ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

KR Puram Triple Murder Case: ನನ್ನ ಕುಟುಂಬವನ್ನು ರಕ್ಕಸನಂತೆ ಕೊಂದಿದ್ದು ಪ್ರಿಯಕರ ಕೆನೆತ್;‌ ವಿಚಾರಣೆ ವೇಳೆ ಉಲ್ಟಾ ಹೊಡೆದ ಶ್ವೇತಾ!

ನನ್ನ ಕುಟುಂಬವನ್ನು ರಕ್ಕಸನಂತೆ ಕೊಂದಿದ್ದು ಕೆನೆತ್: ಶ್ವೇತಾ

ಕೆ.ಆರ್‌.ಪುರ ತ್ರಿವಳಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ, ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಶ್ವೇತಾ ನೀಡಿರುವ ಹೊಸ ಹೇಳಿಕೆ ಇಡೀ ತನಿಖೆಯ ದಿಕ್ಕನ್ನೇ ಬದಲಿಸಿದೆ. ಈವರೆಗೆ ಕುಟುಂಬದವರನ್ನು ತಾನೇ ಕೊಂದಿದ್ದು ಎಂದು ಹೇಳುತ್ತಿದ್ದ ಶ್ವೇತಾ ಇದೀಗ ಪೊಲೀಸರ ಮುಂದೆ ಉಲ್ಟಾ ಹೊಡೆದಿದ್ದಾಳೆ ಎನ್ನಲಾಗಿದೆ.

Chetan Chaudhary: ಕೇತನ್‌ ಅಗರ್ವಾಲ್‌ ಹತ್ಯೆಗೆ 10 ಗಂಟೆಗಳ ವ್ಯವಸ್ಥಿತ ಸಂಚು ರೂಪಿಸಿದ್ದ ಸಿಯಾ ಗೋಯಲ್‌ ಪ್ರಿಯಕರ; ಇಲ್ಲಿದೆ ಟೈಮ್‌ಲೈನ್‌

ಆ 10 ಗಂಟೆಗಳು...ಕೇತನ್‌ ಹತ್ಯೆ ನಡೆದ ದಿನ ಏನೆಲ್ಲ ನಡೀತು?

Pune Murder Case: ಮಹಾರಾಷ್ಟ್ರದ ಯುವ ಉದ್ಯಮಿ ಕೇತನ್‌ ಅಗರ್ವಾಲ್‌ ಪ್ರಕರಣದ ಒಂದೊಂದೇ ರಹಸ್ಯ ಬಿಚ್ಚತೊಡಗಿದೆ. ಕೇತನ್‌ನ ಹತ್ಯೆಗೆ ಅವರ ಭಾವಿ ಪತ್ನಿ ಸಿಯಾ ಗೋಯಲ್‌ ಮತ್ತು ಆಕೆಯ ಪ್ರಿಯಕರ ಚೇತನ್‌ ಚೌಧರಿ ಸಂಚು ರೂಪಿಸಿದ್ದು, ತನಿಖೆ ವೇಳೆ ಬಯಲಾಗಿದೆ.

ಭಾವಿ ಪತಿಯನ್ನು ಕೊಂದ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; ಚೇತನ್‌ನ ಈ ಮಾತಿಗೆ ಕೊಲೆ ಮಾಡಿದ್ಲಾ ಸಿಯಾ?

ಚೇತನ್‌ನ ಈ ಮಾತಿಗೆ ಭಾವಿ ಪತಿಯನ್ನು ಕೊಂದಳಾ ಸಿಯಾ?

