ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

25 ವರ್ಷದ ಯುವತಿಯೊಂದಿಗೆ ಮದುವೆಯಾಗಿದ್ದ ರಾಜಕಾರಣಿ ಸಾವು

ಮದುವೆಯಾಗಿ ವಾರ ಕಳೆದಿಲ್ಲ ವರ ಸಾವು, ವಧುವಿನ ಮೇಲೆ ಶಂಕೆ

ಎರಡನೇ ಮದುವೆಯಾಗಿದ್ದ ರಾಜಕಾರಣಿಯೊಬ್ಬರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಿಜೆಪಿಯಿಂದ ಅಮಾನತುಗೊಂಡಿದ್ದ ಮಾಜಿ ಕೌನ್ಸಿಲರ್ ನಯೀಮ್ ಖಾನ್ ವಾರಗಳ ಹಿಂದೆಯಷ್ಟೇ 25 ವರ್ಷದ ಯುವತಿಯನ್ನು ಮದುವೆಯಾಗಿದ್ದ. ಇದೀಗ ಆತ ನಿಗೂಢವಾಗಿ ಸಾವನ್ನಪ್ಪಿದ್ದು, ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ತನಿಖೆಗೆ ಕುಟುಂಬ ಆಗ್ರಹಿಸಿದೆ.

Aryan khan: ಶಾರುಖ್‌ ಪುತ್ರನ ಅಸಹ್ಯ ವರ್ತನೆ; ಬೆಂಗಳೂರಿನಲ್ಲಿ ದೂರು ದಾಖಲು

ಶಾರುಖ್‌ ಖಾನ್‌ ಪುತ್ರ ಆರ್ಯನ್‌ ವಿರುದ್ಧ ದೂರು ದಾಖಲು

ಪಬ್‌ವೊಂದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಹಿಂದೂ ಮುಖಂಡರೊಬ್ಬರು ಪೊಲೀಸ್ ಆಯುಕ್ತರು ಮತ್ತು ಡಿಜಿಪಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು.

Murder Case: ದತ್ತ ಜಯಂತಿ ಬ್ಯಾನರ್‌ ಗಲಾಟೆ; ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಬ್ಯಾನರ್‌ ಗಲಾಟೆ; ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

Chikkamagaluru News: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರ ಕೊಲೆಯಾಗಿದೆ. ಚಿಕ್ಕಮಗಳೂರಿನ ಸಖರಾಯಪಟ್ಟಣ ಬಸ್ ನಿಲ್ದಾಣದ‌ ಮುಂಭಾಗ ಬ್ಯಾನರ್ ವಿಚಾರಕ್ಕೆ ಭಜರಂಗದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು.

Shivamogga News: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಪುತ್ರ ಆಕಾಶ್ ಆತ್ಮಹತ್ಯೆ

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಹಾಗೂ ಪುತ್ರ ನೇಣಿಗೆ ಶರಣು

ಡಾ. ಜಯಶ್ರೀ ಮತ್ತು ಮಗ ಆಕಾಶ್ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ಡಾ. ಜಯಶ್ರೀ ಅವರ ಪತಿ ಹಾಗೂ ಸೊಸೆ ಕೂಡ ಈ ಮೊದಲು ಆತ್ಮಹತ್ಯೆಗೆ ಶರಣಾಗಿದ್ದರು.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

Digital Arrest: ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌, ವೃದ್ಧ ದಂಪತಿಯ 84 ಲಕ್ಷ ರೂ. ಬಚಾವ್

ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌‌

ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನಡಿಕ್ಟ್‌ ಫರ್ನಾಂಡಿಸ್ (84) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿಸೆಂಬರ್ 1ರಂದು ಸೈಬರ್‌ ಕ್ರಿಮಿನಲ್‌ಗಳು (Cyber crime) ಉತ್ತರ ಪ್ರದೇಶದ ಸಿಐಡಿ ಪೊಲೀಸ್ ಎಂಬ ಸೋಗಿನಲ್ಲಿ ಮೊಬೈಲ್ ಫೋನ್- ವಾಟ್ಸ್ಯಾಪ್​ ಮೂಲಕ ಸಂಪರ್ಕಿಸಿದ್ದರು. ವೃದ್ಧ ದಂಪತಿಗಳು 6 ಕೋಟಿ ಮೋಸ ಮಾಡಿರುವುದಾಗಿ, ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಆರೆಸ್ಟ್​​ಗೆ ಒಳಪಡಿಸಿದ್ದರು.

