ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ಆಹಾರ ದೋಚಿಕೊಂಡು ಹೋದ ಭಯೋತ್ಪಾದಕರಿಗೆ ಉಧಂಪುರದಲ್ಲಿ ಶೋಧ

ಆಹಾರ ದೋಚಿಕೊಂಡು ಹೋದ ಭಯೋತ್ಪಾದಕರು

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಮನೆಯೊಂದಕ್ಕೆ ಬಂದಿದ್ದ ಭಯೋತ್ಪಾದಕರು ಆಹಾರ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ. ಇದರ ಬಳಿಕ ಭದ್ರತಾ ಪಡೆ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಚೋರ್ ಮೋಟು ಗ್ರಾಮದ ಮಂಗ್ತು ರಾಮ್ ಎಂಬವರ ಮನೆಗೆ ಇಬ್ಬರು ಭಯೋತ್ಪಾದಕರು ಭೇಟಿ ನೀಡಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬಳಿಕ ಈ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಹಿಂದೂ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟಿರುವುದಕ್ಕೆ ತಸ್ಲೀಮಾ ನಸ್ರೀನ್ ಖಂಡನೆ

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿ ಹತ್ಯೆಗೆ ತಸ್ಲೀಮಾ ನಸ್ರೀನ್ ಖಂಡನೆ

ಬಾಂಗ್ಲಾದೇಶದಲ್ಲಿ ಗುಂಪೊಂದು ಹಿಂದೂ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದರು. ಇದೊಂದು ನೀಚ ಜಿಹಾದಿ ಕೃತ್ಯ ಎಂದು ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ. ಹಿಂದೂ ಗಾರ್ಮೆಂಟ್ ಕಾರ್ಖಾನೆಯ ಕೆಲಸಗಾರನನ್ನು ಗುಂಪೊಂದು ಹೇಗೆ ಕೊಂದು ಹಾಕಿತ್ತು ಎಂಬುದನ್ನು ತಸ್ಲೀಮಾ ನಸ್ರೀನ್ ವಿವರಿಸಿರುವುದು ಹೀಗೆ..

Physical Assault: ಬಾಲಕಿ ಮೇಲೆ ಅತ್ಯಾಚಾರ  ಪ್ರಕರಣ;  ಕಾಮುಕ ಲೋಕೇಶ್ವರ ಸ್ವಾಮಿಗೆ 35 ವರ್ಷ ಜೈಲು

ಕಾಮುಕ ಲೋಕೇಶ್ವರ ಸ್ವಾಮಿಗೆ 35 ವರ್ಷ ಜೈಲು

ರಾಯಬಾಗ (Raybag) ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇಲಿನ ಅತ್ಯಾಚಾರ ಪ್ರಕರಣ ಸಾಬೀತಾಗಿದ್ದು, ಆರೋಪಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ತಂಗಿಯನ್ನು ಕೊಲ್ಲಲು ಸ್ನೇಹಿತನಿಗೇ ಸುಪಾರಿ ಕೊಟ್ಟ ಅಣ್ಣ;  ಅತ್ಯಾಚಾರ ಮಾಡಿ ಬರ್ಬರ ಹತ್ಯೆ!

ಮರ್ಯಾದಾ ಹತ್ಯೆ; ತಂಗಿಯನ್ನು ಕೊಲ್ಲಲು ಸುಪಾರಿ

Crime news: ಹರಿಯಾಣದಲ್ಲಿ ನಡೆದಿರುವ ಮರ್ಯಾದಾ ಹತ್ಯೆಯ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. ಕುಟುಂಬದ ಗೌರವದ ಹೆಸರಿನಲ್ಲಿ ತಂಗಿಯನ್ನು ಹತ್ಯೆಗೈಯಲು ಆಕೆಯ ಸಹೋದರನೇ ತನ್ನ ಸ್ನೇಹಿತನಿಗೆ ಸುಪಾರಿ ನೀಡಿದ್ದಾನೆ. ಸ್ನೇಹಿತನು, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದಾನೆ.

ಮೋದಿ ರ‍್ಯಾಲಿಗೆ ಹೋಗುತ್ತಿದ್ದಾಗ ಅಪಘಾತ: ನಾಲ್ವರು ಬಿಜೆಪಿ ಕಾರ್ಯಕರ್ತರ ಸಾವು

ಅಪಘಾತ: ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವು

ಪಶ್ಚಿಮ ಬಂಗಾಳದಲ್ಲಿ ಮೋದಿ ರ‍್ಯಾಲಿಗೆ ಹೋಗುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ದಟ್ಟವಾದ ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಮೈಸೂರಿನಲ್ಲಿ ಘೋರ ಘಟನೆ; ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಬಾಲಕಿ ಸಾವು

