ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Yadgir News: ಯಾದಗಿರಿಯಲ್ಲಿ ಕ್ವಾರಿಗೆ ಬಿದ್ದು ಇಬ್ಬರು ಬಾಲಕಿಯರು ಸೇರಿ ಮೂವರ ಸಾವು; ಬಟ್ಟೆ ತೊಳೆಯುವ ವೇಳೆ ದುರಂತ!

ಯಾದಗಿರಿಯಲ್ಲಿ ಕ್ವಾರಿಗೆ ಬಿದ್ದು ಇಬ್ಬರು ಬಾಲಕಿಯರು ಸೇರಿ ಮೂವರ ಸಾವು

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಸವನಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಬಟ್ಟೆ ತೊಳೆಯಲು ಮರಮ್ ಕ್ವಾರಿ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ.

ಅಮೆರಿಕದ ಓಹಿಯೋ ಉತ್ಸವದಲ್ಲಿ ಹರಿದ ನೆತ್ತರು; ಗುಂಡಿನ ದಾಳಿ ನಡೆಸಿದವರಿಗಾಗಿ ತೀವ್ರ ಶೋಧ

ಅಮೆರಿಕದ ಓಹಿಯೋ ಉತ್ಸವದಲ್ಲಿ ಗುಂಡಿನ ದಾಳಿ

Ohio Festival in US: ಅಮೆರಿಕದ ಪ್ರಸಿದ್ಧ ಓಹಿಯೋ ಉತ್ಸವದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Kalaburagi News: ಪೋಕ್ಸೊ ಕೇಸ್ ತನಿಖೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಕಾನ್ಸ್‌ಟೇಬಲ್, ಎಎಸ್‌ಐ ಎಸ್ಕೇಪ್!

ಲಂಚ ಸ್ವೀಕಾರದ ವೇಳೆ ಸಿಕ್ಕಿಬಿದ್ದ ಮಹಿಳಾ ಕಾನ್ಸ್‌ಟೇಬಲ್, ಎಎಸ್‌ಐ ಎಸ್ಕೇಪ್!

ಕಲಬುರಗಿಯಲ್ಲಿ ಚಿಂದಿ ಆಯುವ ಬಡ ಕುಟುಂಬದ ಬಾಲಕಿ ಮೇಲೆ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದ ತನಿಖೆಗೆ ಲಂಚ ಸ್ವೀಕರಿಸುವ ವೇಳೆ ಮಹಿಳಾ ಪೊಲೀಸ್‌ ಪೇದೆ ಸಿಕ್ಕಿಬಿದ್ದಿದ್ದಾರೆ.

ಅಮೆರಿಕದಲ್ಲಿ ನಕಲಿ ಆರ್ಡರ್ ಪಡೆದ ಪಿಜ್ಜಾ ವಿತರಣೆಗೆ ಹೋದ ಭಾರತೀಯ ಯುವಕನ ಕೊಲೆ

ಅಮೆರಿಕದಲ್ಲಿ ಭಾರತೀಯ ಯುವಕನ ಹತ್ಯೆ

ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಹೆಚ್ಚುವರಿ ಆದಾಯಕ್ಕಾಗಿ ವಾರಾಂತ್ಯದಲ್ಲಿ ಪಿಜ್ಜಾ ವಿತರಣೆ ಕೆಲಸ ಮಾಡುತ್ತಿದ್ದನು. ಆತನಿಗೆ ಶನಿವಾರ ನಕಲಿ ಆರ್ಡರ್ ಬಂದಿದ್ದು, ವಿತರಿಸಲೆಂದು ಹೋದಾಗ ಕೊಲೆಯಾಗಿದ್ದಾನೆ. ಈ ಘಟನೆ ಫಿಲಡೆಲ್ಫಿಯಾದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಆನ್‌ಲೈನ್‌ ಗೇಮ್‌ ಆಡಬೇಡ ಎಂದಿದ್ದಕ್ಕೆ ಅಪ್ಪ, ಅಕ್ಕನನ್ನೇ ಕೊಂದ  ದ್ವಿತೀಯ ಪಿಯುಸಿ ವಿದ್ಯಾರ್ಥಿ

