ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಯೋಗಿ ನಾಡಲ್ಲಿ ಮತ್ತೊಂದು ಮಹತ್ವದ ಕಾರ್ಯಾಚರಣೆ: ನಾಲ್ವರು ಮಕ್ಕಳು, ಮಹಿಳೆ ಹತ್ಯೆ ಮಾಡಿದ ಪಾಪಿ ಪೊಲೀಸ್ ಗುಂಡೇಟಿಗೆ ಬಲಿ

ಐವರನ್ನು ಹತ್ಯೆ ಮಾಡಿದ್ದ ದುಷ್ಕರ್ಮಿ ಪೊಲೀಸ್ ಗುಂಡೇಟಿಗೆ ಬಲಿ

Crime News: ನಾಲ್ವರು ಮಕ್ಕಳು ಹಾಗೂ ಅವರ ತಾಯಿಯನ್ನು ಕೊಂದಿದ್ದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಆರೋಪಿಯು ಪೊಲೀಸರ ಕಾರ್ಯಾಚರಣೆಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಮೇಲ್ಮಡಿಯಲ್ಲಿದ್ದ ಪ್ರಿಯಾ ಅವರು ತಳಮಹಡಿಗೆ ಸಂಪ್ ಪರೀಕ್ಷೆ ಮಾಡಲು ಬರುತ್ತಿದ್ದಂತೆ ಹೊಂಚು ಹಾಕಿ ಕಾದಿದ್ದ ಕಳ್ಳರು ಸರಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆಯಾದ ಕೂಡಲೇ ಪ್ರಿಯಾ ಅವರ ಪತಿ ಕಾರ್ತಿಕ್ ಮನೆಗೆ ಬಂದು ಮಾಹಿತಿ ಪಡೆದು ಕೂಡಲೇ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

IPL Betting Racket: ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

Belagavi News: ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದಾಗ ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಶಾಸ್ತ್ರಿ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Ramanagara News: ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮನ ವಿರುದ್ಧ ದೂರು ದಾಖಲು

ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮ!

ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ ಎಂದು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತನ ವಿರುದ್ಧ ಯುವತಿ ದೂರು ನೀಡಿದ್ದಾಳೆ.

ಡಿಸಿಎಂ ಡಿಕೆಶಿ, ನಟ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ

ಡಿಕೆಶಿ, ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ರಾಯಚೂರು ಜಿಲ್ಲೆ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ವತಿಯಿಂದ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ನಟ ಕಿಚ್ಚ ಸುದೀಪ್‌ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

Bengaluru News: ಕೌಟುಂಬಿಕ ಕಲಹ; ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಬೆಂಗಳೂರಿನ ಮತ್ತಿಕೆರೆಯಲ್ಲಿ ಈ ಘೋರ ಘಟನೆ ಸಂಭವಿಸಿದೆ. ಶನಿವಾರ ಸಂಜೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ತೀವ್ರ ಮನನೊಂದ ಗೃಹಿಣಿಯು, ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ಬಳಿಕ ತಾನೂ ಸೇವಿಸಿದ್ದಾರೆ. ಇದರಿಂದ ಮಕ್ಕಳು ಮೃತಪಟ್ಟಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ

ನಿದಾ ಖಾನ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

ಮಹಾರಾಷ್ಟ್ರದ ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಬಲವಂತದ ಮತಾಂತರ ಯತ್ನದ ಆರೋಪದಲ್ಲಿ ಬಂಧಿತಳಾಗಿರುವ ನಿದಾ ಖಾನ್‌ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಸಿಕ್ ರಸ್ತೆ ನ್ಯಾಯಾಲಯ ತಿರಸ್ಕರಿಸಿದೆ. ಡಿಜಿಟಲ್ ಪುರಾವೆಗಳು, ತನಿಖೆ ವಿಷಯಗಳನ್ನು ಆಧರಿಸಿ ಈ ಆದೇಶ ಹೊರಡಿಸುತ್ತಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದ ನಾಲ್ವರು ಮಕ್ಕಳ ಮೃತದೇಹ; ತಾಯಿ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ನಿಗೂಢ ಪ್ರಕರಣ

ಮನೆಯೊಳಗೆ ನಾಲ್ವರು ಮಕ್ಕಳ ಸಾವು; ತಾಯಿ ನಾಪತ್ತೆ

Uttar Pradesh Horror: ಉತ್ತರ ಪ್ರದೇಶದ ಅಂಬೇಡ್ಕರ್‌ ನಗರದಲ್ಲಿ ನಿಗೂಢ ಪ್ರಕರಣವೊಂದು ನಡೆದಿದ್ದು, ಮನೆಯೊಳಗೆ ನಾಲ್ವರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಕ್ಕಳ ತಾಯಿ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ಮಕ್ಕಳನ್ನು ಶಫಿಕ್‌ (14), ಸೌದ್‌ (10), ಉಮರ್‌ (8) ಮತ್ತು ಸಾದಿಯಾ (7) ಎಂದು ಗುರುತಿಸಲಾಗಿದೆ.

