ ಹಾಕಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿರುವ ಟಿ ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರ ಹಳೆಯ ದರ್ಪದ ನಡವಳಿಕೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಭಾರೀ ಸದ್ದು ಮಾಡುತ್ತಿವೆ.

Chikkamagaluru Accident: ಚಿಕ್ಕಮಗಳೂರಿನ ಬಳಿ ಭೀಕರ ಅಪಘಾತ; ಸಾರಿಗೆ ಬಸ್‌ ಹರಿದು ಇಬ್ಬರು ಬೈಕ್‌ ಸವಾರರ ದುರ್ಮರಣ

ಚಿಕ್ಕಮಗಳೂರಿನಲ್ಲಿ ಸಾರಿಗೆ ಬಸ್‌ ಹರಿದು ಇಬ್ಬರು ಬೈಕ್‌ ಸವಾರರ ಸಾವು

ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಇಬ್ಬರು ಸವಾರರು ರಸ್ತೆಯ ಮೇಲೆಯೇ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾಗಿದ್ದ ವಾಯುಪಡೆ ಮಾಜಿ ಯೋಧನ ಮೇಲೆ ಹಲ್ಲೆ; ಗಂಭೀರ ಗಾಯ

ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾಗಿದ್ದ ವಾಯುಪಡೆ ಮಾಜಿ ಯೋಧನ ಮೇಲೆ ಹಲ್ಲೆ

Viral News: ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿದ ಭಾರತೀಯ ವಾಯುಪಡೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಅಮಿತ್ ಕುಮಾರ್ ಗುಪ್ತಾ ಅವರ ಮೇಲೆ ಹರಿಯಾಣದ ಗುರುಗ್ರಾಮದಲ್ಲಿ ಪಾರ್ಕಿಂಗ್ ಸಿಬ್ಬಂದಿಯೊಬ್ಬ ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ.

ಅತ್ಯಾಚಾರ ಪ್ರಕರಣ: ತೆಹಲ್ಕಾ ಪತ್ರಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ನ್ಯಾಯಾಲಯಕ್ಕೆ ಶರಣು

ಮಾಜಿ ಪತ್ರಕರ್ತ ತರುಣ್ ತೇಜಪಾಲ್ ಕೋರ್ಟ್ ಮುಂದೆ ಶರಣು

Tarun Tejpal Surrenders: ತೆಹಲ್ಕಾ ಪತ್ರಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಮಾಪುಸಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸದ್ಯ ನ್ಯಾಯಾಲಯಕ್ಕೆ ಶರಣಾಗಿರುವ ಅವರನ್ನು ಉತ್ತರ ಗೋವಾದ ಕೋಲ್ವಾಲೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ  ಸಾವು; ಪರಾರಿಯಾಗಲು ಹೋಗಿ ಚಲಿಸುತ್ತಿದ್ದ ಪೊಲೀಸ್‌ ಜೀಪ್‌ನಿಂದ ಬಿದ್ದ ಕಿರಾತಕ

ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಸಾವು

ಕಳೆದ ಒಂದು ವಾರದ ಹಿಂದೆ ಗುಹಾವಟಿಯಲ್ಲಿ ಪತ್ನಿ ರಿಯಾ ತಾಲೂಕ್‌ದಾರ್‌ ಭೀಕರವಾಗಿ ಕೊಲೆ ಮಾಡಿ ಆಕೆಯ ತೆಲೆಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಪತಿ ರಾಮಾನುಜ್‌ ಗೋಸ್ವಾಮಿ ಪೊಲೀಸ್‌ ವಶದಲ್ಲಿದ್ದಾಗಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಾಲಕನ ಕಣ್ಣೆದುರೇ ಹಸುವಿನ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Viral News: ಕಾಮುಕನೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ವರದಿಯಾಗಿದೆ. ಎರಡು ವರ್ಷದ ಹಸುವಿನ ಮೇಲೆ ಈ ಪಾಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನನ್ನು ಕನುಭಾಯಿ ಗೊಂಡಾಲಿಯಾ ಎಂದು ಗುರುತಿಸಲಾಗಿದ್ದು, ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

Pavagada Naxalites: ಪಾವಗಡದಲ್ಲಿ ನಕ್ಸಲ್ ಭೀತಿ; ಶಂಕಿತ ನಕ್ಸಲ್ ವೆಂಕಟೇಶ್‌ಗಾಗಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆ

ಪಾವಗಡದಲ್ಲಿ ಶಂಕಿತ ನಕ್ಸಲ್ ವೆಂಕಟೇಶ್‌ಗಾಗಿ ಕೂಂಬಿಂಗ್ ಕಾರ್ಯಾಚರಣೆ

ಪಾವಗಡದಲ್ಲಿ ತಾಲೂಕಿನಲ್ಲಿ ಶಂಕಿತ ವೆಂಕಟೇಶ್‌ನ ಜಾಡು ಪತ್ತೆಹಚ್ಚಲು ಪೊಲೀಸರು ಅತ್ಯಾಧುನಿಕ ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇಟ್ಟಿದ್ದಾರೆ. ಗ್ರಾಮಗಳು, ಗುಡ್ಡಗಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶಂಕಿತನ ಬಂಧನಕ್ಕಾಗಿ ಪೊಲೀಸ್ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ.

ಫೆರಿಸ್ ವ್ಹೀಲ್‌ಗೆ ಸಿಲುಕಿದ ಕೂದಲು; ಕಿತ್ತು ಬಂದ ಮಹಿಳೆಯ ತಲೆ ಚರ್ಮ; ಮಹಾರಾಷ್ಟ್ರದಲ್ಲೊಂದು ಭೀಕರ ದುರಂತ

ಫೆರಿಸ್ ವೀಲ್ ಗೆ ಕೂದಲು ಸಿಲುಕಿ ಮಹಿಳೆಗೆ ಗಂಭೀರ ಗಾಯ

ferris wheel accident: ಜಾತ್ರೆಯಲ್ಲಿ ಫೆರಿಸ್ ವೀಲ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ 'ತನ್ಹಾ ಪೋಲಾ' ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹಿಳೆಯ ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸಿದರು.

ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್‌; ಟಾರ್ಚ್ ಬೆಳಕಿನಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ

ಬಿಹಾರ ಆಸ್ಪತ್ರೆಯಲ್ಲಿ ಟಾರ್ಚ್ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ

ಬಿಹಾರ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿಆಸ್ಪತ್ರೆ ಸಿಬ್ಬಂದಿ ಮೊಬೈಲ್ ಟಾರ್ಚ್ ಹಿಡಿದು ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಗರ್ಭಿಣಿಯರಿಗೆ ಟಾರ್ಚ್ ಮತ್ತು ಮೊಬೈಲ್ ಫೋನ್ ಫ್ಲ್ಯಾಶ್‌ಲೈಟ್ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

5G ನೆಟ್‌ವರ್ಕ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಆಕ್ರೋಶಕ್ಕೆ ತುತ್ತಾದ ಟೆಲಿಕಾಂ ಟೆಕ್ನಿಷಿಯನ್‌; ಮೊಬೈಲ್ ಟವರ್‌ಗೆ ಕಟ್ಟಿ ಹಾಕಿದ ಸಾರ್ವಜನಿಕರು

ಟೆಲಿಕಾಂ ಟೆಕ್ನಿಷಿಯನ್‌ನ್ನು ಟವರ್‌ಗೆ ಕಟ್ಟಿ ಹಾಕಿದ ಗ್ರಾಮಸ್ಥರು

Viral Video: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳಿಂದ 5G ನೆಟ್‌ವರ್ಕ್ ತೊಂದರೆ ಎದುರಿಸುತ್ತಿರುವುದಾಗಿ ಆರೋಪಿಸಿದ ಸಾರ್ವಜನಿಕರು, ಸಮಸ್ಯೆ ಪರಿಶೀಲಿಸಲು ಬಂದಿದ್ದ ಟೆಲಿಕಾಂ ಟೆಕ್ನಿಷಿಯನ್‌ನ್ನು ಮೊಬೈಲ್ ಟವರ್‌ಗೆ ಕಟ್ಟಿ ಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಸಾಕ್ಷ್ಯ ನಾಶಕ್ಕೆ ಖಾಸಗಿ ಅಂಗಕ್ಕೆ ಟಾಯ್ಲೆಟ್‌ ಕ್ಲೀನರ್‌ ಎರಚಿದ ಪಾಪಿ; ಹೃದಯಾಘಾತದಿಂದ ಪ್ರಾಣಬಿಟ್ಟ ಕಂದಮ್ಮ

