ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

ಬೆಂಗಳೂರಿನಲ್ಲಿ ಗೆಳತಿಯ ಅಶ್ಲೀಲ ವಿಡಿಯೊ ವೈರಲ್ ಮಾಡಿದ ಯುವಕನಿಗೆ ಜೈಲು ಶಿಕ್ಷೆ

ಗೆಳತಿಯ ಅಶ್ಲೀಲ ವಿಡಿಯೊ ವೈರಲ್ ಮಾಡಿದ ಯುವಕನಿಗೆ ಜೈಲು ಶಿಕ್ಷೆ

ಯುವತಿಯು ಬೇರೊಬ್ಬರ ಜತೆ ಮದುವೆಯಾದ ವಿಷಯ ತಿಳಿದ ಆರೋಪಿ, ಆಕೆ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. ಆಕೆಯ ಖಾಸಗಿ ಫೋಟೊ ಮತ್ತು ವಿಡಿಯೊಗಳನ್ನು ಸೋಷಿಯಲ್ ಮೀಡಿಯಾ ಹಾಗೂ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಆತನಿಗೆ‌ ಬೆಂಗಳೂರಿನ ಕೋರ್ಟ್ ಶಿಕ್ಷೆ ವಿಧಿಸಿದೆ.

ಪ್ರೀತಿಗಾಗಿ ಪೊಲೀಸ್‌ ಅಧಿಕಾರಿಯಾಗಿದ್ದ ಅಪ್ಪನನ್ನೇ ಕೊಂದ ಮಗಳು; ಮೂರು ವರ್ಷಗಳ ಬಳಿಕ ಬಯಲಾಯ್ತು ರಹಸ್ಯ

ಪ್ರೀತಿಗಾಗಿ ಪೊಲೀಸ್‌ ಆಗಿದ್ದ ಅಪ್ಪನನ್ನೇ ಕೊಂದ ಮಗಳು

ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಜಯಂತ್ ಬಲ್ಲವಾರ್ ಅವರ ಸಾವಿನ ಪ್ರಕರಣದಲ್ಲಿ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಪೊಲೀಸ್‌ ಹುದ್ದೆಯಲ್ಲಿರುವ ಅವರ ಮಗಳೇ ಬಲ್ಲಾವರ್‌ ಅವರನ್ನು ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಏಪ್ರಿಲ್ 25, 2023 ರ ಬೆಳಿಗ್ಗೆ ಈ ಘಟನೆ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.

ಹೋಂ-ಸ್ಟೇ ಮಾಲೀಕನ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳಾ ಟೆಕ್ಕಿ ಮೇಲೆ ಕಾರು ಹರಿಸಿ ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಏರ್‌ಬೀಎನ್‌ಬಿ ವಿವಾದ: ಮಹಿಳಾ ಟೆಕ್ಕಿ ಸಾವು

ಇಂದೋರ್‌ನಲ್ಲಿ ಏರ್‌ಬೀಎನ್‌ಬಿ ವಿವಾದದ ನಡುವೆ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಶಂಪಾ ಪಾಂಡೆ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಇಂದೋರ್‌ನ 'ಶಿವ ವಾಟಿಕಾ ಸ್ಮೃತಿ ಎನ್‌ಕ್ಲೇವ್ 'ನಲ್ಲಿ ಈ ಭೀಕರ ಕೃತ್ಯ ನಡೆದಿದೆ

ನಾನು ಶಿವನ ಅವತಾರ ಎಂದು ನಂಬಿಸಿ ಮಹಿಳೆಯ ಮೇಲೆ  ಅತ್ಯಾಚಾರ ಮಾಡಿದ ಸ್ವಯಂ ಘೋಷಿತ ದೇವಮಾನವ!

ದೇವರ ಅವತಾರ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ

Crime News: ಸ್ವಯಂ ಘೋಷಿತ ದೇವಮಾನವನೊಬ್ಬ ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು 40 ವರ್ಷದ ಋಷಿಕೇಶ್ ವೈದ್ಯ ಎಂದು ಗುರುತಿಸಲಾಗಿದೆ. ಅತ್ಯಾಚಾರ ಮಾಡುವ ಮುನ್ನ ಪ್ರಜ್ಞೆ ತಪ್ಪಿಸಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.

