ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

ಪ್ರೀತಿಯಿಂದ ಸಾಕಿದ್ದ ಬೆಕ್ಕು ಸಾವು; ದುಃಖ ತಡೆಯಲಾರದೆ  20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ಸಾಕು ಬೆಕ್ಕಿನ ಸಾವಿನಿಂದ ದುಃಖಿತಳಾದ ಯುವತಿ ಆತ್ಮಹತ್ಯೆ

Crime News: 20 ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಾಕು ಬೆಕ್ಕಿನ ಸಾವನ್ನು ಸಹಿಸಲು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹಿಮಬಿಂದು ಎಂದು ಗುರುತಿಸಲಾದ ವಿದ್ಯಾರ್ಥಿನಿ ಕಳೆದ ಎರಡು ವರ್ಷಗಳಿಂದ ಬೆಕ್ಕನ್ನು ಬಹಳ ಪ್ರೀತಿಯಿಂದ ಸಾಕುತ್ತಿದ್ದಳು. ಆ ಸಾಕು ಬೆಕ್ಕು ಇತ್ತೀಚೆಗೆ ಸತ್ತುಹೋಯಿತು.

Murder Case: ಸೊಸೆಯನ್ನು ಕಾಮದಾಹಕ್ಕೆ ಬಳಸಿಕೊಂಡ ಅಪ್ಪ ಮಗನಿಂದಲೇ ಸುಪಾರಿ ಹತ್ಯೆ!

ಸೊಸೆಯನ್ನು ಕಾಮದಾಹಕ್ಕೆ ಬಳಸಿಕೊಂಡ ಅಪ್ಪ ಮಗನಿಂದಲೇ ಸುಪಾರಿ ಹತ್ಯೆ!

ಹಂಪಣ್ಣ ಮದ್ಯವ್ಯಸನಿಯೂ ಆಗಿದ್ದ. ತನ್ನ ಕಾಮತೃಷೆ ಈಡೇರಿಸಿಕೊಳ್ಳಲು ದುಡ್ಡು ಕೊಟ್ಟು ಬೇರೆ ಮಹಿಳೆಯರನ್ನು ಶೆಡ್​​ಗೆ ಕರೆಸಿಕೊಳ್ಳುತ್ತಿದ್ದ. ಮಗನ ಹೆಂಡತಿ ಅಂದರೆ ಸೊಸೆ, ಜಮೀನಿಗೆ ಕೆಲಸಕ್ಕೆ ಬಂದಾಗಲೂ ಬಿಡುತ್ತಿರಲಿಲ್ಲ. ತನ್ನ ಪತ್ನಿಯ ಜೊತೆಗೆ ತಂದೆ ಅನೈತಿಕ ಸಂಬಂಧ ಹೊಂದಿರುವ ವಿಚಾರ ಗೊತ್ತಾಗಿದ್ದೇ ತಡ ನರಸರೆಡ್ಡಿ ರೊಚ್ಚಿಗೆದ್ದಿದ್ದು, ತಂದೆಯನ್ನೇ ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದ.

ಹಣ ನೀಡದ್ದಕ್ಕೆ ಗರ್ಭಿಣಿ ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ

ಹಣ ನೀಡದ್ದಕ್ಕೆ ಗರ್ಭಿಣಿ ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ

Crime News: ಆರು ತಿಂಗಳ ಗರ್ಭಿಣಿಯಾಗಿದ್ದ 24 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಕೇಳಿದಾಗ ಹಣ ನೀಡದ್ದಕ್ಕೆ ಕೋಪಗೊಂಡ ಪತಿಯು ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆಯ ದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಹಾಸಿಗೆಯ ಕೆಳಗೆ ಮರೆಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Acid Attack: ಮಾಜಿ ಪತ್ನಿ, 4 ವರ್ಷದ ಮಗುವಿನ ಮೇಲೂ ಆ್ಯಸಿಡ್ ಎರಚಿದ ಪಾತಕಿ

