ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Shivamogga Trial Blast Case: ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅರಾಫತ್ ಅಲಿಗೆ 6 ವರ್ಷ ಜೈಲು

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ದೆಹಲಿಯಲ್ಲಿ 2023ರಲ್ಲಿ ಬಂಧಿಸಿದ್ದರು. ಈತ ವಿಚಾರಣೆ ವೇಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಈತನಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ನಾಗಾ-ಕುಕಿ ಗುಂಪುಗಳ ನಡುವೆ ಭೀಕರ ಸಂಘರ್ಷ

ಮಣಿಪುರದಲ್ಲಿ ಮತ್ತೆ ಜನಾಂಗೀಯ ಸಂಘರ್ಷ

ಮಣಿಪುರದ ಸೇನಾಪತಿ ಜಿಲ್ಲೆಯ ಟಿ.ಖುಲ್ಲೆನ್ ಗ್ರಾಮದಲ್ಲಿ ನಾಗಾ ಮತ್ತು ಕುಕಿ ಸಶಸ್ತ್ರ ಗುಂಪುಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಇಬ್ಬರು ನಾಗಾ ನಾಗರಿಕರ ಹತ್ಯೆಯ ನಂತರ ಉದ್ವಿಗ್ನತೆ ಹೆಚ್ಚಿದ್ದು, ಬಂದ್, ರಸ್ತೆ ತಡೆ ಮತ್ತು ಪ್ರತಿಭಟನೆಗಳಿಂದ ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.

Bengaluru grenade case: ಬೆಂಗಳೂರಿನಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರಿನಲ್ಲಿ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ಕೋರ್ಟ್‌ ತೀರ್ಪು ನೀಡಿದೆ. ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಆರೋಪಿಗಳು ಸಜೀವ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

Betting Case: ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; FIR ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; ತನಿಖೆಗೆ ಕೋರ್ಟ್ ಆದೇಶ

ತುಮಕೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಕಟ್ಟುವ ಹೇಳಿಕೆ ನೀಡಿದ್ದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸಂಕಷ್ಟ ಎದುರಾಗಿದೆ. ಈ ಕುರಿತು ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ಬೆಂಗಳೂರಿನ ಕೋರ್ಟ್‌ ಆದೇಶ ಹೊರಡಿಸಿದೆ.

ದೆಹಲಿಯಲ್ಲಿ ಪಾಕಿಸ್ತಾನದ ಐಎಸ್‌ಐ ಸಂಪರ್ಕ ಹೊಂದಿರುವ ಮಾಡ್ಯೂಲ್ ಪತ್ತೆ: ದೇಶದಲ್ಲಿ ಗ್ರೆನೇಡ್ ದಾಳಿ ನಡೆಸಲು ಸಂಚು

ಪಾಕ್‌ನ ಐಎಸ್‌ಐ ಸಂಪರ್ಕ ಹೊಂದಿರುವ ಮಾಡ್ಯೂಲ್ ಪತ್ತೆ

Delhi ISI module busted: ದೆಹಲಿ ಪೊಲೀಸರ ವಿಶೇಷ ಸೆಲ್ ಪಾಕಿಸ್ತಾನ ಮೂಲದ ಐಎಸ್‌ಐ ಪ್ರಾಕ್ಸಿ ಶಹಜಾದ್ ಭಟ್ಟಿಗೆ ಸಂಬಂಧಿಸಿದ ಇಬ್ಬರನ್ನು ಬಂಧಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗುರಿಯಾಗಿಸಿಕೊಂಡ ಹತ್ಯೆಗಳು ಮತ್ತು ಗ್ರೆನೇಡ್ ದಾಳಿಗಳನ್ನು ನಡೆಸುವ ಪಿತೂರಿಯಲ್ಲಿ ಇವರ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಬಂಧಿತ ವ್ಯಕ್ತಿಗಳನ್ನು ರಾಜವೀರ್ ಮತ್ತು ವಿವೇಕ್ ಬಂಜಾರ ಎಂದು ಗುರುತಿಸಲಾಗಿದೆ.

