ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 13.14 ಕೋಟಿ ರೂ ಮೌಲ್ಯದ ಗಾಂಜಾ ವಶ; ಆರು ಜನರ ಬಂಧನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 13.14 ಕೋಟಿ ರೂ ಮೌಲ್ಯದ ಗಾಂಜಾ ವಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 13.14 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಶಿವಮೊಗ್ಗದಲ್ಲಿ ಘೋರ ಘಟನೆ; ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ಬಾಲಕ ಸಾವು

ಶಿವಮೊಗ್ಗದಲ್ಲಿ ಹೃದಯಾಘಾತದಿಂದ 1ನೇ ತರಗತಿ ಬಾಲಕ ಸಾವು

Shivamogga‌ News: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಶಾಲೆ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಶಿಕ್ಷಕರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಬಾಲಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

Hemavathi Backwaters Tragedy: ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವಕರ ಸಾವು

ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರ ಸಾವು

Hassan News: ಬೆಂಗಳೂರಿನಿಂದ ಹತ್ತು ಯುವಕರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ತೆರಳಿತ್ತು. ದೇವರ ದರ್ಶನ ಮುಗಿಸಿ ಹಿಂತಿರುಗುವ ಮಾರ್ಗಮಧ್ಯೆ ಹಾಸನ ಜಿಲ್ಲೆಯ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ ವೇಳೆ ದುರಂತ ನಡೆದಿದೆ.

ಟವರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತಿಯ, ಬಾವಿಯಲ್ಲಿ ಪತ್ನಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ: ಮಹಾರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಈ ಪ್ರಕರಣ ಕೊಲೆಯೊ ಆತ್ಮಹತ್ಯೆಯೊ?

ಪತಿ, ಪತ್ನಿ, ಇಬ್ಬರು ಮಕ್ಕಳ ಮೃತದೇಹ ನಿಗೂಢವಾಗಿ ಪತ್ತೆ

Maharashtra Horror: ಮಹಾರಾಷ್ಟ್ರದ ವಾಶಿಮ್‌ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎನಿಸಿಕೊಂಡರೂ ಪೊಲೀಸರು ಕೊಲೆಯ ಕೋನದಿಂದಲೂ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.

ಮೀನು ಹಿಡಿಯಲು ತೆರಳಿದವರಿಗೆ ಎದುರಾಯ್ತು ಶಾಕ್‌; ಪಶ್ಚಿಮ ಬಂಗಾಳದ ಕೊಳವೊಂದರಲ್ಲಿ ಬಂದೂಕು ಪತ್ತೆ

ಪಶ್ಚಿಮ ಬಂಗಾಳದ ಕೊಳವೊಂದರಲ್ಲಿ ಬಂದೂಕು ಪತ್ತೆ

Gun Recovered from Pond: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕೊಳವೊಂದರಲ್ಲಿ ಪ್ಲಾಸ್ಟಿಕ್ ಪ್ಯಾಕೆಟ್‌ನಲ್ಲಿ ಸುತ್ತಿದ ದೇಶೀಯ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಜಲಮೂಲಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇಟ್ಟಿರಬಹುದಾದ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಅದು ದೇಶೀಯ ನಿರ್ಮಿತ ಸಣ್ಣ ರಿವಾಲ್ವರ್ ಎಂದು ಗುರುತಿಸಲಾಗಿದೆ.

ಲಂಡನ್‌ನಲ್ಲಿ 26 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಹತ್ಯೆಗೈದ ದುಷ್ಕರ್ಮಿಗಳು; ಕಾರಣ ನಿಗೂಢ

ಲಂಡನ್‌ನಲ್ಲಿ 26 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

Indian-Origin Man Death: 26 ವರ್ಷದ ಭಾರತೀಯ ಮೂಲದ ಯುವಕನೊಬ್ಬ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿ ಮೃತಪಟ್ಟ ಘಟನೆ ಇಂಗ್ಲೆಂಡ್‌ನ ಲಂಡನ್‌ನ ಸೌತಾಲ್‌ನಲ್ಲಿ ನಡೆದಿದೆ. ಮೃತರನ್ನು ಗುರ್ಭೇಜ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Bellary Murder Case: ರೇಣುಕಾಸ್ವಾಮಿ ಪ್ರಕರಣ ಮಾದರಿಯಲ್ಲೇ ಬಳ್ಳಾರಿಯಲ್ಲಿ ಯುವಕನ ಕೊಲೆ; ಮೂವರು ಅರೆಸ್ಟ್‌

ರೇಣುಕಾಸ್ವಾಮಿ ಪ್ರಕರಣ ಮಾದರಿಯಲ್ಲೇ ಬಳ್ಳಾರಿಯಲ್ಲಿ ಯುವಕನ ಕೊಲೆ!

ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಬಸನಗೌಡನನ್ನು ಬಳ್ಳಾರಿ ತಾಲೂಕಿನ ಮೋಕಾ ಸಮೀಪ ಕೊಲೆ ಮಾಡಿ, ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಲಾಗಿತ್ತು. ಮೋಕಾ ಬಳಿಯ ಎಲ್‌ಎಲ್‌ಸಿ ಕಾಲುವೆ ಪಕ್ಕದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆ ವೇಳೆ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.

ಪಾಟ್ನಾ ಕೋಚಿಂಗ್ ಸೆಂಟರ್ ಸಂಘರ್ಷ: ರೌಶನ್ ಸರ್ ಜೈಲಿನಲ್ಲಿರುವಾಗಲೇ ಸಹೋದರ ನೇಪಾಳದಲ್ಲಿ ನಿಗೂಢ ಸಾವು

ರೌಶನ್ ಸರ್ ಸಹೋದರ ನಿಗೂಢ ಸಾವು

ಪಾಟ್ನಾದ ಜನಪ್ರಿಯ ಶಿಕ್ಷಕ ರೌಶನ್ ಆನಂದ್ ಅವರು ಜೈಲಿನಲ್ಲಿರುವಾಗಲೇ ಅವರ ಸಹೋದರ ನೇಪಾಳದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರೋಶನ್ ಆನಂದ್ ಅವರು ಪಾಟ್ನಾದಲ್ಲಿ ಗ್ಯಾನ್ ಬಿಂದು ಜಿಎಸ್ ಅಕಾಡೆಮಿ ನಡೆಸುತ್ತಿದ್ದಾರೆ. ಇದು ಇನೋರ್ವ ಇಲ್ಲಿನ ಖ್ಯಾತ ಶಿಕ್ಷಕ ಖಾನ್ ಸರ್ ಅವರ ಗ್ಲೋಬಲ್ ಸ್ಟಡೀಸ್ ಕೋಚಿಂಗ್ ಸೆಂಟರ್ ಗೆ ತೀವ್ರ ಪೈಪೋಟಿಯನ್ನು ನೀಡುತ್ತಿತ್ತು, ಇವರಿಬ್ಬರ ನಡುವಿನ ಜಗಳ ದೇಶಾದ್ಯಂತ ಸುದ್ದಿಯಾಗಿದೆ.

ಅನೈತಿಕ ಸಂಬಂಧದ ಶಂಕೆ; ಲಿವ್‌ ಇನ್‌ ಪಾರ್ಟ್‌ನರ್‌ ಸಂಗಾತಿಯ ಕತ್ತು ಸೀಳಿದ ವ್ಯಕ್ತಿ

ಲಿವ್‌ ಇನ್‌ ಪಾರ್ಟ್‌ನರ್‌ ಸಂಗಾತಿಯ ಕತ್ತು ಸೀಳಿದ ವ್ಯಕ್ತಿ!

ಸಿಕ್ಕಿಂನ 22 ವರ್ಷದ ಮಹಿಳೆಯನ್ನು ಆಕೆಯ ಗೆಳೆಯನೇ ಕೊಲೆ ಮಾಡಿದ ಘಟನೆ ಸಿಕ್ಕಿಂನಲ್ಲಿ ನಡೆದಿದೆ. ಮೃತರನ್ನು ಸಿಕ್ಕಿಂ ಮೂಲದ 22 ವರ್ಷದ ಅತಿ ಹಂಗ್ಮಾ ಸುಬ್ಬಾ ಎಂದು ಗುರುತಿಸಲಾಗಿದ್ದು, ಆಕೆ ಸಲೂನ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.

ದೆಹಲಿಯ ಮತ್ತೊಂದು ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ; ಏಕಾಏಕಿ ಸ್ಫೋಟಗೊಂಡ ಮೂರು ಸಿಲಿಂಡರ್‌ಗಳು

ಸಿಲಿಂಡರ್ ಸ್ಫೋಟ; ದೆಹಲಿಯ ಮತ್ತೊಂದು ಅಗ್ನಿ ಅವಘಡ

ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ನಲ್ಲಿ ಜೂನ್ 3ರಂದು ಭಾರಿ ಬೆಂಕಿ ಕಾಣಿಸಿಕೊಂಡು 21 ಮಂದಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ರೆಸ್ಟೋರೆಂಟ್ ಬೆಂಕಿಗೆ ಆಹುತಿಯಾಗಿದೆ. ಮೂರು ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದು ಒಳಗೆ ಸಿಲುಕಿಕೊಂಡಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲಾಯಿತು.

