ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಅಮೃತಸರ- ದೆಹಲಿ ರೈಲು ಮಾರ್ಗದಲ್ಲಿ ಸ್ಫೋಟ; ಸರಕು ರೈಲು ಹಳಿಗೆ ಹಾನಿ

ಅಮೃತಸರ- ದೆಹಲಿ ರೈಲು ಮಾರ್ಗದಲ್ಲಿ ಸ್ಫೋಟ

ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಖಾನ್ಪುರ್ ಗ್ರಾಮದ ಸಿರ್ಹಿಂದ್ ಬಳಿ ಅಮೃತಸರ- ದೆಹಲಿ ರೈಲು ಮಾರ್ಗದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಸರಕು ರೈಲು ಹಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಲೋಕೋ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಿಂದೂ ವಿದ್ಯಾರ್ಥಿನಿಗೆ ಬುರ್ಖಾ ಧರಿಸಲು ಸಹಪಾಠಿಗಳಿಂದಲೇ ಒತ್ತಾಯ; ಯೋಗಿ ನಾಡಲ್ಲಿ ಆಘಾತಕಾರಿ ಘಟನೆ

ಬುರ್ಖಾ ಧರಿಸಲು ಸಹಪಾಠಿಗಳಿಂದಲೇ ಒತ್ತಾಯ

ಹಿಂದೂ ವಿದ್ಯಾರ್ಥಿನಿಯೊಬ್ಬಳಿಗೆ ಸಹಪಾಠಿಗಳೇ ಬುರ್ಖಾ ಧರಿಸಲು ಒತ್ತಾಯಿಸಿ ಮತಾಂತರಕ್ಕೆ ಒತ್ತಡ ಹೇರಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಬಿಲ್ಲಾರಿ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಐವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರು ಅಪ್ರಾಪ್ತರಾಗಿರುವುದರಿಂದ ಯಾರನ್ನೂ ವಶಕ್ಕೆ ಪಡೆದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಜೈಲುಗಳಲ್ಲಿ ಹೊಸ ರೂಲ್ಸ್‌; ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ಜೈಲಿನಲ್ಲಿ ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಹೊರಗಿನ ಸೌಕರ್ಯದ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಹೊರಗಿನಿಂದ ನೀಡುವ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸಂಬಂಧಿಸಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಟಾಟಾ ಏಸ್-ಸ್ಕೂಟರ್‌ ಡಿಕ್ಕಿಯಾಗಿ ತಾಯಿ-ಮಗ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Odisha Horror: ಹೆಣ್ಣು ಹೆತ್ತಿದ್ದಕ್ಕೆ ಸೊಸೆಗೆ ಬೆಂಕಿ ಹಚ್ಚಿದ ಮಾವ; 21ನೇ ಶತಮಾನದಲ್ಲೂ ನಾಚಿಗೇಡಿನ ಕೃತ್ಯ

ಹೆಣ್ಣು ಹೆತ್ತಿದ್ದಕ್ಕೆ ಸೊಸೆಗೆ ಬೆಂಕಿ ಹಚ್ಚಿದ ಮಾವ

Crime News: ಒಡಿಶಾದಲ್ಲಿ ವ್ಯಕ್ತಿಯೊಬ್ಬ ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಸೊಸೆಗೆ ಬೆಂಕಿ ಹಚ್ಚಲು ಯತ್ನಿಸಿರುವ ಅಮಾನುಷ ಘಟನೆ ನಡೆದಿದೆ. ಕೆಂದ್ರಪಾರ ಜಿಲ್ಲೆಯಲ್ಲಿ ನಡೆದ ಈ ಕೃತ್ಯ ದೇಶವನ್ನೇ ಬೆಚ್ಚಿ ಬೀಳಿಸಿದೆ. ಧರ್ಮಪುರ ಗ್ರಾಮದ 75 ವರ್ಷದ ಪ್ರಫುಲ್ಲ ರೆ ಎನ್ನುವ ವೃದ್ಧನೇ ಕೊಲೆ ಮಾಡಲು ಯತ್ನಿಸಿದ ಪಾಪಿ.