ಮೈಸೂರಿನಲ್ಲಿ ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಬಾಲಕಿ ಸಾವು

Mysuru News: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಜಯಗಿರಿ ಹಾಡಿಯಲ್ಲಿ ಘಟನೆ ನಡೆದಿದೆ. ತಾಯಿ ಸ್ನಾನ ಮಾಡಿಸಲು ಪಾತ್ರೆಯಲ್ಲಿ ಬಿಸಿ ನೀರಿಟ್ಟು, ತಣ್ಣೀರು ತರಲು ಹೋಗಿದ್ದಾರೆ. ಈ ವೇಳೆ ಮಗು ಬಿಸಿ ನೀರಿನ ಪಾತ್ರೆಗೆ ಬಿದ್ದು ಮೃತಪಟ್ಟಿದೆ.

ದೇಶವನ್ನೇ ನಡುಗಿಸುತ್ತೇನೆ; ಭಾರತ ವಿರೋಧಿ ನಾಯಕ ಉಸ್ಮಾನ್‌ ಶರೀಫ್‌ ಹತ್ಯೆಗೂ ಮುನ್ನ ಪ್ರೇಯಸಿ ಬಳಿ ಹೇಳಿದ್ದ ಆರೋಪಿ ಫೈಸಲ್‌ ಕರಿಂ

ಷರೀಫ್ ಉಸ್ಮಾನ್ ಹಾದಿ ಹತ್ಯೆಗೂ ಮುನ್ನ ಆರೋಪಿ ಹೇಳಿದ್ದೇನು?

ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರನ್ನು ಹತ್ಯೆ ಮಾಡುವ ಹಿಂದಿನ ರಾತ್ರಿ ಗೆಳತಿ ಜೊತೆ ಮಾತನಾಡಿದ ಪ್ರಮುಖ ಆರೋಪಿ ಫೈಸಲ್ ಕರೀಮ್, ಬಾಂಗ್ಲಾದೇಶವನ್ನು ಸಂಪೂರ್ಣವಾಗಿ ನಡುಗಿಸುತ್ತೇನೆ ಎಂದು ಹೇಳಿದ್ದ ಎಂದು ಢಾಕಾ ಮೂಲದ ಮಾಧ್ಯಮವೊಂದು ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಫೈಸಲ್ ಕುಟುಂಬದವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

Bagalkot News: ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ, ಪೈಪ್‌ನಿಂದ ಹೊಡೆದ ಶಿಕ್ಷಕ ದಂಪತಿ!

ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆಗೈದ ಶಿಕ್ಷಕ!

ಬಾಗಲಕೋಟೆಯಲ್ಲಿ ವಸತಿಶಾಲೆಯ ಮಾಲೀಕ ಹಾಗೂ ಶಿಕ್ಷಕ ಅಕ್ಷಯ್ ಎಂಬಾತ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕನನ್ನು ಪ್ಲಾಸ್ಟಿಕ್ ಪೈಪ್‌ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಲಾಗಿದೆ, ಆ ಸಂದರ್ಭದಲ್ಲಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಚಿತ್ರಹಿಂಸೆ ನೀಡಲಾಗಿದೆ.

ನ್ಯಾಯಾಧೀಶರ ನಿವಾಸದ ಎದುರೇ ಶ್ವಾನವನ್ನು ಗುಂಡಿಕ್ಕಿ ಕೊಂದ ಭದ್ರತಾ ಸಿಬ್ಬಂದಿ; ಆಘಾತಕಾರಿ ಕೃತ್ಯದ ವಿಡಿಯೊ ವೈರಲ್

ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ಜಡ್ಜ್ ಭದ್ರತಾ ಸಿಬ್ಬಂದಿ

ನ್ಯಾಯಾಧೀಶರ ನಿವಾಸದ ಎದುರೇ ನಡೆದ ಒಂದು ಆಘಾತಕಾರಿ ಘಟನೆಯ ವಿಡಿಯೊ ವೈರಲ್ ಆಗಿದ್ದು, ಸೋಶಿಯಲ್‌ ಭಾರಿ ಚರ್ಚೆಗೆ ಕಾರಣವಾಗಿದೆ. ನ್ಯಾಯಾಧೀಶರ ಮನೆಯ ಬಳಿಯ ನೆಲಕ್ಕೆ ಹೊಸದಾಗಿ ಕಾಂಕ್ರೀಟ್‌ ಹಾಕಲಾಗಿದ್ದು, ಅದರ ಮೇಲೆ ಹೆಜ್ಜೆ ಹಾಕಿದ ಶ್ವಾನಕ್ಕೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾನೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

