ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪರಿಚಯ; ವಿವಾಹವಾಗುವುದಾಗಿ ನಂಬಿಸಿ ದೈಹಿಕ ಕಿರುಕುಳ, 14.8 ಲಕ್ಷ ರುಪಾಯಿ ವಂಚನೆ

ವಿವಾಹವಾಗುವುದಾಗಿ ನಂಬಿಸಿ ಕಿರುಕುಳ, ವಂಚನೆ

ವೈವಾಹಿಕ ವೆಬ್ ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ನಾಗಪುರ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ. ಮಾತ್ರವಲ್ಲದೆ ಹೊಸ ಉದ್ಯಮ ಪ್ರಾರಂಭಿಸಲು ಸುಮಾರು 14.8 ಲಕ್ಷ ರೂ. ಪಡೆದು ವಂಚನೆಯನ್ನು ಕೂಡ ಮಾಡಿದ್ದಾನೆ ಎಂದು ಆರೋಪಿಸಿರುವ ಮಹಿಳೆ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣ: ಐವರ ಬಂಧನದ ಬಳಿಕ ಸ್ಪೋಟಕ ಸತ್ಯ ಬಹಿರಂಗ

ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆಗೆ ಟಿಎಂಸಿಯಿಂದಲೇ ಸಂಚು?

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ತೃಣಮೂಲ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಟಿಎಂಸಿಯ ಮಾಜಿ ಶಾಸಕಿಯ ಜೊತೆ ನಂಟು ಹೊಂದಿದ್ದವರಿಂದಲೇ ನಡೆದಿದೆ ಎನ್ನುವ ಸ್ಪೋಟಕ ಸತ್ಯವೊಂದು ಈಗ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದ್ದು, ಅವರು ಯಾರು ಗೊತ್ತೇ?

ಬೆಂಗಳೂರಿನ ಹೋಟೆಲ್‌ನಲ್ಲಿ ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಕೇರಳ ಮೂಲದ ಇಬ್ಬರ ಬಂಧನ

ಕುರಿ ಮಟನ್‌ ಎಂದು ಗೋಮಾಂಸದ ಆಹಾರ ಮಾರಾಟ; ಇಬ್ಬರು ಅರೆಸ್ಟ್‌

ಇತ್ತೀಚೆಗೆ ಬೆಂಗಳೂರಿನ ಹೋಟೆಲ್‌ಗೆ ತೆರಳಿದ್ದ ಗ್ರಾಹಕರೊಬ್ಬರು ಕುರಿ ಮಾಂಸದ ಆಹಾರ ಸೇವಿಸುವಾಗ ಅನುಮಾನ ಬಂದಿತ್ತು. ಈ ಕುರಿತು ಅವರು ಆವಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಕೇಸ್‌ ದಾಖಲಿಸಿಕೊಂಡಿದ್ದ ಆವಲಹಳ್ಳಿ ಪೊಲೀಸರು, ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದಾಗ ಬೀಫ್‌ ಮಾರುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಯೋಗಿ ನಾಡಲ್ಲಿ ಮತ್ತೊಂದು ಎನ್‌ಕೌಂಟರ್‌; ಸೂರ್ಯ ಪ್ರತಾಪ್‌ ಚೌಹಾಣ್ ಹತ್ಯೆಗೈದ ಅಸಾದ್‌ನನ್ನು ಹೊಡೆದುರುಳಿಸಿದ ಪೊಲೀಸರು

ಸೂರ್ಯ ಪ್ರತಾಪ್‌ ಚೌಹಾಣ್ ಹತೈಗೈದ ಅಸಾದ್‌ ಎನ್‌ಕೌಂಟರ್‌ಗೆ ಬಲಿ

Crime News: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ 17 ವರ್ಷದ ಸೂರ್ಯ ಪ್ರತಾಪ್‌ ಚೌಹಾಣ್ ಹತ್ಯೆಯ ಆರೋಪಿ, ಹದಿಹರೆಯದ ಯುವಕ ಅಸಾದ್ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಶನಿವಾರ (ಮೇ 30) ತಡರಾತ್ರಿ ಖೋಡಾ ಮತ್ತು ಇಂದಿರಾಪುರಂ ಪೊಲೀಸರ ಜಂಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಅಸಾದ್ ಮೃತಪಟ್ಟಿದ್ದಾನೆ.