ಅಪ್ಪ, ಅಕ್ಕನನ್ನೇ ಕೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ

ವಿದ್ಯಾರ್ಥಿಯೊಬ್ಬನಿಗೆ ಮೊಬೈಲ್ ನಲ್ಲಿ ಆನ್ ಲೈನ್ ಗೇಮ್ ಆಡದಂತೆ ಬುದ್ದಿವಾದ ಹೇಳಿದ್ದಕ್ಕೆ ತಂದೆ ಹಾಗೂ ಅಕ್ಕನನ್ನೇ ಕೊಲೆ ಮಾಡಿದ ಘಟನೆ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಅಯೋಧ್ಯೆ ಗ್ರಾಮದ ಸರಕಾರಿ ಶಾಲೆಯ ಸಮೀಪದ ಮನೆಯೊಂದರಲ್ಲಿ ಘಟನೆ ಜರುಗಿದೆ.

ಪಾಗಲ್ ಪ್ರೇಮಿಯ ಅಟ್ಟಹಾಸ: ಬಾಲಕಿ ಮೇಲೆ ಕೊಡಲಿಯಿಂದ ದಾಳಿ, ಛಾವಣಿಯಿಂದ ತಳ್ಳಿದ ದುಷ್ಕರ್ಮಿ

ಬಾಲಕಿಯ ಮೇಲೆ ಅಮಾನುಷ ಹಲ್ಲೆ, ಆರೋಪಿ ಬಂಧನ

ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಪಾಗಲ್‌ ಪ್ರೇಮಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿ, ಮನೆಯ ಛಾವಣಿಯಲ್ಲಿ ನೇಣು ಹಾಕಲು ಯತ್ನಿಸಿ ಬಳಿಕ ಕೆಳಗೆ ತಳ್ಳಿದ ಭೀಕರ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾಳಿ ವೇಳೆ ಗಾಂಜಾ ಕುಕ್ಕರ್‌ ಒಳಗೆ ಅಡಗಿಸಿಟ್ಟ ʼಬುದ್ಧಿವಂತʼ; ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ?

ಗಾಂಜಾ ಕುಕ್ಕರ್‌ ಒಳಗೆ ಅಡಗಿಸಿಟ್ಟು ಸಿಕ್ಕಿಬಿದ್ದ ʼಬುದ್ಧಿವಂತʼ

Viral News: ಅತೀ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿ ವ್ಯಕ್ತಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೇರಳಂನ ತ್ರಿಶ್ಶೂರ್‌ನಲ್ಲಿ ನಡೆದಿದೆ. ಪೊಲೀಸ್‌ ದಾಳಿಗೆ ವೇಳೆಗೆ ಗಾಂಜಾವನ್ನು ಪ್ರೆಷರ್‌ ಕುಕ್ಕರ್‌ಗೆ ಹಾಕಿದ್ದು ಅದರ ವಾಸನೆ ಬರುತ್ತಿದ್ದಂತೆ ಕೃತ್ಯ ಬೆಳಕಿಗೆ ಬಂದಿದೆ.

ಪಿಎಚ್‌ಡಿ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಧಾರವಾಡ ವಿವಿ ಪ್ರೊಫೆಸರ್‌ ವಿರುದ್ಧ ಗಂಭೀರ ಆರೋಪ

ವಿದ್ಯಾರ್ಥಿನಿ ಮೇಲೆ ಧಾರವಾಡ ವಿವಿ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

Dharwad university professor Case: ಧಾರವಾಡ ವಿವಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜ ತಂಗುದೊರೈ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ವಿದ್ಯಾರ್ಥಿನಿ ಮೇಲೆ ಪ್ರೊಫೆಸರ್‌ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದು, ಇತರ ವಿದ್ಯಾರ್ಥಿಗಳಿಗೂ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ಲಂಬರ್ ಖಾತೆಗೆ ಏಕಾಏಕಿ 294 ಕೋಟಿ ರುಪಾಯಿ ಜಮೆ; ಬ್ಯಾಂಕ್‌ ಬ್ಯಾಲೆನ್ಸ್ ನೋಡಿ ಬೆಚ್ಚಿಬಿದ್ದ ಯುವಕ: ಹಣ ಬಂದಿದೆಲ್ಲಿಂದ?