Bengaluru Murder Case: ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ನಡೆದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಯುವಕ ತಾನಾಗಿಯೇ ಬೆಂಕಿ ಹಚ್ಚಿಕೊಂಡಿದ್ದ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದ ಯುವತಿಯ ಬಣ್ಣ ಸಿಸಿಟಿವಿ ದೃಶ್ಯಾವಳಿಗಳಿಂದ ಬಯಲಾಗಿದೆ. ಯುವಕನ ಕೈ-ಕಾಲು ಕಟ್ಟಿ, ಪೆಟ್ರೋಲ್‌ ಸುರಿದು ಪ್ರೇಯಸಿಯೇ ಬೆಂಕಿ ಹಚ್ಚಿದ್ದಾಳೆ ಎಂದು ತಿಳಿದುಬಂದಿದೆ.

ಹದಿಹರೆಯದ ಬಾಲಕಿಯನ್ನು ಹತ್ಯೆ ಮಾಡಿ, ಮುಖದ ಮೇಲೆ ಆ್ಯಸಿಡ್ ಸುರಿದ ತಂದೆ; ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ

ಬಾಲಕಿಯನ್ನು ಹತ್ಯೆ ಮಾಡಿ, ಮುಖದ ಮೇಲೆ ಆ್ಯಸಿಡ್ ಸುರಿದ ತಂದೆ

Crime News: ನಾಪತ್ತೆಯಾದ 16 ವರ್ಷದ ಬಾಲಕಿಯನ್ನು ಹುಡುಕಲು ಆರಂಭಿಸಿದ ಘಟನೆಯೊಂದರಲ್ಲಿ ಆಕೆಯ ತಂದೆಯೇ ಕೊಲೆಗಾರ ಎನ್ನುವುದು ತಿಳಿದು ಬಂದಿದೆ. ಉತ್ತರ ಪ್ರದೇಶದ ಲಖನೌನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಪಾಪಿ ಗುರುತು ಮರೆಮಾಡಲು ಆಕೆಯ ಮುಖದ ಮೇಲೆ ಆ್ಯಸಿಡ್ ಸುರಿದಿದ್ದಾನೆ.

Bengaluru News: ಬೆಂಗಳೂರಿನಲ್ಲಿ ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮಾತನಾಡಲು ಮನೆಗೆ ತೆರಳಿದ್ದಾಗ, ಇಬ್ಬರ ನಡುವೆ ಜಗಳವಾಗಿದೆ. ಇದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Sirsi Doctor Murder Case: ಶಿರಸಿ ವೈದ್ಯನ ಕೊಲೆ ಪ್ರಕರಣದ ಆರೋಪಿ ಅರೆಸ್ಟ್: 15 ಲಕ್ಷ ರೂ.‌ ಮೌಲ್ಯದ ಚಿನ್ನಾಭರಣ, 50 ಸಾವಿರ ನಗದು ವಶಕ್ಕೆ

ಶಿರಸಿ ವೈದ್ಯನ ಕೊಲೆ ಆರೋಪಿ ಅರೆಸ್ಟ್: ಚಿನ್ನಾಭರಣ, ನಗದು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಡಾ. ರಮೇಶ್ ಎಫ್. ಕಲ್ಗುಟ್ಕರ್ (51) ಎಂಬ ಆಯುರ್ವೇದ ವೈದ್ಯನ ಕೊಲೆಯಾಗಿತ್ತು. ಭಾನುವಾರ ಸಂಜೆ ಘಟನೆ ಬೆಳಕಿಗೆ ಬಂದಿತ್ತು‌. ಬಳಿಕ ಪ್ರಕರಣ ದಾಖಲಿಸಿಕೊಂಡ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಶಂಕಿತ ಆರೋಪಿಯನ್ನು ಸೆರೆಹಿಡಿದಿದ್ದಾರೆ.

Zombie Drug: ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಎದುರಾಯ್ತು ಸಂಕಷ್ಟ

ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಬಂತು ಸಂಕಷ್ಟ

ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧ ಬಾಗಲೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಈ ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ. ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ಶೂಗಾಗಿ ಜಗಳ: ಕಿರಿಯ ಸಹೋದರನನ್ನೇ ಕೊಂದ ಯುವಕ

ಕ್ಷುಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ಷುಲಕ ಕಾರಣಕ್ಕಾಗಿ ಸಹೋದರರ ಮಧ್ಯೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೊಸ ಶೂ ವಿಚಾರವಾಗಿ ಸಹೋದರರ ಮಧ್ಯೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಹಿರಿಯ ಸಹೋದರನು ಕಿರಿಯ ಸಹೋದರನನ್ನು ಕತ್ತರಿಯಿಂದ ಹಲ್ಲೆ ಮಾಡಿ ಕೊಂದಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.

