ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಅಣ್ಣನ ತರ ಎನ್ನುತ್ತಿದ್ದವಳು ಅವನ ಜತೆಯೇ ಓಡಿ ಹೋದಳು; ಬೆಂಗಳೂರಿನಲ್ಲಿ ಜಿಮ್ ಟ್ರೈನರ್‌ ಕಣ್ಣೀರು

ಅಣ್ಣನ ತರ ಎನ್ನುತ್ತಿದ್ದವಳು ಅವನ ಜತೆಯೇ ಓಡಿ ಹೋದಳು!; ಗಂಡ ಕಣ್ಣೀರು

ಬೆಂಗಳೂರಿನ ​ಜಿಮ್ ಟ್ರೈನರ್ ನಿತೇಶ್ ಯುವತಿಯೊಬ್ಬಳನ್ನು ಪ್ರೀತಿಸಿ, ಮನೆಯವರನ್ನು ಒಪ್ಪಿಸಿ ಅದ್ಧೂರಿಯಾಗಿ ಮದುವೆಯಾಗಿದ್ದರು. ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು. ಆದರೆ, ಈಗ ಇವರ ಜೀವನಕ್ಕೆ ಬೆಸ್ಟ್ ಫ್ರೆಂಡ್ ವಿಲನ್‌ ಆಗಿದ್ದಾನೆ. ಗಂಡನ ಸ್ನೇಹಿತನ ಜತೆಯೇ ಮಹಿಳೆ ಪರಾರಿಯಾಗಿದ್ದು, ನ್ಯಾಯಕ್ಕಾಗಿ ಪತಿ ಕಣ್ಣೀರಿಟ್ಟಿದ್ದಾರೆ.

Ranya Rao case: ಚಿನ್ನ ಕಳ್ಳಸಾಗಣೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರನ್ಯಾ ರಾವ್‌ ರಿಲೀಸ್‌

ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರನ್ಯಾ ರಾವ್‌ ರಿಲೀಸ್‌

ದುಬೈನಿಂದ 14.2 ಕೆ.ಜಿ ಚಿನ್ನವನ್ನು ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಕಳೆದ ವರ್ಷ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳು ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಕಾಫಿಫೋಸಾ 3(1) ಸೆಕ್ಷನ್ ಅಡಿಯಲ್ಲಿ ಬಂಧನವಾಗಿದ್ದರಿಂದ ಜಾಮೀನು ಲಭಿಸಿದ್ದರೂ ಕಳೆದ ಒಂದು ವರ್ಷದಿಂದ ನಟಿ ಜೈಲಿನಲ್ಲೇ ಇರಬೇಕಾಗಿತ್ತು. ಇದೀಗ ನಟಿ ರನ್ಯಾ ರಾವ್, ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Belagavi News: ಮನೆಯಲ್ಲಿ ಸೀರೆ ಬಿಟ್ಟು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ!

ಮನೆಯಲ್ಲಿ ಸೀರೆ ಬಿಟ್ಟು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ!

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ದಂಪತಿ ನಡುವೆ ನೈಟಿ ಧರಿಸುವ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಪತಿಯ ತೀವ್ರ ವಿರೋಧದ ನಡುವೆಯೂ ನೈಟಿ ಧರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ಗಂಡ ಬೆಂಕಿ ಹಚ್ಚಿದ್ದಾನೆ.

ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ರಾಜಕಾರಣಿಗಳ ವಿರುದ್ಧ ಸಂಚು: ಇಬ್ಬರು ಭಯೋತ್ಪಾದಕರ ಬಂಧನ

ಗುಜರಾತ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

RSS linked politicians: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ ಮತ್ತು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ರಾಜಕಾರಣಿಗಳ ವಿರುದ್ಧ ದಾಳಿ ಮಾಡಲು ಯೋಜಿಸಿದ್ದ ಆರೋಪದ ಮೇಲೆ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

ದೇಶವನ್ನು ಬೆಚ್ಚಿ ಬೀಳಿಸಿದ ಮತ್ತೊಂದು ʼನೀಲಿ ಡ್ರಮ್' ಕೊಲೆ ಪ್ರಕರಣ: ಮುಸ್ಕಾನ್‌ನನ್ನು  ಗಲ್ಲಿಗೇರಿಸಿ ಎಂದು ನ್ಯಾಯಾಲಯದಲ್ಲಿ ಗೋಗೆರೆದ ಸೌರಭ್ ರಜಪೂತ್ ತಾಯಿ

'ನೀಲಿ ಡ್ರಮ್' ಕೊಲೆ ಪ್ರಕರಣ: ಅಪರಾಧಿಯನ್ನು ಗಲ್ಲಿಗೇರಿಸಲು ಒತ್ತಾಯ

2025ರಲ್ಲಿ ನಡೆದ 'ನೀಲಿ ಡ್ರಮ್' ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸೌರಭ್ ರಜಪೂತ್ ಪತ್ನಿ ಮುಸ್ಕಾನ್ ರಜಪೂತ್ ಅನ್ನು ಗಲ್ಲಿಗೇರಿಸುವಂತೆ ಸೌರಭ್ ತಾಯಿ ನ್ಯಾಯಾಲಯದಲ್ಲಿ ಗೋಗೆರೆದ ಘಟನೆ ನಡೆದಿದೆ. ಪ್ರಕರಣದ ಕುರಿತು ವಿಚಾರಣೆಗೆ ಹಾಜರಾದ ಅವರು, ಈ ಸಂದರ್ಭದಲ್ಲಿ ಮಗನನ್ನು ನೆನೆದು ಭಾವುಕರಾಗಿ ಕಣ್ಣೀರು ಸುರಿಸಿದರು.

Victoria Hospital: ಮರ್ಮಾಂಗದ ಸರ್ಜರಿ ಬಳಿಕ ಹೊಲಿಗೆ ಹಾಕೋದನ್ನೇ ಮರೆತ್ರು; ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು!

ಮರ್ಮಾಂಗದ ಸರ್ಜರಿ ಬಳಿಕ ಹೊಲಿಗೆ ಹಾಕೋದನ್ನೇ ಮರೆತ ವೈದ್ಯರು; ರೋಗಿ ಸಾವು!

Bengaluru News: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ರೋಗಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಮರ್ಮಾಂಗದ ಶಸ್ತ್ರಚಿಕಿತ್ಸೆ ಬಳಿಕ ಹೊಲಿಗೆ ಹಾಕದ ಹಿನ್ನೆಲೆಯಲ್ಲಿ ರೋಗಿಯೊಬ್ಬರು ನೋವಿನಿಂದ ನರಳಾಡಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: 2 ದಶಕಗಳ ಬಳಿಕ ನಾಲ್ವರು ಆರೋಪಿಗಳ ಖುಲಾಸೆ

ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ಖುಲಾಸೆ

ಬರೋಬ್ಬರಿ ಎರಡು ದಶಕಗಳ ಬಳಿಕ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ. 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಒಟ್ಟು 37 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Ranya Rao Case: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು; ಒಂದು ವರ್ಷದ ಬಳಿಕ ಜೈಲಿನಿಂದ ಬಿಡುಗಡೆ ಭಾಗ್ಯ

ನಟಿ ರನ್ಯಾರಾವ್‌ಗೆ ಬಿಗ್ ರಿಲೀಫ್; ಕೋರ್ಟ್‌ನಿಂದ ಜಾಮೀನು ಮಂಜೂರು

gold smuggling case: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿ, ಕಳೆದೊಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದ್ದು, ಸಂಜೆ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಹಿಂದೂ ದೇವರ ಅವಹೇಳನ, ಮೈಮುಟ್ಟಿ ಕಿರುಕುಳ; ಬಗೆದಷ್ಟೂ ಹೊರ ಬೀಳುತ್ತಿದೆ ನಾಸಿಕ್‌ನ ಟಿಸಿಎಸ್ ಕಂಪನಿಯ ಕರ್ಮಕಾಂಡ

