ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಟಿಸಿಎಸ್ ಮತಾಂತರ ಪ್ರಕರಣ; ನಿದಾ ಖಾನ್ ಬಂಧನಕ್ಕೆ ಒಳಗಾಗಿದ್ದು ಹೇಗೆ? ರೋಚಕ ಕಾರ್ಯಾಚರಣೆಯ ಇಂಚಿಂಚು ಮಾಹಿತಿ ಇಲ್ಲಿದೆ

ನಿದಾ ಖಾನ್ ನನ್ನು ಪೊಲೀಸರು ಬಂಧಿಸಿದ್ದು ಹೇಗೆ?

ಅತ್ಯಾಚಾರ, ಲೈಂಗಿಕ ಶೋಷಣೆ ಮತ್ತು ಮತಾಂತರ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಟಿಸಿಎಸ್ ಉದ್ಯೋಗಿ ನಿದಾ ಖಾನ್‌ಳನ್ನು ಕೊನೆಗೂ ಪೊಲೀಸರು ಬಂಧಿಸಿದರು. ಅವಳ ಬಂಧನಕ್ಕೆ ಪೊಲೀಸರು ರೂಪಿಸಿದ ಯೋಜನೆ ಹೇಗಿತ್ತು, ಅವಳು ಹೇಗೆ ಸಿಕ್ಕಿಬಿದ್ದಳು, ಬಂಧನದ ಸಮಯದಲ್ಲಿ ನಡೆದ ಘಟನೆಗಳು ಏನು ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು; ಕೊಲೆಗೆ ಬಳಸಿದ ದ್ವಿಚಕ್ರ ವಾಹನದ ಮಾಲಕ ಪತ್ತೆ

ಚಂದ್ರನಾಥ್ ರಥ್‌ ಹತ್ಯೆ ಪ್ರಕರಣ; ದ್ವಿಚಕ್ರ ವಾಹನ ಮಾಲಕ ಪತ್ತೆ

Chandranath Rath Murder Case: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ್‌ ಹತ್ಯೆಗೆ ಬಳಸಲಾದ ಬೈಕ್ ಪಶ್ಚಿಮ ಬಂಗಾಳ ನೋಂದಣಿ ಸಂಖ್ಯೆ 'WB44D1990' ಅನ್ನು ಹೊಂದಿದ್ದು, ವಿಭಾಷ್ ಕುಮಾರ್ ಭಟ್ಟಾಚಾರ್ಯ ಎಂಬವರ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬೈಕ್ ಅನ್ನು 2012ರ ಮೇ 4ರಂದು ನೋಂದಾಯಿಸಲಾಗಿದೆ.

ಬಂಗಾಳದ ಹೌರಾದಲ್ಲಿ ಚುನಾವಣೋತ್ತರ ಹಿಂಸಾಚಾರ: ಟಿಎಂಸಿಯಿಂದ ಬಾಂಬ್ ದಾಳಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಬಾಂಬ್ ದಾಳಿ, ಲೂಟಿ ಮತ್ತು ಧಾರ್ಮಿಕ ಘೋಷಣೆಗಳ ವಿಡಿಯೊ ವೈರಲ್ ಆಗಿದೆ. ಈ ದಾಳಿಯ ಹಿಂದೆ ಟಿಎಂಸಿ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Bengaluru Digital arrest: ಎನ್‌ಐಎ ಅಧಿಕಾರಿಗಳ ಸೋಗಿನಲ್ಲಿ ವೃದ್ಧೆ, ಪುತ್ರಿಯ ಡಿಜಿಟಲ್‌ ಅರೆಸ್ಟ್;‌ 2.1 ಕೋಟಿ ರೂ. ವಂಚಿಸಿದ ಸೈಬರ್‌ ಕಳ್ಳರು!

ವೃದ್ಧೆ, ಪುತ್ರಿಯ ಡಿಜಿಟಲ್‌ ಅರೆಸ್ಟ್ ಮಾಡಿ 2.1 ಕೋಟಿ ರೂ. ವಂಚನೆ

ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನೊಬ್ಬ ನಿಮ್ಮ ಹೆಸರಿನಲ್ಲಿ ಡೆಬಿಟ್‌ ಕಾರ್ಡ್‌ ಬಳಸುತ್ತಿದ್ದಾನೆ, ನಿಮ್ಮ ಪುತ್ರಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ ಎಂದು ಹೆದರಿಸಿದ್ದ ಸೈಬರ್‌ ಖದೀಮರು, ಒಟ್ಟು 2.1 ಕೋಟಿ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿದ್ದಾರೆ.

