ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Hidden Camera: ಸಿನಿಮಾ ಥಿಯೇಟರ್‌ನ ಮಹಿಳಾ ಟಾಯ್ಲೆಟ್‌ನಲ್ಲಿ ಗುಪ್ತ ಕ್ಯಾಮೆರಾ ಇಟ್ಟ ವಿಕೃತಕಾಮಿ!

ಸಿನಿಮಾ ಥಿಯೇಟರ್‌ನ ಮಹಿಳಾ ಟಾಯ್ಲೆಟ್‌ನಲ್ಲಿ ಗುಪ್ತ ಕ್ಯಾಮೆರಾ ಇಟ್ಟ ವಿಕೃತ

ಸಿನಿಮಾ ನೋಡಲು ಬಂದಿದ್ದ ಮಹಿಳೆಯರು ವಾಶ್‌ರೂಮ್‌ಗೆ ಹೋದಾಗ, ಕ್ಯಾಮೆರಾ ಕಂಡು ಶಾಕ್ ಆಗಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಸ್ಥಳೀಯರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗುಪ್ತ ಕ್ಯಾಮರಾ ಕಂಡ ಮಹಿಳೆಯರು ಇದನ್ನು ಗಮನಿಸಿ ತಕ್ಷಣವೇ ಹೊರಬಂದು ಕಿರುಚಾಡಿದ್ದಾರೆ. ಇದರಿಂದ ಥಿಯೇಟರ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Ballari Firing: ಬಳ್ಳಾರಿ ಘರ್ಷಣೆ: ಗುಂಡು ಹಾರಿಸಿದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ ಬಂಧನ, ಎಲ್ಲ ಆರೋಪಿಗಳು ಬೆಂಗಳೂರಿಗೆ ಶಿಫ್ಟ್

ಗುಂಡು ಹಾರಿಸಿದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ ಬಂಧನ, ‌ಬೆಂಗಳೂರಿಗೆ ಶಿಫ್ಟ್

ಶಾಸಕ ಭರತ್ ರೆಡ್ಡಿ (Bharath Reddy) ಅತ್ಯಾಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುರುಚರಣ್ ಸಿಂಗ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ರಾಜಶೇಖರ್ ಮೃತಪಟ್ಟಿದ್ದಾರೆ. 12 ಎಂಎಂ ಬುಲೆಟ್ ಅನ್ನು ರಾಜಶೇಖರ್ ದೇಹದಿಂದ ಪೋಸ್ಟ್ ಮಾರ್ಟಮ್ ವೇಳೆ ಹೊರ ತೆಗೆಯಲಾಗಿದೆ. ಹೊರ ತೆಗೆದ ಬುಲೆಟ್ ಫೋರೆನ್ಸಿಕ್‌ ಲ್ಯಾಬ್‌ಗೆ ಕಳುಹಿಸಲಾಗಿದೆ. ರಾಜಶೇಖರ್ ಮೃತನ ದೇಹ ಹೊಕ್ಕಿದ್ದು 12 ಎಂಎಂ ಸಿಂಗಲ್‌ಬೋರ್ ಬುಲೆಟ್ ಎಂದು ಖಚಿತವಾಗಿದೆ.

Stone Pelting: ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಚಾಮರಾಜಪೇಟೆಯ ಜೆ.ಜೆ.ನಗರದ ವಿ.ಎಸ್. ಗಾರ್ಡನ್‌ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವರದರಾಜು ಎಂಬವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯರ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕೊರಿಯಾದ ಪ್ರಿಯತಮನನ್ನು ಕೊಂದ ಮಣಿಪುರದ ಮಹಿಳೆ; ಲೀವ್‌ ಇನ್‌ ರಿಲೇಷನ್‌ಶಿಪ್‌ ದುರಂತ ಅಂತ್ಯ ಕಂಡಿದ್ದು ಹೇಗೆ?

