ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಆರೋಪಿಗಳನ್ನು ಬಂಧಿಸಲು ಬಂದ ದೆಹಲಿ ಪೊಲೀಸರನ್ನೇ ಬಂಧಿಸಿದ ಶಿಮ್ಲಾ ಪೊಲೀಸರು

ಕಾಂಗ್ರೆಸ್ ಕಾರ್ಯಕರ್ತರ ಬಂಧನ: ಪೊಲೀಸರ ನಡುವೆ ಘರ್ಷಣೆ

ಇತ್ತೀಚೆಗೆ ನಡೆದ ಎಐ ಶೃಂಗಸಭೆಯ ವೇಳೆ ಶರ್ಟ್ ಧರಿಸದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದು, ಇವರನ್ನು ದೆಹಲಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡರು. ಇದು ದೆಹಲಿ ಮತ್ತು ಹಿಮಾಚಲ ಪ್ರದೇಶದ ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಇದಕ್ಕೆ ಸಂಬಂಧಿಸಿ ದೆಹಲಿ ಪೊಲೀಸರ ವಿರುದ್ಧ ಅಪಹರಣ ದೂರು ಕೂಡ ದಾಖಲಾಗಿದೆ.

ಶಾಲೆಯ ಮೊದಲ ದಿನವೇ 4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ

ಶಾಲಾ ಆವರಣದಲ್ಲೇ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ

ಶಾಲೆಯ ಆವರಣದಲ್ಲಿ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ದುರಂತ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಬಿಕಾನೆರ್ ಜಿಲ್ಲೆಯಲ್ಲಿ ನಡೆದಿದೆ. ಶ್ರೀದುಂಗರ್ಗಢ ಪ್ರದೇಶದ ಉಪ್ನಿ ಗ್ರಾಮದಲ್ಲಿರುವ ಸ್ವಾಮಿ ವಿವೇಕಾನಂದ ಮಾದರಿ ಶಾಲೆಯಲ್ಲಿ ಈ ದುರಂತ ನಡೆದಾಗ ಶಾಲೆಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ.

ʼʼನಾನು ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆʼʼ: ವ್ಯಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಯುವಕ ಆತ್ಮಹತ್ಯೆ

ವ್ಯಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಯುವಕ ಆತ್ಮಹತ್ಯೆ

Self Harming: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪ್ರೇಮ ವೈಫಲ್ಯದಿಂದ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೀರಿನ ಕಟ್ಟೆಗೆ ಹಾರಿ ಮೃತಪಟ್ಟ ಯುವಕನನ್ನು ಧನುಷ್ (19) ಎಂದು ಗುರುತಿಸಲಾಗಿದೆ. ಡೆತ್‌ನೋಟ್‌ ಪತ್ತೆಯಾಗಿದೆ.

Kidnap case: ಕನ್ನಡದ ನಿರ್ದೇಶಕನ ಕಿಡ್ನಾಪ್, ಹಲ್ಲೆ; ನಟಿ ಐಶ್ವರ್ಯಾ ಸೇರಿ 11 ಮಂದಿ ಆರೆಸ್ಟ್

ಕನ್ನಡದ ನಿರ್ದೇಶಕನ ಕಿಡ್ನಾಪ್, ಹಲ್ಲೆ; ನಟಿ ಸೇರಿ 11 ಮಂದಿ ಆರೆಸ್ಟ್

ಕಿಡ್ನ್ಯಾಪ್‌ಗೆ ಒಳಗಾದವರು ಅನೀಶ್ ಎಂಬ ಯುವ ನಿರ್ದೇಶಕ. ಈ ಹಿಂದೆ ‘ಭರವಸೆಯೇ ಜೀವನ’ ಸೇರಿದಂತೆ ಕೆಲ ಕಿರುಚಿತ್ರಗಳನ್ನು ನಿರ್ದೇಶಿಸಿದ್ದರು. ಆರೋಪಿಗಳು ಅನೀಶ್ ಅವರನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ಬಳಿಕ ಅವರನ್ನು ಬ್ಯಾಡರಹಳ್ಳಿಯಲ್ಲಿರುವ ಮನೆಯೊಂದರಲ್ಲಿ ಇರಿಸಿ, ಕ್ರಿಕೆಟ್ ಸ್ಟಂಪ್ ಹಾಗೂ ಹಾಕಿ ಸ್ಟಿಕ್ ಬಳಸಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ನಟಿ ಸೇರಿದಂತೆ ಒಟ್ಟು 11 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ಗರ್ಭಿಣಿ ಪತ್ನಿ, ಮೂವರು ಹೆಣ್ಣು ಮಕ್ಕಳ ಗಂಟಲು ಸೀಳಿ ಕೊಂದ ಪಾಪಿ ಪತಿ!

