ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

Lokayukta Raid: 12 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತುಮಕೂರು ಡಿಎಚ್‌ಒ ಕಚೇರಿ ವ್ಯವಸ್ಥಾಪಕ

ಲಂಚಕ್ಕೆ ಸ್ವೀಕಾರ; ತುಮಕೂರಿನಲ್ಲಿ ಅಧಿಕಾರಿ ಲೋಕಾಯುಕ್ತ ಬಲೆಗೆ

Tumkur News: ಆರೋಗ್ಯ ಜಾಗೃತಿ ವಸ್ತು ಪ್ರದರ್ಶನದ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್.ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತುಮಕೂರಿನಲ್ಲಿ ಬಸ್ ಹತ್ತಲು ಮುಗಿಬಿದ್ದ ಕಾಲೇಜು ವಿದ್ಯಾರ್ಥಿಗಳು; ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು!

ತುಮಕೂರಿನಲ್ಲಿ ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿನಿ ಕಾಲು ನುಜ್ಜುಗುಜ್ಜು

Tumkur News: ತುಮಕೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಬಸ್‌ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರವಿಶಂಕರ್ ಗುರೂಜಿಗೆ ಬಿಗ್‌ ರಿಲೀಫ್‌; ಸರ್ಕಾರಿ ಜಮೀನು ಒತ್ತುವರಿ ಕೇಸ್‌ ರದ್ದು ಮಾಡಿದ ಹೈಕೋರ್ಟ್‌

ರವಿಶಂಕರ್ ಗುರೂಜಿಗೆ ಬಿಗ್‌ ರಿಲೀಫ್‌; ಜಮೀನು ಒತ್ತುವರಿ ಕೇಸ್‌ ರದ್ದು

Ravishankar Guruji: ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ಶ್ರೀ ರವಿಶಂಕರ್ ಗುರೂಜಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದ್ದು,‌ ಜಮೀನು ಒತ್ತುವರಿ ಆರೋಪ ಪ್ರಕರಣವನ್ನು ರದ್ದುಪಡಿಸಿದೆ.

Harassment: ಇನ್‌ಸ್ಪೆಕ್ಟರ್‌ನಿಂದ ಮಹಿಳಾ ರೌಡಿ ಶೀಟರ್‌ಗೆ ಪೋಲಿ ಮೆಸೇಜ್‌, ಕಿರುಕುಳ: ದೂರು

ಇನ್‌ಸ್ಪೆಕ್ಟರ್‌ನಿಂದ ಮಹಿಳಾ ರೌಡಿಗೆ ಪೋಲಿ ಮೆಸೇಜ್‌, ಕಿರುಕುಳ: ದೂರು

ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ. ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬೋಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.

Self Harming: ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

CJ Roy death: ಮೃತ ಉದ್ಯಮಿ ಸಿಜೆ ರಾಯ್‌ಗೆ ಆಗಿತ್ತು ಸಿನಿಮಾ ನಟಿಯಿಂದ ಹನಿ ಟ್ರ್ಯಾಪ್‌!

ಮೃತ ಉದ್ಯಮಿ ಸಿಜೆ ರಾಯ್‌ಗೆ ಆಗಿತ್ತು ಸಿನಿಮಾ ನಟಿಯಿಂದ ಹನಿ ಟ್ರ್ಯಾಪ್‌!

ಸಿಜೆ ರಾಯ್ ಸೆಲೆಬ್ರೆಟಿಗಳ ಜೊತೆಗೂ ಉತ್ತಮ ನಂಟು ಹೊಂದಿದ್ದರು. ಸಿನಿಮಾ ನಟಿಯೊಬ್ಬರು ಸೆಜೆ ರಾಯ್‌ ಅವರನ್ನು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಬೀಳಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿತ್ತು. ಸಿಜೆ ರಾಯ್‌ಗೆ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಎಸ್ಐಟಿ ತನಿಖಾ ತಂಡ ತನಿಖೆ ನಡೆಸುತ್ತಿದೆ.