Actor Darshan: 82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

Renuka swamy murder case: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ 82 ಲಕ್ಷ ರೂ. ನಗದು ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ಹೇಳಿಕೆ ಪಡೆಯಲಾಗಿದೆ. ಐಟಿ ಅಧಿಕಾರಿಗಳ ಮುಂದೆ A2 ಆರೋಪಿ ದರ್ಶನ್‌ ಹಾಗೂ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕೃಷಿ ಮತ್ತು ಪಶು ಸಂಗೋಪನೆಯಿಂದ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ದರ್ಶನ್, ವಿಜಯಲಕ್ಷ್ಮಿ, ಪ್ರಧೋಷ್, ನಿಖಿಲ್ ಹಾಗೂ ಕೇಶವಮೂರ್ತಿ ಮನೆಯಲ್ಲಿ 82 ಲಕ್ಷ ರೂಪಾಯಿ ಹಣ ಸಿಕ್ಕಿತ್ತು.

Love jihad: ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್‌

ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ

Physical Abuse: ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಉಸ್ಮಾನ್, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನಾಭರಣ ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೈಹಿಕ ಮತ್ತು ಮಾನಸಿಕ ನೋವಿಗೊಳಗಾದ ಯುವತಿ 9 ತಿಂಗಳ ಹಿಂದೆಯೇ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ತಿಳಿದು ಬಂದಿದೆ.

ಓಡಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಹಾಸ್ಟೆಲ್ ಸಿಬ್ಬಂದಿ, ತನಿಖೆಗೆ ಆದೇಶ

ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಶಿಕ್ಷೆ

ಪದೇ ಪದೇ ಹಾಸ್ಟೆಲ್ ನಿಂದ ಓಡಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಹಾಸ್ಟೆಲ್ ನಲ್ಲಿ ಸರಪಳಿಯಿಂದ ಕಟ್ಟಿ ಹಾಕಿ ಬಂಧಿಸಿರುವ ಘಟನೆ ಒಡಿಶಾದ ಬಾಲಸೋರ್‌ನಲ್ಲಿ ನಡೆದಿದೆ. ಈ ಕುರಿತು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಾಹಿತಿ ತಿಳಿದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಸರ್ಕಾರಿ ಹಾಸ್ಟೆಲ್‌ನಲ್ಲಿ 4ನೇ ತರಗತಿಯ ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಲಾಗಿತ್ತು.

Haveri News: ಹಾವೇರಿನಲ್ಲಿ ರೈತನ ಬಲಿ ಪಡೆದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

ಹಾವೇರಿನಲ್ಲಿ ರೈತನ ಬಲಿ ಪಡೆದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿ ಸಿದ್ದಗೇರಿ ಗ್ರಾಮದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಎರಡು ಗ್ರಾಮಗಳ ರೈತರ ನೆಮ್ಮದಿ ಕೆಡಿಸಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.

ಭಾರತದ ಕ್ರೂರ ಸೈಕೋಪಾತ್‌ ಇವಳು; ತನಗಿಂತ ಸುಂದರವಾಗಿದ್ದಕ್ಕೆ ಮೂವರು ಬಾಲಕಿಯರ ಹತ್ಯೆ: ಮಗನನ್ನೂ ಕೊಂದ ಪಾಪಿ

ಸುಂದರವಾಗಿದ್ದಕ್ಕೆ ಮೂವರು ಬಾಲಕಿಯರ ಹತ್ಯೆ

Haryana Crime: ಮದುವೆಗೆ ಬಂದಿದ್ದ ಬಾಲಕಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಕೊನೆಗೆ ಅದು ಕೊಲೆ ಎಂದು ದೃಢಪಟ್ಟ ಘಟನೆ ಹರಿಯಾಣದಲ್ಲಿ ನಡೆದಿದೆ. ತನಗಿಂತ ಸುಂದರವಾಗಿದ್ದಕ್ಕೆ ಮಹಿಳೆಯೊಬ್ಬಳು ಈ ಕೊಲೆ ಮಾಡಿದ್ದಾಳೆ. ಅಷ್ಟೇ ಅಲ್ಲ, ಅದಕ್ಕೂ ಮೊದಲು ಈಕೆ ತನ್ನ ಮಗ ಹಾಗೂ ಇಬ್ಬರು ಬಾಲಕಿಯರನ್ನು ಕೊಂದಿರುವುದು ಕೂಡ ಬೆಳಕಿಗೆ ಬಂದಿದೆ.

