ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Bengaluru accident: ಬೆಂಗಳೂರಿನಲ್ಲಿ ಟಿಪ್ಪರ್‌ ಲಾರಿ ಹರಿದು 5 ವರ್ಷದ ಬಾಲಕ ಸಾವು; ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ದುರಂತ!

ಬೆಂಗಳೂರಿನಲ್ಲಿ ಘೋರ ಘಟನೆ; ಟಿಪ್ಪರ್‌ ಲಾರಿ ಹರಿದು 5 ವರ್ಷದ ಬಾಲಕ ಸಾವು!

ಬೆಂಗಳೂರು ನಗರದ ಉತ್ತರಹಳ್ಳಿಯ ಸಾವನದರ್ಬಾರ್ ಆಶ್ರಮದ ಬಳಿ ಅಪಘಾತ ಸಂಭವಿಸಿದೆ. ಮಗನನ್ನು ಶಾಲೆಗೆ ಬಿಡಲು ತಾಯಿ ಸ್ಕೂಟರ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಸದ್ಯ ಮೃತ ಬಾಲಕನ ತಂದೆ ನೀಡಿದ ದೂರಿನನ್ವಯ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಚೆನ್ನೈನಲ್ಲಿ ಟಿವಿಕೆ ಸದಸ್ಯನ ಇರಿದು ಹತ್ಯೆ: ಕಾನೂನು ಸುವ್ಯವಸ್ಥೆ ಬಗ್ಗೆ ವಿಜಯ್ ಸರ್ಕಾರಕ್ಕೆ ಡಿಎಂಕೆ ತರಾಟೆ

ಟಿವಿಕೆ ಸದಸ್ಯನ ಇರಿದು ಹತ್ಯೆ: ಐವರು ಆರೋಪಿಗಳ ಬಂಧನ

Crime news: ಕ್ರಿಮಿನಲ್ ದಾಖಲೆ ಹೊಂದಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸದಸ್ಯ ಕಣ್ಣನ್ ಅವರನ್ನು ಗುಂಪೊಂದು ಇರಿದು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಸೆಪ್ಟೆಂಬರ್ 5 ರಂದು ಕಣ್ಣನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ ದ್ವಿಚಕ್ರ ವಾಹನಗಳಲ್ಲಿ ಬಂದ ಗುಂಪೊಂದು ಅವರ ಮೇಲೆ ದಾಳಿ ನಡೆಸಿತು.

Chikkaballapur Accident: ಚಿಕ್ಕಬಳ್ಳಾಪುರದ ಬಳಿ ಭೀಕರ ಅಪಘಾತ; ಓಮ್ನಿ- ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಮಹಿಳಾ ಕಾರ್ಮಿಕರ ದುರ್ಮರಣ

ಚಿಕ್ಕಬಳ್ಳಾಪುರದ ಬಳಿ ಓಮ್ನಿ- ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಕೊತ್ತನೂರು ಗೇಟ್ ಸಮೀಪ ದುರ್ಘಟನೆ ನಡೆದಿದೆ. ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಅಪಘಾತ ನಡೆದಿದ್ದು, ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಬಗ್ಗೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ: 12 ಮಂದಿ ಬಲಿ, 16ಕ್ಕೂ ಹೆಚ್ಚು ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತಕ್ಕೆ 12 ಮಂದಿ ಬಲಿ, 16ಕ್ಕೂ ಹೆಚ್ಚು ಮಂದಿಗೆ ಗಾಯ

Road Accident: ತೀರ್ಥಯಾತ್ರೆ ಮುಗಿಸಿ ವಾಪಸಾಗುತ್ತಿದ್ದ 12 ಯಾತ್ರಿಕರು ಅಪಘಾತಕ್ಕೆ ಬಲಿಯಾಗಿದ್ದಾರೆ. ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಕ್ಯಾಂಟರ್ ಉರುಳಿಬಿದ್ದ ಪರಿಣಾಮ 12 ಜನರು ಮೃತಪಟ್ಟು, 16ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಪತ್ನಿಯನ್ನು ಹತ್ಯೆ ಮಾಡಿ ಬೆರಳುಗಳನ್ನು ಕತ್ತರಿಸಿ, ರುಂಡ ಫ್ರಿಡ್ಜ್‌ನಲ್ಲಿಟ್ಟ ಪಾಪಿ ಪತಿ; ಮನೆಯೊಳಗೆ ಹೋದವರಿಗೆ ಕಾದಿತ್ತು ಶಾಕ್‌!