ʼಬಂದರೋ ಬಂದರೋ ಭಾವ ಬಂದರೋʼ; ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿಲ್ಲ ಎಂದ ವಕೀಲರ ಕಾಲೆಳೆದ ಪೊಲೀಸರು!

ಕಾರು ಡ್ರಿಫ್ಟಿಂಗ್‌; ರಿಕ್ಕಿ ರೈ ಪರ ವಕೀಲರ ಕಾಲೆಳೆದ ಪೊಲೀಸರು!

Lamborghini stunt: ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ ಅವರ ಹೇಳಿಕೆಗೆ ಪೋಸ್ಟ್‌ ಮೂಲಕ ಬೆಂಗಳೂರು ಸಂಚಾರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಲಂಬೋರ್ಗಿನಿ ಮಾದರಿಯ ವಿನ್ಯಾಸಗಳು ನೋಡಲು ತಮಾಷೆಯಾಗಿ ಕಂಡರೂ, ಸಂಚಾರ ಸಿಗ್ನಲ್‌ಗಳು ನಿಮ್ಮ ಸಾಹಸ ಪ್ರದರ್ಶನದ ವೇದಿಕೆಗಳಲ್ಲ ಎಂದು ಸಲಹೆ ನೀಡಿದ್ದಾರೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು

Dharwad Murder Case: ಧಾರವಾಡ ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾಜಿ ಶಾಸಕನ ಪುತ್ರನನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೆಹಲಿ ವಿಧಾನಸಭಾ ಸ್ಪೀಕರ್‌ಗೆ ಬಾಂಬ್ ಬೆದರಿಕೆ ಇಮೇಲ್; ಸದನ, ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮೆಸೇಜ್‌

ದೆಹಲಿ ವಿಧಾನಸಭಾ ಸ್ಪೀಕರ್‌ಗೆ ಬಾಂಬ್ ಬೆದರಿಕೆ ಇಮೇಲ್

Bomb Threat Email: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸದನ ಮತ್ತು ವಿಧಾನಸಭಾ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಕೆಲವು ತಿಂಗಳ ಹಿಂದೆ ದೆಹಲಿಯಲ್ಲಿ ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಗಳ ಸರಣಿಯಲ್ಲಿ ಈ ಇಮೇಲ್ ಇತ್ತೀಚಿನದು.

E-Khata Corruption: ಇ-ಖಾತಾ ಲಂಚಾವತಾರ ರಿವೀಲ್‌; ಸದನದಲ್ಲಿ ಪೆನ್‌ಡ್ರೈವ್‌ ತೋರಿಸಿದ ಅಶೋಕ್‌ Video

ಇ-ಖಾತಾ ಲಂಚಾವತಾರ ರಿವೀಲ್‌; ಸದನದಲ್ಲಿ ಪೆನ್‌ಡ್ರೈವ್‌ ತೋರಿಸಿದ ಅಶೋಕ್‌

Karnataka assembly session 2026: ಬೆಂಗಳೂರಿನ ಪ್ರತಿಯೊಂದು ವಾರ್ಡ್‌ನಲ್ಲೂ ಇ-ಖಾತೆಗೆ ಲಂಚದ ಬೇಡಿಕೆ ಇಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತ ವಿಡಿಯೊ ಇಲ್ಲಿದೆ.

Murder Case: ಚಿಲ್ಲರೆ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ ಕೊಂದು ಸುಟ್ಟುಹಾಕಿದ ಐವರ ಸೆರೆ

ಚಿಲ್ಲರೆ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ ಕೊಂದು ಸುಟ್ಟ ಐವರ ಸೆರೆ