6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಗಲ್ಲು ಶಿಕ್ಷೆ

Chhattisgarh Horror: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಸಾಕ್ಷ್ಯ ನಾಶಕ್ಕೆ ಆಕೆಯ ಖಾಸಗಿ ಅಂಗಕ್ಕೆ ಟಾಯ್ಲೆಟ್‌ ಕ್ಲೀನರ್‌ ಎರಚಿದ ಪಾಪಿಗೆ ಛತ್ತೀಗಢದ ದುರ್ಗ ಜಿಲ್ಲೆಯ ಫಾಸ್ಟ್‌ ಟ್ರ್ಯಾಕ್‌ ವಿಶೇಷ ನ್ಯಾಯಾಲಯ ಗಲ್ಲು ಸಿಕ್ಷೆ ವಿಧಿಸಿದೆ. ಘಟನೆ ನಡೆದು 17 ತಿಂಗಳಲ್ಲೇ ಮಹತ್ವದ ತೀರ್ಪು ಹೊರ ಬಿದ್ದಿದೆ.

ಪುರಸಭೆ ಚುನಾವಣೆಯ ಮತದಾನದ ಬಳಿಕ ಬಿಜೆಪಿ ಅಭ್ಯರ್ಥಿ, ಪತಿ, ಮಗುವಿನೊಂದಿಗೆ ನಾಪತ್ತೆ; ಅಪಹರಣದ ಶಂಕೆ

ಕುಟುಂಬದೊಂದಿಗೆ ಬಿಜೆಪಿ ಅಭ್ಯರ್ಥಿ ನಾಪತ್ತೆ

ಪುರಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಮೇಲೆ ಬಿಜೆಪಿ ಅಭ್ಯರ್ಥಿಯು ತಮ್ಮ ಕುಟುಂಬದೊಂದಿಗೆ ನಾಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಬಾರನ್‌ನ ವಾರ್ಡ್ 16ರ ಬಿಜೆಪಿ ಅಭ್ಯರ್ಥಿ ಅಂತಿಮಾ ಯಾದವ್ ಮತ್ತು ಅವರ ಕುಟುಂಬವನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಕೈದಿ ಪ್ರಜ್ವಲ್ ರೇವಣ್ಣಗೆ ಫೋನ್, ಸಿಮ್ ಕಾರ್ಡ್ ಪೂರೈಕೆ: ಜೈಲು ಸಿಬ್ಬಂದಿ ಸೇರಿ 7 ಮಂದಿ ಬಂಧನ

ಪರಪ್ಪನ ಅಗ್ರಹಾರದಲ್ಲಿ ಜೈಲು ಸಿಬ್ಬಂದಿ ಸೇರಿ 7 ಮಂದಿ ಬಂಧನ

Phone and SIM card supplied in jail: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಫೋನ್, ಸಿಮ್ ಕಾರ್ಡ್ ಸರಬರಾಜು ಆರೋಪದ ಮೇರೆಗೆ ಜೈಲು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣನನ್ನು ಇರಿಸಲಾಗಿದ್ದ ಬ್ಯಾರಕ್‌ನಿಂದ ಫೋನ್ ವಶಪಡಿಸಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.

ಉಗ್ರಗಾಮಿ ಚಟುವಟಿಕೆಗೆ ನೆರವು: ಭಯೋತ್ಪಾದಕ  ಹಫೀಜ್ ಸಯೀದ್ ಗೆ ಜಾಮೀನು ರಹಿತ ವಾರಂಟ್ ಜಾರಿ

ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ನೆರವು ನೀಡುವ ಆರೋಪದಲ್ಲಿ ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಸಯೀದ್ ಉಗ್ರರಿಗೆ ಆರ್ಥಿಕ ನೆರವು, ಶಸ್ತ್ರಾಸ್ತ್ರಗಳನ್ನು ಒದಗಿಸಲು ನೆರವಾಗುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

Jaipur Horror: ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಕೊಂದ ಪಾಪಿ; ಏನೂ ಆಗೇ ಇಲ್ಲವೆನ್ನುವಂತೆ ಚಹಾ ಮಾಡಿ ಕುಡಿದು ಎಸ್ಕೇಪ್‌

ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಕೊಂದ ಪಾಪಿ

Jaipur Shocker: ಜೈಪುರದಲ್ಲಿ ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭೀಕರ ಸಾಮೂಹಿಕ ಕೊಲೆ ನಡೆದಿದೆ. ವ್ಯಕ್ತಿಯೊಬ್ಬ ನಿದ್ರಿಸುತ್ತಿದ್ದ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೃತ್ಯದ ಬಳಿಕ ಹಾಲಿನವನಿಂದ ಹಾಲು ಪಡೆದು ವೃದ್ಧ ತಂದೆಗೆ ಚಹಾ ಮಾಡಿಕೊಟ್ಟು ಪರಾರಿಯಾಗಿರುವ ಆರೋಪಿ ರಾಹುಲ್ ಝಾ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿಗೆ ಖಾರದ ಪುಡಿ ಎರಚಿ 4 ಲಕ್ಷ ರೂಪಾಯಿ ದೋಚಿದ ಕಳ್ಳ: ಕೆಲವೇ ನಿಮಿಷದಲ್ಲಿ ಖದೀಮನ ಹೆಡೆಮುಡಿ ಕಟ್ಟದ ಪೊಲೀಸರು

ಬ್ಯಾಂಕ್ ಸಿಬ್ಬಂದಿ ಮೇಲೆ ಮೆಣಸಿನ ಪುಡಿ ಎರಚಿ 4 ಲಕ್ಷ ರೂ. ದೋಚಿದ

Viral News: ಬ್ಯಾಂಕ್‌ ಉದ್ಯೋಗಿಗಳ ಕಣ್ಣಿಗೆ ಖಾರದ ಪುಡಿ ಎರಚಿ, 4 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆಯೊಂದು ನಡೆದಿದೆ. ಆದಾಗ್ಯೂ, ಪೊಲೀಸರು 30 ನಿಮಿಷಗಳಲ್ಲಿ ಆತನನ್ನು ಪತ್ತೆಹಚ್ಚಿ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈ ಸಿನಿಮೀಯ ಘಟನೆ ನಡೆದಿದೆ.

10ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ನೊಂದ ಬಾಲಕಿ ಆತ್ಮಹತ್ಯೆಗೆ ಶರಣು

ಶಿಕ್ಷಕನಿಂದ ಲೈಂಗಿಕ ಕಿರುಕುಳ: ಬಾಲಕಿ ಆತ್ಮಹತ್ಯೆಗೆ ಶರಣು

Self-harming: ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಲಂನಲ್ಲಿ ವಾಸಿಸುತ್ತಿದ್ದ ಮುಂಬೈಯ ಟೈಲರ್‌ ಮಗ ವಿದೇಶದಲ್ಲಿ ಪೈಲಟ್‌ ತರಬೇತಿ ಪಡೆದಿದ್ದೇಕೆ? ಈತನಿಗೂ 9/11 ನ್ಯೂಯಾರ್ಕ್ ದಾಳಿಗೂ ಸಂಬಂಧವೇನು? ತನಿಖೆ ವೇಳೆ ಹೊರ ಬಂದ ರಹಸ್ಯವಿದು

ಕರಾಳ 9/11 ನ್ಯೂಯಾರ್ಕ್ ದಾಳಿ ಬಳಿಕ ಭಾರತದಲ್ಲಿ ತನಿಖೆ ನಡೆಸಿದ್ದೇಕೆ?

9/11 New York Attacks: 2001ರ ಸೆಪ್ಟೆಂಬರ್ 11ರಂದು ವಿಶ್ವವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿಯ ಹಲವು ವರ್ಷಗಳ ಬಳಿಕವೂ ಅದರ ಹಿಂದಿನ ಸಂಚುಗಳು ಹಾಗೂ ಆರೋಪಿಗಳ ಕುರಿತ ಮಾಹಿತಿಗಳು ಕುತೂಹಲ ಮೂಡಿಸುತ್ತಲೇ ಇವೆ. ಈ ಬಗ್ಗೆ ಭಾರತದಲ್ಲೂ ತನಿಖೆ ನಡೆದಿತ್ತು. ಅದೇಕೆ ಎನ್ನುವ ವಿವರ ಇಲ್ಲಿದೆ.

Lokayukta Raid: ಎರಡೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ; ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

Tumkur News: ಅರಣ್ಯ ಇಲಾಖೆಯಿಂದ ಮಂಜೂರಾದ ಕಾಮಗಾರಿ ಕೆಲಸ ಮಾಡಲು ಕಾಂಟ್ರಾಕ್ಟರ್‌ ಒಬ್ಬರಿಂದ 2,60,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ಹಣ ಪಡೆಯುತ್ತಿದ್ದ ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಕೆ.ಎಸ್., ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Loading...