ಬೆಂಗಳೂರಿನಲ್ಲಿ ಘೋರ ಘಟನೆ; ಟಿಪ್ಪರ್ ಲಾರಿ ಹರಿದು 5 ವರ್ಷದ ಬಾಲಕ ಸಾವು!
ಬೆಂಗಳೂರು ನಗರದ ಉತ್ತರಹಳ್ಳಿಯ ಸಾವನದರ್ಬಾರ್ ಆಶ್ರಮದ ಬಳಿ ಅಪಘಾತ ಸಂಭವಿಸಿದೆ. ಮಗನನ್ನು ಶಾಲೆಗೆ ಬಿಡಲು ತಾಯಿ ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಸದ್ಯ ಮೃತ ಬಾಲಕನ ತಂದೆ ನೀಡಿದ ದೂರಿನನ್ವಯ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.