ಪ್ಲಂಬರ್ ಖಾತೆಗೆ ಏಕಾಏಕಿ 294 ಕೋಟಿ ರುಪಾಯಿ ಜಮೆ

ಬಿಹಾರದ ಗಯಾ ಜಿಲ್ಲೆಯ ಬೋಧಗಯಾ ಸಮೀಪದ ಮಸ್ತಪುರ ಗ್ರಾಮದ ಪ್ಲಂಬರ್‌ ವಿಕಾಶ್ ಕುಮಾರ್ ಅವರ ಬ್ಯಾಂಕ್ ಖಾತೆಯಲ್ಲಿ ಏಕಾಏಕಿ 294 ಕೋಟಿ ರುಪಾಯಿ ಜಮೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಖಾತೆಯಲ್ಲಿ ಕೇವಲ 113 ರುಪಾಯಿ ಉಳಿದಿದ್ದ ವೇಳೆ ಗುರುವಾರ ಬೆಳಗ್ಗೆ ಬ್ಯಾಲೆನ್ಸ್ ಪರಿಶೀಲಿಸಿದಾಗ 94 ಕೋಟಿ ರುಪಾಯಿ ಕಾಣಿಸಿಕೊಂಡಿದ್ದು, ಸಂಜೆ ವೇಳೆಗೆ ಅದು 294 ಕೋಟಿ ರುಪಾಯಿಗೆ ಏರಿದೆ. ಅಚ್ಚರಿಗೊಂಡ ವಿಕಾಶ್ ಕುಮಾರ್ ಗ್ರಾಮ ಮುಖಂಡರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ದಾಖಲೆಗಳು, ಸರ್ವರ್ ಲಾಗ್‌ಗಳು ಮತ್ತು ವಹಿವಾಟು ವಿವರಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಬ್ಯಾಂಕಿನ ತಾಂತ್ರಿಕ ದೋಷವೇ, ಸಾಫ್ಟ್‌ವೇರ್ ಸಮಸ್ಯೆಯೇ ಅಥವಾ ವಂಚನೆಗೆ ಸಂಬಂಧಿಸಿದ ಪ್ರಕರಣವೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಬೀದರ್‌ನಲ್ಲೊಬ್ಬ ವಿಕೃತ ಕಾಮಿ; ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ಮುನೀರ್ ಅಹ್ಮದ್ ಅರೆಸ್ಟ್‌

ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ವಿಕೃತ ಕಾಮಿ ಅರೆಸ್ಟ್

Crime News: ಬೀದರ್‌ನ ಬ್ರಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರದೊಳಗೆ ಮೃತ ಮಹಿಳೆಯರ ಫೋಟೊವನ್ನು ತನ್ನ ಫೋನ್‌ನಲ್ಲಿ ರಹಸ್ಯವಾಗಿ ತೆಗೆಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುನೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯಲ್ಲಿ ಅಟೆಂಡರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ.

Bengaluru Child Death: ಬೆಂಗಳೂರಿನಲ್ಲಿ ಹೀನ ಕೃತ್ಯ; ಮಗಳು ಕಪ್ಪಾಗಿದ್ದಾಳೆ ಎಂದು ಲವರ್‌ ಜತೆ ಸೇರಿ ಉಸಿರುಗಟ್ಟಿಸಿ ಕೊಂದ ತಾಯಿ!

