ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Bear Attack: ಕೊರಟಗೆರೆಯಲ್ಲಿ ಹುಚ್ಚು ಕರಡಿ ಆರ್ಭಟ; ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.

Lokayukta Raid: ಗೊಲ್ಲಹಳ್ಳಿ ಗ್ರಾಪಂ ಕರ ವಸೂಲಿಗಾರ, ಜಲಗಾರ ಇಬ್ಬರು ಲೋಕಾ ಬಲೆಗೆ

ಗೊಲ್ಲಹಳ್ಳಿ ಗ್ರಾಪಂ ಕರ ವಸೂಲಿಗಾರ, ಜಲಗಾರ ಇಬ್ಬರು ಲೋಕಾ ಬಲೆಗೆ

ಚಿಕ್ಕಬಳ್ಳಾಪುರ ತಾಲೂಕು  ಗೊಲ್ಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಕರವಸೂಲಿಗಾರನಾಗಿ ಕೆಲಸ ಮಾಡುತ್ತಿದ್ದ ದ್ಯಾವಪ್ಪ ಬಿನ್ ಚಿಕ್ಕಮುನಿಯಪ್ಪ ಎಂಬುವರು ಕಟಾರಿ ಕದಿರೇನಹಳ್ಳಿ ಗ್ರಾಮದ ಅಶ್ವತ್ಥ ಬಿನ್ ನಾರಾಯಣಪ್ಪ ಎಂಬುವರಿಂದ ಹೆಸರು ತಿದ್ದುಪಡಿ ಮಾಡಲು 10 ಸಾವಿರ ರೂಪಾಯಿಗೆ ಬೇಡಿಕೆ ಯಿಟ್ಟಿದ್ದರು ಎನ್ನಲಾಗಿದೆ

ಜೈಲಿನಿಂದ ತಪ್ಪಿಸಿಕೊಂಡಿದ್ದ ಮಾವೋವಾದಿ ಸೇರಿದಂತೆ ನಾಲ್ವರ ಎನ್‌ಕೌಂಟರ್‌

ಎನ್‌ಕೌಂಟರ್‌: ನಾಲ್ವರು ಮಾವೋವಾದಿಗಳ ಹತ್ಯೆ

ಭದ್ರತಾ ಪಡೆಗಳು ಶುಕ್ರವಾರ ಜಾರ್ಖಂಡ್‌ನಲ್ಲಿ ಮಾವೋವಾದಿಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಇದರಲ್ಲಿ 2011ರ ಚೈಬಾಸಾ ಜೈಲ್ ಬ್ರೇಕ್ ಸಮಯದಲ್ಲಿ ಬಂಧನದಿಂದ ತಪ್ಪಿಸಿಕೊಂಡಿದ್ದ ಪ್ರಾದೇಶಿಕ ಹಿರಿಯ ಕಮಾಂಡರ್ ಕೂಡ ಸೇರಿದ್ದಾನೆ. ಘಟನಾ ಸ್ಥಳದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಗುಲ್ಶನ್ ಆಗಿ ಬದಲಾದ ಗೋಪಾಲ್; ಬಗೆದಷ್ಟು ಬಯಲಾಗ್ತಿದೆ ಟಿಸಿಎಸ್ ಮತಾಂತರದ ಭೂತ!

ಟಿಸಿಎಸ್ ಮತಾಂತರ ಕೇಸ್; ಗುಲ್ಶನ್ ಆಗಿ ಬದಲಾದ ಗೋಪಾಲ್

TCS religious conversion case: ಟಿಸಿಎಸ್ ಕಂಪನಿಯಲ್ಲಿನ ಮತಾಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯ ಸಮಯದಲ್ಲಿ ದೊರೆತ ಎರಡು ವರ್ಷಗಳ ಹಳೆಯ ಫೋಟೋವು ಟಿಸಿಎಸ್ ನಾಸಿಕ್ ಪ್ರಕರಣಕ್ಕೆ ಹೊಸ ಆಯಾಮವನ್ನು ನೀಡಿದೆ. ಸಂತ್ರಸ್ತರು ಕ್ರಮೇಣ ಹೇಗೆ ಪ್ರಭಾವಿತರಾದರು ಮತ್ತು ಧಾರ್ಮಿಕ ಮತಾಂತರಕ್ಕೆ ಹೇಗೆ ಸೆಳೆಯಲ್ಪಟ್ಟರು ಎಂಬುದನ್ನು ಇದು ತೋರಿಸುತ್ತದೆ.