ಗರ್ಭಿಣಿ ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿದ ಪತಿ!

ದೆಹಲಿ ನಗರದ ಹೊರವಲಯದ ಪ್ರೇಮ್ ಚಂದ್ ಪಾರ್ಕ್ ಪ್ರದೇಶದಲ್ಲಿ ಗರ್ಭಿಣಿ ಪತ್ನಿ ಹಾಗೂ ಮೂವರು ಪುಟ್ಟ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಗಂಡು ಮಗುವಿನ ವ್ಯಾಮೋಹವೇ ಈ ಕೃತ್ಯಕ್ಕೆ ಕಾರಣವೆಂದು ಶಂಕಿಸಲಾಗಿದೆ. ಪ್ರಮುಖ ಆರೋಪಿ ಮುಂಚುನ್ ಕೆವತ್ ತಲೆಮರೆಸಿಕೊಂಡಿದ್ದು, ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Rowdy Sheeter murder case: ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಕೊಚ್ಚಿ ಕೊಲೆ

ಕೊಲೆಯಾದ ಪವನ್ ಕುಮಾರ್ ಹಿಂದೆ ಮರ್ಡರ್ ಪ್ರಕರಣವೊಂದರಲ್ಲಿ A5 ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದ. ಮಗ ಇನ್ನು ಕೆಟ್ಟ ಹಾದಿ ಹಿಡಿಯೋದು ಬೇಡ. ಒಳ್ಳೆಯವನಾಗಿ ಬದಲಾಗಲಿ ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಹಿಂದಷ್ಟೇ ಮನೆ ಸಮೀಪವೇ ಕುಟುಂಬದವರು ಅವನಿಗೆ ಬೇಕರಿ ಉದ್ಯಮ ನಡೆಸಲು ಅಂಗಡಿ ತೆರೆದು ಕೊಟ್ಟಿದ್ದರು.

Ranya Rao: ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ! ಚಾರ್ಜ್‌ಶೀಟ್‌ನಲ್ಲಿ ಬಹಿರಂಗ

ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ!

ಪ್ರಮುಖ ಆರೋಪಿ ರನ್ಯಾ ರಾವ್‌ ಅವರು 2025ರ ಮಾ.3ರಂದು 12.56 ಕೋಟಿ ರು. ಮೌಲ್ಯದ 14 ಕೆ.ಜಿ. ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಬಳಿಕ ಆಕೆಯ ಮನೆಯ ದಾಳಿ ನಡೆಸಿ ಶೋಧಿಸಿದಾಗ 2.06 ಕೋಟಿ ರು. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರು. ನಗದು ಪತ್ತೆಯಾಗಿತ್ತು.

Road Accident: ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ ಯುವಕರು ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಹೊರಟಿದ್ದರು. ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ಬುಲೆಟ್ ಬೈಕ್ ಓಡಿಸುತ್ತಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವಕ ಯಶವಂತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Self Harming: ಸಿಬಿಐ ತನಿಖೆ ಭಯದಿಂದ ಬಿಬಿಎಂಪಿ ನಿವೃತ್ತ ಅಧಿಕಾರಿ ಆತ್ಮಹತ್ಯೆ?

ಸಿಬಿಐ ತನಿಖೆ ಭಯದಿಂದ ಬಿಬಿಎಂಪಿ ನಿವೃತ್ತ ಅಧಿಕಾರಿ ಆತ್ಮಹತ್ಯೆ?