ಮಾಜಿ ಪತ್ನಿ, 4 ವರ್ಷದ ಮಗುವಿನ ಮೇಲೂ ಆ್ಯಸಿಡ್ ಎರಚಿದ ಪಾತಕಿ

ಕಳೆದ ಹಲವು ವರ್ಷಗಳಿಂದ ಪತಿ ಸುಹೇಲ್ ಹಾಗೂ ಪತ್ನಿ ತಾಸೀನಾ ನಡುವೆ ಜಗಳ ನಡೆಯುತ್ತಿತ್ತು. ಪದೇ ಪದೇ ಗಲಾಟೆ ಹಿನ್ನೆಲೆಯಲ್ಲಿ ಪತಿ ಪತ್ನಿ ಇಬ್ಬರೂ ಮುಸ್ಲಿಂ ಧಾರ್ಮಿಕ ಪದ್ಧತಿಯಂತೆ ವಿಚ್ಛೇದನ ಪಡೆದಿದ್ದರು. ಆಗಾಗ ಗಲಾಟೆ ಮಾಡುತ್ತಿರುವ ಆರೋಪದ ಮೇಲೆ ಸುಹೇಲ್ ವಿರುದ್ಧ ಮಾಜಿ ಪತ್ನಿ ತಾಸೀನಾ ಕೇಸ್ ದಾಖಲು ಮಾಡಿದ್ದಳು.

Tumkur news: ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Physical Abuse: 58 ಮಹಿಳೆಯರಿಗೆ 3 ವರ್ಷ ಅತ್ಯಾಚಾರ, ರಹಸ್ಯ ಕ್ಯಾಮೆರಾ ಇಟ್ಟು ಬ್ಲ್ಯಾಕ್‌ಮೇಲ್:‌ ಜ್ಯೋತಿಷಿಯ ಸೆರೆ

58 ಮಹಿಳೆಯರಿಗೆ ಅತ್ಯಾಚಾರ, ಬ್ಲ್ಯಾಕ್‌ಮೇಲ್:‌ ಸೆಲೆಬ್ರಿಟಿ ಜ್ಯೋತಿಷಿ ಸೆರೆ

ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯೆಂದು ಹೇಳಿಕೊಳ್ಳುವ ಖರತ್, ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಸಮ್ಮೋಹನಗೊಳಿಸುತ್ತಿದ್ದ. ಬಳಿಕ ಮಾಟಮಂತ್ರದ ಭಯ ಹುಟ್ಟಿಸಿ ಅಥವಾ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಪೊಲೀಸರ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಮವಸ್ತ್ರದಲ್ಲೇ ರಾಮಚಂದ್ರ ರಾವ್‌ ಮಹಿಳೆಯರೊಂದಿಗೆ ನಡೆಸಿದ ಸರಸದ ವಿಡಿಯೊ ಅಸಲಿ; ತನಿಖಾ ತಂಡದಿಂದ ಬಯಲಾಯ್ತು ಸತ್ಯ

ರಾಮಚಂದ್ರ ರಾವ್‌ ಸರಸದ ವಿಡಿಯೊ ಅಸಲಿ ಎಂದ ತನಿಖಾ ತಂಡ

DGP Ramachandra Rao Case: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಅಸಲಿ ಎನ್ನುವುದು ಇದೀಗ ಸಾಬೀತಾಗಿದೆ. ನಡೆಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದ ಐಪಿಎಸ್​​ ಅಧಿಕಾರಿಗಳ ತಂಡದ 100 ಪುಟಗಳ ವರದಿಯಲ್ಲಿ ವಿಡಿಯೊದ ಸತ್ಯಾಸತ್ಯತೆ ಹೊರ ಬಿದ್ದಿದೆ.

Robbery Case: ಬುರ್ಖಾ ಧರಿಸಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿಭಾಗಗಳನ್ನು ಕದ್ದ ಅಪ್ಪ-ಮಗ

80 ಲಕ್ಷ ರು. ಮೌಲ್ಯದ ಕಂಪ್ಯೂಟರ್‌ ಬಿಡಿಭಾಗ ಕದ್ದ ಅಪ್ಪ-ಮಗ

Bengaluru News: ಬುರ್ಖಾ ಧರಿಸಿ ಅಪ್ಪ-ಮಗನ ಜೋಡಿ ಬರೋಬ್ಬರಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿ ಭಾಗಗಳನ್ನು ಕದ್ದ ಘಟನೆ ನಡೆದಿದೆ. ಸದ್ಯ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗಾವರದಲ್ಲಿ ಈ ಘಟನೆ ನಡೆದಿದೆ.