Bengaluru Crime News: ಕಮಿಷನರ್‌ ಕಚೇರಿ ಆವರಣದಲ್ಲೇ ಆರೋಪಿಯ ಕಾರಿನಿಂದ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

ಕಮಿಷನರ್‌ ಕಚೇರಿ ಆವರಣದಲ್ಲೇ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

Theft: ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ.

Murder Case: ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

Bengaluru Crime News: ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಪತ್ನಿಗೆ ಸ್ಟ್ರೋಕ್ ಆಗಿ ವೀಲ್‌ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಆರೋಗ್ಯ ಸಮಸ್ಯೆ ಸೇರಿದಂತೆ ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಜಗಳ ಉಲ್ಭಣಿಸಿ ಕೊಲೆಗೆ ಕಾರಣವಾಗಿದೆ.

Thawarchand Gehlot: ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Karnataka Governor: ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳದ ಗಂಭೀರ ಆರೋಪಗಳು ಹೊರಬಿದ್ದಿದ್ದು, ತನ್ನ ಮಗುವನ್ನು ಬಲವಂತವಾಗಿ ಇರಿಸಿಕೊಳ್ಳಲಾಗಿದೆ ಎಂದು ಪತ್ನಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಕುಟುಂಬ ಕಲಹ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ.

ಬಲಗೊಳ್ಳುತ್ತಿದೆ ಜೈಶ್ ಮಹಿಳಾ ಘಟಕ: 5,000ಕ್ಕೂ ಹೆಚ್ಚು ಮಹಿಳೆಯರಿಗೆ 500 ರೂ. ಶುಲ್ಕ, ಆನ್‌ಲೈನ್ ತರಬೇತಿ

ಜೈಶ್ ಮಹಿಳಾ ವಿಭಾಗಕ್ಕೆ 5,000ಕ್ಕೂ ಹೆಚ್ಚು ಮಹಿಳೆಯರ ನೇಮಕ

ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಘಟಕ ಜಮಾತ್ ಉಲ್ ಮೊಮಿನಾತ್‌ಗಾಗಿ ನೇಮಕಾತಿ ಅಭಿಯಾನ ಅಕ್ಟೋಬರ್ 8ರಂದು ಪ್ರಾರಂಭವಾಗಿದ್ದು, ಈಗಾಗಲೇ 5,000ಕ್ಕೂ ಹೆಚ್ಚು ಸದಸ್ಯರ ನೇಮಕಾತಿ ಮಾಡಲಾಗಿದೆ. 500 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

Stone pelting: ಬನಾರಸ್‌ ವಿಶ್ವವಿದ್ಯಾಲಯ ಕೊತಕೊತ; ವಿದ್ಯಾರ್ಥಿ , ಸಿಬ್ಬಂದಿಯ ನಡುವೆ ಘರ್ಷಣೆ, ಕಲ್ಲು ತೂರಾಟ

ಬನಾರಸ್‌ ವಿಶ್ವವಿದ್ಯಾಲಯ ಕೊತಕೊತ; ವಿದ್ಯಾರ್ಥಿ, ಸಿಬ್ಬಂದಿಯ ನಡುವೆ ಘರ್ಷಣೆ

ವಾರಣಾಸಿಯ ಬಿರ್ಲಾ ಹಾಸ್ಟೆಲ್‌ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳ ನಡುವೆ ಘರ್ಷಣೆಯಾಗಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಇಬ್ಬರು ಅರೆಸ್ಟ್‌ ಆಗಿದ್ದಾರೆ.

