ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಜಬಲ್ಪುರ ದೋಣಿ ದುರಂತ ನಡೆದು ಎರಡು ದಿನಗಳಾದರೂ ಪತ್ತೆಯಾಗಿಲ್ಲ 6 ಮಂದಿ

ಜಬಲ್ಪುರ ದೋಣಿ ದುರಂತ: 28 ಮಂದಿ ರಕ್ಷಣೆ 6 ಮಂದಿ ನಾಪತ್ತೆ

ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಯ ಬಾರ್ಗಿ ಅಣೆಕಟ್ಟಿನ ಜಲಾಶಯದಲ್ಲಿ ಗುರುವಾರ ಸಂಜೆ ನಡೆದ ದೋಣಿ ದುರಂತದಲ್ಲಿ 28 ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 6 ಮಂದಿ ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನಗಳಿಂದ ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ನಿರಂತರ ಕಾರ್ಯಾಚರಣೆ ನಡೆಸಿ ನಾಪತ್ತೆಯಾದವರಿಗಾಗಿ ಹುಡುಕಾಡುತ್ತಿವೆ.

ಕೊಲೆ ಪ್ರಕರಣಕ್ಕೆ ಸಾಕ್ಷಿ ನೀಡಿದ ಸಾಕು ಗಿಳಿ: ಪತಿಯನ್ನು ಕೊಂದ ಪತ್ನಿಯ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ನೆರವಾದ ಸಾಕು ಗಿಣಿ!

Viral News: ಅಮೆರಿಕದ ಮಿಚಿಗನ್ ನಲ್ಲಿ ಸಾಕು ಗಿಣಿಯೊಂದು ಅಪರಾಧಿಯನ್ನು ಪತ್ತೆ ಹಚ್ಚಿದ ಘಟನೆಯೊಂದು ನಡೆದಿದೆ. ಮನೆಯ ಯಜಮಾನನ ಕೊಲೆಯನ್ನು ಕಣ್ಣಾರೆ ಕಂಡ ಗಿಳಿಯೂ ಮಾಲೀಕರ ಸಾವಿಗೆ ಸಂಬಂಧಿಸಿದ ವಾಕ್ಯವನ್ನು ಪದೇ ಪದೇ ಹೇಳುವ ಮೂಲಕ ಕೊಲೆಗೆ ಸಾಕ್ಷಿ ನೀಡಿದೆ. ಸದ್ಯ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ; ಕುಟುಂಬಸ್ಥರ ವಿರುದ್ಧ ದೂರು ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು.

Fact check: ಜಬಲ್ಪುರ ದೋಣಿ ದುರಂತ: ವೈರಲ್ ಆಗಿರುವ ತಾಯಿ, ಮಗುವಿನ ಚಿತ್ರ ನಕಲಿ

ಜಬಲ್ಪುರ ದೋಣಿ ದುರಂತ: ವೈರಲ್ ಚಿತ್ರ ನಿಜವಲ್ಲ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಗುರುವಾರ ಸಂಜೆ ನಡೆದಿರುವ ದೋಣಿ ದುರಂತಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿ, ಮಗುವಿನ ಚಿತ್ರವೊಂದು ಹರಿದಾಡುತ್ತಿದ್ದು, ಇದು ನಕಲಿ ಚಿತ್ರವಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಕ್ಷಣಾ ತಂಡವು ಶುಕ್ರವಾರ ನಡೆಸಿದ ಕಾರ್ಯಾಚರಣೆ ವೇಳೆ ತಾಯಿಯೊಬ್ಬಳು ತನ್ನ ನಾಲ್ಕು ವರ್ಷದ ಮಗುವನ್ನು ಬಿಗಿಯಾಗಿ ತಬ್ಬಿ ಹಿಡಿದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಇದಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಕೃತಕ ಬುದ್ದಿ ಮತ್ತೆ ಬಳಸಿ ಚಿತ್ರವನ್ನು ಹರಿಯಬಿಡಲಾಗಿತ್ತು.

