ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Mandya News: ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಲಂಚ ಆರೋಪ; ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಸಿಸಿಬಿ ವಿಚಾರಣೆ ಬಳಿಕ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ನಟೇಶ್‌ ಅವರಿಗೆ ಸಂಬಂಧಿಸಿ ಬಿಡುಗಡೆಯಾಗಿರುವ ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಪರಾರಿ; ಆರೋಪಿಗಾಗಿ ಪೊಲೀಸರಿಂದ ತಲಾಶ್

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯನ್ನು ಗುಂಡಿಕ್ಕಿ ಹತ್ಯೆ

Crime News: ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪರಿತ್ಯಕ್ತ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಪತ್ನಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಶಬ್ಧ ಕೇಳಿ ನೆರೆಹೊರೆಯವರು ಧಾವಿಸಿದಾಗ, ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು.

ಫ್ರಿಡ್ಜ್‌, ಡ್ರಮ್‌ ಬಳಿಕ ಇದೀಗ ಬಾವಿಯಲ್ಲಿ ಮೃತದೇಹ ಪತ್ತೆ: ಅಪ್ರಾಪ್ತ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಕೊಂದು, ಕಲ್ಲು ಕಟ್ಟಿ ನೀರಿಗೆ ತಳ್ಳಿದ ಪ್ರಿಯಕರ

ಅಪ್ರಾಪ್ತ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಕೊಂದು ಬಾವಿಗೆ ಎಸೆದ ಪ್ರಿಯಕರ

Crime News: ಇತ್ತೀಚಿನ ದಿನಗಳ ಸಂಗಾತಿಯನ್ನು ಕೊಲೆಗೈವ ಪ್ರಕರಣ ಹೆಚ್ಚು ಹೆಚ್ಚು ವರದಿಯಾಗುತ್ತಿದೆ. ಕೆಲವು ದಿನಗಳ ಹಿಂದೆ ಫ್ರಿಡ್ಜ್‌, ನೀಲಿ ಡ್ರಮ್‌ನಲ್ಲಿ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಇದೀಗ ಗುಜರಾತ್‌ನ ಯುವಕನೊಬ್ಬ ಅಪ್ರಾಪ್ತ ವಯಸ್ಸಿನ ಪ್ರಿಯತಮೆಯನ್ನು ಕೊಂದು ಮೃತದೇಹವನ್ನು ಬಾವಿಗೆ ಎಸೆದಿದ್ದಾನೆ.

ಮದುವೆ ಭರವಸೆ ನೀಡಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ; ಕೊನೆಗೂ ಇನ್‌ಫ್ಲುಯೆನ್ಸರ್‌ ಪೊಲೀಸ್‌ ಬಲೆಗೆ

ಲೈಂಗಿಕ ದೌರ್ಜನ್ಯ ಆರೋಪ; ಇನ್‌ಫ್ಲುಯೆನ್ಸರ್‌ ಬಂಧನ

Influencer arrested: ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ನಂತರ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ನನ್ನು ಬಂಧಿಸಲಾಗಿದೆ. ಬಂಧಿತನನ್ನು ತ್ರಿಶೂರ್ ನಿವಾಸಿ ಯದು ಗಿರೀಶ್ (38) ಎಂದು ಗುರುತಿಸಲಾಗಿದೆ.

5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಇದಕ್ಕಾಗಿ ಗುತ್ತಿಗೆದಾರನಿಂದ ‌ಶಾಸಕ ಚಂದ್ರು ಲಮಾಣಿ, 11 ಲಕ್ಷ ಕಮಿಷನ್‌ ನೀಡಲು ಬೇಡಿಕೆ ಇಟ್ಟಿದ್ದರು. ಈ ಪೈಕಿ 5 ಲಕ್ಷ ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ದೆಹಲಿಯಲ್ಲಿ ಭಯೋತ್ಪಾದನಾ ದಾಳಿ ಎಚ್ಚರಿಕೆ ಬೆನ್ನಲ್ಲೇ ಪಂಜಾಬ್, ಕಾಶ್ಮೀರದಲ್ಲಿ ಐಇಡಿ ಪತ್ತೆ; ಹೈ ಅಲರ್ಟ್‌