ದಕ್ಷಿಣ ಕೊರಿಯಾದ ವ್ಯಕ್ತಿಯನ್ನು ಕೊಂದ ಮಣಿಪುರದ ಮಹಿಳೆ

ದಕ್ಷಿಣ ಕೊರಿಯಾ ಮೂಲದ ಸಂಗಾತಿಯನ್ನು ಮಣಿಪುರದ ಮಹಿಳೆ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ನಡೆದಿದೆ. ಈ ಜೋಡಿ ಕೆಲವು ಸಮಯಗಳಿಂದ ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿತ್ತು. ಮೃತನನ್ನು ದಕ್ಷಿಣ ಕೊರಿಯಾದ ಡಕ್‌ ಹೀ ಯುಹ್‌ ಎಂದು ಗುರುತಿಸಲಾಗಿದೆ.

Fake invoice racket: ಬೆಂಗಳೂರಿನಲ್ಲಿ 1,464 ಕೋಟಿ ಮೊತ್ತದ ನಕಲಿ ಇನ್‌ವಾಯ್ಸ್‌ ಸೃಷ್ಟಿ; ನಾಲ್ವರು ಅರೆಸ್ಟ್

1,464 ಕೋಟಿ ಮೊತ್ತದ ನಕಲಿ ಇನ್‌ವಾಯ್ಸ್‌ ಸೃಷ್ಟಿ; ನಾಲ್ವರು ಅರೆಸ್ಟ್

ಸಿಮೆಂಟ್, ಕಬ್ಬಿಣ ಮತ್ತು ಉಕ್ಕು ಸೇರಿ ಕಟ್ಟಡ ಸಾಮಗ್ರಿ ಹೆಸರಿನಲ್ಲಿ ವ್ಯವಹಾರ ನಡೆಸಿದಂತೆ ತೋರಿಸಿ, ಯಾವುದೇ ವಸ್ತು ಸಾಗಣೆ ಇಲ್ಲದೇ ಭಾರೀ ಪ್ರಮಾಣದ ನಕಲಿ ವ್ಯವಹಾರ ನಡೆಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ದಕ್ಷಿಣ ವಲಯದ ಜಾರಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮದುವೆ ಹಾಲ್‌ನಲ್ಲಿ ಸಂಬಂಧಿಕರ ಎದುರೇ ಸರ್‌ಪಂಚ್‌ ಮೇಲೆ ಗುಂಡಿನ ದಾಳಿ; ಪಂಜಾಬ್‌ನಲ್ಲಿ ಜನಪ್ರತಿನಿಧಿಯ ಭೀಕರ ಹತ್ಯೆ

ಮದುವೆ ಹಾಲ್‌ನಲ್ಲಿ ಸರ್‌ಪಂಚ್‌ ಮೇಲೆ ಗುಂಡಿನ ದಾಳಿ

ಜನಪ್ರತಿನಿಧಿಯೊಬ್ಬರನ್ನು ದುಷ್ಕರ್ಮಿಗಳಿಬ್ಬರು ಮದುವೆ ಹಾಲ್‌ನಲ್ಲಿ ಎಲ್ಲರೆದುರೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಮೃತರನ್ನು ಆಡಳಿತರೂಢ ಆಮ್‌ ಆದ್ಮಿ ಪಾರ್ಟಿಯ ಸರ್‌ಪಂಚ್‌ (ಗ್ರಾಮ ಪಂಚಾಯತ್‌ ಅಧ್ಯಕ್ಷ) ಜರ್ನೈಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳಿಬ್ಬರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

3ನೇ ಮಗುವೂ ಹೆಣ್ಣಾಗಿದ್ದಕ್ಕೆ ಪತ್ನಿ, ಮಕ್ಕಳನ್ನು ಬಿಟ್ಟು ಮತ್ತೊಬ್ಬ ಯುವತಿಯ ಹಿಂದೆ ಹೋದ ಗಂಡ!

ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಪತ್ನಿ ತೊರೆದು ಗಂಡ ಪರಾರಿ

ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಗಂಡನ ವಿರುದ್ಧ ಪತ್ನಿ ದೂರು ನೀಡಿದ್ದಾಳೆ. ಮೊದಲ ಇಬ್ಬರು ಮಕ್ಕಳು ಹೆಣ್ಣು ಎಂದು ಗೊತ್ತಾದಾಗ ಮೂರನೇಯ ಬಾರಿಗೆ ಗಂಡು ಹುಟ್ಟಬಹುದು ಎಂದು ಗಂಡ ಆಸೆ ಹೊಂದಿದ್ದ. ಆದರೆ ಮೂರನೇ ಮಗುವೂ ಹೆಣ್ಣಾಗಿದ್ದರಿಂದ ಪತ್ನಿ ಹಾಗೂ ಮಕ್ಕಳನ್ನೂ ಬಿಟ್ಟು ಗಂಡ ಪರಾರಿಯಾಗಿದ್ದಾನೆ.

ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳು ಕಿರುಕುಳ ನೀಡುವುದನ್ನು ತಡೆದ ಯುವಕನ ಹತ್ಯೆ

ಮಹಿಳೆಗೆ ಕಿರುಕುಳ ನೀಡುವುದನ್ನು ತಡೆದಿದ್ದಕ್ಕೆ ಯುವಕನ ಕೊಲೆ

Crime News: ಮಹಿಳೆಯೊಬ್ಬರಿಗೆ ಕಿರುಕುಳ ನೀಡುತ್ತಿದ್ದವರನ್ನು ತಡೆಯಲು ಮುಂದಾದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

ಪತಿಯ ಸರ್ಕಾರಿ ಉದ್ಯೋಗ ಪತ್ನಿಗೆ ಸಿಕ್ಕಿದ್ದಕ್ಕೆ ಕೋಪ; ಸೊಸೆಯನ್ನೇ ಹತ್ಯೆಗೈದ ಅತ್ತೆ!

ಮಗನ ಉದ್ಯೋಗ ಸಿಕ್ಕಿದ್ದಕ್ಕೆ ಸೊಸೆಯನ್ನೇ ಹತ್ಯೆಗೈದ ಅತ್ತೆ

Crime News: ಪತಿಯ ಸರ್ಕಾರಿ ಉದ್ಯೋಗ ಪತ್ನಿಗೆ ವರ್ಗಾವಣೆಗೊಂಡಿದ್ದಕ್ಕೆ ಕೋಪಗೊಂಡ ಅತ್ತೆ, ಸೊಸೆಯನ್ನೇ ಹತ್ಯೆಗೈದಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ರೈಲ್ವೆ ಉದ್ಯೋಗ ಹಾಗೂ ಗ್ರಾಚ್ಯುಟಿ ನಿಧಿ ವಿಚಾರದಲ್ಲಿ ಕೋಪಗೊಂಡ 60 ವರ್ಷದ ಅತ್ತೆ, ತನ್ನ ಸೊಸೆಯನ್ನೇ ಹತ್ಯೆ ಮಾಡಿದ್ದಾಳೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಘಟನೆ ನಡೆದಿದೆ.

Yallapur Bandh: ಹಿಂದೂ ಯುವತಿ ಹತ್ಯೆ ಪ್ರಕರಣ: ಇಂದು 'ಯಲ್ಲಾಪುರ ಬಂದ್'ಗೆ ಕರೆ

ಹಿಂದೂ ಯುವತಿ ಹತ್ಯೆ ಪ್ರಕರಣ: ಇಂದು 'ಯಲ್ಲಾಪುರ ಬಂದ್'ಗೆ ಕರೆ

ಶನಿವಾರ ಸಂಜೆ ರಂಜಿತಾ ಅವರು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಆರೋಪಿ ರಫೀಕ್ ಎಂಬಾತ ಪಟ್ಟಣದ ಮಾರ್ಕೋಜಿ ದೇವಸ್ಥಾನದ ಬಳಿ ಆಕೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಂಜಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು.

13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹದಿಹರೆಯದ ಬಾಲಕರು; ಹುಬ್ಬಳ್ಳಿಯಲ್ಲಿ ನಡೀತು ಆಘಾತಕಾರಿ ಘಟನೆ

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹದಿಹರೆಯದ ಬಾಲಕರು

Crime News: ಅಪ್ರಾಪ್ತ ಬಾಲಕಿಯ ಮೇಲೆ 14 ರಿಂದ 15 ವರ್ಷದ ಹದಿಹರೆಯದ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ರಾಜ್ಯದ ಹುಬ್ಬಳ್ಳಿಯಲ್ಲಿ ನಡೆದಿದೆ. ಬಾಲಕಿಯ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ, ಅದೇ ಪ್ರದೇಶದಲ್ಲಿ ವಾಸಿಸುವ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣ; ಆರೋಪಿ ರಫೀಕ್‌ ಶವ ಕಾಡಿನಲ್ಲಿ ಪತ್ತೆ!