ಮುಂಬೈ ಕುಟುಂಬದ ಸಾವಿಗೆ  ಕಲ್ಲಂಗಡಿ ಕಾರಣ ಅಲ್ಲ.. ವೈದ್ಯಕೀಯ ವರದಿ ಬಿಚ್ಚಿಟ್ಟ ರಹಸ್ಯವೇನು?

ಕಲ್ಲಂಗಡಿಯಿಂದ ಸಾವು ಸಂಭವಿಸಿಲ್ಲ

ಇತ್ತೀಚೆಗೆ ಮುಂಬೈನ ಕುಟುಂಬವೊಂದು ಕಲ್ಲಂಗಡಿ ಹಣ್ಣು ಸೇವಿಸಿ ಸಾವನ್ನಪ್ಪಿತ್ತು ಎನ್ನುವ ಸುದ್ದಿ ದೇಶಾದ್ಯಂತ ಆತಂಕವನ್ನು ಉಂಟು ಮಾಡಿತ್ತು. ಆದರೆ ಇದೀಗ ಬಂದಿರುವ ವೈದ್ಯಕೀಯ ವರದಿಯ ಪ್ರಕಾರ ಅವರ ಸಾವು ಕಲ್ಲಂಗಡಿ ಹಣ್ಣಿನಿಂದ ಉಂಟಾಗಿಲ್ಲ ಎನ್ನಲಾಗಿದೆ. ಹಾಗಾದರೆ ವೈದ್ಯಕೀಯ ವರದಿ ಹೇಳಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ...

ಆಲೂಗಡ್ಡೆ ರಾಶಿ ಉಳಿಸಲು ಹೋದ ರೈತ ಸಿಡಿಲಿಗೆ ಬಲಿ

ಗುಡುಗು-ಮಿಂಚು ಮಳೆ ನಡುವೆ ಕುಂಬಾರಹಳ್ಳಿಯಲ್ಲಿ ದುರಂತ

ಗುರುವಾರ ಸಂಜೆ ವೇಳೆಗೆ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣ ವಾಗಿತ್ತು. ಸುಮಾರು 7 ಗಂಟೆ ಸುಮಾರಿಗೆ ಬಿರುಗಾಳಿ, ಗುಡುಗು ಹಾಗೂ ಮಿಂಚು ತೀವ್ರ ಗೊಂಡಿತ್ತು. ಇದೇ ಸಂದರ್ಭದಲ್ಲಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾರಾಯಣ ಸ್ವಾಮಿ ಅವರ ಮೇಲೆ ಏಕಾಏಕಿ ಸಿಡಿಲು ಬಡಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಬಳಿಕ ಮೃತಪಟ್ಟಿದ್ದಾರೆ

Bengaluru Central Jail: ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಪತ್ನಿಗೆ ವಿಡಿಯೊ ಕಾಲ್‌ ಮಾಡಿದ ಕೈದಿ!; Video ವೈರಲ್‌

ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಪತ್ನಿಗೆ ವಿಡಿಯೊ ಕಾಲ್‌ ಮಾಡಿದ ಕೈದಿ!

ವಿಚಾರಣಾಧೀನ ಕೈದಿಯಾಗಿದ್ದ ಅಕ್ಬರ್ ಎಂಬಾತ ಬೆಂಗಳೂರಿನ ಸೆಂಟ್ರಲ್‌ ಜೈಲಿನಲ್ಲೇ ಕುಳಿತುಕೊಂಡೇ ಪತ್ನಿಗೆ ವಿಡಿಯೊ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಸದ್ಯ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆದರೆ ಈಗ ಈತನ ವಿಡಿಯೊ ವೈರಲ್ ಆಗುತ್ತಿದೆ. ಹೀಗಾಗಿ ಜೈಲಿನ ಭದ್ರತಾ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗಿವೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ; 30 ಪ್ರಯಾಣಿಕರಿಗೆ ಗಾಯ

Male mahadeshwara Hill Bus accident: ಮಲೆ ಮಹದೇಶ್ವರ ಬೆಟ್ಟದಿಂದ ಸಾರಿಗೆ ಬಸ್ ಕೊಳ್ಳೇಗಾಲಕ್ಕೆ ಬರುತ್ತಿತ್ತು. ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್‌; 20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ಫೋಟೊ, ವಿಡಿಯೊ ಇಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರೆಸ್ಟ್‌!