Doddaballapur News: ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ದುರ್ಘಟನೆ ನಡೆದಿದೆ. ಶನಿವಾರ ಸಂಜೆ ಮಕ್ಕಳು ಕೃಷಿ ಹೊಂಡದ ಪಕ್ಕದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕೃಷಿ ಹೊಂಡಕ್ಕೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸದ ಕಾರಣ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಿಳಾ ಸರ್ಕಾರಿ ಉದ್ಯೋಗಿಯನ್ನು ಹಿಂಬಾಲಿಸಿ ಕುತ್ತಿಗೆಗೆ ಇರಿದ ಸಹೋದ್ಯೋಗಿ; ಭೀಕರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಕುಡುಗೋಲಿನಿಂದ ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ: ಯುವತಿ ಗಂಭೀರ

Government Employee Attacked: 27 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ನ್ಯಾಯಾಲಯದ ಗುಮಾಸ್ತನಾಗಿ ಕೆಲಸ ಮಾಡುವ ಆರೋಪಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆಗೈದು ಪರಾರಿಯಾಗಿದ್ದಾನೆ. ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಘಟನೆ ನಡೆದಿದೆ.

Bengaluru Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಶಾಲಾ ಬಸ್‌ ಹರಿದು ಮಗಳ ಕಣ್ಣೆದುರೇ ತಾಯಿ ಸಾವು!

ಬೆಂಗಳೂರಿನಲ್ಲಿ ಶಾಲಾ ಬಸ್‌ ಹರಿದು ಮಹಿಳೆ ಸಾವು

ಬೆಂಗಳೂರಿನಲ್ಲಿ ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಹಾಗೂ ಮಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ರಸ್ತೆ ಗುಂಡಿಯಿಂದ ಸ್ಕೂಟರ್ ಸ್ಕಿಡ್ ಆಗಿದ್ದರಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬಂದ ಶಾಲಾ ಬಸ್‌ ಹರಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಿಳೆಯನ್ನು ಅಪಹರಿಸಿ ಅತ್ಯಾಚಾರ; ಭಾರತೀಯ ಮೂಲದ ವ್ಯಕ್ತಿಗೆ‌ ಲಂಡನ್‌ನಲ್ಲಿ 34 ವರ್ಷ ಜೈಲು ಶಿಕ್ಷೆ

ಭಾರತೀಯ ಮೂಲದ ವ್ಯಕ್ತಿಗೆ‌ ಲಂಡನ್‌ನಲ್ಲಿ 34 ವರ್ಷ ಜೈಲು ಶಿಕ್ಷೆ

ಮಹಿಳೆಯನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ, ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ ಯುನೈಟೆಡ್ ಕಿಂಗ್‌ಡಮ್‌ನಲ್ಲಿ 34 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ಐಲ್‌ವರ್ತ್ ಕ್ರೌನ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ 34 ವರ್ಷದ ಗಗನ್‌ದೀಪ್ ಸಿಂಗ್‌ ಎಂದು ಗುರುತಿಸಲಾಗಿದೆ.

MLC Naseer Ahmed: ಸಾವಿರಾರು ಕೋಟಿ ಸಾಲದ ಹಿನ್ನೆಲೆ ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ 'ದಿವಾಳಿ'; ಎಂಎಲ್‌ಸಿ  ಸ್ಥಾನಕ್ಕೆ ಕುತ್ತು!

ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ ʼದಿವಾಳಿʼ; ಎಂಎಲ್‌ಸಿ ಸ್ಥಾನಕ್ಕೆ ಕುತ್ತು!

ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿಯು ಪಡೆದಿದ್ದ 1,454 ಕೋಟಿಗೂ ಅಧಿಕ ಮೊತ್ತದ ಬಾಕಿ ಸಾಲದ ವಸೂಲಾತಿಗಾಗಿ ಕಳೆದ 2019ರಿಂದಲೇ ಈ ಕಾನೂನು ಪ್ರಕ್ರಿಯೆ ನಡೆದಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳ ಒಕ್ಕೂಟ 2019ರಿಂದಲೇ ಕಾನೂನು ಪ್ರಕ್ರಿಯೆ ನಡೆಸಿತ್ತು.