ತನಿಖೆ ನಡೆಸಿದಾಗ, ಪರಮೇಶ್ವರಯ್ಯ ಅವರ ಆಸ್ತಿ ಮೌಲ್ಯದಲ್ಲಿ ಗಣನೀಯ ಏರಿಕೆ ಕಂಡುಬಂದಿತ್ತು. 2012ರಲ್ಲಿ 29.64 ಲಕ್ಷ ರೂಪಾಯಿ ಇದ್ದ ಅವರ ಆಸ್ತಿ, 2021ರ ವೇಳೆಗೆ ಬರೋಬ್ಬರಿ 5.85 ಕೋಟಿ ರೂ.ಗೆ ಏರಿಕೆಯಾಗಿತ್ತು. ಬೆಂಗಳೂರು, ತುಮಕೂರಿನಲ್ಲಿ ನಿವೇಶನಗಳು, ಕೋರಮಂಗಲದಲ್ಲಿ ಸೈಟ್, ಮನೆ ಮತ್ತು ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದು ಸಹ ಪತ್ತೆಯಾಗಿತ್ತು. ತನಿಖೆ ವೇಳೆ ಪರಮೇಶ್ವರಯ್ಯ ಭ್ರಷ್ಟಾಚಾರ ನಡೆಸಿರುವುದು ದೃಢಪಟ್ಟಿತ್ತು.

ಮದರಸಾದಲ್ಲಿ ಅನಾಥ ವಿದ್ಯಾರ್ಥಿಗಳಿಗೆ ಥಳಿಸಿದ ಶಿಕ್ಷಕ; ಮುಸ್ಲಿಂ ಧರ್ಮ ಗುರುವಿನ ಕ್ರೌರ್ಯಕ್ಕೆ ಭಾರಿ ಆಕ್ರೋಶ

ಮದರಸಾದಲ್ಲಿ ಅನಾಥ ವಿದ್ಯಾರ್ಥಿಗಳಿಗೆ ಥಳಿಸಿದ ಮುಸ್ಲಿಂ ಧರ್ಮ ಗುರು

Teacher thrashes orphan students: ಮದರಸಾವೊಂದರಲ್ಲಿ ಇಬ್ಬರು ಅನಾಥ ವಿದ್ಯಾರ್ಥಿಗಳ ಮೇಲೆ ಶಿಕ್ಷಕನೊಬ್ಬ ತೀವ್ರ ದೈಹಿಕ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸಾವಂತವಾಡಿ ಬಳಿ ನಡೆದಿದೆ. ವಿದ್ಯಾರ್ಥಿಗಳಿಗೆ ಒಂದೆರಡು ಬಾರಿಯಲ್ಲ, ಹಲವು ಬಾರಿ ಥಳಿಸುವ ಮೂಲಕ ಶಿಕ್ಷಕ ಕ್ರೌರ್ಯ ಮೆರೆದಿದ್ದಾನೆ ಎಂದು ಹೇಳಲಾಗಿದೆ.

100 ರುಪಾಯಿ ಸ್ಕ್ರೀನ್ ಗಾರ್ಡ್ ವಿಚಾರಕ್ಕೆ ಹರಿಯಿತು ನೆತ್ತರು: ಚಿತ್ರದುರ್ಗದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಇರಿದ ಆರೋಪಿ

ಸ್ಕ್ರೀನ್ ಗಾರ್ಡ್ ವಿಚಾರದಲ್ಲಿ ಜಗಳ: ಅಂಗಡಿ ಮಾಲೀಕನಿಗೆ ಇರಿತ

Mobile screen guard dispute: ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಕ್ರೀನ್ ಗಾರ್ಡ್ ಬದಲಾವಣೆ ವಿಚಾರದಲ್ಲಿ ಜಗಳ ನಡೆದು ವ್ಯಕ್ತಿಯೊಬ್ಬ ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಅಂಗಡಿ ಮಾಲಕ ಬೇರೆ ಮಾದರಿಯ ಸ್ಕ್ರೀನ್ ಗಾರ್ಡ್‌ಗೆ ಹೆಚ್ಚುವರಿಯಾಗಿ 100 ರುಪಾಯಿ ಕೇಳಿದ್ದಾರೆ ಎನ್ನಲಾಗಿದ್ದು, ನಂತರ ಜಗಳ ಆರಂಭವಾಗಿದೆ. ಆರೋಪಿಯು ಮಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಪಂಜಾಬ್‍ನಲ್ಲಿ ಇಬ್ಬರು ಪೊಲೀಸರ ಹತ್ಯೆಯ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ

ಪೊಲೀಸರ ಕೊಲೆಯ ಹಿಂದೆ ಪಾಕ್‍ನ ಐಎಸ್ಐ ಕೈವಾಡ

Punjab police murder case: ಪಂಜಾಬ್‌ನ ಗುರುದಾಸ್ಪುರದ ಭಾರತ ಮತ್ತು ಪಾಕಿಸ್ತಾನ ಗಡಿಯ ಬಳಿ ಇಬ್ಬರು ಪೊಲೀಸರ ಹತ್ಯೆಯನ್ನು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ನಡೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳು ಪಾಕಿಸ್ತಾನದ ಐಎಸ್‌ಐ ಆದೇಶದ ಮೇರೆಗೆ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಘೋರ ದುರಂತ: ಐವಿ ಡ್ರಿಪ್ ತೆಗೆಯುವಾಗ  6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್

6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್

ಜ್ವರಕ್ಕೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ಹಾಕಿದ್ದ ಐವಿ ಡ್ರಿಪ್ ತೆಗೆಯುವಾಗ ನರ್ಸ್ ಒಬ್ಬರು ಮಗುವಿನ ಕಿರು ಬೆರಳನ್ನೇ ಕತ್ತರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗುವಿಗೆ ತಕ್ಷಣ ತುರ್ತು ಚಿಕಿತ್ಸೆ ನೀಡಲಾಯಿತು ಆದರೂ ಮಗು ಬೆರಳನ್ನು ಕಳೆದುಕೊಂಡಿದೆ. ಈ ಕುರಿತು ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗಣಿ ಇಲಾಖೆ ಅಧಿಕಾರಿ ಮನೆಗೆ ವಿಜಿಲೆನ್ಸ್ ತಂಡ ದಾಳಿ,  4 ಕೋಟಿ ರೂ. ನಗದು ವಶ

ಗಣಿ ಇಲಾಖೆ ಅಧಿಕಾರಿ ಬಂಧನ

ಗಣಿ ಇಲಾಖೆ ಅಧಿಕಾರಿಯೊಬ್ಬರ ಮನೆಗೆ ವಿಜಿಲೆನ್ಸ್ ಇಲಾಖೆ ತಂಡ ದಾಳಿ ನಡೆಸಿದೆ. ಒಡಿಶಾದ ಗಣಿ ಉಪ ನಿರ್ದೇಶಕಿ ದೇಬಬ್ರತ ಮೊಹಂತಿ ಅವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು 4 ಕೋಟಿ ರೂ. ನಗದು ವಶ ಪಡಿಸಿಕೊಂಡಿದ್ದಾರೆ. ಕಲ್ಲಿದ್ದಲು ಮಾರಾಟಗಾರರಿಂದ 30,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ ದಾಳಿ ನಡೆದಿದ್ದು, ದೇಬಬ್ರತ ಮೊಹಂತಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಜಾರ್ಖಂಡ್ ಏರ್ ಆಂಬ್ಯುಲೆನ್ಸ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್‌ ಇರಲಿಲ್ಲ; ತನಿಖೆಗೆ ಎದುರಾಯ್ತು ಮತ್ತಷ್ಟು ಸವಾಲು