Ricky Rai Case: ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು ಎಫ್‌ಐಆರ್‌; ಕಾರಿನ ರಿಜಿಸ್ಟರ್‌ ಮಾಡಿಸಿಲ್ಲ, ಟ್ಯಾಕ್ಸ್‌ ಕೂಡ ಕಟ್ಟಿಲ್ಲ!

ಕಾರು ಡ್ರಿಫ್ಟಿಂಗ್ ಕೇಸ್‌ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು ಎಫ್‌ಐಆರ್‌

Lamborghini stunt case: ದೆಹಲಿಯಲ್ಲಿ ಆರ್‌ಟಿಒ ಹರಾಜಿನಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ ರಿಕ್ಕಿ ರೈ, ಬಳಿಕ ಕಲರ್ ಬದಲಿಸಿ, ಅದಕ್ಕೆ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಆದರೆ, ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸದೆ ತೆರಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Self Harming: ಆ್ಯಪಲ್ ಕಂಪನಿ ಉದ್ಯೋಗಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಆ್ಯಪಲ್ ಕಂಪನಿ ಉದ್ಯೋಗಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಮೃತ ಯುವತಿಯನ್ನು ಯಶಸ್ವಿನಿ (22) ಎಂದು ಗುರುತಿಸಲಾಗಿದೆ. ಯುವತಿ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆ್ಯಪಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Stabbing at spot: ಭಟ್ಕಳದಲ್ಲಿ ಸಣ್ಣ ವಿಚಾರಕ್ಕೆ ಜಗಳ : ಚಾಕು ಇರಿತ

ಭಟ್ಕಳದಲ್ಲಿ ಸಣ್ಣ ವಿಚಾರಕ್ಕೆ ಜಗಳ : ಚಾಕು ಇರಿತ

ನಂತರ ಅವಾಚ್ಯ ಪದಗಳಿಂದ ನಿಂದಿಸಿ, ದೂರುದಾರನ ಜೊತೆಗಿದ್ದ ತೌಸಿಫ್ ಖತೀಬ್ ಅವರ ಹೊಟ್ಟೆ ಭಾಗಕ್ಕೆ ಹಾಗೂ ಮಹಮ್ಮದ್ ಜುಪಾಪ್ ಅರ್ಮರ್ ಅವರ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಗಾಯಪಡಿಸಿದ್ದಾರೆ. ಈ ವೇಳೆ ಗಾಯಾಳು ತೌಸಿಫ್ ಖತೀಬ್ ಅವರ ಬಳಿ ಇದ್ದ ಬೆಲೆ ಬಾಳುವ ವಾಚ್ ಹಾಗೂ ನಗದು ಹಣ ಕಳೆದುಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ

Bomb threat: ನಿನ್ನೆ ವಿದ್ಯಾರ್ಥಿನಿಗೆ ಪ್ರೊಫೆಸರ್‌ ಪ್ರಪೋಸ್‌ ಮಾಡಿ ಏಟು ತಿಂದ ಕಾಲೇಜಿಗೆ ಇಂದು ಬಾಂಬ್‌ ಬೆದರಿಕೆ!

ಗೃಹಮಂತ್ರಿ ಪರಮೇಶ್ವರ್ ಒಡೆತನದ ಮೆಡಿಕಲ್‌ ಕಾಲೇಜಿಗೆ ಬಾಂಬ್‌ ಬೆದರಿಕೆ!

