ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಪತ್ನಿಯನ್ನು ಕೊಂದು ಚಾವಣಿಯಿಂದ ಬಿದ್ದು ಮೃತಪಟ್ಟಳು ಎಂದು ಕಥೆ ಕಟ್ಟಿದ ಸೈನಿಕ

ಪತ್ನಿಯನ್ನು ಹತ್ಯೆ ಮಾಡಿ ಕಥೆ ಕಟ್ಟಿದ ಸೈನಿಕ

Crime News: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೈನಿಕನೊಬ್ಬ ರಜೆಯಲ್ಲಿದ್ದಾಗ ತನ್ನ ಮನೆಯಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾನೆ. ಬಳಿಕ ಚಾವಣಿಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಿಂಬಿಸಿರುವ ಘಟನೆ ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ, ಮೃತಳ ಪತಿ ಅಮರ್‌ಜಿತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

“ಹೆತ್ತವರನ್ನು ಸ್ವರ್ಗಕ್ಕೆ ಕಳುಹಿಸಿದ್ದೇನೆ”: ಪೋಷಕರನ್ನು ಇರಿದು ಹತ್ಯೆಗೈದ ಪಾಪಿ ಪುತ್ರನ ಹೇಳಿಕೆಗೆ ಬಿಚ್ಚಿಬಿದ್ದ ಪೊಲೀಸರು

ಪೋಷಕರನ್ನು ಇರಿದು ಹತ್ಯೆ ಮಾಡಿದ ಪಾಪಿ ಪುತ್ರ

Crime News: 29 ವರ್ಷದ ವ್ಯಕ್ತಿಯೊಬ್ಬ ತನ್ನ ಹೆತ್ತವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೇರಳಂನ ಇಡುಕ್ಕಿಯಲ್ಲಿ ನಡೆದಿದೆ. ಮದ್ಯ ಮತ್ತು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಅಜೀಶ್, ಈ ಹಿಂದೆ ವ್ಯಸನ ಮುಕ್ತ ಶಿಬಿರಕ್ಕೆ ದಾಖಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣ ಕಳವು

ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣ ಕಳವು

ರಾತ್ರಿ ವೇಳೆ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ಬೆಳಗ್ಗೆ ದೇವಾಲಯಕ್ಕೆ ಬಂದ ಸ್ಥಳೀಯರು ಕಳ್ಳತನ ನಡೆದಿರುವು ದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್ಐ ಸುನೀಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಗಗನಸಿಂಧು ಕೂಡ ಸ್ಥಳಕ್ಕೆ ಭೇಟಿ ನೀಡಿ ದೇವಾಲಯದ ಪರಿಸ್ಥಿತಿಯನ್ನು ಪರಿಶೀಲಿಸಿದರು.

Accident: ಆದಿಯೋಗಿ ದರ್ಶನದ ಬಳಿಕ ದುರಂತ: ಕ್ಯಾಂಟರ್‌ಗೆ ಸಿಲುಕಿ ಬೈಕ್ ಸವಾರಿಬ್ಬರು ಸಾವು

ಕ್ಯಾಂಟರ್‌ಗೆ ಸಿಲುಕಿ ಬೈಕ್ ಸವಾರಿಬ್ಬರು ಸಾವು

ಆದಿಯೋಗಿ ದರ್ಶನ ಮುಗಿಸಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ಹೆದ್ದಾರಿ ದಾಟುವಾಗ ಬಾಗೇಪಲ್ಲಿ ಕಡೆಯಿಂದ ಬಂದ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕ್ಯಾಂಟರ್‌ನ ಚಕ್ರಗಳಡಿ ಸಿಲುಕಿದ್ದು, ಸುಮಾರು 100 ಮೀಟರ್‌ ವರೆಗೆ ಎಳೆದುಕೊಂಡು ಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ʼʼಅಂತ್ಯ ಸಂಸ್ಕಾರದಲ್ಲಿ ಪತಿ ಭಾಗವಹಿಸಬಾರದುʼʼ: ಡೆತ್‌ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ

ಡೆತ್‌ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ; ಕೌಟುಂಬಿಕ ಕಲಹದ ಶಂಕೆ

Chikkaballapur News: ಕೌಟುಂಬಿಕ ಲಕಹದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು 26 ವರ್ಷದ ಮಮತಾಶ್ರೀ ಎಂದು ಗುರುತಿಸಲಾಗಿದೆ. ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮುಸ್ಲಿಂ ನಾಯಕ, ಪುತ್ರನ ಗುಂಡಿಟ್ಟು ಹತ್ಯೆ; ಉದ್ವಿಗ್ನ ಸ್ಥಿತಿ