ಪತ್ನಿಗೆ ಅಕ್ರಮ ಸಂಬಂಧ; ಮಲೇಷ್ಯಾದಿಂದ ದಾಂಡೇಲಿಗೆ ಬಂದಿದ್ದ ಗಂಡ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ಗಂಡ ಆತ್ಮಹತ್ಯೆ

ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ತಾಯಿಯೇ ಕಾರಣ ಎಂದು ಆರೋಪಿಸಿ ಗಂಡ ಆತ್ಮಹತ್ಯೆ ಎನ್ನಲಾಗಿದೆ. ಸದ್ಯ, ಈ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರಾಘವೇಂದ್ರ ಪತ್ನಿ ಮೇಘಾ ಮತ್ತು ಆಕೆಯ ತಾಯಿಯನ್ನು ದಾಂಡೇಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

30 ವರ್ಷದ ಜಡ್ಜ್‌ ಆತ್ಮಹತ್ಯೆಗೆ ಶರಣು; ಕಾರ್ಯದೊತ್ತಡ, ವೈಯಕ್ತಿಕ ಕಾರಣ-ಜೀವ ಕಳೆದುಕೊಂಡಿದ್ದೇಕೆ?

30 ವರ್ಷದ ನ್ಯಾಯಾಧೀಶ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ

Self Harming: ದೆಹಲಿಯಲ್ಲಿ 30 ವರ್ಷದ ಜಡ್ಜ್‌ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಪ್ರೇಮ್‌ ಕುಮಾರ್‌ ಶರ್ಮ ಅವರ ಪುತ್ರ ಅಮನ್‌ ಕುಮಾರ್‌ ಶರ್ಮ ಎಂದು ಗುರುತಿಸಲಾಗಿದೆ. ಸಫ್ದರ್ಜಂಗ್‌ನ ಅವರ ಗ್ರೀನ್‌ ಪಾರ್ಕ್‌ ಮನೆಯ ಬಾತ್‌ ರೂಂನಲ್ಲಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಪತಿಯರನ್ನು ಅದಲು ಬದಲು ಮಾಡಲು ಅನುಮತಿ ಕೊಡಿ; ಸಹೋದರಿಯರ ವಿಚಿತ್ರ ಬೇಡಿಕೆ ಕೇಳಿ ದಂಗಾದ ಜಡ್ಜ್

ಸಹೋದರಿಯರ ವಿಚಿತ್ರ ಬೇಡಿಕೆ ಕೇಳಿ ನ್ಯಾಯಾಧೀಶರಿಗೆ ಶಾಕ್

ಸಹೋದರಿಯರಿಬ್ಬರು ನ್ಯಾಯಾಧೀಶರ ಮುಂದೆ ವಿಚಿತ್ರ ಬೇಡಿಕೆ ಇಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಸ್ವಂತ ಸಹೋದರಿಯರಿಬ್ಬರು ತಮ್ಮ ಪತಿಯರನ್ನು ಅದಲು ಬದಲು ಮಾಡಿಕೊಳ್ಳಲು ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬೇಡಿಕೆಯನ್ನು ಕೇಳಿ ನ್ಯಾಯಾಧೀಶರು ಕೂಡ ದಂಗಾಗಿದ್ದಾರೆ. ಈ ಪ್ರಕರಣ ಈಗ ದೇಶಾದ್ಯಂತ ಸುದ್ದಿ ಮಾಡಿದೆ.

Fact Check: ತಿಂಗಳಿಗೆ 15 ಲಕ್ಷ ರುಪಾಯಿ ಲಾಭದ ಹೂಡಿಕೆ ಬಗ್ಗೆ ವಿವರಿಸಿದ್ರಾ ರಕ್ಷಣಾ ಸಚಿವ ರಾಜನಾಥ್ ಸಿಂಗ್? ವೈರಲ್‌ ವಿಡಿಯೊದ ಅಸಲಿಯತ್ತೇನು?

