ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

Stone Pelting: ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಬಾಲಕರು ಸೇರಿ ಮೂವರು ಪರಾರಿ; ಹೈ ಅಲರ್ಟ್‌

ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಬಾಲಕರು ಪರಾರಿ

ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಲ್ಲಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಪರಾರಿಯಾದ ಕೈದಿಗಳನ್ನು ಅಹ್ಸಾನ್ ಅನ್ವರ್ ಮತ್ತು ಮೊಹಮ್ಮದ್ ಸನಾವುಲ್ಲಾ (ಇಬ್ಬರೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಗಳು) ಮತ್ತು ಜಮ್ಮು ನಿವಾಸಿ ಕರಣ್‌ಜಿತ್ ಸಿಂಗ್ ಅಲಿಯಾಸ್ ಗುಗ್ಗ ಎಂದು ಗುರುತಿಸಲಾಗಿದೆ.

Bidar News: ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಕೈಕಾಲು ತೊಳೆದುಕೊಳ್ಳಲು ಕಾರಂಜಾ ಡ್ಯಾಂನ ಕಾಲುವೆಯಲ್ಲಿ ಕಾಲುವೆಗೆ ಯುವಕ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ತಂದೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

2025ರ ಮಾರ್ಚ್‌ನಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪುರ ಬಳಿ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಜತೆಗಿದ್ದ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

ಆಗ್ರಾ  ವಾಯುಪಡೆ ನಿಲ್ದಾಣದೊಳಗೆ ಪಾಕಿಸ್ತಾನ ಬಲೂನ್ ಪತ್ತೆ

ಆಗ್ರಾದಲ್ಲಿ ಪಾಕಿಸ್ತಾನ ಬಲೂನ್ ಪತ್ತೆ

ಆಗ್ರಾದ ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದೊಳಗೆ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ ಎಂದು ಉಲ್ಲೇಖಿಸಿರುವ ಬಲೂನ್ ಪತ್ತೆಯಾಗಿದೆ. ಇದರಲ್ಲಿ ಯಾವುದೇ ಸಾಧನ ಅಥವಾ ವಿಷಕಾರಿ ವಸ್ತು ಪತ್ತೆಯಾಗದೇ ಇದ್ದರೂ ಇದು ಇಲ್ಲಿಗೆ ಹೇಗೆ ಮತ್ತು ಯಾಕೆ ಬಂತು ಎನ್ನುವ ಕುರಿತು ತೀವ್ರ ತನಿಖೆಯನ್ನು ನಡೆಸಲಾಗುತ್ತಿದೆ.

Crime at Gubbi: ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!! : ಕ್ಷುಲ್ಲಕ ಕಾರಣಕ್ಕೆ ರಕ್ತದ ಕೋಡಿ

ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!!

ಸಂಜೆ ವೇಳೆ ದಿಲೀಪ್ ತನ್ನ ಬೈಕ್ ನಲ್ಲಿ ಗುಬ್ಬಿಯಿಂದ ಬಂದು ಮನೆ ಮುಂದೆ ನಿಲ್ಲಿಸಿದ್ದ ವಿಚಾರಕ್ಕೆ ಏಕಾಏಕಿ ಅಶ್ಲೀಲ ಪದಗಳಿಂದ ಬೈಗುಳ ಆರಂಭಿಸಿ ಸ್ಥಳದಲ್ಲಿದ್ದ ದೊಣ್ಣೆ, ಗಳಗಳು, ಗುದ್ದಲಿ ಹಿಡಿದು ಅಟ್ಟ್ಯಾಕ್ ಮಾಡಿದ್ದರು. ಬೈಕ್ ತೆಗೆಯುವಷ್ಟರಲ್ಲಿ ಜಗಳ ತೆಗೆದು ಮಾರಣಾಂ ತಿಕವಾಗಿ ಹೊಡೆದಿದ್ದಾರೆ.

