ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Chinthamani News: ಕೆಂಚಾರ್ಲಹಳ್ಳಿ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ: ಐವರ ವಶಕ್ಕೆ,ನಗದು ಮತ್ತು ಬೈಕ್‌ಗಳು ಜಪ್ತಿ

ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ

ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದೆಪಲ್ಲಿ ಗ್ರಾಮದ ಕೆರೆ ಅಂಗಳ ದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆ ಯೊಂದರ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐದು ಮಂದಿ ಆರೋಪಿಗಳನ್ನು ಬಂಧಿಸ ಲಾಗಿದ್ದು, ನಗದು ಹಣ ಹಾಗೂ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Cricket Betting: ಕ್ರಿಕೆಟ್ ಬೆಟ್ಟಿಂಗ್ ದಂಧೆ ಬೇಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ಬೇಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು

ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಸಂದ್ರ ಗ್ರಾಮದ ಬಳಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಯೊಂದನ್ನು ಭೇದಿಸುವಲ್ಲಿ ಚಿಂತಾಮಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ ಪೊಲೀಸರು,ಸ್ಥಳದಲ್ಲಿದ್ದ ಮೊಬೈಲ್ ಫೋನ್‌ಗಳು ವಶಪಡಿಸಿ ಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಕಾಕ್ರೋಚ್ ಜನತಾ ಪಕ್ಷದ ಹೆಸರಲ್ಲಿ ಫೋನ್ ಹ್ಯಾಕ್ ಮಾಡಿ ಲೂಟಿ ಮಾಡಲು ಸಂಚು: ಪೊಲೀಸರಿಂದ ಎಚ್ಚರಿಕೆ

ಕಾಕ್ರೋಚ್ ಜನತಾ ಪಕ್ಷದಿಂದ ಹಣ ದೋಚಲು ಸಂಚು: ಎಚ್ಚರಿಕೆ

ಕಾಕ್ರೋಚ್ ಜನತಾ ಪಕ್ಷವು ಹಣ ದೋಚಲು ಮಾಡಿರುವ ಬಹುದೊಡ್ಡ ಸಂಚು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷಕ್ಕೆ ಸೇರಲು ಲಿಂಕ್ ಗಳನ್ನು ಕಳುಹಿಸಲಾಗುತ್ತಿದ್ದು ಇದು ವಂಚಕರ ಬಹುದೊಡ್ಡ ಜಾಲವಾಗಿದೆ. ಯಾವುದೇ ಕಾರಣಕ್ಕೂ ಇಂತಹ ಲಿಂಕ್ ಗಳನ್ನು ತೆರೆಯಬೇಡಿ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.

ಮಸೀದಿಯೊಳಗೆ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿಗೆ ಜೀವಾವಧಿ ಶಿಕ್ಷೆ

ಮಸೀದಿಯೊಳಗೆ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Maulvi Sentenced to Life Imprisonment: ಉತ್ತರ ಪ್ರದೇಶದ ಹಮೀರ್‌ಪುರದ ವಿಶೇಷ ಪೋಕ್ಸೋ ನ್ಯಾಯಾಲಯವು ಮಸೀದಿ ಆವರಣದೊಳಗೆ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಧರ್ಮಗುರುವಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿ ಮುಂತಜಿರ್ ಆಲಂಗೆ 26,000 ರುಪಾಯಿ ದಂಡವನ್ನು ಸಹ ವಿಧಿಸಲಾಗಿದೆ.

ದೆಹಲಿ ಬ್ಲಾಸ್ಟ್‌ನ ಸ್ಫೋಟಕ ಮಾಹಿತಿ ಬಹಿರಂಗ; ಬಾಂಬ್ ತಯಾರಿಸಲು ಚಾಟ್‌ಜಿಪಿಟಿ, ಯುಟ್ಯೂಬ್ ಬಳಕೆ: ಎನ್ಐಎ ತನಿಖೆಯಲ್ಲಿದೆ ಮುಖ್ಯ ವಿಚಾರ

ಬಾಂಬ್ ತಯಾರಿಸಲು ಎಐ ಬಳಸಿದ ದೆಹಲಿ ಸ್ಫೋಟ ಆರೋಪಿ

Delhi Blast Accused Used AI: ದೆಹಲಿ ಕೆಂಪುಕೋಟೆ ಪ್ರದೇಶದ ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎಗೆ ಮಹತ್ವದ ಮಾಹಿತಿಯೊಂದು ದೊರೆತಿದೆ. ಆರೋಪಪಟ್ಟಿಯಲ್ಲಿರುವ ವ್ಯಕ್ತಿಯೊಬ್ಬ ಕೃತಕ ಬುದ್ಧಿಮತ್ತೆ(AI)ಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ.

