ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

“ನೀವು ಎಲ್ಲವನ್ನೂ ತ್ಯಾಗ ಮಾಡಿದರೂ ನಾನು ವಿಫಲಳಾದೆ”: ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನೀಟ್ ಅಭ್ಯರ್ಥಿ

ಆತ್ಮಹತ್ಯೆಗೆ ಶರಣಾದ ನೀಟ್ ಅಭ್ಯರ್ಥಿ

NEET aspirant dies by self-harming: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಬೇಸತ್ತ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ನಡೆದಿದೆ. ಮರಾಠಿ ಭಾಷೆಯಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ.

ಬ್ಯಾಂಕ್ ಆಫ್ ಬರೋಡಾದ 1TB ಡೇಟಾ ಸೋರಿಕೆ; ಖಾತೆ ವಿವರ, ಹೆಸರು, ಆಧಾರ್‌ ಸಂಖ್ಯೆ ಆನ್‌ಲೈನ್‌ನಲ್ಲಿ ಹಂಚಿಕೆ

ಬ್ಯಾಂಕ್ ಆಫ್ ಬರೋಡಾದ 1TB ಡೇಟಾ ಸೋರಿಕೆ

ಬ್ಯಾಂಕ್ ಆಫ್ ಬರೋಡಾವನ್ನು ಹ್ಯಾಕ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ವ್ಯಕ್ತಿಯೊಬ್ಬ 1TB ಸೂಕ್ಷ್ಮ ಡೇಟಾವನ್ನು ಡಾರ್ಕ್ ವೆಬ್‌ನಲ್ಲಿ ಉಚಿತವಾಗಿ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಡೇಟಾವು ವೈಯಕ್ತಿಕ ಮತ್ತು ಕಾರ್ಪೊರೇಟ್ ಬ್ಯಾಂಕಿಂಗ್ ವಿವರಗಳನ್ನು ಒಳಗೊಂಡಿದೆ.

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!

ಆನೇಕಲ್‌ನಲ್ಲಿ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ

ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ಭಾನುವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪ ಬ್ಲೂ ಬಡ್ ಲಾಜಿಸ್ಟಿಕ್ ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Bagalkot Car Blast: ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ, ಛಿದ್ರಛಿದ್ರಗೊಂಡ ವಾಹನ!

ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಾರು ಸ್ಫೋಟಗೊಂಡಿದೆ. ಘಟನೆಯ ವೇಳೆ ವೈನ್ ಶಾಪ್ ಮಾಲೀಕ ಅಂಗಡಿ ಮುಚ್ಚುತ್ತಿದ್ದರು. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ರಭಸಕ್ಕೆ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕಾರು ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿಯಲ್ಲಿ ಸೆರೆಯಾಗಿದೆ.

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಪೆನ್‌ಡ್ರೈವ್‌ ಹಂಚಿದವರಿಗೆ ಸಂಕಷ್ಟ;  8 ಆರೋಪಿಗಳಿಗೆ ಕೋರ್ಟ್ ಸಮನ್ಸ್

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಪೆನ್‌ಡ್ರೈವ್‌ ಹಂಚಿದವರಿಗೆ ಸಂಕಷ್ಟ

Prajwal Revanna case: 2024ರ ಚುನಾವಣೆ ಸಂದರ್ಭದ ವೇಳೆ ಹಾಸನದಲ್ಲಿ ಅಶ್ಲೀಲ ಪೆನ್​​ಡ್ರೈವ್​ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಎಸ್‌ಐಟಿ ಕಳೆದ ಮಾರ್ಚ್​ನಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಬರೋಬ್ಬರಿ 13,712 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿತ್ತು. ಇದೀಗ ಪೆನ್​ ಡ್ರೈವ್ ಹಂಚಿದವರಿಗೆ​ ಸಂಕಷ್ಟ ಎದುರಾಗಿದೆ.

ಉಚಿತ ಟ್ಯೂಷನ್ ನೀಡುವುದಾಗಿ ಹೇಳಿ ಲೈಂಗಿಕ ಕಿರುಕುಳ: ಉಪನ್ಯಾಸಕನನ್ನು ಥಳಿಸಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು

ಮೊಟ್ಟೆಯಿಂದ ಹೊಡೆದು ಶೂ ಹಾರ ಹಾಕಿ ಉಪನ್ಯಾಸಕನ ಮೆರವಣಿಗೆ

ವಿದ್ಯಾರ್ಥಿನಿಯೊಬ್ಬಳಿಗೆ ಉಚಿತ ಟ್ಯೂಷನ್ ಕೊಡಿಸುವುದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನನ್ನು ಥಳಿಸಿ ಮೆರವಣಿಗೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಗೋಬರ್ದಂಗ ಹಿಂದೂ ಕಾಲೇಜಿನ ಅತಿಥಿ ಉಪನ್ಯಾಸಕನ ವಿರುದ್ಧ ಗೋಬರ್ದಂಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಬಂಧಿಸಲಾಗಿದೆ.