ಪತ್ನಿಯನ್ನು ಹತ್ಯೆ ಮಾಡಿ ತಲೆಯನ್ನು ಫ್ರಿಡ್ಜ್‌ನಲ್ಲಿಟ್ಟ ಪಾಪಿ ಪತಿ

Husband Kills Wife: ಮನೆಯನ್ನು ಶೋಧಿಸಿದ ಪೊಲೀಸರು, ರೆಫ್ರಿಜರೇಟರ್‌ನಲ್ಲಿ ಇರಿಸಲಾಗಿದ್ದ ಪಾಲಿಥಿನ್ ಚೀಲದಲ್ಲಿದ್ದ ಮಹಿಳೆಯ ತಲೆಯನ್ನು ವಶಪಡಿಸಿಕೊಂಡರು. ಆಕೆಯ ಪತಿ ಎಲ್ಲಿಯೂ ಪತ್ತೆಯಾಗಿಲ್ಲ. ಸೆಪ್ಟೆಂಬರ್ 4ರಂದು ಆತನನ್ನು ಕೊನೆಯ ಬಾರಿಗೆ ನೋಡಿರುವುದಾಗಿ ನೆರೆಹೊರೆಯವರು ಹೇಳಿದರು. ಬಳಿಕ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆ.

ಮಿಯಾಮಿ ಏರ್‌ಪೋರ್ಟ್‌ನಲ್ಲಿ ರನ್‌ವೇಯಿಂದ ಜಾರಿ ಹೊತ್ತಿ ಉರಿದ ವಿಮಾನ: ಐವರು ಸಾವು

ಫ್ಲೋರಿಡಾದಲ್ಲಿ ವಿಮಾನ ದುರಂತ: ಐವರು ಸಾವು

ಫ್ಲೋರಿಡಾದಲ್ಲಿ ಮಿಯಾಮಿ ಏರ್​​ಪೋರ್ಟ್​ನಲ್ಲಿ ಸರಕು ವಿಮಾನವೊಂದು ರನ್‌ವೇಯಿಂದ ಜಾರಿ ಅಪಘಾತಕ್ಕೀಡಾಗಿದೆ. ಇದರಿಂದ ಐದು ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಅಮೆಜಾನ್ ಪ್ರೈಮ್ ಏರ್ ಕಾರ್ಗೋ ವಿಮಾನವು ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿ ಅಪಘಾತಕ್ಕೀಡಾಗಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.

ʼʼಸಹಕರಿಸಿದರೆ ಹೆಚ್ಚುವರಿ ಅಂಕʼʼ: ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Professor Accused of Assaulting Students: ಲೈಂಗಿಕ ಬೇಡಿಕೆಗಳಿಗೆ ಒಪ್ಪಿಕೊಂಡರೆ ಪರೀಕ್ಷೆಯಲ್ಲಿ ಹೆಚ್ಚುವರಿ ಅಂಕಗಳನ್ನು ನೀಡುವುದಾಗಿ ದೆಹಲಿಯ ಜೆಎನ್‌ಯು ಕಾಲೇಜಿನ ಪ್ರಾಧ್ಯಾಪಕನೊಬ್ಬ ಆಮಿಷ ಒಡ್ಡಿದ ಮತ್ತು ತರಗತಿಗಳಲ್ಲಿ ಅಸಭ್ಯವಾಗಿ ಮಾತನಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿವಿ ರಜೆಯ ನಂತರ ತರಗತಿಗಳು ಪುನರಾರಂಭಗೊಂಡಾಗ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿತು.

ತಪ್ಪಿದ ಭಾರಿ ದುರಂತ; ಬಿಹಾರದಲ್ಲಿ ಹಳಿ ತಪ್ಪಿದ ಸಿಕ್ಕಿಂ ಮಹಾನಂದ ಎಕ್ಸ್‌ಪ್ರೆಸ್‌ ರೈಲು

ಹಳಿ ತಪ್ಪಿದ ರೈಲು ಬೋಗಿ; ತಪ್ಪಿದ ಭಾರಿ ದುರಂತ

Indian railway: ಬಿಹಾರದಲ್ಲಿ ಸಿಕ್ಕಿಂ ಮಹಾನಂದ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ದೆಹಲಿ- ಬೌಂಡ್ ಮಹಾನಂದ ಎಕ್ಸ್‌ಪ್ರೆಸ್‌ನ ಎಂಜಿನ್ ಮೂರು ಬೋಗಿಗಳು ಹಳಿ ತಪ್ಪಿದ್ದು, ಕೆಲಕಾಲ ಆತಂಕ ಮೂಡಿಸಿತ್ತು. ಮಾಹಿತಿ ತಿಳಿದ ತಕ್ಷವೇ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ರಕ್ಷಣೆ, ದುರಸ್ತಿ ಕಾಯಾಚರಣೆ ನಡೆಸಿ ಸಮಸ್ಯೆಯನ್ನು ನಿವಾರಿಸಿದರು.

