ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಪಶ್ಚಿಮ ಬಂಗಾಳ ಚುನಾವಣೆ: ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ, ಹೌರಾದಲ್ಲಿ ಘರ್ಷಣೆ

ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಛಪ್ರಾದ ಬೂತ್ ಸಂಖ್ಯೆ 53ರಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ ನಡೆಸಿರುವ ಟಿಎಂಸಿ ಕಾರ್ಯಕರ್ತರು ಕೋಲು, ಬಂದೂಕು, ಕಚ್ಚಾ ಬಾಂಬ್‌ ಹಿಡಿದುಕೊಂಡು ಬೆನ್ನಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

Udupi Bus Accident: ಉಡುಪಿಯಲ್ಲಿ ಭೀಕರ ಅಪಘಾತ; ಪೆಟ್ರೋಲ್‌ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರ ಸಾವು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ನಡೆದಿದೆ. ಹೆದ್ದಾರಿ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.

ಮದುವೆಯ ದಿನವೇ ಅಪಘಾತ; ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದ ವಧು ಸಾವು

ಮದುವೆಯ ದಿನವೇ ವಧು ಸಾವು

ಮದುವೆಯ ದಿನವೇ ಅಪಘಾತದಲ್ಲಿ ವಧು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬ್ಯೂಟಿ ಪಾರ್ಲರ್‌ಗೆ ಸಹೋದರನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ವಧು ರಸ್ತೆಗೆ ಬಿದಿದ್ದು, ಆಕೆಯ ಮೇಲೆಯೇ ಟ್ರೇಲರ್ ಟ್ರಕ್ ಹರಿದು ಹೋಗಿದೆ. ಇದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ ಕಿರುಕುಳಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮೂಲದ ಮಂಜುಳಾ (38) ಮೃತ ದುರ್ದೈವಿ.

Gudibande News: ಕಾಮಗಾರಿ ಬಿಲ್ ಮಾಡಲು 3.5 ಲಕ್ಷ ಲಂಚ: ಗುಡಿಬಂಡೆ ಪಿಡಿಒ ವೀಡಿಯೋ ವೈರಲ್

ಕಾಮಗಾರಿ ಬಿಲ್ ಮಾಡಲು 3.5 ಲಕ್ಷ ಲಂಚ

ತಾಲೂಕಿನ ತಿರುಮಣಿ ಮತ್ತು ಹಂಪಸಂದ್ರ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿ ಯಾಗಿ (ಪಿಡಿಒ) ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ, ಪಂಚಾಯಿತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾವತಿಸಲು ಗುತ್ತಿಗೆದಾರರಿಂದ ಸುಮಾರು 3 ಲಕ್ಷ 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಕ್ಯಾಮರಾದಲ್ಲಿ ಸಿಕ್ಕಿಬಿದ್ದಿದ್ದಾರೆ.

ಪಂಜಾಬ್ ರೈಲು ಹಳಿ ಸಮೀಪ ಸ್ಫೋಟ: ತನಿಖೆ ಚುರುಕು, ಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ; ಉಗ್ರರ ಕೃತ್ಯವೆ?

ಪಟಿಯಾಲ ರೈಲು ಹಳಿ ಬಳಿ ಸ್ಫೋಟ: ಅಪರಿಚಿತ ಶವ ಪತ್ತೆ

ಪಂಜಾಬ್‌ನ ಪಟಿಯಾಲದಲ್ಲಿ ರೈಲು ಹಳಿ ಸಮೀಪ ಲಘು ತೀವ್ರತೆಯ ಸ್ಫೋಟ ಸಂಭವಿಸಿ ಹಳಿ ಹಾನಿಗೊಳಗಾಗಿದೆ. ಘಟನಾ ಸ್ಥಳದ ಬಳಿ ಅಪರಿಚಿತ ಮೃತದೇಹವೂ ಪತ್ತೆಯಾಗಿದ್ದು, ಸಾವಿಗೂ ಸ್ಫೋಟಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸ್, ಜಿಆರ್‌ಪಿ, ಆರ್‌ಪಿಎಫ್ ಹಾಗೂ ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದು, ವಿಧ್ವಂಸಕ ಕೃತ್ಯದ ಕೋನವನ್ನೂ ಪರಿಶೀಲಿಸಲಾಗುತ್ತಿದೆ. ಈ ಘಟನೆ ಹಿನ್ನೆಲೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಅಕಾಲಿದಳ ಸರ್ಕಾರವನ್ನು ಟೀಕಿಸಿದೆ.