Nelamangala News: ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ಕ್ಯಾಮೆರಾ ನೋಡ್ತಿದ್ದಂಗೆ ಕಾಲ್ಕಿತ್ತ ಅಧಿಕಾರಿಗಳು! Watch Video

ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ವಿಡಿಯೊ ವೈರಲ್!

ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಸಿದ್ದರಬೆಟ್ಟದಲ್ಲಿ ಅಧಿಕಾರಿಗಳು ಮೋಜು ಮಸ್ತಿಯಲ್ಲಿ ತೋಡಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸ್ಥಳೀಯರು ವಿಡಿಯೊ ಮಾಡುತ್ತಿದ್ದಂತೆ ಸ್ಥಳದಿಂದ ಅಧಿಕಾರಿಗಳು ಪರಾರಿಯಾಗಿದ್ದಾರೆ. ಧಾರ್ಮಿಕ ಸ್ಥಳದಲ್ಲಿ ಅಧಿಕಾರಿಗಳು ಈ ರೀತಿಯ ವರ್ತನೆ ತೋರಿರುವುದು ಸಾರ್ವಜನಿಕರ ಆಕ್ರೋಶಕ್ಕ ಕಾರಣವಾಗಿದೆ.

ಮನೆ ಕಟ್ಟಲು 15 ಲಕ್ಷ ಸಾಲ; ಫೈನಾನ್ಸ್‌ನವರ ಕಾಟಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕೋಲಾರ ತಾಲೂಕು ಛತ್ರಕೋಡಿಹಳ್ಳಿಯಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ 15 ಲಕ್ಷ ಸಾಲ ಮಾಡಿದ ಹಿನ್ನೆಲೆಯಲ್ಲಿ ಸಾಲಗಾರರ ಕಾಟಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಮಾಸ್ಟರ್ ಮೈಂಡ್ ಬಿಹಾರದಲ್ಲಿ ಬಂಧನ

ಟಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಾಸ್ಟರ್ ಮೈಂಡ್ ಬಂಧನ

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್ ಮೈಂಡ್ ಬಿಜೇಂದ್ರ ಗುಪ್ತಾನನ್ನು ಬಿಹಾರದಲ್ಲಿ ಬಂಧಿಸಲಾಗಿದೆ. ಬಿಜೇಂದ್ರ ಗುಪ್ತಾ ದೇಶಾದ್ಯಂತ ನಡೆಯುವ ಹಲವಾರು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆತನ ಪತ್ತೆಗಾಗಿ ಬಿಹಾರದ ಹಲವಾರು ಕಡೆ ಮಹಾರಾಷ್ಟ್ರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿದ್ದರು.

ಜಂತರ್ ಮಂತರ್ ಪ್ರತಿಭಟನೆ: ಭದ್ರತಾ ಸಿಬ್ಬಂದಿ ಮೇಲೆ ಹರಿತವಾದ ಆಯುಧಗಳಿಂದ ದಾಳಿ;  2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ಜಂತರ್ ಮಂತರ್ ಪ್ರತಿಭಟನೆ: 2,500 ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದೆ. ಈವರೆಗೆ 15 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Horrific accident on NH 44: ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭೀಕರ ಅಪಘಾತ: ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಮುನಿರಾಜು ಅವರು ತಮ್ಮ ಗ್ರಾಮದಿಂದ ಬೈಕ್‌ನಲ್ಲಿ ಚಿಕ್ಕಬಳ್ಳಾಪುರ ಹೂ ಮಾರುಕಟ್ಟೆಗೆ ಬಂದು ಹೂ ಮಾರಾಟ ಮಾಡಿದ್ದರು. ಬಳಿಕ ನೆರೆಯ ಗುವ್ವಲಕಾನಹಳ್ಳಿಗೆ ಹಸು ಖರೀದಿಸುವ ಸಲುವಾಗಿ ತೆರಳಿ, ವಾಪಸ್ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ–44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ರಸ್ತೆ ದಾಟಲು ಮುಂದಾಗಿದ್ದರು.