ಉದ್ಯಮಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂಗೆ ಎಸ್‌ಐಟಿ ಹಲವು ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿ ಸಿಯಾ ಹಾಗೂ ಚೇತನ್‌ನನ್ನು ವಿಚಾರಣೆಗೆ ಒಳಪಡಿಸಿದೆ. ಕೊಲೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದ್ದು, ಸಿಯಾ ಗೋಯಲ್ ಕೇತನ್‌ನನ್ನು ಕೊಲೆ ಮಾಡಲು ಕಾರಣ ಊಹಿಸಲಾಗಿದೆ. ಮೂಲಗಳ ಪ್ರಕಾರ, ಸಿಯಾಳ ಪ್ರಿಯಕರ ಚೇತನ್ ಚೌಧರಿ ತನ್ನ ವೃತ್ತಿಜೀವನದಲ್ಲಿ ನೆಲೆಗೊಳ್ಳಲು ಬಯಸಿದ್ದರಿಂದ ಮದುವೆಯಾಗಲು ಕನಿಷ್ಠ ಮೂರು ವರ್ಷಗಳಾದರೂ ಕಾಯುವಂತೆ ಕೇಳಿಕೊಂಡಿದ್ದ

ಕೇತನ್‌ ಹತ್ಯೆಗೂ 2 ದಶಕಗಳ ಹಿಂದೆ ನಡೆದ ಬೆಂಗಳೂರು ಕೊಲೆಗೂ ಇದೆ ಸಾಮ್ಯತೆ; ರಿಂಗ್‌ ರೋಡ್‌ ಶುಭಾ ಪ್ರಕರಣ ಮುನ್ನೆಲೆಗೆ ಬಂದಿದ್ದೇಕೆ?

ಕೇತನ್‌ ಹತ್ಯೆಗೂ ರಿಂಗ್‌ ರೋಡ್‌ ಶುಭಾ ಪ್ರಕರಣಕ್ಕೂ ಇದೆ ಸಾಮ್ಯತೆ

Ring Road Murder Case: ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಲೋಹಗಢ ಕೋಟೆ ಮೇಲಿನಿಂದ ಸುಮಾರು 350 ಅಡಿಯ ಆಳದ ಕಂದಕಕ್ಕೆ ತಳ್ಳಿ ಉದ್ಯಮಿ ಕೇತನ್‌ ಅಗರ್ವಾಲ್‌ ಅವರನ್ನು ತಳ್ಳಿ ಕೊಲೆ ಮಾಡಿದ ಪ್ರಕರಣಕ್ಕೂ 2003ರಲ್ಲಿ ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ. ಅದೇನು ಎನ್ನುವ ವಿವರ ಇಲ್ಲಿದೆ.

ಮಗ ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಗಂಡು ಮಗು ಹುಟ್ಟಿದೆ ಪಾರ್ಟಿ ಕೊಡಿಸು ಎಂದು ಕೇಳಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ‌ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ.ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ವ್ಯಕ್ತಿ. ಅದೇ ಊರಿನ ವಿಶ್ವನಾಥ ಪೂಜೇರಿ ಕೊಲೆ ಮಾಡಿರುವ ಆರೋಪಿ. ಹನುಮಂತಪ್ಪನನ್ನು ವಿಶ್ವನಾಥ ಕಲ್ಲಿನಿಂದ ಕೊಲೆ ಮಾಡಿದ್ದಾನೆ.

ಕ್ರಿಕೆಟ್‌ನಿಂದ ಶುರುವಾದ ಪ್ರೀತಿ,  ಒಟ್ಟಿಗೆ ಕುಳಿತು ಮ್ಯಾಚ್‌ ವೀಕ್ಷಣೆ; ವೈರಲ್‌ ಆಯ್ತು ಸಿಯಾ - ಚೇತನ್‌ ಹಳೆ ವಿಡಿಯೋ

ಚೇತನ್ ಜೊತೆ ಸಿಯಾ ಗೋಯಲ್ ಹಳೆ ವಿಡಿಯೋದಲ್ಲಿ ಏನಿದೆ?

ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ನಡುವಿನ ಸಂಬಂಧವನ್ನು ಪುಷ್ಟಿಕರಿಸುವ ಮತ್ತೊಂದು ವಿಡಿಯೋ ಬೆಳಕಿಗೆ ಬಂದಿದೆ. ಇದರಲ್ಲಿ ಇವರಿಬ್ಬರು ಜೊತೆಯಾಗಿ ಕುಳಿತು ಪುಣೆಯಲ್ಲಿ ನಡೆಯುವ ಪ್ರಮುಖ ಸಮುದಾಯ ಆಧಾರಿತ ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸುತ್ತಿರುವುದು ಕಂಡು ಬಂದಿದೆ.

ತಪ್ಪಿದ ಭಾರೀ ದುರಂತ; ಮೊಹರಂ ವೇಳೆ 15 ಸಾವಿರ ಜನರನ್ನು ಕೊಲ್ಲಲು ಪ್ಲಾನ್‌ ಮಾಡಿದ್ದ ವ್ಯಕ್ತಿ ಪೊಲೀಸ್‌ ವಶಕ್ಕೆ

15 ಸಾವಿರ ಜನರನ್ನು ಕೊಲ್ಲಲು ಪ್ಲಾನ್‌ ಮಾಡಿದ್ದ ವ್ಯಕ್ತಿ ವಶಕ್ಕೆ

ಶುಕ್ರವಾರ ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯಲ್ಲಿ ಸಾರ್ವಜನಿಕರಿಗೆ ವಿಷಕಾರಿ ಮಾತ್ರೆಗಳನ್ನು ವಿತರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಸಮಯಕ್ಕೆ ಸರಿಯಾಗಿ ಬಂಧಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಮಾತ್ರೆಗಳನ್ನು ಸೇವಿಸಿದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಫಯಾಜ್ ಪ್ರೇಮ್‌ಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟಕ ತುಂಬಿದ ವಾಹನದಿಂದ ಕರಾಚಿ ಸೇನಾ ನೆಲೆ ಮೇಲೆ ದಾಳಿ: 4  ಪಾಕ್‌ ಸೈನಿಕರು ಸಾವು

ಪಾಕಿಸ್ತಾನದ ಸೇನಾ ನೆಲೆ ಮೇಲೆ ದಾಳಿ

ಪಾಕಿಸ್ತಾನದ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಕರಾಚಿಯಲ್ಲಿ ನಡೆದಿದೆ. ಇದರಲ್ಲಿ 6 ಭಯೋತ್ಪಾದಕರು ಮತ್ತು 4 ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಅರೆಸೈನಿಕ ಪಡೆಯ ಪ್ರಾಂತೀಯ ಪ್ರಧಾನ ಕಚೇರಿಗೆ ಸ್ಫೋಟಕ ತುಂಬಿದ ವಾಹನವೊಂದು ಡಿಕ್ಕಿ ಹೊಡೆದ ಬಳಿಕ ತೀವ್ರ ಗುಂಡಿನ ಚಕಮಕಿ ನಡೆದಿದೆ.

ʼʼಕೇತನ್‌ ತಲೆ ಬುರುಡೆ ನಜ್ಜುಗುಜ್ಜಾಗಿತ್ತುʼʼ: ಲೋಹಗಢ ಪ್ರಕರಣದ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಬೆಚ್ಚಿಬೀಳಿಸುವ ವಿವರ