ಎಐ ಡೀಪ್‌ಫೇಕ್ ವಿಡಿಯೊ: ರಾಜನಾಥ್ ಸಿಂಗ್ ಹೆಸರಿನಲ್ಲಿ ನಕಲಿ ಹೂಡಿಕೆ ಯೋಜನೆ

22,000 ರುಪಾಯಿ ಹೂಡಿಕೆಗೆ ದಿನಕ್ಕೆ 80,000 ರುಪಾಯಿ ಲಾಭ ಸಿಗುತ್ತದೆ ಎಂದು ಹೇಳುವಂತೆ ರಾಜನಾಥ್ ಸಿಂಗ್ ಅವರ ಧ್ವನಿಯಲ್ಲಿ ಸೃಷ್ಟಿಸಲಾದ ಎಐ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೊ ಸಂಪೂರ್ಣ ನಕಲಿ ಎಂದು ಫ್ಯಾಕ್ಟ್ ಚೆಕ್ ಘಟಕವು ಸ್ಪಷ್ಟಪಡಿಸಿದೆ. ಸರ್ಕಾರ ಅಥವಾ ಸಚಿವರು ಇಂತಹ ಯಾವುದೇ ಹೂಡಿಕೆ ಯೋಜನೆಯನ್ನು ಅನುಮೋದಿಸಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.

Tumkur News: ಪ್ರಿಯಕರನ ಜತೆ ಹೆಂಡತಿ ಪರಾರಿಯಾಗಿದ್ದಕ್ಕೆ ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪ್ರಿಯಕರನ ಜತೆ ಹೆಂಡತಿ ಪರಾರಿ; ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪತ್ನಿ ಪರಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಪತ್ನಿಯು ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿದ್ದಳು. ಇದರಿಂದ ಮನನೊಂದ ಪತಿ ಮಕ್ಕಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಜಬಲ್ಪುರ ದೋಣಿ ದುರಂತ ನಡೆದು ಎರಡು ದಿನಗಳಾದರೂ ಪತ್ತೆಯಾಗಿಲ್ಲ 6 ಮಂದಿ

ಜಬಲ್ಪುರ ದೋಣಿ ದುರಂತ: 28 ಮಂದಿ ರಕ್ಷಣೆ 6 ಮಂದಿ ನಾಪತ್ತೆ

ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಯ ಬಾರ್ಗಿ ಅಣೆಕಟ್ಟಿನ ಜಲಾಶಯದಲ್ಲಿ ಗುರುವಾರ ಸಂಜೆ ನಡೆದ ದೋಣಿ ದುರಂತದಲ್ಲಿ 28 ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 6 ಮಂದಿ ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನಗಳಿಂದ ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ನಿರಂತರ ಕಾರ್ಯಾಚರಣೆ ನಡೆಸಿ ನಾಪತ್ತೆಯಾದವರಿಗಾಗಿ ಹುಡುಕಾಡುತ್ತಿವೆ.

ಕೊಲೆ ಪ್ರಕರಣಕ್ಕೆ ಸಾಕ್ಷಿ ನೀಡಿದ ಸಾಕು ಗಿಳಿ: ಪತಿಯನ್ನು ಕೊಂದ ಪತ್ನಿಯ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ನೆರವಾದ ಸಾಕು ಗಿಣಿ!

Viral News: ಅಮೆರಿಕದ ಮಿಚಿಗನ್ ನಲ್ಲಿ ಸಾಕು ಗಿಣಿಯೊಂದು ಅಪರಾಧಿಯನ್ನು ಪತ್ತೆ ಹಚ್ಚಿದ ಘಟನೆಯೊಂದು ನಡೆದಿದೆ. ಮನೆಯ ಯಜಮಾನನ ಕೊಲೆಯನ್ನು ಕಣ್ಣಾರೆ ಕಂಡ ಗಿಳಿಯೂ ಮಾಲೀಕರ ಸಾವಿಗೆ ಸಂಬಂಧಿಸಿದ ವಾಕ್ಯವನ್ನು ಪದೇ ಪದೇ ಹೇಳುವ ಮೂಲಕ ಕೊಲೆಗೆ ಸಾಕ್ಷಿ ನೀಡಿದೆ. ಸದ್ಯ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ; ಕುಟುಂಬಸ್ಥರ ವಿರುದ್ಧ ದೂರು ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು.