Moral policing: ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ, ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಮುಸ್ಲಿಂ ಬಾಲಕು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌; ಪೋಕ್ಸೊ ಪ್ರಕರಣದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌; ತನಿಖೆಗೆ ಹೈಕೋರ್ಟ್‌ ತಡೆ

Mallikarjun Mutya Case: ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದಲ್ಲಿ ಕಳೆದ ಫೆಬ್ರವರಿ 25 ರಂದು ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಮದುವೆಯಾದ 15ನೇ ದಿನಕ್ಕೆ ನವವಧು ಎಸ್ಕೇಪ್; ಬ್ರೋಕರ್‌ಗಳ ಮಾತು ನಂಬಿ ಕೆಟ್ಟ ಯುವಕ!

ಮದುವೆಯಾದ 15ನೇ ದಿನಕ್ಕೆ ನವವಧು ಎಸ್ಕೇಪ್!

marriage fraud: ಆಂಧ್ರ ಪ್ರದೇಶ ಮೂಲದ ಭಾಸ್ಕರ್ ಎಂಬಾತ​ ಬ್ರೋಕರ್​ಗಳ ಮೂಲಕ ಹುಡುಗಿಯನ್ನು ಹುಡುಕಿದ್ದ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾರ್ಗಾನುಕುಂಟೆ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಎರಡೇ ವಾರಕ್ಕೆ ಯುವತಿ ಪರಾರಿಯಾಗಿದ್ದಾಳೆ.

ಲಂಚ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಗ್ರಾಮಲೆಕ್ಕಿಗನಿಗೆ ಬಡ್ತಿ; ಕ್ರಮಕ್ಕೆ ಆಗ್ರಹ Video

ಲಂಚ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಗ್ರಾಮಲೆಕ್ಕಿಗನಿಗೆ ಬಡ್ತಿ!

ದೀರ್ಘ ಕಾಲದಿಂದ ವಿಚಾರಣೆ ನಡೆಯದೆ ಆರೋಪಿಗೆ ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ಪ್ರಮೋಷನ್ ಭಾಗ್ಯ ಸಹ ದೊರೆತಿದೆ. ಆರೋಪಿ ಕಾನೂನು ಹಿಡಿತದಿಂದ ನುಣುಚಿಕೊಳ್ಳಲು ವಕೀಲರು ಮತ್ತು ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದಾರೆ. ತಕ್ಷಣ ಅರುಣ್ ಕುಮಾರ್ ಅವರನ್ನು ಮಾಲೂರು ಕಸಬಾ ರೆವಿನ್ಯೂ ಇನ್ಸಪೆಕ್ಟರ್ ಹುದ್ದೆಯೆಂದ ಬದಲಾಯಿಸಿ ಬೇರೆಡೆಗೆ ಹಾಕಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಹಲ್ಲು ಕಿತ್ತ ನಂತರ ಮಹಿಳೆ ಸಾವು: ಚಿಕಿತ್ಸೆ ನೀಡಿದ ವೈದ್ಯ ಪರಾರಿ

ಹಲ್ಲು ಕಿತ್ತ ನಂತರ ಮಹಿಳೆ ಸಾವು: ದಂತ ವೈದ್ಯ ಪರಾರಿ

Death after dental procedure: ದಂತ ಚಿಕಿತ್ಸಾಲಯವೊಂದರಲ್ಲಿ ಹಲ್ಲು ಕಿತ್ತ ನಂತರ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹಲ್ಲು ಹೊರತೆಗೆದ ನಂತರ ಅವರ ಆರೋಗ್ಯ ಹದಗೆಟ್ಟಿದೆ. ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ವೈದ್ಯರಿಗೆ ಅವರ ಪ್ರಾಣ ಕಾಪಾಡಲು ಸಾಧ್ಯವಾಗಲಿಲ್ಲ.