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಬಸ್‌ಗಳಲ್ಲಿ ಪ್ರಯಾಣಿಕರನ್ನು ಯಾಮಾರಿಸಿ ಪಿಕ್‌ಪಾಕೆಟ್‌ ಮಾಡುತ್ತಿದ್ದ ಇಬ್ಬರು ಅರೆಸ್ಟ್‌

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಇಬ್ಬರು ಅರೆಸ್ಟ್‌

ಬಸ್‌ಗಳಲ್ಲಿ ಕಿಟಕಿ ಪಕ್ಕ ಕೂರುವ ಪ್ರಯಾಣಿಕರನ್ನು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮೊದಲು ಪ್ರಯಾಣಿಕರ ಬಳಿ ತೆರಳಿ, ವಾಂತಿ ಬರುತ್ತಿದೆ, ಸೀಟ್ ಬಿಟ್ಟು ಕೊಡಿ ಎಂದು ನಂಬಿಸುತ್ತಿದ್ದರು. ಆಗ ಪ್ರಯಾಣಿಕರು ಸೀಟ್‌ನಿಂದ ಎದ್ದು ಹೋಗುವಾಗ ಕೈಚಳಕ ತೋರಿ, ಹಣ, ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದರು. ಇದಕ್ಕೆ ಸಂಬಂಧಿಸಿ ಸದ್ಯ ಇಬ್ಬರ ಬಂಧನವಾಗಿದೆ.

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೆಜಿಗೂ ಹೆಚ್ಚು ಗಾಂಜಾ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

ಎನ್‌ಎನ್‌ಟಿ ವೃತ್ತದ ಬಳಿ ಗಾಂಜಾ ಮಾರಾಟ ಯತ್ನ

ಬಂಧಿತ ಆರೋಪಿಗಳನ್ನು ಶ್ರೀನಿವಾಸ್ (19 ವರ್ಷ)ಮೂಲತಃ ಬೆಂಗಳೂರು ರೋಜಾ(40 ವರ್ಷ) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಗಳ ತಡೆಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಬೆಳಿಗ್ಗೆ ಸುಮಾರು 11:30 ರ ವೇಳೆಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತಿತ್ತು.

Chikkaballapur News: ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ದಾಳಿ; 200 ಲೀಟರ್‌ಗೂ ಅಧಿಕ ರಾಸಾಯನಿಕ, ನಕಲಿ ಲೇಬಲ್‌ಗಳು ವಶ

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ಜಾಲ ಭೇದ

ಅಧಿಕಾರಿಗಳ ಮಾಹಿತಿ ಪ್ರಕಾರ, ತಾನೇ ವಿವಿಧ ಕಂಪನಿಗಳ ಲೇಬಲ್‌ಗಳನ್ನು ಮುದ್ರಿಸಿ ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ನಡೆಸುತ್ತಿದ್ದ. ದಾಳಿ ವೇಳೆ ವಶಪಡಿಸಿಕೊಂಡ ಲೇಬಲ್‌ಗಳಲ್ಲಿ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ

ಗದಗದ ಗ್ರಾಮೀಣಾಭಿವೃದ್ಧಿ ವಿವಿ ಹಾಸ್ಟೆಲ್‌ನಲ್ಲಿ MPH ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ MPH ವಿದ್ಯಾರ್ಥಿನಿ ಶವ ಪತ್ತೆ!

Gadag Student death: ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವಿದ್ಯಾರ್ಥಿನಿ, ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Fake PhD certificates: ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ; ಕೇಸ್‌ ದಾಖಲಿಸಲು ಸೂಚನೆ

ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ 249 ಅತಿಥಿ ಉಪನ್ಯಾಸಕರು!

Guest lecturer recruitment: ಒಟ್ಟು 249 ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಪೈಕಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಪತ್ತೆಯಾಗಿವೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ 33 ಪ್ರಕರಣಗಳು ವರದಿಯಾಗಿವೆ. ನಕಲಿ ಪ್ರಮಾಣಪತ್ರ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

Chikkaballapur News: ಹೆಣ್ಣು ಮಗು ಎಂಬ ಕಾರಣಕ್ಕೆ 13 ದಿನಗಳ ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

13 ದಿನಗಳ ಹೆಣ್ಣು ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

Child murder: ಚಿಕ್ಕಬಳ್ಳಾಪುರ ನಗರದ ಶಾಂತಿನಗರ (ನಕ್ಕಲಕುಂಟೆ) ಪ್ರದೇಶದಲ್ಲಿ ಘಟನೆ ನಡೆದಿದೆ. ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮತ್ತೊಮ್ಮೆ ಹೆಣ್ಣು ಮಗು ಜನಿಸಿದ್ದೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ; ಮಕ್ಕಳಿಗೆ ಭಾರವಾಗಬಾರದೆಂದು ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಇಬ್ಬರು ಹೆಣ್ಣು ಮಕ್ಕಳಿಗೆ ಭಾರವಾಗಬಾರದೆಂದು ವೃದ್ಧ ದಂಪತಿ ಆತ್ಮಹತ್ಯೆ!