Murder case: ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಮೃತ ದುರ್ದೈವಿ. ಈ ಘಟನೆಯ ಕ್ರೌರ್ಯ ಕಂಡು ಕನ್ನೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮೃತನ ದೊಡ್ಡಪ್ಪನ ಮಗ ಸದಾಶಿವ ಪಡಸಲಗಿಯೇ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ED Raid: ಹ್ಯಾರಿಸ್‌- ನಲಪಾಡ್‌ ಮೇಲಿನ ಇಡಿ ದಾಳಿಗೆ ಮೃತ ಸಿಜೆ ರಾಯ್‌ ಜೊತೆಗಿನ ನಂಟು ಕಾರಣ?

ಹ್ಯಾರಿಸ್‌- ನಲಪಾಡ್‌ ಮೇಲಿನ ಇಡಿ ದಾಳಿಗೆ ಮೃತ ಸಿಜೆ ರಾಯ್‌ ಜೊತೆಗಿನ ನಂಟು?

ಸಿ.ಜೆ ಯ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವ್ಯವಹಾರಿಕ ನಷ್ಟ, ತೆರಿಗೆ ವಂಚನೆ ಸೇರಿ ಹಲವು ವಿಷಯಗಳು ಚರ್ಚೆಗೆ ಬಂದಿದ್ದವು. ಈ ರಾಯ್‌ ಜೊತೆಗೆ ಹ್ಯಾರಿಸ್‌ ನಲಪಾಡ್‌ ಕುಟುಂಬ ವ್ಯವಹಾರಿಕ ಸಂಬಂಧ ಇರಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

'ʼನಿಮ್ಮ ಮನೆ ತುಂಬೆಲ್ಲ ಸಗಣಿ ತುಂಬಿಸುತ್ತೇನೆʼ': ಮಗನ ಥಾರ್ ಅಪಘಾತದ ಬೆನ್ನಲ್ಲೇ ಪೊಲೀಸರಿಗೆ ಬಿಜೆಪಿ ಶಾಸಕನ ಬೆದರಿಕೆ

ಪೊಲೀಸರಿಗೆ ಬಿಜೆಪಿ ಶಾಸಕನ ಬೆದರಿಕೆ

ಮಧ್ಯ ಪ್ರದೇಶದ ಬಿಜೆಪಿ ಶಾಸಕ ಪ್ರೀತಮ್ ಲೋಧಿ ತಮ್ಮ ಮಗನ ಥಾರ್ ಅಪಘಾತ ಪ್ರಕರಣದ ತನಿಖೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗೆ 15 ದಿನಗಳಲ್ಲಿ ಸ್ಪಷ್ಟನೆ ನೀಡದಿದ್ದರೆ ಮನೆಗೆ ಸಗಣಿ ತುಂಬಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್; ಏಪ್ರಿಲ್‌ 27ಕ್ಕೆ ವಿಚಾರಣೆ ಮುಂದೂಡಿಕೆ

ಟಿಸಿಎಸ್ ಮತಾಂತರ ಪ್ರಕರಣ: ನಿದಾ ಖಾನ್‌ಗೆ ಜಾಮೀನು ನಿರಾಕರಣೆ

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ನಡೆದ ಕಿರುಕುಳ ಮತ್ತು ಮತಾಂತರ ಆರೋಪದ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿದಾ ಖಾನ್‌ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನಿರಾಕರಿಸಿದೆ. ಅರ್ಜಿಯ ಬಗ್ಗೆ ಲಿಖಿತ ಪ್ರತಿಕ್ರಿಯೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಕಾಲಾವಕಾಶ ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 27ಕ್ಕೆ ನಿಗದಿಪಡಿಸಲಾಗಿದೆ.