Fact check: ಜಬಲ್ಪುರ ದೋಣಿ ದುರಂತ: ವೈರಲ್ ಆಗಿರುವ ತಾಯಿ, ಮಗುವಿನ ಚಿತ್ರ ನಕಲಿ

ಜಬಲ್ಪುರ ದೋಣಿ ದುರಂತ: ವೈರಲ್ ಚಿತ್ರ ನಿಜವಲ್ಲ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಗುರುವಾರ ಸಂಜೆ ನಡೆದಿರುವ ದೋಣಿ ದುರಂತಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿ, ಮಗುವಿನ ಚಿತ್ರವೊಂದು ಹರಿದಾಡುತ್ತಿದ್ದು, ಇದು ನಕಲಿ ಚಿತ್ರವಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಕ್ಷಣಾ ತಂಡವು ಶುಕ್ರವಾರ ನಡೆಸಿದ ಕಾರ್ಯಾಚರಣೆ ವೇಳೆ ತಾಯಿಯೊಬ್ಬಳು ತನ್ನ ನಾಲ್ಕು ವರ್ಷದ ಮಗುವನ್ನು ಬಿಗಿಯಾಗಿ ತಬ್ಬಿ ಹಿಡಿದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಇದಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಕೃತಕ ಬುದ್ದಿ ಮತ್ತೆ ಬಳಸಿ ಚಿತ್ರವನ್ನು ಹರಿಯಬಿಡಲಾಗಿತ್ತು.

ಮುಂಬೈ ಕುಟುಂಬದ ಸಾವಿಗೆ  ಕಲ್ಲಂಗಡಿ ಕಾರಣ ಅಲ್ಲ.. ವೈದ್ಯಕೀಯ ವರದಿ ಬಿಚ್ಚಿಟ್ಟ ರಹಸ್ಯವೇನು?

ಕಲ್ಲಂಗಡಿಯಿಂದ ಸಾವು ಸಂಭವಿಸಿಲ್ಲ

ಇತ್ತೀಚೆಗೆ ಮುಂಬೈನ ಕುಟುಂಬವೊಂದು ಕಲ್ಲಂಗಡಿ ಹಣ್ಣು ಸೇವಿಸಿ ಸಾವನ್ನಪ್ಪಿತ್ತು ಎನ್ನುವ ಸುದ್ದಿ ದೇಶಾದ್ಯಂತ ಆತಂಕವನ್ನು ಉಂಟು ಮಾಡಿತ್ತು. ಆದರೆ ಇದೀಗ ಬಂದಿರುವ ವೈದ್ಯಕೀಯ ವರದಿಯ ಪ್ರಕಾರ ಅವರ ಸಾವು ಕಲ್ಲಂಗಡಿ ಹಣ್ಣಿನಿಂದ ಉಂಟಾಗಿಲ್ಲ ಎನ್ನಲಾಗಿದೆ. ಹಾಗಾದರೆ ವೈದ್ಯಕೀಯ ವರದಿ ಹೇಳಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ...

ಆಲೂಗಡ್ಡೆ ರಾಶಿ ಉಳಿಸಲು ಹೋದ ರೈತ ಸಿಡಿಲಿಗೆ ಬಲಿ

ಗುಡುಗು-ಮಿಂಚು ಮಳೆ ನಡುವೆ ಕುಂಬಾರಹಳ್ಳಿಯಲ್ಲಿ ದುರಂತ

ಗುರುವಾರ ಸಂಜೆ ವೇಳೆಗೆ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣ ವಾಗಿತ್ತು. ಸುಮಾರು 7 ಗಂಟೆ ಸುಮಾರಿಗೆ ಬಿರುಗಾಳಿ, ಗುಡುಗು ಹಾಗೂ ಮಿಂಚು ತೀವ್ರ ಗೊಂಡಿತ್ತು. ಇದೇ ಸಂದರ್ಭದಲ್ಲಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾರಾಯಣ ಸ್ವಾಮಿ ಅವರ ಮೇಲೆ ಏಕಾಏಕಿ ಸಿಡಿಲು ಬಡಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಬಳಿಕ ಮೃತಪಟ್ಟಿದ್ದಾರೆ

Bengaluru Central Jail: ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಪತ್ನಿಗೆ ವಿಡಿಯೊ ಕಾಲ್‌ ಮಾಡಿದ ಕೈದಿ!; Video ವೈರಲ್‌

ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಪತ್ನಿಗೆ ವಿಡಿಯೊ ಕಾಲ್‌ ಮಾಡಿದ ಕೈದಿ!

