ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಗಂಡ ಮೃತಪಟ್ಟ ಒಂದೇ ವಾರಕ್ಕೆ ಪೊಲೀಸಪ್ಪನಿಂದ ಕಿರುಕುಳ; ಮನನೊಂದು ಮಹಿಳೆ ಆತ್ಮಹತ್ಯೆ

ಪೊಲೀಸ್‌ ಪೇದೆ ಕಿರುಕುಳ; ಗಂಡ ಮೃತಪಟ್ಟ ಒಂದೇ ವಾರಕ್ಕೆ ಪತ್ನಿಯೂ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಪತಿ ಫೆಬ್ರವರಿ 14ರಂದು ಜಗದೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಅವರು ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ.

ಮಟನ್ ಕರಿಯಲ್ಲಿ ಮಾತ್ರೆ ಬೆರೆಸಿ ಪತಿ ಹತ್ಯೆ ಯತ್ನ; ಸಾಧ್ಯವಾಗದ್ದಕ್ಕೆ ಕತ್ತು ಹಿಸುಕಿ ಪತಿಯನ್ನೇ ಕೊಂದ ಪಾಪಿ ಪತ್ನಿ!

ಅಕ್ರಮ ಸಂಬಂಧಕ್ಕಾಗಿ ಪತಿಯ ಕೊಲೆ..!

ತೆಲಂಗಾಣದ ಕರೀಂನಗರದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಪತ್ನಿಯೇ ಪತಿಯ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಾರು ಚಾಲಕರಾಗಿದ್ದ ಕಥಿ ಸುರೇಶ್ ಮದ್ಯ ವ್ಯಸನದಿಂದ ಕುಟುಂಬ ಜವಾಬ್ದಾರಿಗಳನ್ನು ನಿರ್ಲಕ್ಷಿಸುತ್ತಿದ್ದರೆಂದು ಹೇಳಲಾಗಿದೆ. ಈ ನಡುವೆ ಪತ್ನಿ ಮೌನಿಕಾ ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿ, ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿದೇಶಕ್ಕೆ ವಿಡಿಯೋ ಮಾರಾಟ; ಜೂನಿಯರ್ ಎಂಜಿನಿಯರ್, ಪತ್ನಿಗೆ ಮರಣದಂಡನೆ ಶಿಕ್ಷೆ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿದೇಶಕ್ಕೆ ವಿಡಿಯೋ ಮಾರಾಟ!

ನೀರಾವರಿ ಇಲಾಖೆಯಲ್ಲಿ ನೇಮಕಗೊಂಡಿದ್ದ ಜೂನಿಯರ್ ಎಂಜಿನಿಯರ್ ಒಬ್ಬ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಜಾಲದ ಕಿಂಗ್‌ಪಿನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ನೀರಾವರಿ ಇಲಾಖೆಯಲ್ಲಿ ಈತ ಕಾರ್ಯ ನಿರ್ವಹಿಸುತ್ತಿದ್ದ.

ನಾಪತ್ತೆ ಕೇಸ್‌ ಸುಖಾಂತ್ಯ; ಪ್ರಿಯಕರನನ್ನು ಬಿಟ್ಟು ಗಂಡನ ಮನೆಗೆ ಹೋಗಲು ಒಪ್ಪಿದ ಪ್ರಿಯಾಂಕ

ಪ್ರಿಯಕರನನ್ನು ಬಿಟ್ಟು ಗಂಡನ ಜತೆ ಹೋಗಲು ಒಪ್ಪಿದ ಪ್ರಿಯಾಂಕ

ನಾಪತ್ತೆ ನಾಟಕವಾಡಿ ಪ್ರಿಯಕರ ಡೇವಿಡ್‌ ಜತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಪ್ರಿಯಾಂಕ ಕೊನೆಗೂ ಗಂಡನ ಮನೆ ಸೇರಲು ಒಪ್ಪಿದ್ದಾಳೆ. ಹಾಸನದ ಸಾಂತ್ವನ ಕೇಂದ್ರದಿಂದ ತವರು ಮನೆಗೆ ಹೋಗಿ, ಅಲ್ಲಿಂದ ಗಂಡ ರುದ್ರೇಶ್‌ ಮನೆಗೆ ಹೋಗಲು ಒಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಬಿಟ್‌ ಕಾಯಿನ್ ಹಗರಣ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಪತಿ ರಾಜ್ ಕುಂದ್ರಾಗೆ ಬಿಗ್ ರಿಲೀಫ್