ಸತತ 7 ಗಂಟೆಗಳ ಕಾರ್ಯಾಚರಣೆ: ಕಲ್ಲುಗಳ ನಡುವೆ ಸಿಲುಕಿದ್ದ ಬಾಲಕನ ರಕ್ಷಣೆ

ಕಲ್ಲುಗಳ ನಡುವೆ ಸಿಲುಕಿದ್ದ ಬಾಲಕನ ರಕ್ಷಣೆ

ಜೇನು ತುಪ್ಪ ಸಂಗ್ರಹಿಸಲು ಹೋಗಿ ಕಲ್ಲುಗಳ ನಡುವೆ ಸಿಕ್ಕಿಹಾಕಿಕೊಂಡಿದ್ದ ಬಾಲಕನನ್ನು ಸತತ 7 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಒಡಿಶಾದ ನಯಾಗಢ ಜಿಲ್ಲೆಯ ಕಾನಿಪಾದ ಕಾಡಿನಲ್ಲಿ ಜೇನುತುಪ್ಪ ಸಂಗ್ರಹಿಸುವಾಗ ಬೃಹತ್ ಬಂಡೆಗಳ ನಡುವೆ ಬಾಲಕ ಸಿಕ್ಕಿ ಹಾಕಿಕೊಂಡಿದ್ದನು. ಬಾಲಕನನ್ನು ರಕ್ಷಿಸಿದ ತಂಡದ ಕಾರ್ಯವನ್ನು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶ್ಲಾಘಿಸಿದ್ದಾರೆ.

ಬೆಂಗಳೂರಿನ ನಡುರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ಯಲು ಹೋದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ; ವಿಡಿಯೊ ವೈರಲ್‌

ಪತ್ನಿಯ ಕತ್ತು ಕೊಯ್ಯಲು ಹೋದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

Bengaluru News: ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯನ್ನು ಕೊಲೆ ಮಾಡಲು ಪತಿ ಯತ್ನಿಸಿದ ವೇಳೆ, ಆತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ್ದಾರೆ. ಬೆಂಗಳೂರು ನಗರದ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪತ್ನಿ, ಮಕ್ಕಳನ್ನು ಮನೆಗೆ ಕಳುಹಿಸಿ ಎಂದಿದ್ದಕ್ಕೆ ಪೆಟ್ರೋಲ್‌ ಹಾಕಿ ಅಳಿಯನನ್ನೇ ಸುಟ್ಟ ಅತ್ತೆ- ಮಾವ

ಪೆಟ್ರೋಲ್‌ ಹಾಕಿ ಅಳಿಯನನ್ನೇ ಸುಟ್ಟ ಅತ್ತೆ ಮಾವ

ಪತ್ನಿ ಮತ್ತು ಮಕ್ಕಳನ್ನು ತನ್ನ ಜೊತೆಗೆ ಕಳುಹಿಸಿ ಎಂದು ಮನವಿ ಮಾಡಲು ಹೋಗಿದ್ದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆನೇಕಲ್ ತಾಲೂಕಿನ ಕಾವಲಹೊಸಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 25 ವರ್ಷದ ನವೀನ್ ಎಂದು ಗುರುತಿಸಲಾಗಿದೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಚಂದ್ರನಾಥ್ ರಾತ್ ಹತ್ಯೆ ಪ್ರಕರಣ: ಮೂವರ ಬಂಧನ

ಚಂದ್ರನಾಥ್ ರಾತ್ ಹತ್ಯೆ ಪ್ರಕರಣ: ಮೂವರ ಬಂಧನ

Chandranath Rath murder case: ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಅಲೆಗಳನ್ನು ಎಬ್ಬಿಸಿದ ಚಂದ್ರನಾಥ್ ರಾತ್ ಕೊಲೆ ಪ್ರಕರಣ ಸಂಬಂಧ ಮೂವರನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಹಂತಕರು ನಕಲಿ ನಂಬರ್ ಪ್ಲೇಟ್ ಮತ್ತು ಚಾಸಿಸ್ ಸಂಖ್ಯೆಗಳನ್ನು ಹೊಂದಿರುವ ಹಲವು ವಾಹನಗಳನ್ನು ಬಳಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ದಾಳಿ: 6 ಮಂದಿಗೆ ಗಾಯ, ಹಲವು ಮನೆಗಳು ಧ್ವಂಸ

