ಕೊಲ್ಲೂರು ಬಳಿ ಭೀಕರ ಅಪಘಾತ; ಕೇರಳ ಮೂಲದ ಇಬ್ಬರ ಸಾವು
Udupi News: ಉಡುಪಿ ಜಿಲ್ಲೆ ಕೊಲ್ಲೂರಿನ ಕೊಡಚಾದ್ರಿಯ ದಳಿ ಎಂಬಲ್ಲಿ ಭೀಕರ ಅಪಘಾತ ನಡೆದಿದೆ. ಮೀನು ಸಾಗಾಟದ ವಾಹನ ಹಾಗೂ ಜೀಪ್ ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಮಗಳ ನಾಪತ್ತೆಯ ಹಿಂದೆ ಫಾಜಿಲ್ ಮತ್ತು ಜಾರಾ ಎಂಬುವವರ ಕೈವಾಡ ಇರಬಹುದು ಎಂದು ಪೋಷಕರು ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಮೊಬೈಲ್ ಸಂಖ್ಯೆ ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಗಳನ್ನು ಹುಡುಕುವಲ್ಲಿ ನಿರತರಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ತಡವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.
ಚಿಂತಾಮಣಿ ನಗರದಲ್ಲಿ ನಡೆಸಿದ ಮಾರುಕಟ್ಟೆ ಸಮೀಕ್ಷೆಯ ವೇಳೆ,ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪವಿರುವ 'ಭರತ್ ಇಂಜಿನಿಯರಿಂಗ್ ವರ್ಕ್ಸ್ ಎಂಬ ಮಳಿಗೆಯಲ್ಲಿ ಫಿನೋಲೆಕ್ಸ್ ಬ್ರ್ಯಾಂಡ್ ಹೆಸರಿನ ನಕಲಿ ಸಬ್ಮರ್ಸಿಬಲ್ ಎಲೆಕ್ಟ್ರಿಕಲ್ ಕೇಬಲ್ಗಳನ್ನು ಉದ್ದೇಶಪೂರ್ವಕವಾಗಿ ಮಾರಾಟ ಮತ್ತು ವಿತರಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ರದ್ದಾಗಿದ್ದು, ಮನನೊಂದು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿಯೂ ಸೇರಿದ್ದಾನೆ. ರಾಜಸ್ಥಾನದ ಪ್ರದೀಪ್ ಮೇಘ್ವಾಲ್, ಉತ್ತರ ಪ್ರದೇಶದ ರಿತಿಕಾ ಮಿಶ್ರಾ ಮತ್ತು ದೆಹಲಿಯ ಅನ್ಶಿಕಾ ಪಾಂಡೆ ಆತ್ಮಹತ್ಯೆಗೆ ಶರಣಾದವರು.
ರಾಜಸ್ಥಾನದಲ್ಲಿ ವರ್ಷಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ಗೆ ಒಳಗಾಗಿ ಅಕ್ಕ ಆತ್ಮಹತ್ಯೆ ಮಾಡಿಕೊಂಡ ನಂತರ, ತಂಗಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾರ್ಚ್ನಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಜೋಧ್ಪುರದ ಗ್ರಾಮೀಣ ಪ್ರದೇಶದಲ್ಲಿ ಇಬ್ಬರು ಸಹೋದರಿಯರ ಸಾವು ಭಾರಿ ಉದ್ವಿಗ್ನತೆಯನ್ನು ಉಂಟು ಮಾಡಿದೆ.