ಪ್ರಿಯಕರನೊಂದಿಗೆ ಸೇರಿ ಒಂದೂವರೆ ವರ್ಷದ ಮಗುವನ್ನು ಕೊಂದಳಾ ಪಾಪಿ ತಾಯಿ? ಕೂಸಿನ ದೇಹದ ತುಂಬೆಲ್ಲ ಸಿಗರೇಟ್‌ನಿಂದ ಸುಟ್ಟ ಗಾಯ

ಪ್ರಿಯಕರನೊಂದಿಗೆ ಸೇರಿ ಒಂದೂವರೆ ವರ್ಷದ ಮಗುವನ್ನು ಕೊಂದಳಾ ಪಾಪಿ ತಾಯಿ?

Crime News: ಒಂದೂವರೆ ವರ್ಷದ ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಕೇರಳಂ ಪೊಲೀಸರು ಬಂಧಿಸಿದ್ದಾರೆ. ಬಾಲಕ ಅರ್ಷಿದ್ ಮೇಲೆ ಮೇ 29ರಂದು ಕ್ರೌರ್ಯ ಎಸಗಿದ ಆರೋಪದ ಮೇಲೆ ಅಖಿಲಾ ಮತ್ತು ಆಕೆಯ ಸಂಗಾತಿ ಅಶ್ಕರ್‌ನನ್ನು ಬಂಧಿಸಲಾಗಿದೆ.

Chikkaballapur accident: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ; ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂದೂವರೆ ವರ್ಷದ ಮಗುವನ್ನು ನೆಲಕ್ಕೆ ಕುಕ್ಕಿ ಕೊಂದವನಿಗೆ ನರಕ ತೋರಿಸಿದ ಪೊಲೀಸರು; ಒಂದು ಹನಿ ನೀರಿಗಾಗಿ ಅಂಗಾಲಾಚಿದ ರಾಕ್ಷಸ

ಒಂದೂವರೆ ವರ್ಷದ ಮಗುವನ್ನು ನೆಲಕ್ಕೆ ಕುಕ್ಕಿ ಕೊಂದವನಿಗೆ ಗುಂಡೇಟು

Firozabad Horror: ಉತ್ತರ ಪ್ರದೇಶದ ಫಿರೋಝಾಬಾದ್‌ ಜಿಲ್ಲೆಯಲ್ಲಿ ಒಂದೂವರೆ ವರ್ಷದ ಬಾಲಕನನ್ನು ವಿರಾಜ್‌ ಎಂಬಾತ ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದಿರುವ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬಳಿಕ ಭಾರಿ ಆಕ್ರೋಶ ವ್ಯಕ್ತವಾಗಿದೆ. ತಲೆ ಮರೆಸಿಕೊಂಡಿರುವ ವಿರಾಜ್‌ನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ನಂತರ ಮತ್ತೋರ್ವ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ

ಅಭಿಷೇಕ್ ಬ್ಯಾನರ್ಜಿ ನಂತರ, ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ

Kalyan Banerjee Assaulted: ಅಭಿಷೇಕ್ ಬ್ಯಾನರ್ಜಿ ನಂತರ ಇದೀಗ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆಯ ಹೊರಗೆ ಘರ್ಷಣೆ ನಡೆದಿದ್ದು, ಟಿಎಂಸಿ ಹಿರಿಯ ನಾಯಕ ಮತ್ತು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಗೆ ಗಾಯವಾಯಿತು.

ಸೋದರಳಿಯನ ಮೇಲಿನ ದಾಳಿ ಖಂಡಿಸಿ ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ʼಇಂಡಿಯಾʼ ಒಕ್ಕೂಟ

ಮಮತಾ ಬ್ಯಾನರ್ಜಿಗೆ ʼಇಂಡಿಯಾʼ ಒಕ್ಕೂಟದ ಬೆಂಬಲ

ವಿಧಾನ ಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ತೃಣ ಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಂದ ಇಂಡಿಯಾ ಒಕ್ಕೂಟ ಸದಸ್ಯರು ದೂರವಾಗಿದ್ದಾರೆ ಎನ್ನುವ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ. ಟಿಎಂಸಿ ನಾಯಕ, ಮಮತಾ ಬ್ಯಾನರ್ಜಿ ಅವರ ಸೋದರಳಿಯನ ಮೇಲಿನ ದಾಳಿಯನ್ನು ಇಂಡಿಯಾ ಒಕ್ಕೂಟದ ಸದಸ್ಯರು ಖಂಡಿಸಿ ಮಮತಾ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಮಂತ್ರಾಲಯದ ಬಳಿ ದುರಂತ; ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಒಂದೂವರೆ ವರ್ಷದ ಕಂದಮ್ಮನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದ ಪಾಪಿ; ಘೋರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಒಂದೂವರೆ ವರ್ಷದ ಕಂದಮ್ಮನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದ ಪಾಪಿ

Firozabad Horror: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದೆ ಎಂದು ಪಾಪಿಯೊಬ್ಬ ಒಂದೂವರೆ ವರ್ಷದ ಬಾಲಕನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದಿದ್ದಾನೆ. ಉತ್ತರ ಪ್ರದೇಶದ ಫಿರೋಝಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಕೊಲೆಗೈದ ವ್ಯಕ್ತಿ ಈ ಬಾಲಕನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ.