Amravati 2.0: ಅಮರಾವತಿ ಬಳಿಕ ಕೊಲ್ಲಾಪುರಲ್ಲೂ ಬಯಲಾಯ್ತು ಕರ್ಮಕಾಂಡ;  22 ವರ್ಷದ ಶಾಹಿದ್ ಸಮೀರ್‌ನಿಂದ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ

ಅಶ್ಲೀಲ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್; ಮತ್ತೊಂದು ಕರ್ಮಕಾಂಡ ಬಯಲು

ಮಹಾರಅಷ್ಟ್ರದ ಕೊಲ್ಲಾಪುರದಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿ, ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಹಿದ್ ಸಮೀರ್ ಸನಾದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ಗಳ ಧರ್ಮ ಕೇಳಿ ಚೂರಿ ಇರಿದ ಅನ್ಸಾರಿ; ಐಸಿಸ್ ಸೇರಲು ಬಯಸಿದಾತನ ಕರಾಳ ಇತಿಹಾಸ ಬಯಲು

ಸೆಕ್ಯೂರಿಟಿ ಗಾರ್ಡ್‌ಗಳ ಧರ್ಮ ಕೇಳಿ ಚೂರಿ ಇರಿತ

Lone wolf attack: ಇಬ್ಬರು ಭದ್ರತಾ ಸಿಬ್ಬಂದಿಗೆ 31 ವರ್ಷದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಮುಂಬೈಯಲ್ಲಿ ನಡೆದಿದೆ. ಅವರ ಧರ್ಮವನ್ನು ಕೇಳಿದ ನಂತರ ಈ ಕೃತ್ಯ ಎಸಗಿದನೆಂದು ಆರೋಪಿಸಲಾಗಿದ್ದು, ಇದನ್ನು ಒಂಟಿ ತೋಳ ಉಗ್ರ ದಾಳಿ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಅನ್ಸಾರಿ ಬರೆದ ಟಿಪ್ಪಣಿಗಳಲ್ಲಿ ಜಿಹಾದ್ ಮತ್ತು ಗಾಜಾ ಎಂಬ ಪದಗಳೂ ಕಂಡುಬಂದಿವೆ.

ಹೆಸರು ಬದಲಾವಣೆ, ಬುರ್ಖಾ ಧಾರಣೆಗೆ ತರಬೇತಿ, ಮಲೇಷ್ಯಾ ಉದ್ಯೋಗದ ಆಮಿಷ: ಟಿಸಿಎಸ್ ಕರ್ಮಕಾಂಡದ ಮತ್ತಷ್ಟು ವಿವರ ಬಹಿರಂಗ

ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್ ಮತ್ತೊಂದು ಕರ್ಮಕಾಂಡ ಬಯಲು

ನಾಸಿಕ್‌ನ ಟಿಸಿಎಸ್ ಕಚೇರಿಗೆ ಸಂಬಂಧಿಸಿದ ಮತಾಂತರ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿದಾ ಖಾನ್ ವಿರುದ್ಧ ಇನ್ನಷ್ಟು ಪುರಾವೆಗಳು ಬಹಿರಂಗಗೊಂಡಿವೆ. ಎಸ್‌ಐಟಿ ತನಿಖೆಯಲ್ಲಿ, ದೂರುದಾರರನ್ನು ಧಾರ್ಮಿಕವಾಗಿ ಪ್ರಭಾವಿಸಲು ಪ್ರಯತ್ನಿಸಿದ ಮಾಹಿತಿ ಹೊರ ಬಿದ್ದಿದೆ. ಧಾರ್ಮಿಕ ವಸ್ತುಗಳ ಒದಗಿಸಿದ್ದು ಹಾಗೂ ಮೊಬೈಲ್ ಮೂಲಕ ಧಾರ್ಮಿಕ ವಿಷಯಗಳನ್ನು ಹಂಚಿಕೊಂಡಿದ್ದ ವಿವರ ಪತ್ತೆಯಾಗಿವೆ. ತನಿಖೆ ಈಗ ಮಾಲೆಗಾಂವ್ ಮತ್ತು ಮಲೇಷ್ಯಾ ಸಂಪರ್ಕಗಳತ್ತ ವಿಸ್ತರಿಸಿದ್ದು, ಉದ್ಯೋಗದ ಹೆಸರಿನಲ್ಲಿ ವಿದೇಶಕ್ಕೆ ಕಳುಹಿಸುವ ಯತ್ನಿಸಿದರ ಕುರಿತು ಪರಿಶೀಲನೆ ನಡೆಯುತ್ತಿದೆ.