ಬಿಟ್ ಕಾಯಿನ್ ಹಗರಣ: ರಾಜ್ ಕುಂದ್ರಾಗೆ ಬಿಗ್ ರಿಲೀಫ್

ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. 150 ಕೋಟಿ ರೂಪಾಯಿಗಳ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜ್ ಕುಂದ್ರಾ ಅವರು ವಿದೇಶಕ್ಕೆ ಪ್ರಯಾಣಿಸುವ ಮೊದಲು 1 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಲು ಮತ್ತು ನ್ಯಾಯಾಲಯದ ಪೂರ್ವಾನುಮತಿ ಪಡೆಯಲು ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಮದುವೆ ಕಾರ್ಡ್‌ನಲ್ಲಿ ಹೆಸರು ಹಾಕದಿದ್ದಕ್ಕೆ ಬಿತ್ತು ಮೂವರ ಹೆಣ; ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ

ಮದುವೆ ಕಾರ್ಡ್‌ನಲ್ಲಿ ಹೆಸರು ಹಾಕದಿದ್ದಕ್ಕೆ ಬಿತ್ತು ಮೂವರ ಹೆಣ!

Crime News: ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ಮದುವೆ ಮನೆ ಸೂತಕದ ಮನೆಯಂತಾದ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ನಿಶ್ಚಿತಾರ್ಥ ಮತ್ತು ಹಳ್ದಿ ಆಚರಣೆಗಳ ಸಿದ್ಧತೆಗಳ ನಡುವೆ, ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.

ಮುಖ್ಯ ಕಾರ್ಯದರ್ಶಿ ವಿರುದ್ಧ ಭ್ರಷ್ಟಾಚಾರ ಆರೋಪ; ಮುಡಾ ಕೇಸ್‌ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್‌

ಮುಡಾ ಕೇಸ್‌ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್‌

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್‌ 1.6 ಕೋಟಿ ರೂ. ಹಣ ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಡಿ.ಬಿ. ನಟೇಶ್‌ ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಬಂಧನವಾಗಿದೆ.

Mysuru News: ಪ್ರವಾಸಕ್ಕೆ ಹೋಗಲು ಗಂಡ ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ

ಪ್ರವಾಸಕ್ಕೆ ಹೋಗಲು ಗಂಡ ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ

ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದೆ. ನೆನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬಾಗಲಕೋಟೆಯಲ್ಲಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ: ಸಿಎಂ

Stone Pelting in Bagalkot: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಘಟನೆಯಲ್ಲಿ ಎಸ್‌ಪಿ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ಸೇರಿ ಇಬ್ಬರಿಗೆ ಗಾಯಗಳಾಗಿತ್ತು. ಪ್ರಕರಣ ಸಂಬಂದ ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ.

ಖಾಸಗಿ ಆಸ್ಪತ್ರೆಯ ಎಡವಟ್ಟು; ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದು ದೃಷ್ಟಿ ಕಳೆದುಕೊಂಡ 9 ಮಂದಿ

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದು ದೃಷ್ಟಿ ಕಳೆದುಕೊಂಡ 9 ಮಂದಿ

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದ 9 ಮಂದಿ ದೃಷ್ಟಿ ಕಳೆದುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನ್ಯೂ ರಾಜೇಶ್ ಹೈಟೆಕ್ ಆಸ್ಪತ್ರೆಯಲ್ಲಿ ಫೆಬ್ರವರಿ 1ರಂದು ನೇತ್ರ ಚಿಕಿತ್ಸಾ ಶಿಬಿರ ನಡೆಸಲಾಗಿದ್ದು, ಇದರಲ್ಲಿ 30 ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಲ್ಲಿ 9 ಜನರು ದೃಷ್ಟಿ ಕಳೆದುಕೊಂಡಿದ್ದಾರೆ. ಬಳಿಕ ಆಸ್ಪತ್ರೆಯನ್ನು ಮುಚ್ಚಲಾಗಿದೆ.

