ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Bengaluru Crime News: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ‌ ಯುವಕರ ಗಲಾಟೆ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.

Viral Video: ಹಾಡ ಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ; ಆರೋಪಿ ಸೆರೆ

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ: ಆರೋಪಿಯ ಬಂಧನ

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಾಡು ಹಗಲೇ ಗುಂಡಿನ ದಾಳಿ ನಡೆದ ಘಟನೆ ಮಹಾರಾಷ್ಟ್ರದ ಕಂಡಿವಲಿಯ ಚಾರ್ಕೋಪ್‌ನಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ಫುಟೇಜ್ ವೈರಲ್ ಆಗಿದೆ. ಬೈಕ್‌ನಲ್ಲಿ ಬಂದ ಮೂವರು ಶೂಟರ್‌ಗಳ ಬಗ್ಗೆ ತನಿಖೆ ನಡೆಸಲಾಗಿದ್ದು ದಾಳಿಯ ಮಾಸ್ಟರ್ ಮೈಂಡ್ ಮುನ್ನಾ ಮಯುದ್ದೀನ್ ಶೇಖ್‌ನನ್ನು ಚಾರ್ಕೋಪ್ ಪೊಲೀಸರು ಬಂಧಿಸಿದ್ದಾರೆ.

ಕೈ ಹಿಡಿದವಳು ಜೊತೆಗಿದ್ದರೂ ಮತ್ತೊಬ್ಬಳ ಜೊತೆ ಲವ್ವಿ-ಡವ್ವಿ... ಪತ್ನಿ- ಮಕ್ಕಳನ್ನೇ ಕೊಂದ ಅರಣ್ಯಾಧಿಕಾರಿ

ಲವ್ವರ್‌ಗಾಗಿ ಪತ್ನಿ- ಮಕ್ಕಳನ್ನೇ ಕೊಂದ ಅರಣ್ಯಾಧಿಕಾರಿ

ಗುಜರಾತ್‌ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೈಲೇಶ್ ಕಂಬಾಲಾ ಎನ್ನುವವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತನ್ನ ಮನೆಯ ಬಳಿಯೇ ಹೂತಿಟ್ಟ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೊಲೆ ಕಾರಣವನ್ನು ಪತ್ತೆ ಹಚ್ಚಿದ್ದ ಪೊಲೀಸರಿಗೆ ದೊಡ್ಡ ಶಾಖ್ ಎದುರಾಗಿದೆ. ಅಧಿ ಕಾರಿಯು ಅರಣ್ಯ ಇಲಾಖೆಯಲ್ಲಿರುವ ಮಹಿಳಾ ಸಿಬ್ಬಂದಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಆ ಮಹಿಳೆಗೋಸ್ಕರವೇ ಕೊಲೆ ಮಾಡಿದ್ದು ತನಿಖೆ ವೇಳೆ ತಿಳಿದುಬಂದಿದೆ.

Manikanta Rathod: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್‌ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.

Udupi news: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ

ಪಾಕಿಸ್ತಾನಕ್ಕೆ ಭಾರತ ನೌಕಾಪಡೆ ರಹಸ್ಯ ಗೂಢಚರ್ಯೆ, ಉಡುಪಿಯಲ್ಲಿ ಇಬ್ಬರ ಸೆರೆ

Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.

Bengaluru Robbery Case: ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌; ಮುಖ್ಯೋಪಾಧ್ಯಾಯ ಸೇರಿ ಮೂವರು ಶಿಕ್ಷಕರು ಅಮಾನತು

ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌; ಮೂವರು ಶಿಕ್ಷಕರ ಅಮಾನತು

Delhi News: ದೆಹಲಿಯ ಸೇಂಟ್ ಕೊಲಂಬಾ ಶಾಲೆಯ 16 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಶಾಲೆಯ ಮುಖ್ಯೋಪಾಧ್ಯ ಮತ್ತು ಮೂವರು ಶಿಕ್ಷಕರನ್ನು ಅಮಾನತುಗೊಳಸಲಾಗಿದೆ.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದಲ್ಲಿದೆಯಾ ಕಾನ್ಸ್‌ಟೇಬಲ್ ಕೈವಾಡ? ಶಾಕಿಂಗ್‌ ಸಂಗತಿ ಬಯಲು

ಬೆಂಗಳೂರು ದರೋಡೆ ಪ್ರಕರಣದಲ್ಲಿದೆಯಾ ಕಾನ್ಸ್‌ಟೇಬಲ್ ಕೈವಾಡ?