Kalaburagi News: ಕೌಟುಂಬಿಕ ಕಲಹ; ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ನಂತರ ಪತಿ ಕೂಡ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯಲ್ಲಿ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dharwad News: ಗಾಂಜಾ ಸೇವಿಸದಿದ್ರೂ ಕೇಸ್‌; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಗಾಂಜಾ ಕೇಸ್‌; ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಧಾರವಾಡದಲ್ಲಿ ಪೊಲೀಸರು ಸುಮಾರು 40ಕ್ಕೂ ಹೆಚ್ಚು ಯವಕರನ್ನು ವಶಕ್ಕೆ ಪಡೆದಿದ್ದರು. ಡ್ರಗ್‌ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದರೂ ವಿದ್ಯಾರ್ಥಿಯಿಂದ ಪೊಲೀಸರು 2 ಸಾವಿರ ರೂಪಾಯಿ ಪಡೆದಿದ್ದರು. ಹಣ ನೀಡದಿದ್ದರೆ ಬೇರೆ ಕೇಸ್‌ನಲ್ಲಿ ಸಿಲುಕಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಹೇಳಿದ್ದಾರೆ.

ಮನೆ ತುಂಬಾ ಚೀಟಿ, ಕಸ; ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ

ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ

ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್‌ನಲ್ಲಿ ಜಾರ್ಖಂಡ್ ಮೂಲದ 34 ವರ್ಷದ ಯುವತಿಯೊಬ್ಬಳು ತಾನು ವಾಸವಿದ್ದ ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಅರೆಕೊಳೆತ ಮೃತದೇಹವಾಗಿ ಅನುಮಾಸ್ಪದವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ಮೃತ ಯುವತಿಯನ್ನು ಜಾರ್ಖಂಡ ಮೂಲದ ಪೂಜಾ ದತ್ತ ಎಂದು ಗುರುತಿಸಲಾಗಿದೆ.

ವಾಷಿಂಗ್ ಮೆಷಿನ್ ಬಳಸುವಾಗ ಶಾಕ್‌ ತಗುಲಿ ಮಹಿಳೆ ಬಲಿ; ಅಳಿಯನೇ ಮಗಳನ್ನು ಕೊಂದ ಎಂದ ಪೋಷಕರು

ವಾಷಿಂಗ್ ಮೆಷಿನ್ ಬಳಸುವಾಗ ಶಾಕ್‌ ತಗುಲಿ ಮಹಿಳೆ ಬಲಿ

ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು

Bengaluru Woman Death Case: ಬೆಂಗಳೂರು ನಗರದ ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿ ಎಂದು ತಿಳಿದುಬಂದಿದೆ. ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಮಹಿಳೆ ಸಾವು ಪ್ರಕರಣ ಬೆಳಕಿಗೆ ಬಂದಿದೆ.

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಅಮ್ಮನ ಜತೆ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಟೆಕ್ಕಿ ಯುವತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಟೆಕ್ಕಿ ಯುವತಿ ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ. ತಾಯಿಯ ಜತೆ ನಗುತ್ತಾ ಮಾತನಾಡುತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ತೀವ್ರ ಹಲ್ಲೆ: ವಿಡಿಯೊ ವೈರಲ್

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಭಾರತೀಯ ಯುವಕನ ಮೇಲೆ ಹಲ್ಲೆ

Viral Video: ಭಾರತೀಯ ಯುವಕನ ಮೇಲೆ ಥೈಲ್ಯಾಂಡ್‌ನ ಪುಕೆಟ್‌ನಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ವಿಡಿಯೊದಲ್ಲಿ ಜಿತೇಶ್ ಎಂದು ಗುರುತಿಸಲಾದ ವ್ಯಕ್ತಿಯನ್ನು ರೆಸ್ಟೋರೆಂಟ್‌ನೊಳಗೆ ಸಿಬ್ಬಂದಿ ಥಳಿಸುತ್ತಿರುವ ದೃಶ್ಯ ಕಂಡು ಬಂದಿದೆ. ಇದನ್ನು ನೋಡಿದ ಅನೇಕರು ಆತಂಕ ವ್ಯಕ್ತ ಪಡಿಸಿದ್ದಾರೆ.

Mangaluru cooker Blast Case: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು ಶಿಕ್ಷೆ

ಕುಕ್ಕರ್ ಬಾಂಬ್ ಸ್ಫೋಟ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಮೊಹಮ್ಮದ್ ಶಾರೀಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94 ಸಾವಿರ ರೂಪಾಯಿ ದಂಡ ವಿಧಿಸಿದೆ.