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ, ಪುತ್ರನ ಗುಂಡಿಕ್ಕಿ ಹತ್ಯೆ

Crime News: ಕಾಂಗ್ರೆಸ್ ನಾಯಕ ಮತ್ತು ಅವರ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಯಿತು. ದಾಳಿಕೋರರು ಮೊದಲು ಗುಂಡು ಹಾರಿಸಿ ನಂತರ ಹರಿತವಾದ ಆಯುಧಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು.

'ʼಎಮ್ಮೆ ಥರ ಇದ್ದೀಯಾʼ': ಬಾಡಿ ಶೇಮಿಂಗ್‌ ಮಾಡಿ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

Crime News: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯನಾ ಮೇಲೆ ಹಲ್ಲೆ ನಡೆಸಲಾಗಿದೆ.

ಭೀಮಾ ತೀರದಲ್ಲಿ ಮತ್ತೆ ಹಂತಕರ ಅಟ್ಟಹಾಸ: ನಿವೃತ್ತ ಶಿಕ್ಷಕನ ಭೀಕರ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ

ನಿವೃತ್ತ ಶಿಕ್ಷಕನ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Crime News: ಭಾನುವಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ ಕಂಟೈನರ್ ಲಾರಿಗೆ ಆಟೋ ಡಿಕ್ಕಿ: 7 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

Road Accident: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯ ಚಾಂದ್ವಾ ಪ್ರದೇಶದ ಡೇರ್ಹ್ ತಂಗ್ವಾ ಘಾಟ್‌ನಲ್ಲಿ ಕಂಟೈನರ್ ಲಾರಿ ಮತ್ತು ಆಟೋರಿಕ್ಷಾ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಅತಿವೇಗ ಅಥವಾ ಚಾಲಕನ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ರಾಜಸ್ಥಾನದಲ್ಲಿ ಹೈಟೆಕ್ ಇಂಧನ ದರೋಡೆ: 20 ಟನ್ ಕಚ್ಚಾ ತೈಲಕ್ಕೆ ಕನ್ನ ಹಾಕಿದ ಖದೀಮರು; ಸಿಕ್ಕಿಬಿದ್ದಿದ್ದು ಹೇಗೆ?

ವಿಚಿತ್ರ ಕಳವು: 20 ಟನ್ ಕಚ್ಚಾ ತೈಲಕ್ಕೆ ಕನ್ನ ಹಾಕಿದ ಖದೀಮರು

Oil heist in Rajasthan: ರಾಜಸ್ಥಾನದ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅತ್ಯಂತ ಚಾಣಾಕ್ಷತನದಿಂದ ದೊಡ್ಡ ಮಟ್ಟದ ತೈಲ ದರೋಡೆ ನಡೆಸಿ ಸಿಕ್ಕಿಬಿದ್ದಿದೆ. 8 ಜನರ ಗ್ಯಾಂಗ್ ಬರೋಬ್ಬರಿ 20 ಟನ್ ಕಚ್ಚಾ ತೈಲವನ್ನು ಎಗರಿಸಿದೆ. ಸುಮಾರು 10 ಲಕ್ಷ ರುಪಾಯಿ ಮೌಲ್ಯದ ಕಚ್ಚಾ ತೈಲಕ್ಕೆ ಕನ್ನ ಹಾಕಿದ್ದು ಹೇಗೆ, ಬಳಿಕ ಸಿಕ್ಕಿ ಬಿದ್ದಿದ್ದು ಹೇಗೆ ಎನ್ನುವ ವಿವರ ಇಲ್ಲಿದೆ.

ನಾಪತ್ತೆಯಾಗಿದ್ದ ವೃದ್ಧ ದಂಪತಿ ಮನೆಯಲ್ಲೇ ಶವವಾಗಿ ಪತ್ತೆ; ಜೋಡಿ ಕೊಲೆಗೆ ಬೆಚ್ಚಿಬಿದ್ದ ಸ್ಥಳೀಯರು

ನಾಪತ್ತೆಯಾಗಿದ್ದ ವೃದ್ಧ ದಂಪತಿ ಮನೆಯಲ್ಲೇ ಶವವಾಗಿ ಪತ್ತೆ!

