ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

Moral policing: ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ, ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಮುಸ್ಲಿಂ ಬಾಲಕು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌; ಪೋಕ್ಸೊ ಪ್ರಕರಣದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌; ತನಿಖೆಗೆ ಹೈಕೋರ್ಟ್‌ ತಡೆ

Mallikarjun Mutya Case: ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದಲ್ಲಿ ಕಳೆದ ಫೆಬ್ರವರಿ 25 ರಂದು ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಮದುವೆಯಾದ 15ನೇ ದಿನಕ್ಕೆ ನವವಧು ಎಸ್ಕೇಪ್; ಬ್ರೋಕರ್‌ಗಳ ಮಾತು ನಂಬಿ ಕೆಟ್ಟ ಯುವಕ!

ಮದುವೆಯಾದ 15ನೇ ದಿನಕ್ಕೆ ನವವಧು ಎಸ್ಕೇಪ್!

marriage fraud: ಆಂಧ್ರ ಪ್ರದೇಶ ಮೂಲದ ಭಾಸ್ಕರ್ ಎಂಬಾತ​ ಬ್ರೋಕರ್​ಗಳ ಮೂಲಕ ಹುಡುಗಿಯನ್ನು ಹುಡುಕಿದ್ದ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾರ್ಗಾನುಕುಂಟೆ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಎರಡೇ ವಾರಕ್ಕೆ ಯುವತಿ ಪರಾರಿಯಾಗಿದ್ದಾಳೆ.

ಲಂಚ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಗ್ರಾಮಲೆಕ್ಕಿಗನಿಗೆ ಬಡ್ತಿ; ಕ್ರಮಕ್ಕೆ ಆಗ್ರಹ Video

ಲಂಚ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಗ್ರಾಮಲೆಕ್ಕಿಗನಿಗೆ ಬಡ್ತಿ!

ದೀರ್ಘ ಕಾಲದಿಂದ ವಿಚಾರಣೆ ನಡೆಯದೆ ಆರೋಪಿಗೆ ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ಪ್ರಮೋಷನ್ ಭಾಗ್ಯ ಸಹ ದೊರೆತಿದೆ. ಆರೋಪಿ ಕಾನೂನು ಹಿಡಿತದಿಂದ ನುಣುಚಿಕೊಳ್ಳಲು ವಕೀಲರು ಮತ್ತು ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದಾರೆ. ತಕ್ಷಣ ಅರುಣ್ ಕುಮಾರ್ ಅವರನ್ನು ಮಾಲೂರು ಕಸಬಾ ರೆವಿನ್ಯೂ ಇನ್ಸಪೆಕ್ಟರ್ ಹುದ್ದೆಯೆಂದ ಬದಲಾಯಿಸಿ ಬೇರೆಡೆಗೆ ಹಾಕಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಹಲ್ಲು ಕಿತ್ತ ನಂತರ ಮಹಿಳೆ ಸಾವು: ಚಿಕಿತ್ಸೆ ನೀಡಿದ ವೈದ್ಯ ಪರಾರಿ

ಹಲ್ಲು ಕಿತ್ತ ನಂತರ ಮಹಿಳೆ ಸಾವು: ದಂತ ವೈದ್ಯ ಪರಾರಿ

Death after dental procedure: ದಂತ ಚಿಕಿತ್ಸಾಲಯವೊಂದರಲ್ಲಿ ಹಲ್ಲು ಕಿತ್ತ ನಂತರ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹಲ್ಲು ಹೊರತೆಗೆದ ನಂತರ ಅವರ ಆರೋಗ್ಯ ಹದಗೆಟ್ಟಿದೆ. ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ವೈದ್ಯರಿಗೆ ಅವರ ಪ್ರಾಣ ಕಾಪಾಡಲು ಸಾಧ್ಯವಾಗಲಿಲ್ಲ.

Prajwal revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ; ಮಾಜಿ ಸಂಸದನಿಗೆ ಆಪ್ತರಿಂದಲೇ ಖೆಡ್ಡಾ!

ಪ್ರಜ್ವಲ್‌ ರೇವಣ್ಣ ವಿಡಿಯೊ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿತ್ತು. ಅಶ್ಲೀಲ ವಿಡಿಯೊಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ.

Murder Case: ತಮ್ಮನಿಗೆ ನಿಶ್ಚಯವಾದ ಹುಡುಗಿ ಮೇಲೆ ದುರಾಸೆ, ಕಲ್ಲೆತ್ತಿ ಹಾಕಿ ಕೊಂದ ಅಣ್ಣ!