Bengaluru News: ಬೆಂಗಳೂರಿನಲ್ಲಿ ಡೇರಿ ಸರ್ಕಲ್‌ ಬಳಿ ನಡೆದಿದ್ದ ರಾಬರಿ ಕೇಸ್‌ಗೆ ಇದೀಗ್‌ ಬಿಗ್‌ ಟ್ವಿಸ್ಟ್‌ ದೊರಕಿದ್ದು, ಪೊಲೀಸ ಕಾನ್ಸ್‌ಟೇಬಲ್‌ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಈಗಾಗಲೇ ಇಬ್ಬರು ದರೋಡೆಕೋರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ದೆಹಲಿ ಬಾಂಬ್ ಸ್ಫೋಟ: ಮತ್ತೆ ನಾಲ್ವರು ಪ್ರಮುಖರ ಬಂಧನ

ದೆಹಲಿ ಸ್ಫೋಟ: ಮತ್ತೆ ನಾಲ್ವರ ಬಂಧನ

ದೆಹಲಿಯ ಕೆಂಪು ಕೋಟೆ ಬಳಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ಬಂಧಿಸಿದೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ ಆರಕ್ಕೆ ಏರಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ.

ದೆಹಲಿ ಸ್ಫೋಟ: ಉಮರ್ ಭೇಟಿಯಾಗಿದ್ದ ಮೌಲಾನಾ, ಶಿಕ್ಷಕನ ಬಂಧನ

ದೆಹಲಿ ಸ್ಫೋಟ: ಮೌಲಾನಾ, ಶಿಕ್ಷಕನ ಬಂಧನ

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಉರ್ದು ಶಿಕ್ಷಕನನ್ನು ಬಂಧಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಹೊರಗೆ ನಡೆದ ಸ್ಪೋಟದ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಭೇಟಿಯಾಗಿದ್ದ ಹರಿಯಾಣದ ಗುರುಗ್ರಾಮ್‌ನ ಸೋಹ್ನಾದ ಮೌಲಾನಾ ಮತ್ತು ಶಿಕ್ಷಕನನ್ನು ಫರಿದಾಬಾದ್ ಅಪರಾಧ ವಿಭಾಗವು ಬಂಧಿಸಿದೆ.

Kashmir Times: ಕಾಶ್ಮೀರ ಟೈಮ್ಸ್ ಪತ್ರಿಕಾ ಕಚೇರಿಯ ಮೇಲೆ ದಾಳಿ; ಎ.ಕೆ. ರೈಫಲ್‌ ಗುಂಡು, ಕಾರ್ಟ್ರಿಡ್ಜ್‌ ವಶಕ್ಕೆ

ಕಾಶ್ಮೀರ ಟೈಮ್ಸ್ ಪತ್ರಿಕಾ ಕಚೇರಿಯ ಮೇಲೆ ದಾಳಿ

Raid on Kashmir Times Newspaper Office: ಕಾಶ್ಮೀರ ಟೈಮ್ಸ್ ಪತ್ರಿಕಾ ಕಚೇರಿಯ ಮೇಲೆ ನಡೆದ ದಾಳಿಯಲ್ಲಿ ಎ.ಕೆ. ರೈಫಲ್‌ ಗುಂಡುಗಳು, ಕಾರ್ಟ್‌ರಿಡ್ಜ್‌ಗಳು ಹಾಗೂ ಗ್ರೆನೇಡ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಲಾಗಿದೆ. ಸದ್ಯ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳು ಮತ್ತು ಸ್ಥಳೀಯ ಸುಳಿವುಗಳನ್ನು ಪರಿಶೀಲಿಸುತ್ತಿದ್ದಾರೆ.

Dog Bite Relief Fund: ಬೀದಿ ನಾಯಿ ದಾಳಿಯಿಂದ ಮೃತಪಟ್ಟವರು, ಗಾಯಾಳುಗಳಿಗೆ ಪರಿಹಾರ ಘೋಷಣೆ

ಬೀದಿ ನಾಯಿ ದಾಳಿಯಿಂದ ಮೃತಪಟ್ಟವರು, ಗಾಯಾಳುಗಳಿಗೆ ಪರಿಹಾರ ಘೋಷಣೆ

Karnataka government: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದಿ ನಾಯಿ ದಾಳಿಯಿಂದ ಮೃತಪಟ್ಟವರು ಹಾಗೂ ಗಾಯಾಳುಗಳಿಗೆ ಎಷ್ಟು ಪರಿಹಾರ ಸಿಗಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Bengaluru ATM van Robbery: ಬೆಂಗಳೂರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್; ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆ

ಬೆಂಗಳೂರು ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

Bengaluru News: ಬಾಣಸವಾಡಿಯ ಕಲ್ಯಾಣ ನಗರದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರೋಡೆಯ ವೇಳೆ ಕರ್ನಾಟಕ ನೋಂದಣಿ ನಂಬರ್ ಪ್ಲೇಟ್‌ ಹಾಕಿದ್ದ ಆರೋಪಿಗಳು, ಪರಾರಿಯಾದ ಬಳಿಕ ಯುಪಿ ನೋಂದಣಿಯ ನಂಬರ್ ಪ್ಲೇಟ್ ಹಾಕಿಕೊಂಡು ಓಡಾಡುತ್ತಿದ್ದರು ಎಂದು ತಿಳಿದುಬಂದಿದೆ.

ಲೈಂಗಿಕ ಕ್ರಿಯೆಗೆ ಸಮ್ಮತಿಸದ ಗಂಡನಿಗೆ ವಿಷವಿಕ್ಕಿ ಕೊಂದ ಪಾಪಿ ಪತ್ನಿ!

ಸೆಕ್ಸ್‌ಗೆ ನೋ ಎಂದ ಗಂಡನಿಗೆ ವಿಷವಿಕ್ಕಿ ಕೊಂದ ಹೆಂಡತಿ!

ಲೈಂಗಿಕ ಸಂಬಂಧಕ್ಕೆ ಸಮ್ಮತಿಸದ್ದಕ್ಕೆ ಕೋಪಗೊಂಡ ಹೆಂಡತಿ ತನ್ನ ಪತಿಗೆ ವಿಷಪ್ರಾಶನ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 2023ರಲ್ಲಿ ಅನುಜ್ ಶರ್ಮಾ ಹಾಗೂ ಪಿಂಕಿ ಶರ್ಮಾ ಎಂಬವರು ವಿವಾಹವಾದರು. ಆದರೆ, ಅಂದಿನಿಂದ ಕೇವಲ ಎರಡು ಬಾರಿ ದೈಹಿಕವಾಗಿ ಒಂದಾಗಿದ್ದರಿಂದ ಪತ್ನಿ ಕೋಪಗೊಂಡಿದ್ದಳು ಎನ್ನಲಾಗಿದೆ.

BMTC Bus Accident: ಕಿಲ್ಲರ್‌ BMTC ಗೆ ಮತ್ತೊಂದು ಬಲಿ; ವೃದ್ಧನ ತಲೆಯೇ ಛಿದ್ರ ಛಿದ್ರ

ಕಿಲ್ಲರ್‌ BMTC ಗೆ ಮತ್ತೊಂದು ಬಲಿ

BMTC Bus: ಬಿಎಂಟಿಸಿ ಬಸ್‌ಗೆ ಇಂದು ಮತ್ತೊಬ್ಬರನ್ನು ಬಲಿ ಪಡೆದುಕೊಂಡಿದೆ. ಮಡಿವಾಳದ ಪೊಲೀಸ್ ಠಾಣೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ವೃದ್ಧನ ಮೇಲೆ ಬಸ್‌ ಹರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಡಿವಾಳ ನಿವಾಸಿ ವೆಂಕಟರಾಮಯ್ಯ ಮೃತ ವ್ಯಕ್ತಿ

ಕ್ಷಮಿಸು ಅಮ್ಮ... ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ

Delhi News: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಕ್ಷಮಿಸಿ ಅಮ್ಮ, ಎಂದು ಮನಕಲಕುವ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ವಿದ್ಯಾರ್ಥಿಗೆ ಶಿಕ್ಷಕರು ಮಾನಸಿಕ ಒತ್ತಡ ಹಾಗೂ ಅವಮಾನ ಮಾಡಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಮಗಳನ್ನೇ ನರಬಲಿ ಕೊಡಲು ತಾಯಿಯ ಸಂಚು? ಕುತ್ತಿಗೆ ಕಡಿದ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್‌

ಮಗಳನ್ನೇ ನರಬಲಿ ಕೊಡಲು ಸಂಚು ನಡೆಸಿದ್ದಳಾ ಪಾಪಿ ತಾಯಿ?

Bengaluru News: ಗಂಡನನ್ನು ಬಿಟ್ಟು ತವರು ಮನೆಗೆ ಬಂದಿದ್ದ ಮಗಳನನ್ನು ಹೆತ್ತ ತಾಯಿಯೇ ಕುತ್ತಿಗೆ ಕಡಿದ ಘಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ತಾಯಿ ತನ್ನ ಮಗಳನ್ನು ನರಬಲಿ ಕೊಡಲು ಮುಂದಾಗಿದ್ದಳು ಎಂಬ ಅನುಮಾನ ಮೂಡುತ್ತಿದೆ.