ಮಗು ಕಪ್ಪಾಗಿದೆ ಎಂದು ಲವರ್‌ ಜತೆ ಸೇರಿ ಉಸಿರುಗಟ್ಟಿಸಿ ಕೊಂದ ತಾಯಿ!

ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಗು ಸಾವು ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಪ್ರಿಯಕರನ ಜತೆ ಬಾಳಲು ಅಡ್ಡಿಯಾಗಿದ್ದಾಳೆ ಮತ್ತು ಕಪ್ಪಾಗಿದ್ದಾಳೆ ಎಂದು ಮಗಳನ್ನು ತಾಯಿ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಐಪಿಎಲ್‌ ಫೈನಲ್‌ ಪಂದ್ಯದ ವೇಳೆ ಹರಿಯಿತು ನೆತ್ತರು; ಬುರ್ಖಾ ಧರಿಸಿ ಗೆಳೆಯನನ್ನೇ ಕೊಂದ ಪಾಪಿ: ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹ ಕೊಲೆಯಲ್ಲಿ ಅಂತ್ಯ

ಚಿನ್ನದ ಸರಕ್ಕಾಗಿ ಸ್ನೇಹಿತನನ್ನೇ ಕೊಂದ ದ್ರೋಹಿ

Crime News: 18 ವರ್ಷದ ಸ್ನೇಹ ಕೊಲೆಯಲ್ಲಿ ಕೊನೆಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಚಿನ್ನದ ಸರಕ್ಕಾಗಿ ವ್ಯಕ್ತಿಯೊಬ್ಬ ತನ್ನ ಜೀವದ ಗೆಳೆಯನನ್ನೇ ಹತ್ಯೆ ಮಾಡಿದ್ದಾನೆ. ಮೇ 31ರ ರಾತ್ರಿ ಐಪಿಎಲ್ ಫೈನಲ್ ಪಂದ್ಯದ ಸಮಯದಲ್ಲಿ ಮೋಹಿತ್ ದ್ವಿವೇದಿ ಸ್ನೇಹಿತನನ್ನು ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

Hindu girl Self Harming: ಮುಸ್ಲಿಂ ಯುವಕನ ಕಿರುಕುಳ: ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ

ಮುಸ್ಲಿಂ ಯುವಕನ ಕಿರುಕುಳ: ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ

ಮನೆ ಕಟ್ಟಡ ಕಟ್ಟುವಲ್ಲಿ ಕೆಲಸ ಮಾಡುತ್ತಿದ್ದ ಪಿರಾಜ್ ಕಾಳೆ ಎಂಬಾತ ಮೃತ ಯುವತಿಗೆ ಪರಿಚಯ ವಾಗಿದ್ದ. ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಇದನ್ನು ಗಮನಿಸಿದ ಮನೆಯವರು ಯುವತಿಯ ಮೊಬೈಲ್ ಕಸಿದಿದ್ದರು. ಆದರೆ ಯುವಕ ಯುವತಿಯ ಮನೆ ಹತ್ತಿರ ಬಂದು ಕಿರುಕುಳ ನೀಡುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ‌.

ಪ್ರವಾಸಿ ಸ್ಥಳದಲ್ಲಿ ವಿದೇಶಿ ಮಹಿಳೆಗೆ ಕಿರುಕುಳ ನೀಡಿದ ಕಾಮುಕ: ವಿಡಿಯೊ ವೈರಲ್

ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ ಯುವಕ

Viral News: ಕೆಲಸದ ಸ್ಥಳದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುವ ಅನೇಕ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳೆ ಜತೆ ವ್ಯಕ್ತಿಯೊಬ್ಬ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಾರ್ವಜನಿಕವಾಗಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದು, ಇದರ ಸಿಸಿಟಿವಿ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಪ್ರೇಯಸಿಯರ ಐಫೋನ್ ಆಸೆಗೆ ಖದೀಮರಾದ ಅಪ್ರಾಪ್ತ ಬಾಲಕರು; 6.5 ಲಕ್ಷ ರುಪಾಯಿ ಮೌಲ್ಯದ ಐಷಾರಾಮಿ ಟ್ಯಾಪ್‌ ಕಳವು!