Physical Assault: ಕಾಂಗ್ರೆಸ್ ಶಾಸಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ರಾಹುಲ್ ಮಮ್‌ಕೂಟತಿಲ್ ನಾಪತ್ತೆ

ಕಾಂಗ್ರೆಸ್ ಶಾಸಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Congress MLA Rahul Mamkootathil : ಕೇರಳ ಕಾಂಗ್ರೆಸ್‌ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಎರಡೆರಡು ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಮೊದಲನೇ ಆರೋಪ ಕೇಳಿಬಂದ ಕೂಡಲೇ ಶಾಸಕ ಪರಾರಿಯಾಗಿದ್ದಾನೆ. ಇದೀಗ ಮತ್ತೊಬ್ಬ ಯುವತಿ ತನಗೂ ಅನ್ಯಾಯವಾಗಿದೆ ಎಂದು ದೂರು ನೀಡಿದ್ದಾಳೆ. ಪೊಲೀಸರು ಆರೋಪಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.

109 ಬಾಕ್ಸ್‌ ಸ್ಫೋಟಕಗಳಿದ್ದ ಟ್ರಕ್‌ ವಶಕ್ಕೆ; ದೆಹಲಿ ದಾಳಿಯಂತೆ ಸ್ಫೋಟ ನಡೆಸಲು ಇತ್ತಾ ಪ್ಲಾನ್‌?

109 ಪೆಟ್ಟಿಗೆ ಸ್ಫೋಟಕ ಸಾಗಿಸುತ್ತಿದ್ದ ಟ್ರಕ್

ಸುಮಾರು 109 ಪೆಟ್ಟಿಗೆಗಳಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ರಾಜಸ್ಥಾನದಲ್ಲಿ ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. 10 ಕಿಮೀ ವ್ಯಾಪ್ತಿಗೆ ಹಾನಿ ಉಂಟು ಮಾಡಬಹುದಾದ 100 ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಜೆಲಾಟಿನ್ ಸ್ಟಿಕ್‌ಗಳು, ಡಿಟೋನೇಟರ್‌ಗಳು ಇದ್ದವು.

Spying for Pakistan:  ಪಾಕ್‌ ಪರ ಬೇಹುಗಾರಿಕೆ ಆರೋಪ; ಹಣ ಸಂಗ್ರಹಿಸುತ್ತಿದ್ದ ವಕೀಲನ ಬಂಧನ

ಪಾಕ್‌ ಪರ ಬೇಹುಗಾರಿಕೆ ಆರೋಪ; ವಕೀಲನ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ (Spying for Pakistan) ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್‌ ಖಾತೆಗಳಿತ್ತು ಎಂದು ತಿಳಿದು ಬಂದಿದೆ.

ದೆಹಲಿ ಸ್ಫೋಟ: ಸಂಚುಗಾರರ ಮೊಬೈಲ್‌ನಲ್ಲಿ ಪತ್ತೆಯಾಯಿತು ಸ್ಪೋಟಕ ಮಾಹಿತಿ

ದೆಹಲಿ ಸ್ಪೋಟದ ಸಂಚಿನ ಹಿಂದಿತ್ತೇ ಹಮಾಸ್ ಕೈವಾಡ?

ದೆಹಲಿಯ ಕೆಂಪು ಕೋಟೆಯ ಬಳಿ ಕಳೆದ ತಿಂಗಳು ನಡೆದ ಕಾರು ಬಾಂಬ್ ಸ್ಪೋಟದ ಸಂಚಿನ ಹಿಂದೆ ಹಮಾಸ್ ಕೈವಾಡವಿತ್ತೇ? ಎನ್ನುವ ಶಂಕೆ ವ್ಯಕ್ತವಾಗಿದೆ. ಯಾಕೆಂದರೆ ಸಹ ಸಂಚುಗಾರನ ಮೊಬೈಲ್‌ನಲ್ಲಿ ಅನೇಕ ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ. ಹಮಾಸ್ ಮಾದರಿಯ ಡ್ರೋನ್ ಚಿತ್ರಗಳು ಸೇರಿದಂತೆ ಹಲವಾರು ವಿಡಿಯೊಗಳು ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ನ ಮಾಜಿ ಸಹಾಯಕನ ಗುಂಡಿಕ್ಕಿ ಹತ್ಯೆ