ಕೊಡಗು ಜಿಲ್ಲೆಯ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನರಿಂದ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ತಮಿಳುನಾಡಿನಿಂದ ಜನರನ್ನು ಕರೆಸಲಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಾನಂದ ನೀಲಣ್ಣವರ ವಿರುದ್ಧ ಕೆಪಿಐಡಿ ಆಕ್ಟ್ ಸೆಕ್ಷನ್ 9, ಬಡ್ಸ್ ಆಕ್ಟ್ ಸೆಕ್ಷನ್ 21, (1), (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಂ ಅಸೋಸಿಯೇಟ್ಸ್ ಮೂಲಕ ಯಾವುದೇ ಸೆಬಿ, ಆರ್ಬಿಐ, ಸಹಕಾರ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸದೇ ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
ಗಾಯಗೊಂಡ ಸವಾರನನ್ನು ಶಿಡ್ಲಘಟ್ಟ ತಾಲ್ಲೂಕಿನ ಅಜಾದ್ ನಗರದ ನಿವಾಸಿ 27 ವರ್ಷದ ಅತೀಕ್ ಪಾಷಾ ಎಂದು ಗುರುಸಿಲಾಗಿದ್ದು,ಗಾಯಾಳುವನ್ನು ಕೂಡಲೇ ಚಿಂತಾಮಣಿಯ ಸಾರ್ವ ಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಚಿಂತಾಮಣಿ ಮೂಲಕ ಮರಗಮಲ್ಲಾಗೆ ಹೋಗುತ್ತಿದ್ದ ಎನ್ನಲಾಗಿದೆ.
Ulhasnagar Horror: 21ನೇ ಶತಮಾನದಲ್ಲಿದ್ದೀವಾ ಅಥವಾ ಇನ್ನು 7-8ನೇ ಶತಮಾನದಲ್ಲಿದ್ದೀವಾ ಎಂದು ಅನುಮಾನ ಪಡುವಂತಹ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ತಮ್ಮದೇ ಸಮುದಾಯದ ಯುವಕನೊಬ್ಬ ದೇವಸ್ಥಾನ ಪ್ರವೇಶಿಸಿರುವುದನ್ನು ಪ್ರಶ್ನಿಸಿರುವ ಗುಂಪೊಂದು ಮಹಿಳೆಯರಿಗೆ ಚಪ್ಪಲಿ ಹಾರ ಹಾಕಿ ಅರೆನಗ್ನ ಮೆರವಣಿಗೆ ಮಾಡಿ ಮಾನವೀಯತೆಯನ್ನೇ ಮರೆತು ಮೃಗೀಯವಾಗಿ ವರ್ತಿಸಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ.
ಮೇ.14ರಂದು ಮಧ್ಯಾಹ್ನ ಸುಮಾರು೧:೩೦ರ ವೇಳೆಗೆ ಹೇಮಂತ್ ಕುಮಾರ್ ಅವರು ಚಿಂತಾಮಣಿ ಯ ಸಿವಿಲ್ ಬಸ್ ನಿಲ್ದಾಣದ ಬಳಿ ಇರುವ ಗುರು ಭವನದ ಮುಂಭಾಗ ರಸ್ತೆಯಲ್ಲಿ ನಿಂತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನೀನು ನಮ್ಮ ತಮ್ಮನಿಗೆ ಚಾಕುವಿನಿಂದ ಇರಿದು 24000 ರೂ. ಕಿತ್ತುಕೊಂಡಿದ್ದೀಯಾ, ನಿನ್ನ ಫೋಟೋ ನಮ್ಮ ಬಳಿ ಇದೆ" ಎಂದು ಸುಳ್ಳು ಆರೋಪ ಹೊರಿಸಿದ್ದಾರೆ.
Prisoner Attempts to Escape: ಆಸ್ಪತ್ರೆಯ ಹೊರಗೆ ಅಸ್ತಮಾ ಪೀಡಿತ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜೈಲು ಕೈದಿಯೊಬ್ಬ ಗುಂಡೇಟಿಗೆ ಬಲಿಯಾಗಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ. ವೈದ್ಯಕೀಯ ತಪಾಸಣೆಗಾಗಿ ಕರೆತಂದಾಗ ಆತ ಹಲ್ಲೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
West Bengal Over Loudspeaker Issue: ಮಸೀದಿಯಲ್ಲಿ ಧ್ವನಿವರ್ಧಕದ ಧ್ವನಿ ಮಿತಿಮೀರಿದ್ದಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಗುಂಪೊಂದು ಕಲ್ಲು ತೂರಾಟ ನಡೆಸಿ ಪೊಲೀಸ್ ಠಾಣೆಯನ್ನು ಧ್ವಂಸಗೊಳಿದ್ದು, ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ಶುಕ್ರವಾರ (ಮೇ 15) ರಾತ್ರಿ ಘಟನೆ ನಡೆದಿದೆ.