ಊಟ ಮಾಡುವಾಗಲೇ ಹೃದಯಾಘಾತ; ಮಗಳ ಮುಂದೆಯೇ ಪ್ರಾಣಬಿಟ್ಟ ತಂದೆ, ಆಘಾತಕಾರಿ ವಿಡಿಯೊ ಇಲ್ಲಿದೆ!

ಊಟ ಮಾಡುವಾಗಲೇ ಹೃದಯಾಘಾತ; ಮಗಳ ಮುಂದೆಯೇ ತಂದೆ ಸಾವು!

Ramanagara News: ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಲಿಂಗಯ್ಯ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಗಳ ಕಣ್ಣೆದುರೇ ತಂದೆಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜನ್ಮಾಷ್ಟಮಿ ಆಚರಣೆ ವೇಳೆ ದುರಂತ; ಮುಂಬೈಯಲ್ಲಿ ಬಾಲಕ ಸೇರಿ ಇಬ್ಬರು ಸಾವು, 212 ಮಂದಿ ಗಾಯ

ಮುಂಬೈ ದಹಿ ಹಂಡಿ ದುರಂತದಲ್ಲಿ ಇಬ್ಬರು ಸಾವು

Mumbai dahi handi accident: ಜನ್ಮಾಷ್ಟಮಿ ಹಬ್ಬದ ಭಾಗವಾಗಿ ಮಾನವ ಪಿರಮಿಡ್ ರಚಿಸಿ ಮಾಡಲಾಗುವ ಮುಂಬೈ ದಹಿ ಹಂಡಿಯಲ್ಲಿ ನಡೆದ ದುರಂತದಲ್ಲಿ 7 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ 168 ಮತ್ತು ಥಾಣೆ ನಗರದಲ್ಲಿ 44 ಮಂದಿ ಸೇರಿ 212 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಉದ್ಯಮಿ ಕೇತನ್‌ ಅಗರ್ವಾಲ್‌ ಹತ್ಯೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ; ಭಾವಿ ಪತ್ನಿ, ಆಕೆಯ ಪ್ರಿಯಕರನ ಜತೆ ಇದೀಗ 3ನೇ ಆರೋಪಿಯ ಬಂಧನ

ಕೇತನ್ ಅಗರ್ವಾಲ್ ಕೊಲೆ: ಮೂರನೇ ಆರೋಪಿ ಅರೆಸ್ಟ್

Pune Fort Murder: ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಿಂದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ತ‍ಳ್ಳಿ ಹತ್ಯೆಗೈದ ಪ್ರಕರಣದಲ್ಲಿ ಮೂರನೇ ಆರೋಪಿ ರಿತೇಶ್ ಹಂಗೆನನ್ನು ಪೊಲೀಸರು ಬಂಧಿಸಿದ್ದಾರೆ. ಕೇತನ್ ಹತ್ಯೆಯ ಸಂಚಿನ ಬಗ್ಗೆ ರಿತೇಶ್‌ಗೆ ಮೊದಲೇ ಮಾಹಿತಿ ಇತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಮೊಬೈಲ್ ಚಾಟ್‌ಗಳ ಫೊರೆನ್ಸಿಕ್ ಪರಿಶೀಲನೆಯಲ್ಲಿ ಕೇತನ್‌ನನ್ನು ಕೋಟೆಯಿಂದ ತಳ್ಳುವ ಹಾಗೂ ಸಾಕ್ಷ್ಯ ನಾಶಪಡಿಸುವ ಕುರಿತು ರಿತೇಶ್‌ ಜತೆ ನಡೆಸಿದ ಚರ್ಚೆ ಪತ್ತೆಯಾಗಿದೆ. ಹೀಗಾಗಿ ರಿತೇಶ್‌ನನ್ನು ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Bagepally Crime: ಹಾಡಹಗಲೇ ವ್ಯಕ್ತಿಯ ಕತ್ತು ಕೊಯ್ದು ಕೊಲೆ: ಬಾಗೇಪಲ್ಲಿಯಲ್ಲಿ ಬೆಚ್ಚಿಬೀಳಿಸಿದ ಘಟನೆ; ಆರೋಪಿಗಳ ಪತ್ತೆಗೆ ಪೊಲೀಸರ ಶೋಧ