ಲೈಂಗಿಕ ದೌರ್ಜನ್ಯ; ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರೆಸ್ಟ್‌

Physical Abuse Case: ತಾನು ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಹೇಳಿಕೊಂಡು, ನಕಲಿ ಐಡಿ ಕಾರ್ಡ್‌ ಬಳಸಿಕೊಂಡು ಆರೋಪಿಯು, ಹಲವರಿಗೆ ಬೆದರಿಕೆ ಹಾಕುತ್ತಿದ್ದ. ಇನ್ನು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬ್ಲ್ಯಾಕ್‌ ಮಾಡುತಿದ್ದ ಆರೋಪ ಕೇಳಿಬಂದಿದ್ದರಿಂದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಜಬಲ್ಪುರ ದೋಣಿ ದುರಂತ: ಒಂಬತ್ತು ಮಂದಿ ನೀರುಪಾಲು, ಎಲ್ಲರ ಕಣ್ಣಾಲಿಗಳು ತುಂಬುವಂತೆ ಮಾಡಿತು ತಾಯಿ, ಮಗುವಿನ ಮೃತದೇಹ

ಜಬಲ್ಪುರ ದೋಣಿ ದುರಂತ: ಒಂಬತ್ತು ಮಂದಿ ನೀರುಪಾಲು

ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ದೋಣಿ ದುರಂತದಲ್ಲಿ ಗುರುವಾರ ಒಂಬತ್ತು ಮಂದಿ ನೀರು ಪಾಲಾಗಿದ್ದಾರೆ. ತಾಯಿ, ಮಗುವಿನ ಶವ ಪತ್ತೆಯಾಗಿದ್ದು, ರಕ್ಷಣಾ ತಂಡವು ಅವರನ್ನು ನೀರಿನಿಂದ ಹೊರ ತೆಗೆಯುವ ವೇಳೆ ತಾಯಿ, ಮಗುವನ್ನು ಬಿಗಿಯಾಗಿ ಅಪ್ಪಿರುವ ದೃಶ್ಯ ಅಲ್ಲಿದ್ದವರ ಕಣ್ಣಾಲಿಗಳು ತುಂಬುವಂತೆ ಮಾಡಿತ್ತು.

ಮೃತ ತಂದೆಯ 45 ಲಕ್ಷ ರುಪಾಯಿ, ಅನುಕಂಪದ ಉದ್ಯೋಗ, ಐಷಾರಾಮಿ ಜೀವನದ ಕನಸು; ಪ್ರೇಮಿಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಹದಿಹರೆಯದ ಬಾಲಕಿ

ಪ್ರೇಮಿಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಹದಿಹರೆಯದ ಬಾಲಕಿ

Crime News: ಪ್ರೇಮಿ ಜತೆ ಸೇರಿ ಹದಿಹರೆಯದ ಬಾಲಕಿಯೊಬ್ಬಳು ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದಿದೆ. ಆಕೆಯ ಮೃತ ತಂದೆಯ 45 ಲಕ್ಷ ರುಪಾಯಿ ಹಾಗೂ ಅನುಕಂಪದ ಉದ್ಯೋಗಕ್ಕಾಗಿ ಈ ಕೃತ್ಯ ಎಸಗಿದ್ದಾಳೆ. ನಂತರ ಕಾಲು ಜಾರಿ ಮೃತಪಟ್ಟಿದ್ದಾಗಿ ಸುಳ್ಳು ಕಥೆ ಹೆಣೆದಿದ್ದಾಳೆ.