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ದಾಳಿ

ಉಗ್ರರ ದಾಳಿಗೆ ಹಲವಾರು ಮನೆಗಳು ಧ್ವಂಸಗೊಂಡು, ಆರು ಮಂದಿ ಗಾಯಗೊಂಡ ಘಟನೆ ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಬುಧವಾರ ಮತ್ತು ಗುರುವಾರ ನಡೆದಿದೆ. ಉಖ್ರುಲ್ ಮತ್ತು ಕಾಮ್ಜಾಂಗ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ದಾಳಿಗಳು ನಡೆದಿದ್ದು, ಗಡಿ ಗ್ರಾಮಗಳ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಕಿರುಕುಳ ಆರೋಪ: ರೈಲ್ವೆ ಪೊಲೀಸ್ ಅಧಿಕಾರಿಯನ್ನು ಕಟ್ಟಿ ಹಾಕಿ ಥಳಿಸಿ ಕೊಂದೇ ಬಿಟ್ಟರು

ಪೊಲೀಸ್ ಅಧಿಕಾರಿಯನ್ನು ಥಳಿಸಿ ಕೊಂದ ದುಷ್ಕರ್ಮಿಗಳು

ಪೊಲೀಸ್ ಅಧಿಕಾರಿಯೊಬ್ಬರನ್ನು ಕಟ್ಟಿ ಥಳಿಸಿ ಹಾಕಿ ಕೊಂದಿರುವ ಘಟನೆ ಒಡಿಶಾದ ಖೋರ್ಧಾ ಜಿಲ್ಲೆಯಲ್ಲಿ ನಡೆದಿದೆ. ಪ್ರವಾಸದಲ್ಲಿದ್ದ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್ ಅನ್ನು ಗುಂಪೊಂದು ಥಳಿಸಿ ಕೊಂದು ಹಾಕಿದೆ. ಸೌಮ್ಯ ರಂಜನ್ ಸ್ವೈನ್ ಮೃತರು. ಈ ಘಟನೆಯು ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಟಿಸಿಎಸ್ ಮತಾಂತರ ಪ್ರಕರಣ; ಕೊನೆಗೂ ಸಿಕ್ಕಿಬಿದ್ದ ಕಿಂಗ್‌ಪಿನ್‌ ನಿದಾ ಖಾನ್‌

ಮತಾಂತರ ಪ್ರಕರಣ; ಕೊನೆಗೂ ಸಿಕ್ಕಿಬಿದ್ದ ಕಿಂಗ್‌ಪಿನ್‌ ನಿದಾ ಖಾನ್‌

ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮತ್ತು ಧಾರ್ಮಿಕ ಮತಾಂತರ ಪ್ರಕರಣದಲ್ಲಿ ಅಮಾನತುಗೊಂಡ ಟಿಸಿಎಸ್ ಉದ್ಯೋಗಿ ನಿದಾ ಖಾನ್‌ಳನ್ನು ಗುರುವಾರ ತಡರಾತ್ರಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಬರೋಬ್ಬರಿ 40 ದಿನಗಳ ಬಳಿಕ ಆಕೆಯ ಬಂಧನವಾಗಿದೆ.

ಸುವೇಂದು ಅಧಿಕಾರಿ ಆಪ್ತ ಚಂದ್ರನಾಥ ರಥ್‌ ಹತ್ಯೆಗೆ ಮುನ್ನ ಆಗಿದ್ದೇನು? ಕಾರ್‌ ಚೇಸ್‌ ಮಾಡಿದ ಬೈಕ್‌ ಸಿಸಿ ಕ್ಯಾಮರಾದಲ್ಲಿ ಸೆರೆ

ಚಂದ್ರನಾಥ ರಥ್‌ ಹತ್ಯೆಗೆ ಮುನ್ನ ಆಗಿದ್ದೇನು? ವಿಡಿಯೊ ವೈರಲ್‌

Chandranath Rath: ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ್‌ ಅವರ ಹತ್ಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಥ್‌ ಅವರ ಕಾರನ್ನು ಇಬ್ಬರು ಬೈಕ್‌ನಲ್ಲಿ ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಚಂದ್ರನಾಥ್ ರಾತ್ ಹತ್ಯೆಯ ಕಾರಣ ತಿಳಿಸಿದ ಸುವೇಂದು ಅಧಿಕಾರಿ; ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಯ ಸೋಲಿಗೆ ಈ ರೀತಿ ಸೇಡು ತೀರಿಸಿತಾ ಟಿಎಂಸಿ?