ಟಿಸಿಎಸ್‌ ಕಚೇರಿಯ ಕರಾಳತೆ ಬಿಚ್ಚಿಟ್ಟ ಸಂತ್ರಸ್ತರು

TCS Nashik Case: ನಾಸಿಕ್‌ನ ಟಿಸಿಎಸ್‌ ಕಂಪನಿಯಲ್ಲಿ ನಡೆದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯರ ಪೈಕಿ ಓರ್ವ ಮಹಿಳೆ ತಾವು ಅನುಭವಿಸಿದ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತರು ನೀಡಿದ ದೂರುಗಳ ಆಧಾರದ ಮೇಲೆ ಒಂಬತ್ತು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಇಂದೋರ್‌ನ ಉದ್ಯಮಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಪೊಲೀಸರು

ಉದ್ಯಮಿಯ ಮನೆಗೆ ಕನ್ನ ಹಾಕಿದ ಪೊಲೀಸರು

ಉದ್ಯಮಿಯೊಬ್ಬರ ಮನೆಯಿಂದ ಪೊಲೀಸರೇ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಇಂದೋರ್‌ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಗೊಳಿಸಲಾಗಿದೆ. ವಾರೆಂಟ್ ಸಂಬಂಧಿಸಿ ದಾಳಿ ನಡೆಸಿದಾಗ ಪೊಲೀಸರು ಸುಮಾರು 35 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

Physical Abuse: ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lover murder case: 4.5 ಲಕ್ಷದ ಬೈಕ್‌ ಕೊಡಿಸಿದ ಪ್ರೇಯಸಿಯೇ ಕೈಕಾಲು ಕಟ್ಟಿಹಾಕಿ, ಬೆಂಕಿ ಹಚ್ಚಿ ಪ್ರಿಯಕರನ ಕೊಂದಳೇಕೆ?

4.5 ಲಕ್ಷದ ಬೈಕ್‌ ಕೊಡಿಸಹೊರಟ ಪ್ರೇಯಸಿಯೇ ಬೆಂಕಿ ಹಚ್ಚಿ ಕೊಂದಳೇಕೆ?

ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.

Shivamogga Trial Blast Case: ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅರಾಫತ್ ಅಲಿಗೆ 6 ವರ್ಷ ಜೈಲು

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ದೆಹಲಿಯಲ್ಲಿ 2023ರಲ್ಲಿ ಬಂಧಿಸಿದ್ದರು. ಈತ ವಿಚಾರಣೆ ವೇಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಈತನಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ನಾಗಾ-ಕುಕಿ ಗುಂಪುಗಳ ನಡುವೆ ಭೀಕರ ಸಂಘರ್ಷ

ಮಣಿಪುರದಲ್ಲಿ ಮತ್ತೆ ಜನಾಂಗೀಯ ಸಂಘರ್ಷ

ಮಣಿಪುರದ ಸೇನಾಪತಿ ಜಿಲ್ಲೆಯ ಟಿ.ಖುಲ್ಲೆನ್ ಗ್ರಾಮದಲ್ಲಿ ನಾಗಾ ಮತ್ತು ಕುಕಿ ಸಶಸ್ತ್ರ ಗುಂಪುಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಇಬ್ಬರು ನಾಗಾ ನಾಗರಿಕರ ಹತ್ಯೆಯ ನಂತರ ಉದ್ವಿಗ್ನತೆ ಹೆಚ್ಚಿದ್ದು, ಬಂದ್, ರಸ್ತೆ ತಡೆ ಮತ್ತು ಪ್ರತಿಭಟನೆಗಳಿಂದ ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.