ಏರ್ ಆಂಬ್ಯುಲೆನ್ಸ್‌ ಅಪಘಾತ ತನಿಖೆಗೆ ಅಡ್ಡಿ

ರಾಂಚಿಯಿಂದ ದೆಹಲಿಗೆ ಹೊರಟ್ಟಿದ್ದ ಜಾರ್ಖಂಡ್ ಏರ್ ಆಂಬ್ಯುಲೆನ್ಸ್‌ ಹವಾಮಾನ ವೈಪರೀತ್ಯದಿಂದಾಗಿ ಟೇಕ್ ಆಫ್ ಆದ ಸುಮಾರು 23 ನಿಮಿಷಗಳ ಅನಂತರ ಸಂವಹನ ಕಳೆದುಕೊಂಡು ಛತ್ರ ಜಿಲ್ಲೆಯ ಸಿಮಾರಿಯಾ ಬಳಿಯ ಅರಣ್ಯ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಏನಾಯಿತು ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳ ತನಿಖೆಗೆ ಇಳಿದಿದ್ದು, ಏರ್ ಆಂಬ್ಯುಲೆನ್ಸ್‌ನ ಕಪ್ಪು ಪೆಟ್ಟಿಗೆ ಇಲ್ಲದೇ ಇರುವುದು ತನಿಖೆಯನ್ನು ಜಟಿಲಗೊಳಿಸಿದೆ.

Puttur Love dokha: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಪ್ರೇಮ ವಂಚನೆ ಪ್ರಕರಣ: ಸಾಯಲು ಯತ್ನಿಸಿದ ಮಗುವಿನ ತಾಯಿ

ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಪ್ರೇಮ ವಂಚನೆ: ಸಾಯಲು ಯತ್ನಿಸಿದ ಯುವತಿ

ಪುತ್ತೂರಿನ ಉಚ್ಚಾಟಿತ ಬಿಜೆಪಿ ನಾಯಕರೊಬ್ಬರ ಪುತ್ರ, ಜೆ. ಕೃಷ್ಣ ರಾವ್ ಎಂಬಾತ ತನ್ನ ಕ್ಲಾಸ್‌ಮೇಟ್ ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಘಟನೆಯ ಬಳಿಕ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿ ಡಿಎನ್‌ಎ ಪರೀಕ್ಷೆ ನಡೆದು ಜೆ. ಕೃಷ್ಣ ರಾವ್ ಮಗುವಿನ ತಂದೆ ಎಂಬುದು ಸಾಬೀತಾಗಿತ್ತು.

ಗೆಳೆಯನ ಮುಂದೆಯೇ ಯುವತಿ ಮೇಲೆ ಏಳು ಮಂದಿ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಗೆಳೆಯನ ಮುಂದೆಯೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

crime news: 28 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಗೆಳೆಯನ ಮುಂದೆಯೇ ಏಳು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ, 10,000 ರೂ. ಗಳನ್ನು ಸುಲಿಗೆ ಮಾಡಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಂತ್ರಸ್ಥೆ ಇಬ್ಬರು ಆರೋಪಿಗಳನ್ನು ಗುರುತಿಸಿದ ನಂತರ ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ.

drugs factory: ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ಐವರು ಗುಜರಾತಿಗಳ ಸೆರೆ

ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ಐದು ಗುಜರಾತಿಗಳ ಸೆರೆ

ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಫ್ಯಾಕ್ಟರಿಯಲ್ಲಿ ಡ್ರಗ್ಸ್ ತಯಾರಿಕೆ ಪತ್ತೆಯಾಗುತ್ತಿದ್ದಂತೆ ಅಲರ್ಟ್ ಆಗಿದ್ದ ಜಿಲ್ಲಾ ಪೊಲೀಸರು, ಕಳೆದ ಜ.28 ರಂದು ಮೈಸೂರು ತಾಲೂಕು ಯಾಂದಳ್ಳಿಯಲ್ಲಿನ ಮನೆಯೊಂದರಲ್ಲಿ ಡ್ರಗ್ಸ್ ತಯಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದರು. ದಾಳಿ ವೇಳೆ ಆ ಮನೆಯಲ್ಲಿ ಹಲವು ರಾಸಾಯನಿಕ ವಸ್ತುಗಳು ಹಾಗೂ 10 ಬ್ಯಾರಲ್ ರಾಸಾಯನಿಕ ದ್ರವ್ಯ ಪತ್ತೆಯಾಗಿತ್ತು.