Bengaluru News: ಬೆಂಗಳೂರಿನ ಬಸವೇಶ್ವರ ನಗರ ವ್ಯಾಪ್ತಿಯ ಮಂಜುನಾಥನಗರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹೊಂದಿದ್ದ ವೃದ್ಧ ದಂಪತಿ, ಇಳಿವಯಸ್ಸಿನಲ್ಲಿ ಯಾರಿಗೂ ಹೊರೆಯಾಗಬಾರದು ಎನ್ನುವ ಒಂದೇ ಕಾರಣಕ್ಕೆ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ: ಟಂ-ಟಂ ಚಾಲಕನಿಗೆ ಮಾರಣಾಂತಿಕ ಹಲ್ಲೆ

ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ತಂದೆ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಸ್ಟಡಿಯಲ್ಲಿದ್ದ ಸಹೋದ್ಯೋಗಿ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಪಶ್ಚಿಮ ಬಂಗಾಳದಲ್ಲಿ ಕಸ್ಟಡಿಯಲ್ಲಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬ ರೈಫಲ್ ನಿಂದ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವನ್ನಪ್ಪಿದ್ದಾರೆ. ಈ ಘಟನೆ ಮಾಲ್ಡಾದ ಶಿಬಿರದಲ್ಲಿ ನಡೆಸಿದೆ. ಬಂಧಿತ ಬಿಎಸ್‌ಎಫ್ ಕಾನ್‌ಸ್ಟೆಬಲ್ ಮಾನಸಿಕ ಒತ್ತಡದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ: ವೈದ್ಯರಿಂದ 2 ಕೋಟಿ ರುಪಾಯಿ ಸುಲಿಗೆ ಮಾಡಿದ ನರ್ಸ್; ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ವೈದ್ಯರಿಂದ 2 ಕೋಟಿ ರೂ. ಸುಲಿಗೆ ಮಾಡಿದ ನರ್ಸ್

ಖಾಸಗಿ ಚಿತ್ರಗಳ ಲೀಕ್, ಕೊಲೆ, ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಖಾಸಗಿ ಆಸ್ಪತ್ರೆ ವೈದ್ಯರೊಬ್ಬರಿಂದ ನರ್ಸ್ ವೊಬ್ಬ 2 ಕೋಟಿ ರೂ. ಸುಲಿಗೆ ಮಾಡುವುದಾಗಿ ಬೆದರಿಕೆ ಒಡ್ಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನರ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲಿ ಹಿಂಸಾಚಾರ: ಇಬ್ಬರು ಎಸಿಪಿಗಳ ಮೇಲೆ ಪ್ರತಿಭಟನಾಕಾರರಿಂದ ದಾಳಿ

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ

ಕಾಕ್ರೋಚ್ ಜನತಾ ಪಕ್ಷದಿಂದ ನಡೆಯುತ್ತಿರುವ ಪ್ರತಿಭಟನೆ ಬುಧವಾರ ರಾತ್ರಿ ಹಿಂಸಾತ್ಮಕ ರೂಪ ತಾಳಿದೆ. ಈ ಸಂದರ್ಭದಲ್ಲಿ ದೆಹಲಿ ಪೊಲೀಸ್ ಸಹಾಯಕ ಪೊಲೀಸ್ ಆಯುಕ್ತರಿಬ್ಬರ ಮೇಲೆ ಕಲ್ಲು, ಬಾಟಲ್ ನಿಂದ ದಾಳಿ ನಡೆಸಲಾಗಿದೆ. ದಿನವಿಡೀ ನಡೆದ ಘರ್ಷಣೆಯಲ್ಲಿ ಐದು ಮಂದಿ ಪ್ರತಿಭಟನಾಕಾರರು ಕೂಡ ಗಾಯಗೊಂಡಿದ್ದಾರೆ.

Bantwal News: ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು, ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್‌ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಹೀನ ಕೃತ್ಯ; ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

Loading...