ಬಾಂಬ್ ಬೆದರಿಕೆ ಈ ಹಿಂದಿನ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎಂಬ ಬಗ್ಗೆ ಅನುಮಾನ ಮೂಡಿಲ್ಲವಾದರೂ, ಪೊಲೀಸರು ಎಲ್ಲ ಆಯಾಮಗಳ್ನು ಪರಿಶೀಲಿಸುತ್ತಿದ್ದಾರೆ. ಕಾಲೇಜ್ ಆವರಣದಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ತೀವ್ರ ಪರಿಶೀಲನೆ ನಡೆಸುತ್ತಿವೆ. ಪೊಲೀಸರು ಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು, ತೊಕ್ಕೊಟ್ಟಿನಲ್ಲಿ ರೌಡಿಶೀಟರ್‌ ಕಗ್ಗೊಲೆ

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು, ತೊಕ್ಕೊಟ್ಟಿನಲ್ಲಿ ರೌಡಿಶೀಟರ್‌ ಕೊಲೆ

ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Self harming: ರಾಜ್ಯದಲ್ಲೊಂದು ಮನಕಲಕುವ ಘಟನೆ, ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ಮನಕಲಕುವ ಘಟನೆ, ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ಶನಿವಾರ ಸಂಜೆ ಗ್ರಾಮದ ಸಮೀಪವಿರುವ ಬಾವಿಯಲ್ಲಿ ಇಬ್ಬರು ಮಕ್ಕಳ ಶವಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಇಂಡಿ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮೂವರು ಮಕ್ಕಳ ಸಾವಿನ ಸುದ್ದಿ ದೃಢಪಟ್ಟಿದೆ.

Professor arrest: ಕ್ಲಾಸಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ ಪ್ರೊಫೆಸರ್‌ ಆರೆಸ್ಟ್‌

ಕ್ಲಾಸಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ ಪ್ರೊಫೆಸರ್‌ ಆರೆಸ್ಟ್‌

ಈ ಪ್ರೊಫೆಸರ್ ಅಬ್ದುಲ್ ಈ ರೀತಿ ಮಾಡಿರುವುದು ಇದೇ ಮೊದಲಲ್ಲ. ಹೆಂಡತಿಯಿಂದ ದೂರವಾಗಿದ್ದ ಅಬ್ದುಲ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಈ ಹಿಂದೆ ಬೌರಿಂಗ್ ಆಸ್ಪತ್ರೆ, ತುಮಕೂರಿನ ಆಸ್ಪತ್ರೆಯಲ್ಲಿಯೂ ಕೂಡ ಇದೇ ರೀತಿ ಕೃತ್ಯ ಎಸಗಿದ್ದಾನೆ ಎಂಬ ಆರೋಪಗಳು ಈತನ ಮೇಲಿದೆ. ಇದರಿಂದ ಬುದ್ಧಿವಾದ ಹೇಳಿ ತುಮಕೂರು ಕಾಲೇಜಿನಿಂದ ಹೊರಹಾಕಿದ್ದರು.

Love Jihad: ಮೂಡಿಗೆರೆ ಲವ್‌ ಜಿಹಾದ್‌, ಹಿಂದೂ ಹುಡುಗಿಯಿಂದ ಮನೆಯಲ್ಲೇ ನಮಾಜ್!

ಮೂಡಿಗೆರೆ ಲವ್‌ ಜಿಹಾದ್‌, ಹಿಂದೂ ಹುಡುಗಿಯಿಂದ ಮನೆಯಲ್ಲೇ ನಮಾಜ್!

ಅಪ್ರಾಪ್ತ ಹುಡುಗ-ಹುಡುಗಿ ನಡುವಿನ ಪ್ರೇಮ ವಿಚಾರ ಮೂಡಿಗೆರೆ ಪಟ್ಣಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣಕ್ಕೆ ಕಾರಣವಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಕೂಡ ಅಪ್ರಾಪ್ತ ಪ್ರೇಮಿ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಯುವಕ ಮೂಡಿಗೆರೆ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೂರು ನೀಡಿದ್ದಾನೆ.