ರಂಜಿತಾ ಹತ್ಯೆ ಪ್ರಕರಣ; ಆರೋಪಿ ರಫೀಕ್‌ ಶವ ಕಾಡಿನಲ್ಲಿ ಪತ್ತೆ!

Uttara Kannada News: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ರಂಜಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಹಂತಕ ರಫೀಕ್‌, ಈಗ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸದ್ಯ ಪೊಲೀಸರಿಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ದೇಹವನ್ನು ರವಾಸಲಾಗುತ್ತಿದೆ.

Tiruvannamalai Horror: ಗುಡಿಸಲಿಗೆ ಬೆಂಕಿ ಹಚ್ಚಿ ಲೀವ್‌ ಇನ್‌ ಜೋಡಿಯ ಕೊಲೆ; ಹತ್ಯೆಯ ಹಿಂದಿನ ಕಾಣದ ಕೈ ಯಾರದ್ದು?

ಗುಡಿಸಲಿಗೆ ಬೆಂಕಿ ಹಚ್ಚಿ ಲೀವ್‌ ಇನ್‌ ಜೋಡಿಯ ಕೊಲೆ

ತಮ್ಮ ಸಂಗಾತಿಗಳಿಂದ ದೂರವಾಗಿ ಲೀವ್‌ ಇನ್‌ ಸಂಬಂಧದಲ್ಲಿದ್ದ ಜೋಡಿಯನ್ನು ಗರಾಮಸ್ಥರು ಗುಡಿಸಲು ಸಮೇತ ಸುಟ್ಟು ಹಾಕಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತರನ್ನು 53 ವರ್ಷದ ಕೃಷಿಕ ಪಿ. ಶಕ್ತಿವೇಲು ಮತ್ತು ಆತನ ಸಂಗಾತಿ, ಪಕ್ಕಿರಿಪಾಲಯಂ ನಿವಾಸಿ 40 ವರ್ಷದ ಎಸ್‌. ಅಮೃತಂ ಎಂದು ಗುರುತಿಸಲಾಗಿದೆ.

ಬೈಕ್ ಡಿಕ್ಕಿಯಾಗಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ದಂಪತಿಗೆ ಗಾಯ

ರಸ್ತೆ ದಾಟುತ್ತಿದ್ದ ಬಹುಭಾಷಾ ನಟ, ಪತ್ನಿಗೆ ಬೈಕ್ ಡಿಕ್ಕಿ

ರಸ್ತೆ ಅಪಘಾತದಲ್ಲಿ ಬಹುಭಾಷಾ ನಟ ಮತ್ತು ಪತ್ನಿ ಗಾಯಗೊಂಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಗುವಾಹಟಿಯ ಮೃಗಾಲಯ ರಸ್ತೆ ಬಳಿ ಶುಕ್ರವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಆಶಿಶ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಬರುವಾ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಮರೆಯಾದ ಮಾನವೀಯತೆ! ರಸ್ತೆಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯ ಶೂ ಕದ್ದ ಕಸ ಆಯುವ ವ್ಯಕ್ತಿ

ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಶೂ ಕದ್ದ ಕಸ ಆಯುವ ವ್ಯಕ್ತಿ

ದೆಹಲಿಯಲ್ಲಿ ನಡೆದ ಈ ಘಟನೆಯೊಂದು ಮನುಷ್ಯತ್ವ ಮರೆಯಾಗಿದೆ ಎಂಬುದಕ್ಕೆ ಜ್ವಲಂತ ಸಾಕ್ಷಿಯಂತಿದೆ. ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ರಜ್ಞಾಹೀನ ವ್ಯಕ್ತಿಯೊಬ್ಬನಿಗೆ ಸಹಾಯ ಮಾಡುವ ಬದಲು ಆತನ ಶೂಗಳನ್ನು ಕದಿಯಲಾಗಿದೆ. ಸದ್ಯ ಈ ಘಟನೆಯ ವಿಡಿಯೊ ವೈರಲ್‌ ಆಗಿದೆ.