Yogesh gowda Murder Case: ಯೋಗೇಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್‌ ಆದೇಶ

ಯೋಗೇಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್‌ ಆದೇಶ

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್‌ ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಸಾಕ್ಷ್ಯ ನಾಶಕ್ಕೆ ಯತ್ನ ಹಾಗೂ ಭ್ರಷ್ಟಾಚಾರ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್‌ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್‌ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ.

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿ ನಿದಾ ಖಾನ್ ಅಮಾನತು ಪತ್ರ ಬಹಿರಂಗ

ಚುರುಕು ಪಡೆದುಕೊಂಡ ಟಿಸಿಎಸ್ ಮತಾಂತರ ಆರೋಪ ಪ್ರಕರಣ

ನಾಸಿಕ್‌ನ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿಯಾಗಿರುವ ನಿದಾ ಖಾನ್ ಅವರನ್ನು ಕಂಪನಿ ಅಮಾನತುಗೊಳಿಸಿದ್ದು, ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದಲ್ಲಿ ಹಲವರ ಬಂಧನವಾಗಿದ್ದು, ತನಿಖೆ ತೀವ್ರಗೊಂಡಿದೆ. ಸರ್ಕಾರ ಕಠಿಣ ಕ್ರಮದ ಭರವಸೆ ನೀಡಿದ್ದು, ಮಹಿಳಾ ಉದ್ಯೋಗಿಗಳ ಸುರಕ್ಷತೆ ಕುರಿತು ಗಂಭೀರ ಚರ್ಚೆ ನಡೆಯುತ್ತಿದೆ.

MLA Vinay Kulkarni: ಜೈಲುಪಾಲಾದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಮುಂದಿರುವ ಆಯ್ಕೆಗಳೇನು?

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಮುಂದಿರುವ ಆಯ್ಕೆಗಳೇನು?

Yogesh Gowda murder case: ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜೀವಾವಧಿ ಜೈಲು ಶಿಕ್ಷೆ ನೀಡಲಾಗಿದ್ದು, ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶಾಸಕನ ಮುಂದಿರುವ ಆಯ್ಕೆಗಳೇನು ಎಂಬ ಮಾಹಿತಿ ಇಲ್ಲಿದೆ.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

Ranya Rao case: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ಗೆ ಹಿನ್ನಡೆ; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನಟಿ ರನ್ಯಾ ರಾವ್‌ಗೆ ಹಿನ್ನಡೆ; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

gold smuggling case: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ ಬಂಧನ ಆದೇಶವನ್ನು 2025ರ ಡಿ.19ರಂದು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿಗಳ ಪರ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಇದರಿಂದ ನಟಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಟಿಸಿಎಸ್ ಕಂಪನಿ ಮತಾಂತರ ಕೇಸ್‌;  ಗರ್ಭಿಣಿ ಎಂದು ನಿರೀಕ್ಷಣಾ ಜಾಮೀನು ಕೋರಲು ನಿದಾ ಖಾನ್ ಸಜ್ಜು?