ಅರಸೀಕೆರೆ ತಾಲ್ಲೂಕಿನ ಕಾಡಯ್ಯನಕೊಪ್ಪಲು ಗ್ರಾಮದ ವರುಣ್(22) ನನ್ನ ಆತನ ಸ್ನೇಹಿತ ಶಶಾಂಕ್ ಹಾಗೂ ಇತರೆ 7 ಜನರು ಸೇರಿ ಮಾರ್ಚ್ 10ರಂದು ಅಪಹರಿಸಿದ್ದಾರೆ. 7 ಸಾವಿರ ರೂ ಸಾಲದ ಹಣ ಕೊಟ್ಟಿಲ್ಲ ಎಂದು ಕರೆದೊಯ್ದು ಕಿರಣ್ ಎಂಬಾತನ ತೋಟದ ಮನೆಯಲ್ಲಿಟ್ಟು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಾರ್ಚ್ 12ರವರೆಗೆ ಎರಡು ದಿನ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

64 Illegally gas cylinders seized: ಗುಡಿಬಂಡೆಯಲ್ಲಿ ತಹಸೀಲ್ದಾರ್ ಭರ್ಜರಿ ಬೇಟೆ: ಅಕ್ರಮವಾಗಿ ಸಂಗ್ರಹಿಸಿದ್ದ 64 ಗ್ಯಾಸ್ ಸಿಲಿಂಡರ್ ಜಪ್ತಿ

ಅಕ್ರಮವಾಗಿ ಸಂಗ್ರಹಿಸಿದ್ದ 64 ಗ್ಯಾಸ್ ಸಿಲಿಂಡರ್ ಜಪ್ತಿ

ಪ್ರಸ್ತುತ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನೆಪವೊಡ್ಡಿ ಭಾರತದಲ್ಲೂ ಸಿಲಿಂಡರ್ ಅಭಾವ ಸೃಷ್ಟಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ಜೋರಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಲಾಭದ ಆಸೆಗೆ ಬಿದ್ದ ಹಲವರು ಅಕ್ರಮವಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಈ ಗಂಭೀರ ವಿಚಾರವನ್ನು ಗಮನಿಸಿದ ಚಿಕ್ಕಬಳ್ಳಾಪುರ ಜಿಲ್ಲಾಧಿ ಕಾರಿಗಳು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಆಯಾ ತಾಲೂಕು ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದ್ದರು

ಪಾಕಿಸ್ತಾನದೊಂದಿಗೆ ನಂಟು: ಉತ್ತರಪ್ರದೇಶದಲ್ಲಿ ಬೃಹತ್ ಬೇಹುಗಾರಿಕೆ ಜಾಲ ಪತ್ತೆ

ಬೃಹತ್ ಬೇಹುಗಾರಿಕೆ ಜಾಲ ಭೇದಿಸಿದ ಪೊಲೀಸರು

ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ಬೃಹತ್ ಬೇಹುಗಾರಿಕೆ ಜಾಲವನ್ನು ಉತ್ತರ ಪ್ರದೇಶದಲ್ಲಿ ಪತ್ತೆಹಚ್ಚಲಾಗಿದೆ.ಗುಪ್ತಚರ ಇಲಾಖೆ ಮಾಹಿತಿಯಂತೆ ಮಾರ್ಚ್ 14ರಂದು ಗಾಜಿಯಾಬಾದ್‌ನ ಕೌಶಂಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಪೊಲೀಸರಿಗೆ ಇದು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ಬಹುದೊಡ್ಡ ಬೇಹುಗಾರಿಕೆ ಜಾಲ ಎಂಬುದು ತಿಳಿದು ಬಂದಿದೆ.

ಅತ್ಯಾಚಾರ, ಗರ್ಭಪಾತ, ಭೂಮಿಗಾಗಿ ಕೊಲೆ: ಒಂದೊಂದೇ ಹೊರ ಬರುತ್ತಿದೆ ನಾಸಿಕ್‌ನ ಸ್ವಂಘೋಷಿತ ʼದೇವ ಮಾನವನʼ ಖರಾತ್‌ನ ಕರಾಳ ಮುಖ