ಸಮೋಸ ಸವಿದು ಬೈಕ್ ಕದ್ದ ವಿಚಿತ್ರ ಕಳ್ಳ! ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಸಮೋಸ ಸವಿದು ಬೈಕ್ ಕದ್ದ ಕಳ್ಳ

ರಾಜಸ್ಥಾನದ ಜೈಪುರದಲ್ಲಿ ವಿಚಿತ್ರ ವಾಹನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಬೈಕ್ ಕಳ್ಳತನ ಮಾಡಲು ಮೊದಲು ಅದರ ಹತ್ತಿರ ನಿಂತು ನಿರಾಳವಾಗಿ ಸಮೋಸ ಸವಿದ ಬಳಿಕ ಬೈಕ್ ಕದ್ದಿದ್ದಾನೆ. ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನೋಯ್ಡಾದಲ್ಲಿ ಗುಂಡಿಗೆ ಮತ್ತೊಂದು ಸಾವು; ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ಜೀವ ತೆಗೆದ ಅವೈಜ್ಞಾನಿಕ ಕಾಮಗಾರಿ

ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ಜೀವ ತೆಗೆದ ಅವೈಜ್ಞಾನಿಕ ಕಾಮಗಾರಿ

Nodia: ಗ್ರೇಟರ್ ನೋಯ್ಡಾದ ದಲೇಲ್‌ಗಢ ಗ್ರಾಮದಲ್ಲಿ ನೀರು ತುಂಬಿದ ಗುಂಡಿಯಲ್ಲಿ ಮುಳುಗಿ ಮೂರು ವರ್ಷದ ಬಾಲಕ ಧಾರುಣವಾಗಿ ಸಾವನ್ನಪ್ಪಿದ್ದಾನೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಗುಂಡಿಗಳನ್ನು ಅವೈಜ್ಞಾನಿಕವಾಗಿ ತೋಡಿದ್ದು, ಈಗಾಗಲೇ ಹಲವರು ಈ ಗುಂಡಿಗಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಹೈಮಾಸ್ಟ್ ಕಂಬ; ಸಮಾಜವಾದಿ ಪಕ್ಷದ ನಾಯಕ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಹೈಮಾಸ್ಟ್ ಕಂಬ

ಉತ್ತರಪ್ರದೇಶದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಹೈಮಾಸ್ಟ್ ಕಂಬ ಬಿದ್ದು ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಭಾನುವಾರ ನಡೆದಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Chorla Ghat Robbery case: 400 ಕೋಟಿ ರೂ. ಲೂಟಿ ಕಥೆಗೆ ಟ್ವಿಸ್ಟ್‌, ಚೋರ್ಲಾ ಘಾಟಿಯಲ್ಲಿ ದರೋಡೆಯೇ ನಡೆದಿಲ್ಲ!

400 ಕೋಟಿ ರೂ. ಲೂಟಿ ಕಥೆಗೆ ಟ್ವಿಸ್ಟ್‌, ಚೋರ್ಲಾ ಘಾಟಿ ದರೋಡೆಯೇ ನಡೆದಿಲ್ಲ!

400 ಕೋಟಿ ರೂ. ದರೋಡೆ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿತ್ತು. ಒಂದು ತಿಂಗಳ ಕಾಲ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದ ಬೆನ್ನು ಬಿದ್ದಿದ್ದರು. ಅಮಾನ್ಯೀಕರಿಸಿದ 2000 ರೂ. ನೋಟುಗಳನ್ನು ತುಂಬಿದ ಕಂಟೈನರ್‌ ಮಾಯವಾಗಿದೆ ಎಂದು ಮೊದಲು ಆರೋಪಿಸಲಾಗಿತ್ತು. ಸಂದೀಪ್ ಪಾಟೀಲ್ ಎಂಬವರು ನಾಸಿಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Self harming: ಟಿವಿ ನೋಡುವುದು ಕಡಿಮೆ ಮಾಡು ಎಂದಿದ್ದಕ್ಕೆ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಟಿವಿ ವೀಕ್ಷಣೆ ಕಡಿಮೆ ಮಾಡು ಎಂದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿನಿ ನೇಣು

ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ ಅನ್ನವನ್ನು ಚೆಲ್ಲಿದ್ದಳು. ಅದಕ್ಕೆ ತಾಯಿ ಬರೀ ಟಿವಿ ನೋಡು, ಓದಬೇಡ, ಚೆಲ್ಲಿರುವ ಅನ್ನವನ್ನು ಕ್ಲೀನ್ ಮಾಡು ಎಂದು ಹೇಳಿ ಮತ್ತೆ ಕೆಲಸಕ್ಕೆ ಹೋಗಿದ್ದರು.