ಲೋಹಗಢ ಕೇತನ್ ಹತ್ಯೆ ಪ್ರಕರಣ: ಹೊಸ ತಿರುವು ಪಡೆದುಕೊಂಡ ತನಿಖೆ

Ketan Aggarwal Murder Case: ಪುಣೆಯ ಉದ್ಯಮಿ ಕೇತನ್ ಅಗರ್‌ವಾಲ್ ಹತ್ಯೆ ಪ್ರಕರಣದಲ್ಲಿ ರಕ್ಷಣಾ ಸಿಬ್ಬಂದಿ ಮೃತದೇಹದ ಸ್ಥಿತಿ ಕುರಿತು ಬೆಚ್ಚಿಬೀಳಿಸುವ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ಹತ್ಯೆಗೂ ಮುನ್ನ ಹಾಗೂ ಬಳಿಕ ಮೊಬೈಲ್ ಚಾಟ್‌ಗಳನ್ನು ಅಳಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಸಿಯಾ ಗೋಯಲ್–ಕೇತನ್ ಅಗರ್ವಾಲ್ ಮದುವೆಯಲ್ಲಿ ಮಿತ್ತಲ್ ಕುಟುಂಬದ ಪಾತ್ರ ಏನು? ದಿಢೀರ್‌ ಸುದ್ದಿಯಾಗಿದ್ದೇಕೆ?

ಸಿಯಾ ಗೋಯಲ್–ಕೇತನ್ ಅಗರ್ವಾಲ್ ಮದುವೆಯಲ್ಲಿ ಮಿತ್ತಲ್ ಕುಟುಂಬದ ಪಾತ್ರ ಏನು?

Ketan Agarwal: ಸಿಯಾ ಗೋಯಲ್ ಮತ್ತು ಕೇತನ್ ಅಗರ್ವಾಲ್ ಅವರ ವಿವಾಹವನ್ನು ನಿಶ್ಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಯಾಳ ಸೋದರಮಾವ ನರೇಂದ್ರ ಮಿತ್ತಲ್ ಮತ್ತು ಅತ್ತೆ ರೇಣು ಮಿತ್ತಲ್, ತಮ್ಮ ಸೋದರಸೊಸೆಯ ಮೇಲಿರುವ ಕೊಲೆ ಆರೋಪವನ್ನು ಕೇಳಿ ದಿಗ್ಭ್ರಮೆಗೊಂಡಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಪೊಲೀಸರ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಆರ್​ಎಸ್​ಎಸ್​​​​​ ವಿರುದ್ಧ ಅವಹೇಳನಕಾರಿ ಪೋಸ್ಟ್​; ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ನೋಟಿಸ್‌

RSS ವಿರುದ್ಧ ಪೋಸ್ಟ್; ಪ್ರಿಯಾಂಕ್‌ ಖರ್ಗೆಗೆ ಕೋರ್ಟ್ ನೋಟಿಸ್‌

ಆರ್​ಎಸ್​ಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್​ ಮುಖಂಡ ಮೊಹಮ್ಮದ್‌ ನಲಪಾಡ್ ವಿರುದ್ಧ ಆರ್​ಎಸ್​ಎಸ್​ ಕಾರ್ಯಕರ್ತ ಎ. ತೇಜಸ್ ಎಂಬುವರು ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದೆ.

ಭಯೋತ್ಪಾದನೆಗೆ ಹಣಕಾಸು ನೆರವು: ಕಾಶ್ಮೀರದ 3 ಕಡೆಗಳಲ್ಲಿ ದಾಳಿ, ಡಿಜಿಟಲ್ ಉಪಕರಣ ವಶಕ್ಕೆ

ಭಯೋತ್ಪಾದನೆಗೆ ಹಣಕಾಸು ನೆರವು: ಕಾಶ್ಮೀರದ 3 ಜಿಲ್ಲೆಗಳಲ್ಲಿ ದಾಳಿ

Terror Funding Case: ಜಮ್ಮು ಕಾಶ್ಮೀರದ ಶ್ರೀನಗರ, ಗಂದರ್‌ಬಲ್ ಮತ್ತು ಅನಂತನಾಗ್ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಜಮ್ಮು-ಕಾಶ್ಮೀರ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ ವಿಭಾಗವು ದಾಳಿ ನಡೆಸಿತು. ಅಲ್ಲದೆ ಶ್ರೀನಗರದ ಶಾಲ್ಟೆಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಕರ್ಸಾರ್ ಪ್ರದೇಶದಲ್ಲಿರುವ ರಿಯಾಜ್ ಅಹ್ಮದ್ ಅವರ ನಿವಾಸದಲ್ಲೂ ಪರಿಶೀಲನೆ ನಡೆಸಲಾಯಿತು.