ದೇವ ಮಾನವ ಹೆಸರಿನಲ್ಲಿ ದೌರ್ಜನ್ಯ

ಮಹಾರಾಷ್ಟ್ರದ ನಾಸಿಕ್‌ನ ಸ್ವಯಂಘೋಷಿತ ದೇವ ಮಾನವ ಅಶೋಕ್ ಕುಮಾರ್ ಖರಾತ್ ವಿರುದ್ಧ ಅತ್ಯಾಚಾರ, ಬಲವಂತದ ಗರ್ಭಪಾತ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಭೂಮಿಗಾಗಿ ಕೊಲೆ ಮಾಡಿದ ಗಂಭೀರ ಆರೋಪಗಳು ಕೇಳಿಬಂದಿವೆ. ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿಗಳು ಪ್ರಕರಣಕ್ಕೆ ಸಾಕ್ಷಿ ಒದಗಿಸಿದ್ದು, ಎಸ್ಐಟಿ ತನಿಖೆ ಮುಂದುವರಿದಿದೆ.

ಕೊಲ್ಹಾಪುರದ ದೇವಾಲಯದಲ್ಲಿ ದೇವಿಯ ಎದುರೇ ಪುರೋಹಿತರಿಂದ ಭಕ್ತರ ಮೇಲೆ ಹಲ್ಲೆ; ವಿಡಿಯೊ ವೈರಲ್‌

ದೇವಿಯ ಎದುರೇ ಭಕ್ತರ ಮೇಲೆ ಹಲ್ಲೆ ಮಾಡಿದ ಪುರೋಹಿತರು

ಮನಸ್ಸಿನ ಶಾಂತಿ ಕಂಡುಕೊಳ್ಳುವ ಸಲುವಾಗಿ ಜನರು ದೇವಾಲಯಕ್ಕೆ ಹೋಗುತ್ತಾರೆ. ಆದರೆ ಅಲ್ಲೇ ಅವರ ಮೇಲೆ ಹಲ್ಲೆ ನಡೆದರೆ ಅವರು ಇನ್ನೆಲ್ಲಿಗೆ ಹೋಗಬೇಕು? ಇಂತಹ ಒಂದು ಘಟನೆ ಮಹಾರಾಷ್ಟ್ರದ ಕೊಲ್ಹಾಪುರದದಲ್ಲಿ ನಡೆದಿದೆ. ಕೊಲ್ಹಾಪುರದ ಜ್ಯೋತಿಬಾ ದೇವಾಲಯದಲ್ಲಿ ಬೆಳಗ್ಗೆ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಮೇಲೆ ಪುರೋಹಿತರು ಹಲ್ಲೆ ನಡೆಸಿದ್ದಾರೆ.

Inspector Sandesh: ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ: ಸಚಿವ ಪರಮೇಶ್ವರ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ಸಿಐಡಿಗೆ: ಸಚಿವ ಪರಮೇಶ್ವರ್

'ಮೂಡುಬಿದಿರೆ ಘಟನೆಯ ಕುರಿತು ಇಂದು ಕೆಲವು ಸಂತ್ರಸ್ತೆಯರು ನನ್ನನ್ನು ಭೇಟಿ ಮಾಡಿದರು. ಅವರು ನೀಡಿದ ಮಾಹಿತಿ ಮತ್ತು ಘಟನೆಗಳ ಆಧಾರದ ಮೇಲೆ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ' ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವಾಯುಪಡೆಯ ಸಿಬ್ಬಂದಿ ಅರೆಸ್ಟ್‌

ಬೇಹುಗಾರಿಕೆ ನಡೆಸುತ್ತಿದ್ದ ವಾಯುಪಡೆಯ ಸಿಬ್ಬಂದಿ ಬಂಧನ

Air Force personnel arrested: ಪಾಕಿಸ್ತಾನ ಹ್ಯಾಂಡ್ಲರ್‌ಗಳಿಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾಯುಪಡೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ರಾಜಸ್ಥಾನ ಗುಪ್ತಚರ ಮತ್ತು ವಾಯುಪಡೆಯ ಗುಪ್ತಚರ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪ್ರಫುಲ್ ಕುಮಾರ್ ತಿಳಿಸಿದ್ದಾರೆ.

