ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಪತಿಯೊಂದಿಗೆ ಕಲಹ: 4  ವರ್ಷದ ಮಗಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

4 ವರ್ಷದ ಮಗಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪತಿಯೊಂದಿಗೆ ಜಗಳ ಮಾಡಿಕೊಂಡ ಪತ್ನಿಯೊಬ್ಬಳು ತನ್ನ 4 ವರ್ಷ ಮಗಳು ಜತೆಗೆ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಫೋನ್‌ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ.

ಪತ್ನಿಯನ್ನು ಕೊಂದು ಪೊಲೀಸರ ಮುಂದೆ ಶರಣಾದ ವ್ಯಕ್ತಿ

ಪತ್ನಿಯನ್ನು ಕೊಂದು ಶರಣಾದ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಪೊಲೀಸರ ಮುಂದೆ ಶರಣಾದ ಘಟನೆ ಕಾನ್ಪುರದ ಮಹಾರಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿದ ನಾಲ್ಕು ಗಂಟೆಗಳ ಬಳಿಕ ಪೊಲೀಸರ ಮುಂದೆ ಶರಣಾದ ಆರೋಪಿ, ಕೊಲೆ ಮಾಡಿ ಓಡಿ ಹೋಗುವ ಬಗ್ಗೆ ಯೋಚಿಸಿದ್ದಾಗಿ ಹೇಳಿದ್ದಾನೆ.

ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿದರು, ಸಹಾಯಕ್ಕಾಗಿ ಅಂಗಲಾಚಿದರು ಯಾರೂ ಬರಲಿಲ್ಲ..

ಬಾಲಕನನ್ನು ವಿವಸ್ತ್ರಗೊಳಿಸಿ ಮೆರವಣಿಗೆ

16 ವರ್ಷದ ಬಾಲಕನನ್ನ ಬಾಲಕನನ್ನು ವಿವಸ್ತ್ರಗೊಳಿಸಿ, ಹಗ್ಗಗಳಿಂದ ಕಟ್ಟಿ 1.5 ಕಿ.ಮೀ. ದೂರದವರೆಗೆ ಬೆತ್ತಲೆಯಾಗಿ ಮೆರವಣಿಗೆ ಮಾಡಿಸಿದ ಘಟನೆ ಉಜ್ಜಯಿನಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಬಾಲಕಿಯ ಮನೆಯವರು ಈ ರೀತಿ ಮಾಡಿದ್ದಾರೆ. ಇವರಿಬ್ಬರು ಮೂರು ತಿಂಗಳ ಹಿಂದೆ ಓಡಿ ಹೋಗಿದ್ದು, ಬಳಿಕ ಪೊಲೀಸರ ಮುಂದೆ ಶರಣಾಗಿದ್ದರು.

10 ಕೋಟಿ ರುಪಾಯಿ ನೀಡುವಂತೆ ಪಂಜಾಬಿ- ಬಾಲಿವುಡ್ ಖ್ಯಾತ ಗಾಯಕನಿಗೆ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ

ಬಿಷ್ಣೋಯ್ ಗ್ಯಾಂಗ್ ನಿಂದ ಖ್ಯಾತ ಗಾಯಕನಿಗೆ ಬೆದರಿಕೆ

ಪಂಜಾಬಿ-ಬಾಲಿವುಡ್ ನ ಖ್ಯಾತ ಗಾಯಕ ಬಿ ಪ್ರಾಕ್ ಅವರಿಗೆ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಬಂದಿದೆ. ಆರೋಪಿಗಳು 10 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ನೆಲದಲ್ಲಿ ಹೂತು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಮೊಹಾಲಿ ಪೊಲೀಸರಿಗೆ ದೂರು ನೀಡಲಾಗಿದೆ. ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಮಾಜಿ ಸಚಿವ ರಾಜು ಗೌಡ ಕಾರು ಅಪಘಾತ; ಅಪಾಯದಿಂದ ಪಾರು

ಮಾಜಿ ಸಚಿವ ರಾಜು ಗೌಡ ಕಾರು ಅಪಘಾತ; ಅಪಾಯದಿಂದ ಪಾರು

ಆಂಧ್ರದ ವಿಶಾಖಪಟ್ಟಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ, ಹೈದರಾಬಾದ್‌ ಮಾರ್ಗದ ಮೂಲಕ ಹಿಂತಿರುವಾಗ ಯಾದಗಿರಿಯಲ್ಲಿ ಅಪಘಾತ ಸಂಭವಿಸಿದೆ. ಯಾದಗಿರಿಯ ಗಂಜ್ ಪ್ರದೇಶದ ಹೆದ್ದಾರಿಯಲ್ಲಿ ಟ್ರಕ್‌ ಒಂದು ಮಾಜಿ ಸಚಿವರ ಕಾರಿಗೆ ಹಿಂದಿನಿಂದ ಗುದ್ದಿದೆ. ಕಾರಿನ ಹಿಂಭಾಗ ಸಂಪೂರ್ಣ ನುಜ್ಜು, ಗುಜ್ಜಾಗಿದೆ.