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿಯಲ್ಲಿ ಅಕ್ರಮ ಎಸಗಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಮೂವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

illegal mining case: ಅಕ್ರಮ ಅದಿರು ಸಾಗಾಟ; ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಅದಿರು ಸಾಗಾಟ; ಎರಡು ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಗಣಿಗಾರಿಕೆ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ಜನಾರ್ದನ ರೆಡ್ಡಿ ಸೇರಿ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಮೊಟ್ಟೆ, ಕಲ್ಲು ಎಸೆದ ಉದ್ರಿಕ್ತ ಗುಂಪು

ಅಭಿಷೇಕ್ ಬ್ಯಾನರ್ಜಿ ಮೇಲೆ ಮೊಟ್ಟೆ, ಕಲ್ಲು ಎಸೆದ ಉದ್ರಿಕ್ತ ಗುಂಪು

Eggs and Stones Thrown at Abhishek Banerjee: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಮೊಟ್ಟೆ ಹಾಗೂ ಕಲ್ಲುಗಳನ್ನು ಎಸೆದು ಹಲ್ಲೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಸೋನಾರ್‌ಪುರದಲ್ಲಿ ಘಟನೆ ನಡೆದಿದೆ. ಚುನಾವಣೋತ್ತರ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳಿದಾಗ ಈ ಘಟನೆ ನಡೆದಿದೆ.

ಆಸ್ತಿ ಮಾರಿ ಓದಿಸಿದ ಪತಿಗೇ ಕೈಕೊಟ್ಟ ಶಿಕ್ಷಕಿ; ಪತ್ನಿಯ ಅಕ್ರಮ ಸಂಬಂಧ ಹೊರಬರುತ್ತಿದ್ದಂತೆ ಗೋಳಾಡಿದ ಅಮಾಯಕನ ಸ್ಥಿತಿಗೆ ಮರುಗಿದ ಸ್ಥಳೀಯರು

ಶಿಕ್ಷಕಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಪತಿ ಹೇಳಿದ್ದೇನು?

Husband Accuses Teacher: ಬಿಪಿಎಸ್‌ಸಿ ಮೂಲಕ ಶಿಕ್ಷಕಿಯಾಗಿ ಆಯ್ಕೆಯಾದ ನಂತರ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಪತಿಯೊಬ್ಬರು ಆರೋಪಿಸಿದ್ದಾರೆ. ಆಕೆಗೆ ಶಿಕ್ಷಣ ಕೊಡಿಸಲು ಆಸ್ತಿ ಮಾರಿದ್ದಾಗಿ ಗೋಳಾಡಿದ್ದಾರೆ. ಪತಿ ಮತ್ತು ಪೊಲೀಸರೊಂದಿಗೆ ಮಹಿಳೆ ಸಾರ್ವಜನಿಕ ಸ್ಥಳದಲ್ಲಿ ವಾಗ್ವಾದ ನಡೆಸಿದ್ದಾಳೆ. ಇದರ ವಿಡಿಯೊ ವೈರಲ್ ಆಗಿದೆ.

“ಮಾನ್ವಿ ಹೊರಗಡೆ ಇರು”: ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಗಳ ಸುರಕ್ಷತೆಗಾಗಿ ಪತ್ರ ಬರೆದ ಅಪ್ಪ; ದೇಶವನ್ನೇ ಭಾವುಕವಾಗಿಸಿದ ಆ ಸಂದೇಶದಲ್ಲಿ ಏನಿದೆ?