3 ಕೋಟಿ ರುಪಾಯಿ ವಿಮೆ ಹಣಕ್ಕಾಗಿ ವಿಷ ಸರ್ಪವನ್ನು ತಂದು ಅಪ್ಪನನ್ನೇ ಕೊಂದ ಪಾಪಿ ಪುತ್ರರು

3 ಕೋಟಿ ರುಪಾಯಿ ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿಗಳು

Crime News: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿರುವ ಆಘಾತಕಾರಿ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. 3 ಕೋಟಿ ರುಪಾಯಿ ವಿಮೆ ಹಣ ಪಡೆಯಲು ಪುತ್ರರೇ ವಿಷಕಾರಿ ಸರ್ಪವನ್ನು ತಂದು ತಂದೆಯನ್ನೇ ಕೊಂದಿರುವ ವಿಚಾರ ಬಯಲಾಗಿದೆ. ಪೊಲೀಸ್ ತನಿಖೆಯಲ್ಲಿ ಇದು ಪೂರ್ವಯೋಜಿತ ಕೊಲೆ ಎಂಬುದು ಗೊತ್ತಾಗಿದೆ.

Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್‌ಬಾಲ್‌ನಂತೆ ಮಗುವಿಗೆ ಒದ್ದ ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.

Byrathi Basavaraj: ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ರೌಡಿ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಸೆರೆ ಸಾಧ್ಯತೆ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

Valmiki Corporation scam: ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ

ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

former minister B Nagendra: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್​ಗಳಡಿಯಲ್ಲಿ ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿ 4 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದ ಈ ಪ್ರಕರಣದಲ್ಲಿ ಈವರೆಗೆ ಜಪ್ತಿ ಮಾಡಿದ ಒಟ್ಟು ಮೊತ್ತ 13.01 ಕೋಟಿ ರೂ.ಗಳಾಗಿದೆ.

ದೃಶ್ಯಂ ಸ್ಟೈಲ್​ ಮರ್ಡರ್‌; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

Vijayapur News: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನ್ನಟ್ಟಿ ಪಿ.ಎ ಗ್ರಾಮದಲ್ಲಿ ಹತ್ಯೆ ನಡೆದಿತ್ತು. ಕೊಲೆ ಬಳಿಕ ಅಮಾಯಕರಂತೆ ಓಡಾಡುತ್ತಿದ್ದ ಹಂತಕರು ಕೊನೆಗೂ ಬಂಧನವಾಗಿದ್ದಾರೆ. ಪ್ರಕರಣ ನಡೆದ 6 ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಂಡು ಹಾರಿಸಿ ವ್ಯಕ್ತಿಯ ಕೊಲೆ, ದೇಹದೊಳಗೆ 69 ಬುಲೆಟ್ ಪತ್ತೆ

ಎರಡು ಕುಟುಂಬಗಳ ನಡುವೆ ಕಲಹ; ಕೊಲೆಯಲ್ಲಿ ಅಂತ್ಯ

Crime News: ಎರಡು ಕುಟುಂಬಗಳ ನಡುವಿನ ಕಲಹದಲ್ಲಿ 52 ವರ್ಷದ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹದಲ್ಲಿ 69 ಗುಂಡುಗಳು ಪತ್ತೆಯಾಗಿದ್ದು, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Bengaluru Child Assault: ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್; ಕ್ರೂರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದು ಜಿಮ್ ಟ್ರೈನರ್ ವಿಕೃತಿ!

ಬೆಂಗಳೂರಿನ ತ್ಯಾಗರಾಜ ನಗರದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬಾಲಕನ ಮೇಲೆ ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದಾಗ, ಆರೋಪಿಯದ್ದು ಇಂತಹ ಕೃತ್ಯ ಇದೇ ಮೊದಲಲ್ಲ, ಈ ಹಿಂದೆಯೂ ಹಲವರಿಗೆ ಕಿರುಕುಳ ಕೊಟ್ಟಿದ್ದಾನೆ ಎಂಬುವುದು ತಿಳಿದುಬಂದಿದೆ.

ಬುರ್ಖಾ ಧರಿಸದ ಕಾರಣಕ್ಕೆ ಕೊಲೆ ಪ್ರಕರಣ: ಮುಖ ಕಾಣುತ್ತೆ ಎಂದು ಆಧಾರ್, ರೇಷನ್ ಕಾರ್ಡ್ ನಲ್ಲಿ ಪತ್ನಿಯ ಹೆಸರೂ ಸೇರಿಸಲೂ ಬಿಡದ ಪತಿ