Assault Case: ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ, ವಿಡಿಯೊ ಲಭ್ಯ

ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪ್ರಶ್ನಿಸಿ, ಉತ್ತರ ಪತ್ರಿಕೆಯನ್ನು ಪ್ರಾಧ್ಯಾಪಕ ವಶಪಡಿಸಿಕೊಂಡಿದ್ದಾರೆ. ಉತ್ತರ ಪತ್ರಿಕೆ ಪಡೆದು ತರಗತಿ ಕೊಠಡಿಯಿಂದ ಹೊರಗೆ ಹೋಗುವಂತೆ ಸೂಚಿಸಿದ್ದರಿಂದ ವಿದ್ಯಾರ್ಥಿ ಕೋಪಗೊಂಡು ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಪರೀಕ್ಷಾ ಹಾಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

mysterious death: ಕರ್ನಾಟಕದ ಇನ್ನೊಬ್ಬ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಸಾವು

ಕರ್ನಾಟಕದ ಇನ್ನೊಬ್ಬ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಸಾವು

ಕಡಬದ ಕುಟ್ರಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದಾಗ್ಯೂ ಈ ಸಾವಿನ ಹಿಂದಿನ ಕಾರಣಗಳ ಕುರಿತು ಐರಿಶ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೇವಲ 28 ದಿನಗಳ ಹಿಂದೆ ಸುನಿಲ್‌ ಐರ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಅಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅವರ ಪತ್ನಿ ಲಿಷ್ಮಾ ಅವರೊಂದಿಗೆ ವಾಸಿಸಲು ತೆರಳಿದ್ದರು.

Stone Pelting: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆಯ (bagalakote news) ಕಿಲ್ಲಾ ಓಣಿಯ ಮಸೀದಿ ಬಳಿ ​ಶಿವಾಜಿ ಜಯಂತಿ ಮೆರವಣಿಗೆ ಬಂದಾಗ ಕಲ್ಲು ಹಾಗೂ ಚಪ್ಪಲಿ ಬಂದು ಬಿದ್ದಿವೆ. ಒಂದಿಬ್ಬರಿಗೆ ಗಾಯಗಳಾಗಿವೆ. ಇದರಿಂದ ಮೆರವಣಿಗೆಯಲ್ಲಿದ್ದವರು ಉದ್ವಿಗ್ನರಾಗಿದ್ದಾರೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಭದ್ರತೆ ಬಿಗಿಗೊಳಿಸಿದ್ದು, ಸೆಕ್ಷನ್‌ 144 ಹಾಕಿದ್ದಾರೆ.

ದೇಶದ ಒಳ ನುಸುಳಲು ಭಯೋತ್ಪಾದಕರ ಯತ್ನ; ನೌಶೇರಾದಲ್ಲಿ ಉಗ್ರ ಘಟಕ ಪತ್ತೆ

ಒಳನುಸುಳಲು ಸಂಚು; ಭಯೋತ್ಪಾದಕರ ಪ್ರಯತ್ನ ವಿಫಲ

ದೇಶದ ಒಳನುಸುಳಲು ಭಯೋತ್ಪಾದಕರು ಸಂಚು ರೂಪಿಸಿದ್ದು, ಈ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಗುಪ್ತಚರ ಮಾಹಿತಿ ಆಧಾರದಲ್ಲಿ ಭಯೋತ್ಪಾದಕರ ಚಲನವಲನವನ್ನು ಪತ್ತೆಹಚ್ಚಿದೆ. ಸುಂದರ್‌ಬನಿಯಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಯೋತ್ಪಾದಕರು ಒಳನುಸುಳಲು ಪ್ರಯತ್ನ ನಡೆಸಿರುವುದು ಕಂಡು ಬಂದಿದೆ.

