ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರೈಂ
Murder Case: ವಿವಾಹಿತೆಯ ಬಾಯಿಗೆ ಜಿಲೆಟಿನ್‌ ಕಡ್ಡಿ ಇಟ್ಟು ಸ್ಫೋಟಿಸಿ ಬರ್ಬರವಾಗಿ ಕೊಂದ ಪ್ರಿಯಕರ

ವಿವಾಹಿತೆಯ ಬಾಯಿಗೆ ಜಿಲೆಟಿನ್‌ ಕಡ್ಡಿ ಇಟ್ಟು ಸ್ಫೋಟಿಸಿ ಕೊಂದ ಪ್ರಿಯಕರ

Gelatin Stick: ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂಬುದಾಗಿ ಸಿದ್ದರಾಜು ರಕ್ಷಿತಾಳನ್ನು ಕರೆತಂದಿದ್ದ. ಭೇರ್ಯ ಗ್ರಾಮದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ. ಲಾಡ್ಜ್‌ನಲ್ಲಿ ಅಕ್ಷತಾ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಪೋಟಿಸಿ ಹತ್ಯೆಗೈದಿದ್ದಾನೆ. ಆ ಬಳಿಕ ಮೊಬೈಲ್ ಬ್ಲಾಸ್ಟ್ ಅಂತ ಕೂಗಾಡಿದ್ದಾನೆ. ಆದರೆ ಸ್ಥಳದಲ್ಲಿ ಯಾವುದೇ ಮೊಬೈಲ್ ಕಂಡುಬರದ ಕಾರಣ ಅನುಮಾನ ಬಂದಿದೆ.

Murder Case: ಗರ್ಭಿಣಿ ಪತ್ನಿಯನ್ನು ಕೊಂದು ಶವ ಕತ್ತರಿಸಿ ನದಿಗೆ ಎಸೆದ ಕಿಡಿಗೇಡಿ! ಈತ ಸಿಕ್ಕಿಬಿದ್ದಿದ್ದೇ ರೋಚಕ

ಗರ್ಭಿಣಿ ಪತ್ನಿಯನ್ನು ಕೊಂದು ಶವ ಕತ್ತರಿಸಿ ನದಿಗೆ ಎಸೆದ ಪಾಪಿ!

ಪ್ರೀತಿಸಿ ಮದುವೆಯಾದ ವ್ಯಕ್ತಿಯೊಬ್ಬ ತನ್ನ ಐದು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಶವವನ್ನು ವಿವಿಧ ಭಾಗಗಳಾಗಿ ಕತ್ತರಿಸಿ ಕೆಲವು ತುಂಡುಗಳನ್ನು ನದಿಗೆ ಎಸೆದಿದ್ದಾನೆ. ಬಳಿಕ ಸಹೋದರಿಗೆ ಕರೆ ಮಾಡಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಹೇಳಿ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಮಲ್ಕಜ್‌ಗಿರಿ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kolkata Rape case: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಎಕ್ಸಾಸ್ಟ್ ಫ್ಯಾನ್‌ನ ರಂಧ್ರದ ಮೂಲಕ ಹೀನ ಕೃತ್ಯ ರೆಕಾರ್ಡ್

ಗೋಡೆಯಲ್ಲಿದ್ದ ರಂಧ್ರದ ಮೂಲಕ ಅತ್ಯಾಚಾರದ ದೃಶ್ಯ ಸೆರೆ!

ಕೋಲ್ಕತ್ತಾ ಬೆಚ್ಚಿ ಬೀಳಿಸಿದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ (Kolkata Rape case) ಸಂಬಂಧಿಸಿ ಕೋಲ್ಕತ್ತಾ ಪೊಲೀಸರು ಆರೋಪಿಗಳ ವಿರುದ್ಧ 650 ಪುಟಗಳ ಆರೋಪಪಟ್ಟಿಯನ್ನು ಅಲಿಪೋರ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದರಲ್ಲಿ ಟಿಎಂಸಿಪಿ ಸಂಘಟನೆಯ ದಕ್ಷಿಣ ಕೋಲ್ಕತ್ತಾ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಮನೋಜಿತ್ ಮಿಶ್ರಾ ಪ್ರಮುಖ ಆರೋಪಿಯಾಗಿ ಗುರುತಿಸಲಾಗಿದೆ.