Crime News: ನಾಪತ್ತೆಯಾಗಿದ್ದ ದಂಪತಿ ಶವವಾಗಿ ಪತ್ತೆಯಾದ ಆಘಾತಕಾರಿ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯ ಪೂನವಾಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 65 ವರ್ಷದ ಲಹ್ರಿ ಲಾಲ್ ಪಲಿವಾಲ್ ಮತ್ತು 62 ವರ್ಷದ ರಾಧಾ ದೇವಿ ಎಂದು ಪೊಲೀಸರು ಗುರುತಿಸಿದ್ದಾರೆ. ಪಲಿವಾಲ್ ಜೀವನೋಪಾಯಕ್ಕಾಗಿ ಹಾಲು ಮಾರಾಟ ಮಾಡುತ್ತಿದ್ದರು.

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

Shivam Associates Scam: ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಹೀಗಾಗಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೇಶ, ಪಂಜಾಬ್‌ನ  ಶಾಂತಿ ಬಯಸದ ಸಾಕಷ್ಟು ಶಕ್ತಿಗಳಿವೆ: ಗುಂಡಿನ ದಾಳಿ ಬಳಿಕ ಸುಖಬೀರ್ ಸಿಂಗ್ ಬಾದಲ್ ಮೊದಲ ಪ್ರತಿಕ್ರಿಯೆ

ಎಲ್ಲವೂ ದೇವರ ಕೈಯಲ್ಲಿದೆ, ನಾನೀಗ ಹೆದರುವುದಿಲ್ಲ: ಸುಖಬೀರ್ ಸಿಂಗ್ ಬಾದಲ್

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ದಾಳಿಯ ಬಳಿಕ ಮೊದಲ ಬಾರಿಗೆ ಮಾತನಾಡಿದ ಅಕಾಲಿ ದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ನನಗೆ ಯಾವುದೇ ಭಯವಿಲ್ಲ. ನಾನು ಪರಿಪೂರ್ಣನಾಗಿದ್ದೇನೆ. ಪಂಜಾಬ್ ಮತ್ತು ಈ ದೇಶದಲ್ಲಿರುವ ಬಹಳಷ್ಟು ಶಕ್ತಿಗಳು ಇಲ್ಲಿ ಶಾಂತಿಯನ್ನು ಬಯಸುತ್ತಿಲ್ಲ ಎಂದು ಹೇಳಿದರು.

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿಯ ದುರಂತ ಅಂತ್ಯ: ಮೈಸೂರಿನಲ್ಲಿ ಯುವತಿ, ಕೇರಳದಲ್ಲಿ ಯುವಕ ಆತ್ಮಹತ್ಯೆ!

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿ ದುರಂತ ಅಂತ್ಯ!

ಪ್ರೀತಿಸಿ ಮದುವೆಯಾಗಲು ಸಿದ್ಧಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೇರಳದಲ್ಲಿ ಯುವಕ ಸಾವಿಗೆ ಶರಣಾಗಿದ್ದಾನೆ.

ಬಿಹಾರದಲ್ಲಿ ಪೊಲೀಸರ ಮೇಲೆ ಜನರಿಂದ ಕಲ್ಲು ತೂರಾಟ: ಬಂಧಿಸಲ್ಪಟ್ಟಿದ್ದ ಅಪರಾಧಿ ಬಿಡುಗಡೆ

ಬಿಹಾರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ

ಶಸ್ತ್ರಾಸ್ತ್ರ ವ್ಯವಹಾರ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿರುವ ಅಪರಾಧಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ ಸುಮಾರು 200 ಜನರ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಇದರಿಂದ ಅಪರಾಧಿ ತಪ್ಪಿಸಿಕೊಂಡಿರುವುದಾಗಿ ಬಿಹಾರ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಎಂ ಸುವೇಂದು ಅಧಿಕಾರಿ ಎಚ್ಚರಿಕೆ ಹೊರತಾಗಿಯೂ ಕೋಲ್ಕತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ

ಕೋಲ್ಕತ್ತಾದ ನೇತಾಜಿ ಪ್ರತಿಮೆ ಧ್ವಂಸ

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎಚ್ಚರಿಕೆ ನೀಡಿದ್ದರೂ ಕೂಡ ಕಿಡಿಗೇಡಿಗಳು ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್ ಪ್ರದೇಶದ ಮೂರು-ಮಾರ್ಗ ಕ್ರಾಸಿಂಗ್ ಬಳಿ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಇದು ಈಗ ಸ್ಥಳೀಯರು ಮತ್ತು ರಾಜಕೀಯ ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರಾಖಂಡದಲ್ಲಿ ಸುರಂಗದೊಳಗೆ ನುಗ್ಗಿದ ನೀರು: 7 ಮಂದಿ ಸಾವು, ಮೂವರು ಅಪಾಯದಲ್ಲಿ, ಹಲವರಿಗೆ ಗಾಯ

ಉತ್ತರಾಖಂಡದಲ್ಲಿ ಸುರಂಗದೊಳಗೆ ನೀರು ನುಗ್ಗಿ 7 ಮಂದಿ ಸಾವು

ಉತ್ತರಾಖಂಡದ ಚಮೋಲಿಯಲ್ಲಿ ಸುರಂಗದೊಳಗೆ ನೀರು ನುಗ್ಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುವಾರ ಸಂಜೆ 6.30 ರ ಸುಮಾರಿಗೆ ಜಲವಿದ್ಯುತ್ ಯೋಜನೆಗಾಗಿ ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಭಾರಿ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗಿದೆ. ಇದರಲ್ಲಿ ಇನ್ನು ಮೂರು ಮಂದಿ ಸಿಲುಕಿಕೊಂಡಿದ್ದಾರೆ.

ಎಐಯ ಕರಾಳ ಮುಖ ಡೀಪ್‌ಫೇಕ್: ಬಲಿಯಾಗದಿರಲು ಈ ಟಿಪ್ಸ್‌ ಫಾಲೋ ಮಾಡಿ

ಎಐ ಡೀಪ್‌ಫೇಕ್‌ಗಳ ಬಗ್ಗೆ ಎಚ್ಚರ

Deepfakes: ಎಐ ತಂತ್ರಜ್ಞಾನದ ದುರ್ಬಳಕೆಯಿಂದ ಡೀಪ್‌ಫೇಕ್ ವಂಚನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಡಿಯೊ, ಆಡಿಯೊ ಮತ್ತು ಫೋಟೊಗಳನ್ನು ಪರಿಶೀಲಿಸದೆ ನಂಬಬಾರದು ಎಂದು ಸಿಬಿಐ ಹಾಗೂ ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್ ಎಚ್ಚರಿಸಿದೆ. ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡದಿರುವುದು, ತುರ್ತು ಹಣ ವರ್ಗಾವಣೆ ತಪ್ಪಿಸುವುದು ಹಾಗೂ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಪರಿಶೀಲಿಸುವುದು ಅಗತ್ಯ. ವಂಚನೆಗೆ ಒಳಗಾದರೆ ತಕ್ಷಣ 1930ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು.

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

ಮಧು ತೇಜ್ ಸೋಮವಾರ ರಾತ್ರಿ ಸುಮಾರು 9.30ರ ವೇಳೆಗೆ ಲಾಡ್ಜ್‌ಗೆ ಆಗಮಿಸಿ, ತಾವು ಒಬ್ಬರೇ ಉಳಿದು ಬೆಳಗ್ಗೆ ಕೊಠಡಿ ಖಾಲಿ ಮಾಡುವುದಾಗಿ ತಿಳಿಸಿ ಕೊಠಡಿ ಪಡೆದಿದ್ದರು. ಆದರೆ ಮರುದಿನ ಬೆಳಗ್ಗೆಯಿಂದ ಕೊಠಡಿಯಿಂದ ಯಾವುದೇ ಚಲನವಲನ ಕಂಡುಬರದ ಹಿನ್ನೆಲೆಯಲ್ಲಿ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿರ ಲಿಲ್ಲ.

ಸ್ಯಾಂಡಲ್‌ವುಡ್‌ ನಟಿಯ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಕನ್ನಡದ ನಟಿಯ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಆರೋಪಿಯು ಕೂಡ ನಟಿಯ ಸಹೋದರಿ ವಿರುದ್ಧ ಬೆಂಗಳೂರಿನ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾನೆ. ತನಗೆ ಹಾಗೂ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಏರ್ ಇಂಡಿಯಾ ವಿಮಾನ ಟರ್ಬುಲೆನ್ಸ್‌ಗೆ ಕಾರಣ ಪತ್ತೆ: ಮಾದಕ ದ್ರವ್ಯ ಸೇವಿಸಿದ್ದ ಪೈಲಟ್; ಇನ್ಮುಂದೆ ಇನ್ನಷ್ಟು ಬಿಗಿಯಾಗಲಿದೆ ನಿಯಮ