ಸುಪ್ರೀಂ ಕೋರ್ಟ್‌ನ ನಕಲಿ ದಾಖಲೆ ಸೃಷ್ಟಿಸಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಬಿಡುಗಡೆ; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

ನಕಲಿ ದಾಖಲೆ ಸೃಷ್ಟಿಸಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಬಿಡುಗಡೆ

Forged Court Documents: ಸುಮಾರು ಎಂಟು ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಅಕ್ರಮವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಬೆಚ್ಚಿಬೀಳಿಸುವ ಪ್ರಕರಣವು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕಲಬುರಗಿಯ ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌; ನೀಟ್‌ ಬರೆದಿದ್ದ ವಿದ್ಯಾರ್ಥಿನಿ ಸಾವಿಗೆ ಕಾರಣ ಬಹಿರಂಗ!

ಕಲಬುರಗಿ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆಗೆ ಕಾರಣ ಬಹಿರಂಗ

ನೀಟ್ ಪರೀಕ್ಷೆ ಬರೆದಿದ್ದ ಕಲಬುರಗಿ ನಗರದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳು ಯಾವುದೋ ವಿಷಯದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೂ ದೂರು ಇರುವುದಿಲ್ಲ ಎಂದು ಯುವತಿಯ ತಂದೆ ಸ್ಟೇಷನ್‌ ಬಜಾರ್ ಠಾಣೆಗೆ ದೂರು ನೀಡಿದ್ದರು. ಆದರೆ, ಇದೀಗ ಸಾವಿಗೆ ಕಾರಣ ಬಹಿರಂಗವಾಗಿದೆ.

ಕರ್ತವ್ಯಕ್ಕೆ ತೆರಳುತ್ತಿದ್ದ ASI ಮೇಲೆ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು

ASI ಮೇಲೆ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು

ಅಮೃತಸರ ಜಿಲ್ಲೆಯ ಹಮ್ಜಾ ಗ್ರಾಮದ ಬಳಿ ಭಾನುವಾರ ಇಬ್ಬರು ಅಪರಿಚಿತ ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಪಂಜಾಬ್ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಅವರ ದೇಹವು ನಂತರ ಫತೇಘರ್ ಚುರಿಯನ್-ಮಜಿಥಿಯಾ ರಸ್ತೆಯ ಬಳಿ ಪತ್ತೆಯಾಗಿದೆ.

ವೃದ್ಧೆಗೆ ಡಿಜಿಟಲ್ ಅರೆಸ್ಟ್; 24 ಕೋಟಿ ರೂ. ದೋಚಿದ ಸೈಬರ್ ವಂಚಕರು

ವೃದ್ಧೆಗೆ ಡಿಜಿಟಲ್ ಅರೆಸ್ಟ್; 24 ಕೋಟಿ ರೂ. ದೋಚಿದ ಸೈಬರ್ ವಂಚಕರು

ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಸೈಬರ್ ವಂಚಕರು ವೃದ್ಧೆ ಬಳಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿದೆ.

4 ವರ್ಷಗಳ ಕಾಲ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಾಕ್ಸಿಂಗ್ ಕೋಚ್ ವಿರುದ್ಧ ದೂರು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಾಕ್ಸಿಂಗ್ ಕೋಚ್ ವಿರುದ್ಧ ದೂರು

ಕಂಠೀರವ ಕ್ರೀಡಾಂಗಣದಲ್ಲಿರುವ ಲಯನ್ಸ್ ಬಾಕ್ಸಿಂಗ್ ಕ್ಲಬ್‌ಗೆ ಸೇರಿದ ಬಾಕ್ಸಿಂಗ್ ತರಬೇತುದಾರನ ವಿರುದ್ಧ 17 ವರ್ಷದ ಬಾಕ್ಸರ್ ನೀಡಿದ ಆರೋಪದ ಮೇರೆಗೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಮೇ 22 ರಂದು ಹದಿಹರೆಯದ ಬಾಲಕಿ ತನ್ನ ತಾಯಿಯ ಮೂಲಕ ದೂರು ದಾಖಲಿಸಿದ್ದಾಳೆ.