12 ವರ್ಷದ ಪುತ್ರನನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಪಾಲಕರು; ಕಾರಣ ಕೇಳಿದ್ರೆ ಶಾಕ್‌ ಆಗ್ತೀರ

ಪುತ್ರನಿಗಿದ್ದ ದುರಾಭ್ಯಾಸದಿಂದ ನೊಂದ ಪೋಷಕರು ಮಾಡಿದ್ದೇನು?

ಕಳ್ಳತನದ ಚಟಕ್ಕೆ ಬೇಸತ್ತು ಪಾಲಕರು 12 ವರ್ಷದ ಮಗನನ್ನು ಸರಪಳಿಯಿಂದ ಕಟ್ಟಿ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ನಾಗ್ಪುರದ ಅಂಜ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ದಿನಗೂಲಿ ಕಾರ್ಮಿಕರಾಗಿರುವ ಪೋಷಕರು ಕೆಲಸಕ್ಕೆ ಹೋಗುವ ಮುನ್ನ ಬಾಲಕನನ್ನು ಮನೆಯಲ್ಲೇ ಸರಪಳಿಯಿಂದ ಕಟ್ಟಿಹಾಕುತ್ತಿರುವುದು ಬೆಳಕಿಗೆ ಬಂದಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಧ್ಯ ಪ್ರವೇಶಿಸಿ ಬಾಲಕನನ್ನು ರಕ್ಷಿಸಿದೆ. 3–4 ತಿಂಗಳಿಂದ ಬಾಲಕನನ್ನು ಪ್ರತಿದಿನ ಕಟ್ಟಿ ಹಾಕಲಾಗುತ್ತಿದ್ದು, ಇದರಿಂದ ಅವನ ಕಾಲುಗಳಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮದುವೆಗೆ ಒಪ್ಪದ ವಿವಾಹಿತ ಮಹಿಳೆಯನ್ನು ನಡುರಸ್ತೆಯಲ್ಲೇ ಕೊಂದ ಮುಸ್ಲಿಂ ಯುವಕ!

ಮದುವೆಗೆ ಒಪ್ಪದ ವಿವಾಹಿತ ಮಹಿಳೆಯನ್ನು ಕೊಲೆಗೈದ ಮುಸ್ಲಿಂ ಯುವಕ!

Yellapur News: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ಹತ್ಯೆ ನಡೆದಿದೆ. ಯಲ್ಲಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮದುವೆಯಾಗಲು ಒಪ್ಪದ ಹಿನ್ನೆಲೆಯಲ್ಲಿ ಯುವಕ ಕೊಲೆ ಮಾಡಿದ್ದಾನೆ.

ಮತ್ತೊಂದು ಹೃದಯ ವಿದ್ರಾವಕ ಘಟನೆ: 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟೆರೇಸ್‌ನಿಂದ ಎಸೆದು ಕೊಲೆ

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳಿಗೆ ಗುಂಡೇಟು

ಎಷ್ಟೇ ಬಲವಾದ ಕಾನೂನು ತಂದರೂ ಹೆಣ್ಮಕ್ಕಳ ಮೇಲಿನ ಅತ್ಯಾಚಾರದಂತಹ ಘಟನೆ ನಡೆಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ಟೆರೇಸ್‍ನಿಂದ ಕೆಳಗೆ ಎಸೆದು ಹತ್ಯೆ ಮಾಡಲಾಗಿದೆ.

ಆಸ್ಪತ್ರೆಗೆ 6 ಕಿ.ಮೀ. ನಡೆದು ಅಸುನೀಗಿದ ತುಂಬು ಗರ್ಭಿಣಿ; ಮಗುವಿನ ಕನಸು ಕಾಣುತ್ತ ಹೆರಿಗೆಗೆ ಹೋದವಳು ಶವವಾಗಿ ಬಂದಳು

ಮಹಾರಾಷ್ಟ್ರದಲ್ಲಿ ಒಂಬತ್ತು ತಿಂಗಳ ಗರ್ಭಿಣಿ ಸಾವು

ಯಾವುದೇ ಮೂಲ ಸೌಲಭ್ಯಗಳಿಲ್ಲದ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಸುಮಾರು 6 ಕಿ.ಮೀ ನಡೆದುಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ತಾಲೂಕಿನಲ್ಲಿ ನಡೆದಿದೆ. ಆಲ್ದಂಡಿ ಟೋಲಾದ ನಿವಾಸಿ ಆಶಾ ಸಂತೋಷ್ ಕಿರಂಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ballari Firing: ಸಸ್ಪೆಂಡ್‌ ಆಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಜ್ಜೂರು ಆತ್ಮಹತ್ಯೆ ಯತ್ನ?