ಪ್ರೇಯಸಿಯರಿಗೆ ಐಫೋನ್ ಕೊಡಲು 6.5 ಲಕ್ಷ ರು. ಮೌಲ್ಯದ ಟ್ಯಾಪ್ ಕಳವು

ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ತಮ್ಮ ಪ್ರೇಯಸಿಯರಿಗೆ ಐಫೋನ್ ಉಡುಗೊರೆ ನೀಡುವ ಉದ್ದೇಶದಿಂದ 6.5 ಲಕ್ಷ ರುಪಾಯಿ ಮೌಲ್ಯದ ಐಷಾರಾಮಿ ಟ್ಯಾಪ್‌ಗಳು ಮತ್ತು ಸ್ಯಾನಿಟರಿ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಳಿಕ ಕಳವು ಮಾಡಿದ ವಸ್ತುಗಳನ್ನು ಕೇವಲ 20 ಸಾವಿರ ರುಪಾಯಿಗೆ ಕಬ್ಬಿಣದ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಪೊಲೀಸರು ಕೇವಲ 12 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ರಸ್ತೆ ಕಾಮಗಾರಿ ಸ್ಥಳದಲ್ಲಿ ಮಲಗಿದ ಕಾರ್ಮಿಕ ಮಣ್ಣಿನ ರಾಶಿಗೆ ಸಿಲುಕಿ ಸಾವು; ಕೈ ಹೊರ ಬಂದಿದ್ದರಿಂದ ಬಯಲಾಯ್ತು ಘಟನೆ

ಡಿವೈಡರ್ ಮೇಲೆ ಮಲಗಿದ್ದ ಕಾರ್ಮಿಕನ ದಾರುಣ ಅಂತ್ಯ

ಉತ್ತರ ಪ್ರದೇಶ ಗೋರಖ್‌ಪುರದ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿಯಡಿ ಸಿಲುಕಿ ಕಾರ್ಮಿಕ ಮಿಂತು ಮೃತಪಟ್ಟಿದ್ದಾರೆ. ಡಿವೈಡರ್ ಸಮತಟ್ಟು ಮಾಡುವ ವೇಳೆ ಮಣ್ಣಿನಿಂದ ಕೈ ಹೊರಬಂದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ಡಂಪರ್‌ಗಳಿಂದ ಮಣ್ಣು ಸುರಿದಾಗ ಆತ ಮಣ್ಣಿನಡಿ ಸಿಲುಕಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಡೆಪ್ಯುಟಿ ಕಲೆಕ್ಟರ್! ಮಧ್ಯ ಪ್ರದೇಶದಲ್ಲಿ ಅಮಾನುಷ ಘಟನೆ

ಲೈಂಗಿಕ ದೌರ್ಜನ್ಯ ಎಸಗಿದ ಡೆಪ್ಯುಟಿ ಕಲೆಕ್ಟರ್ ಅರೆಸ್ಟ್‌

Physical Abuse: ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಆರೋಪದಡಿ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯ ಡೆಪ್ಯುಟಿ ಕಲೆಕ್ಟರ್ ಅರವಿಂದ್ ಮಹೋರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ಹಲವು ಬಾರಿ ದೈಹಿಕ ಸಂಬಂಧ ಬೆಳೆಸಿದ್ದು, ಬಳಿಕ ಮದುವೆಗೆ ನಿರಾಕರಿಸಿ ಬೆದರಿಕೆ ಹಾಕಿದ್ದಾರೆ ಎಂದು 32 ವರ್ಷದ ಮಹಿಳೆ ದೂರಿದ್ದಾರೆ. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಮಹೋರ್ ಅವರನ್ನು ಅಮಾನತುಗೊಳಿಸಲಾಗಿದೆ. ಪೊಲೀಸರು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

ಕಚೇರಿಯಲ್ಲೇ ಮಾಜಿ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನ ಪ್ರೇಮಿ;  ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