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು; ಕುಟುಂಬಸ್ಥರು ಅಸ್ವಸ್ಥ

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು

ಮಾವಿನ ಹಣ್ಣನ್ನು ತಿಂದ ಬಳಿಕ ಸಹೋದರಿಯರಿಬ್ಬರು ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ ನಡೆದಿದೆ. ಮನೆಯಲ್ಲಿ ಊಟದ ಬಳಿಕ ಮಾವಿನ ಹಣ್ಣು ತಿಂದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೋಟ್ಯಂತರ ರುಪಾಯಿ ನಗದು, ಮದ್ಯದ ಬಾಟಲಿ, ಕಾಂಡೋ, ಬೆಡ್‌ರೂಮ್: ಇದು ಯಾವುದೇ ಲಾಡ್ಜ್‌ ಅಲ್ಲ; ಪಶ್ಚಿಮ ಬಂಗಾಳದ ಶಾಲೆಯಲ್ಲಿ ಕಂಡುಬಂದ ದೃಶ್ಯ!

ಶಾಲೆಯಲ್ಲಿ ಕೋಟಿ ರುಪಾಯಿ ನಗದು, ಮದ್ಯದ ಬಾಟಲಿ

ಪಶ್ಚಿಮ ಬಂಗಾಳದ ಕಾಂಚ್ರಾಪಾರಾದ ಖಾಸಗಿ ಶಾಲೆಯೊಂದರಿಂದ ಪೊಲೀಸರು 1.77 ಕೋಟಿ ರುಪಾಯಿ ನಗದು, ಮದ್ಯದ ಬಾಟಲಿಗಳು ಹಾಗೂ ಬೆಡ್‌ರೂಮ್ ಮಾದರಿಯ ಕೋಣೆಯನ್ನು ಪತ್ತೆ ಹಚ್ಚಿದ್ದಾರೆ. ಹಣಕಾಸು ಅಕ್ರಮದ ದೂರಿನ ಆಧಾರದ ಮೇಲೆ ನಡೆದ ದಾಳಿಯಲ್ಲಿ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿದ್ದು, ಪ್ರಕರಣ ರಾಜಕೀಯ ವಿವಾದಕ್ಕೂ ಕಾರಣವಾಗಿದೆ.

ನಿವೃತಿಯ ಅಂಚಿನಲ್ಲಿರುವ ವಿಶೇಷ ಚೇತನ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ

ವಿಶೇಷ ಚೇತನ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ

ವಿಶೇಷ ಚೇತನ ಶಿಕ್ಷಕನೊಬ್ಬ ಶಾಲಾ ಕ್ಯಾಂಪಸ್ ನಲ್ಲಿ ಸುಮಾರು ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗುಜರಾತ್ ನ ಉಪ್ಲೆಟಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರಕರಣದ ಆರೋಪಿ ಶಿಕ್ಷಕ ದೇವಾನಂದ್ ಬೇರಾ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ಉದ್ವಿಗ್ನತೆ;  ಅಪಹರಿಸಿ 3 ತಿಂಗಳ ನಂತರ ಪತ್ತೆಯಾಯ್ತು 6 ನಾಗಾ ಒತ್ತೆಯಾಳುಗಳ ಮೃತದೇಹ!

6 ನಾಗಾ ಒತ್ತೆಯಾಳುಗಳ ಮೃತದೇಹಗಳು ಪತ್ತೆ

Six Naga Hostages Found Dead: ಮಣಿಪುರ ಪೊಲೀಸ್, ಸಿಆರ್‌ಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 450 ಸಿಬ್ಬಂದಿ, ಸ್ನಿಫರ್ ಡಾಗ್ಸ್ ಮತ್ತು ಫೋರೆನ್ಸಿಕ್ ತಜ್ಞ ತಂಡಗಳ ಸಹಾಯದಿಂದ ಸುಮಾರು 24 ಗಂಟೆಗಳ ಕಾಲ ನಿರಂತರ ಶೋಧ ಕಾರ್ಯಾಚರಣೆಯ ನಂತರ, ಆರು ಜನರ ಮೃತದೇಹಗಳನ್ನು ಇಂದು (ಜೂ.11) ಮಧ್ಯಾಹ್ನ ವಶಪಡಿಸಿಕೊಳ್ಳಲಾಗಿದೆ.