ಆಸ್ಟ್ರೇಲಿಯಾದಲ್ಲಿ ಘನಘೋರ ಘಟನೆ! ಕಾರು ಡಿಕ್ಕಿ ಹೊಡೆದು ಭಾರತೀಯ ಮೂಲದ ಗರ್ಭಿಣಿ ಸಾವು

ಭಾರತೀಯ ಮೂಲದ ಗರ್ಭಿಣಿ ಅಪಘಾತಕ್ಕೆ ಬಲಿ

Accident: ಸಿಡ್ನಿ ನಗರದ ಹಾರ್ನ್ಸ್‌ಬೈನಲ್ಲಿ ನಡೆದ ಘಟನೆಯೊಂದರಲ್ಲಿ, ಎಂಟು ತಿಂಗಳ ಗರ್ಭಿಣಿ ಭಾರತೀಯ ಮೂಲದ ಮಹಿಳೆ ಸಮನ್ವಿತಾ ಧಾರೇಶ್ವರ್ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಅವರು ತಮ್ಮ ಗಂಡ ಮತ್ತು ಮೂರು ವರ್ಷದ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣ; ಶಂಕಿತ ಆರೋಪಿಗಳ ಪೋಟೊ ಬಿಡುಗಡೆ ಮಾಡಿದ ಪೊಲೀಸರು

ಬೆಂಗಳೂರು ದರೋಡೆ ಕೇಸ್‌; ಶಂಕಿತ ಆರೋಪಿಗಳ ಪೋಟೊ ಬಿಡುಗಡೆ

Bengaluru News: ಬೆಂಗಳೂರಿನ ಡೇರಿ ಸರ್ಕಲ್‌ ಬಳಿ ಬುಧವಾರ ಮಧ್ಯಾಹ್ನ ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿರುವ ಘಟನೆ ನಡೆದಿತ್ತು. ಎಟಿಎಂಗಳಿಗೆ ಹಣ ಹಾಕಲು ಡೇರಿ ಸರ್ಕಲ್​ ಫ್ಲೈಓವರ್ ಮೇಲೆ ಹೋಗುತ್ತಿದ್ದ ವಾಹನ ತಡೆದು ದರೋಡೆ ಮಾಡಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Bengaluru Robbery Case: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ; ಎಟಿಎಂಗೆ ಹಣ ತುಂಬುವ ವಾಹನದಿಂದ ಹಣ ದೋಚಿದ ಗ್ಯಾಂಗ್!

ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ!

Bengaluru News: ಬೆಂಗಳೂರಿನ ಡೇರಿ ಸರ್ಕಲ್​ ಫ್ಲೈಓವರ್ ಮೇಲೆ ದರೋಡೆ ನಡೆಸಲಾಗಿದೆ. ಎಂಟಿಎಂಗಳಿಗೆ ಹಣ ತುಂಬುವ ವಾಹನದಿಂದ 7.11 ಕೋಟಿ ರೂ.ಗಳನ್ನು ದೋಚಲಾಗಿದೆ. ಪ್ರಕರಣ ಹಿನ್ನೆಲೆ ಬೆಂಗಳೂರಿನಾದ್ಯಂತ ನಾಕಾಬಂದಿ ಹಾಕಿ ಪರಿಶೀಲನೆ ನಡೆಸಲು ನಗರ ಪೊಲೀಸ್‌ ಆಯುಕ್ತರು ಸೂಚನೆ ನೀಡಿದ್ದಾರೆ.

Murder Case: ಎಂಟು ವರ್ಷಗಳ ಬಳಿಕ ಬಯಲಾಯ್ತು ಭಾರತೀಯ ಮಹಿಳೆ ಮತ್ತು ಮಗನ ಹತ್ಯೆ;  ಲ್ಯಾಪ್‌ಟಾಪ್‌ ಕೊಟ್ಟ ಆ ಸುಳಿವೇನು?

ಎಂಟು ವರ್ಷಗಳ ಬಳಿಕ ಬಯಲಾಯ್ತು ಭಾರತೀಯ ಮಹಿಳೆ ಮತ್ತು ಮಗನ ಹತ್ಯೆ

ಆಂಧ್ರಪ್ರದೇಶದ ಮಹಿಳೆ ಶಶಿಕಲಾ ನರ ಮತ್ತು ಅವರ ಮಗ ಅನೀಶ್ ಅವರ ನ್ಯೂಜೆರ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾದ ಎಂಟು ವರ್ಷಗಳ ನಂತರ, ಅಮೆರಿಕದ ಅಧಿಕಾರಿಗಳು ಭಾರತೀಯ ವ್ಯಕ್ತಿಯ ವಿರುದ್ಧ ಪೊಲೀಸರು ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಮಾಡಿದ್ದಾರೆ.

