ವೀಸಾ ಸಿಗದ ಕಾರಣ ವೈದ್ಯೆ ಆತ್ಮಹತ್ಯೆ!
ಉದ್ಯೋಗಕ್ಕಾಗಿ ಅಮೆರಿಕ ಹೊರಟಿದ್ದ ವೈದ್ಯರೊಬ್ಬರು ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ವೀಸಾಗಾಗಿ ಮನವಿ ಸಲ್ಲಿಸಿದ್ದರು. ಆದರೆ ಆಕೆಯ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ರಾಬರಿ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ನೇ ಶಾಮೀಲು ಆಗಿರುವುದರಿಂದ ಪೊಲೀಸ್ ಇಲಾಖೆ (police department) ಅಲರ್ಟ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ (Bengaluru Police Commissioner) ಸೀಮಂತ್ ಕುಮಾರ್ ಸಿಂಗ್, ಬೆಂಗಳೂರಿನ ಎಲ್ಲಾ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ಗಳ ಮಾನಿಟರಿಂಗ್ಗೆ ಸೂಚನೆ ನೀಡಿದ್ದಾರೆ.
Jharkhand News: ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆ ವ್ಯಕ್ತಿ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ದೆಹಲಿಯ ಕೆಂಪು ಕೋಟೆಯ ಬಳಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಹಣ ಸಂಗ್ರಹದ ಕುರಿತು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ. ದೆಹಲಿಯ ಸ್ಪೋಟಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳ ಖರಿದಿಗೆ ಐವರು ವೈದ್ಯರು ಹಣ ನೀಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.
ಕೋರಮಂಗಲದಲ್ಲಿರುವ ಕಾಲ್ಸೆಂಟರ್ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಕಾಲ್ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿ, ಅಪಹರಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಬಂಧಿಸಲಾಗಿದೆ.
Chamarajangar News: ಆಭರಣ ತಯಾರಕರೊಬ್ಬರ ಕಾರನ್ನು ಅಡ್ಡಗಟ್ಟಿ ಕೆಜಿಗಟ್ಟಲೆ ಚಿನ್ನ ದೋಚಿದ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ನಡೆದಿದೆ. ನವೆಂಬರ್ 20ರ ರಾತ್ರಿ ಆಭರಣ ತಯಾರಕ ಕೇರಳ ರಾಜ್ಯದ ಕ್ಯಾಲಿಕೇಟ್ ನಿವಾಸಿ ವಿನು ಪೊಲೀಸರಿಗೆ ದೂರು ನೀಡಿದ್ದರು.
Kalaburagi Murder Case: ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಬೀರಪ್ಪಾ ಪೂಜಾರಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನು ಪತ್ನಿಯೇ ಸುಪಾರಿ ಕೊಟ್ಟು ಮುಗಿಸಿದ್ದಾಳೆ.
ಕೇಂದ್ರ ದೆಹಲಿಯ ಸೇಂಟ್ ಕೊಲಂಬಾ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿರುವ ಪೊಲೀಸರು ವಿದ್ಯಾರ್ಥಿಗೆ ಶಿಕ್ಷಕರು ಅವಮಾನ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಶೀಘ್ರದಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Mumbai News: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
Bengaluru Robbery Case: ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.
Dharawada news: ಸಾಲದ ಬಾಧೆಯಿಂದ ನೊಂದಿದ್ದ ನಾರಾಯಣ ಶಿಂಧೆ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಕೆಲಸಕ್ಕೆ ತೆರಳಿದ ತಾಯಿ ಬದುಕಿಕೊಂಡಿದ್ದಾಳೆ. ಶಾಲೆಗೆ ಹೊರಟು ಸಮವಸ್ತ್ರದಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆಯೇ ಮೊದಲು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಹಾರಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ ಖಾಲೀದ್ ಫೈಲ್ವಾನ್ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.
Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ ಯುವಕರ ಗಲಾಟೆ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.
ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಾಡು ಹಗಲೇ ಗುಂಡಿನ ದಾಳಿ ನಡೆದ ಘಟನೆ ಮಹಾರಾಷ್ಟ್ರದ ಕಂಡಿವಲಿಯ ಚಾರ್ಕೋಪ್ನಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ಫುಟೇಜ್ ವೈರಲ್ ಆಗಿದೆ. ಬೈಕ್ನಲ್ಲಿ ಬಂದ ಮೂವರು ಶೂಟರ್ಗಳ ಬಗ್ಗೆ ತನಿಖೆ ನಡೆಸಲಾಗಿದ್ದು ದಾಳಿಯ ಮಾಸ್ಟರ್ ಮೈಂಡ್ ಮುನ್ನಾ ಮಯುದ್ದೀನ್ ಶೇಖ್ನನ್ನು ಚಾರ್ಕೋಪ್ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೈಲೇಶ್ ಕಂಬಾಲಾ ಎನ್ನುವವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತನ್ನ ಮನೆಯ ಬಳಿಯೇ ಹೂತಿಟ್ಟ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೊಲೆ ಕಾರಣವನ್ನು ಪತ್ತೆ ಹಚ್ಚಿದ್ದ ಪೊಲೀಸರಿಗೆ ದೊಡ್ಡ ಶಾಖ್ ಎದುರಾಗಿದೆ. ಅಧಿ ಕಾರಿಯು ಅರಣ್ಯ ಇಲಾಖೆಯಲ್ಲಿರುವ ಮಹಿಳಾ ಸಿಬ್ಬಂದಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಆ ಮಹಿಳೆಗೋಸ್ಕರವೇ ಕೊಲೆ ಮಾಡಿದ್ದು ತನಿಖೆ ವೇಳೆ ತಿಳಿದುಬಂದಿದೆ.
Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.
Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.