ತಮ್ಮನಿಗೆ ನಿಶ್ಚಯವಾದ ಹುಡುಗಿ ಮೇಲೆ ದುರಾಸೆ, ಕಲ್ಲೆತ್ತಿ ಹಾಕಿ ಕೊಂದ ಅಣ್ಣ!

ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯನ್ನು ತಾನೇ ಮದುವೆಯಾಗಬೇಕು ಎಂದು ಅಶೋಕ್ ಬಯಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರದಿಂದ ಸಹೋದರರ ನಡುವೆ ಮನಸ್ತಾಪ ಉಂಟಾಗಿದ್ದು, ಕೋಪದ ಹೊತ್ತಿನಲ್ಲಿ ಅಶೋಕ್ ತನ್ನ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

Reels craze: ರೀಲ್ಸ್‌ಗಾಗಿ ಜೀವಂತ ತಂದೆಯನ್ನೇ ಚೀಲಕ್ಕೆ ತುಂಬಿ ಪಾರ್ಸೆಲ್‌ ಮಾಡಹೊರಟ ಫ್ಯಾಮಿಲಿ!

ರೀಲ್ಸ್‌ಗಾಗಿ ತಂದೆಯನ್ನೇ ಚೀಲಕ್ಕೆ ತುಂಬಿ ಪಾರ್ಸೆಲ್‌ ಮಾಡಹೊರಟ ಫ್ಯಾಮಿಲಿ!

ಯುವಕರ ಹುಚ್ಚಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ವೈಯಾಲಿಕಾವಲ್‌ ಠಾಣೆ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಯುವಕರ ತಂಡವನ್ನು ಪತ್ತೆ ಹಚ್ಚಿದಾಗ ಫ್ರ್ಯಾಂಕ್‌ ವಿಡಿಯೋ ಕಥೆ ಬಯಲಾಗಿದೆ. ಜತೆಗೆ ಇವರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ.

Inspector Suspend: ಪತಿಯನ್ನು ಬಂಧಿಸಿ ಪತ್ನಿಯನ್ನು ಮಂಚಕ್ಕೆ ಕರೆದ ಕೇಸ್:‌ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ಪತಿಯ ಬಂಧಿಸಿ ಪತ್ನಿಯ ಮಂಚಕ್ಕೆ ಕರೆದ ಕೇಸ್:‌ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ವಿವಾದದ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಈಗ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ನಿನ್ನೆ ಮಧ್ಯಾಹ್ನದವರೆಗೂ ಪಣಂಬೂರು ಠಾಣೆಯಲ್ಲಿ ಸಂದೇಶ್ ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ, ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ, ಪತ್ರ ನೀಡಿದ್ದಾರೆ.

ಇಫ್ತಾರ್ ಬಳಿಕ ಗಂಗಾ ನದಿಗೆ ಮಾಂಸ ತ್ಯಾಜ್ಯ ಎಸೆದ ಯುವಕರ ಬಂಧನ

ಇಫ್ತಾರ್ ಕೂಟ ಆಯೋಜಿಸಿದ್ದವರ ಬಂಧನ

ಇಫ್ತಾರ್ ಕೂಟದ ಬಳಿಕ ಯುವಕರ ಗುಂಪೊಂದು ದೋಣಿಯಲ್ಲಿ ಬಂದು ವಾರಣಾಸಿಯ ಗಂಗಾ ನದಿಗೆ ಮಾಂಸದ ತ್ಯಾಜ್ಯಗಳನ್ನು ಎಸೆದು ಹೋಗಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿರುವ ಪೊಲೀಸರು 14 ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Moodubidire Police inspector Case: ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಮತ್ತು ಆಡಿಯೊದಲ್ಲಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಇನ್ಸ್‌ಪೆಕ್ಟರ್ ಸಂದೇಶ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ಫಸ್ಟ್‌ ರಿಯಾಕ್ಷನ್ ಏನು?

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಫಸ್ಟ್‌ ರಿಯಾಕ್ಷನ್

Moodbidri Police Inspector Case: ನಾನು ಯಾವ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿಲ್ಲ, ಅವರ ಬಳಿ ಯಾವುದೇ ಹಣವನ್ನೂ ನಾನು ಕೇಳಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಅದು. ಆಡಿಯೊ ಬಗ್ಗೆ ಮೇಲಧಿಕಾರಿಗಳು ತನಿಖೆ ಮಾಡ್ತಾರೆ ಎಂದು ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ತಿಳಿಸಿದ್ದಾರೆ.