NEET Aspirant Self Harming: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ಮೇ 2 ರಂದು ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.

Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿ ಹಿಂಭಾಗದ ರೈಲ್ವೆ ಹಳ್ಳಿ ಮೇಲೆ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಅಪರಿಚಿತನಾಗಿದ್ದು, 30 ರಿಂದ 35 ವರ್ಷ ಆಗಿರಬಹುದು ಎಂದು ಅಂದಾ ಜಿಸಲಾಗಿದೆ.

ಸಾಯುವ ಕೆಲವೇ ಗಂಟೆಗಳ ಮುನ್ನ ಸಲೂನ್‌ಗೆ ಭೇಟಿ: ಮಾಲೀಕರಿಂದ ಬಯಲಾಯ್ತು ತ್ವಿಶಾ ಶರ್ಮಾ ಕುರಿತು ಸ್ಪೋಟಕ ಮಾಹಿತಿ

ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಹೊಸ ತಿರುವು

ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದ್ದು, ಆತ್ಮಹತ್ಯೆಗೆ ಕೆಲವೇ ಗಂಟೆಗಳ ಮೊದಲು ಅವರು ಬ್ಯೂಟಿ ಸಲೂನ್‌ಗೆ ಭೇಟಿ ನೀಡಿದ್ದ ಸಿಸಿಟಿವಿ ದೃಶ್ಯಗಳು ಬಹಿರಂಗವಾಗಿವೆ. ವರದಕ್ಷಿಣೆ ಕಿರುಕುಳ ಆರೋಪಗಳ ನಡುವೆ, ಸಿಸಿಟಿವಿ ದೃಶ್ಯಗಳನ್ನು ಅಪರಿಚಿತ ವಕೀಲರ ತಂಡ ತೆಗೆದುಕೊಂಡಿರುವುದು ಪ್ರಕರಣಕ್ಕೆ ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.

10 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ; ಸಿಎಂ ವಿಜಯ್ ಹೇಳಿದ್ದೇನು?

10 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ!

Crime News: ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳು ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದಿದೆ. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಬಳಿ ದಿನಸಿ ಖರೀದಿಸಲು ಹೋದಾಗ ಆರೋಪಿಗಳು ಆಕೆಯನ್ನು ಅಪಹರಿಸಿ, ನಂತರ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ; ನವಜಾತ ಶಿಶುವಿನ ರಕ್ಷಣೆ

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ

newborn baby rescued: 14 ವರ್ಷದ ಬಾಲಕಿಯೊಬ್ಬಳು ಶೌಚಾಲಯದೊಳಗೆ ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು ಶೌಚಾಲಯದ ಪ್ಯಾನ್‌ನಲ್ಲಿ ಸಿಲುಕಿಕೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್‌ನ ಸದರ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಆಸ್ಪತ್ರೆಯ ಆವರಣದಲ್ಲಿ ಆತಂಕ ಮೂಡಿಸಿದೆ. ಬಾಲಕಿ ವಾರ್ಡ್ ಪ್ರದೇಶದ ಶೌಚಾಲಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಹೊರಬರುತ್ತಿರುವುದು ಕಂಡುಬಂದಿದೆ.

Accident at Kalaburagi: ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಐವರ ಭೀಕರ ದುರ್ಮರಣ

