ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಲಾಕ್‌ ತುಂಡಾಗಿ 40 ಅಡಿ ಮೇಲಿಂದ ಬಿದ್ದ ಯುವಕ; ಗಂಭೀರ ಗಾಯ! Video

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ತುಂಡಾಗಿ ಬಿದ್ದ ಯುವಕ! Video

Dandeli Zipline Accident: ದಾಂಡೇಲಿಯ 'ಸ್ಟರ್ಲಿಂಗ್​​ ರಿವರ್​ ರೆಸಾರ್ಟ್'ನಲ್ಲಿ ಜಿಪ್‌ಲೈನ್​ ಲಾಕ್‌ ತುಂಡಾಗಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರಿಂದ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದಿದ್ದು, ನರಗಳಿಗೂ ತೀವ್ರ ಹಾನಿಯಾಗಿದೆ ಎನ್ನಲಾಗಿದೆ. ಗಾಯಾಳುವನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಬಾರಿ ಪ್ರಯತ್ನಿಸಿಯೂ ಸರ್ಕಾರಿ ಕೆಲಸ ಸಿಗದ ಹತಾಶೆ; ಎಂಜಿನಿಯರಿಂಗ್‌ನಲ್ಲಿ ಗೋಲ್ಡ್‌ ಮೆಡಲ್‌ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ

ಎಂಜಿನಿಯರಿಂಗ್‌ನಲ್ಲಿ ಗೋಲ್ಡ್‌ ಮೆಡಲ್‌ ಪಡೆದ ವಿದ್ಯಾರ್ಥಿ ಆತ್ಮಹತ್ಯೆ

Uttar Pradesh News: ಸರ್ಕಾರಿ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಬಿ.ಟೆಕ್‌ನಲ್ಲಿ ಚಿನ್ನದ ಪದಕ ಪಡೆದ 23 ವರ್ಷದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಆನಂದ್‌ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿಯ ಮೃತದೇಹ ಪತ್ತೆ; ತಿರುಪತಿ ಯಾತ್ರೆ ಮುಗಿಸಿ ಬಂದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಬೆಂಗಳೂರಿನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಶವವಾಗಿ ಪತ್ತೆ

Paramedical student self-harming: ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಉದಯ್ ಗೌಡ ಮೃತದೇಹ ಪತ್ತೆಯಾಗಿದೆ. ಉದಯ್‌ ವಾಸವಾಗಿದ್ದ ಮನೆಯಿಂದ ಕೆಟ್ಟ ವಾಸನೆ ಬರಲು ಪ್ರಾರಂಭಿಸಿದ ನಂತರ ನೆರೆಹೊರೆಯವರು ಆತನ ಕುಟುಂಬಕ್ಕೆ ಮಾಹಿತಿ ನೀಡಿದರು. ಕೊಠಡಿ ತೆರೆದಾಗ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂತು. ಸುಮಾರು ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

"ನೀನು ಕಪ್ಪಗಿದ್ದೀಯಾ, ನಿನ್ನ ಬಣ್ಣವೇ ಸರಿ ಇಲ್ಲ"; ಸಹಪಾಠಿ ಹೇಳಿಕೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಚರ್ಮದ ಬಣ್ಣದ ಕುರಿತು ಅವಹೇಳನಕಾರಿಕೆ ಹೇಳಿಕೆ: ಬಾಲಕ ಆತ್ಮಹತ್ಯೆ

boy dies by self-harming: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯಲ್ಲಿ ಸಹಪಾಠಿಯೊಂದಿಗೆ ನಡೆದ ಸಣ್ಣ ಜಗಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ. ರಾಹುಲ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಜೊತೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆತ್ತಲಾಗಿ ದೇವಸ್ಥಾನದೊಳಗೆ ಪ್ರವೇಶಿಸಿ ವಿಗ್ರಹದ ಜತೆಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ; 1 ಲಕ್ಷ ರುಪಾಯಿ ಮನೆ ಬಾಡಿಗೆ ಪಾವತಿಸುತ್ತಿದ್ದವಳು ಇದ್ದಕ್ಕಿದ್ದಂತೆ ಸಾವಿಗೆ ಶರಣಾಗಿದ್ದು ಏಕೆ?