ಬುರ್ಖಾ ಧರಿಸದ ಪತ್ನಿಯ ಆಧಾರ್, ರೇಷನ್ ಕಾರ್ಡ್ ಕೂಡ ಮಾಡಿಸಿಲ್ಲ

ಪತ್ನಿಯ ಮುಖ ಯಾರಿಗೂ ಕಾಣಬಾರದು ಎಂದು ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಿಡದ ಪತಿ ಇದೀಗ ಆಕೆ ಬುರ್ಖಾ ಧರಿಸದೇ ಪೋಷಕರ ಮನೆಗೆ ಹೋದಳು ಎಂಬ ಕಾರಣಕ್ಕೆ ಆಕೆಯೊಂದಿಗೆ ಇಬ್ಬರು ಮಕ್ಕಳನ್ನು ಕೊಂದೇ ಬಿಟ್ಟಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

Dharmasthala Case: ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

Dharmasthala Case: ತನಗೆ ಹಾಗೂ ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಅವರಿಗೆ ಧರ್ಮಸ್ಥಳ ವಿರೋಧಿ ಹೋರಾಟಗಾರರಾದ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಜಯಂತ್, ಯುಟ್ಯೂಬರ್‌ ಸಮೀರ್ ಎಂ.ಡಿ. ಮತ್ತು ಅವರ ಸಂಗಡಿಗರಿಂದ ಜೀವ ಬೆದರಿಕೆ ಇದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಬೇಕು ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Murder Attempt: ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್​ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್​ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.

ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ತನಿಖೆಗೆ ಸಹಕರಿಸುತ್ತಿಲ್ಲ ಲೂಥ್ರಾ ಬ್ರದರ್ಸ್

ಛೇ! ಎಂಥ ಕಲ್ಲು ಹೃದಯ ಈ ಲೂತ್ರಾ ಸಹೋದರರದ್ದು!

Goa Nightclub Fire: ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಬಳಿಕ ತಲೆಮರೆಸಿಕೊಂಡಿದ್ದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ ಕ್ಲಬ್‌ನ ಮಾಲಕರಾದ ಸೌರವ್ ಮತ್ತು ಗೌರವ್ ಲೂಥ್ರಾ ಅವರನ್ನು ಪೊಲೀಸರು ಬಳಿಕ ಥಾಯ್ಲೆಂಡ್‌ನಿಂದ ಬಂಧಿಸಿ ಭಾರತಕ್ಕೆ ಕರೆತಂದಿದ್ದರು. ಆದರೆ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿಗಳ ಜತೆ ಲೂಥ್ರಾ ಬ್ರದರ್ಸ್ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Viral Video: ಗಾಂಜಾ ಬಗ್ಗೆ ದೂರು ನೀಡಿದ್ದಕ್ಕೆ ಮಕ್ಕಳ ಮೇಲೆ ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು

ಗಾಂಜಾ ಬಗ್ಗೆ ದೂರು ನೀಡಿದ್ದಕ್ಕೆ ಮನ ಬಂದಂತೆ ಥಳಿಸಿದ ಅಪ್ರಾಪ್ತರು

ತಮಿಳುನಾಡಿನ ವಿರುತ್ತನಗರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ತಮಗಿಂತ ಸಣ್ಣ ವಯಸ್ಸಿನ ಮಕ್ಕಳ ಮೇಲೆ ಅಪ್ರಾಪ್ತ ಬಾಲಕರ ಗುಂಪೊಂದು ಮನ ಬಂದಂತೆ ಹಲ್ಲೆ ನಡೆಸಿದೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

Murder Case: ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತಾ? ಮಾಲೀಕರನ್ನೇ ಕೊಂದು  ಸೂಟ್‌ಕೇಸ್‌ನಲ್ಲಿ ಮುಚ್ಚಿಟ್ಟ ದಂಪತಿ!

ಮನೆ ಬಾಡಿಗೆ ಪಾವತಿಸುವಂತೆ ಕೇಳಿದ್ದಕ್ಕೆ ಮಾಲಕಿಯನ್ನೇ ಕೊಂದ ದಂಪತಿ

Crime News: ಕಳೆದ 4 ತಿಂಗಳಿನಿಂದ ಮನೆ ಬಾಡಿಗೆ ಕಟ್ಟದ ದಂಪತಿಯ ಮನೆಗೆ ಮಾಲಕಿ ಹೋಗಿದ್ದಾರೆ. ಆದರೆ, ಸಿಕ್ಕಿದ್ದು ಮಾತ್ರ ಹೆಣವಾಗಿ. ಈ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಮನೆ ಬಾಡಿಗೆ ಕಟ್ಟುವಂತೆ ಕೇಳಿದ್ದಕ್ಕೆ ಮಾಲಕಿಯನ್ನೇ ದಂಪತಿ ಹತ್ಯೆ ಮಾಡಿ, ಶವವನ್ನು ಸೂಟ್‌ಕೇಸ್‍ನಲ್ಲಿ ತುಂಬಿದ್ದಾರೆ.

Physical Abuse: ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

Loading...