Bengaluru grenade case: ಬೆಂಗಳೂರಿನಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರಿನಲ್ಲಿ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ಕೋರ್ಟ್‌ ತೀರ್ಪು ನೀಡಿದೆ. ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಆರೋಪಿಗಳು ಸಜೀವ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

Betting Case: ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; FIR ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; ತನಿಖೆಗೆ ಕೋರ್ಟ್ ಆದೇಶ

ತುಮಕೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಕಟ್ಟುವ ಹೇಳಿಕೆ ನೀಡಿದ್ದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸಂಕಷ್ಟ ಎದುರಾಗಿದೆ. ಈ ಕುರಿತು ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ಬೆಂಗಳೂರಿನ ಕೋರ್ಟ್‌ ಆದೇಶ ಹೊರಡಿಸಿದೆ.

ದೆಹಲಿಯಲ್ಲಿ ಪಾಕಿಸ್ತಾನದ ಐಎಸ್‌ಐ ಸಂಪರ್ಕ ಹೊಂದಿರುವ ಮಾಡ್ಯೂಲ್ ಪತ್ತೆ: ದೇಶದಲ್ಲಿ ಗ್ರೆನೇಡ್ ದಾಳಿ ನಡೆಸಲು ಸಂಚು

ಪಾಕ್‌ನ ಐಎಸ್‌ಐ ಸಂಪರ್ಕ ಹೊಂದಿರುವ ಮಾಡ್ಯೂಲ್ ಪತ್ತೆ

Delhi ISI module busted: ದೆಹಲಿ ಪೊಲೀಸರ ವಿಶೇಷ ಸೆಲ್ ಪಾಕಿಸ್ತಾನ ಮೂಲದ ಐಎಸ್‌ಐ ಪ್ರಾಕ್ಸಿ ಶಹಜಾದ್ ಭಟ್ಟಿಗೆ ಸಂಬಂಧಿಸಿದ ಇಬ್ಬರನ್ನು ಬಂಧಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗುರಿಯಾಗಿಸಿಕೊಂಡ ಹತ್ಯೆಗಳು ಮತ್ತು ಗ್ರೆನೇಡ್ ದಾಳಿಗಳನ್ನು ನಡೆಸುವ ಪಿತೂರಿಯಲ್ಲಿ ಇವರ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಬಂಧಿತ ವ್ಯಕ್ತಿಗಳನ್ನು ರಾಜವೀರ್ ಮತ್ತು ವಿವೇಕ್ ಬಂಜಾರ ಎಂದು ಗುರುತಿಸಲಾಗಿದೆ.

Bengaluru Murder Case: ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ನಡೆದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಯುವಕ ತಾನಾಗಿಯೇ ಬೆಂಕಿ ಹಚ್ಚಿಕೊಂಡಿದ್ದ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದ ಯುವತಿಯ ಬಣ್ಣ ಸಿಸಿಟಿವಿ ದೃಶ್ಯಾವಳಿಗಳಿಂದ ಬಯಲಾಗಿದೆ. ಯುವಕನ ಕೈ-ಕಾಲು ಕಟ್ಟಿ, ಪೆಟ್ರೋಲ್‌ ಸುರಿದು ಪ್ರೇಯಸಿಯೇ ಬೆಂಕಿ ಹಚ್ಚಿದ್ದಾಳೆ ಎಂದು ತಿಳಿದುಬಂದಿದೆ.