ಪಂಜಾಬ್ ಪೊಲೀಸರಿಂದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಜಾಲ ಪತ್ತೆ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

ಪಂಜಾಬ್‌ನಲ್ಲಿ ಉಗ್ರ ಸಂಚು ವಿಫಲ: ಆರ್‌ಪಿಜಿ ಸೇರಿ ಭಾರೀ ಮಾರಕಾಸ್ತ್ರ ವಶ

ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಪೊಲೀಸರು ಭಾರೀ ಪ್ರಮಾಣದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ದೊಡ್ಡ ಮಟ್ಟದ ಉಗ್ರ ಸಂಚನ್ನು ಹತ್ತಿಕ್ಕಿದ್ದಾರೆ. ಈ ಪ್ರಕರಣದಲ್ಲಿ ಐಎಸ್‌ಐ ಮತ್ತು ಖಲಿಸ್ತಾನ್ ಪರ ಸಂಘಟನೆಗಳ ನಂಟು ಬೆಳಕಿಗೆ ಬಂದಿದ್ದು, ನಾಲ್ವರನ್ನು ಬಂಧಿಸಲಾಗಿದೆ.

Koppal News: ಗಂಗಾವತಿ ಬಿಜೆಪಿ ಮುಖಂಡ  ವೆಂಕಟೇಶ ಹತ್ಯೆ ಪ್ರಕರಣ; 6 ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ; ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಕ್ರೈಸ್ತ ಧರ್ಮ ಪ್ರಚಾರದ ಆರೋಪ; ಮೂವರು ಅಮೆರಿಕ ಪ್ರಜೆಗಳಿಗೆ 'ಭಾರತ ಬಿಟ್ಟು ತೊಲಗಿ' ನೋಟಿಸ್ ಜಾರಿ

ಧರ್ಮ ಪ್ರಚಾರ ಆರೋಪ: 3 ಅಮೆರಿಕನ್ನರಿಗೆ ಭಾರತ ಬಿಟ್ಟು ತೊಲಗಿ ನೋಟಿಸ್

ಪುಣೆಯಲ್ಲಿ ಪ್ರವಾಸಿ ವೀಸಾದಲ್ಲಿ ಬಂದಿದ್ದ ಮೂವರು ಅಮೆರಿಕ ಪ್ರಜೆಗಳು ಕ್ರೈಸ್ತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡ ಆರೋಪದ ಮೇಲೆ ಪೊಲೀಸರಿಂದ ‘ಭಾರತ ಬಿಟ್ಟು ತೊಲಗಿ’ ನೋಟಿಸ್ ಪಡೆದಿದ್ದಾರೆ. ಮೇ 10ರೊಳಗೆ ದೇಶ ತೊರೆಯುವಂತೆ ಸೂಚಿಸಲಾಗಿದೆ l

ಹೈಕೋರ್ಟ್ ವಿಚಾರಣೆಯ ವೇಳೆಯಲ್ಲೇ ಅಶ್ಲೀಲ ವಿಡಿಯೋ ಪ್ರದರ್ಶನ: ಭದ್ರತಾ ಲೋಪದ ಬೆನ್ನಲ್ಲೇ ಹ್ಯಾಕಿಂಗ್?

ಹೈಕೋರ್ಟ್ ವಿಚಾರಣೆಯಲ್ಲಿ ಅಶ್ಲೀಲ ವಿಡಿಯೋ, ಭದ್ರತಾ ಲೋಪ

ದೆಹಲಿ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಯ ವೇಳೆ ಅಶ್ಲೀಲ ವಿಡಿಯೋ ಪ್ರಸಾರವಾಗಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಅರ್ಜಿದಾರರ ಖಾತೆ ಹ್ಯಾಕ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಸೈಬರ್ ಕ್ರೈಂ ವಿಭಾಗ ತನಿಖೆ ಆರಂಭಿಸಿದೆ. ನ್ಯಾಯಾಲಯದ ಮೂಲಗಳ ಪ್ರಕಾರ, ಅಪರಿಚಿತ ಬಳಕೆದಾರನೊಬ್ಬ ವಿಚಾರಣೆಯ ವೇಳೆ ಪದೇ ಪದೇ ಅಶ್ಲೀಲ ದೃಶ್ಯಗಳನ್ನು ಪರದೆಯ ಮೇಲೆ ಪ್ಲೇ ಮಾಡಿದ್ದಾನೆ.