ದೇವಿಯ ವಿಗ್ರಹದೊಂದಿಗೆ ಕೊಳಕ್ಕೆ ಜಿಗಿದ ಮಹಿಳೆ ಸಾವು

Woman jumping into a temple pond: ಮಹಿಳೆ ಬೆತ್ತಲೆಯಾಗಿ ದೇವಸ್ಥಾನಕ್ಕೆ ಪ್ರವೇಶಿಸಿದ್ದಾಳೆ. ನಂತರ ದೇವಿಯ ವಿಗ್ರಹವನ್ನು ಎತ್ತಿಕೊಂಡು ಕೊಳದ ಬಳಿಗೆ ನಡೆದುಕೊಂಡು ಹೋಗಿದ್ದಾಳೆ. ನಂತರ ಆಕೆ ವಿಗ್ರಹದೊಂದಿಗೆ ಕೆರೆಗೆ ಹಾರಿದ್ದಾಳೆ ಎನ್ನಲಾಗಿದೆ. ಆಕೆಯ ಮೃತದೇಹವನ್ನು ಪತ್ತೆಹಚ್ಚಲಾಗಿದ್ದರೂ, ವಿಗ್ರಹ ಇನ್ನೂ ಕಾಣೆಯಾಗಿದೆ.

ಪ್ರಿಯಕರನೊಂದಿಗೆ ಸೇರಿ ಹಾವಿನಿಂದ ಕಚ್ಚಿಸಿ ಪತಿಯನ್ನೇ ಕೊಂದ ಪತ್ನಿ: ಭೀಕರ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಪತ್ನಿ-ಪ್ರಿಯಕರನಿಂದ ಪತಿಯ ಭೀಕರ ಕೊಲೆ; ಕೃತ್ಯ ಬಯಲಾಗಿದ್ದೇಗೆ?

ಉತ್ತರ ಪ್ರದೇಶದ ಮೀರತ್‌ನಲ್ಲಿ ಹಾವಿನ ಕಡಿತದಿಂದ ಸಾವು ಎನಿಸಿಕೊಂಡಿದ್ದ ಪ್ರಕರಣವು ಇದೀಗ ಕೊಲೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಪತ್ನಿ, ಆಕೆಯ ಪ್ರಿಯಕರ ಹಾಗೂ ಇಬ್ಬರು ಸೇರಿ ನಿದ್ದೆ ಮಾತ್ರೆ ನೀಡಿ ವಿಷಪೂರಿತ ಹಾವಿನಿಂದ ಪತಿಯನ್ನು ಕಚ್ಚಿಸಿ ಕೊಲೆ ಮಾಡಿರುವುದು ಗೊತ್ತಾಗಿದೆ. ಅಕ್ರಮ ಸಂಬಂಧ ಹಾಗೂ 20 ಲಕ್ಷ ರುಪಾಯಿ ವಿಮಾ ಹಣದ ಆಸೆಯೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು; ಪ್ರಧಾನಿ ನರೇಂದ್ರ ಮೋದಿ ಸಂತಾಪ

ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ: 8 ಸಾವು

Ahmedabad Firecracker Factory Blast: ಗುಜರಾತ್‌ನ ಅಹಮದಾಬಾದ್‌ನ ವಸ್ತ್ರಾಲ್ ಪ್ರದೇಶದಲ್ಲಿದ್ದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರವಾನಗಿ ರದ್ದಾಗಿದ್ದರೂ ಅಕ್ರಮವಾಗಿ ಕಾರ್ಖಾನೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ.

ವಿಷಾನಿಲ, ಬಾಂಬ್ ಪರೀಕ್ಷೆ: ಗುಜರಾತ್‌ನಲ್ಲಿ ಐವರು ಜೈಶ್ ಭಯೋತ್ಪಾದಕರ ಬಂಧನ

ಗುಜರಾತ್‌ನಲ್ಲಿ ಜೈಶ್ ಭಯೋತ್ಪಾದಕರ ಬಂಧನ

ಗುಜರಾತ್‌ನಲ್ಲಿ ಐವರು ಜೈಶ್ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಇವರು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ತರಬೇತಿ ಪಡೆದು ಬಾಂಬ್ ತಯಾರಿಕೆ, ವಿಷಕಾರಿ ಅನಿಲ ಬಳಕೆ ಸೇರಿದಂತೆ ಭಯೋತ್ಪಾದನೆಗೆ ಸಂಬಂಧಿಸಿದ ಕಾರ್ಯವಿಧಾನಗಳನ್ನು ಕಲಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕಚೇರಿ ಧ್ವಂಸ

ಅಭಿಷೇಕ್ ಬ್ಯಾನರ್ಜಿ ಕಚೇರಿ ಕೆಡವಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಹಲವು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇದೀಗ ಸಂಸದ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಸಂಸದ ಕಚೇರಿ ಮೇಲೆ ಬುಲ್ಡೋಜರ್ ಕ್ರಮಕೈಗೊಳ್ಳಲಾಗಿದೆ.