ಹಾಡಹಗಲೇ ವ್ಯಕ್ತಿಯ ಕತ್ತು ಕೊಯ್ದು ಕೊಲೆ

ಪಟ್ಟಣದ ಗೂಳೂರು ರಸ್ತೆಯ ರಾಯಲ್ ಫಂಕ್ಷನ್ ಹಾಲ್ ಸಮೀಪದ ನಿವಾಸಿ ನಾಗರಾಜ್ (45) ಮೃತ ವ್ಯಕ್ತಿ. ಮೂಲತಃ ಗುಗ್ಯಂಪಲ್ಲಿ ಗ್ರಾಮದವರಾದ ನಾಗರಾಜ್ ಅವರು ಕೊಂಡರೆಡ್ಡಿಪಲ್ಲಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಬಾರ್‌ವೊಂದರ ಸಮೀಪ ಇದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಕಿರುಕುಳ, ಹಲ್ಲೆ, ಬೆದರಿಕೆ, ವಿದ್ವೇಷದ ಪೋಸ್ಟ್‌; ಯಾರು ಈ ಇನ್‌ಫ್ಲುಯೆನ್ಸರ್‌ ಸ್ವತಂತ್ರ ಭಾರದ್ವಾಜ್‌? ಏನಿದು ವಿವಾದ?

ಯಾರು ಈ ಖಟ್ಟರ್‌ ಹಿಂದೂವಾದಿ ಸ್ವತಂತ್ರ ಭಾರದ್ವಾಜ್‌?

Swatantra Bhardwaj: ಜುಲೈಯಲ್ಲಿ ದೆಹಲಿಯ ಜಂತರ್‌ ಮತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಿಜೆಪಿ ವಿದ್ಯಾರ್ಥಿ ನಾಯಕಿ ನಿಶು ಅಜಾದ್‌ ತಂದೆ ಮೇಲೆ ಹಲ್ಲೆ ನಡಸಿದ ಆರೋಪಕ್ಕೆ ಸಂಬಂಧಿಸಿದಂತೆ, ಬಲಪಂಥೀಯ ಇನ್‌ಫ್ಲುಯೆನ್ಸರ್‌ ಸ್ವತಂತ್ರ ಭಾರತದ್ವಾಜ್‌ನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏನಿದು ಪ್ರಕರಣ? ಸ್ವತಂತ್ರ ಭಾರತದ್ವಾಜ್‌ ಹಿನ್ನೆಲೆ ಏನು? ಇಲ್ಲಿದೆ ವಿವರ.

ವಿದ್ಯುತ್ ದೀಪಗಳ ಅಲಂಕಾರ ವೇಳೆ ದುರಂತ: ದೇವಸ್ಥಾನದ ಗೋಪುರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ದೇವಸ್ಥಾನದ ಗೋಪುರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಮೃತರನ್ನು ಪಟ್ಟಣದ ಮೂರನೇ ವಾರ್ಡ್‌ನ ಬೆಟ್ಟದ ಕೆಳಗಿನ ಪೇಟೆ ನಿವಾಸಿ ರಹಮತ್ (30) ಎಂದು ಗುರುತಿಸಲಾಗಿದೆ. ಸಂತೆ ಬೀದಿಯ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರದ ವಿಶೇಷ ಪೂಜೆ ಯ ಹಿನ್ನೆಲೆಯಲ್ಲಿ ದೀಪಾಲಂಕಾರ ಕಾರ್ಯವನ್ನು ರಹಮತ್ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಸುಮಾರು 7.50ರ ವೇಳೆಗೆ ಗೋಪುರದ ಮೇಲೆ ದೀಪಗಳನ್ನು ಅಳವಡಿಸುತ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 16 ವರ್ಷದ ಕಾಮುಕನನ್ನು ಓಡಿಸಿದ ಬೀದಿನಾಯಿಗಳು; ವೈರಲ್‌ ವಿಡಿಯೊ ಇಲ್ಲಿದೆ