ಪಂಜಾಬ್, ಕಾಶ್ಮೀರದಲ್ಲಿ ಐಇಡಿ ಪತ್ತೆ

Terror Attack: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಯಿಂದ ದೆಹಲಿಯಲ್ಲಿ ಭಯೋತ್ಪಾದನಾ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ ಪಂಜಾಬ್ ಮತ್ತು ಕಾಶ್ಮೀರದಲ್ಲಿ ಎರಡು ಐಇಡಿ‌ಗಳು ಪತ್ತೆಯಾಗಿವೆ. ಪಂಜಾಬ್‌ನ ಅಮೃತಸರದಲ್ಲಿ ರಯ್ಯಾ ಪೊಲೀಸ್ ಪೋಸ್ಟ್ ಸಮೀಪ ಸಂಶಯಾಸ್ಪದ ಚೀಲದಲ್ಲಿ ಐಇಡಿ ಪತ್ತೆಯಾಗಿದೆ.

ಎಟಿಎಂಗಳಿಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಎಟಿಎಂಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಇಬ್ಬರ ವಿರುದ್ಧ ಕೇಸ್‌

Hassan News: ಹಾಸನದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ಹಾಕದೇ 3,40,28,200 ರೂ. ದುರುಪಯೋಗ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಪು ಕೋಟೆ ಸೇರಿ ದೆಹಲಿಯ ವಿವಿಧೆಡೆ ಸ್ಫೋಟಕ್ಕೆ ಲಷ್ಕರ್ ಸಂಚು

ದೆಹಲಿಯಲ್ಲಿ ಸ್ಫೋಟಕ್ಕೆ ಲಷ್ಕರ್ ಸಂಚು

ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಫೆಬ್ರವರಿ 6ರಂದು ನಡೆದ ಸ್ಫೋಟಕ್ಕೆ ಪ್ರತೀಕಾರವಾಗಿ ದೆಹಲಿಯ ಕೆಂಪು ಕೋಟೆ ಸೇರಿದಂತೆ ನಗರ ಭಾಗಗಳಲ್ಲಿ ಪಾಕಿಸ್ತಾನದ ಲಷ್ಕರ್-ಎ-ತೈಬಾ ಸ್ಫೋಟಕ್ಕೆ ಸಂಚು ರೂಪಿಸಿದೆ. ಭಯೋತ್ಪಾದಕ ಸಂಘಟನೆಯು ಸುಧಾರಿತ ಸ್ಫೋಟಕ ಸಾಧನಗಳಿಂದ ದಾಳಿ ನಡೆಸಲು ಸಂಚು ರೂಪಿಸುತ್ತಿರಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

Byrati Basavaraj: ಶಾಸಕ ಬೈರತಿ ಬಸವರಾಜ್‌ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ

ಶಾಸಕ ಬೈರತಿ ಬಸವರಾಜ್‌ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ

ಸದ್ಯ ಫೆ.26ರವರೆಗೆ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.

ಮಡಕ್ಕಲ್ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಸ್ಕೂಟರ್‌ಗೆ ಗುದ್ದಿದ್ದ ಯಮರೂಪಿ ಕಾರ್, ಎದೆ ಝಲ್ ಎನಿಸುವ ವಿಡಿಯೊ

ಮಡಕ್ಕಲ್ ಜಂಕ್ಷನ್‌ನಲ್ಲಿ ಭೀಕರ ಡಿಕ್ಕಿ; ಮಹಿಳೆ ಗಂಭೀರ ಗಾಯ

ಕೇರಳದ ಮಡಕ್ಕಲ್ ಜಂಕ್ಷನ್‌ನಲ್ಲಿ ಅತಿವೇಗದಲ್ಲಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆ ಜಂಕ್ಷನ್ ದಾಟಲು ಎಚ್ಚರಿಕೆಯಿಂದ ಸಾಗುತ್ತಿದ್ದರೂ ತಮ್ಮದಲ್ಲದ ತಪ್ಪಿಗೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರಿದಾದ ರಸ್ತೆ, ಸಂಚಾರ ಸಂಕೇತಗಳ ಕೊರತೆ ಮತ್ತು ವೇಗ ನಿಯಂತ್ರಣದ ಅಭಾವವೇ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