ಹೋಮ್‌ವರ್ಕ್ ಮಾಡಿಲ್ಲವೆಂದು ಹಿಗ್ಗಾಮುಗ್ಗಾ ಥಳಿಸಿ ನಾಲ್ಕು ವರ್ಷದ ಮಗಳನ್ನೇ ಕೊಂದ ತಂದೆ!

ಹೋಂ ವರ್ಕ್ ಮಾಡ್ಲಿಲ್ಲ ಅಂತ ಮಗಳನ್ನೇ ಕೊಲೆ; ಛೇ ಇವನಂಥಾ ತಂದೆ

ಫರಿದಾಬಾದ್‌ನಲ್ಲಿ ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ 31 ವರ್ಷದ ಕೃಷ್ಣ ಜೈಸ್ವಾಲ್ ತನ್ನ ನಾಲ್ಕು ವರ್ಷದ ಮಗಳನ್ನು ಕ್ರೂರವಾಗಿ ಥಳಿಸಿ ಕೊಂದ ಭೀಕರ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರ ಪ್ರಕಾರ, ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯ ಖೇರತಿಯಾ ಗ್ರಾಮದದವನಾದ ಕೃಷ್ಣ ಜೈಸ್ವಾಲ್, ಫರಿದಾಬಾದ್‌ನಲ್ಲಿ ಕುಟುಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜೈಸ್ವಾಲ್ ಮತ್ತು ಅವರ ಪತ್ನಿ ಇಬ್ಬರೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪೊಲೀಸ್‌ ಅಧಿಕಾರಿಗಳ ಸೋಗಿನಲ್ಲಿ ಸೈಬರ್‌ ವಂಚನೆ ಮಾಡ್ತಾರೆ ಹುಶಾರ್‌! ಯಾಮಾರಿದ್ರೆ ಹಣವೆಲ್ಲ ಮಾಯ

ಆನ್‌ಲೈನ್ ವಂಚನೆ ಪ್ರಕರಣ ಭೇದಿಸಿದ ಉತ್ತರ ಪ್ರದೇಶದ ಪೊಲೀಸರು

Online Fraud Case: ಆನ್‌ಲೈನ್ ವಂಚನೆ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪೊಲೀಸ್ ಅಧಿಕಾರಿಗಳಂತೆ ನಟಿಸಿ ಅಮಾಯಕರನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ವಿವಿಧ ತಂತ್ರಗಳನ್ನು ಬಳಸಿಕೊಂಡು ಜನರನ್ನು ಮೋಸಗೊಳಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಯಿಂದ ಗುಂಡಿನ ದಾಳಿ: ಪತ್ನಿ, ಮೂವರು ಸಂಬಂಧಿಕರ ಹತ್ಯೆ

ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯಿಂದ ಗುಂಡಿನ ದಾಳಿ, ನಾಲ್ವರು ಸಾವು

Family Dispute Behind Shooting: ಅಮೆರಿಕದಲ್ಲಿ ಕುಟುಂಬದ ಕಲಹ ಹಿನ್ನೆಲೆಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಸಂಬಂಧಿಕರ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಆರೋಪಿಯ ಪತ್ನಿ ಹಾಗೂ ಮೂವರು ಸಂಬಂಧಿಕರು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸ್‌ ಪಡೆಗಳು ಮನೆಯೊಳಗೆ ನಾಲ್ವರು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ್ದಕ್ಕೆ ಪೊಲೀಸರಿಂದ ಕಿರುಕುಳ ಆರೋಪ; ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಿಯಕರನ ಹೊಟ್ಟೆ ಸೀಳಿ ಖಾಸಗಿ ಅಂಗ ಕತ್ತರಿಸಿ ಕೊಂದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಕೊಂದವರಿಗೆ ಜೀವಾವಧಿ ಶಿಕ್ಷೆ