Devanahalli Accident: ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್‌ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Street Dog Attack: ಅಟ್ಟಿಸಿಕೊಂಡು ಬಂದ ಬೀದಿ ನಾಯಿಗೆ ಬೈಕ್‌ ಸವಾರ ಬಲಿ

ಅಟ್ಟಿಸಿಕೊಂಡು ಬಂದ ಬೀದಿ ನಾಯಿಗೆ ಬೈಕ್‌ ಸವಾರ ಬಲಿ

ಬೈಕ್ ಅಪಘಾತ ಎಂದು ಭಾವಿಸಿ ಪೊಲೀಸರು ಸುಮ್ಮನಾಗಿದ್ದರು. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ನೋಡಿದಾಗ ಸಾವಿನ ರಹಸ್ಯ ಬಯಲಾಗಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಬೀದಿ ನಾಯಿಯೊಂದು ವಿಶ್ವನಾಥರನ್ನು ಅಟ್ಟಾಡಿಸಿಕೊಂಡು ಬಂದಿತ್ತು. ಅದರಿಂದ ತಪ್ಪಿಸಿಕೊಳ್ಳಲು ವಿಶ್ವನಾಥ್ ವೇಗವಾಗಿ ಬೈಕ್‌ ಓಡಿಸಿದ್ದಾರೆ. ಈ ವೇಳೆ ಮನೆಯ ಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿಶ್ವನಾಥ್ ಸಾವನಪ್ಪಿದ್ದಾರೆ.

Puneeth Kerehalli: ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು.

Uttara Kannada News: ಕಾರವಾರದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ನಡೆದಿತ್ತಾ ದೌರ್ಜನ್ಯ?

ಕಾರವಾರ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ದೌರ್ಜನ್ಯ?

ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದರೂ, ಈಗ ಪೋಷಕರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಮೃತ ರಿಶೆಲ್ ತಾಯಿ ರೀನಾ ಕ್ರಿಸ್ತೋದ್ ಡಿಸೋಜಾ ಅವರು ಪೊಲೀಸರಿಗೆ ನೀಡಿರುವ ಮನವಿ ಪತ್ರದಲ್ಲಿ, 'ಮಗಳ ಮೃತದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಆಕೆಯ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆದಿರುವ ಬಲವಾದ ಸಂಶಯ ನಮಗಿದೆ' ಎಂದು ಉಲ್ಲೇಖಿಸಿದ್ದಾರೆ.

Fake Milk: ರಾಸಾಯನಿಕ ಬಳಸಿ ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕೆ, 8 ಮಂದಿ ಬಂಧನ

ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಜಾಲ ಪತ್ತೆ, 8 ಮಂದಿ ಬಂಧನ

ಕೆಜಿಎಫ್ ನಗರದ ಬಳ್ಳಗೆರೆ ಹೊರವಲಯದ ಗ್ರಾಮದ ತೋಟದ ಮನೆಯಲ್ಲಿ ಪಾಮ್ ಆಯಿಲ್ ಹಾಗೂ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿಕೊಂಡು ಅಕ್ರಮವಾಗಿ ನಕಲಿ ಹಾಲು ತಯಾರಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅಂಡರ್‌ಸನ್ ಪೇಟೆ ಪೊಲೀಸರು ದಾಳಿ ಮಾಡಿದ್ದಾರೆ. ಒಂದು ಲೀಟರ್ ಮಿಶ್ರಣದಿಂದ 20 ಲೀಟರ್ ಹಾಲು ತಯಾರು ಮಾಡಲಾಗುತ್ತಿತ್ತು.