ಗರ್ಭಿಣಿ ಎಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾಳಾ ನಿದಾ ಖಾನ್?

religious conversion case: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಮಹಾರಾಷ್ಟ್ರದ ನಾಸಿಕ್ ಘಟಕದಲ್ಲಿ ನಡೆದ ಲೈಂಗಿಕ ಕಿರುಕುಳ ಹಾಗೂ ಧಾರ್ಮಿಕ ದಬ್ಬಾಳಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್, ಗರ್ಭಿಣಿ ಎಂದು ಪ್ರಮುಖ ಕಾರಣವೆಂದು ಉಲ್ಲೇಖಿಸಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸಿರವಾರ ಪಟ್ಟಣ ಪಂಚಾಯತ್ ಸದಸ್ಯನ ಕುಟುಂಬದ 6 ಮಂದಿ ಸಜೀವ ದಹನ

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದರಿಂದ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

Bus Caught fire: ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಮುರುಡೇಶ್ವರ ದೇವಸ್ಥಾನ ರಸ್ತೆಯಲ್ಲಿ ದೂರವಾಣಿ ಕೇಂದ್ರದ ಎದುರುಗಡೆ ಸಾಗುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಬಸ್ ವಾಯುವ್ಯ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ್ದು, ಕುಮಟಾದಿಂದ ಭಟ್ಕಳ ಮಾರ್ಗವಾಗಿ ಮುರುಡೇಶ್ವರ ಬಸ್ ನಿಲ್ದಾಣದತ್ತ ಸಾಗುತ್ತಿತ್ತು.

"ಸೈರನ್ ಹಾಕಿದ್ದೆ, ದಾರಿ ಬಿಡೋಕ್ಕೇನಾಗಿತ್ತು?": ಅಪಘಾತ ಮಾಡಿ ಸಂತ್ರಸ್ತರನ್ನೇ ಗದರಿಸಿದ ಬಿಜೆಪಿ ಶಾಸಕನ ಮಗ!

ಐವರ ಮೇಲೆ ಥಾರ್ ಕಾರು ಹರಿಸಿ ದರ್ಪ ಮೆರೆದ ಶಾಸಕರ ಮಗ!

ಮಧ್ಯಪ್ರದೇಶದ ಶಿವಪುರಿಯಲ್ಲಿ ಬಿಜೆಪಿ ಶಾಸಕ ಪ್ರೀತಮ್ ಲೋಧಿ ಅವರ ಪುತ್ರ ದಿನೇಶ್ ಲೋಧಿ ವೇಗವಾಗಿ ಚಲಾಯಿಸಿದ ಥಾರ್ ವಾಹನದಿಂದ ಐವರ ಮೇಲೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡವರಲ್ಲಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಅಪಘಾತದ ನಂತರ ಸಂತ್ರಸ್ತರನ್ನೇ “ಸೈರನ್ ಹಾಕಿದ್ದೆ, ಏಕೆ ಸರಿಯಲಿಲ್ಲ?” ಎಂದು ಪ್ರಶ್ನಿಸಿದ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರಸಗುಲ್ಲಾ ತೆಗೆದುಕೊಂಡಿದ್ದಕ್ಕೆ ಬಾಲಕನನ್ನು ತಂದೂರಿ ಬಟ್ಟಿಗೆ ಎಸೆದ ಪಾಪಿ

ಬಾಲಕನನ್ನು ತಂದೂರಿ ಬಟ್ಟಿಗೆ ಎಸೆದ ಪಾಪಿ

ಮದುವೆ ಸಮಾರಂಭದಲ್ಲಿ ಬಾಲಕನೊಬ್ಬ ರಸಗುಲ್ಲಾ ತೆಗೆದುದಕ್ಕಾಗಿ ಅಡುಗೆಯವನು ಆತನನ್ನು ತಂದೂರಿ ಬಟ್ಟಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಲಕ್ನೋ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಅಡುಗೆಯವನು ನಾಪತ್ತೆಯಾಗಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Tumkur news: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿಯಲ್ಲಿ ಸಿಕ್ಕಿತು ಕೊಲೆ ಸುಳಿವು

ನಾಪತ್ತೆಯಾದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿ ನೀಡಿತು ಕೊಲೆ ಸುಳಿವು