kalaburagi news: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಶಿವಾಜಿ ಜಯಂತಿಯಲ್ಲಿ ಸೌಂಡ್ ಬಾಕ್ಸ್ ಬಳಕೆ ಬಗ್ಗೆ ಮಾತಿನ ಚಕಮಕಿ ಉಂಟಾಗಿ, ಬಳಿಕ ಎರಡೂ ಸಮುದಾಯಗಳ ನಡುವೆ ಕಟ್ಟಿಗೆ ಹಾಗೂ ಕಲ್ಲುಗಳಿಂದ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಹಾಗಲಕಾಯಿ ಖಾದ್ಯ ಮಾಡಿದ್ದಕ್ಕೆ ತಾಯಿಯನ್ನೇ ಕೊಂದ ಪಾಪಿ

ಹಾಗಲಕಾಯಿ ಖಾದ್ಯ ಮಾಡಿದ್ದಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ

Crime News: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಷ್ಟವಿಲ್ಲದ ಹಾಗಲಕಾಯಿ ಅಡುಗೆ ಮಾಡಿದ್ದ ಬಗ್ಗೆ ತನ್ನ ತಾಯಿಯೊಂದಿಗೆ ಜಗಳವಾಡಲು ಪ್ರಾರಂಭಿಸಿದ್ದ. ಕೊನೆಗೆ ಆರೋಪಿಯು ತನ್ನ ತಾಯಿಗೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ.

Terrorist Arrest: ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ಬೆಂಗಳೂರಿನಲ್ಲಿ ಸೆರೆ

ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ಬೆಂಗಳೂರಿನಲ್ಲಿ ಸೆರೆ

ಸತತವಾಗಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ, ಎನ್ಐಎ ವಿಶೇಷ ನ್ಯಾಯಾಲಯವು ಅರ್ಷಾದ್ ಖಾನ್ ವಿರುದ್ಧ ವಾರೆಂಟ್ ಮತ್ತು ಪ್ರಕ್ಲೊಮೇಷನ್ (ಘೋಷಿತ ಅಪರಾಧಿ) ಆದೇಶ ಹೊರಡಿಸಿತ್ತು. ನ್ಯಾಯಾಲಯದ ಈ ಕಠಿಣ ಆದೇಶದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎನ್ಐಎ ತಂಡ, ಇಂದು ಆತನನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Pocso Case: ಚಾಕಲೇಟ್‌ ಆಮಿಷವೊಡ್ಡಿ 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ಆರೆಸ್ಟ್‌

ಚಾಕಲೇಟ್‌ ಆಮಿಷವೊಡ್ಡಿ 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ಸೆರೆ

ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರಂಭದಲ್ಲಿ ಒಬ್ಬ ಬಾಲಕಿ ಆರೋಪಿಯ ನೀಚತನದ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ತದನಂತರ 9 ವಿದ್ಯಾರ್ಥಿಗಳ ಜೊತೆಗೆ ಈತ ಅಸಭ್ಯವಾಗಿ ವರ್ತಿಸಿರುವುದು ಗೊತ್ತಾಗಿದೆ.

Self harming: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಮಗ ಆತ್ಮಹತ್ಯೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಮಗ ಆತ್ಮಹತ್ಯೆ

ಬೆಂಗಳೂರಿನ ಸಂಜಯನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ. ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

Snehamayi Krishna: ಬಂಧಿತ ಸ್ನೇಹಮಯಿ ಕೃಷ್ಣ ಮನೆ, ಕಚೇರಿಯಲ್ಲಿ ತೀವ್ರ ತಲಾಶೆ, ಮಹತ್ವದ ದಾಖಲೆ ಜಪ್ತಿ