ರಕ್ತದ ಮಡುವಿನಲ್ಲಿ ಬಾಲಕ ಬಿದ್ದು ಒದ್ದಾಡಿದರೂ, ಮೀನು ಹೆಕ್ಕುವಲ್ಲಿ ಬ್ಯುಸಿಯಾದ ಜನ; ಛೇ ಇದೆಂತಾ ಅಮಾನವೀಯ ಘಟನೆ

ರಕ್ತದ ಮಡುವಿನಲ್ಲಿ ಬಾಲಕ ಬಿದ್ದಿದ್ದರೆ, ಮೀನು ಹೆಕ್ಕುವಲ್ಲಿ ಬ್ಯುಸಿಯಾದ ಜನ

people loot fish: ಜನರು ಮಾನವೀಯತೆಯನ್ನೇ ಮರೆತ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟು, ಅವನ ಮೃತದೇಹ ಸ್ಥಳದಲ್ಲೇ ಬಿದ್ದಿದ್ದರೂ ಅಲ್ಲಿದ್ದ ಕೆಲವರು ಸಹಾಯ ಮಾಡುವುದನ್ನು ಬಿಟ್ಟು ಮೀನುಗಳನ್ನು ಕಳ್ಳತನ ಮಾಡುವುದರಲ್ಲಿ ನಿರತರಾಗಿದ್ದರು. ಈ ಅಮಾನವೀಯ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಮಾಜದ ಹೊಣೆಗಾರಿಕೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ದ್ವಿಚಕ್ರ ವಾಹನಕ್ಕೆ ಸಿಲುಕಿದ ಗಾಳಿಪಟದ ದಾರ;  ಫ್ಲೈಓವರ್‌ನ 70 ಅಡಿ ಎತ್ತರದಿಂದ ಬಿದ್ದು ದಂಪತಿ, ಪುತ್ರಿ ಸಾವು

ಗಾಳಿಪಟದ ದಾರಕ್ಕೆ ಸಿಲುಕಿ ದಂಪತಿ, ಪುತ್ರಿ ಸಾವು

kite string accident: ಹಬ್ಬದ ಸಂಭ್ರಮದ ನಡುವೆ ಮತ್ತೊಂದು ಹೃದಯವಿದ್ರಾವಕ ದುರ್ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಗಾಳಿಪಟದ ದಾರ ಸಿಲುಕಿಕೊಂಡ ಪರಿಣಾಮ, ಫ್ಲೈಓವರ್‌ನ ಸುಮಾರು 70 ಅಡಿ ಎತ್ತರದಿಂದ ದಂಪತಿ ಮತ್ತು ಅವರ ಪುತ್ರಿ ಕೆಳಗೆ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಗುಜರಾತ್‍ನ ಸೂರತ್ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಘಾತ ಮೂಡಿಸಿದೆ.

Self Harming: ತಿಂಗಳುಗಟ್ಟಲೆ ಮನೆಗೆ ಬಾರದ ಪತಿ, ನೊಂದು ಬೆಂಕಿ ಹಚ್ಚಿಕೊಂಡು ತಾಯಿ- ಮಗಳು ಆತ್ಮಹತ್ಯೆ

ಮನೆಗೆ ಬಾರದ ಪತಿ, ನೊಂದು ಬೆಂಕಿ ಹಚ್ಚಿಕೊಂಡು ತಾಯಿ- ಮಗಳು ಆತ್ಮಹತ್ಯೆ

ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತಿ ಗೋವಿಂದ್ ಪತ್ನಿ ಮತ್ತು ಮಗಳನ್ನು ಬಿಟ್ಟು ನೇಪಾಳಕ್ಕೆ ಹೋದರೆ 5-6 ತಿಂಗಳುಗಳ ಕಾಲ ಮರಳಿ ಬರುತ್ತಿರಲಿಲ್ಲ. ಇದರಿಂದ ಸೀತಾ ಮನಸ್ಸಿನಲ್ಲಿ ತುಂಬಾ ನೋವು ತುಂಬಿಕೊಂಡಿದ್ದರು. ಘಟನೆ ನಡೆದ ನಿನ್ನೆ ಸಂಜೆ ಕೂಡ ಪತಿ- ಪತ್ನಿ ಈ ವಿಚಾರದಲ್ಲಿ ಫೋನ್‌ನಲ್ಲಿ ಜಗಳವಾಡಿಕೊಂಡಿದ್ದರು.

