ಪೊಲೀಸರಿಗೆ ಬಿಜೆಪಿ ಶಾಸಕನ ಬೆದರಿಕೆ
ಮಧ್ಯ ಪ್ರದೇಶದ ಬಿಜೆಪಿ ಶಾಸಕ ಪ್ರೀತಮ್ ಲೋಧಿ ತಮ್ಮ ಮಗನ ಥಾರ್ ಅಪಘಾತ ಪ್ರಕರಣದ ತನಿಖೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗೆ 15 ದಿನಗಳಲ್ಲಿ ಸ್ಪಷ್ಟನೆ ನೀಡದಿದ್ದರೆ ಮನೆಗೆ ಸಗಣಿ ತುಂಬಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.