ಸಲ್ಮಾನ್‌ ಖಾನ್‌ ಬಳಿಕ ಬಾಲಿವುಡ್ ನಟ ಅಮೀರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಜೀವ ಬೆದರಿಕೆ: ಸೋಷಿಯಲ್‌ ಮೀಡಿಯಾ ಪೋಸ್ಟ್ ಮೂಲಕ ಧಮ್ಕಿ

ಅಮೀರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಜೀವ ಬೆದರಿಕೆ

Aamir Khan Receives Threat: ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಬೆದರಿಕೆ ಹಾಕಿದೆ. ಅಮೀರ್ ಖಾನ್ ದೇಶದಲ್ಲಿ ಲವ್ ಜಿಹಾದ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಗುಂಪು ಆರೋಪಿಸಿದ್ದು, ಇದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದೆ.

ಬಾಡಿಗೆ ಮನೆಯಲ್ಲಿ ಒಂದೇ ಕುಟುಂಬದ ಐವರ ಮೃತದೇಹ ಪತ್ತೆ; ದೇಶವನ್ನೇ ಬೆಚ್ಚಿಬೀಳಿಸಿದ ಈ ಘಟನೆಗೆ ಕಾರಣವಾಗಿದ್ದೇನು?

ಬಾಡಿಗೆ ಮನೆಯಲ್ಲಿ ಒಂದೇ ಕುಟುಂಬದ ಐವರ ಮೃತದೇಹ ಪತ್ತೆ

Crime News: ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿ ಒಂದೇ ಕುಟುಂಬದ ಐವರು ಬಾಡಿಗೆ ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಮೃತರನ್ನು ಸಾಜಿದ್ ಅಲಿ ಅಲಿಯಾಸ್ ಸಜ್ಜು (50), ಅವರ ಪತ್ನಿ ರಬಿಯಾ ಬಾನೋ (45), ಮಗ ಇರ್ಷಾದ್ ಅಲಿ (20) ಮತ್ತು ಇಬ್ಬರು ಅಪ್ರಾಪ್ತ ಪುತ್ರಿಯರು ಎಂದು ಗುರುತಿಸಲಾಗಿದೆ. ಇದುವರೆಗೆ ಕಾರಣ ತಿಳಿದು ಬಂದಿಲ್ಲ.

14 ವರ್ಷದ ಅತ್ಯಾಚಾರ ಸಂತ್ರಸ್ತೆ ಪರ ಕೇರಳಂ ಹೈಕೋರ್ಟ್‌ ತೀರ್ಪು; 28 ವಾರಗಳ ಗರ್ಭಪಾತಕ್ಕೆ  ಅನುಮತಿ

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ

ಅತ್ಯಾಚಾರ ಸಂತ್ರಸ್ತೆಗೆ ಕೇರಳ ಹೈಕೋರ್ಟ್ ಗರ್ಭಪಾತ ಮಾಡಲು ಅನುಮತಿಯನ್ನು ನೀಡಿದೆ. 28 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಸಂತ್ರಸ್ತೆಯನ್ನು ದುಃಖವನ್ನು ಗಣನೆಗೆ ತೆಗೆದುಕೊಂಡು ಈ ಆದೇಶವನ್ನು ನೀಡಿರುವುದಾಗಿ ತಿಳಿಸಿರುವ ನ್ಯಾಯಾಲಯ ಇದಕಾಗಿ ತಕ್ಷಣವೇ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದೆ.

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು ಹೂತುಹಾಕಿದ್ದ 16 ವರ್ಷದ ಬಾಲಕನ ಬಂಧನ

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು 16 ವರ್ಷದ ಬಾಲಕ

ಅಪ್ರಾಪ್ತ ಬಾಲಕನೊಬ್ಬ ಜುಲೈ 10 ರಂದು ತನ್ನ ಲಿವ್ ಇನ್ ಪಾರ್ಟ್ನರ್ ಆಗಿದ್ದ 16 ವರ್ಷದ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು ಎಂದು ತಿಳಿದು ಬಂದಿದೆ.