Theft Case: ಹುಡುಗರಂತೆ ಡ್ರೆಸ್‌ ಮಾಡಿಕೊಂಡು ಕಳವು ಮಾಡುತ್ತಿದ್ದ ಕಳ್ಳಿಯರ ಸೆರೆ

ಹುಡುಗರಂತೆ ಡ್ರೆಸ್‌ ಮಾಡಿಕೊಂಡು ಕಳವು ಮಾಡುತ್ತಿದ್ದ ಕಳ್ಳಿಯರ ಸೆರೆ

ಇಬ್ಬರೂ ಆರೋಪಿಗಳು ಟ್ಯಾನರಿ ರಸ್ತೆಯ‌ ನಿವಾಸಿಗಳಾಗಿದ್ದು ಹುಡುಗರ ರೀತಿ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದರು. ನಿರ್ಜನ ಪ್ರದೇಶದ ಮನೆಗಳಲ್ಲಿ ಹಾಡುಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ‌. ಇವರು ಇಬ್ಬರೇನಾ, ಅಥವಾ ಇವರ ಹಿಂದೆ ದೊಡ್ಡ ಗ್ಯಾಂಗ್‌ ಇದೆಯಾ ಎಂಬುದು ಪತ್ತೆ ಆಗಬೇಕಿದೆ.

ತುಪ್ಪಕ್ಕಾಗಿ ಅತ್ತೆಯೊಂದಿಗೆ ಜಗಳ, ಸೊಸೆ ಆತ್ಮಹತ್ಯೆ: ಪೊಲೀಸರಿಂದ ತನಿಖೆ

ತುಪ್ಪಕ್ಕಾಗಿ ಅತ್ತೆಯೊಂದಿಗೆ ಜಗಳ, ಸೊಸೆ ಆತ್ಮಹತ್ಯೆ

Suicide case: ಕುಟುಂಬದ ಒಳಜಗಳವೇ ಜೀವ ಕಸಿದುಕೊಂಡ ದುರ್ಘಟನೆ ನಡೆದಿದೆ. ತುಪ್ಪ ವಿಷಯವಾಗಿ ಅತ್ತೆ–ಸೊಸೆ ನಡುವೆ ಉಂಟಾದ ಜಗಳದ ನಂತರ ಸೊಸೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿಯು ತನ್ನ ಅತ್ತೆಗೆ ಹೆಚ್ಚಿನ ತುಪ್ಪ ನೀಡಿದ್ದಕ್ಕೆ ಸಿಟ್ಟಿಗೆದ್ದ ಮಹಿಳೆ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ.

ಸೈಕಲ್ ಸವಾರಿ ಮಾಡುತ್ತಿದ್ದ 8 ವರ್ಷದ ಬಾಲಕ ಗಾಳಿಪಟದ ದಾರಕ್ಕೆ ಸಿಲುಕಿ ಸಾವು

ಗಾಳಿಪಟದ ದಾರ ಸಿಲುಕಿ 8 ವರ್ಷದ ಬಾಲಕ ಸಾವು

kite string accident: ಹಬ್ಬದ ಸಂಭ್ರಮದ ನಡುವೆ ನಡೆದ ದುರ್ಘಟನೆ ಜನರನ್ನು ಕಂಗೆಡಿಸಿದೆ. ಸೈಕಲ್ ಸವಾರಿ ಮಾಡುತ್ತಿದ್ದ 8 ವರ್ಷದ ಬಾಲಕ ಗಾಳಿಪಟದ ದಾರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದೇ ವೇಳೆ, ಹಬ್ಬದ ಸಂಭ್ರಮದ ನಡುವೆ ಗಾಳಿಪಟ ದಾರಕ್ಕೆ ಸಿಲುಕಿ ನಡೆದ ಸರಣಿ ಅಪಘಾತಗಳು, ಸಾರ್ವಜನಿಕರ ಸುರಕ್ಷತೆ ಕುರಿತಾಗಿ ಆತಂಕ ಮೂಡಿಸಿವೆ.

Murder Case: ಮುಂದಿನ ವಾರ ಮದುವೆಯಾಗಲಿದ್ದವ ಅಣ್ಣನ ಮಕ್ಕಳಿಂದಲೇ ಹತ್ಯೆ!

ಮುಂದಿನ ವಾರ ಮದುವೆಯಾಗಲಿದ್ದವ ಅಣ್ಣನ ಮಕ್ಕಳಿಂದಲೇ ಹತ್ಯೆ!

ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ.

Rajeev Gowda: ಇನ್ನೂ ಸೆರೆಸಿಗದ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ,‌ 9 ಕ್ರಿಮಿನಲ್‌ ಕೇಸ್‌ಗಳ ಸರದಾರ!