ಚಂದ್ರನಾಥ್ ರಾತ್ ಹತ್ಯೆ ಬಗ್ಗೆ ಸುವೇಂದು ಅಧಿಕಾರಿ ಹೇಳಿದ್ದೇನು?

Chandranath Rath murder: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹೀನಾಯವಾಗಿ ಸೋತಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಸೋಲಿಸಿದ್ದಕ್ಕೆ ಚಂದ್ರನಾಥ್ ರಾತ್‌ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. “ರಾತ್ ನನ್ನ ಸಹಾಯಕರಾಗಿದ್ದರು. ನಾನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿದ್ದೆ ಎಂಬ ಕಾರಣಕ್ಕಾಗಿ ಅವರನ್ನು ಕೊಲ್ಲಲಾಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Channapatna News: 26 ವರ್ಷದ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ: ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ

26ರ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ; ಬಾಲಕ ಆತ್ಮಹತ್ಯೆ

ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬಾಲಕ ಹಾಗೂ ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ನಂತರ ಯುವತಿ ಜತೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್​​ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ನಿಗದಿಪಡಿಸಿದೆ.

ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಕೊಲೆಯಾಗಿದ್ದೇಗೆ? ಪೊಲೀಸರು ಹೇಳಿದ್ದೇನು?

ಚಂದ್ರನಾಥ ರಾತ್ ಕೊಲೆ ಪೂರ್ವನಿಯೋಜಿತ ಎಂದ ಪೊಲೀಸರು

Crime News: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾತ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದೊಂದು ಪೂರ್ವನಿಯೋಜಿತ ಕೊಲೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ದಾಳಿಯ ಸಮಯದಲ್ಲಿ ಸುಮಾರು 10 ಸುತ್ತು ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ  ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಹತ್ಯೆ; ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಹತ್ಯೆ

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ವೈಯಕ್ತಿಕ ಸಹಾಯಕ (ಪಿಎ) ಅವರನ್ನು ಮಧ್ಯಗ್ರಾಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ್ ರಥ್ ಎಂದು

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ ದಳಪತಿ ವಿಜಯ್‌ಯ ಟಿವಿಕೆಗೆ ಶಾಕ್‌; 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾರ್ಯಕರ್ತನ ಬಂಧನ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಟಿವಿಕೆ ಸದಸ್ಯನ ಬಂಧನ

TVK member arrested: 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗ (TVK) ಸದಸ್ಯ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಗು ಹೊರಗೆ ಆಟವಾಡುತ್ತಿದ್ದಾಗ, ಅದೇ ಪ್ರದೇಶದಲ್ಲಿ ವಾಸಿಸುವ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

ತುಮಕೂರಲ್ಲಿ ಲವ್‌, ಮ್ಯಾರೇಜ್‌, ದೋಖಾ ಪ್ರಕರಣ; ಗರ್ಭಿಣಿ ಪತ್ನಿಯನ್ನು ಬಿಟ್ಟು ಮತ್ತೊಂದು ಮದುವೆಗೆ ಮುಂದಾದ ಪತಿ

ಗರ್ಭಿಣಿ ಪತ್ನಿಯನ್ನು ಬಿಟ್ಟು ಮತ್ತೊಂದು ಮದುವೆಗೆ ಮುಂದಾದ ಖತರ್ನಾಕ್‌ ಪತಿ

Tumkur News: ಗರ್ಭಿಣಿ ಪತ್ನಿಯನ್ನು ಬಿಟ್ಟು ಪತಿ ಮತ್ತೊಂದು ಮದುವೆಯಾಗಲು ಹೊರಟು ಸಿಕ್ಕಿಬಿದ್ದಿರುವ ಘಟನ ತಮಕೂರಿನಲ್ಲಿ ನಡೆದಿದೆ. ತುಮಕೂರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿರುವ ಸಂತ್ರಸ್ತೆ ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆಯ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಟಿಎಂಸಿಯಿಂದ ಗೂಂಡಾಗಿರಿ; ಹಿಂಸಾಚಾರದಲ್ಲಿ ಮೂವರ ಸಾವು: ಕಠಿಣ ಕ್ರಮಕ್ಕೆ ಚುನಾವಣಾ ಆಯೋಗ ಆದೇಶ

ಚುನಾವಣೆ ಬಳಿಕ ಹಿಂಸಾಚಾರ: ಕಠಿಣ ಕ್ರಮಕ್ಕೆ ಆದೇಶ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆ ಬಳಿಕ ಉಂಟಾಗಿರುವ ಗಲಭೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮಕ್ಕೆ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ವಿಧಾನ ಸಭಾ ಚುನಾವಣಾ ಫಲಿತಾಂಶ ಸೋಮವಾರ ಹೊರಬಿದ್ದ ಮೇಲೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಎರಡನೇ ದಿನವು ಮುಂದುವರಿದಿದೆ.