Road Accident: ಟಾಟಾ ಏಸ್-ಕ್ಯಾಂಟರ್ ನಡುವೆ ಅಪಘಾತ: 10 ಮಂದಿಗೆ ಗಂಭೀರ ಗಾಯ, ತಪ್ಪಿದ ಭಾರಿ ಅನಾಹುತ

ಟಾಟಾ ಏಸ್-ಕ್ಯಾಂಟರ್ ನಡುವೆ ಅಪಘಾತ

ಗಂಭೀರ ಗಾಯಗಳಾಗಿದ್ದರೂ ಯಾವುದೇ ಪ್ರಾಣ ಹಾನಿಯಾಗದೇ ಭಾರಿ ಅನಾಹುತ ತಪ್ಪಿದೆ. ಘಟನೆ ತಾಲ್ಲೂಕಿನ ನಾಯನಹಳ್ಳಿ ಗೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅಜ್ಜವಾರ ಗ್ರಾಮದ 6 ಜನ ಕೂಲಿ ಕಾರ್ಮಿಕ ಮಹಿಳೆಯ ರಾದ ವಿದ್ಯಾ, ಸಾವಿತ್ರಮ್ಮ, ಭಾವನ, ನಾಗಮ್ಮ, ಲಕ್ಶ್ಮಮ್ಮ, ಮುನಿರತ್ನ ಸೇರಿ 10 ಮಂದಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

26/11 ಮುಂಬೈ ಮಾದರಿಯ ಮತ್ತೊಂದು ದಾಳಿ ನಡೆಸುತ್ತೇವೆ; ಪಹಲ್ಗಾಮ್‌ ಅಟ್ಯಾಕ್‌ ಮಾಸ್ಟರ್‌ಮೈಂಡ್‌ ಕಸೂರಿಯಿಂದ ಎಚ್ಚರಿಕೆ: ದೇಶಾದ್ಯಂತ ಕಟ್ಟೆಚ್ಚರ

26/11 ಮಾದರಿಯ ಮತ್ತೊಂದು ದಾಳಿಯ ಎಚ್ಚರಿಕೆ ನೀಡಿದ ಉಗ್ರ

Saifullah Kasuri: 2008ರ ನವೆಂಬರ್‌ 26ರಂದು ಪಾಕಿಸ್ತಾನದ ಲಷ್ಕರ್‌-ಎ-ತೈಬಾ ಉಗ್ರ ಸಂಘಟನೆಯ ಸದಸ್ಯರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈ ಮೇಲೆ ದಾಳಿ ನಡೆಸಿದ ಮಾದರಿಯಲ್ಲಿ ಮತ್ತೊಂದು ಅಟ್ಯಾಕ್‌ ಮಾಡುವುದಾಗಿ ಲಷ್ಕರ್‌-ಎ-ತೈಬಾದ ಮುಖಂಡ ಸೈಫುಲ್ಲಾ ಕಸೂರಿ ಬೆದರಿಕೆ ಹಾಕಿದ್ದಾನೆ.

ಮದುವೆಯಾದ ಕೆಲವೇ ಗಂಟೆಗಳಲ್ಲಿ ದಾಂಪತ್ಯದಲ್ಲಿ ಬಿರುಕು: ಪತಿಯನ್ನು ಬಿಟ್ಟು ಪ್ರಿಯಕರನನ್ನೇ ವರಿಸಲು ಹಠ ಹಿಡಿದ ನವವಧು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತಿ ತೊರೆದ ವಧು

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ವಿಚಿತ್ರ ಘಟನೆ ನಡೆದಿದೆ. ನವವಧು ತನ್ನ ಪತಿಯನ್ನು ತೊರೆದು ಪ್ರಿಯಕರನೊಂದಿಗೆ ಜೀವನ ಸಾಗಿಸುವುದಾಗಿ ಘೋಷಿಸಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾಳೆ. ಕುಟುಂಬದ ಒತ್ತಾಯದಿಂದ ಮದುವೆಗೆ ಒಪ್ಪಿದ್ದೆ ಎಂದು ಆಕೆ ಹೇಳಿದ್ದು, ಪೊಲೀಸರು ಎರಡೂ ಕುಟುಂಬಗಳ ಮಧ್ಯೆ ಸಮಾಲೋಚನೆ ನಡೆಸಿದರೂ ತನ್ನ ನಿರ್ಧಾರ ಬದಲಾಯಿಸಲಿಲ್ಲ ಎನ್ನಲಾಗಿದೆ.