ಮಾಜಿ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನ ಪ್ರೇಮಿ

Crime News: ಯುವತಿಯೊಬ್ಬಳನ್ನು ಆಕೆಯ ಮಾಜಿ ಗೆಳೆಯ ಮತ್ತು ಸಹೋದ್ಯೋಗಿ ಇರಿದು ಕೊಲೆ ಮಾಡಿರುವ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಪಟಿಯಾಲ ನಿವಾಸಿ 30 ವರ್ಷದ ಡಿಂಪಲ್ ಎಂದು ಗುರುತಿಸಲಾಗಿದೆ. ಯುವತಿಯನ್ನು ಕೊಂದು, ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸುಟ್ಟು ಕರಕಲಾದ ಮನೆಗಳು, ಕುಕಿ ಸಮುದಾಯದ ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರಕ್ಕೆ ಮೂವರು ಬಲಿ

ಕೆಲವು ಸಮಯದಿಂದ ತಣ್ಣಗಿದ್ದ ಮಣಿಪುರದಲ್ಲಿ ಶುಕ್ರವಾರ ಮುಂಜಾನೆ ಮತ್ತೆ ಸಂಘರ್ಷ ಭುಗಿಲೆದ್ದಿದೆ. ಮೂರು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಮೂವರು ಸಾವನ್ನಪ್ಪಿದರೆ. ಕುಕಿ ಸಮುದಾಯದ ಮನೆಗಳ ಮೇಲೆ ದಾಳಿಯಾಗಿದ್ದು, ಇದು ಈಗ ಭದ್ರತೆಯ ಕಳವಳವನ್ನು ಹುಟ್ಟು ಹಾಕಿದೆ. ಇದರ ಸಂಪೂರ್ಣ ತನಿಖೆಗೆ ಕುಕಿ ನಾಗರಿಕ ಸಮಾಜ ಸಂಘಟನೆಯಾದ ಕುಕಿ ಇನ್ಪಿ ಮಣಿಪುರ (KIM) ಆಗ್ರಹಿಸಿದೆ.

ಮೀನಿನ ಹೆಸರಿನಲ್ಲಿ ಗೋಮಾಂಸ ಅಕ್ರಮ ಮಾರಾಟ: ಉತ್ತರ ಪ್ರದೇಶದಲ್ಲಿ 1.68 ಕೋಟಿ ರುಪಾಯಿ ಮೌಲ್ಯದ ಕಸಾಯಿಖಾನೆಗೆ ಬೀಗ

ಅಕ್ರಮ ಮಾಂಸ ಮಾರಾಟ ಮಾಡುತ್ತಿದ್ದವರ ವಿರುದ್ಧ ಕಠಿಣ ಕ್ರಮ

Crime News: ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಉತ್ತರ ಪ್ರದೇಶದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗತ್ತಿದೆ. ಇದರ ಭಾಗವಾಗಿ ಸುಮಾರು 1.68 ಕೋಟಿ ರುಪಾಯಿ ಮೌಲ್ಯದ ಮಾಂಸ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗೋಮಾಂಸ ಕಳ್ಳಸಾಗಣೆ ಜಾಲಕ್ಕೆ ಸಂಬಂಧಿಸಿದ ಆರೋಪದ ಹಿನ್ನೆಲೆಯಲ್ಲಿ, ಮಾಂಸ ಸಂಸ್ಕರಣಾ ಘಟಕದ ಮಾಲಕ ಅತೀಕ್ ಅಹ್ಮದ್ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.