Prajwal revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ; ಮಾಜಿ ಸಂಸದನಿಗೆ ಆಪ್ತರಿಂದಲೇ ಖೆಡ್ಡಾ!

ಪ್ರಜ್ವಲ್‌ ರೇವಣ್ಣ ವಿಡಿಯೊ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿತ್ತು. ಅಶ್ಲೀಲ ವಿಡಿಯೊಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ.

Murder Case: ತಮ್ಮನಿಗೆ ನಿಶ್ಚಯವಾದ ಹುಡುಗಿ ಮೇಲೆ ದುರಾಸೆ, ಕಲ್ಲೆತ್ತಿ ಹಾಕಿ ಕೊಂದ ಅಣ್ಣ!

ತಮ್ಮನಿಗೆ ನಿಶ್ಚಯವಾದ ಹುಡುಗಿ ಮೇಲೆ ದುರಾಸೆ, ಕಲ್ಲೆತ್ತಿ ಹಾಕಿ ಕೊಂದ ಅಣ್ಣ!

ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯನ್ನು ತಾನೇ ಮದುವೆಯಾಗಬೇಕು ಎಂದು ಅಶೋಕ್ ಬಯಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರದಿಂದ ಸಹೋದರರ ನಡುವೆ ಮನಸ್ತಾಪ ಉಂಟಾಗಿದ್ದು, ಕೋಪದ ಹೊತ್ತಿನಲ್ಲಿ ಅಶೋಕ್ ತನ್ನ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

Reels craze: ರೀಲ್ಸ್‌ಗಾಗಿ ಜೀವಂತ ತಂದೆಯನ್ನೇ ಚೀಲಕ್ಕೆ ತುಂಬಿ ಪಾರ್ಸೆಲ್‌ ಮಾಡಹೊರಟ ಫ್ಯಾಮಿಲಿ!

ರೀಲ್ಸ್‌ಗಾಗಿ ತಂದೆಯನ್ನೇ ಚೀಲಕ್ಕೆ ತುಂಬಿ ಪಾರ್ಸೆಲ್‌ ಮಾಡಹೊರಟ ಫ್ಯಾಮಿಲಿ!

ಯುವಕರ ಹುಚ್ಚಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ವೈಯಾಲಿಕಾವಲ್‌ ಠಾಣೆ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಯುವಕರ ತಂಡವನ್ನು ಪತ್ತೆ ಹಚ್ಚಿದಾಗ ಫ್ರ್ಯಾಂಕ್‌ ವಿಡಿಯೋ ಕಥೆ ಬಯಲಾಗಿದೆ. ಜತೆಗೆ ಇವರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ.

Inspector Suspend: ಪತಿಯನ್ನು ಬಂಧಿಸಿ ಪತ್ನಿಯನ್ನು ಮಂಚಕ್ಕೆ ಕರೆದ ಕೇಸ್:‌ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ಪತಿಯ ಬಂಧಿಸಿ ಪತ್ನಿಯ ಮಂಚಕ್ಕೆ ಕರೆದ ಕೇಸ್:‌ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ವಿವಾದದ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಈಗ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ನಿನ್ನೆ ಮಧ್ಯಾಹ್ನದವರೆಗೂ ಪಣಂಬೂರು ಠಾಣೆಯಲ್ಲಿ ಸಂದೇಶ್ ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ, ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ, ಪತ್ರ ನೀಡಿದ್ದಾರೆ.

ಇಫ್ತಾರ್ ಬಳಿಕ ಗಂಗಾ ನದಿಗೆ ಮಾಂಸ ತ್ಯಾಜ್ಯ ಎಸೆದ ಯುವಕರ ಬಂಧನ

ಇಫ್ತಾರ್ ಕೂಟ ಆಯೋಜಿಸಿದ್ದವರ ಬಂಧನ

ಇಫ್ತಾರ್ ಕೂಟದ ಬಳಿಕ ಯುವಕರ ಗುಂಪೊಂದು ದೋಣಿಯಲ್ಲಿ ಬಂದು ವಾರಣಾಸಿಯ ಗಂಗಾ ನದಿಗೆ ಮಾಂಸದ ತ್ಯಾಜ್ಯಗಳನ್ನು ಎಸೆದು ಹೋಗಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿರುವ ಪೊಲೀಸರು 14 ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Moodubidire Police inspector Case: ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಮತ್ತು ಆಡಿಯೊದಲ್ಲಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಇನ್ಸ್‌ಪೆಕ್ಟರ್ ಸಂದೇಶ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ಫಸ್ಟ್‌ ರಿಯಾಕ್ಷನ್ ಏನು?