ಹೆಲ್ಮೆಟ್ ವಿಚಾರಕ್ಕೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ

ಹೆಲ್ಮೆಟ್ ವಿಚಾರಕ್ಕೆ ಮಾತಿನ ಚಕಮಕಿ: ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ

ನಗರದ ಸಂಚಾರಿ ನಿಯಮಗಳ ಪಾಲನೆಗಾಗಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ದಲ್ಲಿ ಈ ಘಟನೆ ಸಂಭವಿಸಿದೆ. ಹೆಲ್ಮೆಟ್ ಧರಿಸದ ಸವಾರರನ್ನು ತಡೆದ ಪೊಲೀಸರು ದಂಡ ವಿಧಿಸಲು ಮುಂದಾದಾಗ,ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

Kalaburagi shootout: ಕಲಬುರಗಿಯಲ್ಲಿ ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿಯಲ್ಲಿ ಹಾಡಹಗಲೇ ಗುಂಡು ಹಾರಿಸಿ ವ್ಯಕ್ತಿಯ ಬರ್ಬರ ಹತ್ಯೆ

Kalaburagi Murder: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಮಧ್ಯಾಹ್ನದ ವೇಳೆ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪುಂಡರಿಗೆ ತಕ್ಕ ಶಾಸ್ತಿ; ಯೋಗಿ ನಾಡಿನಲ್ಲಿ ಅಲ್ಲೇ ಡ್ರಾ ಅಲ್ಲೇ ಬಹುಮಾನ

ಶಾಲಾ ಬಾಲಕಿಯರಿಗೆ ಕಿರುಕುಳ: ಕಠಿಣ ಕ್ರಮ ಕೈಗೊಂಡ ಪೊಲೀಸರು

Viral Video: ಶಾಲಾ ವಿದ್ಯಾರ್ಥಿಯರ ಜತೆ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ. ಉತ್ತರ ಪ್ರದೇಶದ ಫತೇಪುರದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ.

Sirsi Doctor Murder Case: 2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಹತ್ಯೆಗೆ ಕಾರಣ ಬಹಿರಂಗ; ಸ್ನೇಹಿತನೇ ಕೊಲೆಗಾರ!

2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಕೊಲೆಗೆ ಕಾರಣ ಬಹಿರಂಗ

ಶಿರಸಿ ಕೆಎಚ್‌ಬಿ ಕಾಲೋನಿಯ ಹೊಸ ಬಡಾವಣೆಯಲ್ಲಿ ವಾಸವಿದ್ದ ಡಾ. ರಮೇಶ್ ಎಫ್. ಕಲ್ಗುಟ್ಕರ್ ಅವರು ಶನಿವಾರ ರಾತ್ರಿ ಮನೆಯಲ್ಲೇ ಕ್ರೂರವಾಗಿ ಹತ್ಯೆಗೀಡಾಗಿದ್ದರು. ಇದೀಗ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಗೆ ಕಾರಣ ಕೂಡ ಬಹಿರಂಗವಾಗಿದೆ.

ಅಮರಾವತಿ ಲೈಂಗಿಕ ಹಗರಣ: ಆರೋಪಿ ಅಯಾನ್ ಅಹ್ಮದ್‌ನ ಅಕ್ರಮ ಸಂಪತ್ತಿನ ಮೇಲೆ ತನಿಖಾ ಸಂಸ್ಥೆಗಳ ಕಣ್ಣು

ವೈರಲ್ ವಿಡಿಯೊದಿಂದ ಬಯಲಾಯ್ತು ಅಯಾನ್ ಬಂಡವಾಳ

ಮಹಾರಾಷ್ಟ್ರದ ಪರತ್ವಾಡಾದಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ಪ್ರಕರಣದಲ್ಲಿ ಹೊಸ ಅಂಶಗಳು ಬೆಳಕಿಗೆ ಬರುತ್ತಿವೆ. ಈ ಜಾಲದ ಮುಖ್ಯ ಆರೋಪಿಯಾಗಿರುವ 19 ವರ್ಷದ ಅಯಾನ್ ಅಹ್ಮದ್‌ನ ಐಷಾರಾಮಿ ಜೀವನಶೈಲಿ ತನಿಖಾಧಿಕಾರಿಗಳ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ ಆತ ದುಬಾರಿ ಕಾರುಗಳು, ನಗದು ಮೊತ್ತಗಳು ಹಾಗೂ ಗ್ಯಾಜೆಟ್‌ಗಳನ್ನು ಪ್ರದರ್ಶಿಸಿರುವುದು ಕಂಡುಬಂದಿದೆ. ಇಷ್ಟು ಕಡಿಮೆ ವಯಸ್ಸಿನಲ್ಲಿ ಈ ಸಂಪತ್ತು ಹೇಗೆ ಬಂದಿದೆ ಎಂಬುದು ಪೊಲೀಸರ ಪ್ರಮುಖ ಪ್ರಶ್ನೆ. ಅಮರಾವತಿಯ ಫ್ಲಾಟ್ ಒಂದರಲ್ಲಿ ವಿಡಿಯೊ ಚಿತ್ರೀಕರಣ ನಡೆದಿರುವ ಶಂಕೆಯಿದೆ. ಸುಮಾರು 200ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರನ್ನು ಶೋಷಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಮುಸ್ಲಿಂ ವ್ಯಕ್ತಿಯಿಂದ ಅಪ್ರಾಪ್ತ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌; ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