ಮಗಳ ಮದುವೆಗೆ ಮುನ್ನ ಸೂರತ್‌ನ ಕೋಟ್ಯಧಿಪತಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ತನಿಖೆಯಲ್ಲಿ ಹೊರಬಿತ್ತು ಅಸಲಿ ಕಾರಣ

ಸೂರತ್ ಉದ್ಯಮಿ ಆತ್ಮಹತ್ಯೆ ಪ್ರಕರಣದ ಅಸಲಿಯತ್ತೇನು?

crime news: ಸೂರತ್‌ನ ಬಿಲ್ಡರ್ ಆತ್ಮಹತ್ಯೆ ಪ್ರಕರಣಕ್ಕೆ (self-harming case) ಸಂಬಂಧಿಸಿದಂತೆ ಮಹತ್ವದ ಪ್ರಗತಿ ಕಂಡುಬಂದಿದೆ. ಪೊಲೀಸರು ಅವರ ಪಾರ್ಟ್ನರ್ ಪೂನಂ ಭಡೋರಿಯಾ ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಪೂನಂ ಕೂಡ ಪೊಲೀಸರಿಗೆ ಪ್ರತಿ ದೂರು ನೀಡಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಹೇಳಿದ್ದಾರೆ.

ಚಿನ್ನಾಭರಣ ಕಳ್ಳ, ಖಳನಾಯಕನ ಪಾತ್ರಧಾರಿ: ತಂದೆಯನ್ನೇ ಕೊಂದ ಪಾಪಿಯ ಕರಾಳ ಇತಿಹಾಸ ಬೆಳಕಿಗೆ

ತಂದೆಯನ್ನೇ ಕೊಂದ ಪಾಪಿ ಪುತ್ರನ ಕರಾಳ ಇತಿಹಾಸ

Crime News: ತಂದೆ ಜತೆ ನಡೆದ ಜಗಳದ ನಂತರ ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಅಕ್ಷತ್ ತಂದೆಯ ಮೃತದೇಹವನ್ನು ಮನೆಯ ಮೂರನೇ ಮಹಡಿಯಿಂದ ನೆಲ ಮಹಡಿಯಲ್ಲಿರುವ ಖಾಲಿ ಕೋಣೆಗೆ ಸ್ಥಳಾಂತರಿಸಿದ್ದ. ಪೊಲೀಸ್ ಮೂಲಗಳ ಪ್ರಕಾರ, ದೇಹವನ್ನು ಛಿದ್ರಗೊಳಿಸಲು ಯಂತ್ರ ಬಳಸಿದ್ದಾನೆ.

ಗೋರಖ್‌ಪುರ ಏಮ್ಸ್‌ನಲ್ಲಿ ಘೋರ ಕೃತ್ಯ; ನಾಗಾಲ್ಯಾಂಡ್ ವೈದ್ಯೆಯ ಮೇಲೆ ಜನಾಂಗೀಯ ನಿಂದನೆ, ಲೈಂಗಿಕ ದೌರ್ಜನ್ಯ

ಗೋರಖ್‌ಪುರ ಏಮ್ಸ್ ವೈದ್ಯೆಗೆ ಜನಾಂಗೀಯ ನಿಂದನೆ, ದೌರ್ಜನ್ಯ

ಉತ್ತರ ಪ್ರದೇಶದ ಗೋರಖ್‌ಪುರದ AIIMSನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗಾಲ್ಯಾಂಡ್ ಮೂಲದ ಮಹಿಳಾ ರೆಸಿಡೆಂಟ್ ವೈದ್ಯೆಯ ವಿರುದ್ಧ ಜನಾಂಗೀಯ ನಿಂದನೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಫೆಬ್ರವರಿ 22ರ ರಾತ್ರಿ ಕ್ಯಾಂಪಸ್‌ಗೆ ಹಿಂತಿರುಗುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿ, ಆರ್ಮಿ ಕ್ಯಾಂಪ್ ಸಮೀಪ ತಡೆದು ಅವಾಚ್ಯವಾಗಿ ನಿಂದಿಸಿ ಅನುಚಿತವಾಗಿ ಸ್ಪರ್ಶಿಸಿದರೆಂದು ದೂರಿನಲ್ಲಿ ಹೇಳಲಾಗಿದೆ.

Loading...