ವಿಚಾರಣಾಧೀನ ಕೈದಿಯಾಗಿದ್ದ ಅಕ್ಬರ್ ಎಂಬಾತ ಬೆಂಗಳೂರಿನ ಸೆಂಟ್ರಲ್‌ ಜೈಲಿನಲ್ಲೇ ಕುಳಿತುಕೊಂಡೇ ಪತ್ನಿಗೆ ವಿಡಿಯೊ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಸದ್ಯ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆದರೆ ಈಗ ಈತನ ವಿಡಿಯೊ ವೈರಲ್ ಆಗುತ್ತಿದೆ. ಹೀಗಾಗಿ ಜೈಲಿನ ಭದ್ರತಾ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗಿವೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ; 30 ಪ್ರಯಾಣಿಕರಿಗೆ ಗಾಯ

Male mahadeshwara Hill Bus accident: ಮಲೆ ಮಹದೇಶ್ವರ ಬೆಟ್ಟದಿಂದ ಸಾರಿಗೆ ಬಸ್ ಕೊಳ್ಳೇಗಾಲಕ್ಕೆ ಬರುತ್ತಿತ್ತು. ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್‌; 20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ಫೋಟೊ, ವಿಡಿಯೊ ಇಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರೆಸ್ಟ್‌!

ಲೈಂಗಿಕ ದೌರ್ಜನ್ಯ; ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರೆಸ್ಟ್‌

Physical Abuse Case: ತಾನು ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಹೇಳಿಕೊಂಡು, ನಕಲಿ ಐಡಿ ಕಾರ್ಡ್‌ ಬಳಸಿಕೊಂಡು ಆರೋಪಿಯು, ಹಲವರಿಗೆ ಬೆದರಿಕೆ ಹಾಕುತ್ತಿದ್ದ. ಇನ್ನು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬ್ಲ್ಯಾಕ್‌ ಮಾಡುತಿದ್ದ ಆರೋಪ ಕೇಳಿಬಂದಿದ್ದರಿಂದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಜಬಲ್ಪುರ ದೋಣಿ ದುರಂತ: ಒಂಬತ್ತು ಮಂದಿ ನೀರುಪಾಲು, ಎಲ್ಲರ ಕಣ್ಣಾಲಿಗಳು ತುಂಬುವಂತೆ ಮಾಡಿತು ತಾಯಿ, ಮಗುವಿನ ಮೃತದೇಹ

ಜಬಲ್ಪುರ ದೋಣಿ ದುರಂತ: ಒಂಬತ್ತು ಮಂದಿ ನೀರುಪಾಲು

ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ದೋಣಿ ದುರಂತದಲ್ಲಿ ಗುರುವಾರ ಒಂಬತ್ತು ಮಂದಿ ನೀರು ಪಾಲಾಗಿದ್ದಾರೆ. ತಾಯಿ, ಮಗುವಿನ ಶವ ಪತ್ತೆಯಾಗಿದ್ದು, ರಕ್ಷಣಾ ತಂಡವು ಅವರನ್ನು ನೀರಿನಿಂದ ಹೊರ ತೆಗೆಯುವ ವೇಳೆ ತಾಯಿ, ಮಗುವನ್ನು ಬಿಗಿಯಾಗಿ ಅಪ್ಪಿರುವ ದೃಶ್ಯ ಅಲ್ಲಿದ್ದವರ ಕಣ್ಣಾಲಿಗಳು ತುಂಬುವಂತೆ ಮಾಡಿತ್ತು.

ಮೃತ ತಂದೆಯ 45 ಲಕ್ಷ ರುಪಾಯಿ, ಅನುಕಂಪದ ಉದ್ಯೋಗ, ಐಷಾರಾಮಿ ಜೀವನದ ಕನಸು; ಪ್ರೇಮಿಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಹದಿಹರೆಯದ ಬಾಲಕಿ

ಪ್ರೇಮಿಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಹದಿಹರೆಯದ ಬಾಲಕಿ

Crime News: ಪ್ರೇಮಿ ಜತೆ ಸೇರಿ ಹದಿಹರೆಯದ ಬಾಲಕಿಯೊಬ್ಬಳು ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದಿದೆ. ಆಕೆಯ ಮೃತ ತಂದೆಯ 45 ಲಕ್ಷ ರುಪಾಯಿ ಹಾಗೂ ಅನುಕಂಪದ ಉದ್ಯೋಗಕ್ಕಾಗಿ ಈ ಕೃತ್ಯ ಎಸಗಿದ್ದಾಳೆ. ನಂತರ ಕಾಲು ಜಾರಿ ಮೃತಪಟ್ಟಿದ್ದಾಗಿ ಸುಳ್ಳು ಕಥೆ ಹೆಣೆದಿದ್ದಾಳೆ.

Loading...