ಲಾರೆನ್ಸ್ ಬಿಷ್ಣೋಯ್ ಮಾಜಿ ಸಹಾಯಕನ ಹತ್ಯೆ

Inderpreet Singh alias Parry: ಚಂಡೀಗಢದಲ್ಲಿ ಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‍ನ ಮಾಜಿ ಸಹಾಯಕನನ್ನು ಗುಂಡಿನ ಹತ್ಯೆ ಮಾಡಲಾಗಿದೆ. ಮೃತನನ್ನು ಇಂದರ್ಪ್ರೀತ್ ಸಿಂಗ್ ಅಲಿಯಾಸ್ ಪ್ಯಾರಿ (35) ಎಂದು ಗುರುತಿಸಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಸ್ಲಿಂ ಧರ್ಮಗುರುವಿನ ಸಮಯಪ್ರಜ್ಞೆಯಿಂದ ಉಳಿಯಿತು 7 ಮಂದಿಯ ಪ್ರಾಣ; ಮೈಕ್‌ ಮೂಲಕ ಗ್ರಾಮಸ್ಥರನ್ನು ಎಬ್ಬಿಸಿದ ಮೌಲ್ವಿ

ಮುಸ್ಲಿಂ ಧರ್ಮಗುರುವಿನ ಸಮಯಪ್ರಜ್ಞೆಗೆ 7 ಮಂದಿ ಪ್ರಾಣಾಪಾಯದಿಂದ ಪಾರು

Muslim Cleric: ಮುಸ್ಲಿಂ ಧರ್ಮಗುರು ಮೌಲ್ವಿ ತಮ್ಮ ಸಮಯಪ್ರಜ್ಞೆಯಿಂದ 7 ಮಂದಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಮೈಕ್ ಮೂಲಕ ಜನರನ್ನು ಎಚ್ಚರಿಸಿ, ಅಪಘಾತದ ಬಗ್ಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಜನರು ನೀರಿನಲ್ಲಿ ಮುಳುಗುತ್ತಿದ್ದ ವಾಹನದಿಂದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

Bengaluru Fraud Case: ಲೈಂಗಿಕ ಸಮಸ್ಯೆ ಪರಿಹರಿಸುವೆ ಎಂದು ಟೆಕ್ಕಿಗೆ 48 ಲಕ್ಷ ವಂಚಿಸಿದ್ದ ವಿಜಯ್ ಗುರೂಜಿ ಅರೆಸ್ಟ್‌

ಬೆಂಗಳೂರಿನಲ್ಲಿ ಟೆಕ್ಕಿಗೆ 48 ಲಕ್ಷ ವಂಚಿಸಿದ್ದ ವಿಜಯ್ ಗುರೂಜಿ ಅರೆಸ್ಟ್‌

ರಸ್ತೆ ಪಕ್ಕದಲ್ಲಿ ಟೆಂಟ್‌ನಲ್ಲಿ ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಗಳನ್ನು ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಟೆಕ್ಕಿ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದರು. ದುಬಾರಿ ಔಷಧಗಳನ್ನು ಸೇವಿಸಿದರೂ ಟೆಕ್ಕಿಯ ಲೈಂಗಿಕ ಸಮಸ್ಯೆ ಪರಿಹಾರವಾಗಿಲ್ಲ. ಬದಲಿಗೆ ಕಿಡ್ನಿಗಳಿಗೆ ಹಾನಿಯಾಗಿದೆ. ಹೀಗಾಗಿ ಪೊಲೀಸರಿಗೆ ಟೆಕ್ಕಿ ದೂರು ನೀಡಿದ್ದರು.

ಮದುವೆ ಆಗಲು 2 ವರ್ಷ ಕಾಯುವಂತೆ ಹೇಳಿದ ಮನೆಯವರು; ಮನನೊಂದು 19 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ

ಮದುವೆಗೆ ಕಾಯಲು ಸಾಧ್ಯವಾಗದ ಯುವಕ ಆತ್ಮಹತ್ಯೆ

19 ವರ್ಷದ ಯುವಕನೊಬ್ಬ ಮದುವೆಗೆ ಇನ್ನೆರಡು ವರ್ಷ ಕಾಯಲು ಸಾಧ್ಯವಾಗದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಮದುವೆಗೆ ಸಂಬಂಧಿಸಿದ ಮಾನಸಿಕ ಒತ್ತಡ ಮತ್ತು ಆತಂಕದಿಂದ ಬಳಲುತ್ತಿದ್ದ ಯುವಕನ ಈ ಕೃತ್ಯ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

Loading...