9 ಕ್ರಿಮಿನಲ್‌ ಕೇಸ್‌ ಸರದಾರ, ಕೈ ಮುಖಂಡ ರಾಜೀವ್‌ ಗೌಡ ಇನ್ನೂ ನಾಪತ್ತೆ

ಎರಡು ದಿನಗಳಿಂದ ರಾಜೀವ್‌ ಗೌಡ ತಲೆಮರೆಸಿಕೊಂಡಿದ್ದು, ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ರಾಜೀವ್ ಗೌಡ ಬಂಧನಕ್ಕಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಸರಕಾರಿ ನೌಕರರ ಪ್ರತಿಭಟನೆ ನಡೆಯಲಿದೆ.

Drowned: ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ಮೃತ ಬಾಲಕರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಸಂಕ್ರಾಂತಿ ಹಿನ್ನೆಲೆ ಕ್ವಾರಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ತಂದೆ ಎದುರಲ್ಲೇ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ದೇವಸ್ಥಾನಕ್ಕೆ 16 ಲಕ್ಷ ರುಪಾಯಿಯ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿಯ ಭೀಕರ ಕೊಲೆ; ಆಸ್ತಿಗಾಗಿ ಸಂಬಂಧಿಕರಿಂದಲೇ ಕೃತ್ಯ

ಬಾಗಲಕೋಟೆ ದಾನಜ್ಜಿಯ ಭೀಕರ ಕೊಲೆ

Bagalkot News: ಪರೋಪಕಾರಿ ಗುಣದಿಂದ ದಾನಜ್ಜು ಎಂದೇ ಖ್ಯಾತರಾಗಿದ್ದ ಬಾಗಲಕೋಟೆ ಜಿಲ್ಲೆಯ ಜಗದಾಳ ಗ್ರಾಮದ 80 ವರ್ಷದ ವೃದ್ಧೆ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ; ಅಂಥದ್ದೇನಾಯ್ತು?

ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಆತ್ಮಹತ್ಯೆ

Crime News: ಕೇರಳದ ಕೊಲ್ಲಂ ಜಿಲ್ಲೆಯ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನಲ್ಲಿ ಇಬ್ಬರು ಪ್ರಶಿಕ್ಷಣಾರ್ಥಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 17 ವರ್ಷದ ಕೋಝಿಕ್ಕೋಡ್ ನಿವಾಸಿ ಸಾಂಡ್ರಾ ಮತ್ತು 15 ವರ್ಷದ ತಿರುವನಂತಪುರ ನಿವಾಸಿ ವೈಷ್ಣವಿ ಎಂಬ ಇಬ್ಬರು ತರಬೇತುದಾರರು ತಮ್ಮ ಕೊಠಡಿಯಲ್ಲಿ ಸಾವಿಗೀಡಾಗಿದ್ದಾರೆ.

Murder Case: ಕೋಲಾರ: ಪ್ರೀತಿಗೆ ಒಪ್ಪದ ವಿವಾಹಿತೆಯನ್ನು ಇರಿದು ಕೊಂದ ಎರಡು ಮಕ್ಕಳ ತಂದೆ!

ಪ್ರೀತಿಗೆ ಒಪ್ಪದ ವಿವಾಹಿತೆಯನ್ನು ಇರಿದು ಕೊಂದ ಎರಡು ಮಕ್ಕಳ ತಂದೆ!

ಇಂಡಸ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿರಂಜೀವಿ ಸಾಲ ವಸೂಲಿ ಮಾಡಲು ತೆರಳಿದಾಗ ಸುಜಾತಾಳ ಪರಿಚಯವಾಗಿದೆ. ಈ ವೇಳೆ ನನ್ನನ್ನು ಪ್ರೀತಿಸುವಂತೆ ಚಿರಂಜೀವಿ, ಸುಜಾತಳ ಬೆನ್ನು ಬಿದ್ದಿದ್ದಾನೆ. ಆದರೆ ಸುಜಾತ ಇದಕ್ಕೆ ಒಪ್ಪಿಲ್ಲ. ದೂರ ಇರುವಂತೆ ಆತನಿಗೆ ಹಿತವಚನ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಆತ ಆಕೆಯ ಕೊಲೆ ಮಾಡಿದ್ದಾನೆ.

Karunya Ram: ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಮೇಕಪ್ ಆರ್ಟಿಸ್ಟ್‌ ಆಗಿರುವ ಸಹೋದರಿ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ.

Murder case: ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...