ಇದು ಅತಿಥಿ ಸತ್ಕಾರ ಅಲ್ಲ ದೌರ್ಜನ್ಯ: ವಿದೇಶಿ ಮಹಿಳೆಗೆ ಕಿರುಕುಳ ನೀಡಿದ ದುಷ್ಕರ್ಮಿಗಳ ವಿರು‍ದ್ಧ ಆಕ್ರೋಶ

ಜೈಪುರದಲ್ಲಿ ವಿದೇಶಿ ಮಹಿಳೆಗೆ ಕಿರುಕುಳ ನೀಡಿದ ಕಿಡಿಗೇಡಿಗಳು

Viral Video: ವಿದೇಶಿ ಮಹಿಳೆಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದು ಪ್ರವಾಸಿಗರ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುವಂತೆ ಮಅಡಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಪುರುಷರ ಗುಂಪೊಂದು ವಿದೇಶಿ ಮಹಿಳೆಯ ಸುತ್ತ ಸುತ್ತುವರಿದಿರುವುದು ಕಾಣಬಹುದು.

Murder Case: ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ

ಪತ್ನಿಯನ್ನು ನಡುರಸ್ತೆಯಲ್ಲಿ ಕೊಂದು, ಶವದ ಮೇಲೆ ಕಾರು ಹತ್ತಿಸಿದ ವಿಕೃತ

ಆರೋಪಿ ಪತಿ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು, ಬಳೂರಗಿ ಗ್ರಾಮದ ಬಳಿ ನಿಲ್ಲಿಸಿದ್ದಾನೆ. ಬಳಿಕ ಪತ್ನಿಯನ್ನು ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ, ನಡುರಸ್ತೆಯಲ್ಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಷ್ಟೇ ಅಲ್ಲದೇ ಶವದ ಮೇಲೆ ಕಾರು ಹಾಯಿಸಿ ವಿಕೃತಿ ಮೆರೆದಿದ್ದಾನೆ.

ಲಾರಿ- ಖಾಸಗಿ ಬಸ್ ನಡುವೆ ಭೀಕರ ಅಪಘಾತ;  13 ಜನರು ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್-ಲಾರಿ ಡಿಕ್ಕಿ: 13 ಸಾವು

Accident: ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದು, ಹಲವರು ಹಲವರು ಗಾಯಗೊಂಡಿದ್ದಾರೆ. ಡಿಕ್ಕಿಯ ನಂತರ, ಬಸ್‌ಗೆ ಬೆಂಕಿ ಹೊತ್ತಿಕೊಂಡು 10 ಜನರು ಸಜೀವ ದಹನವಾಗಿ, ಹಲವರು ಗಾಯಗೊಂಡರು. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೇರಿತು.

ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕಲೇಟ್‌ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌, ಚಪ್ಪಲಿ ಏಟು!

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಚಪ್ಪಲಿ ಏಟು!

ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಾರೆ. ಬಳಿಕ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಾರೆ. ಅಲ್ಲದೇ ಪ್ರೊಫೆಸರ್‌ ಅಬ್ದುಲ್‌ ವರ್ತನೆಯಿಂದ ರೊಚ್ಚಿಗೆದ್ದ ಇತರ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ.

ವಯಾಗ್ರವನ್ನು ನೀರಿನಲ್ಲಿ ಬೆರೆಸಿ, ಗರ್ಭಿಣಿಯರ ಮೇಲೂ ದೌರ್ಜನ್ಯ'; ಅತ್ಯಾಚಾರ ಆರೋಪಿ ಕ್ಯಾಪ್ಟನ್ ಬಾಬಾ ಕುರಿತ ಮಾಹಿತಿ ಬೆಳಕಿಗೆ

‘ಭೋಂದು ಬಾಬಾ’ ವಿರುದ್ಧ ಗಂಭೀರ ಲೈಂಗಿಕ ಶೋಷಣೆಯ ಆರೋಪ

ಮಹಾರಾಷ್ಟ್ರದಲ್ಲಿ ‘ಭೋಂದು ಬಾಬಾ’ ಅಶೋಕ್ ಖರಾತ್ ವಿರುದ್ಧ ಲೈಂಗಿಕ ಶೋಷಣೆ, ವಿಕೃತ ಜಾಲ ಮತ್ತು ಪ್ರಭಾವಿ ವ್ಯಕ್ತಿಗಳ ಸಂಪರ್ಕದ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಹೋರಾಟಗಾರ್ತಿ ಅಂಜಲಿ ದಮಾನಿಯಾ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದು, ಪ್ರಕರಣ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