ಪ್ರಿಯಕರನ ಹೊಟ್ಟೆ ಸೀಳಿ ಖಾಸಗಿ ಅಂಗ ಕತ್ತರಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಬಿಹಾರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ರೋಹ್ತಾಸ್ ಜಿಲ್ಲೆಯ ಭಗವಾನ್‌ಪುರ ಗ್ರಾಮದಲ್ಲಿ 2019ರಲ್ಲಿ ನಡೆದ ಈ ಘಟನೆ ಸಂಪೂರ್ಣ ಗ್ರಾಮವನ್ನೇ ಬೆಚ್ಚಿ ಬೀಳಿಸಿತ್ತು. ಗೆಳತಿಯನ್ನು ಭೇಟಿ ನೀಡಲು ಹೋಗಿದ್ದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಇನ್‌ಸ್ಟಾಗ್ರಾಮ್‌ ಪೋಸ್ಟ್‌, 6 ಪ್ಯಾಕ್‌; ಜಿಮ್‌ ಈಗ ಮತಾಂತರದ ಕೇಂದ್ರ: ಹಿಂದೂ ಮಹಿಳೆಯರೇ ಟಾರ್ಗೆಟ್‌

ಉತ್ತರ ಪ್ರದೇಶದಲ್ಲಿ ಮತಾಂತರ ದಂಧೆ, ಹಿಂದೂ ಮಹಿಳೆಯರೇ ಟಾರ್ಗೆಟ್

conversion racket in Uttar Pradesh: ಉತ್ತರ ಪ್ರದೇಶದಲ್ಲಿ ನಡೆದ ಮತಾಂತರ ದಂಧೆ ದೊಡ್ಡ ಚರ್ಚೆಗೆ ಕಾರಣವಾಗಿದೆ. 50ಕ್ಕೂ ಹೆಚ್ಚು ಹಿಂದೂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಗ್ಯಾಂಗ್‌ ಕಾರ್ಯಾಚರಿಸುತ್ತಿದೆ. ಮಹಿಳೆಯೊಬ್ಬಳು ಜಿಮ್ ಮಾಲಕನ ವಿರುದ್ಧ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

47 ಲಕ್ಷ ರೂ. ಬಹುಮಾನ ಹೊಂದಿದ್ದ 9 ಮಾವೋವಾದಿಗಳು ಶರಣು;  ರಾಯ್‌ಪುರ ಪೊಲೀಸ್ ವಲಯ ಈಗ ನಕ್ಸಲ್ ಮುಕ್ತ

47 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲರು ಶರಣು

47 ಲಕ್ಷ ರೂ. ಬಹುಮಾನ ಹೊಂದಿದ್ದ 9 ಮಾವೋವಾದಿಗಳು ಶರಣಾಗಿದ್ದು, ಈ ಮೂಲಕ ಛತ್ತೀಸ್‌ಗಢದ ರಾಯ್‌ಪುರ ಪೊಲೀಸ್ ವಲಯ ನಕ್ಸಲ್ ಮುಕ್ತವಾಗಿದೆ. ಇವರಿಂದ ಇನ್ಸಾಸ್ ರೈಫಲ್‌ಗಳು, ಎರಡು ಎಸ್ ಎಲ್ ಆರ್ ಗಳು, ಒಂದು ಕಾರ್ಬೈನ್, ಮಜಲ್ ಲೋಡಿಂಗ್ ಗನ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇದು ಜೈಲು ಹಕ್ಕಿಗಳ ಲವ್‌ ಸ್ಟೋರಿ: ಕೊಲೆ ಪಾತಕಿಗಳ ನಡುವೆ ಪ್ರೇಮಾಂಕುರ: ಪರೋಲ್ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ

ಜೈಲಿನಲ್ಲಿ ಶುರುವಾಯ್ತು ಕೊಲೆ ಪಾತಕಿಗಳ ಪ್ರೇಮಕಥೆ

Jail romance: ಜೈಲಿನಲ್ಲಿ ಒಟ್ಟಿಗೆ ಇದ್ದ ಸಮಯದಲ್ಲಿ ಆರಂಭವಾದ ಕೊಲೆ ಪಾತಕಿಗಳ ಪ್ರೇಮಕಥೆ ಇದೀಗ ಮದುವೆಯ ರೂಪ ಪಡೆದಿದೆ. ಪರೋಲ್ ಪಡೆದುಕೊಂಡು ಈ ಖೈದಿ ಜೋಡಿ ವಿವಾಹವಾಗಿರುವ ಈ ಘಟನೆ ರಾಜಸ್ಥಾನದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಗಣರಾಜ್ಯೋತ್ಸವಕ್ಕೆ ಬೆದರಿಕೆ ಹಾಕಿದ ಖಲಿಸ್ತಾನಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್

ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎಫ್‌ಐಆರ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಬೆದರಿಕೆ ಹಾಕಿದ ಆರೋಪದಲ್ಲಿ ಖಲಿಸ್ತಾನಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ವಿಡಿಯೊ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಮೆಡಿಕಲ್‌ ಸೀಟ್‌ಗಾಗಿ ಕಾಲನ್ನೇ ಕತ್ತರಿಸಿಕೊಂಡ ಭೂಪ; ಅಂಗವೈಕಲ್ಯ ಸರ್ಟಿಫಿಕೇಟ್ ಪಡೆಯಲು ಇದೆಂಥಾ ಹುಚ್ಚಾಟ!?

ಮೆಡಿಕಲ್‌ ಸೀಟ್‌ಗಾಗಿ ಕಾಲನ್ನೇ ಕತ್ತರಿಸಿಕೊಂಡ ಭೂಪ

Shocking incident in UP: ಉತ್ತರ ಪ್ರದೇಶದ ಜೌನ್‍ಪುರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಯುವಕನೊಬ್ಬ ಮೆಡಿಕಲ್‌ ಸೀಟ್‌ಗಾಗಿ ಅಂಗವೈಕಲ್ಯ ಪ್ರಮಾಣಪತ್ರ ಪಡೆಯುವ ಉದ್ದೇಶದಿಂದ ತನ್ನದೇ ಕಾಲು ಕತ್ತರಿಸಿಕೊಂಡಿದ್ದಾನೆ. ಜನವರಿ 18ರಂದು ಈ ಘಟನೆ ನಡೆದಿದ್ದು, ಜನವರಿ 23ರಂದು ಪ್ರಕರಣ ಬೆಳಕಿಗೆ ಬಂದಿದೆ.

4 ವರ್ಷದ ಬಾಲಕಿಯನ್ನೂ ಬಿಡದ ಕಾಮುಕ; ಸ್ಕೂಲ್‌ ವ್ಯಾನ್‌ನಲ್ಲಿ ಕಿರುಕುಳ ನೀಡಿದ ಚಾಲಕ

ಸ್ಕೂಲ್‌ ವ್ಯಾನ್‌ನಲ್ಲಿ 4 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಚಾಲಕ

Physical Abuse: 4 ವರ್ಷದ ಪ್ರೀ ಪ್ರೈಮರಿ ಶಾಲೆಯ ವಿದ್ಯಾರ್ಥಿನಿ ಮೇಲೆ ವ್ಯಾನ್‌ ಡ್ರೈವರ್‌ ದೌರ್ಜನ್ಯ ಎಸಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಬದ್ಲಾಪುರದಲ್ಲಿ ಈ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ವೇಳೆ ಚಾಲಕ ಬಾಲಕಿಯ ವೇಳೆ ದೌರ್ಜನ್ಯ ಎಸಗಿದ್ದಾನೆ ಎಂದು ಪಾಲಕರು ದೂರಿದ್ದಾರೆ.

Kalaburagi News: ಮದುವೆ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಯುವತಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಯುವತಿಯನ್ನು ಅಪಹರಿಸಿದ ಮುಸುಕುಧಾರಿಗಳು; ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿಬಿದ್ದ ದೇಶ

ಹಾಡಹಗಲೇ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು

Kidnap News: ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಮುಸುಕುಧಾರಿಗಳು ಯುವತಿಯನ್ನು ಅಪಹರಿಸಿದ ಘಟನೆ ಜನರಲ್ಲಿ ಭೀತಿ ಮೂಡಿಸಿದೆ. ಸಾರ್ವಜನಿಕರ ಮುಂದೆಯೇ ನಡೆದ ಈ ಅಪಹರಣ ಪ್ರಕರಣವು ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತೈಗೈದು ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ಕುಳಿತ ಪಾಪಿ ಪತ್ನಿ!

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ ಮಾಡಿದ್ದೇನು?