Dharmasthala Case: ಎರಡನೇ ದಿನವೂ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ಗೆ ಪೊಲೀಸ್‌ ಗ್ರಿಲ್‌

ಎರಡನೇ ದಿನವೂ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ಗೆ ಪೊಲೀಸ್‌ ಗ್ರಿಲ್‌

Youtuber Sameer: ವಿಡಿಯೋ ಎಡಿಟಿಂಗ್‌ಗೆ ಬಳಸಿದ ಕಂಪ್ಯೂಟರ್ ಹಾಗೂ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇದರ ಜೊತೆಗೆ ಮತ್ತೆರಡು ಪ್ರಕರಣಗಳು ಸಮೀರ್ ಮೇಲಿದ್ದು, ಖಾಸಗಿ ವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಸಂಬಂಧ ಪ್ರಶ್ನೆ ಕೇಳಿದ್ದಾರೆ. ಬೆನಕ ಆಸ್ಪತ್ರೆ ಬಳಿ ಗಲಾಟೆ ಕೇಸ್ ತನಿಖೆ ಬಾಕಿ ಇದೆ.

Dowry Case: ನೋಯ್ಡಾ ವರದಕ್ಷಿಣೆ ಕೊಲೆ ಪ್ರಕರಣ; ಮೂವರ ಬಂಧನ

ವರದಕ್ಷಿಣೆ ಕೊಲೆ ಪ್ರಕರಣ; ಮೂವರ ಬಂಧನ

ಗ್ರೇಟರ್‌ ನೊಯ್ಡಾದಲ್ಲಿ (Dowry Case) ವರದಕ್ಷಿಣೆ ಆಸೆಗೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಪೊಲೀಸರು ಈ ವರೆಗೆ ಮೂವರನ್ನು ಬಂಧಿಸಿದ್ದಾರೆ. ನಿಕ್ಕಿ ಭಾಟಿಯ ಸೋದರ ಮಾವ ರೋಹಿತ್ ಭಾಟಿಯನ್ನು ಬಂಧಿಸಲಾಗಿದೆ. ಹತ್ತು ವರ್ಷಗಳ ಹಿಂದೆ ಉತ್ತರ ಪ್ರದೇಶದ ಗೇಟರ್‌ ನೊಯ್ಡಾದ ಸಿರ್ಸಾ ಗ್ರಾಮದ ವಿಪಿನ್‌ ಎಂಬಾತನಿಗೆ ನಿಕ್ಕಿಯನ್ನು ಮದುವೆ ಮಾಡಿಕೊಡಲಾಗಿತ್ತು.

Road Accident: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸಾವು

ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸಾವು

Road Accident: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಬಳಿ ಅಪಘಾತ ನಡೆದಿದೆ. ತಂದೆ ಜತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಮೃತ ಬಾಲಕ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Devarayanadurga Temple: ಕುಂಕುಮ ಇಡುವಾಗ ಅನುಚಿತ ವರ್ತನೆ; ವೃದ್ಧ ಅರ್ಚಕನ ಮೇಲೆ ಯುವಕರಿಂದ ಮನಸೋ ಇಚ್ಛೆ ಹಲ್ಲೆ

ದೇವರಾಯನದುರ್ಗದಲ್ಲಿ ವೃದ್ಧ ಅರ್ಚಕನ ಮೇಲೆ ಯುವಕರಿಂದ ಹಲ್ಲೆ!

Tumkur News: ದೇವರಾಯನ ದುರ್ಗ ದೇವಸ್ಥಾನದ ಅರ್ಚಕ ನಾಗಭೂಷಣಾಚಾರ್ಯ ಎಂಬುವರ ಮೇಲೆ ಹಲ್ಲೆ ನಡೆದಿದೆ. ಕುಂಕುಮ ಇಡುವಾಗ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಯುವಕರು ಕೈ ಹಾಗೂ ಕೋಲಿನಿಂದ ಹಲ್ಲೆ ಮಾಡಿದ್ದಾರೆ.

MLA Veerendra Puppy: ಅಕ್ರಮ ಬೆಟ್ಟಿಂಗ್‌ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ಕಸ್ಟಡಿಗೆ

ಅಕ್ರಮ ಬೆಟ್ಟಿಂಗ್‌ ಪ್ರಕರಣ; ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ಕಸ್ಟಡಿಗೆ

illegal betting case: ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ (illegal betting case) ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಅವರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್‌ ಆದೇಶಿಸಿದೆ.