Kanakapura murder: ಪ್ರೇಯಸಿಯನ್ನು ಗುಂಡಿಟ್ಟು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ಪ್ರೇಯಸಿಯನ್ನು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಶಯಗೊಂಡ ಯುವಕ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿದ್ದಾನೆ.

Bengaluru girl dies: ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು; ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ

ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು

ಬೆಂಗಳೂರು ನಗರದ ಬಾಣಸವಾಡಿಯಲ್ಲಿ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ಪೋಷಕರು ತಿಳಿಸಿದ್ದಾರೆ. ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ ವ್ಯಕ್ತವಾಗಿದೆ.

Belagavi News: ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಅರೆಸ್ಟ್‌; ಇಲಿಪಾಷಾಣ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್‌ ನಿನ್ನೆ ಕೊಲೆ ಮಾಡಿದ್ದ.

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮುರ್ಷಿದಾಬಾದ್‌ನ ಬೆರ್ಹಾಂಪೋರ್ ಪ್ರದೇಶದಲ್ಲಿ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್‌ನಲ್ಲಿ ಶುಕ್ರವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ.

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

150 ಕೋಟಿ ರುಪಾಯಿ ಆಸ್ತಿಗಾಗಿ ಹರಿಯಿತು ನೆತ್ತರು: ಕುಡಿದ ಮತ್ತಿನಲ್ಲಿ ತಂದೆಯನ್ನೇ ಗುಂಡಿಕ್ಕಿ ಕೊಂದ ಪಾಪಿ ಪುತ್ರ

150 ಕೋಟಿ ರುಪಾಯಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪುತ್ರ

Crime News: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮೋದಿನಗರದಲ್ಲಿ ₹150 ಕೋಟಿ ಮೌಲ್ಯದ ಆಸ್ತಿ ವಿವಾದ ದುರಂತ ಅಂತ್ಯ ಕಂಡಿದೆ. ಮದ್ಯದ ಅಮಲಿನಲ್ಲಿದ್ದ 32 ವರ್ಷದ ಪುತ್ರ ನಿಖಿಲ್ ತನ್ನ ತಂದೆ ಹರಿಯೋಂ ಚೌಧರಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈಗಾಗಲೇ 25 ಬಿಘಾ ಜಮೀನು ಮತ್ತು ಅಂಗಡಿಗಳನ್ನು ಪಡೆದಿದ್ದರೂ ಉಳಿದ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Bantwal Murder: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ! Video

ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ!

ಯುವತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇಂದು ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಹಿಂಬಾಲಿಸಿದ ಆರೋಪಿ, ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Viral Video: ಕ್ಷುಲ್ಲಕ ಕಾರಣಕ್ಕೆ ಲಿಫ್ಟ್‌ನಲ್ಲೇ ಹೊಡೆದಾಡಿದ ಅಪಾರ್ಟ್‌ಮೆಂಟ್ ಮಾಲಕರು; ದೊಡ್ಡವರ ಸಣ್ಣ ಗುಣ ಎಂದ ನೆಟ್ಟಿಗರು

ಅಪಾರ್ಟ್‌ಮೆಂಟ್ ವಿವಾದಕ್ಕೆ ಲಿಫ್ಟ್‌ನಲ್ಲೇ ಹೊಡೆದಾಟ: ವಿಡಿಯೊ ವೈರಲ್

ಅಪಾರ್ಟ್‌ಮೆಂಟ್ ಮಾಲಕರ ಸಂಘದ ಸದಸ್ಯರಿಬ್ಬರು ಹಳೆಯ ವೈಷಮ್ಯದ ವಿಚಾರವಾಗಿ ಲಿಫ್ಟ್ ಒಳಗೆಯೇ ಹೊಡೆದಾಡಿಕೊಂಡ ಘಟನೆ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ GS-7 ಹೈ-ರೈಸ್ ಸೊಸೈಟಿಯ ಲಿಫ್ಟ್ ಒಳಗೆ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್ ಮಾಲಕರ ಸಂಘದ ಇಬ್ಬರು ಮಾಜಿ ಪದಾಧಿಕಾರಿಗಳು ಹಲ್ಲೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಘಟನೆ ವಿಡಿಯೊ ವೈರಲ್ ಆಗಿದೆ.

Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದ ಪತಿ!

ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದ ತಮ್ಮ!

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Loading...