Bengaluru theft case: ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ರೂ. ಕಳ್ಳತನ; ನೇಪಾಳ ಮೂಲದ ಚಾಲಾಕಿ ದಂಪತಿ ಅರೆಸ್ಟ್

ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ಕಳ್ಳತನ; ದಂಪತಿ ಅರೆಸ್ಟ್

ಬೆಂಗಳೂರಿನ ಅಮೃತಹಳ್ಳಿಯ ಅರ್ಕಾವತಿ ಲೇಔಟ್‌ನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ನಗದು ಕಳ್ಳತನವಾಗಿತ್ತು. ಮನೆಕೆಲಸಕ್ಕೆ ಸೇರಿದವರೇ ಕೃತ್ಯ ಎಸಗಿದ್ದು, ಪರಾರಿಯಾಗಲು ಯತ್ನಿಸುತ್ತಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಗದು ವಶಕ್ಕೆ ಪಡೆಯಲಾಗಿದೆ.

ಎಂಜಿನಿಯರ್ ಅಲ್ಲ ಕುಬೇರ! ಎಸಿಬಿ ದಾಳಿಯಲ್ಲಿ 18 ಕೋಟಿ ರುಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಎಂಜಿನಿಯರ್ ಆಸ್ತಿ 18 ಕೋಟಿ ರುಪಾಯಿ!

Illegal Assets Case: ರಸ್ತೆ ಮತ್ತು ಕಟ್ಟಡಗಳ ಇಲಾಖೆಯ ಎಂಜಿನಿಯರ್-ಇನ್-ಚೀಫ್ ಮೋಹನ್ ನಾಯಕ್ ಜರುಪ್ಲಾ ಅವರನ್ನು ತೆಲಂಗಾಣ ಎಸಿಬಿ ಬಂಧಿಸಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಈ ಬಂಧನ ನಡೆದಿದೆ. ದಾಳಿಯ ಸಮಯದಲ್ಲಿ, ತನಿಖಾಧಿಕಾರಿಗಳು ಹೆಚ್ಚಿನ ಸಂಖ್ಯೆಯ ಸ್ಥಿರ ಮತ್ತು ಚರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ.

ಬಾಲಕ ಸಿಗರೇಟ್ ಸೇದಿದ ವಿಡಿಯೊ ತೋರಿಸಿ ಬ್ಲ್ಯಾಕ್‌ಮೇಲ್; 120 ಗ್ರಾಂ ಚಿನ್ನ ವಸೂಲಿ ಮಾಡಿದ ಖದೀಮರು!

ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ವಸೂಲಿ!

Koppal Blackmail Case: ತಾನು ಸಿಗರೇಟ್‌ ಸೇದುವ ವಿಚಾರ ಮನೆಯಲ್ಲಿ ತಿಳಿದರೆ ತಂದೆ ಹೊಡೆಯುತ್ತಾರೆ ಎಂಬ ಭಯದಿಂದ ಕಂಗಾಲಾದ ಬಾಲಕ, ಆರೋಪಿಗಳ ಬ್ಲ್ಯಾಕ್‌ಮೇಲ್‌ಗೆ ಹೆದರಿ, ಚಿನ್ನಾಭರಣಗಳನ್ನು ಕೊಟ್ಟಿದ್ದಾನೆ. ಮನೆಯಲ್ಲಿ ಚಿನ್ನದ ಒಡವೆಗಳು ನಾಪತ್ತೆ ಆಗಿರೋದನ್ನು ಗಮನಿಸಿದ ಪೋಷಕರು ಪೊಲೀಸರಿಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Nippani News: ನಿಪ್ಪಾಣಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಮಾರಕಾಸ್ತ್ರ ವಶಕ್ಕೆ

ನಿಪ್ಪಾಣಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ

Nippani News: ನಿಪ್ಪಾಣಿ ನಗರದ ವಿವಿಧ ಭಾಗಗಳಲ್ಲಿರುವ ರೌಡಿಶೀಟರ್‌ಗಳ ವಿರುದ್ಧ ನಿಪ್ಪಾಣಿ ಪೊಲೀಸರು ಬುಧವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ, 10 ರಿಂದ 15 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.

Bidar News: ಹೆಡ್‌ ಮಾಸ್ಟರ್‌ ಕಿರುಕುಳ ಆರೋಪ; ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನಲ್ಲಿ ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನ ಪ್ರತಾಪ್ ನಗರದ ಬಳಿ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕಿರುಕುಳ ನೀಡಿದ್ದಾರೆ ಎಂದು 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...