ಲೈಂಗಿಕ ದೌರ್ಜನ್ಯ ಕೇಸ್‌; ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್‌ ಮಾಡಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಮತ್ತೊಂದು ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು:  ಟ್ರಕ್‌ಗೆ ಡಿಕ್ಕಿ ಹೊಡೆದ ವೇಗವಾಗಿ ಬಂದ ಬೈಕ್, ವಿಡಿಯೋ ನೋಡಿ

ರೀಲ್ಸ್ ಹುಚ್ಚಿಗೆ ಪ್ರಾಣ ಕಳೆದುಕೊಂಡ ಮೂವರು ಸಹೋದರರು

Accident: ರೀಲ್ಸ್ ಮಾಡಲು ಹೋಗಿ ಮೂವರು ಸಹೋದರರು ದುರ್ಮರಣಕ್ಕೀಡಾಗಿದ್ದಾರೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಬೈಕ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೋದರರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ದುಸ್ಸಾಹಸ ಮಾಡಲು ಹಾಕಿ ಜೀವವನ್ನೇ ಕಳೆದುಕೊಂಡಿದ್ದಾರೆ.

ಉಧಂಪುರದಲ್ಲಿ ಕಂದಕಕ್ಕೆ ಉರುಳಿದ ಬಸ್‌; 15 ಮಂದಿ ಸಾವು, 20 ಜನರಿಗೆ ಗಾಯ

ಉಧಂಪುರದಲ್ಲಿ ಕಂದಕಕ್ಕೆ ಉರುಳಿದ ಬಸ್‌; 15 ಮಂದಿ ಸಾವು, 20 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಬಸ್ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ರಾಮನಗರದ ಖಗೋಟ್ ಪ್ರದೇಶದಲ್ಲಿ ಈ ದುರಂತ ಘಟನೆ ನಡೆದಿದೆ.

ಟಿಸಿಎಸ್‌ ಬಳಿಕ ಬೆಳಕಿಗೆ ಬಂತು ಮತ್ತೊಂದು ಕಂಪನಿಯ ಮತಾಂತರ ದಂಧೆ; NGO ಮುಖ್ಯಸ್ಥನ ಬಂಧನ!

ಟಿಸಿಎಸ್‌ ಬಳಿಕ ಬೆಳಕಿಗೆ ಬಂತು ಮತ್ತೊಂದು ಕಂಪನಿಯ ಮತಾಂತರ ದಂಧೆ

ನಾಸಿಕ್‌ನ ಟಿಸಿಎಸ್‌ ಕಂಪನಿಯಲ್ಲಿನ ಮತಾಂತರ ಜಾಲ ಬಯಲಾಗುತ್ತಿದ್ದಂತೆ ಅಂತಹುದೇ ಮತ್ತೊಂದು ಪ್ರಕರಣ ಇದೀಗ ಬಯಲಾಗಿದೆ. ಧಾರ್ಮಿಕ ಮತಾಂತರ, ಕಿರುಕುಳ ಮತ್ತು ಮಹಿಳೆಯರನ್ನು ಇಸ್ಲಾಮಿಕ್ ಉಡುಪು ಧರಿಸುವಂತೆ ಒತ್ತಾಯಿಸುವುದು ಸೇರಿದಂತೆ ಹಲವು ಆರೋಪಗಳ ಮೇಲೆ ನಾಗ್ಪುರ ಮೂಲದ ಎನ್‌ಜಿಒ ಮುಖ್ಯಸ್ಥನನ್ನು ಬಂಧಿಸಲಾಗಿದೆ.

Loading...