ಕಿರುಕುಳ ನೀಡುತ್ತಿದ್ದ ಬಾಲಕನಿಂದ ಸಂತ್ರಸ್ತೆಯನ್ನು ಕಾಪಾಡಿದ ನಾಯಿಗಳು

Stray Dogs Save Victim: ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಅಪ್ರಾಪ್ತ ವಯಸ್ಕ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಬೀದಿನಾಯಿಗಳು ಆಕೆಯನ್ನು ಕಾಪಾಡಿದ್ದು, ಆರೋಪಿಯನ್ನು ಓಡಿಸಿವೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶ್ವಾನಗಳು ನಿರಂತರ ಬೊಗಳುವ, ನಡೆಸುವ ಮೂಲಕ ಕಾಮುಕನನ್ನು ಅಲ್ಲಿಂದ ಓಡಿಹೋಗುವಂತೆ ಮಾಡಿವೆ. ಸದ್ಯ ಈ ಘಟನೆಯ ವಿಡಿಯೊ ವೈರಲ್‌ ಆಗಿದೆ.

ಬದ್ಗಾಮ್‌ ಎನ್‌ಕೌಂಟರ್‌ನಲ್ಲಿ ಸತ್ತ ಉಗ್ರನ ಗುರುತು ಪತ್ತೆ: ಲಷ್ಕರ್-ಎ-ತೊಯ್ಬಾ ಸದಸ್ಯ ಯಾಸಿರ್‌ ಹತನಾಗಿದ್ದು ಹೇಗೆ?

ಬದ್ಗಾಮ್‌ ಎನ್‌ಕೌಂಟರ್‌ನಲ್ಲಿ ಹತ ಉಗ್ರ ಪಾಕಿಸ್ತಾನದ ಯಾಸಿರ್‌

Budgam Encounter: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್‌ ಮತ್ತು ಸಿಆರ್‌ಪಿಎಫ್‌ ಜಂಟಿಯಾಗಿ ಸಡಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಹತನಾದ ಉಗ್ರನನ್ನು, ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸದಸ್ಯ ಯಾಸಿರ್‌ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಡ್ಯಾನ್ಸ್‌ ತರಗತಿಗೆ ಹಾಜರಾಗಲು ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪಾಪಿ ಪತಿ; ಮದ್ಯದ ಅಮಲಿನಲ್ಲಿ ಕೃತ್ಯ

ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನೇ ಕೊಂದ ಪತಿ!

Crime News: ಡ್ಯಾನ್ಸ್‌ ತರಗತಿಗೆ ಹೋಗಲು ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕುಡಿದ ಅಮಲಿನಲ್ಲಿ ಹತ್ಯೆ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿಈ ಘೋರ ಕೃತ್ಯ ನಡೆದಿದೆ. ನೃತ್ಯ ತರಗತಿಗೆ ಹಾಜರಾಗುವ ಕಾರಣ ನೀಡಿ ಪತ್ನಿ ಅಡುಗೆ ಮಾಡಲು ನಿರಾಕರಿಸಿದ್ದಳು ಎನ್ನಲಾಗಿದೆ.

ಸಾಲದ ಬಡ್ಡಿ ಪಾವತಿಸದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ವಿಡಿಯೊ ರೆಕಾರ್ಡ್ ಮಾಡಿದ ಕಿಡಿಗೇಡಿಗಳು; ಬೆಂಗಳೂರಿನಲ್ಲೊಂದು ರಾಜ್ಯವೇ ತಲೆತಗ್ಗಿಸುವ ಘಟನೆ

ಸಾಲದ ಬಡ್ಡಿ ಪಾವತಿಸದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

Woman Assaulted: ಸಾಲದ ಬಡ್ಡಿ ಪಾವತಿಸದ ಕಾರಣ ಯುವತಿಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸಂತ್ರಸ್ತೆ ಎರಡು ವರ್ಷಗಳ ಹಿಂದೆ ರೇಷ್ಮಾ ಅವರಿಂದ 1 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಕಳೆದ ಆರು ತಿಂಗಳಿನಿಂದ ಬಡ್ಡಿ ಪಾವತಿಸಿರಲಿಲ್ಲ ಎನ್ನಲಾಗಿದೆ.