ನಿಲ್ಲದ ವ್ಯಾಘ್ರಗಳ ಸಾವು; ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಮೃತದೇಹ ಪತ್ತೆ

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಳಿಯ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ವರ್ಷ ಒಂದು ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದವು. ಇದೀಗ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.

ಅಪರಾಧಿಗಳೊಂದಿಗೆ ಮದುವೆ ಸಂಭ್ರಮ; ರಾಜಸ್ಥಾನ ಕಾನ್ಸ್‌ಟೇಬಲ್ ಸೇವೆಯಿಂದ ವಜಾ

ಅಪರಾಧಿಗಳೊಂದಿಗೆ ನಂಟು: ರಾಜಸ್ಥಾನ ಕಾನ್ಸ್‌ಟೇಬಲ್ ಕೆಲಸದಿಂದ ವಜಾ

ಮೋಸ್ಟ್ ವಾಂಟೆಡ್ ಅಪರಾಧಿಗಳೊಂದಿಗೆ ಮದುವೆ ಸಂಭ್ರಮ ಹಂಚಿಕೊಂಡ ರಾಜಸ್ಥಾನ ಕಾನ್ಸ್‌ಟೇಬಲ್ ಸೇವೆಯಿಂದ ವಜಾಗೊಳಿಸಲಾಗಿದೆ. ಮದುವೆಯ ವಿಡಿಯೊ ಹಿರಿಯ ಅಧಿಕಾರಿಗಳ ಕೈ ಸೇರಿದ್ದು, ಇದರಲ್ಲಿ ಅಪರಾಧಿಗಳೊಂದಿಗೆ ಮದುವೆ ವರ ಕಾನ್ಸ್‌ಟೇಬಲ್ ಫೋಟೋಗೆ ಪೋಸ್ ನೀಡಿರುವುದನ್ನು ಗುರುತಿಸಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ.

Chinnu Pappu: ಕಾಸರಗೋಡಿನ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಇನ್‌ಫ್ಲುಯೆನ್ಸರ್‌ ಆತ್ಮಹತ್ಯೆ ಬೆನ್ನಿಗೆ ಪ್ರಿಯಕರನೂ ಸಾವಿಗೆ ಶರಣು

Kasaragod News: ಕರ್ನಾಟಕ- ಕೇರಳ ಗಡಿಭಾಗವಾದ ಕಾಸರಗೋಡಿನ ಆದೂರು ಮೂಲದ ನಿವಾಸಿ, ಇನ್‌ಫ್ಲುಯೆನ್ಸರ್‌ ಚಿನ್ನ ಪಾಪು ಆಲಿಯಾಸ್‌ ರೇಷ್ಮಾ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ನಂತರ ಇದೀಗ ಅವರ ಪ್ರಿಯಕರನೂ ಸಾವಿಗೆ ಶರಣಾಗಿದ್ದಾರೆ. ಮೃತನನ್ನು ಸಂದೇಶ್‌ ಕೆ. (29) ಎಂದು ಗುರುತಿಸಲಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನಿವಾಸದ ಬಳಿ ಗಸ್ತು ವಾಹನಕ್ಕೆ ಕಾರು ಡಿಕ್ಕಿ

ಮುಖ್ಯಮಂತ್ರಿ ನಿತೀಶ್ ಕುಮಾರ್ ನಿವಾಸದ ಬಳಿ ಅಪಘಾತ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಬಳಿ ಹೈ ಸೆಕ್ಯುರಿಟಿ ವಿವಿಐಪಿ ಪ್ರದೇಶದಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳಾ ಅಧಿಕಾರಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಾಲಕ ಸೇರಿದಂತೆ ನಾಲ್ವರನ್ನು ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ.