ಆಪರೇಷನ್ ಡೆಲ್ಟಾ ಹಂಟ್: ಗುಜರಾತ್‌ನಲ್ಲಿ  362 ಅಕ್ರಮ ಬಾಂಗ್ಲಾದೇಶಿಗರ ಬಂಧನ

362 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಗುಜರಾತ್ ರಾಜ್ಯಾದ್ಯಂತ ನಡೆದ ಆಪರೇಷನ್ ಡೆಲ್ಟಾ ಹಂಟ್ ಅಡಿಯಲ್ಲಿ ಅಕ್ರಮವಾಗಿ ವಾಸವಾಗಿದ್ದ 362 ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದರು. 782ಕ್ಕೂ ಹೆಚ್ಚು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ಪ್ರಜೆಗಳು ಅನುಮತಿಯಿಲ್ಲದೆ ಗುಜರಾತ್‌ಗೆ ಪ್ರವೇಶಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಆಸ್ತಿ ಕಲಹಕ್ಕೆ ಕುಟುಂಬವೇ ನಾಶ: ಪೋಷಕರು, ಸೋದರಿಯನ್ನು ಹತ್ಯೆ ಮಾಡಿದ ವ್ಯಕ್ತಿ, ಕೊನೆಗೆ ಸ್ನೇಹಿತನಿಂದಲೇ ಕೊಲೆ

ಆಸ್ತಿ ಕಲಹಕ್ಕೆ ಕುಟುಂಬವೇ ನಾಶ

Crime News: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆತ್ತವರು ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊನೆಗೆ ಆತನ ಸಹಚರ ಮತ್ತು ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಹೊಟೆಲ್‌ ದುರಂತ; ಬೆಂಕಿ ಹೊತ್ತಿ ಉರಿಯುತ್ತಿರುವಾಗಲೇ ಸ್ಥಳದಿಂದ ಎಸ್ಕೇಪ್‌ ಆದ ಮಾಲೀಕ!

ದೆಹಲಿ ಬೆಂಕಿ ದುರಂತ; ಹೊಟೆಲ್‌ ಮಾಲೀಕನ ಬಂಧನ

ಬುಧವಾರ ಭೀಕರ ಬೆಂಕಿ ಅವಘಡದಲ್ಲಿ 21 ಜನರು ಸಾವನ್ನಪ್ಪಿದ ಫ್ಲೋರಿಶ್ ಸ್ಟೇ ಬೆಡ್-ಅಂಡ್-ಬ್ರೇಕ್‌ಫಾಸ್ಟ್‌ನ ಮಾಲೀಕ ಲವ್‌ಕೇಶ್ ಬಜಾಜ್ ಅವರನ್ನು ಬಂಧಿಸಲಾಗಿದೆ. ಡರಾತ್ರಿ ವಿಚಾರಣೆಯ ಸಮಯದಲ್ಲಿ, ಐದು ಅಂತಸ್ತಿನ ಕಟ್ಟಡವನ್ನು ಆವರಿಸಿದ್ದ ಬೆಂಕಿಯಿಂದ ಜನರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸ್ಥಳದಿಂದ ಪರಾರಿಯಾಗಿದ್ದಾಗಿ ಅವರು ತಪ್ಪೊಪ್ಪಿಕೊಂಡಿದ್ದಾರೆ.

ಸುಲಿಗೆ ಬೆದರಿಕೆ: ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ತೃಣಮೂಲ ಕಾಂಗ್ರೆಸ್ ನಾಯಕನ ಬಂಧನ

ಮುಂದುವರಿದ ತೃಣಮೂಲ ಕೌನ್ಸಿಲರ್ ಗಳ ಬಂಧನ

ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಕೇಳಿ ಬರುತ್ತಿರುವ ಆರೋಪ, ಪ್ರತ್ಯಾರೋಪಗಳ ಮಧ್ಯೆ ಇದೀಗ ಸುಲಿಗೆ, ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೌನ್ಸಿಲರ್ ಒಬ್ಬನನ್ನು ಬಂಧಿಸಲಾಗಿದೆ. 2025ರಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಾರ್ಡ್ ಸಂಖ್ಯೆ 42ರ ಕೌನ್ಸಿಲರ್ ಮಹೇಶ್ ಕುಮಾರ್ ಶರ್ಮಾ ಅವರನ್ನು ಬುರ್ರಬಜಾರ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

Loading...