Haveri Jewellery shop theft: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್ನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.
Viral Vide: ಕಾಮುಕ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಆರೋಪಿಯನ್ನು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು ಔಪಚಾರಿಕ ದೂರು ದಾಖಲಿಸಲಾಗಿದೆ. ಈ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಮರುದಿನವೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ತೀವ್ರವಾಗಿ ಥಳಿಸಿದ್ದಾರೆ..
ಮಹಾರಾಷ್ಟ್ರದ ಮುಂಬ್ರಾದಲ್ಲಿ ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ 24 ವರ್ಷದ ಅರ್ಬಾಜ್ ಖಾನ್ನ ಕೊಳೆತ ಶವ ಚರಂಡಿಯಲ್ಲಿದ್ದ ಹಸಿರು ಡ್ರಮ್ನಲ್ಲಿ ಪತ್ತೆಯಾಗಿ ಭಾರೀ ಸಂಚಲನ ಮೂಡಿಸಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಹಣಕಾಸು ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ.
ಅಭ್ಯಾಸದ ವೇಳೆ ಗುಂಡು ಹಾರಿ ಸೇನಾಧಿಕಾರಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಜೂನಿಯರ್ ಕಮಿಷನರ್ ಅಧಿಕಾರಿಗಳಲ್ಲಿ ಅತ್ಯುನ್ನತ ಸುಬೇದಾರ್ ಮೇಜರ್ ಹುದ್ದೆ ಹೊಂದಿದ್ದ ಅಧಿಕಾರಿಯನ್ನು ಓಂ ಬಹದ್ದೂರ್ ಖಾಂಡ್ ಮೃತರು. ವಾರ್ಧಾ ಜಿಲ್ಲೆಯ ಸೆಂಟ್ರಲ್ ಮದ್ದುಗುಂಡು ಡಿಪೋದ ಪುಲ್ಗಾಂವ್ ಫೈರಿಂಗ್ ರೇಂಜ್ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
Crime News: ಮಧ್ಯಪ್ರದೇಶದ ಗ್ವಾಲಿಯರ್ನಿಂದ ಅಪಹರಿಸಲ್ಪಟ್ಟ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನ್ನ ಮಗಳನ್ನು ಬೆಂಗಳೂರಿಗೆ ಕರೆದೊಯ್ಯುವುದಾಗಿ ಆಮಿಷವೊಡ್ಡಲಾಗಿದೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ನೀಟ್-ಯುಜಿ 2026 ಪರೀಕ್ಷೆ ರದ್ದುಗೊಂಡಿದ್ದರಿಂದ ನೊಂದ ರಾಜಸ್ಥಾನದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ ನೀಟ್ ಪರೀಕ್ಷೆಯಲ್ಲಿ 650 ಅಂಕಗಳನ್ನು ಗಳಿಸುವ ನಿರೀಕ್ಷೆ ಹೊಂದಿದ್ದನು ಎನ್ನಲಾಗಿದೆ. ಮನೆಯಲ್ಲಿ ತಮ್ಮ ಸಹೋದರಿಯ ಸ್ಕಾರ್ಫ್ ಬಳಸಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಆತ್ಮಹತೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Belagavi News: ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಸುಮಾರು 8 ಗಂಟೆಳ ದಾಖಲೆ ಪರಿಶೀಲನೆ ನಡೆಸಲಾಗಿತ್ತು.