ಸಾಯುವ ಕ್ಷಣದಲ್ಲೂ ಮಗಳ ಸುರಕ್ಷತೆಗಾಗಿ ಮಿಡಿದ ತಂದೆಯ ಹೃದಯ

ಗುಜರಾತ್‌ನ ಗಾಂಧಿನಗರದಲ್ಲಿ ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟ ಮತ್ತು ಸಾಲದ ಒತ್ತಡದಿಂದ ಬಳಲುತ್ತಿದ್ದ 42 ವರ್ಷದ ಪಂಕಜ್ ಭಾನ್ಸಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಮಿನಾಶಕ ಸೇವಿಸುವ ಮೊದಲು ಅವರು ಮನೆಯ ಬಾಗಿಲಿನ ಮೇಲೆ ಪತ್ನಿ, ಮಗಳಿಗಾಗಿ "ಒಳಗೆ ವಿಷಕಾರಿ ಅನಿಲವಿದೆ. ಯಾರೂ ಒಳ ಬರಬೇಡಿ, ನೀರು ಬಳಸಬೇಡಿ" ಎಂಬ ಎಚ್ಚರಿಕೆ ಪತ್ರ ಬರೆದು ಅಂಟಿಸಿದ್ದರು. ತಮ್ಮ ಪತ್ನಿ ಮತ್ತು ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬರೆದ ಈ ಪತ್ರ ಎಲ್ಲರ ಮನಸ್ಸನ್ನೂ ಕಲಕಿದೆ. ಹಲವು ದಿನಗಳ ಬಳಿಕ ಸಂಬಂಧಿಕರು ಶವವನ್ನು ಪತ್ತೆಹಚ್ಚಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ; ಅದೃಷ್ಟವಶಾತ್‌ ತಪ್ಪಿದ ಅನಾಹುತ

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ

Chitrakoota Kaushalya School: ಇನ್ನೂ ಶೈಕ್ಷಣಿಕ ವರ್ಷ ಆರಂಭವಾಗದ ಕಾರಣ ಹೆಚ್ಚಿನ ಮಕ್ಕಳು ಶಾಲೆಗೆ ಆಗಮಿಸಿರಲಿಲ್ಲ. ಬೆಂಕಿ ಹೊತ್ತಿದ ಬಳಿಕ ಅಲ್ಲಿದ್ದ ಕೆಲ ಸಿಬ್ಬಂದಿಗಳು ಹೊರಗೆ ಬಂದಿದ್ದು, ಇದರಿಂದಾಗಿ ಅದೃಷ್ಟವಶಾತ್‌ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Ankola Bus Accident: ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು; 21 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು

ಬಳ್ಳಾರಿಯಿಂದ ಗೋವಾ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕುಟುಂಬ ಸದಸ್ಯರ ಸಾವಿನಿಂದ ಎದೆ ಬಡಿದುಕೊಂಡು ಗೋಳಾಡಿದ ಮಹಿಳೆ; ಕೊಲೆ ರಹಸ್ಯ ಬಯಲಾಗುತ್ತಿದ್ದಂತೆ ಆಗಿದ್ದೇ ಬೇರೆ!

ಎದೆ ಬಡಿದುಕೊಂಡು ಗೋಳಾಡಿದ ಮಹಿಳೆಯೇ ಕೊಲೆಗಾತಿ!

Crime News: ಒಂದೇ ಕುಟುಂಬ ನಾಲ್ವರನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಯೊಬ್ಬಳು ಈ ಘಟನೆಯಿಂದ ತುಂಬಾ ದುಃಖಿತಳಾಗಿದ್ದು, ಜೋರಾಗಿ ಎದೆ ಬಡಿದುಕೊಳ್ಳುತ್ತಾ ಬೊಬ್ಬೆ ಹಾಕಿಕೊಂಡು ಅತ್ತಿದ್ದಾಳೆ. ಪ್ರಕರಣದಲ್ಲಿ ಈಕೆಯೇ ಪ್ರಮುಖ ಆರೋಪಿ ಎಂದು ತಿಳಿದುಬಂದಾಗ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರವಾಗಿ ಹತ್ಯೆ ಮಾಡಿದ 16ರ ಅಪ್ರಾಪ್ತ

10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ

Crime News: 16 ವರ್ಷದ ಬಾಲಕನೊಬ್ಬ ತನ್ನ 10 ವರ್ಷದ ಸ್ನೇಹಿತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಅವನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನನ್ನು ಬಾಲಾಪರಾಧಿಗಳ ವೀಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ.

ಆಸ್ತಿ ವಿವಾದ: ಸಮಾಜವಾದಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮೇಲೆ ಹಲ್ಲೆ, ವಿಡಿಯೋ ವೈರಲ್!

ಎಸ್‌ಪಿ ಮಹಿಳಾ ಘಟಕದ ಅಧ್ಯಕ್ಷೆ ಮೇಲೆ ಭೀಕರ ಹಲ್ಲೆ!