False US Kidnapping Case: ಫೇಕ್‌ ಕಿಡ್ನ್ಯಾಪ್‌ ಕೇಸ್‌ನಲ್ಲಿ ಅಮೆರಿಕದಲ್ಲಿ ಭಾರತೀಯನಿಗೆ ಶಿಕ್ಷೆ

ಸುಳ್ಳು ಅಪಹರಣ ಆರೋಪದಲ್ಲಿ ಶಿಕ್ಷೆಗೊಳಗಾದ ಭಾರತೀಯ

ಸುಳ್ಳು ಅಪಹರಣ ಆರೋಪದಲ್ಲಿ ಭಾರತೀಯ ಮೂಲದ ಮಹೇಂದ್ರ ಪಟೇಲ್ ಎಂಬವರು ಜಾರ್ಜಿಯಾದ ಕಾಬ್ ಕೌಂಟಿ ಜೈಲಿನಲ್ಲಿ 47 ದಿನಗಳನ್ನು ಕಳೆದಿದ್ದಾರೆ. ಈ ವೇಳೆ ತಾವು ತೀವ್ರ ಯಾತನೆ ಅನುಭವಿಸಿದ್ದು, ಜಾರ್ಜಿಯಾದ ಕಾನೂನು ಜಾರಿ ಸಂಸ್ಥೆಗಳು ತಮ್ಮ ಬಳಿ ಸಾರ್ವಜನಿಕ ಕ್ಷಮೆಯಾಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Road Accident: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಡಿಕ್ಕಿ; ಕಾರು ಚಾಲಕ ಸಾವು

Bagalkot accident: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್‌ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Accident Case: ಹೈವೇಯಲ್ಲಿ ನಡೀತು ಘನಘೋರ ದುರಂತ! LPG ಟ್ಯಾಂಕರ್‌ ಬ್ಲಾಸ್ಟ್‌- ಏಳು ಮಂದಿ ಸಾವು

ಪಿಕಪ್ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಭಾರಿ ಸ್ಫೋಟ

LPG tanker explodes: ಹೋಶಿಯಾರ್‌ಪುರ- ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾ ಬಳಿ ಪಿಕಪ್ ವಾಹನಕ್ಕೆ ಟ್ಯಾಂಕರ್ ವೊಂದು ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ. 15 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಕೆಲವರು ಚೇತರಿಸಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಆರ್ಥಿಕ ಪರಿಹಾರವನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

UP dowry death Case: ವರದಕ್ಷಿಣೆಗಾಗಿ ಪತ್ನಿಯನ್ನು ದಹಿಸಿದ ಪಾಪಿಗೆ ತಕ್ಕ ಶಾಸ್ತಿ- ಪೊಲೀಸರಿಂದ ಕಾಲಿಗೆ ಗುಂಡೇಟು

ಪತ್ನಿಯನ್ನು ಜೀವಂತ ಸುಟ್ಟ ಪತಿಗೆ ಗುಂಡೇಟು

UP dowry death accused:ಬರೋಬ್ಬರಿ 35 ಲಕ್ಷ ರೂ.ಗೆ ವರದಕ್ಷಿಣೆಗಾಗಿ ಪತ್ನಿಯನ್ನ ಸಾಯುವಂತೆ ಹೊಡೆದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆಯನ್ನು ನಿಕ್ಕಿ ಎಂದು ಗುರುತಿಸಲಾಗಿದ್ದು, ಪಾಪಿ ಪತಿ ವಿಪಿನ್‌ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ನು ನಿಕ್ಕಿಯ ಅತ್ತೆ, ಮಾವ ಮತ್ತು ಸೋದರ ಮಾವ ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Sameer M D: ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಎಂ.ಡಿ. ಸಮೀರ್

ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಎಂ.ಡಿ. ಸಮೀರ್

Dharmasthala Case: ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಸುಮೋಟೋ ಪ್ರಕರಣ ವಿರುದ್ಧ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಸಮೀರ್ ಎಂ.ಡಿ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

Road Accident: ಒನ್‌ವೇನಲ್ಲಿ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ; ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವು

ಅಪಘಾತ; ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವು

ಭಾನುವಾರ ಬೆಳ್ಳಂ ಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ (flyover) ಮೇಲಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್​ನಲ್ಲಿ ನಡೆದಿದೆ.