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಫಸ್ಟ್‌ ರಿಯಾಕ್ಷನ್

Moodbidri Police Inspector Case: ನಾನು ಯಾವ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿಲ್ಲ, ಅವರ ಬಳಿ ಯಾವುದೇ ಹಣವನ್ನೂ ನಾನು ಕೇಳಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಅದು. ಆಡಿಯೊ ಬಗ್ಗೆ ಮೇಲಧಿಕಾರಿಗಳು ತನಿಖೆ ಮಾಡ್ತಾರೆ ಎಂದು ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ತಿಳಿಸಿದ್ದಾರೆ.

ದಂಪತಿ ನಡುವೆ ಕಲಹ:  ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪಾಪಿ ಪತಿ

ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪತಿ

Crime News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಲೋಕಲ್ ರೈಲಿನ ಮುಂದೆ ತಳ್ಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ವಿಚಾರಣೆಯ ಸಮಯದಲ್ಲಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ರಾಜ್‌ಕುಮಾರ್ ಗುಪ್ತಾ ಎಂದು ಗುರುತಿಸಲ್ಪಟ್ಟ ಆರೋಪಿ, ತನ್ನ ಪತ್ನಿ ಪುಷ್ಪಾ ಗುಪ್ತಾ (36) ಜೊತೆ ಆಗಾಗ ಜಗಳವಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ.

Assault Case: ದಲಿತ ಕಾಂಗ್ರೆಸ್‌ ನಾಯಕಿಗೆ ಕಾಂಗ್ರೆಸ್‌ ನಾಯಕನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ದಲಿತ ಕಾಂಗ್ರೆಸ್‌ ನಾಯಕಿಗೆ ಪಕ್ಷದ ಮುಖಂಡನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ನಡೆದಿದೆ. ಚೇತನಾ ಅವರ ಮನೆಯನ್ನು ಬಾಡಿಗೆಗೆ ಪಡೆದಿದ್ದ ರಾಹಿಲ್ ಷರೀಫ್ ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ರಾತ್ರಿ ಮನೆಗೆ ನುಗ್ಗಿ ಚೇತನಾ ಮತ್ತು ಅವರ ಪತಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ದಂಪತಿಗಳಿಗೆ ಗಾಯಗಳಾಗಿತ್ತು.

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ; ಪುತ್ತೂರು ಎಸಿಯಿಂದ ಕ್ರಮ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 3ನೇ ಬಾರಿ ಗಡಿಪಾರು ಆದೇಶ

Mahesh Shetty Timarodi: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಎಂದು ಹೇಳಿಕೊಳ್ಳುವ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಮೂರನೇ ಬಾರಿ ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಮಹೇಶ್ ಶೆಟ್ಟಿ ತಿಮರೋಡಿ ಅವರು 2026ರ ಮಾರ್ಚ್ 16 ರಿಂದ ಸೆಪ್ಟೆಂಬರ್ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿಯಲ್ಲಿ ಅವರು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

Sirsi News: ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ; ಜೀವದ ಹಂಗು ತೊರೆದು ರಕ್ಷಿಸಿದ ವ್ಯಕ್ತಿ!

ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ

ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಈ ಬಗ್ಗೆ ಹತ್ತಿರದಲ್ಲೇ ವಾಸವಿದ್ದ ವ್ಯಕ್ತಿಗೆ ಮಾಹಿತಿ ನೀಡಿದ್ದು, ಆತ ಜೀವದ ಹಂಗು ತೊರೆದು ಮಗುವನ್ನು ರಕ್ಷಣೆ ಮಾಡಿದ್ದಾರೆ.

Loading...