Terrorist: ಒಸಾಮಾ ಬಿನ್‌ ಲಾಡೆನ್‌ ಥರ ವೇಷ, ಭಯೋತ್ಪಾದನೆಗೆ ಪ್ರಚೋದನೆ: ಬಳ್ಳಾರಿಯ ಉಗ್ರ ಸೇರಿದಂತೆ 12 ಶಂಕಿತರ ಬಂಧನ

ಭಯೋತ್ಪಾದನೆಗೆ ಪ್ರಚೋದನೆ: ಬಳ್ಳಾರಿಯ ವ್ಯಕ್ತಿ ಸೇರಿದಂತೆ 12 ಶಂಕಿತರ ಬಂಧನ

ಕರ್ನಾಟಕ ಸೇರಿ ಒಟ್ಟು 7 ರಾಜ್ಯಗಳಲ್ಲಿ ಆಂಧ್ರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಆಂಧ್ರದಲ್ಲಿ‘ಅಲ್ ಮಾಲಿಕ್ ಇಸ್ಲಾಮಿಕ್ ಯೂತ್’‘ (Al-Malik Youth Islamic Committee) ಎಂಬ ಗುಂಪನ್ನು ರಚಿಸಿಕೊಂಡು ಯುವಕರನ್ನು ತೀವ್ರಗಾಮಿ ಚಿಂತನೆಗಳತ್ತ ಸೆಳೆಯುತ್ತಿದ್ದರು. ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದ್ದರು ಎನ್ನಲಾಗಿದೆ.

Lokayukta Raid: 12 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತುಮಕೂರು ಡಿಎಚ್‌ಒ ಕಚೇರಿ ವ್ಯವಸ್ಥಾಪಕ

ಲಂಚಕ್ಕೆ ಸ್ವೀಕಾರ; ತುಮಕೂರಿನಲ್ಲಿ ಅಧಿಕಾರಿ ಲೋಕಾಯುಕ್ತ ಬಲೆಗೆ

Tumkur News: ಆರೋಗ್ಯ ಜಾಗೃತಿ ವಸ್ತು ಪ್ರದರ್ಶನದ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್.ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತುಮಕೂರಿನಲ್ಲಿ ಬಸ್ ಹತ್ತಲು ಮುಗಿಬಿದ್ದ ಕಾಲೇಜು ವಿದ್ಯಾರ್ಥಿಗಳು; ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು!

ತುಮಕೂರಿನಲ್ಲಿ ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು

Tumkur News: ತುಮಕೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಬಸ್‌ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರವಿಶಂಕರ್ ಗುರೂಜಿಗೆ ಬಿಗ್‌ ರಿಲೀಫ್‌; ಸರ್ಕಾರಿ ಜಮೀನು ಒತ್ತುವರಿ ಕೇಸ್‌ ರದ್ದು ಮಾಡಿದ ಹೈಕೋರ್ಟ್‌

ರವಿಶಂಕರ್ ಗುರೂಜಿಗೆ ಬಿಗ್‌ ರಿಲೀಫ್‌; ಜಮೀನು ಒತ್ತುವರಿ ಕೇಸ್‌ ರದ್ದು

Ravishankar Guruji: ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ಶ್ರೀ ರವಿಶಂಕರ್ ಗುರೂಜಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದ್ದು,‌ ಜಮೀನು ಒತ್ತುವರಿ ಆರೋಪ ಪ್ರಕರಣವನ್ನು ರದ್ದುಪಡಿಸಿದೆ.

Harassment: ಇನ್‌ಸ್ಪೆಕ್ಟರ್‌ನಿಂದ ಮಹಿಳಾ ರೌಡಿ ಶೀಟರ್‌ಗೆ ಪೋಲಿ ಮೆಸೇಜ್‌, ಕಿರುಕುಳ: ದೂರು

ಇನ್‌ಸ್ಪೆಕ್ಟರ್‌ನಿಂದ ಮಹಿಳಾ ರೌಡಿಗೆ ಪೋಲಿ ಮೆಸೇಜ್‌, ಕಿರುಕುಳ: ದೂರು

ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ. ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬೋಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.

Self Harming: ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Loading...