Pavagada News: ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ; ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲು

ಪಾವಗಡದಲ್ಲಿ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ. ಸೇವಾಲಾಲ್ ಪುರ ತಾಂಡಾದಲ್ಲಿ ದೇವರಪೂಜೆಯಲ್ಲಿ ಪ್ರಸಾದ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡು, ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ: ವಕೀಲರಾಗಲು ಉಜ್ವಲ್ ನಿಕಂಗೆ ಸಿಎಂ ದೇವೇಂದ್ರ ಫಡ್ನವೀಸ್ ಕರೆ

ಉಜ್ವಲ್ ನಿಕಂ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ ಕೈಗೆತ್ತಿಕೊಳ್ಳುತ್ತಾರೆಯೇ?

ಹಿರಿಯ ವಕೀಲ, 26/11 ಮುಂಬೈ ಭಯೋತ್ಪಾದಕ ದಾಳಿ ವಿಚಾರಣೆಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಉಜ್ವಲ್ ನಿಕಂ ಅವರಿಗೆ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ವಕೀಲರಾಗಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆ ಮಾಡಿದ್ದಾರೆ. ಕೇತನ್ ಅಗರ್ವಾಲ್ ಅವರ ಕುಟುಂಬವು ಫಡ್ನವೀಸ್ ಅವರನ್ನು ಭೇಟಿ ಮಾಡಿ ಪ್ರಾಸಿಕ್ಯೂಷನ್ ನಿರ್ವಹಿಸಲು ನಿಕಂ ಅವರನ್ನು ನೇಮಿಸುವಂತೆ ವಿನಂತಿ ಮಾಡಿತ್ತು ಎನ್ನಲಾಗಿದೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಓಮ್ನಿ ಕಾರಿಗೆ ಲಾರಿ ಡಿಕ್ಕಿ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ

ಕೊಪ್ಪಳದಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ಹೋಗುತ್ತಿದ್ದ ಐವರ ಸಾವು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಸ್ತೆ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ರಸ್ತೆ ವಿಭಜಕ ದಾಟಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಕೇತನ್ ಅಗರ್ವಾಲ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ಸಿಯಾ-ಚೇತನ್ ಸಂಬಂಧದ ಶಾಕಿಂಗ್ ಮಾಹಿತಿ ಬಹಿರಂಗ

ಕೇತನ್ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್..!

ರಿಯಾಲ್ಟರ್ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಗಳು ಬೆಳಕಿಗೆ ಬಂದಿವೆ. ಆರೋಪಿ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ನಡುವೆ 2,004 ಕರೆಗಳು ನಡೆದಿರುವುದು, ಡಿಲೀಟ್ ಮಾಡಲಾದ ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಂ ಚಾಟ್‌ಗಳನ್ನು ಫೊರೆನ್ಸಿಕ್ ತಜ್ಞರು ಮರುಪಡೆಯಲು ಮುಂದಾಗಿರುವುದು, ಜೂನ್ 17ರಂದು ಇಬ್ಬರೂ ಕಫೆಯಲ್ಲಿ ಸುಮಾರು ಒಂದು ಗಂಟೆ ಭೇಟಿಯಾಗಿರುವುದು ಸೇರಿದಂತೆ ಹಲವು ಅಂಶಗಳ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಎಲ್ಲಾ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ ಹತ್ಯೆಯ ಹಿಂದಿನ ಸಂಚಿನ ಬಗ್ಗೆ ಸತ್ಯಾಂಶ ಹೊರತರಲು ತನಿಖೆ ಮುಂದುವರಿದಿದೆ.