ಬಾಡಿಗೆದಾರನೊಂದಿಗೆ ಸೊಸೆಯ ಲವ್ವಿ-ಡವ್ವಿ; ಪ್ರೇಮಿಯೊಂದಿಗೆ ಸೇರಿ ಅತ್ತೆಯ ಭೀಕರ ಕೊಲೆ

ಅಕ್ರಮ ಸಂಬಂಧಕ್ಕೆ ಅಡ್ಡಿ: ಅತ್ತೆಯನ್ನ ಕೊಲೆಗೈದ ಸೊಸೆ

ಉತ್ತರ ಪ್ರದೇಶದ ಲಖನೌನಲ್ಲಿ ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅತ್ತೆಯನ್ನು ಸೊಸೆ ತನ್ನ ಪ್ರೇಮಿಯೊಂದಿಗೆ ಸೇರಿ ಸಂಚು ರೂಪಿಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ ಉಸಿರುಗಟ್ಟಿಸಿ ಹತ್ಯೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

Murder Case: ಹಾಡಹಗಲೇ ಮಹಿಳೆಯನ್ನು ಹೊಡೆದು ಕೊಂದು ತಿಪ್ಪೆಗೆಸೆದು ಹೋದ ಕಿರಾತಕರು!

ಹಾಡಹಗಲೇ ಮಹಿಳೆಯನ್ನು ಹೊಡೆದು ಕೊಂದು ತಿಪ್ಪೆಗೆಸೆದು ಹೋದ ಕಿರಾತಕರು!

ಕೆಂಗೇರಿಯ ಮುಖ್ಯ ರಸ್ತೆಯಲ್ಲಿರುವ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಮಹದೇಶ್ವರ ಬಡಾವಣೆಯ ನಿವಾಸಿಯಾದ ಕೆಂಪಮ್ಮ (45) ಎಂಬವರೇ ಕೊಲೆಯಾದ ದುರ್ದೈವಿ. ಹಂತಕರು ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದಿದ್ದಾರೆ.

Reels craze: ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಬಾಲಕಿಯನ್ನು ಕತ್ತು ಸೀಳಿ ಕೊಂದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

ಬಾಲಕಿಯನ್ನು ಹತ್ಯೆಗೈದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

Bengaluru Murder Case: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಶಬೀಲ್‌ನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಲಾಗಿದೆ. ಮದುವೆಯಾಗಬೇಕಿದ್ದ ಹುಡುಗಿಯನ್ನೇ ಕೊಲೆ ಮಾಡಿ ಈತ ಪರಾರಿಯಾಗಿದ್ದ. ಇದೀಗ ಆರೋಪಿಯ ಬಂಧನವಾಗಿದೆ.

Ranya Rao Case: ಚಿನ್ನ ಅಕ್ರಮ ಸಾಗಣೆ ಪ್ರಕರಣ; ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

102 ಕೋಟಿ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ವಿರುದ್ಧ ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಇದರಲ್ಲಿ ರನ್ಯಾ ರಾವ್‌ಗೆ ಉಗಾಂಡ ಏಜೆಂಟ್‌ನಿಂದ ಆಗಿದ್ದ ವಂಚನೆ ಬಗ್ಗೆ ಉಲ್ಲೇಖಿಸಲಾಗಿದೆ.

ಚುನಾವಣೆಗೆ ಮುನ್ನ ನಿಷೇಧಿತ ಉಲ್ಫಾ ಉಗ್ರರಿಂದ ದಾಳಿ: ಅಸ್ಸಾಂನಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ

ನಿಷೇಧಿತ ಉಲ್ಫಾ ಉಗ್ರರಿಂದ ದಾಳಿ ಶಂಕೆ; ಪೊಲೀಸರಿಗೆ ಗಾಯ

ULFA Militants Attack: ಏಪ್ರಿಲ್ 9ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ, ಶಂಕಿತ ಭಯೋತ್ಪಾದಕರು ತಿನ್ಸುಕಿಯಾ ಜಿಲ್ಲೆಯ ಪೊಲೀಸ್ ಕಮಾಂಡೋ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಟಿನ್ಸುಕಿಯಾ ಜಿಲ್ಲೆಯ ಜಗುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

Loading...