Parashurama caught in Lokayukta trap: ಲೋಕಾಯುಕ್ತ ಬಲೆಗೆ ಬಿದ್ದ ಪರಶುರಾಮ; ಪರಾರಿಯಾಗಿದ್ದ ವೀರೇಶನ ವಿರುದ್ಧವೂ ಇಲಾಖಾ ಕ್ರಮ

ಲಂಚ ಪ್ರಕರಣ: ಇಬ್ಬರು ಪೊಲೀಸ್ ಪೇದೆ ಅಮಾನತು

ಸೆ.3ರಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ರೂಢಿಗತ ಅಪರಾಧಿ ಕಾರ್ತಿಕ ಎಂಬಾತನಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿತ್ತು. ಒಂದು ಲಕ್ಷ ರೂ. ನೀಡುವಂತೆ ಒತ್ತಡ ಹೇರಲಾಗಿತ್ತು ಎನ್ನಲಾಗಿದ್ದು, ಈ ಪೈಕಿ ಈಗಾಗಲೇ ₹50 ಸಾವಿರ ಪಡೆದಿದ್ದರು. ಬಳಿಕ ಮತ್ತೆ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Accident: ಬೊಲೆರೋ ಪಲ್ಟಿ: 10 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಬೊಲೆರೋ ಪಲ್ಟಿ: 10 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳ ಮೂಲದ 10 ಮಂದಿ ಕಾರ್ಮಿಕರು ಹಳೆ ಉಪ್ಪಾರಹಳ್ಳಿಯಿಂದ ದೊಡ್ಡಬಳ್ಳಾ ಪುರದ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದ ಮುಂಭಾಗದ ಟೈರ್ ಏಕಾಏಕಿ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ರಸ್ತೆ ಬದಿಗೆ ಉರುಳಿ 3–4 ಬಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

Chamarajanagar News: ಪ್ರೀತಿ ಹೆಸರಿನಲ್ಲಿ ಕಿರುಕುಳ; ಚಾಮರಾಜನಗರದಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ಕಾಟಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಮೊಟ್ಟೆಯಲ್ಲಿ ಹುಳು ಪತ್ತೆ: ಬ್ಲಿಂಕಿಟ್ ವಿರುದ್ಧ ದೂರು; ಮಂಗಳೂರಿನ ಆಹಾರ ಮಳಿಗೆ ಮೇಲೆ ಅಧಿಕಾರಿಗಳ ದಾಳಿ

ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆ

ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗ್ರಾಹಕರು ದೂರು ನೀಡಿದ ಬಳಿಕ ತನಿಖೆ ಹಿನ್ನೆಲೆಯಲ್ಲಿ ಆಹಾರ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಳಿಗೆಯಲ್ಲಿ ಹಾನಿಗೊಳಗಾಗಿರುವ ಮೊಟ್ಟೆಗಳು ಕಂಡು ಬಂದಿದ್ದರಿಂದ ಶೇಖರಣಾ ಕೊಠಡಿಯನ್ನು ಸೀಲ್ ಮಾಡಲಾಗಿದೆ.

ತೆಲಂಗಾಣ ಸೇನಾ ನೆಲೆಯಿಂದ 4 ಎಕೆ-203 ರೈಫಲ್‌ ಸೇರಿ11 ಶಸ್ತ್ರಾಸ್ತ್ರಗಳ ಕಳವು

ಸೇನಾ ನೆಲೆಯಿಂದ ಶಸ್ತ್ರಾಸ್ತ್ರಗಳ ಕಳವು

Army Weapons Theft: ತೆಲಂಗಾಣದ ಸಿಕಂದರಾಬಾದ್ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮದ್ರಾಸ್ ರೆಜಿಮೆಂಟ್‌ನ ಅತ್ಯಂತ ಸುರಕ್ಷಿತ ಶಸ್ತ್ರಾಗಾರದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಕಳವು ಮಾಡಲಾಗಿದೆ. ಈ ಬಗ್ಗೆ ತೆಲಂಗಾಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್‌ 30 ರಾತ್ರಿ ಕಳವು ನಡೆದಿರಬಹುದು ಎನ್ನಲಾಗಿದೆ.

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ನಗರದ ಕರೇಕಲ್ಲಹಳ್ಳಿ ಸಮೀಪದ ಇಡಗೂರು ಮುಖ್ಯರಸ್ತೆ ಬಳಿಯ ಹಳೆಯ ಮನೆಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಷ್ಮಾ (41), ಆಯೇಷಾ (25), ಕವಿತಾಬಾಯಿ (31) ಹಾಗೂ ಶಶಿಕುಮಾರ್ (23) ಎಂದು ಗುರುತಿಸಲಾಗಿದೆ.

Loading...