ಬಿರಿಯಾನಿ ಹೋಟೆಲ್‌ ಮೂಲಕ ಬರೋಬ್ಬರಿ 70,000 ಕೋಟಿ ರುಪಾಯಿ ಹಗರಣ; ಐಟಿ ದಾಳಿ ವೇಳೆ ಬಯಲಾಯ್ತು ಬೃಹತ್‌ ಜಾಲ

ಬಿರಿಯಾನಿ ಹೋಟೆಲ್‌ಗಳ ಮೇಲೆ ಐಟಿ ದಾಳಿ; 70,000 ಕೋಟಿ ರು. ಹಗರಣ ಪತ್ತೆ

ಬಿರಿಯಾನಿ ಹೋಟೆಲ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸುಮಾರು 70,000 ಕೋಟಿ ರುಪಾಯಿ ಬಿಲ್ಲಿಂಗ್ ಹಗರಣ ಬೆಳಕಿಗೆ ಬಂದಿದೆ. ನಕಲಿ ಬಿಲ್ಲಿಂಗ್, ತೆರಿಗೆ ತಪ್ಪಿಸುವಿಕೆ ಹಾಗೂ ಲೆಕ್ಕಪತ್ರಗಳಲ್ಲಿ ಅಕ್ರಮ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ದಾಖಲೆಗಳು, ಡಿಜಿಟಲ್ ಮಾಹಿತಿಗಳು ಮತ್ತು ಹಣಕಾಸು ವ್ಯವಹಾರಗಳ ಪರಿಶೀಲನೆ ಮುಂದುವರಿದಿದೆ.

ಅಪ್ರಾಪ್ತ ಬಾಲಕಿಗೆ 'ಫ್ಲೈಯಿಂಗ್ ಕಿಸ್' ನೀಡಿದ್ದ  ವ್ಯಕ್ತಿಗೆ 9 ವರ್ಷಗಳ ಬಳಿಕ ಜೈಲು ಶಿಕ್ಷೆ

ಮುಂಬೈನಲ್ಲಿ ಅಪ್ರಾಪ್ತೆಗೆ ಕಿರುಕುಳ: ಆರೋಪಿಗೆ 3 ವರ್ಷ ಜೈಲು

2017ರಲ್ಲಿ ಮುಂಬೈನಲ್ಲಿ 16 ವರ್ಷದ ಬಾಲಕಿಗೆ ಬೆನ್ನುಹತ್ತಿ ಕಿರುಕುಳ ನೀಡಿದ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹3,000 ದಂಡ ವಿಧಿಸಿದೆ. ‘ಫ್ಲೈಯಿಂಗ್ ಕಿಸ್’ ನೀಡಿದುದು ಲೈಂಗಿಕ ಸೂಚಕ ಕೃತ್ಯವಾಗಿದ್ದು, ಇದು ಬಾಲಕಿಯ ಘನತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನೆರೆಯವರ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಾಗಿದೆ ಎಂಬ ಆರೋಪಿಯ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.

ಪತ್ರಿಕೆಯ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು! ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿ ಹಲ್ಲೆ

firing in Manipur: ಮಣಿಪುರದ ಸ್ಥಳೀಯ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ನಹರೋಲ್ಗಿ ಥೌಡಾಂಗ್ ಎಂಬ ಸ್ಥಳೀಯ ದಿನಪತ್ರಿಕೆಯ ಪ್ರಧಾನ ಸಂಪಾದಕ ಖೋಯಿರೋಮ್ ಲೋಯಲಕ್ಪಾ ಅವರು ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ಶಸ್ತ್ರಸಜ್ಜಿತ ದಾಳಿಕೋರರು ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ.

14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲ್ವಿ; ಮಗುವಿಗೆ ಜನ್ಮಕೊಟ್ಟ ಅಪ್ರಾಪ್ತೆ!

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲಾನಾ

Crime News: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಮೌಲಾನನೊಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಾಲಕಿಗೆ ಹಠಾತ್ತನೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕವೇ ವಿಚಾರ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮಹಿಳೆಯನ್ನು ಮಂತ್ರವಾದಿ ಎಂದು ಆರೋಪಿಸಿ ಮಗು ಸಮೇತ ಸುಟ್ಟು ಹಾಕಿದ ಗ್ರಾಮಸ್ಥರು; ಕೂದಲೆಳೆ ಅಂತರದಲ್ಲಿ ಪತಿ ಪಾರು

