ಗುರುಗ್ರಾಮ್ ಹಿಟ್ ಆ್ಯಂಡ್ ರನ್ ಪ್ರಕರಣ: ಆರೋಪಿ ಕಲ್ಯಾಣ್ ಸ್ಪಷ್ಟನೆ
Kalyan Bainsla: ಹರಿಯಾಣದ ಗುರುಗ್ರಾಮ್ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕರ್ಗೆ ಕಾರಿನಿಂದ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಆರೋಪಿ ಕಲ್ಯಾಣ್ ಬೈನ್ಸ್ಲಾ ತಾನು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದು ಹೇಳಿದ್ದಾರೆ. ಬೈಕ್ನಲ್ಲಿ ಮಹಿಳೆ ಇದ್ದಾಳೆ ಎಂಬುದೂ ತನಗೆ ತಿಳಿದಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.