Crime News: ನಿದ್ದೆ ಮಾತ್ರೆಗಳನ್ನು ಬೆರೆಸಿದ ಬಿರಿಯಾನಿ ತಿನ್ನಿಸಿ, ಪತಿ ಗಾಢ ನಿದ್ದೆ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಆತನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಆರಂಭದಲ್ಲಿ ಸಹಜ ಸಾವು ಎಂದು ಬಿಂಬಿಸಲ್ಪಟ್ಟ ಈ ಪ್ರಕರಣವು, ಪೋಸ್ಟ್‌ಮಾರ್ಟಂ ಪರೀಕ್ಷೆಯ ನಂತರ ಆ ವ್ಯಕ್ತಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ಬಹಿರಂಗವಾಗಿದೆ.

Punith Kerehalli: ಹಿಂದೂಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮತ್ತೆ ಅರೆಸ್ಟ್‌

ಹಿಂದೂಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮತ್ತೆ ಅರೆಸ್ಟ್‌

ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಂಧಿಸಲಾಗಿದೆ. ಗೋ ಮಾಂಸ ಸಾಗಾಟ ವೇಳೆ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋರ್ಟ್‌ನಿಂದ ನಾನ್ ಬೈಲೇಬಲ್ ವಾರೆಂಟ್ (NBW) ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಮತ್ತೆ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.

ಮಗಳು ಪ್ರಿಯಕರನೊಟ್ಟಿಗೆ ಎಸ್ಕೇಪ್‌; ಇತ್ತ ಪತಿಗೇ ಚಾಕು ಇರಿದು ಕೊಲೆ ಮಾಡಿದ ಪತ್ನಿ

ಪತಿಗೇ ಚಾಕು ಇರಿದು ಕೊಲೆ ಮಾಡಿದ ಪತ್ನಿ!

ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಮುರುಗೇಶ್​​ ಎಂದು ಗುರುತಿಸಲಾಗಿದೆ.

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಶೂಟೌಟ್; ಬೋಂಡಿ ಬೀಚ್ ದಾಳಿಯ ಶೋಕಾಚರಣೆಯಂದೇ ಗುಂಡಿನ ದಾಳಿ, ಮೂವರು ಸಾವು

ಆಸ್ಟ್ರೇಲಿಯಾದಲ್ಲಿ ಮತ್ತೆ ಗುಂಡಿನ ದಾಳಿ; ಮೂವರು ಸಾವು

Shootout in Australia: ಆಸ್ಟ್ರೇಲಿಯಾದಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ನಡೆದಿದೆ. ಈ ದಾಳಿ, ಸಿಡ್ನಿಯ ಬೋಂಡಿ ಬೀಚ್ ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಶೋಕಾಚರಣೆಯ ದಿನವೇ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಸೇರಿದ್ದಾರೆ.

ಮಣಿಪುರದಲ್ಲಿ ವ್ಯಕ್ತಿಯನ್ನು ಅಪಹರಿಸಿ ಗುಂಡಿಕ್ಕಿ ಹತ್ಯೆ; ಭೀಕರ ಕೊಲೆಯ ವಿಡಿಯೊ ವೈರಲ್

ಮಣಿಪುರದಲ್ಲಿ ಬೆಳಕಿಗೆ ಬಂತು ಮತ್ತೊಂದು ಭಯಾನಕ ಕೃತ್ಯ

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಮುಂದುವರಿದಿರುವ ಜಾತಿ ಆಧಾರಿತ ಹಿಂಸಾಚಾರದ ನಡುವೆ, ಮೈತೈ ಸಮುದಾಯದ 38 ವರ್ಷದ ವ್ಯಕ್ತಿಯನ್ನು ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ಮೊದಲು “ನನ್ನನ್ನು ಬಿಡಿ” ಎಂದು ಬೇಡಿಕೊಳ್ಳುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಿಂದಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Blackmail Case: ರಾಜ್ಯದ ಖ್ಯಾತ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್; 1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆ ಅರೆಸ್ಟ್

ರಾಜ್ಯದ ಖ್ಯಾತ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್; ಮಹಿಳೆ ಅರೆಸ್ಟ್

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡಿದ್ದ ಮಹಿಳೆ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಹೀಗಾಗಿ ಆರೋಪಿ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Loading...