ದಂಪತಿ ನಡುವೆ ಕಲಹ:  ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪಾಪಿ ಪತಿ

ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪತಿ

Crime News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಲೋಕಲ್ ರೈಲಿನ ಮುಂದೆ ತಳ್ಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ವಿಚಾರಣೆಯ ಸಮಯದಲ್ಲಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ರಾಜ್‌ಕುಮಾರ್ ಗುಪ್ತಾ ಎಂದು ಗುರುತಿಸಲ್ಪಟ್ಟ ಆರೋಪಿ, ತನ್ನ ಪತ್ನಿ ಪುಷ್ಪಾ ಗುಪ್ತಾ (36) ಜೊತೆ ಆಗಾಗ ಜಗಳವಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ.

Assault Case: ದಲಿತ ಕಾಂಗ್ರೆಸ್‌ ನಾಯಕಿಗೆ ಕಾಂಗ್ರೆಸ್‌ ನಾಯಕನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ದಲಿತ ಕಾಂಗ್ರೆಸ್‌ ನಾಯಕಿಗೆ ಪಕ್ಷದ ಮುಖಂಡನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ನಡೆದಿದೆ. ಚೇತನಾ ಅವರ ಮನೆಯನ್ನು ಬಾಡಿಗೆಗೆ ಪಡೆದಿದ್ದ ರಾಹಿಲ್ ಷರೀಫ್ ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ರಾತ್ರಿ ಮನೆಗೆ ನುಗ್ಗಿ ಚೇತನಾ ಮತ್ತು ಅವರ ಪತಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ದಂಪತಿಗಳಿಗೆ ಗಾಯಗಳಾಗಿತ್ತು.

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ; ಪುತ್ತೂರು ಎಸಿಯಿಂದ ಕ್ರಮ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 3ನೇ ಬಾರಿ ಗಡಿಪಾರು ಆದೇಶ

Mahesh Shetty Timarodi: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಎಂದು ಹೇಳಿಕೊಳ್ಳುವ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಮೂರನೇ ಬಾರಿ ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಮಹೇಶ್ ಶೆಟ್ಟಿ ತಿಮರೋಡಿ ಅವರು 2026ರ ಮಾರ್ಚ್ 16 ರಿಂದ ಸೆಪ್ಟೆಂಬರ್ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿಯಲ್ಲಿ ಅವರು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

Sirsi News: ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ; ಜೀವದ ಹಂಗು ತೊರೆದು ರಕ್ಷಿಸಿದ ವ್ಯಕ್ತಿ!

ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ

ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಈ ಬಗ್ಗೆ ಹತ್ತಿರದಲ್ಲೇ ವಾಸವಿದ್ದ ವ್ಯಕ್ತಿಗೆ ಮಾಹಿತಿ ನೀಡಿದ್ದು, ಆತ ಜೀವದ ಹಂಗು ತೊರೆದು ಮಗುವನ್ನು ರಕ್ಷಣೆ ಮಾಡಿದ್ದಾರೆ.

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಗಂಡನ ಬಂಧಿಸಿ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಲೈಂಗಿಕ ಕಿರುಕುಳ!

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಇನ್ಸ್‌ಪೆಕ್ಟರ್‌ ಕಾಮಕಾಂಡ ಬಯಲು

Moodubidire Police Inspector Case: ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ಕೇಸ್‌ ಹಾಕಿ, ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆಯಾಗಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಕೇಳಿಬಂದಿದೆ.

ಗ್ಯಾಸ್ ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಸಿ ವೃದ್ಧೆಗೆ ಬರೋಬ್ಬರಿ 21 ಲಕ್ಷ ರುಪಾಯಿ ವಂಚನೆ

ಗ್ಯಾಸ್ ಸಂಪರ್ಕ ಹೆಸರಲ್ಲಿ ವೃದ್ಧೆಗೆ ಬರೋಬ್ಬರಿ 21 ಲಕ್ಷ ರು. ವಂಚನೆ

Cyber Crime: ಪಿಎನ್‌ಜಿ ಗ್ಯಾಸ್ ಸಂಪರ್ಕವನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿ ಮಹಿಳೆಯೊಬ್ಬರಿಗೆ 21 ಲಕ್ಷ ರುಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್‌ನ ಉದ್ಯೋಗಿಯೆಂದು ಹೇಳಿಕೊಂಡು ಕಿಡಿಗೇಡಿ 61 ವರ್ಷದ ಮಹಿಳೆಗೆ ವಂಚಿಸಿದ್ದಾರೆ.

ಕೆನಡಾದಲ್ಲಿ ಕಾಲೇಜು ಸಹಪಾಠಿಗಳಿಂದಲೇ ಭಾರತೀಯ ಮೂಲದ ವಿದ್ಯಾರ್ಥಿಯ ಹತ್ಯೆ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಹತ್ಯೆ

Crime News: ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಸಹಪಾಠಿಗಳೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. 23 ವರ್ಷದ ವಿದ್ಯಾರ್ಥಿ ಗುರ್ಕಿರತ್ ಸಿಂಗ್ ಮನೋಚಾ ಅವರನ್ನು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ.