ಮೃತ ಯುಮುನಾ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ಮಾ.19ರಂದು ಬರ್ತಡೇ ಆಚರಿಸಿಕೊಂಡಿದ್ದರು. ನಂತರ ಮಾ.21ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದಾರೆ. ಅಂದು ಸಂಜೆ ಕೆಲಸ ಬಿಟ್ಟಾಗ ಅನೈತಿಕ ಸಂಬಂಧ ಹೊಂದಿದ್ದ ರಾಘವೇಂದ್ರನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

IPL match ticket black market: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ ಕಾಳಸಂತೆ ದಂಧೆ ಪತ್ತೆ, ಕ್ಯಾಂಟೀನ್‌ ನೌಕರ ಸೆರೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ‌ ಐಪಿಎಲ್ ಟಿಕೆಟ್‌ ಕಾಳಸಂತೆ ದಂಧೆ ಪತ್ತೆ

ಆರೋಪಿ ಚಂದ್ರಶೇಖರ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ನೀಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಸದಸ್ಯ ಎನ್ನಲಾದ ಗಣೇಶ್ ಹರಿಕೇಶ್ ಎಂಬವರು ತನಗೆ ಈ ಟಿಕೆಟ್‌ಗಳನ್ನು ನೀಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತೆ ಸೂಚಿಸಿದ್ದರು ಎಂದು ಆತ ಒಪ್ಪಿಕೊಂಡಿದ್ದಾನೆ. ಇದರಿಂದಾಗಿ ಈ ದಂಧೆಯ ಬೇರುಗಳು ಬಹಳ ಆಳವಾಗಿರುವುದು ಸ್ಪಷ್ಟವಾಗಿದೆ.

Yogesh Gowda Murder Case: ಮೂವರು ಮಕ್ಕಳು ಇದ್ದಾರೆ, ಕಡಿಮೆ ಶಿಕ್ಷೆ ಕೊಡಿ; ಜಡ್ಜ್‌ಗೆ ಶಾಸಕ ವಿನಯ್‌ ಕುಲಕರ್ಣಿ ಮನವಿ

ನನಗೆ ಕಡಿಮೆ ಶಿಕ್ಷೆ ಕೊಡಿ; ಜಡ್ಜ್‌ಗೆ ಶಾಸಕ ವಿನಯ್‌ ಕುಲಕರ್ಣಿ ಮನವಿ

MLA Vinay Kulkarni: ಶಾಸಕ ವಿನಯ್‌ ಕುಲಕರ್ಣಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಎಸ್‌ ಶ್ಯಾಮ್‌ಸುಂದರ್‌ ಅವರು, ವಿನಯ್‌ ಕುಲಕರ್ಣಿ ಜನರ ವಿಶ್ವಾಸ ಗಳಿಸಿ ಗೆದ್ದಿದ್ದಾರೆ. ಮೂವರು ಮಕ್ಕಳಿದ್ದು, 3,500ಕ್ಕೂ ಅಧಿಕ ಆಕಳು/ಎಮ್ಮೆ ಸಾಕಿದ್ದು, ಅವುಗಳನ್ನು ನೋಡಿಕೊಳ್ಳಬೇಕಿದೆ. ಅವರಿಗೆ ಕಡಿಮೆ ಶಿಕ್ಷೆ ವಿಧಿಸಬೇಕು ಎಂದು ಕೋರಿದ್ದಾರೆ.

ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರದ ಹಗರಣ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಮ್‌

ಮಹಿಳಾ ಉದ್ಯೋಗಿಗಳ ಕಿರುಕುಳ: ಸಂಕಷ್ಟದಲ್ಲಿ ಟಿಸಿಎಸ್

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನ ನಾಸಿಕ್ ಬಿಪಿಒ ಕೇಂದ್ರದಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಬಲವಂತದ ಧಾರ್ಮಿಕ ಆಚರಣೆ ಆರೋಪ ಹೊರಬಂದಿದೆ. ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿ ಎಂಟು ಮಂದಿಯನ್ನು ಬಂಧಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಕಚೇರಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಪ್ರಕರಣದ ತನಿಖೆಗೆ ಎಟಿಎಸ್ ಮತ್ತು ಎನ್‌ಐಎ ಸಹಾಯ ಪಡೆಯುವ ಸಾಧ್ಯತೆ ಇದೆ. ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಏಪ್ರಿಲ್ 18ರಂದು ಸ್ಥಳಕ್ಕೆ ಭೇಟಿ ನೀಡಲಿದೆ.