ಸಸ್ಪೆಂಡ್‌ ಆಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಜ್ಜೂರು ಆತ್ಮಹತ್ಯೆ ಯತ್ನ?

ಬಳ್ಳಾರಿ ಘಟನೆಗೆ ಸಂಬಂಧಿಸಿ ಸೇವೆಯಿಂದ ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್ ನಜ್ಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ತುಮಕೂರು ಜಿಲ್ಲೆಯ ಶಿರಾದ ಬರಗೂರಿನ ಫಾರಂಹೌಸ್‌ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕಾಥುವಾದಲ್ಲಿ ಪಾಕಿಸ್ತಾನ ಮೂಲದ 7 ವ್ಯಕ್ತಿಗಳ ಆಸ್ತಿ ಜಪ್ತಿ

ಪಾಕಿಸ್ತಾನ ಮೂಲದ ವ್ಯಕ್ತಿಗಳ ಆಸ್ತಿ ಜಪ್ತಿ

ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ಕಾಥುವಾದಲ್ಲಿ ಪಾಕಿಸ್ತಾನ ಮೂಲದ 7 ವ್ಯಕ್ತಿಗಳ ಆಸ್ತಿ ಜಪ್ತಿ ಮಾಡಲಾಗಿದೆ. ಈ ಕುರಿತು ಮಲ್ಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಥುವಾ ಜಿಲ್ಲೆಯ ಲೋಹೈ ಮಲ್ಹಾರ್ ಪ್ರದೇಶದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 1.25 ಎಕರೆ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

Harassment: ಯುವ ವೈದ್ಯೆಗೆ ಬೀದಿ ಕಾಮಣ್ಣನ ಕಿರುಕುಳ, ಹೆಡೆಮುರಿ ಕಟ್ಟಿದ ಪೊಲೀಸರು

ಯುವ ವೈದ್ಯೆಗೆ ಬೀದಿ ಕಾಮಣ್ಣನ ಕಿರುಕುಳ, ಹೆಡೆಮುರಿ ಕಟ್ಟಿದ ಪೊಲೀಸರು

ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯ ವೇಳೆ ಆರೋಪಿ ವಿನೋದ್ ಎಂಬುದು ದೃಢಪಟ್ಟಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ವಿನೋದ್ ಬೈಕ್‌ನಲ್ಲಿ ಸಂಚರಿಸುತ್ತ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಈ ರೀತಿಯ ಕೃತ್ಯ ಎಸಗುತ್ತಿದ್ದಾನೆ ಎಂಬುದು ಗೊತ್ತಾಗಿದೆ.

Ballari Firing: ಶಾಸಕ ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

Ballari firing: ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ನನ್ನ ಹತ್ಯೆಗೆ ಸಂಚು ನಡೆಸಿದ್ದಾರೆ. 7-8 ಬಾರಿ ಫೈರಿಂಗ್‌ ಆಗಿದೆ. ನಿನ್ನೆ ಒಂದು ಗುಂಡು ಪತ್ತೆಯಾಗಿತ್ತು, ಇಂದು ಮತ್ತೊಂದು ಬುಲೆಟ್‌ ಕ್ಯಾಪ್‌ ಪತ್ತೆಯಾಗಿದೆ. ಜಾತಿ ನಿಂದನೆ, ಕೊಲೆ ಯತ್ನ ಆರೋಪದ ಅಡಿಯಲ್ಲಿ 15 ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ರೆಡ್ಡಿ ಕಡೆಯವರೂ ಭರತ್‌ ರಡ್ಡಿ ಹಾಗೂ ಬೆಂಬಲಿಗರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ.

Loading...