ಮಹಿಳೆ, ಮಗುವನ್ನು ಸುಟ್ಟು ಕೊಂದ ದುಷ್ಕರ್ಮಿಗಳು

ಮಹಿಳೆಯನ್ನು ಮಂತ್ರವಾದಿ ಎಂದು ಹೇಳಿ ಮಗು ಸಮೇತ ಸೀಮೆಎಣ್ಣೆ ಹಾಕಿ ಸುಟ್ಟು ಕೊಂದು ಹಾಕಿದ ಘಟನೆ ಜಾರ್ಖಂಡ್‌ನಲ್ಲಿ ಮಂಗಳವಾರ ನಡೆದಿದೆ. ಆಕೆಯ ಪತಿಯನ್ನು ಕೂಡ ಗುಂಪು ಕೊಲ್ಲಲು ಪ್ರಯತ್ನಿಸಿದ್ದು, ಅದೃಷ್ಟವಶಾತ್ ಆತ ತಪ್ಪಿಸಿಕೊಂಡಿದ್ದಾನೆ. ಈ ಕುರಿತು ಕುಮಾರ್‌ಡುಂಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

Woman Murder: ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಕರಣ ದಾಖಲಿಸಿಕೊಂಡ ನೆಲಮಂಗಲ ಟೌನ್ ಪೊಲೀಸರು ಸಿಸಿಟಿವಿಯ ದೃಶ್ಯ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮೈತುಂಬ ಸಾಲವಿದ್ದು, ಸಾಲ ತೀರಿಸೋಕೆ ಚಿನ್ನಾಭರಣ ದೋಚುವ ಸ್ಕೆಚ್ ಹಾಕಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಆರು ಗಂಟೆಯಲ್ಲಿ ನೆಲಮಂಗಲ ಟೌನ್ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

Murder Case: ಪತ್ನಿಯನ್ನು ಕೊಂದು ಮನೆಯೊಳಗೇ ಹೂತುಹಾಕಿ ನಾಪತ್ತೆ ಕಥೆ ಕಟ್ಟಿದವನು ಅಂದರ್!

ಪತ್ನಿಯ ಕೊಂದು ಮನೆಯೊಳಗೇ ಹೂತುಹಾಕಿ ನಾಪತ್ತೆ ಕಥೆ ಕಟ್ಟಿದವ ಅಂದರ್!

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇವರಿಗೆ ಆಗಾಗ ಜಗಳವಾಗುತ್ತಿತ್ತು.

Road Accident: ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Honour Killing: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಕೊಪ್ಪಳ ತಾಲ್ಲೂಕಿನ ಹಂದ್ರಾಳದಲ್ಲಿ ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. 4 ತಿಂಗಳ ಗರ್ಭಿಣಿಯಾಗಿದ್ದ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ ಅಣ್ಣ ಮಂಜುನಾಥ್ ಯತ್ನಿಸಿದ್ದಾನೆ. ಮೀನಾಕ್ಷಿಯ ಪತಿ ಉದಯನ ಸಹೋದರನ ಮದುವೆಗೆ ದಂಪತಿ ಬಂದಾಗ ಈ ಕೃತ್ಯ ಎಸಗಲಾಗಿದೆ.

Kalaburagi news: ಘೋರ ದುರಂತ, ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛ ಮಾಡಲು ಇಳಿದ ಇಬ್ಬರು ಸಾವು

ಘೋರ ದುರಂತ, ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛ ಮಾಡಲು ಇಳಿದ ಇಬ್ಬರು ಸಾವು

ಶಿವಕುಮಾ‌ರ್ ಅವರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ರತನ್ ಎಂಬವರಿಗೆ ಹೇಳಿದ್ದು ಆತ ಟ್ಯಾಂಕ್ ಒಳಗಡೆ ಇಳಿದಿದ್ದರು. ರತನ್ ಒಳಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ರತನ್ ಮೇಲೆ ಬರದಿದ್ದಾಗ ಆತನ ರಕ್ಷಣೆಗೆ ತೆರಳಿದ ಮನೆಯ ಮಾಲೀಕ ಶಿವಕುಮಾರ್‌ ಅವರೂ ಉಸಿರುಗಟ್ಟಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.

Loading...