ಆಚರಣೆ ಹೆಸರಲ್ಲಿ ಲೈಂಗಿಕ ಶೋಷಣೆ: ನಕಲಿ ದೇವಮಾನವನ ಕರ್ಮಕಾಂಡ ಬೆಳಕಿಗೆ ಬಂದಿದ್ದು ಹೇಗೆ?

ಜಿಮ್ ತರಬೇತುದಾರ ದೇವಮಾನವನಾಗಿದ್ದೇಗೆ?

Gym Trainer Turned Godman: ಜಿಮ್ ತರಬೇತುದಾರ ಆಗಿದ್ದ ವ್ಯಕ್ತಿಯೊಬ್ಬ ಸ್ವಯಂಘೋಷಿತ ದೇವಮಾನವನಾದ ಕಥೆಯಿದು. ನಾಲ್ಕು ವರ್ಷಗಳ ಹಿಂದಿನವರೆಗೂ ಮುಂಬೈಯ ರಿದಮ್ ಪಾಂಚಾಲ್ ಅಲಿಯಾಸ್ ಮಾಂಟಿ ಎಂಬಾತ ಜಿಮ್ ತರಬೇತುದಾರರಾಗಿದ್ದ. ನಂತರ, ಒಂದು ದಿನ ಏಕಾಏಕಿ ಸ್ವಯಂಘೋಷಿತ ದೇವಮಾನವನಾದ. ಆತನ ಕುರಿತಾದ ವಿವರ ಇಲ್ಲಿದೆ.

ಗಲಾಟೆ ಕೇಸ್‌ನಲ್ಲಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್‌; ವಿಚಾರಣೆಗೆ ಹೈಕೋರ್ಟ್‌ ತಡೆ

ಅನಂತಕುಮಾರ್‌ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

Road rage case: ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಗಲಾಟೆ ಪ್ರಕರಣದಿಂದ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಮಗನ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಹೈಕೋರ್ಟ್‌ ಆದೇಶದಿಂದ ದಾಬಸ್‌ಪೇಟೆ ಬಳಿ ನಡೆದಿದ್ದ ರೋಡ್‌ ರೇಜ್‌ ಪ್ರಕರಣದಲ್ಲಿ ಅಶುತೋಷ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದಿದೆ.

ಪ್ರೀತಿ-ಪ್ರೇಮ ಹೆಸರಲ್ಲಿ ಬ್ಲ್ಯಾಕ್‌ಮೇಲ್: ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ 2 ಕೋಟಿ ರುಪಾಯಿ ವಂಚನೆ

ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ 2 ಕೋಟಿ ರುಪಾಯಿ ವಂಚನೆ

Dating App Fraud: ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ ವಂಚಿಸಿದ್ದ ಕುಖ್ಯಾತ ವಂಚಕನನ್ನು ಬಂಧಿಸಲಾಗಿದೆ. ಕುಖ್ಯಾತ ಸೈಬರ್ ವಂಚಕ ಆನಂದ್ ಕುಮಾರ್‌ನನ್ನು ಇದೀಗ ಬಂಧಿಸಲಾಗಿದೆ. ಯುವತಿಯೊಬ್ಬಳು ವಂಚನೆ ಬಗ್ಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