ವೈಟ್ ಕಾಲರ್ ಭಯೋತ್ಪಾದನಾ ಜಾಲ: ಎನ್ಐಎ ತನಿಖೆಯಿಂದ ಹೊರಬಿತ್ತು ಆಘಾತಕಾರಿ ಮಾಹಿತಿ

ಎನ್ಐಎ ತನಿಖೆಯಿಂದ ಹೊರಬಿತ್ತು ಆಘಾತಕಾರಿ ಮಾಹಿತಿ

White-Collar Terror Investigation: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣ ದೇಶವನ್ನೇ ನಡುಗಿಸಿದೆ. ಈ ಘಟನೆಯ ಹಿಂದೆ ಪಾಕಿಸ್ತಾನ ಪ್ರಚೋದಿತ ವೈಟ್-ಕಾಲರ್ ಭಯೋತ್ಪಾದನೆಯ ಸುಳಿವುಗಳು ಕಂಡುಬಂದ ಹಿನ್ನೆಲೆಯಲ್ಲಿ ಎನ್ಐಎ ಸಮಗ್ರ ತನಿಖೆ ಕೈಗೊಂಡಿದೆ. ತನಿಖೆಯ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ತಿಂಗಳ ಹಿಂದೆ ನಡೆದ ತಂದೆ-ಮಗಳ ಸಾವಿನ ರಹಸ್ಯ ಈಗ ಬಯಲು; 6 ವರ್ಷದ ಬಾಲಕಿ ಮೇಲೆ 1 ವರ್ಷದಿಂದ ನಡೆದಿತ್ತು ಲೈಂಗಿಕ ದೌರ್ಜನ್ಯ

ತಿಂಗಳ ಹಿಂದೆ ನಡೆದ ತಂದೆ-ಮಗಳ ಸಾವಿನ ರಹಸ್ಯ ಈಗ ಬಯಲು

ಕೇರಳದ ಕೊಚ್ಚಿಯಲ್ಲಿ ಸುಮಾರು 1 ತಿಂಗಳ ಹಿಂದೆ ನಡೆದ 6 ವರ್ಷದ ಪುತ್ರಿ ಮತ್ತು ತಂದೆಯ ಕೊಲೆ, ಆತ್ಮಹತ್ಯೆ ಪ್ರಕರಣದ ರಹಸ್ಯ ಬಯಲಾಗಿದೆ. ಮೃತ ಬಾಲಕಿಯ ಮೇಲೆ 1 ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರಿಸೀವ್‌ ಮಾಡದ ಕಾಲ್‌, ಲಾಕ್‌ ಆದ ಹಾಸ್ಟೆಲ್‌ ರೂಮ್‌: ಎಂಬಿಬಿಎಸ್‌ ವಿದ್ಯಾರ್ಥಿಯ ಸಾವಿಗೆ ಕಾರಣವಾಗಿದ್ದೇನು?

ಹಾಸ್ಟೆಲ್ ಕೊಠಡಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನಿಗೂಢ ಸಾವು

ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಲಾವಣ್ಯ ಪ್ರತಾಪ್ ಮೃತಳು. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌; ಪತಿಯ ಸ್ನೇಹಿತನ ಮನೆಯಲ್ಲಿ ಜೀವಂತವಾಗಿ ಪತ್ತೆ

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌; ಕುಣಿಗಲ್‌ನಲ್ಲಿ ಪತ್ತೆ

Hasan Women Missing Case: ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಕುಣಿಗಲ್‌ನಲ್ಲಿ ಮಹಿಳೆ ಜೀವಂತವಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ ಸ್ಥಳೀಯ ಪೊಲೀಸರು ಕೂಡ ಈ ವೇಳೆ ಸಾಥ್​ ನೀಡಿದ್ದಾರೆ.