UP Horror: ಅಮ್ಮನನ್ನು ಹೊಡೆದು ಲೈಟರ್‌ನಿಂದ ಸುಟ್ರು...! ವರದಕ್ಷಿಣೆಕ್ಕಾಗಿ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಪತಿ

ವರದಕ್ಷಿಣೆಕ್ಕಾಗಿ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಪತಿ

Dowry Killing: ಬರೋಬ್ಬರಿ 35 ಲಕ್ಷ ರೂ.ಗೆ ವರದಕ್ಷಿಣೆಗಾಗಿ ಪತ್ನಿಯನ್ನ ಸಾಯುವಂತೆ ಹೊಡೆದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆಯನ್ನು ನಿಕ್ಕಿ ಎಂದು ಗುರುತಿಸಲಾಗಿದ್ದು, ಪಾಪಿ ಪತಿ ವಿಪಿನ್‌ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ನು ನಿಕ್ಕಿಯ ಅತ್ತೆ, ಮಾವ ಮತ್ತು ಸೋದರ ಮಾವ ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Police Suspend: ಲಾಕಪ್‌ ಡೆತ್‌  ಪ್ರಕರಣ​; ನಾಲ್ವರು ಪೊಲೀಸರು ಸಸ್ಪೆಂಡ್ ​

ಲಾಕಪ್‌ ಡೆತ್‌ ಆರೋಪ; ನಾಲ್ವರು ಪೊಲೀಸರು ಸಸ್ಪೆಂಡ್ ​

ಚನ್ನಪಟ್ಟಣದ (Channapatna) ಎಂಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್​ ಡೆತ್ (Lockup Death) ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕಳ್ಳತನ ಕೇಸ್​ಗೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ರಮೇಶ್ ಸ್ಟೇಶನ್‌ನಲ್ಲಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ.

Fraud Case: ಶಿಕ್ಷಣ ಸಚಿವರ ಆಪ್ತ ಸಹಾಯಕನೆಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್‌

ಶಿಕ್ಷಣ ಸಚಿವರ ಪಿಎ ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಶಿಕ್ಷಣ ಸಚಿವ (Education Minister) ಎಸ್​​​​.ಮಧು ಬಂಗಾರಪ್ಪನವರ (Madhu Bangarappa) ಹೆಸರು ದುರ್ಬಳಕೆ ಮಾಡಿಕೊಂಡು, ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿಸಿಕೊಡುವುದಾಗಿ ನಂಬಿಸಿ ವಂಚಿಸುತ್ತಿದ್ದ ಮೈಸೂರಿನ (Mysuru) ರಘುನಾಥ್​​​​​​ ಎಂಬಾತನನ್ನು ಶಿವಮೊಗ್ಗದ ಜಯನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

RIMS Student: ಆಸ್ಪತ್ರೆಯ ಕ್ಯಾಂಟೀನ್ ಚಹಾ ಕುಡಿದು ವಿದ್ಯಾರ್ಥಿನಿ ಅಸ್ವಸ್ಥ; ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

ಆಸ್ಪತ್ರೆಯ ಕ್ಯಾಂಟೀನ್ ಚಹಾ ಕುಡಿದು ವಿದ್ಯಾರ್ಥಿನಿ ಅಸ್ವಸ್ಥ

ಜಾರ್ಖಂಡ್‌ನ ಅತ್ಯುನ್ನತ ಆರೋಗ್ಯ ಸಂಸ್ಥೆಯಾದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯು ಗುರುವಾರ ರಾತ್ರಿ ಆಸ್ಪತ್ರೆಯ ಕ್ಯಾಂಟೀನ್‌ನಲ್ಲಿ ಚಹಾ ಕುಡಿದ ಬಳಿಕ ಅಸ್ವಸ್ಥಳಾಗಿದ್ದು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Mahesh Shetty Thimarodi: ಏನೂ ಕಿತ್ಕೊಳೋಕೆ ಆಗಲ್ಲ; ಕೋರ್ಟ್‌ ಆವರಣದಲ್ಲೇ ನಾಲಿಗೆ ಹರಿಬಿಟ್ಟ ಮಹೇಶ್‌ ತಿಮರೋಡಿ!

ಏನೂ ಕಿತ್ಕೊಳೋಕೆ ಆಗಲ್ಲ; ನಾಲಿಗೆ ಹರಿಬಿಟ್ಟ ಮಹೇಶ್‌ ತಿಮರೋಡಿ!