5 ವರ್ಷದ ಮೊಮ್ಮಗಳ ಕೈ ಕಾಲು ಕಟ್ಟಿ ಕಟ್ಟಿಹಾಕಿ ಬಿಸಿಲಿನಲ್ಲಿ ನಿಲ್ಲಿಸಿದ ಮಹಿಳಾ ಎಎಸ್‌ಐ

5 ವರ್ಷದ ಮೊಮ್ಮಗಳನ್ನು ಬಿಸಿಲಿನಲ್ಲಿ ಕಟ್ಟಿಹಾಕಿದ ಮಹಿಳಾ ಎಎಸ್‌ಐ

ಪಂಜಾಬ್‌ನ ಫರಿದ್‌ಕೋಟ್‌ನಲ್ಲಿ ನಡೆದ ಅಮಾನವೀಯ ಘಟನೆಯೊಂದು ದೇಶಾದ್ಯಂತ ಆಕ್ರೋಶ ಹುಟ್ಟುಹಾಕಿದೆ. ಎಎಸ್‌ಐ ಸರಬ್‌ಜಿತ್ ಕೌರ್ ತನ್ನ 5 ವರ್ಷದ ಮೊಮ್ಮಗಳನ್ನು ಬಿಸಿಲಿನಲ್ಲಿ ಗೇಟ್‌ಗೆ ಕಟ್ಟಿಹಾಕಿದ ವಿಡಿಯೋ ವೈರಲ್ ಆಗಿದೆ. ಮಗುವಿನ ಅಳುವಿನ ಶಬ್ದ ಕೇಳಿದ ನೆರೆಹೊರೆಯವರು ಆಕೆಯನ್ನು ರಕ್ಷಿಸಿದ್ದಾರೆ. ಈ ಮಗುವಿನ ಪೋಷಕರು ವಿದೇಶದಲ್ಲಿದ್ದಾರೆ. ಸದ್ಯ ಎಎಸ್‌ಐಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ಸಾಗರದಲ್ಲಿ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

Shivamogga News: ಶಿವಮೊಗ್ಗ ಜಿಲ್ಲೆ ಸಾಗರದ ಎಸ್.ಎನ್. ನಗರದಲ್ಲಿ ಘಟನೆ ನಡೆದಿದೆ. ಗಣೇಶ್ ಎಂಬುವವರ ಪುತ್ರ ಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾನೆ. ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಕೈಗೆ ನಾಗರಹಾವು ಕಚ್ಚಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

‘ʼಮಗು ಬೇಕಾದರೆ ಪತ್ನಿಯನ್ನು ನನ್ನ ಬಳಿಗೆ ಕಳ್ಸುʼʼ: ಟಿಸಿಎಸ್ ಉದ್ಯೋಗಿ ಬಳಿ ಬಾಸ್‌ನ ಅಸಭ್ಯ ನಡವಳಿಕೆ

ಟಿಸಿಎಸ್ ಉದ್ಯೋಗಿ ಬಳಿ ಬಾಸ್‌ನ ಅಸಭ್ಯ ನಡವಳಿಕೆ

TCS employee’s assault: ಮಹಾರಾಷ್ಟ್ರದ ನಾಸಿಕ್ ಶಾಖೆಯ ಟಿಸಿಎಸ್ ಕಂಪನಿಯ ಪುರುಷ ಉದ್ಯೋಗಿಯೊಬ್ಬರು ಟೋಪಿ ಹಾಕಿ ನಮಾಜ್ ಮಾಡಲು ಒತ್ತಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮಗು ಬೇಕಾದರೆ ನಿನ್ನ ಹೆಂಡತಿಯನ್ನು ನನ್ನ ಕಳುಹಿಸು ಎಂದು ಬಾಸ್‌ ಹೇಳಿದ್ದಾಗಿ ಮತ್ತೊಬ್ಬ ಉದ್ಯೋಗಿ ತಿಳಿಸಿದ್ದಾರೆ. ಆ ಮೂಲಕ ಟಿಸಿಎಸ್ ಕಂಪನಿಯ ಕರ್ಮಕಾಂಡ ಬಗೆದಷ್ಟೂ ಹೊರ ಬರುತ್ತಿದೆ.

Loading...