ನೆಲಮಂಗಲ ಬಳಿ ಭೀಕರ ಅಪಘಾತ;  KSRTC ಬಸ್​​ಗೆ ಗುದ್ದಿದ ಕಾರು,  ಐವರು ಸ್ಥಳದಲ್ಲಿಯೇ ಸಾವು

KSRTC ಬಸ್​​ಗೆ ಗುದ್ದಿದ ಕಾರು, ಐವರು ಸ್ಥಳದಲ್ಲಿಯೇ ಸಾವು

ಮಹಾ ಶಿವರಾತ್ರಿಯಂದೇ ಘೋರ ಘಟನೆ ನಡೆದಿದ್ದು, ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ.

ಪಾಕಿಸ್ತಾನಿ ಮಿಲಿಟರಿ ಗೀತೆಗೆ ಮಹಾರಾಷ್ಟ್ರದ ಉರ್ದು ಶಾಲಾ ವಿದ್ಯಾರ್ಥಿಗಳಿಂದ ಡ್ಯಾನ್ಸ್‌!

ಪಾಕಿಸ್ತಾನಿ ಮಿಲಿಟರಿ ಗೀತೆಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು

Students Dance to Pakistani Military Song: ಉರ್ದು ಶಾಲೆಯೊಂದರಲ್ಲಿ ಪಾಕಿಸ್ತಾನಿ ಮಿಲಿಟರಿ ಗೀತೆಗೆ ವಿದ್ಯಾರ್ಥಿಗಳು ಡಾನ್ಸ್ ಮಾಡಿದ ಕಳವಳಕಾರಿ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ನಡೆದಿದೆ. ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಉಮರ್ಖೇಡ್ ಪಟ್ಟಣದ ಅಬ್ದುಲ್ ಗಫೂರ್ ಶಾ ಮುನ್ಸಿಪಲ್ ಉರ್ದು ಶಾಲೆ ಸಂಖ್ಯೆ 2ರ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪತ್ನಿಗೆ ಬೇರೆಯವರೊಂದಿಗೆ ಅಕ್ರಮ ಸಂಬಂಧದಿಂದ ಕುಪಿತಗೊಂಡ ಪತಿ; ಪ್ರಿಯಕರನನ್ನು ಕೊಲೆ ಮಾಡಿ ದೇಹ ಛಿದ್ರಗೊಳಿಸಿ ಕಾಲುವೆಗೆ ಎಸೆದ ಬಿಎಲ್ಒ

ಪತ್ನಿಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆಗೈದ ಪತಿ

Crime News: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಗಂಡ ಹತ್ಯೆ ಮಾಡಿದ್ದಾನೆ. ಅಲ್ಲದೆ, ಆತನ ದೇಹಗಳನ್ನು ಕತ್ತರಿಸಿ, ಛಿದ್ರ ಮಾಡಿ ಕಾಲುವೆಗೆ ಎಸೆದಿರುವ ಭಯಾನಕ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಕ್ತಸಿಕ್ತ ವ್ಯಾಲೆಂಟೈನ್ಸ್ ಡೇ; ನಿಲ್ಲಿಸಿದ್ದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆ: ನಿಗೂಢ ಸಾವಿಗೆ ಕಾರಣವೇನು?

ನಿಲ್ಲಿಸಿದ್ದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆ

Crime News: ಉತ್ತರ ಪ್ರದೇಶದ ನೋಯ್ಡಾದಲ್ಲಿ ಪಾರ್ಕ್‌ ಮಾಡಿದ್ದ ಕಾರೊಳಗೆ ಯುವ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ನಡೆದಿದೆ. ಮೃತರನ್ನು ಸುಮಿತ್‌ ಮತ್ತು ರೇಖಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್‌ 39 ಪ್ರದೇಶದಲ್ಲಿ ಪಾರ್ಕ್‌ ಮಾಡಲಾದ ಟಾಟಾ ಆಲ್ಟ್ರೋಝ್‌ ಕಾರೊಳಗೆ ಇವರ ಶವ ಕಂಡು ಬಂದಿದೆ.

Loading...