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾರ್ಗಿ ಪಟೇಲ್ ಅವರ ಮೇಲೆ ಅವರ ನಿವಾಸದಲ್ಲೇ ಹಲ್ಲೆ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಸ್ತಿ ಮತ್ತು ವ್ಯಾಪಾರ ಪಾಲುದಾರಿಕೆ ಸಂಬಂಧಿತ ವಿವಾದವೇ ದಾಳಿಗೆ ಕಾರಣ ಎನ್ನಲಾಗಿದ್ದು, ಮಾಜಿ ಬ್ಲಾಕ್ ಪ್ರಮುಖ್ ಪ್ಯಾರೇಲಾಲ್ ಯಾದವ್ ಅವರ ಕುಟುಂಬ ಸದಸ್ಯರು ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಾಯಗೊಂಡ ನಾಯಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijayapur Murder Case: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಜಮೀನು ವಿಚಾರಕ್ಕೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ!

ವಿಜಯಪುರದಲ್ಲಿ ಜಮೀನು ವಿಚಾರಕ್ಕೆ 6 ಮಂದಿಯ ಭೀಕರ ಕೊಲೆ!

ವಿಜಯಪುರ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಭೀಕರ ಘಟನೆ ನಡೆದಿದೆ. ಗೊಳಗಿ ಮತ್ತು ನಿರಾಳೆ ಕುಟುಂಬಗಳ ನಡುವೆ ಜಮೀನು ವಿವಾದವಿತ್ತು. ಇದಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಗೊಳಗಿ ಕುಟುಂಬದವರು, ಆರು ಮಂದಿಯನ್ನು ಭೀಕರವಾಗಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ.

ಮಗಳ ಕೊಲೆ ಆರೋಪದಲ್ಲಿ ಸಿಲುಕಿದ್ದ ತಂದೆ, ಮಗ ಜೈಲು ಪಾಲು; ಜೀವಂತವಾಗಿ ಮರಳಿ ಬಂದ ಯುವತಿ!

ಸಾವನ್ನಪ್ಪಿದ್ದ ಯುವತಿ ಜೀವಂತವಾಗಿ ವಾಪಸ್!

ಮಧ್ಯಪ್ರದೇಶದ ನಾಪತ್ತೆಯಾಗಿದ್ದ ಯುವತಿ ಶಿವಾನಿ, ಕೊಲೆಯಾಗಿದ್ದಾಳೆ ಎಂದು ಭಾವಿಸಿ ಆಕೆಯ ತಂದೆ ಮತ್ತು ಸಹೋದರರನ್ನು ಪೊಲೀಸರು ಬಂಧಿಸಿದ್ದರು. ಮಹಾರಾಷ್ಟ್ರದಲ್ಲಿ ಪತ್ತೆಯಾದ ತಲೆಯಿಲ್ಲದ ಸುಟ್ಟ ಶವವನ್ನು ಯಾವುದೇ ಖಚಿತ ಪುರಾವೆಗಳಿಲ್ಲದೆ ಶಿವಾನಿಯದ್ದೆಂದು ಗುರುತಿಸಲಾಗಿತ್ತು. ಆದರೆ 22 ದಿನಗಳ ಬಳಿಕ ಶಿವಾನಿ ಜೀವಂತವಾಗಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದೆ. ಇದೀಗ ಆ ಶವ ಯಾರದ್ದು ಎಂಬ ಪ್ರಶ್ನೆ ಪೊಲೀಸರ ಮುಂದಿದೆ.

ಐಟಿ ಕೆಲಸ ಬಿಟ್ಟು ಬಂದು ಕೃಷಿಕನಾಗಿದ್ದ ಬೆಂಗಳೂರು ಟೆಕ್ಕಿ ಸಿಡಿಲು ಬಡಿದು ಸಾವು

ಸಿಡಿಲು ಬಡಿದು ಬೆಂಗಳೂರು ಟೆಕ್ಕಿ ಸಾವು

ಲಕ್ಷಾಂತರ ರೂಪಾಯಿ ಆದಾಯ ಹೊಂದಿದ್ದ ಕಾರ್ಪೊರೇಟ್ ಕೆಲಸ ಬಿಟ್ಟು ಬಂದು ಕೃಷಿಕನಾಗಿದ್ದ ಬೆಂಗಳೂರು ಟೆಕ್ಕಿ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವರಾದ ರೋಷನ್ ಬಾಲಕೃಷ್ಣ ಮೃತರು. ಐಟಿ ವಲಯದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಅವರು ಇತ್ತೀಚೆಗೆ ಕೆಲಸ ತ್ಯಜಿಸಿ ಕೃಷಿ ವಲಯಕ್ಕೆ ಕಾಲಿಟ್ಟಿದ್ದರು.

Loading...