ಸ್ನೇಹಮಯಿ ಕೃಷ್ಣ ಮನೆ, ಕಚೇರಿಯಲ್ಲಿ ತೀವ್ರ ತಲಾಶೆ, ಮಹತ್ವದ ದಾಖಲೆ ಜಪ್ತಿ

ದಾಳಿಯ ವೇಳೆ ಸಿಕ್ಕ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದಾಖಲೆಗಳನ್ನು ಸಿಸಿಬಿ ಪೊಲೀಸರು ಸ್ಥಳದಲ್ಲೇ ಸೀಲ್ ಮಾಡಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಡಿಜಿಟಲ್ ಪುರಾವೆಗಳನ್ನು ಎಫ್‌ಎಸ್‌ಎಲ್ (FSL) ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ನಕಲಿ ಆಡಿಯೋ ತುಣುಕು ಸೃಷ್ಟಿಸಿದವರ ಹಿಂದೆ ಯಾರಿದ್ದಾರೆ ಮತ್ತು ಇದರ ಉದ್ದೇಶವೇನಿತ್ತು ಎಂಬುದು ಸಿಸಿಬಿ ವಿಚಾರಣೆಯಿಂದ ಹೊರಬರಬೇಕಿದೆ.

bomb blast: ಬಾಲ್‌ ಎಂದು ಭಾವಿಸಿ ಕ್ರಿಕೆಟ್‌ ಆಡಿದ ಬಾಲಕನಿಗೆ ನಾಡಬಾಂಬ್‌ ಸ್ಫೋಟಿಸಿ ಗಾಯ

ಬಾಲ್‌ ಎಂದು ಭಾವಿಸಿ ಕ್ರಿಕೆಟ್‌ ಆಡಿದ ಬಾಲಕನಿಗೆ ನಾಡಬಾಂಬ್‌ ಸ್ಫೋಟಿಸಿ ಗಾಯ

ಕಾಡುಹಂದಿ ಬೇಟೆಗೆ ಎಂದು ಇಟ್ಟಿದ್ದ ನಾಡಬಾಂಬ್‌ ಅನ್ನು ಬಾಲ್‌ ಎಂದು ತಿಳಿದು ಬಾಲಕರಿಬ್ಬರು ಅದರಲ್ಲಿ ಕ್ರಿಕೆಟ್‌ ಆಡಿದ್ದು, ಈ ವೇಳೆ ಬಾಂಬ್‌ ಸ್ಫೋಟಗೊಂಡಿದೆ. ಸ್ಪೋಟದಲ್ಲಿ (bomb blast) ಓರ್ವ ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಅಭೀಶ್ ಎಂದು ಗುರುತಿಸಲಾಗಿದೆ. ಬಾಲಕನಿಗೆ ಸರ್ಕಾರಿ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Body found: ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ರುಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸುತ್ತಮುತ್ತಲಿನ ಪೊಲೀಸ್‌ ಠಾಣೆಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಈ ಅರಣ್ಯ ಪ್ರದೇಶಕ್ಕೆ ಬರುವ ದಾರಿಗಳಲ್ಲಿರುವ ಮನೆಗಳ ಸಿಸಿಟಿವಿ ಕ್ಯಾಮೆರಾ ಫೂಟೇಜ್‌ಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.

ಗಂಡ ಮೃತಪಟ್ಟ ಒಂದೇ ವಾರಕ್ಕೆ ಪೊಲೀಸಪ್ಪನಿಂದ ಕಿರುಕುಳ; ಮನನೊಂದು ಮಹಿಳೆ ಆತ್ಮಹತ್ಯೆ

ಪೊಲೀಸ್‌ ಪೇದೆ ಕಿರುಕುಳ; ಗಂಡ ಮೃತಪಟ್ಟ ಒಂದೇ ವಾರಕ್ಕೆ ಪತ್ನಿಯೂ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಪತಿ ಫೆಬ್ರವರಿ 14ರಂದು ಜಗದೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಅವರು ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ.

ಮಟನ್ ಕರಿಯಲ್ಲಿ ಮಾತ್ರೆ ಬೆರೆಸಿ ಪತಿ ಹತ್ಯೆ ಯತ್ನ; ಸಾಧ್ಯವಾಗದ್ದಕ್ಕೆ ಕತ್ತು ಹಿಸುಕಿ ಪತಿಯನ್ನೇ ಕೊಂದ ಪಾಪಿ ಪತ್ನಿ!