Mahesh Shetty Thimarodi: ಹಿರಿಯಡ್ಕ ಸಬ್ ಜೈಲಿನಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ನಮ್ಮ ಹೋರಾಟ ಮುಂದುವರಿಯಲಿದೆ, ಸಹಕಾರ ನೀಡಿದ ವಕೀಲರಿಗೆ ಅಭಿನಂದನೆ ಸಲ್ಲಿಸುವೆ. ಅನಾಮಿಕನ ಬಂಧನದ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ

Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

Mahesh Shetty Thimarodi: ಬಿ.ಎಲ್‌. ಸಂತೋಷ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಜಿರೆಯ ನಿವಾಸದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಗುರುವಾರ ಅರೆಸ್ಟ್‌ ಮಾಡಿದ್ದರು. ಅವರಿಗೆ ಇದೀಗ ಉಡುಪಿ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

Dharmasthala case: ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ; ಮುಸುಕುಧಾರಿಯ ಮುಖವಾಡ ಬಯಲು!

ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ಚಿನ್ನಯ್ಯ!

Mask Man Chinnaiah: ದೂರುದಾರ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಸಿ.ಎನ್ ಚಿನ್ನಯ್ಯ ಅಲಿಯಾಸ್ ಚಿನ್ನಪ್ಪ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಸದ್ಯ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ (police custody) ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.

Kolhapur Row: ಕೊಲ್ಲಾಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ;  10 ಜನರಿಗೆ ಗಾಯ, ವಾಹನಗಳಿಗೆ ಬೆಂಕಿ

ಕೊಲ್ಲಾಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; 10 ಜನರಿಗೆ ಗಾಯ

ಶುಕ್ರವಾರ ತಡರಾತ್ರಿ ಕೊಲ್ಲಾಪುರದಲ್ಲಿ ಸಿದ್ಧಾರ್ಥನಗರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳ ಗಲಭೆಗೆ ತಿರುಗಿದೆ. ಗುಂಪುಗಳು ಪರಸ್ಪರ ದಾಳಿ ನಡೆಸಿದಾಗ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ರಾತ್ರಿ 10 ಗಂಟೆಯ ಹೊತ್ತಿಗೆ ಎರಡೂ ಕಡೆಯವರು ದೊಡ್ಡ ಸಂಖ್ಯೆಯಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

Murder Case: ಪ್ರಿಯಕರನಿಗಾಗಿ ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಂದ ಸೊಸೆ!

ಪ್ರಿಯಕರನಿಗಾಗಿ ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಂದ ಸೊಸೆ!

Murder Case: ಮಹಿಳೆಯೊಬ್ಬಳು ಪ್ರಿಯಕರನ ಜತೆ ಅನೈತಿಕ ಸಂಬಂಧ ಹೊಂದಿದ್ದಳು. ಇದಕ್ಕೆ ಅತ್ತೆ ಅಡ್ಡಿಯಾಗಿದ್ದಳು. ಪ್ರಿಯಕರನಿಗಾಗಿ ಮನೆಯಲ್ಲಿ ಚಿನ್ನಾಭರಣ ಹಾಗೂ ಹಣ ಕಳವು ಮಾಡುತ್ತಿದ್ದಳು. ಕದ್ದ ಹಣ ಹಾಗೂ ಚಿನ್ನಾಭರಣವನ್ನು ಪ್ರಿಯಕರನಿಗೆ ಕೊಡುತ್ತಿದ್ದಳು ಎನ್ನಲಾಗಿದೆ.

Dharmasthala Case: ಬುರುಡೆ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್‌, ಮಟ್ಟೆಣ್ಣವರ್‌ಗೆ ಢವಢವ

ಬುರುಡೆ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್‌

Mask Man: ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ. ಈ ಪ್ರಕರಣದ ಸೂತ್ರಧಾರಿಗಳೇ ಬೇರೆ ಇದ್ದಾರೆ. ಅವರ ಮಾಹಿತಿ ಪಡೆಯಲು ಚಿನ್ನಯ್ಯ ಪೊಲೀಸ್‌ ಕಸ್ಟಡಿಗೆ ಬೇಕಾಗಿದ್ದಾನೆ ಎಂದು ಎಸ್‌ಐಟಿ ತಿಳಿಸಿತ್ತು.

Loading...