12 ದಿನಗಳ ಕಾಲ ಡಿಜಿಟಲ್ ಅರೆಸ್ಟ್ : ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ನಿವೃತ್ತ ಬ್ಯಾಂಕ್ ಮ್ಯಾನೇಜರ್

ಡಿಜಿಟಲ್ ಅರೆಸ್ಟ್: ನಿವೃತ್ತ ಬ್ಯಾಂಕ್ ಮ್ಯಾನೇಜರ್ ನಿಂದ ಕೋಟ್ಯಾಂತರ ಲೂಟಿ

ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರನ್ನು 12 ದಿನಗಳ ಕಾಲ 'ಡಿಜಿಟಲ್ ಬಂಧನ'ದಲ್ಲಿರಿಸಿ ಕೋಟ್ಯಾಂತರ ರೂಪಾಯಿ ದೋಚಿರುವ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ. ಸೈಬರ್ ಅಪರಾಧಿಗಳು 84 ವರ್ಷದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮತ್ತು ಅವರ ಪತ್ನಿಯನ್ನು ಡಿಜಿಟಲ್ ಬಂಧನದಲ್ಲಿರಿಸಿಕೊಂಡು ಸುಮಾರು 2.20 ಕೋಟಿ ರೂ. ಗಳನ್ನು ಲೂಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ

ತಾಲೂಕಿನ ಜಂಗಮಕೋಟೆ ಸಮೀಪ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 250ಕ್ಕೂ ಅಧಿಕ ಗೋಧಿ ಚೀಲಗಳನ್ನು ತುಂಬಿದ್ದ ಕ್ಯಾಂಟರ್ ವಾಹನವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Bengaluru Metro: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಸಾವು

ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಸಾವು

ಬೆಂಗಳೂರಿನ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆಗೆ ನಿಖರವಾದ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಏನಾದರೂ ಲೋಪಗಳಿದ್ದವೇ ಎಂಬುದರ ಬಗ್ಗೆ ತಿಳಿಯಲು ಅಧಿಕಾರಿಗಳು ಸಮಗ್ರ ತನಿಖೆ ಆರಂಭಿಸಿದ್ದಾರೆ.

ಅನುಕಂಪದ ಸರ್ಕಾರಿ ಉದ್ಯೋಗ ಪಡೆಯಲು ನೀಚ ಕೆಲಸ; ಸುಪಾರಿ ಕೊಟ್ಟು ಅಪ್ಪನನ್ನೇ ಕೊಲ್ಲಿಸಿದ ಪಾಪಿ ಪುತ್ರ

ತಂದೆಯ ಸರ್ಕಾರಿ ಉದ್ಯೋಗ ಪಡೆಯಲು ಪುತ್ರ ಮಾಡಿದ ನೀಚ ಕೆಲಸ

Crime News: ಸರ್ಕಾರಿ ಕೆಲಸದ ಆಸೆಗಾಗಿ ವ್ಯಕ್ತಿಯೊಬ್ಬ ತನ್ನ ತಂದೆಯನ್ನೇ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ. ಜೂನ್ 19 ರ ರಾತ್ರಿ ನಡೆದ ತುಳೇಶ್ವರ ನೋನಿಯಾ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಸುಪಾರಿ ಕಿಲ್ಲರ್ಸ್‌ಗಳನ್ನು ಬಂಧಿಸಲಾಗಿದೆ ಎಂದು ಧನ್ಬಾದ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಎಸ್. ಮೊಹಮ್ಮದ್ ಯಾಕೂಬ್ ತಿಳಿಸಿದ್ದಾರೆ.

ವಿಗ್ ಧರಿಸಿದ್ದಕ್ಕೆ ಭಾವೀ ಪತಿಯನ್ನು ಕೊಂದಳಾ ಸಿಯಾ? ಕೇತನ್‌ ತಂದೆ ಹೇಳಿದ್ದೇನು?