ಗಾಂಜಾ ಸೇವಿಸಿದ್ದ ಏರ್ ಇಂಡಿಯಾ ವಿಮಾನ ಪೈಲಟ್

ಥೈಲ್ಯಾಂಡ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಇತ್ತೀಚೆಗೆ ಪ್ರಕ್ಷುಬ್ಧತೆಗೆ ಗುರಿಯಾಗಿದ್ದ ಪ್ರಕರಣದ ಕುರಿತು ತನಿಖೆ ವೇಳೆಯಲ್ಲಿ ವಿಮಾನದ ಪೈಲೆಟ್ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ಘಟನೆಯಲ್ಲಿ ವಿಮಾನವು ಸುಮಾರು 300 ಅಡಿಗಳಷ್ಟು ಕುಸಿದಿದ್ದು, 12 ಪ್ರಯಾಣಿಕರು ಗಾಯಗೊಂಡಿದ್ದರು.

200 ರುಪಾಯಿಯ ಮೀನು ಊಟಕ್ಕೆ 300 ರುಪಾಯಿ ಬಿಲ್: ರಣರಂಗವಾಯ್ತು ಹೋಟೆಲ್‌; ಗ್ರಾಹಕ- ಸಿಬ್ಬಂದಿಯ ಮಾರಾಮಾರಿಯ ವಿಡಿಯೊ ವೈರಲ್‌

200 ರುಪಾಯಿಯ ಊಟಕ್ಕೆ 300 ರುಪಾಯಿ ಬಿಲ್; ಮುಂದೇನಾಯ್ತು?

Viral News: ಹೋಟೆಲ್‌ಗೆ ಬಂದ ಗ್ರಾಹಕರಿಗೆ ಮೀನಿನ ಖಾದ್ಯ ಆರ್ಡರ್ ಮಾಡುವಾಗ 200 ರುಪಾಯಿ ಎಂದು ಹೇಳಲಾಗಿತ್ತು. ಆದರೆ ಊಟ ಮುಗಿಸಿ ಬಿಲ್ ನೋಡಿದಾಗ 300 ರುಪಾಯಿ ಎಂದು ನಮೂದಿಸಲಾಗಿತ್ತು. ಇದರಿಂದ ಕೆರಳಿದ ಗ್ರಾಹಕ ಹೋಟೆಲ್‌ ಸಿಬ್ಬಂದಿ ಜತೆ ಜಗಳ ಆರಂಭಿಸಿದ್ದಾನೆ. ಘಟನೆಯಲ್ಲಿ ಹಲವು ಮಂದಿ ಜನರು ಗಾಯಗೊಂಡಿದ್ದು, ಪೀಠೋಪಕರಣಗಳು ಹಾನಿಗೊಳಗಾಗಿವೆ.

ಕೋಲ್ಕತಾ ಆರ್‌ಜಿಕರ್ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ:  ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಬಂಧನ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಟಿಎಂಸಿ ಮಾಜಿ ಶಾಸಕನ ಬಂಧನ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವಿದ್ಯಾರ್ಥಿನಿಯೊಬ್ಬಳ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಬಂಧನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್-ಖೈದಾಗೆ ಸೇರಿದ ಭಯೋತ್ಪಾದಕ ಸಂಘಟನೆಯಿಂದ 2025ರಲ್ಲಿ ಕೆಂಪು ಕೋಟೆ ಸ್ಫೋಟ; ವಿಶ್ವಸಂಸ್ಥೆಯ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಅಂಶ

ಅಲ್-ಖೈದಾ ಸಂಬಂಧಿತ ಗುಂಪಿನಿಂದ ಕೆಂಪು ಕೋಟೆ ಸ್ಫೋಟ

Delhi Red Fort Blast Case: 2025ರ ನವೆಂಬರ್‌ನಲ್ಲಿ ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದರು. ಉಗ್ರ ಸಂಘಟನೆ ಅಲ್‌ಖೈದಾಕ್ಕೆ ಸೇರಿದ ಗುಂಪಿನಿಂದ ಈ ದಾಳಿ ನಡೆದಿತ್ತು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೇಲ್ವಿಚಾರಣಾ ತಂಡ ತಿಳಿಸಿದೆ.

Loading...