ರಸಗುಲ್ಲ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು; ಮದುವೆ ಮನೆಯಲ್ಲಿ ಘೋರ ದುರಂತ

ರಸಗುಲ್ಲ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

Tragedy at Wedding: ಜಾರ್ಖಂಡ್‌ನ ಹಳ್ಳಿಯೊಂದರಲ್ಲಿ ನಡೆದ ವಿವಾಹ ಸಂಭ್ರಮದ ಮಧ್ಯೆ 41 ವರ್ಷದ ಲಲಿತ್ ಸಿಂಗ್ ರಸಗುಲ್ಲ ತಿಂದು ಉಸಿರುಗಟ್ಟಿ ಸಾವಿಗೀಡಾದ ಆಘಾತಕಾರಿ ಘಟನೆ ನಡೆದಿದೆ. ಶುಕ್ರವಾರ (ಮಾರ್ಚ್‌ 13) ಲಲಿತ್ ಸಿಂಗ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಘೋರ ದುರಂತ: ಬೈಕ್ ಎಂಜಿನ್‌ನಿಂದ ಹೊರಬಂದ ವಿಷ ಗಾಳಿ; ನಿದ್ದೆಯಲ್ಲೇ ಪ್ರಾಣಬಿಟ್ಟ ಅಜ್ಜ, ಮೂವರು ಮಕ್ಕಳು

ಬೈಕ್ ಎಂಜಿನ್‌ನಿಂದ ವಿಷ ಗಾಳಿ: ಹಾರಿಯೋಯ್ತು ನಾಲ್ವರ ಪ್ರಾಣಪಕ್ಷಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಪಟ್ಟಣದಲ್ಲಿ ಮನೆಯೊಳಗೆ ಇಡೀ ರಾತ್ರಿ ಬೈಕ್ ಎಂಜಿನ್ ಚಾಲನೆಯಲ್ಲಿಟ್ಟಿದ್ದರಿಂದ ಕಾರ್ಬನ್ ಮೊನಾಕ್ಸೈಡ್ ವಿಷಗಾಳಿ ಹರಡಿ ಒಂದೇ ಕುಟುಂಬದ ನಾಲ್ವರು, ಅಜ್ಜ ಮತ್ತು ಮೂವರು ಮಕ್ಕಳು — ನಿದ್ದೆಯಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೆಕ್ಯಾನಿಕ್ ನೀಡಿದ ಸಲಹೆಯಂತೆ ಬೈಕ್ ಅನ್ನು ಮನೆಯೊಳಗೆ ಚಾಲನೆಯಲ್ಲಿಟ್ಟಿದ್ದರಿಂದ ವಿಷಗಾಳಿ ಕೊಠಡಿಯನ್ನು ಆವರಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಗೌರಮ್ಮ (45) ಎಂದು ಗುರುತಿಸಲಾಗಿದೆ. ನಾಗರಾಜ್ ಖಾಸಗಿ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

Yadgir News: ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿ ತಾಲೂಕಿನ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಶನಿವಾರ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಂದೆಯ ಸ್ವರ್ಜಿತ ಆಸ್ತಿಯಲ್ಲಿ ಮಗನಿಗೆ ಹಕ್ಕಿಲ್ಲ: ಹೈಕೋರ್ಟ್ ಆದೇಶ

ಪಿತ್ರಾರ್ಜಿತ ಮತ್ತು ಸ್ವರ್ಜಿತ ಆಸ್ತಿಗೆ ವ್ಯತ್ಯಾಸವಿದೆ ಎಂದ ಹೈಕೋರ್ಟ್

ತಂದೆ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿ ಮೇಲೆ ಮಗನಿಗೆ ಹಕ್ಕು ಇರುವುದಿಲ್ಲ. ಅವರು ತಮ್ಮ ಆಸ್ತಿಯನ್ನು ಯಾರಿಗೆ ಬೇಕಾದರೂ ನೀಡಬಹುದು. ಪಿತ್ರಾರ್ಜಿತ ಆಸ್ತಿಯಂತೆ ಸ್ವರ್ಜಿತ ಆಸ್ತಿಯು ತಂದೆಯಿಂದ ಮಗನಿಗೆ ವರ್ಗಾವಣೆಯಾಗುವುದಿಲ್ಲ ಈ ಕುರಿತು ಕೇರಳ ಹೈಕೋರ್ಟ್ ಪೀಠ ಮಹತ್ವದ ಆದೇಶವನ್ನು ನೀಡಿದೆ.

Loading...