ಕ್ರೂಸರ್-ಲಾರಿ ಡಿಕ್ಕಿ; ಒಂದೇ ಕುಟುಂಬದ ಐವರ ಭೀಕರ ದುರ್ಮರಣ

ಮೃತರೆಲ್ಲರೂ ಕ್ರೂಸರ್ ವಾಹನದಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕಾರ್ಯ ಕ್ರಮ ಮುಗಿಸಿಕೊಂಡು ಮರಳುತ್ತಿದ್ದಾಗ, ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಅಸುಪಾಸಿ ನಲ್ಲಿ ಲಾಡ್ಲಾಪುರ ಹತ್ತಿರ ಎದುರುಗಡೆಯಿಂದ ಬಂದ ಲಾರಿ ಇವರ ವಾಹನಕ್ಕೆ ಭೀಕರವಾಗಿ ಅಪ್ಪಳಿಸಿದೆ. ಪರಿಣಾಮ, ವಾಹನದಲ್ಲಿದ್ದ ಐವರಿಗೂ ಗಂಭೀರ ಸ್ವರೂಪದ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸಾರ್ವಜನಿಕರು ತಕ್ಷಣವೇ ಆಟೋ ಒಂದರಲ್ಲಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಬಳಿಕ ವೈದ್ಯಾಧಿಕಾರಿಗಳ ಸಲಹೆಯ ಮೇರೆಗೆ ತೀವ್ರ ಗಾಯ ಗೊಂಡಿದ್ದ ಅಕ್ರಂಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸ್ಪೋಟಕ್ಕೆ ಸಂಚು ? 31 ಜೀವಂತ ಬಾಂಬ್‌ ಪತ್ತೆ

ಪಶ್ಚಿಮ ಬಂಗಾಳದಲ್ಲಿ ಸ್ಪೋಟಕ್ಕೆ ಸಂಚು?

ಪಶ್ಚಿಮ ಬಂಗಾಳದ ಬಿರ್ಭುಮ್ ಪ್ರದೇಶದಲ್ಲಿ ಶುಕ್ರವಾರ 31 ಜೀವಂತ ಬಾಂಬ್‌ಗಳು ಪತ್ತೆಯಾಗಿವೆ. ಬಿದಿರಿನ ತೋಪಿನ ಬಳಿ ಶುಕ್ರವಾರ ಜೋಡಿಸಿಟ್ಟ ಜೀವಂತ ಬಾಂಬ್‌ಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆ ಮಾಡಿದ ಪೊಲೀಸರು ಪ್ರದೇಶವನ್ನು ಸೀಲ್ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ.

ತ್ವಿಶಾ ಶರ್ಮಾ ಸಾವು ಪ್ರಕರಣ: 10 ದಿನಗಳ ನಂತರ ಜಬಲ್‌ಪುರ ನ್ಯಾಯಾಲಯದಲ್ಲಿ ಶರಣಾದ ಪತಿ ಸಮರ್ಥ್ ಸಿಂಗ್

ಸಮರ್ಥ್ ಸಿಂಗ್ ಶರಣಾಗತಿ; ತ್ವಿಶಾ ಪ್ರಕರಣದಲ್ಲಿ ಹೊಸ ತಿರುವು

Twisha Sharma Death Case: ಭೋಪಾಲ್‌ನ ತ್ವಿಶಾ ಶರ್ಮಾ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿ ನಡೆದಿದ್ದು, 10 ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್ ಜಬಲ್‌ಪುರ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪ್ರಕರಣದಲ್ಲಿ ಆರೋಪಿ ಬಂಧನ ತಪ್ಪಿಸಲು ಪ್ರಭಾವಿ ವ್ಯಕ್ತಿಗಳ ಸಹಾಯ ದೊರೆಯುತ್ತಿದೆ ಎಂದು ತ್ವಿಶಾ ಕುಟುಂಬ ಆರೋಪಿಸಿದ್ದು, ಸಿಬಿಐ ತನಿಖೆ ಹಾಗೂ ಎರಡನೇ ಮರಣೋತ್ತರ ಪರೀಕ್ಷೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದೆ. ತ್ವಿಶಾ ಮೃತದೇಹವನ್ನು ಏಮ್ಸ್ ಆಸ್ಪತ್ರೆಯಲ್ಲಿ ವಿಶೇಷ ತಾಪಮಾನದಲ್ಲಿ ಸಂರಕ್ಷಿಸಲಾಗಿದೆ.

ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಭಿಜೀತ್ ದಿಪ್ಕೆಗೆ ಕೊಲೆ ಬೆದರಿಕೆ

ಅಭಿಜೀತ್ ಡಿಪ್ಕೆಗೆ ಕೊಲೆ ಬೆದರಿಕೆ

ಒಂದು ವಾರಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಜನಪ್ರಿಯತೆ ಪಡೆದುಕೊಂಡಿರುವ ಕಾಕ್ರೋಚ್ ಪಕ್ಷದ ಸ್ಥಾಪಕ ಅಭಿಜೀತ್ ಡಿಪ್ಕೆಗೆ ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ. ಅಮೆರಿಕದಲ್ಲೇ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆಗಳು ಬರುತ್ತಿವೆ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಹೇಳಿಕೊಂಡಿದ್ದಾರೆ.

Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಕೆಂಚಾರ್ಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ಅಕ್ರಮ ಮದ್ಯ ಮಾರಾಟಗಾರರು ಲಾಕ್!

ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಅಕ್ರಮ ದಂಧೆಕೋರರಿಗೆ ಪೆನಾಲ್ಟಿ ಹಾಕಿದ್ದಾರೆ. ಮರೀನಾಯಕನಹಳ್ಳಿ ಗೇಟ್ ಬಳಿಯ ಕಿರಾಣಿ ಅಂಗಡಿ ಯೊಂದರಲ್ಲಿ ಹಾಗೂ ಎರಡು ಮನೆಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಂಗ್ರಹಿಸಿ, ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಕೆಂಚಾರ್ಲಹಳ್ಳಿ ಪೊಲೀಸರು ನಿಗದಿತ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬಿಹಾರದಲ್ಲೊಂದು ಪವಾಡ;  4 ವರ್ಷದ ಬಾಲಕ ರಕ್ಷಣೆ ವೇಳೆ 2022ರಿಂದ ನಾಪತ್ತೆಯಾಗಿದ್ದ ಮತ್ತೊಂದು ಮಗು ಪತ್ತೆ!

ಬಿಹಾರದಲ್ಲಿ 2022ರಲ್ಲಿ ಅಪಹರಣಕ್ಕೊಳಗಾಗಿದ್ದ ಬಾಲಕನ ರಕ್ಷಣೆ

Rescue of Kidnapped Boy: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ನಾಲ್ಕು ವರ್ಷದ ಅದ್ವಿಕ್ ಎಂಬ ಬಾಲಕನನ್ನು ರಕ್ಷಿಸಲು ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 2022ರಿಂದ ನಾಪತ್ತೆಯಾಗಿದ್ದ ಶಿವಂ ಎಂಬ ಮತ್ತೊಂದು ಮಗುವನ್ನೂ ಪತ್ತೆಹಚ್ಚಿದ್ದಾರೆ. ಆರೋಪಿ ರಂಜೂ ದೇವಿಯ ಮನೆಯಲ್ಲಿ ಇಬ್ಬರು ಮಕ್ಕಳು ಪತ್ತೆಯಾಗಿದ್ದು, ತೀವ್ರ ತನಿಖೆಯ ಬಳಿಕ ಶಿವಂನನ್ನು ಅವನ ತಾಯಿಯೊಂದಿಗೆ ಕಳುಹಿಸಲಾಗಿದೆ.

ಪ್ರಧಾನಿ ಮೋದಿಗೆ  ಜಲ್ಮುರಿ ನೀಡಿದ ಪಶ್ಚಿಮ ಬಂಗಾಳದ ವ್ಯಾಪಾರಿಗೆ ಪಾಕಿಸ್ತಾನ, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ

ಪ್ರಧಾನಿ ಮೋದಿ ಬಂದುಹೋದ ಮೇಲೆ ಜಲ್ಮುರಿ ವ್ಯಾಪಾರಿಗೆ ಬೆದರಿಕೆ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಅಂಗಡಿಯೊಂದರಿಂದ ರಾಜ್ಯದ ಖ್ಯಾತ ತಿಂಡಿ ಮಂಡಕ್ಕಿಯಿಂದ ಮಾಡಿದ ಜಲ್ಮುರಿಯನ್ನು ಸವಿದಿದ್ದರು. ಇದರ ಬಳಿಕ ಅಂಗಡಿಯವ ಖ್ಯಾತಿ ಪಡೆದಿದ್ದು, ಇದು ಈಗ ಆತನಿಗೆ ತೊಂದರೆಯನ್ನು ಉಂಟು ಮಾಡಿದೆ. ಪ್ರಧಾನಿ ಮೋದಿಯವರು ಬಂದು ಹೋದ ಮೇಲೆ ಆತನಿಗೆ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ ಸಂಖ್ಯೆಗಳಿಂದ ಬಾಂಬ್ ಮತ್ತು ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ.

Loading...