ಅಕ್ರಮ ಸಂಬಂಧಕ್ಕಾಗಿ ಪತಿಯ ಕೊಲೆ..!

ತೆಲಂಗಾಣದ ಕರೀಂನಗರದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಪತ್ನಿಯೇ ಪತಿಯ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಾರು ಚಾಲಕರಾಗಿದ್ದ ಕಥಿ ಸುರೇಶ್ ಮದ್ಯ ವ್ಯಸನದಿಂದ ಕುಟುಂಬ ಜವಾಬ್ದಾರಿಗಳನ್ನು ನಿರ್ಲಕ್ಷಿಸುತ್ತಿದ್ದರೆಂದು ಹೇಳಲಾಗಿದೆ. ಈ ನಡುವೆ ಪತ್ನಿ ಮೌನಿಕಾ ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿ, ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿದೇಶಕ್ಕೆ ವಿಡಿಯೋ ಮಾರಾಟ; ಜೂನಿಯರ್ ಎಂಜಿನಿಯರ್, ಪತ್ನಿಗೆ ಮರಣದಂಡನೆ ಶಿಕ್ಷೆ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿದೇಶಕ್ಕೆ ವಿಡಿಯೋ ಮಾರಾಟ!

ನೀರಾವರಿ ಇಲಾಖೆಯಲ್ಲಿ ನೇಮಕಗೊಂಡಿದ್ದ ಜೂನಿಯರ್ ಎಂಜಿನಿಯರ್ ಒಬ್ಬ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಜಾಲದ ಕಿಂಗ್‌ಪಿನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ನೀರಾವರಿ ಇಲಾಖೆಯಲ್ಲಿ ಈತ ಕಾರ್ಯ ನಿರ್ವಹಿಸುತ್ತಿದ್ದ.

ನಾಪತ್ತೆ ಕೇಸ್‌ ಸುಖಾಂತ್ಯ; ಪ್ರಿಯಕರನನ್ನು ಬಿಟ್ಟು ಗಂಡನ ಮನೆಗೆ ಹೋಗಲು ಒಪ್ಪಿದ ಪ್ರಿಯಾಂಕ

ಪ್ರಿಯಕರನನ್ನು ಬಿಟ್ಟು ಗಂಡನ ಜತೆ ಹೋಗಲು ಒಪ್ಪಿದ ಪ್ರಿಯಾಂಕ

ನಾಪತ್ತೆ ನಾಟಕವಾಡಿ ಪ್ರಿಯಕರ ಡೇವಿಡ್‌ ಜತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಪ್ರಿಯಾಂಕ ಕೊನೆಗೂ ಗಂಡನ ಮನೆ ಸೇರಲು ಒಪ್ಪಿದ್ದಾಳೆ. ಹಾಸನದ ಸಾಂತ್ವನ ಕೇಂದ್ರದಿಂದ ತವರು ಮನೆಗೆ ಹೋಗಿ, ಅಲ್ಲಿಂದ ಗಂಡ ರುದ್ರೇಶ್‌ ಮನೆಗೆ ಹೋಗಲು ಒಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಬಿಟ್‌ ಕಾಯಿನ್ ಹಗರಣ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಪತಿ ರಾಜ್ ಕುಂದ್ರಾಗೆ ಬಿಗ್ ರಿಲೀಫ್

ಬಿಟ್ ಕಾಯಿನ್ ಹಗರಣ: ರಾಜ್ ಕುಂದ್ರಾಗೆ ಬಿಗ್ ರಿಲೀಫ್

ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. 150 ಕೋಟಿ ರೂಪಾಯಿಗಳ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜ್ ಕುಂದ್ರಾ ಅವರು ವಿದೇಶಕ್ಕೆ ಪ್ರಯಾಣಿಸುವ ಮೊದಲು 1 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಲು ಮತ್ತು ನ್ಯಾಯಾಲಯದ ಪೂರ್ವಾನುಮತಿ ಪಡೆಯಲು ವಿಶೇಷ ನ್ಯಾಯಾಲಯವು ಆದೇಶಿಸಿದೆ.

Loading...