ಎಂಟು ಮಂದಿಯನ್ನು ವಿವಾಹವಾಗಿ ಯಾಮಾರಿಸಿದ ಖತರ್ನಾಕ್ ಮಹಿಳೆ; ಒಂಭತ್ತನೇ ಮದುವೆ ವೇಳೆ ಬಯಲಾಯ್ತು ವಂಚಕಿಯ ಮುಖವಾಡ

ಎಂಟು ಮಂದಿಯನ್ನು ವಿವಾಹವಾಗಿ ವಂಚಿಸಿದ ಖತರ್ನಾಕ್ ಮಹಿಳೆ

marriage scam: ಎಂಟು ಬಾರಿ ಮದುವೆಯಾಗಿದ್ದ ವಂಚಕಿಯೊಬ್ಬಳು, 9ನೇ ವಿವಾಹವೂ ಆದಳು. ಈ ವೇಳೆ ಆಕೆಯ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯ ನೆಪದಲ್ಲಿ ಲಕ್ಷಾಂತರ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು. ಆದರೆ, ಮದುವೆಯಾದ ಸ್ವಲ್ಪ ಸಮಯದ ನಂತರ, ವಧುವಿನ ಸಂಶಯಾಸ್ಪದ ಚಟುವಟಿಕೆಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡವು.

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು; ಮೂವರು ಆರೋಪಿಗಳ ಬಂಧನ

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಏಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಬೌದ್ಧ ಸನ್ಯಾಸಿಯ ಶವ ಪತ್ತೆಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ನಿವಾಸಿ ತಾಶಿ ದೊಂದೂಪ (49) ಕೊಲೆಯಾಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮೂವರು ಹಂತಕರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಅರೆಸ್ಟ್ ಮಾಡಲಾಗಿದೆ.

Bike Accident: ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು!

ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Bidar News: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್‌-ಔರಾದ್‌ ರಾಷ್ಟ್ರೀಯ ಹೆದ್ದಾರಿ-161 (ಎ) ರಲ್ಲಿ ಔರಾದ್‌ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.

ಗಂಡನನ್ನು ಬಿಟ್ಟು ಬರದಿದ್ದಕ್ಕೆ ಪ್ರೇಯಸಿಗೆ ಬೆಂಕಿ ಹಚ್ಚಿ ಕೊಂದ ಲವರ್‌!

ಗಂಡನನ್ನು ಬಿಟ್ಟು ಬರದಿದ್ದಕ್ಕೆ ಪ್ರೇಯಸಿಗೆ ಬೆಂಕಿ ಹಚ್ಚಿ ಕೊಂದ ಲವರ್‌!

ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆ ಬಚ್ಚಹಳ್ಳಿ ಬಳಿ ಕಾರಿನಲ್ಲಿ ಸುಜಾಳ ಎಂಬ ಮಹಿಳೆಯನ್ನು ಕೊಲೆ ಮಾಡಿ, ಬಳಿಕ ಕಾರಿಗೆ ಬೆಂಕಿ ಇಡಲಾಗಿತ್ತು. ಕೊಲೆ ಮಾಡಿದ್ದ ಆರೋಪಿಯ ಮೃತದೇಹ ಬೆಂಗಳೂರಿನ ಬಿಡದಿ ಬಳಿ ರೈಲ್ವೇ ನಿಲ್ದಾಣ ಬಳಿ ಪತ್ತೆಯಾಗಿದ್ದು. ಮಹಿಳೆ ತನ್ನ ಗಂಡನನ್ನು ಬಿಟ್ಟು ಬಾರದ ಹಿನ್ನೆಲೆಯಲ್ಲಿ ಪ್ರಿಯಕರನೇ ಕೊಲೆ ಮಾಡಿದ್ದ ಎಂಬುವುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

Loading...