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ, ಇನ್‌ಸ್ಟಾಗ್ರಾಮ್ ಪ್ರಭಾವಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ; ಕಾರಣವೇನು?

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿಯ ಕೊಲೆ, ಪತಿ ಆತ್ಮಹತ್ಯೆ

ಇನ್‌ಸ್ಟಾಗ್ರಾಮ್ ನಲ್ಲಿ 3 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದ ಸಾಯಿ ಸಿಲ್ಕ್ಸ್ ಮಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ. ಕೌಟುಂಬಿಕ ಕಲಹ ಇದಕ್ಕೆ ಕಾರಣ ಎನ್ನಲಾಗಿದೆ. ನಂಗನಲ್ಲೂರಿನ ನಾಗಲಕ್ಷ್ಮಿ (42) ಮತ್ತು ಅವರ ಪತಿ ಸುಬ್ರಮಣಿಯನ್ (52) ಮೃತರು.

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ; ಬೌರಿಂಗ್‌ ಆಸ್ಪತ್ರೆಯಲ್ಲಿ ಗೋಡೆ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವು

ಭಾರಿ ಮಳೆ; ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು

ಬೆಂಗಳೂರು ನಗರದ ಮೆಜೆಸ್ಟಿಕ್, ಕೆಆರ್‌ ಮಾರುಕಟ್ಟೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಗುಟ್ಟಹಳ್ಳಿ, ವಸಂತನಗರ, ಶಾಂತಿನಗರ, ಆರ್.ಟಿ.ನಗರ, ಜಯನಗರ, ಜೆ.ಪಿ‌ ನಗರ, ಹೆಬ್ಬಾಳ, ಶಿವಾಜಿ ನಗರ, ಬನಶಂಕರಿ ಸೇರಿ ಹಲವೆಡೆ ಭಾರಿ ಮಳೆಯಾಗಿದೆ.

ಪಶ್ಚಿಮ ಬಂಗಾಳ ಚುನಾವಣೆ: ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ, ಹೌರಾದಲ್ಲಿ ಘರ್ಷಣೆ

ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ನಾಡಿಯಾದಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಛಪ್ರಾದ ಬೂತ್ ಸಂಖ್ಯೆ 53ರಲ್ಲಿ ಬಿಜೆಪಿ ಬೂತ್ ಏಜೆಂಟ್ ಮೇಲೆ ದಾಳಿ ನಡೆಸಿರುವ ಟಿಎಂಸಿ ಕಾರ್ಯಕರ್ತರು ಕೋಲು, ಬಂದೂಕು, ಕಚ್ಚಾ ಬಾಂಬ್‌ ಹಿಡಿದುಕೊಂಡು ಬೆನ್ನಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

Udupi Bus Accident: ಉಡುಪಿಯಲ್ಲಿ ಭೀಕರ ಅಪಘಾತ; ಪೆಟ್ರೋಲ್‌ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರ ಸಾವು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ನಡೆದಿದೆ. ಹೆದ್ದಾರಿ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.

ಮದುವೆಯ ದಿನವೇ ಅಪಘಾತ; ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದ ವಧು ಸಾವು

ಮದುವೆಯ ದಿನವೇ ವಧು ಸಾವು

ಮದುವೆಯ ದಿನವೇ ಅಪಘಾತದಲ್ಲಿ ವಧು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬ್ಯೂಟಿ ಪಾರ್ಲರ್‌ಗೆ ಸಹೋದರನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ವಧು ರಸ್ತೆಗೆ ಬಿದಿದ್ದು, ಆಕೆಯ ಮೇಲೆಯೇ ಟ್ರೇಲರ್ ಟ್ರಕ್ ಹರಿದು ಹೋಗಿದೆ. ಇದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಅನೈತಿಕ ಸಂಬಂಧಕ್ಕೆ ಬೇಸತ್ತು ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆ!

ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ ಕಿರುಕುಳಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮೂಲದ ಮಂಜುಳಾ (38) ಮೃತ ದುರ್ದೈವಿ.

Gudibande News: ಕಾಮಗಾರಿ ಬಿಲ್ ಮಾಡಲು 3.5 ಲಕ್ಷ ಲಂಚ: ಗುಡಿಬಂಡೆ ಪಿಡಿಒ ವೀಡಿಯೋ ವೈರಲ್

ಕಾಮಗಾರಿ ಬಿಲ್ ಮಾಡಲು 3.5 ಲಕ್ಷ ಲಂಚ

ತಾಲೂಕಿನ ತಿರುಮಣಿ ಮತ್ತು ಹಂಪಸಂದ್ರ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿ ಯಾಗಿ (ಪಿಡಿಒ) ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ, ಪಂಚಾಯಿತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾವತಿಸಲು ಗುತ್ತಿಗೆದಾರರಿಂದ ಸುಮಾರು 3 ಲಕ್ಷ 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಕ್ಯಾಮರಾದಲ್ಲಿ ಸಿಕ್ಕಿಬಿದ್ದಿದ್ದಾರೆ.

ಪಂಜಾಬ್ ರೈಲು ಹಳಿ ಸಮೀಪ ಸ್ಫೋಟ: ತನಿಖೆ ಚುರುಕು, ಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ; ಉಗ್ರರ ಕೃತ್ಯವೆ?

ಪಟಿಯಾಲ ರೈಲು ಹಳಿ ಬಳಿ ಸ್ಫೋಟ: ಅಪರಿಚಿತ ಶವ ಪತ್ತೆ

ಪಂಜಾಬ್‌ನ ಪಟಿಯಾಲದಲ್ಲಿ ರೈಲು ಹಳಿ ಸಮೀಪ ಲಘು ತೀವ್ರತೆಯ ಸ್ಫೋಟ ಸಂಭವಿಸಿ ಹಳಿ ಹಾನಿಗೊಳಗಾಗಿದೆ. ಘಟನಾ ಸ್ಥಳದ ಬಳಿ ಅಪರಿಚಿತ ಮೃತದೇಹವೂ ಪತ್ತೆಯಾಗಿದ್ದು, ಸಾವಿಗೂ ಸ್ಫೋಟಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸ್, ಜಿಆರ್‌ಪಿ, ಆರ್‌ಪಿಎಫ್ ಹಾಗೂ ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದು, ವಿಧ್ವಂಸಕ ಕೃತ್ಯದ ಕೋನವನ್ನೂ ಪರಿಶೀಲಿಸಲಾಗುತ್ತಿದೆ. ಈ ಘಟನೆ ಹಿನ್ನೆಲೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಅಕಾಲಿದಳ ಸರ್ಕಾರವನ್ನು ಟೀಕಿಸಿದೆ.

Amravati 2.0: ಅಮರಾವತಿ ಬಳಿಕ ಕೊಲ್ಲಾಪುರಲ್ಲೂ ಬಯಲಾಯ್ತು ಕರ್ಮಕಾಂಡ;  22 ವರ್ಷದ ಶಾಹಿದ್ ಸಮೀರ್‌ನಿಂದ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ

ಅಶ್ಲೀಲ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್; ಮತ್ತೊಂದು ಕರ್ಮಕಾಂಡ ಬಯಲು

ಮಹಾರಅಷ್ಟ್ರದ ಕೊಲ್ಲಾಪುರದಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿ, ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಹಿದ್ ಸಮೀರ್ ಸನಾದಿಯನ್ನು ಪೊಲೀಸರು ಬಂಧಿಸಿದ್ದಾರೆ.

Loading...