Bengaluru Central Prison: ಜೈಲಿನಲ್ಲಿ ಕೈದಿಗಳ ಪಾರ್ಟಿ ವಿಡಿಯೋ ವೈರಲ್ ಪ್ರಕರಣ; ವಿಚಾರಣೆ ವೇಳೆ ವಿಜಯಲಕ್ಷ್ಮಿ ಹೆಸರು ಹೇಳಿದ ಧನ್ವೀರ್!

ಜೈಲಿನಲ್ಲಿ ಕೈದಿಗಳ ಪಾರ್ಟಿ; ವಿಚಾರಣೆ ವೇಳೆ ವಿಜಯಲಕ್ಷ್ಮಿ ಹೆಸರು

VIP treatment at Bengaluru prison: ಒಂದೆಡೆ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನಿಷ್ಠ ಸೌಲಭ್ಯ ಸಿಗುತ್ತಿಲ್ಲ ಎಂಬ ಅರೋಪ ಕೇಳಿಬಂದಿದೆ. ಈ ಸಂಬಂಧ ವಕೀಲರ ಮೂಲಕ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಮತ್ತೊಂದು ಕಡೆ ಹೀಗೆ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿದೆ ಎಂದು ಬಿಂಬಿಸಲು ವಿಡಿಯೋಗ ವೈರಲ್‌ ಮಾಡಿರಬಹುದು ಎನ್ನುವ ಚರ್ಚೆ ನಡೆಯುತ್ತಿದೆ. ಹೀಗಾಗಿ ಧನ್ವೀರ್ ವಿಚಾರಣೆ ನಡೆದಿದೆ.

ಮದ್ವಿ ಹಿಡ್ಮಾ ಹತ್ಯೆ ಬಳಿಕ ಆಂಧ್ರಪ್ರದೇಶದಲ್ಲಿ ಏಳು ಮಾವೋವಾದಿಗಳ ಎನ್‌ಕೌಂಟರ್

ಆಂಧ್ರಪ್ರದೇಶದಲ್ಲಿ ಏಳು ಮಂದಿ ನಕ್ಸಲರ ಎನ್‌ಕೌಂಟರ್

ನಕ್ಸಲ್ ನಾಯಕ ಮದ್ವಿ ಹಿಡ್ಮಾ ಹತ್ಯೆಯ ಮರುದಿನವೇ ಆಂಧ್ರಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಸಂಘರ್ಷದಲ್ಲಿ ಏಳು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಎನ್‌ಟಿಆರ್, ಕೃಷ್ಣ, ಕಾಕಿನಾಡ, ಕೊನಸೀಮಾ ಮತ್ತು ಎಲೂರು ಜಿಲ್ಲೆಗಳಲ್ಲಿ 50 ಮಾವೋವಾದಿಗಳನ್ನು ಬಂಧಿಸಲಾಗಿದೆ. ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Chikkaballapur: ಅಡ್ಡಾದಿಡ್ಡಿ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಬೈಕ್​​ ಸವಾರನಿಗೆ ಚೂರಿಯಿಂದ ಇರಿದ ಲೇಡಿ ಟೆಕ್ಕಿ

ಅಡ್ಡಾದಿಡ್ಡಿ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿದ ಲೇಡಿ ಟೆಕ್ಕಿ

Chikkaballapur news: ಲೇಡಿ ಟೆಕ್ಕಿಯೊಬ್ಬರು ವಿಚಿತ್ರವಾಗಿ, ಆತಂಕಕಾರಿಯಾಗಿ ವರ್ತಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಓಡಿಸುತ್ತಿದ್ದ ಮಹಿಳೆ, ಹಿಂದೆ ಬರುತ್ತಿದ್ದ ವಾಹನಗಳಿಗೆ ಅಡಚಣೆ ಉಂಟುಮಾಡಿದ್ದರು. ನಂತರ ಇದನ್ನು ಪ್ರಶ್ನಿಸಿದ ಬೈಕ್ ಸವಾರರ ಮೇಲೆ ಮುಗಿಬಿದ್ದು ಚಾಕುವಿನಿಂದ ಇರಿದಿದ್ದಾಳೆ.

Loading...