ವಿಗ್ ಧರಿಸಿದ್ದಕ್ಕೆ ಭಾವೀ ಪತಿಯನ್ನು ಕೊಂದಳಾ ಸಿಯಾ?

ಲೋಹಗಡ್ ಕೋಟೆಯಿಂದ ತಳ್ಳಲ್ಪಟ್ಟು ಮೃತಪಟ್ಟಿದ್ದ ಉದ್ಯಮಿ ಕೇತನ್‌ ಅವರ ತಂದೆ ಇದೀಗ ಕೊಲೆ ಹಿಂದಿನ ಉದ್ದೇಶದ ಕುರಿತು ಆಘಾತಕಾರಿ ಹೇಳಿಕೆಯೊಂದೊನ್ನು ನೀಡಿದ್ದಾರೆ. ತಮ್ಮ ಮಗನ ಕೂದಲಿನ ಮೇಲೆ ಸಣ್ಣ ಪ್ಯಾಚ್ ಧರಿಸಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡಿರಬಹುದು ಎಂದು ವಿಶಾಲ್ ಅಗರ್ವಾಲ್ ಆರೋಪಿಸಿದ್ದಾರೆ.

Bengaluru triple murder: ಕೆ.ಆರ್‌. ಪುರ ತ್ರಿವಳಿ ಕೊಲೆ ಕೇಸ್‌; ಶ್ವೇತಾ ಪ್ರಿಯಕರ ಕೆನೆತ್‌ ಪುದುಚೇರಿಯಲ್ಲಿ ಅರೆಸ್ಟ್‌

ಕೆ.ಆರ್‌. ಪುರ ತ್ರಿವಳಿ ಕೊಲೆ ಕೇಸ್‌; ಶ್ವೇತಾ ಪ್ರಿಯಕರ ಕೆನೆತ್‌ ಅರೆಸ್ಟ್‌

ಬೆಂಗಳೂರು ತ್ರಿವಳಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಆರೋಪಿ ಶ್ವೇತಾ ಪೊಲೀಸರ ವಶದಲ್ಲಿದ್ದು, ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈಕೆಯ ಪ್ರಿಯಕರ ಕೆನೆತ್ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ಹಲವು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದರು. ಕೊನೆಗೆ ಆತನನ್ನು ಪುದುಚೇರಿಯಲ್ಲಿ ಬಂಧಿಸಲಾಗಿದೆ.

ಪತಿಯನ್ನು ಕೊಂದು ಗೆಳೆಯನ ಸಹಾಯದಿಂದ ಮೃತದೇಹ ವಿಲೇವಾರಿ; ಒಡಿಶಾದಲ್ಲಿ ಆಘಾತಕಾರಿ ಘಟನೆ

ಪತಿಯನ್ನು ಕೊಂದು ಗೆಳೆಯನ ಸಹಾಯದಿಂದ ಮೃತದೇಹ ವಿಲೇವಾರಿ

Wife Kills Husband: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯನ್ನು ಕೊಂದ ಪತ್ನಿ, ನಂತರ ತನ್ನ ಗೆಳೆಯನ ಸಹಾಯದಿಂದ ಶವವನ್ನು ವಿಲೇವಾರಿ ಮಾಡಲು ಯತ್ನಿಸಿರುವ ಘಟನೆ ಒಡಿಶಾದ ಜಾರ್ಸುಗುಡ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಮಾಡಿ ಮೃತದೇಹವನ್ನು ಹತ್ತಿರದ ಹೊಲದಲ್ಲಿ ಎಸೆಯಲಾಗಿತ್ತು.

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ₹7 ಕೋಟಿ ದುರ್ಬಳಕೆ ಆರೋಪ, 8 ಮಂದಿ ಬಂಧನ

ರಾಮಮಂದಿರ ದೇಣಿಗೆ ಹಗರಣ: 8 ಮಂದಿ ಅರೆಸ್ಟ್

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ಹಣ ದುರ್ಬಳಕೆ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ

Loading...