ಪತಿ ಮೇಲೆ ಆ್ಯಸಿಡ್ ಎರಚಿದ ಪತ್ನಿ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪತಿ ಮೇಲೆ ಆ್ಯಸಿಡ್ ಎರಚಿದ ಪತ್ನಿ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Wife throws acid on husband: ದಾಂಪತ್ಯ ಕಲಹದ ಬಳಿಕ ಮಹಿಳೆಯೊಬ್ಬಳು ತನ್ನ ಪತಿಯ ಮೇಲೆ ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದಿದೆ. ಇದರ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡಿದ್ದು, ಕೃತ್ಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪತ್ನಿಯನ್ನು ಕೊಂದು ಶವವನ್ನು ಮರದ ಪೆಟ್ಟಿಗೆಯಲ್ಲಿ ಹಾಕಿ ಸಿಮೆಂಟ್‌ನಿಂದ ಮುಚ್ಚಿದ ಪಾಪಿ ಪತಿ

ಪತ್ನಿಯನ್ನು ಕೊಂದು ಸಿಮೆಂಟ್‌ನಿಂದ ಮುಚ್ಚಿದ ಪಾಪಿ ಪತಿ

ಪತ್ನಿಯನ್ನು ಕೊಂದು ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿಟ್ಟು ಮಣ್ಣು ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ.

2ನೇ ಹಂತದ ಮತದಾನದ ಸಿದ್ಧತೆಯಲ್ಲಿರುವ ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ; NIA ತನಿಖೆಗೆ ಚುನಾವಣಾ ಆಯೋಗ ಆದೇಶ

ಬಂಗಾಳ ಬಾಂಬ್ ಪತ್ತೆ ಪ್ರಕರಣಕ್ಕೆ NIA ಎಂಟ್ರಿ

ಪಶ್ಚಿಮ ಬಂಗಾಳದಲ್ಲಿ ಪತ್ತೆಯಾದ ಕಚ್ಚಾ ಬಾಂಬ್ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಒಪ್ಪಿಸಲು ಚುನಾವಣಾ ಆಯೋಗ ಸೂಚಿಸಿದೆ. ರಾಜ್ಯದಲ್ಲಿ ಶಾಂತಿಯುತ ಚುನಾವಣೆ ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಫೋಟಕಗಳ ತಯಾರಿ ಮತ್ತು ಸಂಗ್ರಹದಲ್ಲಿ ತೊಡಗಿರುವವರನ್ನು ಗುರುತಿಸಿ ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದ್ದು, ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇತ್ತೀಚೆಗೆ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಕಚ್ಚಾ ಬಾಂಬ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಂಟುಂಬದ ಐವರು ಸಾವು

ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಂಟುಂಬದ ಐವರು ಸಾವು

ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಸಭೆಯ ನಂತರ ಕಲ್ಲಂಗಡಿ ಸೇವಿಸಿದ ಶಂಕಿತ ವಿಷಪೂರಿತ ಆಹಾರ ಸೇವನೆಯಿಂದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರಿಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು

ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್‌ ಜಿಹಾದ್‌ ಆರೋಪ

ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಲವ್‌ ಜಿಹಾದ್‌ ಆರೋಪ

Haveri love jihad case: ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಯುವತಿ ನಾಪತ್ತೆಯಾಗಿದ್ದಾಳೆ. ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಕಾಣೆಯಾಗಿದ್ದರಿಂದ ಪೋಷಕರು ಕಂಗಾಲಾಗಿದ್ದಾರೆ. ಆದರೆ, ಯವತಿಯು ಮುಸ್ಲಿಂ ಯುವಕನ ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದು ಲವ್‌ ಜಿಹಾದ್‌ ಎಂದು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮನೆಯ ಗೇಟ್‌ಗೆ ಕಟ್ಟಿದ ನಾಯಿಗೆ ದೊಣ್ಣೆಯಿಂದ ಹೊಡೆದ ಅಪ್ಪ-ಮಗ; ಕ್ರೂರ ಕೃತ್ಯ ಕ್ಯಾಮರಾದಲ್ಲಿ ಸೆರೆ

ಕಟ್ಟಿರುವ ನಾಯಿಯನ್ನು ಥಳಿಸಿದ ದುಷ್ಕರ್ಮಿಗಳು

ಮನೆಯ ಗೇಟ್ ಗೆ ಕಟ್ಟಿದ್ದ ನಾಯಿಗೆ ಚಿತ್ರಹಿಂಸೆ ನೀಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಯಿಯ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದೆ.

Loading...