ಹದಿಹರೆಯದ ಬಾಲಕಿಯನ್ನು ಹತ್ಯೆ ಮಾಡಿ, ಮುಖದ ಮೇಲೆ ಆ್ಯಸಿಡ್ ಸುರಿದ ತಂದೆ; ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ

ಬಾಲಕಿಯನ್ನು ಹತ್ಯೆ ಮಾಡಿ, ಮುಖದ ಮೇಲೆ ಆ್ಯಸಿಡ್ ಸುರಿದ ತಂದೆ

Crime News: ನಾಪತ್ತೆಯಾದ 16 ವರ್ಷದ ಬಾಲಕಿಯನ್ನು ಹುಡುಕಲು ಆರಂಭಿಸಿದ ಘಟನೆಯೊಂದರಲ್ಲಿ ಆಕೆಯ ತಂದೆಯೇ ಕೊಲೆಗಾರ ಎನ್ನುವುದು ತಿಳಿದು ಬಂದಿದೆ. ಉತ್ತರ ಪ್ರದೇಶದ ಲಖನೌನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಪಾಪಿ ಗುರುತು ಮರೆಮಾಡಲು ಆಕೆಯ ಮುಖದ ಮೇಲೆ ಆ್ಯಸಿಡ್ ಸುರಿದಿದ್ದಾನೆ.

Bengaluru News: ಬೆಂಗಳೂರಿನಲ್ಲಿ ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮಾತನಾಡಲು ಮನೆಗೆ ತೆರಳಿದ್ದಾಗ, ಇಬ್ಬರ ನಡುವೆ ಜಗಳವಾಗಿದೆ. ಇದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Sirsi Doctor Murder Case: ಶಿರಸಿ ವೈದ್ಯನ ಕೊಲೆ ಪ್ರಕರಣದ ಆರೋಪಿ ಅರೆಸ್ಟ್: 15 ಲಕ್ಷ ರೂ.‌ ಮೌಲ್ಯದ ಚಿನ್ನಾಭರಣ, 50 ಸಾವಿರ ನಗದು ವಶಕ್ಕೆ

ಶಿರಸಿ ವೈದ್ಯನ ಕೊಲೆ ಆರೋಪಿ ಅರೆಸ್ಟ್: ಚಿನ್ನಾಭರಣ, ನಗದು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಡಾ. ರಮೇಶ್ ಎಫ್. ಕಲ್ಗುಟ್ಕರ್ (51) ಎಂಬ ಆಯುರ್ವೇದ ವೈದ್ಯನ ಕೊಲೆಯಾಗಿತ್ತು. ಭಾನುವಾರ ಸಂಜೆ ಘಟನೆ ಬೆಳಕಿಗೆ ಬಂದಿತ್ತು‌. ಬಳಿಕ ಪ್ರಕರಣ ದಾಖಲಿಸಿಕೊಂಡ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಶಂಕಿತ ಆರೋಪಿಯನ್ನು ಸೆರೆಹಿಡಿದಿದ್ದಾರೆ.

Zombie Drug: ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಎದುರಾಯ್ತು ಸಂಕಷ್ಟ

ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಬಂತು ಸಂಕಷ್ಟ

ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧ ಬಾಗಲೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಈ ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ. ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ಶೂಗಾಗಿ ಜಗಳ: ಕಿರಿಯ ಸಹೋದರನನ್ನೇ ಕೊಂದ ಯುವಕ

ಕ್ಷುಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ಷುಲಕ ಕಾರಣಕ್ಕಾಗಿ ಸಹೋದರರ ಮಧ್ಯೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೊಸ ಶೂ ವಿಚಾರವಾಗಿ ಸಹೋದರರ ಮಧ್ಯೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಹಿರಿಯ ಸಹೋದರನು ಕಿರಿಯ ಸಹೋದರನನ್ನು ಕತ್ತರಿಯಿಂದ ಹಲ್ಲೆ ಮಾಡಿ ಕೊಂದಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.

Murder case: ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಮೃತ ದುರ್ದೈವಿ. ಈ ಘಟನೆಯ ಕ್ರೌರ್ಯ ಕಂಡು ಕನ್ನೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮೃತನ ದೊಡ್ಡಪ್ಪನ ಮಗ ಸದಾಶಿವ ಪಡಸಲಗಿಯೇ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Loading...